cow slaughter : ಹಿಂದುಗಳು ಪುಕ್ಕಲರಲ್ಲ! ಗೋ ಹತ್ಯೆ ತಡೆದು ಮುಸ್ಲಿಂರಿಗೆ ಆವಾಜ್ ಹಾಕಿದ ಬಸವಕಲ್ಯಾಣ ಶಾಸಕ - Vistara News

ಕರ್ನಾಟಕ

cow slaughter : ಹಿಂದುಗಳು ಪುಕ್ಕಲರಲ್ಲ! ಗೋ ಹತ್ಯೆ ತಡೆದು ಮುಸ್ಲಿಂರಿಗೆ ಆವಾಜ್ ಹಾಕಿದ ಬಸವಕಲ್ಯಾಣ ಶಾಸಕ

cow slaughter: ಬಸವಕಲ್ಯಾಣ ನಗರದಲ್ಲಿ ಮುಸ್ಲಿಂವೊಬ್ಬರ ಮನೆಯಲ್ಲಿ ಗೋ ಹತ್ಯೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಶಾಸಕ ಶರಣು ಸಲಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುಗಳು ಏನೆಂಬುದನ್ನು ಇನ್ನು ತೋರಿಸುತ್ತೇವೆ ಎಂದು ಗುಡುಗಿದ್ದಾರೆ.

VISTARANEWS.COM


on

MLA stops sharanu salagar cow slaughter in Basavakalyan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೀದರ್: ರಾಜ್ಯದಲ್ಲಿ ಗೋಹತ್ಯೆ ನಿಷೇಧ (cow slaughter) ವಿಚಾರವು ಈಗ ಭಾರಿ ಚರ್ಚೆ ನಡೆಯುತ್ತಿದೆ. ಬಿಜೆಪಿ ಜಾರಿಗೆ ತಂದಿರುವ ಕಾಯ್ದೆಯನ್ನು ವಾಪಸ್‌ ಪಡೆಯುವುದಾಗಿ ಕಾಂಗ್ರೆಸ್‌ ಸರ್ಕಾರ ಹೇಳುತ್ತಿದೆ. ಈ ಮಧ್ಯೆ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು, ಗೋ ಹತ್ಯೆ ತಡೆದು ಮುಸ್ಲಿಂರಿಗೆ ಆವಾಜ್ ಹಾಕಿದ್ದಾರೆ. ಹಿಂದುಗಳು ಪುಕ್ಕಲರಲ್ಲ ಎಂದು ಗುಡುಗಿದ್ದಾರೆ.

ಬಸವಕಲ್ಯಾಣದ ಇನಾಮ್ ಉಲ್ಲಾ ಖಾನ್ ಎಂಬುವವರ ಮನೆಯಲ್ಲಿ ಗೋ ಹತ್ಯೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ನಿಂತು ಗೋಹತ್ಯೆ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದಾರೆ.

MLA stops cow slaughter in Basavakalyan Anger against Muslims
ಶಾಸಕ ಶರಣು ಸಲಗಾರ ಅವರು ಮುಸ್ಲಿಮರ ಮನೆ ಮುಂದೆ ನಿಂತು ಆಕ್ರೋಶ ವ್ಯಕ್ತಪಡಿಸಿದರು.

ಗೋ ಹತ್ಯೆ ತಡೆಯಲು ನಿರಂತರ ಹೋರಾಟ ಇರಬೇಕು. ಗೋ ಹತ್ಯೆ ಮಾಡುವವರ ವಿರುದ್ಧ ನಿರಂತರ ಹೋರಾಟ ಇರಬೇಕು. ಗೋ ಹತ್ಯೆ ಮಾಡುವುದು ಮುಸ್ಲಿಮರಿಗೆ ಮೈ ಉಂಡಿದೆ. ಹಿಂದುಗಳು ನೂರು ಜನ ಸೇರಿದರೂ ಪುಕ್ಕಲರಿದ್ದಾರೆ ಎಂಬುದು ಮುಸ್ಲಿಮರ ಭಾವನೆಯಾಗಿದೆ. ಹಿಂದುಗಳು ಪುಕ್ಕಲರಲ್ಲ ಅನ್ನವುದನ್ನು ಮುಸ್ಲಿಮರಿಗೆ ಸಾಬೀತು ಮಾಡಿ ತೋರಿಸುತ್ತೇವೆ. ಹಿಂದುಗಳು ಏನು ಅನ್ನುವುದನ್ನು ತೋರಿಸಬೇಕು ಇವರಿಗೆ. ನಾವು ಗಂಡಸರು ಅನ್ನುವುದನ್ನು ನಿಮಗೆ ತೋರಿಸುತ್ತೇವೆ ಎಂದು ಶಾಸಕ ಶರಣು ಸಲಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದುಗಳು ಗಂಡಸರು ಎಂಬುವುದು ಸಾಬೀತು ಮಾಡುತ್ತೇವೆ

ಬಸವಕಲ್ಯಾಣದಲ್ಲಿ ಕಾನೂನು ಮಾತ್ರವೇ ಪಾಲನೆಯಾಗಬೇಕು. ಇಲ್ಲಿ ಮುಸ್ಲಿಂರ ದಬ್ಬಾಳಿಕೆ ನಡೆಯುತ್ತಿದೆ. ಬಸವಕಲ್ಯಾಣದಲ್ಲಿ ಹಿಂದುಗಳು ಗಂಡಸರು ಎಂಬುವುದು ಸಾಬೀತು ಮಾಡುತ್ತೇವೆ. ಕಾಂಗ್ರೆಸ್ ಅಲ್ಲ ಯಾವ ಸರ್ಕಾರ ಬಂದರೂ ಏನು ಮಾಡುವುದಕ್ಕಾಗದು ಎಂದು ಗುಡುಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Prajwal Revanna Case: ಎಚ್‌.ಡಿ. ರೇವಣ್ಣ ಮನೆ ಕೆಲಸದ ಮಹಿಳೆ ಅಪಹರಣ ಪ್ರಕರಣದ 2ನೇ ಆರೋಪಿ ಸತೀಶ್‌ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣ (Prajwal Revanna Case) ದೇಶಾದ್ಯಂತ ಸದ್ದು ಮಾಡುತ್ತಿರುವ ನಡುವೆ ದಾಖಲಾಗಿದ್ದ ಎಚ್‌.ಡಿ.ರೇವಣ್ಣ ಮನೆ ಕೆಲಸದ ಮಹಿಳೆ ಅಪಹರಣ ಪ್ರಕರಣದಲ್ಲಿ 2ನೇ ಆರೋಪಿ ಸತೀಶ್‌ ಬಾಬುಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ರೇವಣ್ಣ ಮನೆ ಕೆಲಸದ ಮಹಿಳೆಯ ಪುತ್ರ ಕೆ.ಆರ್‌.ನಗರ ಠಾಣೆಗ ದೂರು ನೀಡಿದ್ದರು. ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು.‌ ಈ ಸಂಬಂಧ ಫೋಟೊಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಎ1 ಶಾಸಕ ಎಚ್.ಡಿ.ರೇವಣ್ಣ ಹಾಗೂ ಎ2 ಸತೀಶ್‌ ಬಾಬು ಅಪಹರಣ ಮಾಡಿಸಿದ್ದಾರೆ ಎಂದು ದೂರು ನೀಡಲಾಗಿತ್ತು.

ಮನೆಗೆಲಸದಾಕೆ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಶಾಸಕ ಎಚ್‌.ಡಿ.ರೇವಣ್ಣ ಸಲಹೆ ಮೇರೆಗೆ ಮಹಿಳೆಯನ್ನು ಸತೀಶ್‌ ಬಾಬು ಅಪಹರಣ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ರೇವಣ್ಣ ಮನೆ ಕೆಲಸದ ಮಹಿಳೆಯ ಪುತ್ರ ನೀಡಿದ ದೂರಿನ ಮೇರೆಗೆ ಕಿಡ್ನ್ಯಾಪ್‌ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ | Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ಎರಡನೇ ಆರೋಪಿ ಸತೀಶ್‌ ಬಾಬು ಅವರನ್ನು ನೆನ್ನೆ ರಾತ್ರಿಯೇ ಪೊಲೀಸರು ಬಂಧಿಸಿದ್ದರು. ಇದೀಗ ಅವರನ್ನು ಕೆ.ಆರ್‌.ನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

Prajwal Revanna Case Who leaked the pen drive Devaraje Gowda gives evidence to SIT

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ಮಹತ್ವದ ದಾಖಲೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆಯೂ ಹೇಳಿಕೆ ನೀಡಿದ್ದೇನೆ. ಇದನ್ನು ಇಲ್ಲಿ ಹೇಳಲಾಗುವುದಿಲ್ಲ. ಆದರೆ, ಇನ್ನೊಂದು ವಾರದಲ್ಲಿ ಎಲ್ಲವೂ ಹೊರಗೆ ಬರಲಿದೆ ಎಂದು ಹೇಳಿದ್ದಾರೆ.

ಎಸ್‌ಐಟಿ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ದೇವರಾಜೇಗೌಡ, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಗುರುವಾರ ನೋಟಿಸ್‌ ನೀಡಿದ್ದರು. ಅದರಂತೆ ಇಂದು ಹಾಜರಾಗಿ ನಾನು ಎಲ್ಲ ಸಂಗತಿಗಳನ್ನು ಹೇಳಿದ್ದೇನೆ. ಈ ವಿಡಿಯೊಗಳನ್ನು ವೈರಲ್ ಮಾಡಿದವರು ಯಾರು ಎನ್ನುವ ಮಾಹಿತಿ ನನಗೆ ಗೊತ್ತಿದೆ. ಅದನ್ನು ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದೇನೆ. ಯಾರು ಎಂಬುದನ್ನು ನಾನು ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಎಚ್‌ಡಿಕೆಯಿಂದ ಮಹತ್ವದ ನಿರ್ಧಾರ

ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕೆ ಇಷ್ಟೆಲ್ಲ ಆಗುತ್ತಲಿದೆ. ಮುಂದಿನ ಒಂದು ವಾರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆಗ ಎಲ್ಲವನ್ನೂ ಪ್ರಕಟಿಸುವವರಿದ್ದಾರೆ. ಯಾರು ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೋ ಆ ಎಲ್ಲವೂ ಒಂದು ವಾರದಲ್ಲಿ ಹೊರಗೆ ಬರತ್ತದೆ ಎಂದು ದೇವರಾಜೇಗೌಡ ತಿಳಿಸಿದರು.

ನನ್ನ ಬಳಿ ಇದ್ದ ಎಲ್ಲ ಸಾಕ್ಷಿಗಳನ್ನು ನೀಡಿದ್ದೇನೆ. ನಿನ್ನೆ ನನ್ನನ್ನು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ದೇವರಾಜೇಗೌಡ ಹೇಳಿದರು.
ರಾಜಕೀಯಕ್ಕಾಗಿಯೇ ಇದೆಲ್ಲ ನಡೆಯುತ್ತಿದೆ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

ಈ ಎಲ್ಲ ಬೆಳವಣಿಗೆಗಳು ರಾಜಕೀಯ ಕುತಂತ್ರದಿಂದ ನಡೆದಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಇದೆಲ್ಲ ನಡೆಯುತ್ತಿರುವುದೇ ರಾಜಕೀಯವಾಗಿ. ಎಲ್ಲ ದಿಕ್ಕಿನಲ್ಲಿಯೂ ತನಿಖೆ ನಡೆಸುತ್ತಿರುವುದು ಖುಷಿಯನ್ನು ತಂದಿದೆ. ಯಾರೂ ಈ ತನಿಖೆಯಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಅನ್ನಿಸುತ್ತಿಲ್ಲ ಎಂದು ಹೇಳಿದರು.

Continue Reading

ಕ್ರೈಂ

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Prajwal Revanna Case: ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Prajwal Revanna Case face not visible in videos says HD Kumaraswamy
Koo

ರಾಯಚೂರು: ಪ್ರಜ್ವಲ್ ರೇವಣ್ಣ (Prajwal Revanna Case) 400 ಮಹಿಳೆಯರನ್ನು ರೇಪ್ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳುತ್ತಾರೆ. ಅವರಿಗೆ ಈ ಮಾಹಿತಿ ಕೊಟ್ಟವರು ಯಾರು? ನೀವು (ಸರ್ಕಾರದವರು) ಕೊಟ್ಟಿದ್ದೀರಾ? ಈ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡಿರುವ ರಾಹುಲ್‌ಗೆ ನೋಟಿಸ್‌ ಕೊಡುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿ. ಈ ಸರ್ಕಾರಕ್ಕೆ‌ ಮಾನ, ಮರ್ಯಾದೆ ಇದ್ದಿದ್ದರೆ, ಹೆಣ್ಣು‌ಮಕ್ಕಳ‌ ಫೋಟೊಗಳನ್ನು ಇಡೀ ದೇಶಕ್ಕೆ ಕಳುಹಿಸುತ್ತಿರಲಿಲ್ಲ. ನಿಮಗೆ‌ ಹೆಣ್ಣು ಮಕ್ಕಳ ಮೇಲೆ ಗೌರವ ಇದೆಯಾ? ನಿಮಗೆ‌ ಗಂಡಸ್ತನ, ತಾಕತ್ತಿದ್ದರೆ ರಾಹುಲ್ ಗಾಂಧಿಗೆ ನೋಟಿಸ್‌ ಕೊಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸವಾಲು ಹಾಕಿದರು.

ಈ ಕುರಿತು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ನೀವು‌ ಬಿಟ್ಟಿರುವ ವಿಡಿಯೊಗಳಲ್ಲಿ ಪ್ರಜ್ವಲ್ ಮುಖವೇ ಇಲ್ಲ. ಹಾಗಂತ ನಾನೇನು ಆ ವಿಡಿಯೊಗಳನ್ನು ನೋಡಿಲ್ಲ. ಇಷ್ಟಾದರೂ ಸಹಿಸಿಕೊಂಡಿದ್ದೇವೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನ ಮಹಾನಾಯಕ ತೋಟದಲ್ಲಿ‌ ಏನೇನಾಗಿದೆ? ನೀನೇನು 6 – 7 ಜನರನ್ನು ಹೋಟೆಲ್‌ನಲ್ಲಿ ತೆಗೆದುಕೊಂಡು ಹೋಗಿ ಇಟ್ಟೀದಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ

ನಿಮಗೆ ಬೇಕಿರುವುದು ಆ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಲ್ಲ. ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡು ಗೆಲ್ಲಬೇಕು ಹಾಗೂ ಪ್ರಧಾನಿ ನರೇಂದ್ರ‌ ಮೋದಿಯವರ ಹೆಸರು ಕೆಡಿಸಬೇಕು ಎಂಬುದಷ್ಟೇ ನಿಮಗೆ ಬೇಕಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಅದರಲ್ಲಿ ಏನೂ ರಾಜೀ‌ ಇಲ್ಲ. ನಾವೂ ಎಲ್ಲ ರೀತಿಯ ದಾಖಲೆಗಳನ್ನೂ ತರುತ್ತೇವೆ. ನಾವೇನೂ ಪಲಾಯನವಾದಿಗಳಲ್ಲ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪಾತ್ರವಾಗಲೀ, ನನ್ನ ಪಾತ್ರವಾಗಲೀ ಈ ಪ್ರಕರಣದಲ್ಲಿ ಇಲ್ಲ. ಆದರೂ ನಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ಪೆನ್‌ಡ್ರೈವ್‌ ಲೀಕ್‌ ಬಗ್ಗೆ ಹೊರಜಗತ್ತಿಗೆ ಗೊತ್ತಾದ ದಿನವೇ ಹೇಳಿದ್ದೇನೆ. ಈ ನೆಲದ ಕಾನೂನಿಗೆ ತಲೆ ಬಾಗಬೇಕು. ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ದೇನೆ. ಆದರೂ‌ ಕ್ಯಾಮರಾ ಹಿಡಿದು ನನ್ನ ಮುಂದೆಯೇ ಏಕೆ ಬರುತ್ತೀರಿ? ಎಂದು ಮಾಧ್ಯಮದವರಿಗೆ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಏನೋ‌ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ.
ಎಸ್.ಐ.ಟಿ. ಜತೆ ಚಿಂತನೆ ಮಾಡುತ್ತೇವೆ ಎಂದು ಹೇಳಿ ಏಪ್ರಿಲ್‌ 28ಕ್ಕೆ ಎಫ್.ಐ.ಆರ್ ಮಾಡಿಸಿದ್ದೀರಿ. ಈ ವಿಚಾರದಲ್ಲಿ ಪದೇ ಪದೆ ಪ್ರಧಾನಿ ಮೋದಿ ಹಾಗೂ ಬಿಜೆಪಿಯವರನ್ನು ಏಕೆ ಎಳೆಯುತ್ತೀರಿ? ಅದಕ್ಕೂ‌ ಪ್ರಧಾನಿಗೂ ಸಂಬಂಧ ಏನು? ಎಂದು ಎಚ್‌.ಡಿ. ಕುಮಾರಸ್ವಾಮಿ ಕೇಳಿದರು.

ಸುಮ್ಮನೆ ನನ್ನನ್ನು ಕೆಣಕಿದ್ದಾರೆ

ನೋಟಿಸ್ ಕೊಟ್ಟ ನಂತರ ಒಂದು ವಾರ ಸಮಯ ಕೇಳಲಾಗಿದೆ. ರೇವಣ್ಣ ಅವರು ಎರಡು ದಿನ ಸಮಯ‌ ಕೇಳಿದ್ದಾರೆ. 8, 10 ಹತ್ತು ಬಾರಿ ಸಮನ್ಸ್ ಕೊಟ್ಟು ಸಮನ್ಸ್‌ಗೇ ಗೌರವ ಕಳಿದಿದ್ದೀರಿ. ದೇವೇಗೌಡರನ್ನು, ಪ್ರಧಾನಿಯವರನ್ನು ಎಳೆದು ತಂದಿದ್ದೀರಿ. ನಿಮ್ಮ ಸರ್ಕಾರದಲ್ಲಿ ನೀವೇ ಈ ರೀತಿಯ ಹೇಳಿಕೆಗಳನ್ನು ಕೊಡುವುದರ ಮುಖಾಂತರ ತನಿಖೆಯ ಹಾದಿಯನ್ನು ತಪ್ಪಿಸುವುದಲ್ಲದೆ, ಪ್ರಚಾರಕ್ಕೋಸ್ಕರ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿದ್ದೀರಿ. ಕೆಲವರು ಕುಮಾರಸ್ವಾಮಿಯೇ ಈ‌ ಪೆನ್‌ಡ್ರೈವ್‌ ಬಿಟ್ಟಿದ್ದಾಗಿ ಹೇಳುತ್ತಾರೆ. ಇಲ್ಲಿ‌ ನನ್ನ ಹೆಸರನ್ನು ತರಲಾಗಿದೆ. ಸುಮ್ಮನೆ ನನ್ನನ್ನು ಕೆಣಕಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಗುಡುಗಿದರು.

ಇದನ್ನೂ ಓದಿ: Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

ತಂದೆ – ತಾಯಿಗೆ ಆತ್ಮಸ್ಥೈರ್ಯ ತುಂಬಲು ಹೋಗಿದ್ದೆ

ರಾಜ್ಯದ‌ ಮುಖ್ಯಮಂತ್ರಿಗೆ ತಂದೆ – ತಾಯಿ‌ ಮೇಲೆ ಗೌರವ ಇದೆಯೇ? ಸಿದ್ದರಾಮಯ್ಯ ಅವರಿಗೆ ಮನುಷ್ಯತ್ವ ಇಲ್ಲದಿರಬಹುದು. ಆದರೆ, ನಮಗೆ ಇದೆ. ನಾನು ಬಂದಿರುವ ಸಂಸ್ಕೃತಿ ನಮಗೆ ಇದನ್ನು ಕಲಿಸಿದೆ. ನನ್ನ ತಂದೆ – ತಾಯಿ ನೋವಿನಲ್ಲಿದಾರೆ. ಅವರಿಗೆ ಆತ್ಮಸ್ಥೈರ್ಯ ತುಂಬುವುದಕ್ಕೆ ನಾನು ಅವರ ಜತೆ ಎರಡು ದಿನ ಇದ್ದೆ. ನಮ್ಮ ಮನೆಗೆ ಯಾವ ವಕೀಲರು ಬಂದಿದ್ದರು? ಇವತ್ತು ಆರೋಪಿ‌ ಸ್ಥಾನದಲ್ಲಿ‌ ನಿಲ್ಲಿಸಿದ್ದೀರಿ ಎಂದು ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

Continue Reading

ಪ್ರಮುಖ ಸುದ್ದಿ

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

Covishield Vaccine: ಕೋವಿಶೀಲ್ಡ್ ಲಸಿಕೆ ಅಡ್ಡಪಾರಿಣಾಮಗಳ ಸಂಬಂಧ ಸೂಚನಾ ಪತ್ರ ಹೊರಡಿಸಿ ಎಡವಟ್ಟು ಮಾಡಿಕೊಂಡಿದ್ದ ಚಿಕ್ಕಬಳ್ಳಾಪುರದ ಹಲವು ಕಾಲೇಜು ಆಡಳಿತ ಮಂಡಳಿಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

VISTARANEWS.COM


on

Covishield Vaccine
Koo

ಚಿಕ್ಕಬಳ್ಳಾಪುರ: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್‌ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿವೆ ಎಂಬ ಸುದ್ದಿಗಳು ವರದಿಯಾದ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಲ್ಲಿ ಆತಂಕ ಮೂಡಿದೆ. ಈ ನಡುವೆ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವನೆ ಮಾಡದಂತೆ ಹಲವು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರದ ಮೂಲಕ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದವು. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ, ತಪ್ಪು ಮಾಹಿತಿ ನೀಡಿದ ನಗರದ ವಿವಿಧ ಕಾಲೇಜುಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

ನಗರದ ಸಿದ್ದರಾಮಯ್ಯ ಲಾ ಕಾಲೇಜು ಹಾಗೂ ಜಚನಿ ಪ್ರಥಮ ದರ್ಜೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ದಿಢೀರ್ ಹೃದಯಾಘಾತ, ರಕ್ತ ಹೆಪ್ಪುಗಟ್ಟುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆ ಸೂಚನೆ ಪ್ರಕಾರ ಈ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯಗಳು ಸೇವನೆ ಮಾಡಬಾರದು ಎಂದು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರ ಹೊರಡಿಸಿದ್ದವು.

ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಕಾಲೇಜುಗಳ ಸೂಚನಾ ಪತ್ರಗಳು ವೈರಲ್‌ ಆಗಿದ್ದರಿಂದ ತಕ್ಷಣ ಎಚ್ಚೆತ್ತ ಜಿಲ್ಲಾಡಳಿತ, ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್ ಮ್ಯಾನೇಜ್ಮೆಂಟ್ ಕಮಿಟಿ ಮುಂದಾಗಿದೆ. ಸೂಚನಾ ಪತ್ರಗಳ ಬಗ್ಗೆ ಸೂಕ್ತ ಸ್ಪಷ್ಟನೆ ನೀಡುವಂತೆ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಆರೋಗ್ಯ ಇಲಾಖೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ

ಕೋವಿಶೀಲ್ಡ್‌ ಲಸಿಕೆ ಪಡೆದವರು ಫ್ರಿಡ್ಜ್‌ನಲ್ಲಿಟ್ಟ ನೀರು, ತಂಪು ಪಾನೀಯಗಳು ಹಾಗೂ ಐಸ್‌ಕ್ರೀಂ ಸೇವಿಸಬಾರದು ಎಂಬ ಕಾಲೇಜು ಆಡಳಿತ ಮಂಡಳಿಗಳ ಸೂಚನಾ ಪತ್ರ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿತ್ತು. ಹೀಗಾಗಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮಗಳ ಬಗ್ಗೆ ಇಲಾಖೆಯಿಂದ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ತಿಳಿಸಿದೆ.

ರಕ್ಷಿತ್‌ ಗಣಪತಿ ಎಂಬುವವರು, ಎಕ್ಸ್‌ ಖಾತೆಯಲ್ಲಿ ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಲಾ ಕಾಲೇಜಿನ ಸೂಚನಾ ಪತ್ರ ಹಾಕಿ, “ಇದು ನಿಜವೇ? ಈ ಪತ್ರ ನೆನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ, ದಯವಿಟ್ಟು ಸ್ಪಷ್ಟನೆ ನೀಡಿ ಎಂದು ಕೋರಿ, ಸಿಎಂ ಸಿದ್ದರಾಮಯ್ಯ, ಆರೋಗ್ಯ ಇಲಾಖೆಗೆ ಟ್ಯಾಗ್‌ ಮಾಡಿದ್ದರು. ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

ಕ್ರೀಡೆ

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

RCB vs GT: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(Royal Challengers Bangalore)ಮತ್ತು ಗುಜರಾತ್​ ಟೈಟಾನ್ಸ್​ (Gujarat Titans) ನಡುವಣ ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

VISTARANEWS.COM


on

RCB vs GT
Koo

ಬೆಂಗಳೂರು: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(Royal Challengers Bangalore) ಮತ್ತು ಗುಜರಾತ್​ ಟೈಟಾನ್ಸ್​ (Gujarat Titans) ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ತವರಿನ ಅಭಿಮಾನಿಗಳು ಕಾತದಿಂದ ಕಾದು ಕುಳಿತಿದ್ದಾರೆ. ಕ್ರಿಕೆಟ್​ ಅಭಿಮಾನಿಗಳಿಗಾಗಿಯೇ ನಮ್ಮ ಮೆಟ್ರೋ(namma metro) ಕೂಡ ವಿಶೇಷ ರೈಲು ಸೇವೆಯನ್ನು ನೀಡಲಿದೆ.

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ಮತ್ತು ಬಿಎಂಟಿಸಿ ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಪೇಪರ್‌ ಟಿಕೆಟ್‌ ಮಾರಾಟ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ (QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

ಮಳೆ ಸಾಧ್ಯತೆ


ಬೆಂಗಳೂರಿನಲ್ಲಿ ಮೇ 4ರ ಸಂಜೆವರೆಗೆ ಮಳೆ ಬರುವ ಮುನ್ಸೂಚನೆ ಇದೆಯಾದರೂ ಆಟವನ್ನೇ ನಿಲ್ಲಿಸುವಷ್ಟು ಜೋರಾಗಿ ಬರುವ ಸಾಧ್ಯತೆ ಇಲ್ಲ. ಸಣ್ಣಗೆ ತುಂತುರು ಮಳೆ ಬರಲೂಬಹುದು. ಹೀಗೆ ಸ್ವಲ್ಪ ಹೊತ್ತು ಮಳೆ ಬಂದರೂ ಬೇಗನೆ ಅದರ ಪರಿಣಾಮಗಳನ್ನು ನಿವಾರಿಸಿ ಆಟಕ್ಕೆ ಅಣಿ ಮಾಡುವ ತಂತ್ರಜ್ಞಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿದೆ.

ಇದನ್ನೂ ಓದಿ RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

ಪಾರ್ಕಿಂಗ್​ ವ್ಯವಸ್ಥೆ

ಚಿನ್ನಸ್ವಾಮಿ ಕ್ರೀಡಾಂಗಣದತ್ತ ವಾಹನಗಳ ದಂಡೇ ಬರುವುದರಿಂದ ಕೆಲವು ಕಡೆ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಇನ್ನು ಕೆಲವು ಕಡೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಮೇ 4ರಂದು ಸಂಜೆ ನಾಲ್ಕರಿಂದ ರಾತ್ರಿ 11ರವರೆಗಿನ ಮಾರ್ಗಸೂಚಿ ಇಲ್ಲಿದೆ.

ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿರ್ಬಂಧ

ಕ್ವೀನ್ಸ್‌ ರೋಡ್‌, ಎಂಜಿ ರೋಡ್‌ನಿಂದ ಕಬ್ಬನ್‌ ಪಾರ್ಕ್‌ ರಸ್ತೆ, ರಾಜಭವನ್‌ ರೋಡ್‌-ಸೆಂಟ್ರಲ್‌ ಸ್ಟ್ರೀಟ್‌ ರೋಡ್‌, ಕಬ್ಬನ್‌ ರಸ್ತೆ, ಸೈಂಟ್‌ ಮಾರ್ಕ್‌ ರಸ್ತೆ, ಮ್ಯೂಸಿಯಂ ರೋಡ್‌, ಕಸ್ತೂರ್ಬಾ ರೋಡ್‌, ಅಂಬೇಡ್ಕರ್‌ ವೀದಿ, ಟ್ರಿನಿಟಿ, ಲಾವೆಲ್ಲೆ ರೋಡ್‌, ವಿಠಲ್‌ ಮಲ್ಯ ರೋಡ್‌, ನೃಪತುಂಗ ರಸ್ತೆ

ಪಾರ್ಕಿಂಗ್‌ಗೆ ಎಲ್ಲೆಲ್ಲಿ ವ್ಯವಸ್ಥೆ

ಕಿಂಗ್ಸ್‌ ರೋಡ್‌, ಯುಬಿ ಸಿಟಿ ಪಾರ್ಕಿಂಗ್‌, ಬಿಎಂಟಿಸಿ ಟಿಟಿಎಂಸಿ ಶಿವಾಜಿ ನಗರ್‌ ಫಸ್ಟ್‌ ಫ್ಲೋರ್‌, ಹಳೆ ಕೆಜಿಐಡಿ ಬಿಲ್ಡಿಂಗ್‌, ಮೆಟ್ರೋ ಲೇನ್‌ ಕೆಳಗಿನ ಬಿಆರ್‌ವಿ ಗ್ರೌಂಡ್‌

Continue Reading
Advertisement
Prajwal Revanna Case
ಕರ್ನಾಟಕ8 mins ago

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Summer Fashion
ಫ್ಯಾಷನ್23 mins ago

Summer Fashion: ಬೇಸಿಗೆಯಲ್ಲಿ ಹುಡುಗಿಯರನ್ನು ಸವಾರಿ ಮಾಡುತ್ತಿರುವ 5 ಶೈಲಿಯ ಗ್ಲಾಮರಸ್‌ ಟಾಪ್‌ಗಳಿವು

Summer Tour
ಪ್ರವಾಸ42 mins ago

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

IPL 2024
ಕ್ರೀಡೆ45 mins ago

IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

Tips for bedroom corner
ಲೈಫ್‌ಸ್ಟೈಲ್47 mins ago

Tips for Bedroom Corner: ಮಲಗುವ ಕೋಣೆಯ ಮೂಲೆಗಳನ್ನು ಆಕರ್ಷಕವಾಗಿಸಲು ಕೆಲವು ಟಿಪ್ಸ್

Viral Video
ವೈರಲ್ ನ್ಯೂಸ್50 mins ago

Viral Video: ಪ್ರಿನ್ಸಿಪಾಲ್ ಆದರೇನು, ಟೀಚರ್ ಆದರೇನು? ಹೆಂಗಸರ ಬಡಿದಾಟ ಇರೋದೇ ಹೀಗೆ! ವಿಡಿಯೊ ನೋಡಿ

Rohit Sharma
ಪ್ರಮುಖ ಸುದ್ದಿ60 mins ago

Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

Prajwal Revanna Case face not visible in videos says HD Kumaraswamy
ಕ್ರೈಂ1 hour ago

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Covishield Vaccine
ಪ್ರಮುಖ ಸುದ್ದಿ1 hour ago

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

T20 World Cup
ಪ್ರಮುಖ ಸುದ್ದಿ1 hour ago

T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ3 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ14 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ24 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌