Modi in Karnataka: ಏಪ್ರಿಲ್‌ 28 - 29ರಂದು ರಾಜ್ಯಕ್ಕೆ ಮೋದಿ; ರಾಯಚೂರು ಸಮಾವೇಶ ರದ್ದು? - Vistara News

Lok Sabha Election 2024

Modi in Karnataka: ಏಪ್ರಿಲ್‌ 28 – 29ರಂದು ರಾಜ್ಯಕ್ಕೆ ಮೋದಿ; ರಾಯಚೂರು ಸಮಾವೇಶ ರದ್ದು?

Modi in Karnataka: ಮೊದಲ ಹಂತದ ಚುನಾವಣೆಗೆ ಏಪ್ರಿಲ್‌ 26ರಂದು ಮತದಾನ ನಡೆಯುವುದರಿಂದ ಕರ್ನಾಟಕದಲ್ಲಿನ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಲಾಗುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ. ಈ ವೇಳೆ ಮೋದಿ ಪ್ರವಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

VISTARANEWS.COM


on

Modi in Karnataka Pm Modi to visit Karnataka on April 28 and 29 Raichur conference maybe cancelled
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ.

ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ನಾಲ್ಕು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿ, ಮಧ್ಯಾಹ್ನ 12 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಹಾಗೂ ಸಂಜೆ 4 ಗಂಟೆಗೆ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನರೇಂದ್ರ ಮೋದಿ ಮತ ಬೇಟೆ ನಡೆಸಲಿದ್ದಾರೆ. ಈ ಬೃಹತ್‌ ಸಮಾವೇಶಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೆ, ಶಿವಮೊಗ್ಗ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳ ಜನರನ್ನು ಸೇರಿಸಲು ಚಿಂತನೆ ನಡೆಸಲಾಗಿದೆ. ಕಾರಣ ಆ ಭಾಗಗಳಲ್ಲೂ ಎರಡನೇ ಹಂತದ ಚುನಾವಣೆ ನಡೆಯುವುದರಿಂದ ಮೋದಿ ಮಾತು ಕೆಲಸ ಮಾಡಲಿದೆ ಎಂಬ ನಿಟ್ಟಿನಲ್ಲಿ ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ ಎನ್ನಲಾಗಿದೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ತಂತ್ರ ರೂಪಿಸಲಾಗಿದೆ.

ರಾಯಚೂರು ಸಮಾವೇಶ ರದ್ದು?

ಈ ಮೊದಲು ಏಪ್ರಿಲ್‌ 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಇತ್ತು. ಆದರೆ, ಬಳ್ಳಾರಿಯಲ್ಲಿ ಏಪ್ರಿಲ್‌ 28ರಂದೇ ಪ್ರಚಾರ ಭಾಷಣ ಮಾಡಲಿರುವ ಮೋದಿ, ಮರುದಿನ ಬಾಗಲಕೋಟೆಯಲ್ಲಿ ಬೆಳಗ್ಗೆ 11 ಗಂಟೆಗೆ ಬೃಹತ್‌ ಸಭೆಯಲ್ಲಿ ಮಾತನಾಡಲಿದ್ದಾರೆ. ಆದರೆ, ಮುಂದೆ ಯಾವ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂಬ ಬಗ್ಗೆ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ, ರಾಯಚೂರು ಪ್ರವಾಸವನ್ನು ರದ್ದು ಮಾಡಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರಚಾರ ನಡೆಸಬಹುದು ಎಂದು ಅಂದಾಜಿಸಲಾಗುತ್ತಿದೆ.

2ನೇ ಹಂತದ ಚುನಾವಣೆಗೆ ಬಿಜೆಪಿ ಪ್ಲ್ಯಾನ್‌ ರೆಡಿ

ಮೊದಲ ಹಂತದ ಚುನಾವಣೆಗೆ ಏಪ್ರಿಲ್‌ 26ರಂದು ಮತದಾನ ನಡೆಯುವುದರಿಂದ ಕರ್ನಾಟಕದಲ್ಲಿನ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಲಾಗುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Lok Sabha Election: ಎಎಪಿ ಜೊತೆಗಿನ ಮೈತ್ರಿ ಮತ್ತು ಹೈಕಮಾಂಡ್ ಸ್ಥಳೀಯ ನಾಯಕತ್ವಕ್ಕಿಂತ ಹೊರಗಿನವರಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿ ಅವರೆಲ್ಲರೂ ಕಾಂಗ್ರೆಸ್ ತೊರೆದಿದ್ದರು. ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮತ್ತು ಇತರ ಪಕ್ಷದ ವ್ಯವಹಾರಗಳಲ್ಲಿ ದೆಹಲಿ ಕಾಂಗ್ರೆಸ್ ಘಟಕವು ಬೇಸತ್ತಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕ ಸಭಾ ಚುನಾವಣೆಯ (Lok Sabha Election) ಮೈತ್ರಿ ವಿಚಾರದಲ್ಲಿ ಅಸಮಾಧಾನ ಹೊಂದಿದ್ದ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್ ಸಿಂಗ್ ಲವ್ಲಿ ಶನಿವಾರ ಭಾರತೀಯ ಜನತಾ ಪಕ್ಷ (BJP) ಸೇರಿದರು. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್, ನೀರಜ್ ಬಸೋಯಾ ಮತ್ತು ಅಮಿತ್ ಮಲಿಕ್ ಸೇರಿದಂತೆ ಇತರ ನಾಲ್ವರು ಮಾಜಿ ಕಾಂಗ್ರೆಸ್ ನಾಯಕರು ಲವ್ಲಿ ಅವರೊಂದಿಗೆ ಪಕ್ಷಾಂತರಗೊಂಡರು.

ತಮಗೆ ಮತ್ತು ತಮ್ಮ ಸಹೋದ್ಯೋಗಿಗಳಿಗೆ ಬಿಜಪಿ ಸೇರಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಲವ್ಲಿ ಧನ್ಯವಾದ ಅರ್ಪಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಬಿಜೆಪಿಯ ಬ್ರಾಂಡ್​ ಅಡಿಯಲ್ಲಿ ಮತ್ತು ಪ್ರಧಾನಿಯ ನಾಯಕತ್ವದಲ್ಲಿ ದೆಹಲಿಯ ಜನರಿಗಾಗಿ ಹೋರಾಡಲು ನಮಗೆ ಅವಕಾಶ ನೀಡಲಾಗಿದೆ” ಎಂದು ಅವರು ಹೇಳಿಕೊಂಡಿದ್ದಾರೆ. “ನನಗೆ ಸಂಪೂರ್ಣ ಭರವಸೆ ಇದೆ ಮತ್ತು ದೇಶದಲ್ಲಿ ಬಿಜೆಪಿ ಸರ್ಕಾರವು ಭಾರಿ ಬಹುಮತದೊಂದಿಗೆ ರಚನೆಯಾಗುತ್ತಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಮುಂಬರುವ ದಿನಗಳಲ್ಲಿ ದೆಹಲಿಯಲ್ಲೂ ಬಿಜೆಪಿಯ ಬಾವುಟ ಹಾರಾಡಲಿದೆ” ಎಂದು ಮಾಜಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಎಎಪಿ ಜೊತೆಗಿನ ಮೈತ್ರಿ ಮತ್ತು ಹೈಕಮಾಂಡ್ ಸ್ಥಳೀಯ ನಾಯಕತ್ವಕ್ಕಿಂತ ಹೊರಗಿನವರಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿ ಅವರೆಲ್ಲರೂ ಕಾಂಗ್ರೆಸ್ ತೊರೆದಿದ್ದರು. ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮತ್ತು ಇತರ ಪಕ್ಷದ ವ್ಯವಹಾರಗಳಲ್ಲಿ ದೆಹಲಿ ಕಾಂಗ್ರೆಸ್ ಘಟಕವು ಬೇಸತ್ತಿದೆ.

ಕನ್ಹಯ್ಯ ಕುಮಾರ್ ಮತ್ತು ಉದಿತ್ ರಾಜ್ ಸೇರಿದಂತೆ ಅಭ್ಯರ್ಥಿಗಳ ಆಯ್ಕೆಯಿಂದ ಲವ್ಲಿ ಮತ್ತು ಇತರ ಕೆಲವು ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ದೆಹಲಿ ಘಟಕದ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಲವ್ಲಿ ಭಾನುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ದೆಹಲಿಯ ಮಾಜಿ ಶಾಸಕರಾದ ನಸೀಬ್ ಸಿಂಗ್ ಮತ್ತು ನೀರಜ್ ಬಸೋಯಾ ಅವರಂತಹ ನಾಯಕರೂ ಪಕ್ಷ ತೊರೆದಿದ್ದಾರೆ.

Continue Reading

ಪ್ರಮುಖ ಸುದ್ದಿ

Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

Lok Sabha Election: ವೇಣುಗೋಪಾಲ್​ ಕಾಂಗ್ರೆಸ್ ಸದಸ್ಯರಿಗೆ ಹುದ್ದೆಗಳನ್ನು ನೀಡಲು ಹಣ ಪಡೆಯುತ್ತಾರೆ. ಪ್ರತಿ ಕೆಲಸಕ್ಕೆ ರಾಜ್ಯ ಸರ್ಕಾರಗಳ ಪ್ರತಿಯೊಬ್ಬ ಸಚಿವರಿಂದ ಕಮಿಷನ್ ಪಡೆಯುವ ಡೀಲರ್ ಅವರು. ಅಲ್ಲದೆ ಮಹಿಳಾ ಅಭ್ಯರ್ಥಿಯನ್ನು (ಸುಚರಿತಾ ಮೊಹಾಂತಿ) ಗದರಿಸಿದ್ದಾರೆ. ಹೀಗಾಗಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ” ಎಂದು ಶಿವಸೇನೆಗೆ ಸೇರಿದ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

VISTARANEWS.COM


on

Lok Sabha Election
Koo

ನವದೆಹಲಿ: ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಲ್ಲಿ (Lok Sabha Election) ಕಾಂಗ್ರೆಸ್​ಗೆ ದೊಡ್ಡ ಹಿನ್ನಡೆ ಉಂಟಾಗಿದ್ದು, ಪಕ್ಷವು ಚುನಾವಣಾ ಖರ್ಚಿಗೆ ಹಣ ನೀಡಿಲ್ಲವೆಂದು ಅಲ್ಲಿನ ಅಭ್ಯರ್ಥಿ ತನ್ನ ಟಿಕೆಟ್ ಅನ್ನು ಹಿಂದಿರುಗಿಸಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದರೂ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಭ್ಯರ್ಥಿ ಸುಚರಿತಾ ಮೊಹಾಂತಿ ಹೇಳಿದ್ದಾರೆ. ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್​ನ ಮಾಜಿ ನಾಯಕ ಸಂಜಯ್ ನಿರುಪಮ್ ಅವರು ಕೆ.ಸಿ.ವೇಣುಗೋಪಾಲ್ ಅವರನ್ನು ‘ಡೀಲರ್’ ಎಂದು ಕರೆದಿದ್ದಾರೆ. ಇದು ‘ಇಂದಿನ ಬಡ ಕಾಂಗ್ರೆಸ್’ ಎಂದು ಹೇಳಿದ್ದಾರೆ.

ವೇಣುಗೋಪಾಲ್​ ಕಾಂಗ್ರೆಸ್ ಸದಸ್ಯರಿಗೆ ಹುದ್ದೆಗಳನ್ನು ನೀಡಲು ಹಣ ಪಡೆಯುತ್ತಾರೆ. ಪ್ರತಿ ಕೆಲಸಕ್ಕೆ ರಾಜ್ಯ ಸರ್ಕಾರಗಳ ಪ್ರತಿಯೊಬ್ಬ ಸಚಿವರಿಂದ ಕಮಿಷನ್ ಪಡೆಯುವ ಡೀಲರ್ ಅವರು. ಅಲ್ಲದೆ ಮಹಿಳಾ ಅಭ್ಯರ್ಥಿಯನ್ನು (ಸುಚರಿತಾ ಮೊಹಾಂತಿ) ಗದರಿಸಿದ್ದಾರೆ. ಹೀಗಾಗಿ ಅವರು ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಂಡಿದ್ದಾರೆ” ಎಂದು ಶಿವಸೇನೆಗೆ ಸೇರಿದ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

ಸುಚರಿತಾ ಮೊಹಾಂತಿ ಟಿಕೆಟ್ ನಿರಾಕರಿಸಿದ್ದು ಯಾಕೆ?

ಸುಚರಿತಾ ಮೊಹಾಂತಿ 10 ವರ್ಷಗಳ ಹಿಂದೆ ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಪತ್ರಕರ್ತೆಯಾಗಿದ್ದರು. ಈ ಚುನಾವಣೆಯಲ್ಲಿ ಅವರು ಕಾಂಗ್ರೆಸ್​ ಟಿಕೆಟ್ ಪಡೆದಿದ್ದರು. ಆದರೆ ಈಗ ಪ್ರಚಾರಕ್ಕಾಗಿ ತನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ಅವರು ಹೇಳಿದ್ದಾರೆ. “ಪಕ್ಷವು ನನಗೆ ಹಣ ನೀಡದ ಕಾರಣ ನಾನು ಟಿಕೆಟ್ ಹಿಂದಿರುಗಿಸಿದ್ದೇನೆ. ಮತ್ತೊಂದು ಕಾರಣವೆಂದರೆ, ಏಳು ವಿಧಾನಸಭಾ ಕ್ಷೇತ್ರಗಳ ಕೆಲವು ಸ್ಥಾನಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿಲ್ಲ. ಬದಲಾಗಿ, ಕೆಲವು ದುರ್ಬಲ ಅಭ್ಯರ್ಥಿಗಳಿಗೆ ಟಿಕೆಟ್ ಸಿಕ್ಕಿದೆ. ನಾನು ಈ ರೀತಿ ಸ್ಪರ್ಧಿಸಲು ಸಾಧ್ಯವಿಲ್ಲ” ಎಂದು ಸುಚರಿತಾ ಹೇಳಿದ್ದಾರೆ.

“ಪುರಿ ಸಂಸದೀಯ ಕ್ಷೇತ್ರದಲ್ಲಿ ನಮ್ಮ ಪ್ರಚಾರಕ್ಕೆ ತೀವ್ರ ಹೊಡೆತ ಬಿದ್ದಿದೆ ಏಕೆಂದರೆ ಪಕ್ಷವು ನನಗೆ ಹಣವನ್ನು ನಿರಾಕರಿಸಿದೆ. ಎಐಸಿಸಿ ಒಡಿಶಾ ಉಸ್ತುವಾರಿ ಅಜಯ್ ಕುಮಾರ್ ಜಿ ಸಲಹೆ ಕೊಟ್ಟಿದ್ದಾರೆ. ನಾನು ಸಂಬಳ ಪಡೆಯುವ ವೃತ್ತಿಪರ ಪತ್ರಕರ್ತಳಾಗಿದ್ದೆ, 10 ವರ್ಷಗಳ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದೆ. ಪುರಿಯಲ್ಲಿನ ನನ್ನ ಪ್ರಚಾರಕ್ಕಾಗಿ ನನ್ನಲ್ಲಿರುವ ಎಲ್ಲವನ್ನೂ ನೀಡಿದ್ದೇನೆ” ಎಂದು ಮೊಹಾಂತಿ ಕೆಸಿ ವೇಣುಗೋಪಾಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

ಪ್ರಗತಿಪರ ರಾಜಕೀಯಕ್ಕಾಗಿ ನನ್ನ ಅಭಿಯಾನವನ್ನು ಬೆಂಬಲಿಸಲು ನಾನು ಸಾರ್ವಜನಿಕ ದೇಣಿಗೆ ಅಭಿಯಾನ ಪ್ರಯತ್ನಿಸಿದೆ ಆದರೆ ಇಲ್ಲಿಯವರೆಗೆ ಹೆಚ್ಚಿನ ಯಶಸ್ಸು ಸಿಗಲಿಲ್ಲ. ಪ್ರಚಾರ ವೆಚ್ಚವನ್ನು ಕನಿಷ್ಠ ಮಟ್ಟಕ್ಕೆ ಕಡಿತಗೊಳಿಸಲು ನಾನು ಪ್ರಯತ್ನಿಸಿದೆ” ಎಂದು ಅವರು ಹೇಳಿದರು.

“ನಾನು ಸ್ವಂತವಾಗಿ ಹಣವನ್ನು ಸಂಗ್ರಹಿಸಲು ಸಾಧ್ಯವಾಗದ ಕಾರಣ, ಪುರಿ ಸಂಸತ್ ಕ್ಷೇತ್ರದಲ್ಲಿ ಪರಿಣಾಮಕಾರಿ ಪ್ರಚಾರಕ್ಕಾಗಿ ಅಗತ್ಯವಾದ ಪಕ್ಷದ ನಿಧಿಯನ್ನು ನೀಡುವಂತೆ ಒತ್ತಾಯಿಸಿ ನಮ್ಮ ಪಕ್ಷದ ಕೇಂದ್ರ ನಾಯಕತ್ವಕ್ಕೆ ಮನವಿ ಮಾಡಿದ್ದೆ. ಈ 2024 ರ ಚುನಾವಣೆಯಲ್ಲಿ, ಜನರು ಎರಡು ಭ್ರಷ್ಟ ಮತ್ತು ಹಗರಣಕೋರ ಆಡಳಿತ ಪಕ್ಷಗಳಾದ ಬಿಜೆಪಿ ಮತ್ತು ಬಿಜೆಡಿ ಹೊರಹಾಕಲು ಸಜ್ಜಾಗಿದ್ದಾರೆ. ಕಾಂಗ್ರೆಸ್​​ನ 5 ನ್ಯಾಯಗಳು ಮತ್ತು 25 ಗ್ಯಾರಂಟಿಗಳಿಗೆ ಮತ ಚಲಾಯಿಸಲಿದ್ದಾರೆ” ಎಂದು ಮೊಹಾಂತಿ ಹೇಳಿದರು.

ಹಣದ ಕೊರತೆ ಪುರಿಯಲ್ಲಿನ ನಮ್ಮ ಗೆಲುವನ್ನು ತಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ. ಪಕ್ಷದ ಧನಸಹಾಯವಿಲ್ಲದೆ, ಪುರಿಯಲ್ಲಿ ಪ್ರಚಾರವನ್ನು ನಡೆಸಲು ಸಾಧ್ಯವಾಗುವುದಿಲ್ಲ ಎಂದು ನಾನು ವಿಷಾದಿಸುತ್ತೇನೆ. ಆದ್ದರಿಂದ ನಾನು ಪುರಿ ಸಂಸದೀಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಹಿಂದಿರುಗಿಸುತ್ತೇನೆ” ಎಂದಿರುವ ಸುಚರಿತಾ ಪಕ್ಷ ಮತ್ತು ರಾಹುಲ್ ಗಾಂಧಿಗೆ ತಮ್ಮ ಬೆಂಬಲ ಮುಂದುವರಿಸಿದ್ದಾರೆ.

ಪ್ರಸ್ತುತ ಬಿಜು ಜನತಾ ದಳದ (ಬಿಜೆಡಿ) ಪಿನಾಕಿ ಮಿಶ್ರಾ ಅವರ ವಶದಲ್ಲಿರುವ ಪುರಿ ಕ್ಷೇತ್ರದಿಂದ ಬಿಜೆಪಿ ಸಂಬಿತ್ ಪಾತ್ರಾ ಅವರನ್ನು ಕಣಕ್ಕಿಳಿಸಿದೆ. ಪುರಿಯಲ್ಲಿ ಮೇ 25 ರಂದು ಆರನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

VISTARANEWS.COM


on

Lok Sabha Election
Koo

ನವದೆಹಲಿ: ಹಿಂದಿನ ಕಾಂಗ್ರೆಸ್​ ಸರ್ಕಾರಗಳು ಪಾಕಿಸ್ತಾನದ ಭಯೋತ್ಪಾದನೆಯನ್ನು ನಿಗ್ರಹಿಸಲು ಯಾವುದೇ ಪ್ರಯತ್ನ ಮಾಡುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಹಿಂದಿನ ಸರ್ಕಾರಗಳು ಶಾಂತಿಯ ಭರವಸೆಯೊಂದಿಗೆ ಪಾಕಿಸ್ತಾನಕ್ಕೆ “ಪ್ರೇಮ ಪತ್ರಗಳನ್ನು” ಕಳುಹಿಸುತ್ತಿದ್ದವು. ಪ್ರತಿಯಾಗಿ ಅವರು ಹೆಚ್ಚಿನ ಭಯೋತ್ಪಾದಕರನ್ನು ಕಳುಹಿಸುತ್ತಿದ್ದರು ಎಂದು ಅವರು ಲೇವಡಿ ಮಾಡಿದರು. ಮುಂದುವರಿದ ಮೋದಿ. ಈ ಚುನಾವಣೆಯಲ್ಲಿ (Lok Sabha Election ) ರಾಹುಲ್ ಪ್ರಧಾನಿಯಾಗಬೇಕು ಎಂದು ಪಾಕಿಸ್ತಾನ ಬಯಸುತ್ತಿದೆ. ಆದರೆ, ಬಲಿಷ್ಠ ಭಾರತ ಬಲವಾದ ಸರ್ಕಾರ ಬಯಸಿದೆ ಎಂದು ನುಡಿದಿದ್ದಾರೆ.

ಜಾರ್ಖಂಡ್​​ನ ಪಲಮುದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭಯೋತ್ಪಾದಕರು ನಮ್ಮ ದೇಶದ ಮುಗ್ಧರನ್ನು ಮುಕ್ತವಾಗಿ ಕೊಲ್ಲುತ್ತಿದ್ದರು. ಪ್ರತಿಯಾಗಿ ಇಲ್ಲಿನ ಸರ್ಕಾರವು ಪಾಕಿಸ್ತಾನಕ್ಕೆ ಪ್ರೇಮ ಪತ್ರಗಳನ್ನು ಬರೆಯುತ್ತಿತ್ತು. ಆದರೆ ಪಾಕಿಸ್ತಾನವು ಪತ್ರಗಳಿಗೆ ಪ್ರತಿಕ್ರಿಯೆಯಾಗಿ ಇನ್ನಷ್ಟು ಭಯೋತ್ಪಾದಕರನ್ನು ಕಳುಹಿಸುತ್ತಿತ್ತು. ಆದರೆ ನಾವು ನಿಮ್ಮ ಒಂದು ಮತದ ಶಕ್ತಿಯಿಂದ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದ್ದೆವು. ಅಂತೆಯೇ ನವಭಾರತ ಪಾಕ್​ಗೆ ನುಗ್ಗಿ ಹೊಡೆಯುತ್ತಿದೆ ಎಂದು ಹೇಳಿದರು.

ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋಗುತ್ತಿದ್ದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ಸಾಯುತ್ತಿದ್ದ ಸಮಯವಿತ್ತು. ಅದೊಂದು ನಾಚಿಕೆಯ ವಿಷಯವಾಗಿತ್ತು. ಕಾಂಗ್ರೆಸ್​ನ ಹೇಡಿ ಸರ್ಕಾರಗಳು ಜಗತ್ತಿನ ಮುಂದೆ ಇದರ ಬಗ್ಗೆ ಅಳುತ್ತಿದ್ದವು” ಎಂದು ಪ್ರಧಾನಿ ಲೇವಡಿ ಮಾಡಿದರು.

ಸರ್ಜಿಕಲ್ ಮತ್ತು ಬಾಲಕೋಟ್ ದಾಳಿಗಳು ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಈಗ ವಿಶ್ವಾದ್ಯಂತ ಸಹಾಯವನ್ನು ಕೋರುತ್ತಿದೆ ಮತ್ತು “ಬಚಾವೋ, ಬಚಾವೋ (ಕಾಪಾಡಿ ಕಾಪಾಡಿ )” ಎಂದು ಕೂಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

ಪಾಕಿಸ್ತಾನದ ನಾಯಕರು ಕಾಂಗ್ರೆಸ್​​ನ ಶೆಹಜಾದಾ (ರಾಹುಲ್ ಗಾಂಧಿ) ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಬಲಿಷ್ಠ ಭಾರತವು ಈಗ ಬಲವಾದ ಸರ್ಕಾರವನ್ನು ಬಯಸುತ್ತದೆ” ಎಂದು ಅವರು ಹೇಳಿದರು.

ಮೋದಿ ಜತೆಗಾರರಿಗೆ ಅವರ ಬಗ್ಗೆಯೇ ಭಯವಿದೆ: ಪ್ರಿಯಾಂಕಾ ಗಾಂಧಿ

ಇದಕ್ಕೂ ಮುನ್ನ ಶನಿವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿಯವರನ್ನು “ಅರಮನೆಯಲ್ಲಿ ವಾಸಿಸುವ ಚಕ್ರವರ್ತಿ” ಎಂದು ಕರೆದಿದ್ದಾರೆ. “ಪ್ರಧಾನಿ ಮೋದಿ ನನ್ನ ಸಹೋದರನನ್ನು (ರಾಹುಲ್​) ರಾಜಕುಮಾರ ಎಂದು ಕರೆಯುತ್ತಾರೆ. ನನ್ನ ಸಹೋದರ 4,000 ಕಿಲೋಮೀಟರ್ ನಡೆದು, ದೇಶದ ಜನರನ್ನು ಭೇಟಿಯಾಗಿದ್ದಾರೆ. ಅವರ ಸಮಸ್ಯೆಗಳೇನು ಎಂದು ಆಲಿಸಿದ್ದಾರೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಮತ್ತೊಂದೆಡೆ, ಚಕ್ರವರ್ತಿ ನರೇಂದ್ರ ಮೋದಿ ಅರಮನೆಗಳಲ್ಲಿ ಬೀಡು ಬಿಡುತ್ತಾರೆ. ರೈತರು ಮತ್ತು ಮಹಿಳೆಯರ ಅಸಹಾಯಕತೆಯನ್ನು ಅವರು ಹೇಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ?” ಎಂದು ಅವರು ಗುಜರಾತ್​ನ ಬನಸ್ಕಥಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದರು

“ನರೇಂದ್ರ ಮೋದಿ ಅಧಿಕಾರದಿಂದ ಮೆರೆಯುತ್ತಿದ್ದಾರೆ. ಅವನ ಸುತ್ತಲಿನ ಜನರು ಅವರಿಗೆ ಹೆದರುತ್ತಾರೆ. ಯಾರೂ ಅವನಿಗೆ ಏನನ್ನೂ ಹೇಳುವುದಿಲ್ಲ. ಯಾರಾದರೂ ಧ್ವನಿ ಎತ್ತಿದರೆ ಆ ಧ್ವನಿಯನ್ನೇ ನಿಗ್ರಹಿಸಲಾಗುತ್ತದೆ ಎಂದು ಅವರು ಹೇಳಿದರು.

Continue Reading

Lok Sabha Election 2024

Rahul Gandhi: ರಾಹುಲ್‌ ಗಾಂಧಿಗೆ ಸ್ವಂತ ಕಾರು, ಮನೆ ಇಲ್ಲ; ಇಲ್ಲಿದೆ ಕಾಂಗ್ರೆಸ್‌ ಮುಖಂಡ ಘೋಷಿಸಿದ ಆಸ್ತಿ ವಿವರ

Rahul Gandhi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೇ 3ರಂದು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಚುನಾವಣಾ ಆಯೋಗಕ್ಕೆ ನೀಡಿರುವ ಅಫಿಡವಿಟ್‌ನಲ್ಲಿ ರಾಹುಲ್ ಗಾಂಧಿ ತಮ್ಮ ಬಳಿ ಎಷ್ಟು ಆಸ್ತಿ ಇದೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಅವರು 20.04 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ. ಈ ಪೈಕಿ 9.24 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ. ಸ್ಥಿರಾಸ್ತಿಯ ಮೌಲ್ಯ 11.15 ಕೋಟಿ ರೂ. ಅಚ್ಚರಿ ಎಂದರೆ ಅವರು ಒಂದು ಸ್ವಂತ ಮನೆ ಹೊಂದಿಲ್ಲ. ಅವರು ಕಾರು ಅಥವಾ ಇತರ ವಾಹನವನ್ನೂ ಖರೀದಿ ಮಾಡಿಲ್ಲ. 

VISTARANEWS.COM


on

Rahul Gandhi
Koo

ಲಕ್ನೋ: ಲೋಕಸಭೆ ಚುನಾವಣೆ (Lok Sabha Election)ಯಲ್ಲಿ ಈ ಹಿಂದೆ ಕೇರಳದ ವಯನಾಡಿನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಮೇ 3ರಂದು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದಲೂ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಚುನಾವಣಾ ಆಯೋಗಕ್ಕೆ ನೀಡಿರುವ ಅಫಿಡವಿಟ್‌ನಲ್ಲಿ ರಾಹುಲ್ ಗಾಂಧಿ ತಮ್ಮ ಬಳಿ ಎಷ್ಟು ಆಸ್ತಿ ಇದೆ ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಅವರು 20.04 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ.

ಚರಾಸ್ತಿ ಹಾಗೂ ಸ್ಥಿರಾಸ್ತಿ ಸೇರಿ ರಾಹುಲ್‌ ಗಾಂಧಿ ಒಟ್ಟು 20.04 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಈ ಪೈಕಿ 9.24 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ. ಇದರಲ್ಲಿ 3 ಕೋಟಿ 81 ಲಕ್ಷದ 33 ಸಾವಿರ ರೂ. ಮೌಲ್ಯದ ಷೇರುಗಳು ಮತ್ತು 15 ಲಕ್ಷದ 21 ಸಾವಿರ ರೂ. ಮೌಲ್ಯದ ಚಿನ್ನದ ಬಾಂಡ್‌ಗಳು ಸೇರಿವೆ. ಸ್ಥಿರಾಸ್ತಿಯ ಮೌಲ್ಯ 11.15 ಕೋಟಿ ರೂ. ಇನ್ನು ರಾಹುಲ್‌ ಗಾಂಧಿ ಅವರ ಬಳಿ 55 ಸಾವಿರ ರೂ. ನಗದು ಇದೆ. ಎಸ್‌ಬಿಐ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳ ಉಳಿತಾಯ ಖಾತೆಗಳಲ್ಲಿ 26.25 ಲಕ್ಷ ರೂ. ಠೇವಣಿ ಇಟ್ಟಿದ್ದಾರೆ. ಸ್ಥಿರಾಸ್ತಿ ಪೈಕಿ 9 ಕೋಟಿ 4 ಲಕ್ಷ 89 ಸಾವಿರ ರೂ. ಮೌಲ್ಯದ ಸ್ವ-ಖರೀದಿ ಆಸ್ತಿ ಹಾಗೂ 2 ಕೋಟಿ 10 ಲಕ್ಷ 13 ಸಾವಿರ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ಸೇರಿದೆ.

ವಾಹನವಿಲ್ಲ

ಅಚ್ಚರಿ ಎಂದರೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಒಂದು ಸ್ವಂತ ಮನೆ ಹೊಂದಿಲ್ಲ. ಅವರು ಕಾರು ಅಥವಾ ಇತರ ವಾಹನವನ್ನೂ ಖರೀದಿ ಮಾಡಿಲ್ಲ. ಆದರೆ ಗುರುಗ್ರಾಮದಲ್ಲಿ 9.04 ಕೋಟಿ ರೂ. ಮೌಲ್ಯದ ಸ್ವಂತ ಕಚೇರಿಯೊಂದನ್ನು ಹೊಂದಿದ್ದಾರೆ. ಹೊಸದಿಲ್ಲಿಯ ಮೆಹ್ರೌಲಿಯ ಸುಲ್ತಾನ್‌ಪುರ ಗ್ರಾಮದಲ್ಲಿ ಸುಮಾರು 3.778 ಎಕರೆ ಕೃಷಿ ಭೂಮಿ ಇದ್ದು, ಇದು ರಾಹುಲ್‌ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರಿನಲ್ಲಿದೆ. ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಟ್ರಿನಿಟಿ ಕಾಲೇಜಿನಲ್ಲಿ ಎಂ.ಫಿಲ್ ಪದವಿ ಪಡೆದಿದ್ದಾರೆ. ಅಲ್ಲದೆ ಫ್ಲೋರಿಡಾದ ರೋಲಿನ್ಸ್ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್ ಪದವಿಯನ್ನು ಪಡೆದಿರುವುದು ಅಫಿಡವಿಟ್‌ನ ವಿವರದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Lok Sabha Election 2024: ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ, ಅಮೇಠಿಯಿಂದ ಕಿಶೋರಿಲಾಲ್‌ ಸ್ಪರ್ಧೆ

ರಾಯ್‌ ಬರೇಲಿಯಲ್ಲಿ ನಾಮ ಪತ್ರ

ಸುಮಾರು 20 ವರ್ಷಗಳ ಕಾಲ ಸೋನಿಯಾ ಗಾಂಧಿ ಅಧಿಕಾರದಲ್ಲಿದ್ದ ಉತ್ತರ ಪ್ರದೇಶದ ರಾಯ್​ ಬರೇಲಿಯಲ್ಲಿ ಶುಕ್ರವಾರ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಸಿದ್ದರು. ರಾಹುಲ್ ಗಾಂಧಿ ತಮ್ಮ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದರು. ರಾಹುಲ್ ಗಾಂಧಿ ಅವರ ಎದುರಾಳಿಯಾಗಿ ಬಿಜೆಪಿಯಿಂದ ದಿನೇಶ್ ಪ್ರತಾಪ್ ಸಿಂಗ್ ಸ್ಪರ್ಧಿಸಲಿದ್ದಾರೆ. ಇಲ್ಲಿ ಮೇ 20ರಂದು 5ನೇ ಹಂತದಲ್ಲಿ ಮತದಾನ ನಡೆಯಲಿದೆ.

Continue Reading
Advertisement
HD Revanna
ಕರ್ನಾಟಕ5 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ5 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ5 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ5 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ5 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ5 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ6 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ6 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ6 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ6 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ24 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌