Modi In Karnataka | ಮೋದಿ ಕಾರ್ಯಕ್ರಮಕ್ಕಾಗಿ ರೈಲು ಸಂಚಾರ ವಿಳಂಬ - Vistara News

ಕರ್ನಾಟಕ

Modi In Karnataka | ಮೋದಿ ಕಾರ್ಯಕ್ರಮಕ್ಕಾಗಿ ರೈಲು ಸಂಚಾರ ವಿಳಂಬ

Modi In Karnataka ಮೈಸೂರಿಗೆ ಪ್ರದಾನಿ ಮೋದಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಮೈಸೂರು -ಚಾಮರಾಜನಗರ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಚಾಮರಾಜನಗರದಿಂದ ಮೈಸೂರಿಗೆ ಬರುವ ರೈಲು ಸಹ ವಿಳಂಬವಾಗಲಿದೆ.

VISTARANEWS.COM


on

Modi In Karnataka
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಸೋಮವಾರ (ಜೂನ್‌ 20) ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು-ಚಾಮರಾಜನಗರ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಸೋಮವಾರ ಸಂಜೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಸರ್ಕಾರದ ಪಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು-ಚಾಮರಾಜನಗರ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಮೈಸೂರು-ಚಾಮರಾಜನಗರ ನಗರ ರೈಲು ಮಾರ್ಗದ ರೈಲ್ವೆ ಹಳಿ ಮಹಾರಾಜ ಕಾಲೇಜು ಮೈದಾನದ ಹಿಂಭಾಗ ಹಾದು ಹೋಗಿದೆ. ಸಾಮಾನ್ಯವಾಗಿ ಸಂಜೆ 6.40ಕ್ಕೆ ಮೈಸೂರಿನಿಂದ ಚಾಮರಾಜ ನಗರಕ್ಕೆ ಹೋಗುವ ರೈಲು ಸಂಚರಿಸುತ್ತದೆ. ರೈಲು ತಡವಾಗಿ ಪ್ರಯಾಣ ಆರಂಭಿಸಲಿದೆ. ಕಾರ್ಯಕ್ರಮಕ್ಕೆ ರೈಲು ಸಂಚಾರದಿಂದ ಅಡಚಣೆ ಆಗುತ್ತದೆ ಎನ್ನುವುದಕ್ಕಿಂತಲೂ ಭದ್ರತೆ ದೃಷ್ಟಿಯಿಂದ ಸಂಚಾರದಲ್ಲಿ ವ್ಯತ್ಯಯ ಮಾಡಲಾಗಿದೆ. ಚಾಮರಾಜನಗರದಿಂದ ಮೈಸೂರಿಗೆ ಬರುವ ರೈಲು ಸಹ ವಿಳಂಬವಾಗಲಿದೆ. ಪ್ರಧಾನಿ ಮೋದಿ ಕಾರ್ಯಕ್ರಮ ಮುಗಿದ ನಂತರ ರೈಲು ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದೆ.

ಇದನ್ನೂ ಓದಿ | Modi In Karnataka | ಮೋದಿಗೆ ಕೊಡಲಿರುವ ಸ್ಮರಣಿಕೆ ಕನ್ನಡದಲ್ಲಿ ಏಕೆ ಇಲ್ಲ?

ಚಾಮರಾಜನಗರದಿಂದ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ಬರುವ ರೈಲು, ಅಶೋಕ್ ಪುರಂನಿಂದ ಮೈಸೂರು ಜಂಕ್ಷನ್‌ಗೆ ಮೋದಿ ಕಾರ್ಯಕ್ರಮ ಮುಗಿದ ಬಳಿಕ ಆಗಮಿಸಲಿದೆ. ಹೀಗಾಗಿ ಪ್ರಯಾಣಿಕರು ಸಹಕರಿಸುವಂತೆ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ್‌ ಮಾಹಿತಿ ನೀಡಿದ್ದಾರೆ.

ಕಾನ್‌ವಾಯ್‌ ಸಂಚಾರಕ್ಕೆ ಸಕಲ ಸಿದ್ದತೆ

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಮಹಾರಾಜ ಕಾಲೇಜು ಮೈದಾನದವರೆಗಿನ ಇಡೀ ರಸ್ತೆಯನ್ನು ಜಿಲ್ಲಾಡಳಿತ ಸಜ್ಜುಗೊಳಿಸಿದೆ. ರಸ್ತೆಯ ಎರಡೂ ಬದಿಗಳಲ್ಲಿ ಮರದ ಪೋಲ್‌ಗಳಿಂದ ಬ್ಯಾರಿಕೇಡ್‌ ನಿರ್ಮಾಣ ಮಾಡಿದ್ದು, ರಿಂಗ್‌ ರಸ್ತೆ ವೃತ್ತ, ಗಣಪತಿ ಆಶ್ರಮ, ಸುತ್ತೂರು ಶಾಖಾ ಮಠ ಜಂಕ್ಷನ್‌, ವಿದ್ಯಾಪೀಠ ವೃತ್ತದಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ರಸ್ತೆ ವಿಭಜಕಗಳನ್ನು ಹೂವಿನ ಗಿಡಗಳಿಂದ ಸಿಬ್ಬಂದಿಗಳು ಸಿಂಗಾರ ಮಾಡಿದ್ದಾರೆ. ರಸ್ತೆಯುದ್ದಕ್ಕೂ ಕಾನ್‌ವಾಯ್‌ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ಇದನ್ನೂ ಓದಿ | modi in karnataka | ಮೋದಿ ಪ್ರತಿ ಬಾರಿಯೂ ತಂಗುವುದು ಇದೇ ಕೊಠಡಿಯಲ್ಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ಸಂಜೆ ಗಾಳಿಯೊಂದಿಗೆ ಸುರಿದ ಭಾರಿ ಮಳೆಗೆ ಜನರು ತೊಯ್ದು ತೊಪ್ಪೆಯಾದರು. ವಿಜಯಪುರ, ಹುಬ್ಬಳ್ಳಿ, ರಾಯಚೂರು ಸೇರಿ ಚಿಕ್ಕಮಗಳೂರಲ್ಲೂ ಮಳೆಯು (Heavy Rain alert) ಅಬ್ಬರಿಸಿತ್ತು. ರಸ್ತೆ ಮೇಲೆ ನೀರು ಹರಿದುಮ ಕೆಲವೆಡೆ ಕೆರೆಯಂತಾಗಿತ್ತು. ಇನ್ನೂ ನಾಲ್ಕೈದು ದಿನಗಳು ಗುಡುಗು ಸಹಿತ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka rain
Koo

ವಿಜಯಪುರ/ಹುಬ್ಬಳ್ಳಿ: ಶನಿವಾರ ಹಲವೆಡೆ ದಿಢೀರ್‌ ಸುರಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದರು. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಲೆನಾಡಿನ ಚಿಕ್ಕಮಗಳೂರಿನಲ್ಲೂ ವರುಣಾರ್ಭಟ (Karnataka Rain) ಜೋರಾಗಿತ್ತು. ಮೇ 15ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ತಂದಿತ್ತು. ಬಿರು ಬಿಸಿಲಿಗೆ ಕಂಗೆಟ್ಟು ಹೋಗಿದ್ದ ಜನರು, ಶನಿವಾರ ಸುರಿದ ಅರ್ಧ ಗಂಟೆಗೂ ಆಧಿಕ ಕಾಲ ಮಳೆಗೆ ಸಂತಸಗೊಂಡರು. ಇನ್ನೂ ರೈತರು ಮುಂಗಾರು ಹಂಗಾಮಿಗೆ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಈವರೆಗೂ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

Karnataka Rain

ಹುಬ್ಬಳ್ಳಿ, ಬೆಳಗಾವಿಯಲ್ಲಿ ಗುಡುಗು -ಸಿಡಿಲಿನ ಮಳೆ ಅಬ್ಬರ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಎಡೆಬಿಡದೆ ಆರ್ಭಟಿಸುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ಹರಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತ ಬೆಳಗಾವಿಯಲ್ಲಿ ಗುಡುಗು ಸಿಡಿಲು ಮಿಶ್ರಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಬೇಸೆತ್ತು ಹೋಗಿದ್ದ ಕುಂದಾನಗರಿ ಜನರಿಗೆ ವರುಣ ತಂಪೆರೆದಿದ್ದಾನೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

ಜೋರು‌ ಮಳೆಯಲ್ಲೇ ಶನಿವಾರದ ಸಂತೆ ಸಂಭ್ರಮ

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದಲ್ಲಿ ವರುಣಾರ್ಭಟದ ನಡುವೆಯೇ ಶನಿವಾರದ ಸಂತೆ ಜೋರಾಗಿತ್ತು. ಧಾರಾಕಾರ ಮಳೆ‌‌ಯಲ್ಲೇ ವ್ಯಾಪಾರಸ್ಥರು ಸಂತೆ ಮಾಡಿದರು. ಮಳೆಗೆ ಡೋಂಟ್ ಕೇರ್ ಎಂದ ಸಾವಿರಾರು ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಧಾರವಾಡದಲ್ಲಿ ಮಳೆ ಗಾಳಿಗೆ ಜಖಂ ಆದ ಬಸ್‌ಗಳು

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಗೆ ನಗರದ ಬಹುತೇಕ ಕಡೆ ಮರಗಳು ನೆಲಕ್ಕುರುಳಿದ್ದವು. ಮಳೆ ಗಾಳಿಗೆ ಬಸ್‌ಗಳು ಜಖಂ ಆಗಿದ್ದವು. ನಿರ್ಮಾಣ ಹಂತದಲ್ಲಿದ್ದ ಈಜುಕೊಳದ ಕಟ್ಟಿಗೆ ಸೆಂಟ್ರಿಂಗ್ ಬಿದ್ದು ಖಾಸಗಿ ಬಸ್ ಜಖಂಗೊಂಡಿತ್ತು. ನಗರದ ಡಿಸಿ ಕಂಪೌಂಡ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿತ್ತು.

Karnataka Rain

ಚಿಕ್ಕಮಗಳೂರಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಎಡಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಮಳೆ ಜತೆ ಭಾರಿ ಗಾಳಿ ಬೀಸುತ್ತಿದೆ. ಇನ್ನೂ ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಭಾರೀ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಕುಗ್ರಾಮಗಳು ಕತ್ತಲಲ್ಲಿವೆ. ಮಳೆ ಕಂಡು ರೈತರು, ಅಡಿಕೆ-ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Akshaya Tritiya: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಬಾಲ ರಾಮನ ಬೆಳ್ಳಿ ವಿಗ್ರಹದ ಪೂಜೆ ಸಂಪನ್ನ

Akshaya Tritiya: ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಬಾಲ ರಾಮನ ವಿಗ್ರಹದ ಪೂಜಾ ಕಾರ್ಯಕ್ರಮ ನೆರವೇರಿತು.

VISTARANEWS.COM


on

Akshaya Tritiya
Koo

ಬೆಂಗಳೂರು: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಅಕ್ಷಯ ತೃತೀಯ (Akshaya Tritiya) ಶುಭದಿನದಂದು ಅಯೋಧ್ಯೆಯ ಶ್ರೀ ರಾಮನ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಎಂಎಲ್‌ಸಿ ಹಾಗೂ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಮಾಲೀಕರಾದ ಟಿ.ಎ. ಶರವಣ ಅವರೊಂದಿಗೆ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ರಾಯಭಾರಿಯಾದ ಬಿಗ್ ಬಾಸ್ ಖ್ಯಾತಿಯ ನಮ್ರತಾ ಗೌಡಮತ್ತು ಕನ್ನಡ ಕಿರುತೆರೆ ನಟಿ ಪೂರ್ಣಿಮಾ ಅವರು ಭಾಗಿಯಾಗಿದ್ದರು.

ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ 50,000 ಮೇಲ್ಪಟ್ಟು ಖರೀದಿಸಿದ ಗ್ರಾಹಕರಿಗೆ ಅಯೋಧ್ಯೆಯ ಶ್ರೀ ಬಾಲ ರಾಮರ ಸನ್ನಿಧಾನದಲ್ಲಿ ಪೂಜಿಸಲ್ಪಟ್ಟ ಬೆಳ್ಳಿ ವಿಗ್ರಹವನ್ನು ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ | Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Continue Reading

ಸಿನಿಮಾ

Pooja Hegde: ಕಾರ್ಕಳದ ಕಣಜಾರು ದೇಗುಲಕ್ಕೆ ಭೇಟಿ ನೀಡಿದ ನಟಿ ಪೂಜಾ ಹೆಗ್ಡೆ

Pooja Hegde: ಬಹುಭಾಷಾ ನಟಿ, ಕರಾವಳಿ ಮೂಲದ ಪೂಜಾ ಹೆಗ್ಡೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪೂಜಾ ಹೆಗ್ಡೆ ಅವರನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದರು. ಸನ್ಮಾನದ ವೇಳೆ ಅಭಿಮಾನಿಯೊರ್ವ ರಚಿಸಿದ ತಮ್ಮ ಭಾವಚಿತ್ರವನ್ನು ನಟಿ ಸ್ವೀಕರಿಸಿದರು.

VISTARANEWS.COM


on

Pooja Hegde
Koo

ಉಡುಪಿ: ಬಹುಭಾಷಾ ನಟಿ, ಕರಾವಳಿ ಮೂಲದ ಪೂಜಾ ಹೆಗ್ಡೆ (Pooja Hegde) ಇತ್ತೀಚೆಗೆ ಕಾರ್ಕಳಕ್ಕೆ ಭೇಟಿ ನೀಡಿದರು. ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪೂಜಾ ಹೆಗ್ಡೆ ಅವರನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದರು. ಸನ್ಮಾನದ ವೇಳೆ ಅಭಿಮಾನಿಯೊರ್ವ ರಚಿಸಿದ ತಮ್ಮ ಭಾವಚಿತ್ರವನ್ನು ನಟಿ ಸ್ವೀಕರಿಸಿದರು. ಪ್ರತಿವರ್ಷ ದೈವಕೋಲ, ದೇವಸ್ಥಾನದ ಜಾತ್ರೆ, ಉತ್ಸವದಲ್ಲಿ ಪೂಜಾ ಹೆಗ್ಡೆ ಭಾಗಿಯಾಗುತ್ತಾರೆ.

ಈ ವೇಳೆ ಅವರು ಕಣಜೂರಿನ ತನ್ನ ಬಾಲ್ಯದ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಭೂತಾರಾಧನೆ, ದೈವರಾಧನೆ ಕುರಿತೂ ಮಾತನಾಡಿದ್ದಾರೆ. ಮುಂಬೈಯಲ್ಲಿ ಹುಟ್ಟಿ ಬೆಳೆದ ಪೂಜಾ ಹೆಗ್ಡೆ ಪ್ರತಿವರ್ಷದ ರಜೆಯಲ್ಲಿ ತಮ್ಮ ಅಜ್ಜನ ಮನೆಯಾದ ಕಣಜೂರಿಗೆ ಭೇಟಿ ನೀಡುತ್ತಿದ್ದರಂತೆ. ʼʼಬೇಸಿಗೆ ರಜೆಯನ್ನು ಇಲ್ಲಿ ಬಹಳ ಖುಷಿಯಿಂದ ಕಳೆಯುತ್ತಿದ್ದೆವು. ನಮಗೆ ಊರು ಬಿಟ್ಟು ಹೋಗಲು ಮನಸ್ಸಾಗುತ್ತಲೇ ಇರಲಿಲ್ಲ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದೇವರ ಅನುಗ್ರಹ ಇಲ್ಲದೆ ಏನೂ ಸಾಧನೆ ಮಾಡಲಾಗದು. ಸಿನಿಮಾ ಕುಟುಂಬವಲ್ಲದ ಕಡೆಯಿಂದ ನಾನು ಈ ಕ್ಷೇತ್ರಕ್ಕೆ ಬಂದಿದ್ದೇನೆ. ನಾನು ಸಾಧನೆ ಮಾಡಲು ದೇವರ ಅನುಗ್ರಹವೇ ಕಾರಣʼʼ ಎಂದು ಹೇಳಿದ್ದಾರೆ.

2012ರಲ್ಲಿ ತಮಿಳಿನ ʼಮುಗಮೂಡಿʼ ಸಿನಿಮಾದ ಮೂಲ ಪೂಜಾ ಹೆಗ್ಡೆ ಸಿನಿ ರಂಗಕ್ಕೆ ಕಾಲಿಟ್ಟರು. ಜೀವ ನಾಯಕನಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಹಿಟ್‌ ಆಗದಿದ್ದರೂ ಪೂಜಾ ಗಮನ ಸೆಳೆದಿದ್ದರು. 2014ರಲ್ಲಿ ʼಒಕ ಲೈಲ ಕೋಸಮ್‌ʼ ಮತ್ತು ʼಮುಕುಂದʼ ಚಿತ್ರಗಳ ಮೂಲಕ ಟಾಲಿವುಡ್‌ ಪ್ರವೇಶಿಸಿದರು. ಬಳಿಕ ನೇರ ಬಾಲಿವುಡ್‌ ತೆರಳಿದರು. 2016ರಲ್ಲಿ ರಿಲೀಸ್‌ ಆದ ʼಮೊಹೆಂಜದಾರೊ’ ಸಿನಿಮಾದಲ್ಲಿ ಹೃತಿಕ್‌ ರೋಷನ್‌ಗೆ ನಾಯಕಿಯಾಗಿ ಗಮನ ಸೆಳೆದರು.

ಹೀಗೆ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡ ಪೂಜಾ ಹೆಗ್ಡೆ ಟಾಪ್‌ ನಾಯಕಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಟಾಲಿವುಡ್‌, ಬಾಲಿವುಡ್‌ನ ಟಾಪ್‌ ನಾಯಕರ ಜತೆಗೆ ತೆರೆ ಹಂಚಿಕೊಂಡಿದ್ದಾರೆ. ಸದ್ಯ ಶಾಹಿದ್ ಕಪೂರ್ ಜತೆಗೆ ‘ದೇವ’ ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರೋಶನ್‌ ಆಂಡ್ರ್ಯೂಸ್ ನಿರ್ದೇಶನದ ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಕಥಾ ಹಂದರ ಹೊಂದಿದೆ ಎನ್ನಲಾಗಿದೆ. ಜತೆಗೆ ಅಹನ್‌ ಶೆಟ್ಟಿ ಅಭಿನಯದ ಮುಂದಿನ ಸಿನಿಮಾದಲ್ಲಿಯೂ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Pooja Hegde: 45 ಕೋಟಿ ರೂ. ಬೆಲೆಯ ಹೊಸ ಮನೆ ಖರೀದಿಸಿದ ಪೂಜಾ ಹೆಗ್ಡೆ

ಕೆಲವು ದಿನಗಳ ಹಿಂದೆಯಷ್ಟೇ ಪೂಜಾ ಹೆಗ್ಡೆ ಖ್ಯಾತ ಕ್ರಿಕೆಟಿಗನ ಜತೆ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ ಎಂದು ವರದಿಯಾಗಿತ್ತು. ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ಸುದ್ದಿಯಾಗಿತ್ತು. ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿರಲಿಲ್ಲ. ಈ ಬಗ್ಗೆ ನಟಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ತೆಲುಗು ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿದ್ದವು. ಸದ್ಯ ಈ ವಿಚಾರ ತಣ್ಣಗಾಗಿದೆ.

Continue Reading

ಬೆಳಗಾವಿ

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

Road Accident : ಚಲಿಸುತ್ತಿದ್ದಾಗಲೇ ಕ್ರೂಸರ್‌ ವಾಹನದ ಟೈರ್‌ ಸ್ಫೋಟಗೊಂಡು ಪಲ್ಟಿಯಾಗಿದೆ. ಪರಿಣಾಮ ಕ್ರೂಸರ್‌ ವಾಹನದಲ್ಲಿದ್ದ ಮಹಿಳೆ ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

VISTARANEWS.COM


on

By

Road Accident in chikodi maharashtra
Koo

ಚಿಕ್ಕೋಡಿ: ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ (Road Accident ) ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮಹಿಳೆಯರು ಮೃತರಾಗಿದ್ದಾರೆ.

ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ದುರ್ದೈವಿಗಳು. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಸ್ಫೋಟಗೊಂಡಿದೆ.

ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್‌ ವಾಹನ ಪಲ್ಟಿಯಾಗಿದೆ. ಕ್ರೂಸರ್ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಗಂಭೀರ ಗಾಯಗೊಂಡು ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.

ಸ್ಥಳೀಯರು ಸಹಾಯಕ್ಕೆ ಧಾವಿಸಿ ಚೆಲ್ಲಾಪಿಲ್ಲಿಯಾಗಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳ್ಳಿಗೇರಿ ಗ್ರಾಮದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

ಕಾರು ಪಲ್ಟಿ ಮೂವರು ಗಂಭೀರ

ರಸ್ತೆ ಡಿವೈಡರ್‌ಗೆ ಗುದ್ದಿ ಕಾರು ಪಲ್ಟಿ ಆಗಿದೆ. ಪರಿಣಾಮ ಕಾರಲ್ಲದ್ದ ಮೂವರಿಗೆ ಗಂಭೀರ ಗಾಯವಾಗಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮ ಬಳಿ ರಾ. ಹೆ 50ರಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಕೊಪ್ಪಳ ‌ಕಡೆ ಚಲಿಸುತ್ತಿದ್ದ ಕಾರು ಪಲ್ಟಿಯಾಗಿದೆ.

ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ‌ವಾಗಿದ್ದು, ಮತ್ತೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಕಾನಾ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾನಾ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು, ಬೈಕ್ ನಡುವೆ ಭೀಕರ ಅಪಘಾತ; ಸವಾರ ಸಾವು

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಯನಗುಂಟೆ ಬಳಿ ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಯನಗುಂಟೆ ಗ್ರಾಮದ ಕೃಷ್ಣಪ್ಪ‌ ( 70 ) ಮೃತರು.

ಕೃಷ್ಣಪ್ಪ ಹೊಸಕೋಟೆಯಿಂದ ಗ್ರಾಮದ ಕಡೆಗೆ ಬರುತ್ತಿದ್ದಾಗ, ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಕೆಳಗೆ ಬಿದ್ದ ವೃದ್ಧ ಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka rain
ಮಳೆ12 mins ago

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

IPL 2024
ಕ್ರೀಡೆ31 mins ago

IPL 2024 : ಗೆಲುವಿನ ನಡುವೆಯೂ ಬೇಸರ; ಶುಭ್​ಮನ್ ಗಿಲ್​ಗೆ 24 ಲಕ್ಷ ರೂಪಾಯಿ ದಂಡ

Arvind Kejriwal
ದೇಶ40 mins ago

ಮೋದಿಯಿಂದ ಯೋಗಿ ಆದಿತ್ಯನಾಥ್‌ ರಾಜಕೀಯ ಜೀವನ ಶೀಘ್ರದಲ್ಲೇ ಖತಂ; ಕೇಜ್ರಿವಾಲ್‌ ಸ್ಫೋಟಕ ಭವಿಷ್ಯ

Hair Color Fashion
ಫೋಟೊ41 mins ago

Hair Color Fashion: ವೈರಲ್‌ ಆದ ಹೇರ್‌ ಕಲರ್ ಸ್ಟೈಲ್‌

Akshaya Tritiya
ಬೆಂಗಳೂರು58 mins ago

Akshaya Tritiya: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಬಾಲ ರಾಮನ ಬೆಳ್ಳಿ ವಿಗ್ರಹದ ಪೂಜೆ ಸಂಪನ್ನ

Rishabh Pant
ಕ್ರೀಡೆ58 mins ago

Rishabh Pant : 2024ರ ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

Pooja Hegde
ಸಿನಿಮಾ1 hour ago

Pooja Hegde: ಕಾರ್ಕಳದ ಕಣಜಾರು ದೇಗುಲಕ್ಕೆ ಭೇಟಿ ನೀಡಿದ ನಟಿ ಪೂಜಾ ಹೆಗ್ಡೆ

Road Accident in chikodi maharashtra
ಬೆಳಗಾವಿ1 hour ago

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

HD Deve Gowda
ಕರ್ನಾಟಕ1 hour ago

ಮಗ ಜೈಲಿಗೆ, ಮೊಮ್ಮಗ ನಾಪತ್ತೆ; ದೇವೇಗೌಡರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಠಾಧೀಶರು

Artificial Intelligence
ದೇಶ2 hours ago

Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು2 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ1 day ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌