Site icon Vistara News

ಮೊಮ್ಮಗಳ ನಿಧನ, ಜಿ ಟಿ ದೇವೇಗೌಡರಿಗೆ ಸಾಂತ್ವನ ಹೇಳಿದ ಮೋದಿ

ಜಿ ಟಿ ದೇವೇಗೌಡರಿಗೆ

ಮೈಸೂರು: ಶಾಸಕ ಜಿ ಟಿ ದೇವೇಗೌಡ ಅವರ ಮೊಮ್ಮಗಳು ವಿಧಿವಶವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಮತ್ತು ಸಾಂತ್ವನ ಸೂಚಿಸಿ ಪತ್ರ ಬರೆದಿದ್ದಾರೆ.
”ನಿಮ್ಮ ಮೊಮ್ಮಗಳು ಗೌರಿಯ ನಿಧನದ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ಇಷ್ಟು ಎಳೆ ವಯಸ್ಸಿನಲ್ಲಿ ಆಕೆ ಇಹಲೋಕ ತ್ಯಜಿಸಿದ್ದಾಳೆ ಎಂದರೆ ನಂಬುವುದು ಕಷ್ಟ.

ತೀವ್ರ ದುಃಖದ ಈ ಸಮಯದಲ್ಲಿ ನನ್ನ ಹೃತ್ಪೂರ್ವಕ ಸಂತಾಪಗಳು” ಎಂದು ಮೋದಿ ಪತ್ರದಲ್ಲಿ ತಿಳಿಸಿದ್ದಾರೆ.
”ಮಗುವಿನ ಅಗಲಿಕೆಯು ಪೋಷಕರಿಗೆ ಮತ್ತು ಅಜ್ಜನಾದ ನಿಮಗೆ ಅತ್ಯಂತ ಯಾತನದಾಯಕ ಎನ್ನುವುದು ನನಗೆ ತಿಳಿದಿದೆ. ಇದನ್ನು ಶಬ್ದಗಳಲ್ಲಿ ವಿವರಿಸಲಾಗದು. ಗೌರಿ ಬಿಟ್ಟು ಹೋಗಿರುವ ನೆನಪುಗಳು ನಿಮ್ಮ ಕುಟುಂಬಕ್ಕೆ ಸಾಂತ್ವನ ನೀಡಲಿ” ಎಂದು ಮೋದಿ ಆಶಿಸಿದ್ದಾರೆ.
”ಈ ತುಂಬಲಾರದ ನಷ್ಟವನ್ನು ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: Visual Info: ಮೋದಿಯ ಅಪ್ಪುಗೆ!

Exit mobile version