Site icon Vistara News

Yathindra Siddharamaiah | ಹೋಟೆಲ್‌ ಸಿಬ್ಬಂದಿಗೆ ಕ್ಲಾಸ್‌ ತೆಗೆದುಕೊಂಡ ಯತೀಂದ್ರ ಸಿದ್ದರಾಮಯ್ಯ

MLA Yathindra Siddharamaiah1

ಬೆಳಗಾವಿ: ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನವು ಡಿ.19 ರಿಂದ ಶುರುವಾಗಲಿದ್ದು, ಎಲ್ಲ ರಾಜಕೀಯ ಪಕ್ಷದ ನಾಯಕರು, ಮುಖಂಡರು ಬೆಳಗಾವಿಯಲ್ಲಿ ಬೀಡುಬಿಟ್ಟಿದ್ದಾರೆ. ಬೆಳಗಾವಿಗೆ ಬಂದಿರುವ ವರುಣಾ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಖಾಸಗಿ ಹೋಟೆಲ್ ಸಿಬ್ಬಂದಿಯನ್ನು (Yathindra Siddharamaiah) ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ವಾರಕ್ಕೂ ಮೊದಲೇ ರೂಮ್ ಬುಕ್ ಮಾಡಿದ್ದರೂ, ಸರಿಯಾದ ಸಮಯಕ್ಕೆ ರೂಮು ಕೊಡದೇ ಕಾಯಿಸಿದ್ದಕ್ಕೆ ಯತೀಂದ್ರ ಆಕ್ರೋಶ ಹೊರಹಾಕಿದ್ದಾರೆ. ಭಾನುವಾರ ಸಂಜೆ ಬೆಳಗಾವಿಯಲ್ಲಿ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ಹಿನ್ನೆಲೆ ಬಹುತೇಕ ಕಾಂಗ್ರೆಸ್ ಶಾಸಕರು ಆಗಮಿಸುತ್ತಿದ್ದಾರೆ.

ಇದೇ ವೇಳೆ ಬೆಳಗಾವಿ ಖಾಸಗಿ ಹೋಟೆಲ್‌ಗೆ ಯತೀಂದ್ರ ಸಿದ್ದರಾಮಯ್ಯ ಆಗಮಿಸಿದ್ದು, ರೂಂ ಬುಕ್ ಮಾಡಿದ್ದರೂ ಕಾಯಿಸಿದಕ್ಕೆ ತರಾಟೆ ತೆಗೆದುಕೊಂಡಿದ್ದಾರೆ. ಕಳೆದ ಸಲವೂ ಇದೇ ರೀತಿ ಆಗಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | Border Dispute | ಬೆಳಗಾವಿ ಅಧಿವೇಶನಕ್ಕಾಗಿ ಆಗಮಿಸಿದ್ದ ಸರ್ಕಾರಿ ವಾಹನಕ್ಕೆ ಮರಾಠಿ ಪುಂಡರಿಂದ ಕಲ್ಲು ತೂರಾಟ

Exit mobile version