Site icon Vistara News

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

MLC TA Sharavana latest statement about milk price hike

ಬೆಂಗಳೂರು: ಈ ಚುನಾವಣೆಯ ಫಲಿತಾಂಶವು ಜೆಡಿಎಸ್ (JDS) ಮತ್ತೊಮ್ಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ (TA Sharavana) ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶ 2024 ರ ಕುರಿತು ಹೇಳಿಕೆ ನೀಡಿರುವ ಅವರು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ದೇಶದ ಜನ ಆಯ್ಕೆ ಮಾಡಿದ್ದಾರೆ. ಸತತ ಮೂರನೇ ಬಾರಿಗೆ ಎನ್‌ಡಿಎ ಮೈತ್ರಿಕೂಟ ಗೆಲುವಿನ ಮೂಲಕ ಹೊಸ ದಾಖಲೆ ಬರೆದಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಒಂದು ಪ್ರಬಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Karnataka Weather : ಕಾರವಾರ, ಯಾದಗಿರಿಯಲ್ಲಿ ಅಬ್ಬರಿಸಿದ ವರುಣ; ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಮಳೆ

ಜೆಡಿಎಸ್‌ ಪಕ್ಷವನ್ನು ಮುಗಿಸುವ ಸಂಚು ವಿಫಲ ಆಗಿದೆ. ಅಧಿಕೃತವಾಗಿ ಜೆಡಿಎಸ್‌ ಪಕ್ಷವು ಎರಡು ಸ್ಥಾನಗಳನ್ನು ಗೆದ್ದಿರಬಹುದು. ಆದರೆ ಸುಮಾರು 9 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲು ಜೆಡಿಎಸ್ ಸಹಕಾರ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಜೆಡಿಎಸ್ ಪ್ರಬಲ ಶಕ್ತಿಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Train services: ನಾಳೆಯಿಂದ ದೇಶಾದ್ಯಂತ ಕೆಲ ರೈಲುಗಳ ಸಂಚಾರದಲ್ಲಿ ಮಾರ್ಗ, ಸಮಯ ಬದಲಾವಣೆ

ರಾಷ್ಟ್ರ ರಾಜಕಾರಣದಲ್ಲಿ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮ್ಮಿದ್ದಾರೆ ಎಂದು ತಿಳಿಸಿರುವ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ, ವೋಟ್ ಬ್ಯಾಂಕ್ ಸೃಷ್ಟಿಸುವಲ್ಲಿ ಗ್ಯಾರಂಟಿ ಯೋಜನೆ ವಿಫಲವಾಗಿವೆ ಎಂದು ಅವರು ತಿಳಿಸಿದ್ದಾರೆ.

Exit mobile version