Modi in Karnataka : ದಾವಣಗೆರೆ ಸಮಾವೇಶದಲ್ಲಿ ಪೆಂಡಾಲ್‌ನೊಳಗೇ ನಡೆಯಲಿದೆ ನರೇಂದ್ರ ಮೋದಿ ರೋಡ್ ಶೋ! - Vistara News

ಕರ್ನಾಟಕ

Modi in Karnataka : ದಾವಣಗೆರೆ ಸಮಾವೇಶದಲ್ಲಿ ಪೆಂಡಾಲ್‌ನೊಳಗೇ ನಡೆಯಲಿದೆ ನರೇಂದ್ರ ಮೋದಿ ರೋಡ್ ಶೋ!

ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ದಾವಣಗೆರೆ ಸಮಾವೇಶದಲ್ಲಿ (Modi in Karnataka) ಈ ಬಾರಿ ಒಂದು ಸ್ಪೆಷಲ್‌ ಇದೆ. ಅದೇನೆಂದರೆ ರಸ್ತೆಯ ಬದಲು ಪೆಂಡಾಲ್‌ನ ಒಳಗೇ ನಡೆಯಲಿದೆ ಮೋದಿ ರೋಡ್‌ ಶೋ!

VISTARANEWS.COM


on

Modi davanagere
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ದಾವಣಗೆರೆಯಲ್ಲಿ ಮಾರ್ಚ್‌ 25ರಂದು ನಡೆಯುವ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಲಿದ್ದು (Modi in Karnataka) ಒಟ್ಟು 10 ಲಕ್ಷ ಭಾಗವಹಿಸಲಿದ್ದಾರೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯು ಈಗಾಗಲೇ ಕೇಸರಿಮಯವಾಗಿದೆ. ಜಿಎಂಐಟಿ ಕಾಲೇಜಿನ ಪಕ್ಕದಲ್ಲಿ 400 ಎಕರೆ ಜಾಗದಲ್ಲಿ ಪೆಂಡಾಲ್ ಹಾಕಲಾಗಿದೆ. ಪೆಂಡಾಲ್‍ನಲ್ಲಿ ಜನರ ಮಧ್ಯೆ ಹೋಗಬೇಕೆಂದು ಮೋದಿಜಿ ಅವರು ಅಪೇಕ್ಷಿಸಿದ್ದು, ಅದಕ್ಕೆ ತಕ್ಕಂತೆ ರಸ್ತೆ ಏರ್ಪಡಿಸಲಾಗಿದೆ ಎಂದರು. ಅಂದರೆ ಶಾಮಿಯಾನ ಒಳಗೇ ವಾಹನದಲ್ಲಿ ಮೋದಿ ಅವರ ರೋಡ್ ಶೋ ನಡೆಯಲಿದೆ. ಮೋದಿ ಅವರು ವಾಹನದಲ್ಲೇ ಕುಳಿತು ಕಾರ್ಯಕರ್ತರ ಜತೆ ಮಾತನಾಡುತ್ತಾ ಹೋಗುತ್ತಾರೆ ಎಂದರು. ಕೇವಲ ದಾವಣಗೆರೆ ಜಿಲ್ಲೆಯಿಂದ 3 ಲಕ್ಷ ಜನರು ಪಾಲ್ಗೊಳ್ಳುತ್ತಾರೆ ಎಂದು ಸಂಸದರು ತಿಳಿಸಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ- ರಾಜ್ಯದ ಸಚಿವರು, ಇತರ ಪ್ರಮುಖರು ಭಾಗವಹಿಸುತ್ತಾರೆ‌. ವೇದಿಕೆಯಲ್ಲಿ ನೂರು ಮಂದಿ ನಾಯಕರು ಇರುತ್ತಾರೆ. ಕರ್ನಾಟಕದಲ್ಲಿ ನ ಭೂತೋ ನ ಭವಿಷ್ಯತಿ ಎಂಬಂತೆ ಈ ಸಭೆ ನಡೆಯಲಿದೆ. ಬಿಜೆಪಿಯ 150ಕ್ಕೂ ಹೆಚ್ಚು ಶಾಸಕರನ್ನು ಗೆಲ್ಲಿಸುವ ಕಾರ್ಯಕ್ರಮ ಇದಾಗಲಿದೆ ಎಂದು ನುಡಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ಮಾತನಾಡಿ, 4 ವಿಜಯ ಸಂಕಲ್ಪ ಯಾತ್ರೆಗಳು ಯಶಸ್ವಿಯಾಗಿವೆ. 5,600 ಕಿಮೀಗಳನ್ನು ಒಟ್ಟು ಯಾತ್ರೆ ಮೂಲಕ ಕ್ರಮಿಸಲಾಗಿದೆ. ಲಕ್ಷಾಂತರ ಜನರು ಸೇರಿದ್ದರು. 224 ಕ್ಷೇತ್ರಗಳನ್ನೂ ತಲುಪಿದ್ದೇವೆ. ಬಿಜೆಪಿ ಪರ ಅಲೆ ಸೃಷ್ಟಿಯಾಗಿದೆ ಎಂದು ವಿವರಿಸಿದರು.

25ರಂದು ಮಧ್ಯಾಹ್ನ 1 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಲ್ಗೊಳ್ಳುತ್ತಾರೆ ಎಂದರು.

ಉಪಾಹಾರಕ್ಕೇನು? ಊಟಕ್ಕೇನು?

ದೊಡ್ಡ ಪ್ರಮಾಣದಲ್ಲಿ ಊಟೋಪಚಾರ ವ್ಯವಸ್ಥೆ ಮಾಡಿದ್ದು, 400 ಕೌಂಟರ್‌ಗಳನ್ನು ತೆರೆಯಲಾಗುತ್ತದೆ. ಸಾವಿರ ಜನ ಅಡುಗೆ ಮಾಡುವವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. ಬೆಳಗ್ಗೆ ಉಪಹಾರಕ್ಕೆ ಉಪ್ಪಿಟ್ಟು, ಕೇಸರಿ ಬಾತ್, ಮಧ್ಯಾಹ್ನ ಊಟಕ್ಕೆ ಗೋಧಿ ಪಾಯಸ, ಮೊಸರನ್ನ, ಪಲಾವ್ ಇರಲಿದೆ.
ಪಾರ್ಕಿಂಗ್‍ಗೆ 44 ಜಾಗಗಳನ್ನು ಗುರುತಿಸಿದ್ದೇವೆ. ಕಾರ್ಯಾಲಯ, ಸ್ವಚ್ಛತೆ ಸೇರಿ ಹಲವು 45 ತಂಡಗಳನ್ನು ನಿಯೋಜಿಸಿದ್ದೇವೆ. 5 ಸಾವಿರ ಪ್ರಬಂಧಕರು ಇರಲಿದ್ದಾರೆ ಎಂದು ವಿವರ ನೀಡಿದರು.

ಇದನ್ನೂ ಓದಿ : Vijay Sankalpa Yatre: ಮಾ.25ರಂದು ದಾವಣಗೆರೆಯಲ್ಲಿ ಮೋದಿ ಹವಾ; 10 ಲಕ್ಷ ಜನರ ನಿರೀಕ್ಷೆ

ಮೋದಿ ಆಗಮನದ ಹಿನ್ನೆಲೆಯಲ್ಲಿ ಜಿಎಂಐಟಿ ಕಾಲೇಜು ಹೆಲಿಪ್ಯಾಡ್ ನಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

BS Yediyurappa: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ, ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ.

VISTARANEWS.COM


on

BS Yediyurappa
Koo

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಕೇಸ್‌ (POCSO Case) ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಿಗೆ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಪೋಕ್ಸೊ ವಿಶೇಷ ಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ. ಜುಲೈ 17ರಂದು ಬಿ.ಎಸ್.ಯಡಿಯೂರಪ್ಪ ಸೇರಿ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಖು ಎಂದು ಸಮನ್ಸ್‌ ಜಾರಿ ಮಾಡಿದೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

B S yediyurappa

ಯಡಿಯೂರಪ್ಪ ನಿರ್ದೇಶನದಂತೆ ಆರೋಪಿ ರುದ್ರೇಶ್‌ ಅವರಿಂದ 2 ಲಕ್ಷ ರೂ. ಪಡೆದು ಅದನ್ನು ಸಂತ್ರಸ್ತ ಮಹಿಳೆಗೆ ನೀಡಿ, ಆಕೆಯ ಫೋನ್‌ನಲ್ಲಿನ ಬಿಎಸ್‌ವೈಗೆ ಸಂಬಂಧಿಸಿದ ವಿಡಿಯೊವನ್ನು ಡಿಲೀಟ್‌ ಮಾಡಿಸಿರುವುದು ಮತ್ತು ಅದನ್ನು ಸಾಮಾಜಿಕ ಜಾಲತಾಣದಿಂದ ತೆಗೆಸಿದ ಆರೋಪ ಅರುಣ್ ಮತ್ತು ಮರಿಸ್ವಾಮಿ ಅವರ ಮೇಲಿದೆ. ಇನ್ನು ಯಡಿಯೂರಪ್ಪ ಅವರು ಎಫ್‌ಐಆರ್‌ ರದ್ದತಿ ಕೋರಿ ಹಾಗೂ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಗಳು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿವೆ.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ಇದನ್ನೂ ಓದಿ: Actress Ramya: ದರ್ಶನ್, ಪ್ರಜ್ವಲ್‌, ಸೂರಜ್, ಯಡಿಯೂರಪ್ಪ ಹೆಸರು ಉಲ್ಲೇಖಿಸಿ ಮತ್ತೆ ಕಿಡಿ ಕಾರಿದ ರಮ್ಯಾ; ಪೋಸ್ಟ್‌ನಲ್ಲಿ ಏನಿದೆ?

Continue Reading

ಉತ್ತರ ಕನ್ನಡ

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Uttara Kannada News: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಸೂಚಿಸಲಾಗಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

VISTARANEWS.COM


on

Heavy rain in Uttara Kannada district district NDRF team for rescue says DC Gangubai Manakar
Koo

ಕಾರವಾರ: ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಕೋರಿದ್ದು, ಈಗಾಗಲೇ ಈ ತಂಡಗಳು ಬೆಂಗಳೂರಿನಿಂದ ಹೊರಟ್ಟಿದ್ದು ಶುಕ್ರವಾರ ಈ ತಂಡಗಳು ಜಿಲ್ಲೆಗೆ (Uttara Kannada News) ಆಗಮಿಸಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

ಈ ಎನ್.ಡಿ.ಆರ್.ಎಫ್‌. ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮಟಾ ಮತ್ತು ಅಂಕೋಲಾ ಭಾಗದಲ್ಲಿ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಜಿಲ್ಲೆಯಲ್ಲಿ ಹೊನ್ನಾವರದಲ್ಲಿ 4, ಕುಮಟಾದಲ್ಲಿ 2 ಮತ್ತು ಅಂಕೋಲಾದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೆಂದ್ರಗಳನ್ನು ತೆರೆದಿದ್ದು ಈ ಕೇಂದ್ರಗಳಲ್ಲಿ 230ಕ್ಕೂ ಅಧಿಕ ಮಂದಿಗೆ ಆಶ್ರಯ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ವ್ಯಾಪಕ ಮಳೆಯಾಗುತ್ತಿರುವ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು 24*7 ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಘನಾಶಿನಿ ಮತ್ತು ಶರಾವತಿ ನದಿಗಳು ತುಂಬಿ ಹರಿಯುತ್ತಿದ್ದು ಈ ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದು, ಈ ಪ್ರದೇಶಗಳ ಮೇಲೆ ನಿರಂತರ ನಿಗಾ ವಹಿಸಲಾಗಿದೆ. ಕಾಳಿ ನದಿಯಲ್ಲಿನ ಅಪ್ಪರ್ ಕಾನೇರಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದೆ.

ಇದನ್ನೂ ಓದಿ: Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077ಗೆ ಹಾಗೂ ಮೊಬೈಲ್ ಸಂಖ್ಯೆ 94835 11015 ಕರೆ, ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

Continue Reading

ತುಮಕೂರು

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Shira News: ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶಿರಾದಿಂದ ಬೈರೇನಾಹಳ್ಳಿವರೆಗೆ 1,000 ಕೋಟಿ ರೂ. ವೆಚ್ಚದಲ್ಲಿ ಒಟ್ಟು 52 ಕಿಲೋಮೀಟರ್‌ಗಳ ನಾಲ್ಕು ಪಥಗಳ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಅನುಮೋದನೆ ನೀಡಿದೆ‌ ಎಂದು ಶಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ತಿಳಿಸಿದ್ದಾರೆ.

VISTARANEWS.COM


on

Central Govt approves quadrilateral road in Shira at a cost of Rs 1000 rs crore says TB Jayachandra
Koo

ಶಿರಾ: ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶಿರಾದಿಂದ ಬೈರೇನಾಹಳ್ಳಿವರೆಗೆ 1,000 ಕೋಟಿ ರೂ. ವೆಚ್ಚದಲ್ಲಿ ಒಟ್ಟು 52 ಕಿಲೋಮೀಟರ್‌ಗಳ ನಾಲ್ಕು ಪಥಗಳ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಅನುಮೋದನೆ ನೀಡಿದೆ‌ ಎಂದು ಶಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ (Shira News) ತಿಳಿಸಿದ್ದಾರೆ.

ಸಚಿವಾಲಯವು ಈ ಕಾಮಗಾರಿಯನ್ನು 2024-25ನೇ ಸಾಲಿನ ವಾರ್ಷಿಕ ಮಂಜೂರಾತಿ ಮಿತಿಯಲ್ಲಿ ಸೇರಿಸಿ ಅನುಮೋದನೆ ನೀಡಿದೆ ಎಂದು ತಿಳಿಸಿರುವ ಅವರು, ಅನುಮೋದಿತ ಯೋಜನೆಯ ಪ್ರಕಾರ ಅಂದಾಜು ವೆಚ್ಚ (ಎಸ್ಟಿಮೇಟ್) ವಿವರವನ್ನು ಶೀಘ್ರವೇ ಸಚಿವಾಲಯದ ಪ್ರಧಾನ ಕಚೇರಿಗೆ ಸಲ್ಲಿಸಬೇಕು ಎಂದು ಸಚಿವಾಲಯದ ಕಾರ್ಯನಿರ್ವಾಹಕ ಎಂಜಿನಿಯರ್ (ಯೋಜನೆ) ಎ. ಮೌಲಿಕ್ ಸೂಚಿಸಿದ್ದಾರೆ ಎಂದು ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಶಿರಾ ತಾಲೂಕಿನ ಈ ಪ್ರತಿಷ್ಠಿತ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅತಿ ಶೀಘ್ರದಲ್ಲಿ ಟೆಂಡರ್ ಕರೆದು ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು. ನಿಗದಿತ ಸಮಯದಲ್ಲಿ ನಾಲ್ಕು ಪಥದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ ಹಾಗೂ ಈ ಯೋಜನೆಗೆ ಅಗತ್ಯ ಹಣಕಾಸಿನ ನೆರವು ಸಹ ದೊರೆತಿದೆ.

ಈ ರಾಷ್ಟ್ರೀಯ ಹೆದ್ದಾರಿ ಪೂರ್ಣಗೊಂಡ ನಂತರ ಶಿರಾದಿಂದ ರಾಜಧಾನಿ ಬೆಂಗಳೂರು ಹಾಗೂ ಅಂತಾರಾಷ್ಟ್ರೀಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅತ್ಯಂತ ಕಡಿಮೆ ಸಮಯದಲ್ಲಿ ಪ್ರಯಾಣಿಕರು ಸಂಚರಿಸಬಹುದು ಹಾಗೂ ಸರಕು ಸಾಗಾಣಿಗಳನ್ನು ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಈ ಯೋಜನೆಗೆ ತುಂಬಾ ಸಹಕಾರ ಕೊಟ್ಟಿದ್ದಾರೆ. ತಾವು ಸಹ ನಾಲ್ಕೈದು ಬಾರಿ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಯೋಜನೆ ಬಗ್ಗೆ ಚರ್ಚಿಸಿ ಈ ರಸ್ತೆ ಕಾಮಗಾರಿಗೆ ಅಗತ್ಯ ಹಣಕಾಸು ನೆರವು ಹಾಗೂ ಅನುಮತಿಯನ್ನು ತ್ವರಿತವಾಗಿ ಪಡೆದಿರುವುದಾಗಿ ಶಾಸಕ ಟಿ.ಬಿ. ಜಯಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

CM Siddaramaiah: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Muda site allocation Politically motivated allegation says CM Siddaramaiah
Koo

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ ರೂ. ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

ಬಿಜೆಪಿ ಅಧಿಕಾರದಲ್ಲಿತ್ತು

ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದು ತಿಳಿಸಿದರು.

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ

ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ. ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ರೂ. ಕೊಟ್ಟುಬಿಡಲಿ ಎಂದು ಹೇಳಿದರು.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ, ಕಡತ ತಂದಿಲ್ಲ ಎಂದು ಈ ವೇಳೆ ಸಿಎಂ ತಿಳಿಸಿದರು.

Continue Reading
Advertisement
Team India
ಪ್ರಮುಖ ಸುದ್ದಿ15 mins ago

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

BS Yediyurappa
ಕರ್ನಾಟಕ16 mins ago

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

Hatras Stampede
ದೇಶ17 mins ago

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

PF Interest
ದೇಶ36 mins ago

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Hardik Pandya
ಪ್ರಮುಖ ಸುದ್ದಿ47 mins ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Heavy rain in Uttara Kannada district district NDRF team for rescue says DC Gangubai Manakar
ಉತ್ತರ ಕನ್ನಡ49 mins ago

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Central Govt approves quadrilateral road in Shira at a cost of Rs 1000 rs crore says TB Jayachandra
ತುಮಕೂರು50 mins ago

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Viral Video
Latest53 mins ago

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Robot Suicide
ತಂತ್ರಜ್ಞಾನ1 hour ago

Robot Suicide: ದ. ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?

Muda site allocation Politically motivated allegation says CM Siddaramaiah
ಕರ್ನಾಟಕ1 hour ago

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ4 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ6 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ7 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ9 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ10 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌