Site icon Vistara News

Missing Case | ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಸಹೋದರನ ಪುತ್ರ ಕಾಣೆ!

ರೇಣುಕಾಚಾರ್ಯ ಸಹೋದರ ಪುತ್ರ ನಾಪತ್ತೆ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ (Missing Case) ಕಾಣೆಯಾಗಿದ್ದಾರೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಪುತ್ರ ಚಂದ್ರು ಅಲಿಯಾಸ್‌ ಚಂದ್ರಶೇಖರ್ ಕಾಣೆಯಾದವರು.

ಕಳೆದ ಎರಡು ದಿನಗಳಿಂದ ಚಂದ್ರಶೇಖರ್ ಕಾಣೆಯಾಗಿದ್ದಾರೆ. ಇವರು ರೇಣುಕಾಚಾರ್ಯ ಜತೆ ಸಕ್ರಿಯವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ. ದೊಡ್ಡಪ್ಪನಿಗೆ ಬೆನ್ನೆಲುಬಾಗಿದ್ದ ಚಂದ್ರಶೇಖರ್‌ ರಾಜಕೀಯವಾಗಿ ರೇಣುಕಾಚಾರ್ಯ ಅವರ ಬಹಳಷ್ಟು ಕೆಲಸ ಕಾರ್ಯಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ, ಅವರೀಗ ಏಕಾಏಕಿ ನಾಪತ್ತೆಯಾಗಿರುವುದು ಕುಟುಂಬದವರನ್ನು ಕಂಗಾಲು ಮಾಡಿದೆ. ಈ ಹಿನ್ನೆಲೆಯಲ್ಲಿ ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ನಾಪತ್ತೆಗೂ ಮುನ್ನ ವಿನಯ್‌ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು
ಕಳೆದ ಭಾನುವಾರ ಚಂದ್ರಶೇಖರ್‌ ಶಿವಮೊಗ್ಗದ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದರು. ಜತೆಗೆ ಶಿವಮೊಗ್ಗದಲ್ಲಿ ಸ್ನೇಹಿತರನ್ನು ಮಾತನಾಡಿಸಿ ಹೊನ್ನಾಳಿಗೆ ಬಂದಿದ್ದರು ಎಂದು ತಿಳಿದು ಬಂದಿದೆ. ಆ ಬಳಿಕ ಭಾನುವಾರ ಸಂಜೆ ನಾಪತ್ತೆಯಾದವರು ಇನ್ನೂ ಸಿಕ್ಕಿಲ್ಲ. ಹೊನ್ನಾಳಿಯಲ್ಲಿ ಸೋಮವಾರ (ಅ.31) ಫೋನ್‌ ಸ್ವಿಚ್ಡ್‌ ಆಫ್‌ ಆಗಿದೆ. ನಂತರ ಇದುವರೆಗೂ ಫೋನ್‌ ಆನ್‌ ಆಗಿಲ್ಲ.

ಹೊನ್ನಾಳಿ ಪೊಲೀಸರಿಂದ ತೀವ್ರ ಹುಡುಕಾಟ ನಡೆಸಿದ್ದು, ಮನೆಯಲ್ಲಿ ರೇಣುಕಾಚಾರ್ಯ ಅವರ ಕುಟುಂಬ ಆತಂಕಗೊಂಡಿದ್ದಾರೆ. ಎಲ್ಲಿಗಾದರೂ ಹೋಗಬೇಕಾದರೆ ಯಾವಾಗಲು ಸ್ನೇಹಿತರೊಂದಿಗೆ ಹೋಗುತ್ತಿದ್ದವನು ಈ ಬಾರಿ ಒಬ್ಬನೇ ಹೋಗಿದ್ದಾನೆ ಎಂದು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಚಂದ್ರು ಪೋಷಕರು ದೂರು ನೀಡಿದ್ದಾರೆ.

ಇದನ್ನೂ ಓದಿ | ಅಪಘಾತದಲ್ಲಿ ಯುವಕನಿಗೆ ಗಾಯ; ಆಸ್ಪತ್ರೆಗೆ ತೆರಳಲು ಶಾಸಕ ರೇಣುಕಾಚಾರ್ಯ ಸಹಾಯ

Exit mobile version