Site icon Vistara News

Tumkur News: ಪಾವಗಡದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಶಾಸಕ ಎಚ್.ವಿ.ವೆಂಕಟೇಶ್ ಚಾಲನೆ

MLA H V Venkatesh drives for Gruha Lakshmi Scheme implementation program in Pavagada

ಪಾವಗಡ: ಪಟ್ಟಣದ ಎಸ್.ಎಸ್.ಕೆ ರಂಗ ಮಂದಿರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಅನುಷ್ಠಾನ ಕಾರ್ಯಕ್ರಮಕ್ಕೆ ಶಾಸಕ ಎಚ್.ವಿ.ವೆಂಕಟೇಶ್ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಎಚ್.ವಿ.ವೆಂಕಟೇಶ್, ಕಾಂಗ್ರೆಸ್ ನ ಉಚಿತ ಯೋಜನೆಗಳು ನೋಡಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ನಿದ್ದೆ ಕೆಟ್ಟಿದೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ತಾಲೂಕಿನಲ್ಲಿ 51.971 ಸಾವಿರ ಫಲಾನುಭವಿಗಳು ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Lakshmi Hebbalkar : ಇದು ನನ್ನ ಜೀವನದ ಸಾರ್ಥಕ ಕ್ಷಣ; ಗೃಹಲಕ್ಷ್ಮಿ ಸ್ಕೀಂ ಸಾಕಾರಕ್ಕೆ ಭಾವುಕರಾದ ಲಕ್ಷ್ಮೀ ಹೆಬ್ಬಾಳ್ಕರ್‌

ಲೋಕಸಭಾ ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರವು ಸಿಲಿಂಡರ್‌ ದರವನ್ನು ಇಳಿಕೆ ಮಾಡಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ, ಮುಂದಿನ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಕಾಂಗ್ರೆಸ್ ಗೆ ಹೆಚ್ಚಿನ ಆದ್ಯತೆ ಸಿಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Aditya L1 Mission: ಸೂರ್ಯಯಾನಕ್ಕೆ ಆದಿತ್ಯ ಎಲ್‌ 1 ಮಿಷನ್‌ ರೆಡಿ; ತಾಲೀಮು ಅಂತ್ಯ, ಉಡಾವಣೆಯೊಂದೇ ಬಾಕಿ

ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ, ತಹಸೀಲ್ದಾರ್ ವರದರಾಜ್, ತಾಲೂಕು ಪಂಚಾಯಿತಿ ಇಓ ಜಾನಿಕಿರಾಮ್, ಪುರಸಭೆ ಮುಖ್ಯಾಧಿಕಾರಿ ಷಂಶುದ್ದಿನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ನಾರಾಯಣ್, ಪುರಸಭೆ ಸದಸ್ಯರು ಹಾಗೂ ಇತರೆ ಮುಖಂಡರು ಪಾಲ್ಗೊಂಡಿದ್ದರು.

Exit mobile version