ಕರ್ನಾಟಕ
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
ಹಿರಿಯ ಬಿಜೆಪಿ ನಾಯಕ ಆಯನೂರು ಮಂಜುನಾಥ್ ಅವರು ರಂಜಾನ್ ಮತ್ತು ಯುಗಾದಿಗೆ ಜತೆಯಾಗಿ ಶೂಭಾಶಯ ಕೋರುವ ಮೂಲಕ ಶಿವಮೊಗ್ಗ ನಗರ ಬಿಜೆಪಿಯಲ್ಲಿ (Shivamogga politics) ಸಂಚಲನ ಮೂಡಿಸಿದ್ದಾರೆ. ಹಾಗಿದ್ದರೆ ಅವರ ಉದ್ದೇಶ ಏನು?
ಶಿವಮೊಗ್ಗ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಶಿವಮೊಗ್ಗದಲ್ಲಿ ರಾಜಕೀಯ (Shivamogga politics) ಹೊಸ ಹೊಸ ರೂಪಗಳನ್ನು ಪಡೆಯುತ್ತಿದೆ. ಒಂದು ಕಡೆ ಅಗ್ರೆಸಿವ್ ಹಿಂದುತ್ವದ ಪ್ರಚಾರ ನಡೆಯುತ್ತಿದ್ದರೆ, ಇನ್ನೊಂದು ಕಡೆ ಅದನ್ನು ತಣ್ಣಗಾಗಿಸುವ ಪ್ರಯತ್ನವೂ ನಡೆಯುತ್ತಿದೆ. ಆದರೆ, ವಿಚಿತ್ರವೆಂದರೆ ಇವೆರಡೂ ವಿದ್ಯಮಾನಗಳು ಬಿಜೆಪಿಯೊಂದರಲ್ಲೇ ನಡೆಯುತ್ತಿದೆ.
ಒಂದು ಕಡೆ ಕೆ.ಎಸ್. ಈಶ್ವರಪ್ಪ ಮತ್ತು ಇತರ ನಾಯಕರು ತೀವ್ರಗಾಮಿ ಹಿಂದುತ್ವದ ಪ್ರತಿಪಾದನೆ ಮಾಡಿ ತಮ್ಮ ವೋಟ್ ಬ್ಯಾಂಕ್ ಭದ್ರ ಮಾಡಿಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದು ಕಡೆ ಬಿಜೆಪಿ ನಾಯಕ, ಮೇಲ್ಮನೆ ಸದಸ್ಯ ಆಯನೂರು ಮಂಜುನಾಥ್ ಹಿಂದು-ಮುಸ್ಲಿಂ ಭಾಯಿ ಭಾಯಿ ಅನ್ನುತ್ತಿದ್ದಾರೆ. ಅವರು ಯುಗಾದಿ ಮತ್ತು ರಂಜಾನ್ಗೆ ಜತೆಯಾಗಿ ಫ್ಲೆಕ್ಸ್ ಹಾಕಿಸುವ ಮೂಲಕ ಗಮನ ಸೆಳೆದಿದ್ದಾರೆ. ಫ್ಲೆಕ್ಸ್ನಲ್ಲಿ ಬರೆದಿರುವ ಪದಗಳು ಇನ್ನಷ್ಟು ಕುತೂಹಲ ಕೆರಳಿಸಿವೆ.
ಯುಗಾದಿ ಹಾಗು ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಎಂಎಲ್ ಸಿ ಆಯನೂರು ಮಂಜುನಾಥ್ ಹಾಕಿಸಿರುವ ಫ್ಲೆಕ್ಸ್ನಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನೇ ಟಾರ್ಗೆಟ್ ಮಾಡಿದ್ದಾರಾ ಎಂಬ ಪ್ರಶ್ನೆಯೂ ಕಾಡುತ್ತಿದೆ.
ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ/
ಮುರಿದ ಮನಸ್ಸುಗಳ ಬೆಸುಗೆಯಾಗಲಿ/
ಶಿವಮೊಗ್ಗದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲಿ
ಎಂದು ಫ್ಲೆಕ್ಸ್ ನಲ್ಲಿ ಬರೆಯಲಾಗಿದ್ದು, ಇದು ಕೆ.ಎಸ್. ಈಶ್ವರಪ್ಪ ಅವರನ್ನೇ ಟಾರ್ಗೆಟ್ ಮಾಡಿಬರೆದಿದ್ದು ಎಂಬ ಅಭಿಪಾಯವಿದೆ.
ಶಿವಮೊಗ್ಗ ನಗರದ ಮೇಲೆ ಕಣ್ಣಿಟ್ಟಿರುವ ಆಯನೂರು
ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕೆ.ಎಸ್. ಈಶ್ವರಪ್ಪ ಅವರು ಹಾಲಿ ಶಾಸಕರಾಗಿದ್ದಾರೆ. ಅವರೇ ಮತ್ತೊಮ್ಮೆ ಸ್ಪರ್ಧೆ ಮಾಡುವ ಆಸಕ್ತಿ ಹೊಂದಿದ್ದಾರೆ. ತಮಗೆ ವಯಸ್ಸಿನ ಕಾರಣಕ್ಕೆ ಟಿಕೆಟ್ ಕೈತಪ್ಪುವುದಾದರೆ ಪುತ್ರ, ಜಿಪಂ ಮಾಜಿ ಸದಸ್ಯ ಇ. ಕಾಂತೇಶ್ ಅವರಿಗೆ ಟಿಕೆಟ್ ನೀಡುವಂತೆ ಕಸರತ್ತು ನಡೆಸಿದ್ದಾರೆನ್ನಲಾಗಿದೆ. ಈ ಮಧ್ಯೆ ಶಿವಮೊಗ್ಗ ನಗರದ ಮೇಲೆ ಕಣ್ಣಿಟ್ಟಿರುವ ಆಯನೂರು ಮಂಜುನಾಥ್ ಅವರು ವರಿಷ್ಠರ ಮುಂದೆ ತಮ್ಮ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ನಾನೂ ಆಕಾಂಕ್ಷಿ ಎನ್ನುವುದನ್ನು ಸ್ಪಷ್ಟವಾಗಿ ಗೊತ್ತು ಮಾಡುತ್ತಿರುವ ಮಂಜುನಾಥ್ ಫ್ಲೆಕ್ಸ್ನಲ್ಲಿ ಕೂಡಾ ʻಈ ಬಾರಿ ಮಂಜುನಾಥ್ʼ ಎಂದೇ ಬರೆಸಿದಾರೆ.
ಕೆಲವು ದಿನಗಳ ಹಿಂದಷ್ಟೇ ಅವರು ಅವರು ನೈರುತ್ಯ ಪದವೀಧರ ಕ್ಷೇತ್ರದ ಪದವೀಧರರಿಗೆ ಬಹಿರಂಗ ಪತ್ರ ಬರೆದು, ತಾನೂ ವಿಧಾನಸಭೆಗೆ ಸ್ಪರ್ಧಿಸುವ ಆಸಕ್ತಿ ಹೊಂದಿದ್ದಾಗಿ ಹೇಳಿಕೊಂಡಿದ್ದರು. ವಿವಿಧ ಸಮೂಹಗಳ ಹಿತರಕ್ಷಣೆಗಾಗಿ ಹೋರಾಟ ಮಾಡಿದ್ದರೂ, ಸದನದಲ್ಲಿ ಗಟ್ಟಿ ಧ್ವನಿಯಲ್ಲಿ ಪ್ರತಿನಿಧಿಸುವ ಪ್ರಯತ್ನ ಮಾಡಿದ್ದರೂ ಅದಕ್ಕೆ ತಕ್ಕ ಫಲ ಸಿಕ್ಕಿಲ್ಲ. ಪರಿಷತ್ತಿನಲ್ಲಿನ ತಮ್ಮ ಮಾತುಗಳು, ವಿಧಾನಸಭೆಯಲ್ಲಿ ಗಂಭೀರ ಚರ್ಚೆಗೆ ಒಳಪಡಲಿಲ್ಲ. ಈ ಹಿನ್ನೆಲೆಯಲ್ಲಿ ತಮಗೆ ಅವಕಾಶ ದೊರೆತಲ್ಲಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಅದಕ್ಕೆ ಎಲ್ಲರ ಬೆಂಬಲ, ಸಹಕಾರ ಇರಲಿ ಎಂದು ಆಯನೂರು ಮಂಜುನಾಥ್ ಪತ್ರದಲ್ಲಿ ವಿವರಿಸಿದ್ದರು.
ಪ್ರಜಾತಂತ್ರದ ನಾಲ್ಕೂ ಮನೆಗಳಾಗಿರುವ ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರಾಗಿ ಆಯನೂರು ಮಂಜುನಾಥ್ ಕಾರ್ಯನಿರ್ಹವಣೆ ಮಾಡಿದ್ದಾರೆ. ಹಾಲಿ ಪರಿಷತ್ ಸದಸ್ಯರಾಗಿದ್ದು, ಪುನಃ ವಿಧಾನಸಭೆ ಪ್ರವೇಶಕ್ಕೆ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಅವರು ಶಿವಮೊಗ್ಗ ನಗರ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ರಾಜ್ಯ ನಾಯಕರು ಮತ್ತು ಇತರರು ಇವರಿಗೆ ಅವಕಾಶ ಮಾಡಿಕೊಡುತ್ತಾರಾ ನೋಡಬೇಕು. ಏನೇ ಇದ್ದರೂ ಶಿವಮೊಗ್ಗದಲ್ಲಿ ಆಯನೂರು ರೆಬೆಲ್ ಆಗುವುದಂತೂ ಬಹುತೇಕ ಖಚಿತ.
ಇದನ್ನೂ ಓದಿ : Karnataka Election: ವಿಧಾನಸಭೆಗೆ ಸ್ಪರ್ಧಿಸುವೆನೆಂದು ಪತ್ರ ಬರೆದ ಎಂಎಲ್ಸಿ ಆಯನೂರು ಮಂಜುನಾಥ್; ಈಶ್ವರಪ್ಪಗೆ ಅಡ್ಡಗಾಲು?
ಕರ್ನಾಟಕ
ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್ಟಿಐ ಕಾರ್ಯಕರ್ತ
ಹರೀಶ್ ಹಳ್ಳಿ ಆರ್ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ.
ದಾವಣಗೆರೆ: ಕೋಟ್ಯಂತರ ರೂಪಾಯಿ ಭೂ ಅಕ್ರಮದ ಆರೋಪಿಯಾಗಿದ್ದ ಹರೀಶ್ ಹಳ್ಳಿ (Harish Halli) ಎಂಬಾತ ಪೊಲೀಸ್ ಕಾರಿ (Police Vehicle)ನಿಂದ ಜಿಗಿದು ಮೃತಪಟ್ಟಿದ್ದಾನೆ. ತನ್ನ ಪತಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಆತನ ಪತ್ನಿ ಆರೋಪಿಸಿದ್ದಾರೆ. ಈ ಘಟನೆ ನಡೆದಿದ್ದು ದಾವಣಗೆರೆಯಲ್ಲಿ (Davanagere News).
ಈ ಹರೀಶ್ ಹಳ್ಳಿ ಆರ್ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ. ಈ ಭೂ ಅಕ್ರಮ ಕೇಸ್ನಡಿ ಹರೀಶ್ ಹಳ್ಳಿ, ಸಬ್ ರಿಜಿಸ್ಟ್ರಾರ್ ಆರ್.ಎಲ್.ವೀಣಾ ಸೇರಿ ಒಟ್ಟು ಐವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈತ ಸೈಟ್ನ್ನು ತನ್ನದಾಗಿಸಿಕೊಳ್ಳಲು ನಕಲಿ ಮಾಲೀಕರನ್ನೇ ಸೃಷ್ಟಿಸಿದ್ದ. ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದ ಎಂದೂ ಪೊಲೀಸರು ಹೇಳಿದ್ದಾರೆ.
ಭೂ ಅಕ್ರಮದ ಕೇಸ್ನಲ್ಲಿ ಎ 1 ಆರೋಪಿಯಾದ ಹರೀಶ್ನನ್ನು ಮೇ 27ರ ಮಧ್ಯರಾತ್ರಿ 12 ಗಂಟೆ ಹೊತ್ತಿಗೆ ಪೊಲೀಸರು ಬಂಧಿಸಿ, ವಿಚಾರಣೆಗೆಂದು ಕರೆದುಕೊಂಡು ಬರುವಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಫ್ಲೈಓವರ್ ಮೇಲೆ ಪೋಲೀಸ್ ವಾಹನ ಹೋಗುತ್ತಿದ್ದಾಗ ಈತ ಜಿಗಿದಿದ್ದಾನೆ. ತೀವ್ರವಾಗಿ ಪೆಟ್ಟು ಬಿದ್ದು ಗಾಯಗೊಂಡಿದ್ದ ಅವನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆದರೆ ಆತನ ಪತ್ನಿ ಕಿಡಿಕಾರಿದ್ದಾರೆ. ನನ್ನ ಪತಿಯನ್ನು ಪೊಲೀಸರು ಮಧ್ಯರಾತ್ರಿ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಹರಿಶ್ ಹಳ್ಳಿಯನ್ನು ಕರೆದುಕೊಂಡು ಹೋದ ಗಾಂಧಿನಗರ ಪೊಲೀಸ್ ಠಾಣೆ ಪಿಎಸ್ಐ ಮತ್ತು ಚಾಲಕನ ವಿರುದ್ಧ ದೂರು ನೀಡಿದ್ದಾರೆ.
ಅಪ್ಪ ಹೇಳೋದೇನು?
ಪೊಲೀಸರೇ ನನ್ನ ಮಗನನ್ನು ಕೊಲೆ ಮಾಡಿದ್ದಾರೆ. ಮುಂಜಾನೆ ನಮಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರೇ ಕೊಲೆ ಮಾಡಿ ಆಸ್ಪತ್ರೆಗೆ ತಂದು ಹಾಕಿದ್ದಾರೆ. ಈಗ ಜಂಪ್ ಮಾಡಿದ, ಅದೂ ಇದು ಎಂದು ಕಥೆ ಕಟ್ಟುತ್ತಿದ್ದಾರೆ ಎಂದು ಮೃತ ಹರೀಶ್ ಹಳ್ಳಿ ತಂದೆ ಆರೋಪಿಸಿದ್ದಾರೆ. ವಾಹನದಲ್ಲಿ ಅವನ ಅಕ್ಕ-ಪಕ್ಕ ಪೊಲೀಸರೇ ಕುಳಿತಿದ್ದರು. ಅಂದಮೇಲೆ ಅವನು ಹೇಗೆ ಕಾರಿನಿಂದ ಜಂಪ್ ಮಾಡಿದ ಎಂದೂ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:Illegal Mining | ಕೊಪ್ಪಳದಲ್ಲಿ ನೀರಾವರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ, ಸಚಿವರಿಂದ ಕ್ರಮ ಕೈಗೊಳ್ಳುವ ಭರವಸೆ
ಕರ್ನಾಟಕ
ಒಂಟಿಯಾಗಿದ್ದ ವೃದ್ಧೆಯ ಭೀಕರ ಹತ್ಯೆ; ಗಂಡ ಕಟ್ಟಿದ ಮನೆಯೆಂದು ಮಗನ ಜತೆಗೂ ಹೋಗಿರಲಿಲ್ಲ
ಈ ವೃದ್ಧೆಯ ಹೆಸರು ಕಮಲಮ್ಮ ಎಂದಾಗಿದ್ದು, ಮನೆ ಇರುವುದು ಪೊಲೀಸ್ ಠಾಣೆಗೆ ಕೂಗಳತೆ ದೂರದಲ್ಲಿ. ರಾತ್ರಿ ಮನೆಗೆ ನುಗ್ಗಿದವರು ವೃದ್ಧೆಯ ಕೈಯಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ಉಸಿರುಗಟ್ಟಿ ಕೊಂದಿದ್ದಾರೆ.
ಬೆಂಗಳೂರಿನ ಉತ್ತರ ವಿಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೊಲೆ, ಕೊಲೆಯತ್ನ, ರಾಬರಿ ಪ್ರಕರಣಗಳು ನಡೆಯುತ್ತಲೇ ಇವರ. ಈಗ ಮೇ 27ರಂದು ರಾತ್ರಿ ಹಂತಕರು ಮಹಾಲಕ್ಷ್ಮೀ ಲೇಔಟ್ನಲ್ಲಿ ಮನೆಯೊಂದರಲ್ಲಿ ಒಂಟಿಯಾಗಿ ಇದ್ದ 80ವರ್ಷದ ವೃದ್ಧೆಯನ್ನು (Old Lady Murder) ಭಯಾನಕವಾಗಿ ಹತ್ಯೆಗೈದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪೊಲೀಸರು ಸಿಸಿಟಿವಿ ಫೂಟೇಜ್ಗಳನ್ನೆಲ್ಲ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ವೃದ್ಧೆಯ ಹೆಸರು ಕಮಲಮ್ಮ ಎಂದಾಗಿದ್ದು, ಮನೆ ಇರುವುದು ಪೊಲೀಸ್ ಠಾಣೆಗೆ ಕೂಗಳತೆ ದೂರದಲ್ಲಿ. ರಾತ್ರಿ ಮನೆಗೆ ನುಗ್ಗಿದವರು ವೃದ್ಧೆಯ ಕೈಯಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ಉಸಿರುಗಟ್ಟಿ ಕೊಂದಿದ್ದಾರೆ. ವೃದ್ಧೆಗೆ ಮೂರು ಮಕ್ಕಳಿದ್ದು ಮಗ ವೈಟ್ಫೀಲ್ಡ್ನಲ್ಲಿ ಮತ್ತು ಹೆಣ್ಣುಮಕ್ಕಳಿಬ್ಬರು ಜೆಪಿ ನಗರದಲ್ಲಿ ಇದ್ದಾರೆ. ಮಗ ಅದೆಷ್ಟೋ ಬಾರಿ ಇವರನ್ನು ತನ್ನ ಜತೆಗೆ ಬಂದಿರು ಎಂದು ಕರೆದರೂ ವೃದ್ಧೆ ಹೋಗಿರಲಿಲ್ಲ. ನನ್ನ ಗಂಡ ಕಟ್ಟಿಸಿದ ಮನೆ ಇದು, ಇಲ್ಲಿಯೇ ಇರುತ್ತೇನೆ ಎಂದು ಹೇಳಿ ಈ ಮನೆಯಲ್ಲೇ ಒಬ್ಬರೇ ಇದ್ದರಂತೆ.
ಹಂತಕರು ಸಂಜೆ ವೇಳೆ ಮನೆಗೆ ನುಗ್ಗಿದಾಗ ಕಮಲಮ್ಮ ತಮ್ಮ ಮಲಗುವ ಕೋಣೆಯಲ್ಲಿ ಇದ್ದರು. ಅಲ್ಲಿಗೇ ಹೋಗಿ ಅವರ ಕೈಕಾಲು ಕಟ್ಟಿದ್ದಾರೆ. ಬಳಿಕ ಉಸಿರುಗಟ್ಟಿಸಿದ್ದಾರೆ. ಬಳಿಕ ಮನೆಯಲ್ಲಿದ್ದ ಎಲ್ಲ ಚಿನ್ನಾಭರಣಗಳು, ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಇನ್ನು ಏಳುಗಂಟೆ ಹೊತ್ತಿಗೆ ಪಕ್ಕದ ಮನೆ ಮಕ್ಕಳು ಅಜ್ಜಿಯನ್ನು ಹುಡುಕಿ ಬಂದಾಗ, ಬಾಗಿಲು ತೆರೆದೇ ಇತ್ತು. ಒಳಗೆ ಹೋದರೆ ಅಜ್ಜಿ ಬಿದ್ದಿದ್ದರು. ಅದನ್ನು ನೋಡಿ ತಮ್ಮ ಮನೆಯವರಿಗೆ ತಿಳಿಸಿದ್ದಾರೆ. ಅಕ್ಕಪಕ್ಕದ ಮನೆಯವರೆಲ್ಲ ಸೇರಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಇದನ್ನೂ ಓದಿ: Road Accident: ಅಪರಿಚಿತ ವಾಹನ ಡಿಕ್ಕಿಯಾಗಿ ವೃದ್ಧೆ ಸಾವು; ಭೀಕರ ಅಪಘಾತದಲ್ಲಿ ಚಾಲಕ ದುರ್ಮರಣ
ಸ್ಥಳಕ್ಕಾಗಮಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು, ಶ್ವಾನದಳ, ಪಿಂಗರ್ ಪ್ರಿಂಟ್ ತಜ್ಞರು ಹಾಗೂ ಎಫ್ಎಸ್ಎಲ್ ತಜ್ಞರಿಂದ ಪರಿಶೀಲನೆ ಮಾಡಿಸಿದ್ದಾರೆ. ಹಂತಕರ ಸುಳಿವಿನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಮೇಲ್ನೊಟಕ್ಕೆ ಕಮಲಮ್ಮನನ್ನ ವೃತ್ತಿಪರ ಹಂತಕರೇ ಚಿನ್ನಾಭರಣ ದೋಚುವ ಸಲುವಾಗಿ ಹತ್ಯೆಗೈದಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಶವವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಕರ್ನಾಟಕ
CBSE Exam Results: ಸಿಬಿಎಸ್ಸಿಯಲ್ಲಿ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಸಂಸ್ಥೆಯ ಅಮೋಘ ಸಾಧನೆ
CBSE Exam Results: ಸಿಬಿಎಸ್ಸಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿದೆ.
ಬೆಂಗಳೂರು: ಸಿಬಿಎಸ್ಸಿ ದ್ವಿತೀಯ ಪಿಯುಸಿ ಪರೀಕ್ಷೆಯ (CBSE Exam Results) ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿಗೆ ಟಾಪರ್ ಆಗಿ ಹೊರ ಹೊಮ್ಮಿರುವ ಎಸ್.ಎಸ್. ಆಕಾಂಕ್ಷ್ ಸೇರಿ ಉತ್ತಮ ಸಾಮರ್ಥ್ಯ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳು, ಶಿಕ್ಷಕರನ್ನು ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಶಾಲೆಯಿಂದ ಸನ್ಮಾನಿಸಲಾಯಿತು.
ನಗರದಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ವಿಜಯ್ ಕಿರಣ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ. ಎನ್. ವಿಜಯ ಕುಮಾರ್ ಮಾತನಾಡಿ, ಎಲ್ಲಾ ವಿಭಾಗಗಳಲ್ಲೂ ವಿದ್ಯಾರ್ಥಿಗಳ ಸಾಧನೆ ಗಣನೀಯವಾಗಿ ಹೆಚ್ಚಿದ್ದು, ವಿದ್ಯಾರ್ಥಿಗಳನ್ನು ಶಿಕ್ಷಕರು ಅತ್ಯುತ್ತಮ ರೀತಿಯಲ್ಲಿ ಸಿದ್ಧಗೊಳಿಸುತ್ತಿದ್ದಾರೆ. ಸಿಬಿಎಸ್ಸಿ ವಿದ್ಯಾರ್ಥಿಗಳಿಗೆ ಬಹುಬೇಗ ತರಗತಿಗಳನ್ನು ಆರಂಭಿಸಿ ಡಿಸೆಂಬರ್ ವೇಳೆಗೆ ಪಠ್ಯ ಕ್ರಮ ಪೂರ್ಣಗೊಳಿಸುತ್ತೇವೆ. ಆ ನಂತರ ಪರೀಕ್ಷೆಗೆ ಸಜ್ಜುಗೊಳಿಸುತ್ತೇವೆ ಎಂದರು.
ಶಿಕ್ಷಣದ ಇತ್ತೀಚಿನ ಪರಿಕಲ್ಪನೆ, ಆಧುನಿಕ ತಂತ್ರಜ್ಞಾನ ಕುರಿತು ಶಿಕ್ಷಣಕರಿಗೆ ವ್ಯಾಪಕ ತರಬೇತಿ ನೀಡುತ್ತಿದ್ದು, ಇದಕ್ಕಾಗಿಯೇ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಇದನ್ನೂ ಓದಿ | Education News : ಮೇ 29 ರಿಂದ ನೂತನ ಶೈಕ್ಷಣಿಕ ವರ್ಷ ಆರಂಭ; ಮೇ 31 ರಿಂದ ತರಗತಿಗಳು ಶುರು
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಕಿರಣ್, ಮುಖ್ಯ ಕಾರ್ಯಾಚರಣೆ ಅಧಿಕಾರಿ ಸುನಾಲಿನಿ ಬೆಂಜಮಿನ್ ಮತ್ತಿತರರು ಭಾಗವಹಿಸಿದ್ದರು.
ಕರ್ನಾಟಕ
Karnataka Cabinet Expansion: ಸರ್ಕಾರ ಟೇಕಾಫ್ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು
Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.
ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ಹೌದು, ಎಂ.ಸಿ.ಸುಧಾಕರ್ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್.ಕೆ.ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ
ಮೂಲ-ವಲಸಿಗ ಜಗಳ
ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ
ಸಚಿವ ಸ್ಥಾನ ಮಿಸ್ ಆದ ಕುರಿತು ಮಾತನಾಡಿದ ಹರಿಪ್ರಸಾದ್, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಕರ್ನಾಟಕ22 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ22 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ21 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ16 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕ್ರಿಕೆಟ್12 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ದೇಶ5 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ13 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER3 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?