Missing Girls : ಮಡಿಕೇರಿಯಿಂದ ನಾಪತ್ತೆ ಆಗಿದ್ದ ಇಬ್ಬರು ಪಿಯು ವಿದ್ಯಾರ್ಥಿನಿಯರು ಮಲ್ಪೆಯಲ್ಲಿ ನೀರುಪಾಲು, ಒಬ್ಬಳ ರಕ್ಷಣೆ - Vistara News

ಉಡುಪಿ

Missing Girls : ಮಡಿಕೇರಿಯಿಂದ ನಾಪತ್ತೆ ಆಗಿದ್ದ ಇಬ್ಬರು ಪಿಯು ವಿದ್ಯಾರ್ಥಿನಿಯರು ಮಲ್ಪೆಯಲ್ಲಿ ನೀರುಪಾಲು, ಒಬ್ಬಳ ರಕ್ಷಣೆ

Missing Girls : ಮಲ್ಪೆ ಕಡಲ ತೀರದಲ್ಲಿ ಶನಿವಾರ ರಾತ್ರಿ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ. ಇವರಲ್ಲಿ ಒಬ್ಬಳು ಮೃತಪಟ್ಟಿದ್ದಾಳೆ, ಒಬ್ಬಳನ್ನು ರಕ್ಷಿಸಲಾಗಿದೆ. ಇವರು ಮಡಿಕೇರಿಯಿಂದ ನಾಪತೆಯಾದವರು ಎನ್ನುವುದು ಪ್ರಾಥಮಿಕ ಮಾಹಿತಿ.

VISTARANEWS.COM


on

Missing girls
ಮಲ್ಪೆ ತೀರದಲ್ಲಿ ಮೃತಪಟ್ಟ ಮಾನ್ಯ ಮತ್ತು ರಕ್ಷಿಸಲ್ಪಟ್ಟ ಯಶಸ್ವಿನಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ (Udupi Malpe beach) ಶನಿವಾರ ತಡರಾತ್ರಿ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ (Two girls drowned, one rescued). ಅವರಲ್ಲಿ ಒಬ್ಬಾಕೆಯನ್ನು ರಕ್ಷಿಸಲಾಗಿದ್ದು, ಒಬ್ಬಳು ಮೃತಪಟ್ಟಿದ್ದಾಳೆ. ಈ ಬಾಲಕಿಯರು ಮೂರು ದಿನಗಳ ಹಿಂದೆ ಮಡಿಕೇರಿಯಿಂದ ನಾಪತ್ತೆಯಾಗಿದ್ದರು (Girls from Madikeri) ಎಂದು ತಿಳಿದುಬಂದಿದೆ. ಆದರೆ, ಇಲ್ಲಿಗೆ ಹೇಗೆ ಬಂದರು, ಸಮುದ್ರಕ್ಕೆ ಹಾರಿದರೇ? ಆಡುತ್ತಿದ್ದಾಗ ನೀರುಪಾಲಾದರೇ (Missing Girls) ಎಂಬ ಅಂಶ ಇನ್ನೂ ಸ್ಪಷ್ಟವಾಗಿಲ್ಲ.

ಮಡಿಕೇರಿಯ ಖಾಸಗಿ ಕಾಲೇಜೊಂದರ ಪ್ರಥಮ ಪಿಯಸಿ ವಿದ್ಯಾರ್ಥನಿಯರಾದ ಮಾನ್ಯ ಮತ್ತು ಯಶಸ್ವಿನಿ ಸಮುದ್ರದಲ್ಲಿ ನೀರುಪಾಲಾದವರು. ಅವರಲ್ಲಿ ಮಾನ್ಯ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಕ್ಕಿ ಮೃತಪಟ್ಟರೆ, ನೀರಿನಲ್ಲಿ ಮುಳುಗೇಳುತ್ತಿದ್ದ ಯಶಸ್ವಿನಿಯನ್ನು ರಕ್ಷಿಸಲಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಹೊರಬಂದಿದ್ದಾಳೆ.

ಶನಿವಾರ ತಡರಾತ್ರಿ ಮಲ್ಪೆ ತೀರದಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗೇಳುತ್ತಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಸಮಾಜಸೇವಕ, ಆಪತ್ಬಾಂಧವ ಈಶ್ವರ ಮಲ್ಪೆ ಅವರು ಧಾವಿಸಿದ್ದರು. ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನೂ ಮೇಲೆತ್ತಿ ಹಾಕಿದರು. ಆದರೆ, ಅಷ್ಟು ಹೊತ್ತಿಗೇ ಮಾನ್ಯ ಉಸಿರು ಚೆಲ್ಲಿದ್ದಳು. ಮತ್ತೊಬ್ಬಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ. ಯಶಸ್ವಿನಿ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಆಕೆ ನೀಡಿದ ಮಾಹಿತಿ ಪ್ರಕಾರ ಅವರಿಬ್ಬರೂ ಮೂರು ದಿನಗಳ ಹಿಂದೆ ಮನೆ ಬಿಟ್ಟು ಬಂದಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ (ಪಿಸಿಎಂ) ವಿದ್ಯಾರ್ಥಿಗಳಾಗಿರುವ ಇವರು ಆಪ್ತ ಗೆಳತಿಯರು. ಇವರಲ್ಲಿ ಯಶಸ್ವಿನಿ ಮನೆ ಬಿಟ್ಟು ಹೊರಟಾಗ ಮಾನ್ಯ ಕೂಡಾ ಆಕೆಗೆ ಸಾಥ್‌ ನೀಡಿದ್ದಾಳೆ ಎಂಬುದು ಪ್ರಾಥಮಿಕ ಮಾಹಿತಿ. ಅವರು ನಾಪತ್ತೆಯಾದ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಆರಂಭಗೊಂಡಿತ್ತು. ಅದರ ನಡುವೆಯೇ ಇದೀಗ ದುರಂತ ಸಂಭವಿಸಿದೆ.

ಮಡಿಕೇರಿಯಿಂದ ಮಂಗಳೂರಿಗೆ ಬಂದು ಅಲ್ಲಿಂದ ಮುಂದಿನ ದಾರಿ ಕಾಣದೆ ಮಲ್ಪೆ ತೀರಕ್ಕೆ ಬಂದಿದ್ದಾರೆ. ಅಲ್ಲಿ ಕುಳಿತಿದ್ದಾಗ ಕಡಲ ಅಲೆಗಳಿಗೆ ಸಿಲುಕಿದ್ದಾರೆ. ಒಂದು ಮಾಹಿತಿ ಪ್ರಕಾರ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಈ ಇಬ್ಬರು ಕಾಣೆಯಾಗಿರುವ ದೂರು ದಾಖಲಾಗಿದೆ.

ಇವರಿಬ್ಬರೂ ಸುಮಾರು 12-14 ವರ್ಷದ ಪ್ರಾಯದ ಮಕ್ಕಳಾಗಿದ್ದು, ಯಾವ ಕಾರಣಕ್ಕಾಗಿ ಮನೆ ಬಿಟ್ಟು ಬಂದಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಮಡಿಕೇರಿ ಭಾಗದಲ್ಲಿ ಮಕ್ಕಳು ಮನೆ ಬಿಟ್ಟು ಹೋಗಿ ಕಣ್ಮರೆಯಾಗುವ ಹಲವಾರು ಘಟನೆಗಳು ನಡೆದಿದ್ದು, ಹೆಚ್ಚಿನವರು ಮರಳಿ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಜುಲೈ 23ರಂದು ನಾಲ್ವರು ಮಕ್ಕಳು ನಾಪತ್ತೆಯಾಗಿದ್ದರು

ಕೊಡಗಿನಲ್ಲಿ ಹೆಣ್ಣು ಮಕ್ಕಳ ಕಾಣೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ಜುಲೈ 23ರಂದು ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿ ಕೂಲಿ ಕಾರ್ಮಿಕ ಕುಟುಂಬದ ನಾಲ್ವರು ಬಾಲಕಿಯರು ನಾಪತ್ತೆಯಾದ ಬಳಿ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಇವರಲ್ಲಿ ಇಬ್ಬರನ್ನು ಅವರ ಪೋಷಕರು ಶಾಲೆಗೆ ಹೋಗಲೆಂದು ಸಿದ್ಧಾಪುರ ಬಸ್‌ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಅವರು ಮರಳಿ ಮನೆಗೆ ಬಂದಿರಲಿಲ್ಲ. ಇನ್ನಿಬ್ಬರು ಮಕ್ಕಳು ಅಜ್ಜಿ ಮನೆಗೆಂದು ಹೋದವರು ಅಲ್ಲಿಗೂ ಹೋಗದೆ ಮರಳಿಯೂ ಬಾರದೆ ಕಣ್ಮರೆಯಾಗಿದ್ದರು.

ಈ ನಿರ್ದಿಷ್ಟ ಪ್ರಕರಣದಲ್ಲಿ ಈ ಮಕ್ಕಳ ಹಿನ್ನೆಲೆ, ಅವರ್ಯಾಕೆ ಮನೆ ಬಿಟ್ಟು ಬಂದರು, ಮಲ್ಪೆಗೆ ಬಂದಿದ್ದು ಹೇಗೆ? ಇದರ ಹಿಂದೆ ಬೇರೆ ಜಾಲಗಳು ಕೆಲಸ ಮಾಡಿವೆಯೇ? ಮಕ್ಕಳು ಈ ರೀತಿಯಾಗಿ ಮನೆ ಬಿಟ್ಟು ಹೋಗುವ ಪರಿಸ್ಥಿತಿ ಯಾಕೆ ನಿರ್ಮಾಣವಾಗುತ್ತಿವೆ ಎನ್ನುವುದು ತನಿಖೆಯಿಂದ ತಿಳಿದುಬರಬೇಕಾಗಿದೆ.

ಇದನ್ನೂ ಓದಿ: Family Dispute :‌ ಗರ್ಭಿಣಿ ಪತ್ನಿಯನ್ನು ತವರಿಗೆ ಕಳುಹಿಸಿ ಗಂಡ ಎಸ್ಕೇಪ್; ಮಗುವಿಗೆ 9 ತಿಂಗಳಾದರೂ ನಾಪತ್ತೆ, ಮನೆಗೂ ಬಾಗಿಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದು, ಯೆಲ್ಲೋ ಹಾಗೂ ಆರೆಂಜ್‌ ಆಲರ್ಟ್‌ ನೀಡಲಾಗಿದೆ. ಗಾಳಿ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

Self Harming: ಉಡುಪಿ ಜಿಲ್ಲೆಯ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Self Harming
Koo

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೈಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಆಚಾರಿ, ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದರಿಂದ ಬೇಸರಗೊಂಡು ಡೆತ್ ನೋಟ್ ಬರೆದು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

theft case

ತುಮಕೂರು: ಕಳ್ಳತನವೂ ಈಗ ಪ್ರೊಫೆಷನಲ್‌ ಆಗಿಬಿಟ್ಟಿದೆ. ಭೂಪನೊಬ್ಬ ಬೋರ್‌ವೇಲ್‌ ಕೇಬಲ್‌ಗಳನ್ನು ಕದಿಯೋಕೆ ಅಂತಲೇ ತಿಂಗಳ ಸಂಬಳಕ್ಕೆ ಕಳ್ಳನನ್ನು (Theft Case) ನೇಮಿಸಿಕೊಂಡಿರುವ ಅಪರೂಪದ ಪ್ರಕರಣವೊಂದು ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.

ವೆಂಕಟೇಶ್‌ ಎಂಬಾತ ಕಳ್ಳತನಕ್ಕಾಗಿಯೇ ಬೆಂಗಳೂರು ಮೂಲದ ರಾಘವೇಂದ್ರ ಎಂಬಾತನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ವೆಂಕಟೇಶ್‌ ಕಳ್ಳತನ ಮಾಡುವ ರಾಘವೇಂದ್ರನಿಗೆ ತಿಂಗಳ ಲೆಕ್ಕದಲ್ಲಿ ಸಂಬಳ ಕೊಡುತ್ತಿದ್ದ. ರಾಘವೇಂದ್ರ ತಿಂಗಳಿಗೆ 20 ಸಾವಿರ ರೂ. ಸಂಬಳ ಪಡೆಯುತ್ತಿದ್ದಾಗಿ ಪೊಲೀಸರ ತನಿಖೆ ವೇಳೆ ಬಾಯಿ ಬಿಟ್ಟಿದ್ದಾನೆ.

ಈ ಖದೀಮರು ಗ್ರಾಮೀಣ ಭಾಗದಲ್ಲಿರುವ ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ಕೊರಟಗೆರೆ ತಾಲೂಕಿನಲ್ಲಿ ಬೋರ್‌ವೇಲ್‌ ಕೇಬಲ್‌ಗಳ ಕಳುವಿನಿಂದ ರೈತರು ಹೈರಾಣಾಗಿದ್ದರು. ಕೊರಟಗೆರೆಯಲ್ಲಿ ಒಂದು ತಿಂಗಳಿಂದ ನಿರಂತರವಾಗಿ ಕಳ್ಳರು ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ವಡ್ಡಗೆರೆ ಬಳಿ ಖತರ್ನಾಕ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Theft Case The thief was paid a salary for theft

ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಚಲನವಲನ ಗಮನಿಸಿ ಕಳ್ಳರನ್ನು ಪತ್ತೆ ಹಚ್ಚಿದ್ದರು. ಕೊರಟಗೆರೆ ಪೊಲೀಸರು ಖತರ್ನಾಕ್ ಕಳ್ಳನ ಸಹಿತ ಮೂವರ ಹೆಡೆಮುರಿ ಕಟ್ಟಿದ್ದಾರೆ. ಐನಾತಿ ಕಳ್ಳರು ಕದ್ದ ಮಾಲನ್ನು ವಿನೇಶ್ ಪಟೇಲ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದರು.

ಸದ್ಯ ಮೂವರು ಆರೋಪಿಗಳಾದ ವೆಂಕಟೇಶ್, ರಾಘವೇಂದ್ರ ಹಾಗೂ ವಿನೇಶ್‌ನನ್ನು ಕೊರಟಗೆರೆ ಪೊಲೀಸರು ಬೆಂಗಳೂರಿನ ಕಾಮಾಕ್ಷಿಪಾಳ್ಳದಲ್ಲಿ ಬಂಧಿಸಿದ್ದಾರೆ. ಇನ್‌ಸ್ಪೆಕ್ಟರ್‌ ಅನಿಲ್‌ ಹಾಗೂ ತಂಡ ಕಳ್ಳರನ್ನು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಕಳ್ಳರ ಬಂಧನದಿಂದ ಕೊರಟಗೆರೆ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Coastal Weather: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22 ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆಯಿದೆ.

VISTARANEWS.COM


on

Karnataka weather Forecast
Koo

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ಗುಡುಗು ಸಹಿತ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ (Coastal Weather) ನಿರೀಕ್ಷೆಯಿದೆ.

ಹಲವೆಡೆ ಉತ್ತಮ ಮಳೆ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ಬೆಳಗ್ಗೆ ಮತ್ತು ಸಂಜೆ ಉತ್ತಮ ಮಳೆ ಸುರಿದಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣದಿಂದ ಕೂಡಿತ್ತು. ಮಂಗಳೂರಿನಲ್ಲಿ ಭಾನುವಾರ 32.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಕಡಿಮೆ ಇತ್ತು. 24.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಕಡಿಮೆ ಇತ್ತು.

ಉಡುಪಿಯಲ್ಲಿ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ಭಾನುವಾರ ಬೆಳಗಿನಜಾವದವರೆಗೂ ನಿರಂತರ ಮಳೆ ಸುರಿದಿದೆ. ಇನ್ನು ಉಡುಪಿ, ಮಣಿಪಾಲ, ಮಲ್ಪೆ, ಬ್ರಹ್ಮಾವರ, ಕೋಟ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಕಾಪು, ಶಿರ್ವ, ಪಡುಬಿದ್ರಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಹಲವೆಡೆ ಗಾಳಿ-ಮಳೆಗೆ ಮನೆಗಳಿಗೆ ಹಾನಿ ಸಂಭವಿಸಿದೆ. ವಿದ್ಯುತ್‌ ಕಂಬ, ತಂತಿಗಳಿಗೆ ಹಾನಿ ಸಂಭವಿಸಿದೆ.

ಕೊಡಗಿನಲ್ಲಿ ಉತ್ತಮ ಮಳೆ

ಕೊಡಗಿನ ವಿವಿಧೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ 23ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
RR vs RCB
ಕ್ರೀಡೆ3 mins ago

RCB vs RR: ಆರ್​ಸಿಬಿ-ರಾಜಸ್ಥಾನ್​ ಪಂದ್ಯಕ್ಕೆ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Mangalore Tour
ಪ್ರವಾಸ7 mins ago

Mangalore Tour: ಮಂಗಳೂರಿಗೆ ಬಂದರೆ ಈ ಸ್ಥಳಗಳಿಗೆ ಭೇಟಿ ಕೊಡಲು ಮರೆಯದಿರಿ

2nd Pux Exam
ಬೆಂಗಳೂರು15 mins ago

2nd Puc Exam : ಆನ್‌ಲೈನ್‌ನಲ್ಲೆ ಸಿಗುತ್ತೆ ಪಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

Boiler Blast
ಕರ್ನಾಟಕ15 mins ago

Boiler Blast: ಅಥಣಿ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರ ಸ್ಥಿತಿ ಗಂಭೀರ

Equity Market
ಪ್ರಮುಖ ಸುದ್ದಿ18 mins ago

Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

Prajwal Revanna Case HD Kumaraswamy slams DK Shivakumar
ರಾಜಕೀಯ22 mins ago

Prajwal Revanna Case: ಡಿಕೆಶಿ ಒಪ್ಪಿಕೊಂಡಿದ್ದಕ್ಕಿಂತ ಸಾಕ್ಷಿ ಬೇಕಾ ಸಿದ್ದರಾಮಯ್ಯ? ಸಿಎಂಗೆ ಎಚ್‌ಡಿಕೆ ಪ್ರಶ್ನೆ

Allu Arjun Sneha spotted at a dhaba
South Cinema23 mins ago

Allu Arjun: ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ಅಲ್ಲು ಅರ್ಜುನ್‌ ದಂಪತಿ! ಫ್ಯಾನ್ಸ್‌ಗೆ ಅಚ್ಚರಿ

Money Guide
ಮನಿ-ಗೈಡ್39 mins ago

Money Guide: ಉಮಾಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಿ

Drown in pond
ಕರ್ನಾಟಕ52 mins ago

Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

Ebrahim Raisi
ವಿದೇಶ53 mins ago

Ebrahim Raisi: ಹೆಲಿಕಾಪ್ಟರ್‌ ಪತನದಲ್ಲಿ ಇರಾನ್‌ ಅಧ್ಯಕ್ಷ ದುರಂತ ಸಾವು; ಇಸ್ರೇಲ್ ಫಸ್ಟ್‌ ರಿಯಾಕ್ಷನ್‌ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌