modi in karnataka Those who slapped the worker do not respect the people said Prime Minister ModiModi in Karnataka: ಕಾರ್ಯಕರ್ತನ ಕಪಾಳಕ್ಕೇ ಹೊಡೆದವರು ಜನರಿಗೆ ಗೌರವ ನೀಡುತ್ತಾರಾ?: ಸಿದ್ದು ವಿರುದ್ಧ ಮೋದಿ ವಾಗ್ದಾಳಿ - Vistara News

ಕರ್ನಾಟಕ

Modi in Karnataka: ಕಾರ್ಯಕರ್ತನ ಕಪಾಳಕ್ಕೇ ಹೊಡೆದವರು ಜನರಿಗೆ ಗೌರವ ನೀಡುತ್ತಾರಾ?: ಸಿದ್ದು ವಿರುದ್ಧ ಮೋದಿ ವಾಗ್ದಾಳಿ

ಅಭಿವೃದ್ಧಿ ಹೊಂದಿದ ಕರ್ನಾಟಕಕ್ಕಾಗಿ ಡಬಲ್‌ ಇಂಜಿನ್‌ ಸರ್ಕಾರಕ್ಕೆ ಕರ್ನಾಟಕದ ಜನರ ಆಶೀರ್ವಾದವಿದೆ ಎನ್ನುವುದು ಕಾರ್ಯಕ್ರಮವನ್ನು ನೋಡಿದರೆ ತಿಳಿಯುತ್ತದೆ ಎಂದು ಮೋದಿ (Modi in Karnataka) ಶ್ಲಾಘಿಸಿದರು.

VISTARANEWS.COM


on

modi in karnataka Those who slapped the worker do not respect the people said Prime Minister Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಯಾವ ಪಕ್ಷದಲ್ಲಿ ತನ್ನ ಕಾರ್ಯಕರ್ತನಿಗೇ ಗೌರವ ನೀಡದೆ ಕಪಾಳಕ್ಕೆ ಹೊಡೆಯಲಾಗುತ್ತದೆಯೋ ಆ ಪಕ್ಷವು ಜನತಾ ಜನಾರ್ದನನಿಗೆ ಹೇಗೆ ಗೌರವ ನೀಡುತ್ತದೆ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ (Modi in Karnataka) ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆಯ ಜಿಎಂಐಟಿ ಮೈದಾನದಲ್ಲಿ ಆಯೋಜಿಸಲಾಗಿದ್ದ ವಿಜಯ ಸಂಕಲ್ಪ ಯಾತ್ರೆ ಮಹಾ ಸಂಗಮ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಕಾರ್ಯಕರ್ತರನ್ನುದ್ದೇಶಿಸಿ ಮೋದಿ ಮಾತನಾಡಿದರು.

ದಾವಣಗೆರೆಯ ನನ್ನ ಸಹೋದರ ಸಹೋದರಿಯರಿಗೆ ನಮಸ್ಕಾರಗಳು. ಕರ್ನಾಟಕದ ನನ್ನ ಬಿಜೆಪಿ ಕಾರ್ಯಕರ್ತ ಬಾಂಧವರಿಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ, ನನಗೆ ಯಾವಾಗೆಲ್ಲ ದಾವಣಗೆರೆಗೆ ಆಗಮಿಸುವ ಅವಕಾಶ ಸಿಕ್ಕಿದೆಯೋ, ಆಗೆಲ್ಲ ನಿಮ್ಮ ಆಶೀರ್ವಾದ ಹೆಚ್ಚುತ್ತಲೇ ಇದೆ. ಇಂದು ಕಾರ್ಯಕ್ರಮವನ್ನು ಈ ರೀತಿ ರೂಪಿಸಿರುವುದಕ್ಕೆ ಕರ್ನಾಟಕ ಬಿಜೆಪಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ತ್ಯಾಗ, ತಪಸ್ಸಿನಿಂದ ತುಂಬಿರುವ ಜೀವನ ನಡೆಸುತ್ತಿರುವ ನಿಮ್ಮೆಲ್ಲರ ದರ್ಶನ ಮಾಡುವುದು ನನ್ನ ಸೌಭಾಗ್ಯ. ವಿಜಯ ಮಹೋತ್ಸವದಂತೆ ಈ ವಿಜಯ ಸಂಕಲ್ಪ ರ‍್ಯಾಲಿ ಕಾಣುತ್ತಿದೆ. ವಿಶೇಷವೆಂದರೆ, ಒಂದೆಡೆ ವಿಜಯ ಸಂಕಲ್ಪ ರ‍್ಯಾಲಿ ಆಗುತ್ತಿದೆ, ಮತ್ತೊಂದೆಡೆ ಕರ್ನಾಟಕದ ಕಲಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷರ ಕರ್ಮಭೂಮಿಯಲ್ಲಿ ಬಿಜೆಪಿಯ ಮೇಯರ್‌ ಹಾಗೂ ಉಪ ಮೇಯರ್‌ ಆಯ್ಕೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷರ ಮನೆಯಲ್ಲಿ ಬಿಜೆಪಿ ವಿಜಯ ಯಾತ್ರೆ ನಡೆಸಿದೆ. ಇದು ವಿಜಯ ಸಂಕಲ್ಪ ಯಾತ್ರೆಯ ಶುಭ ಸಂಕೇತ. ಕರ್ನಾಟಕದಲ್ಲಿ ಬಿಜೆಪಿ ವಿಜಯ ಯಾತ್ರೆ ಆರಂಭವಾಗಿದೆ.

ಅಭಿವೃದ್ಧಿ ಹೊಂದಿದ ಕರ್ನಾಟಕಕ್ಕಾಗಿ ಡಬಲ್‌ ಇಂಜಿನ್‌ ಸರ್ಕಾರಕ್ಕೆ ಕರ್ನಾಟಕದ ಜನರ ಆಶೀರ್ವಾದವಿದೆ. ಇಂದು ಈ ಕಾರ್ಯಕ್ರಮ ನಡೆಯುತ್ತಿರುವ ಸ್ಥಳವು ದಾವಣಗೆರೆ ಹಾಗೂ ಹರಿಹರದ ನಡುವೆ ಇದೆ. ತಾಯಿ ತುಂಗಭದ್ರೆ, ಹರಿಹರೇಶ್ವರರ ಆಶೀರ್ವಾದವಿದೆ. ನಾಲ್ಕು ವಿಜಯ ಸಂಕಲ್ಪ ಯಾತ್ರೆಗಳ ಮಹಾ ಸಂಗಮವಾಗುತ್ತಿದೆ. ಯಾತ್ರೆ ಮಾಡಿ ಬಂದವರ ದರ್ಶನ ಮಾಡಬೇಕು. ಇಂದು ನಿಮ್ಮ ದರ್ಶನ ಮಾಡಿ ನಮಗೂ ಪುಣ್ಯ ಲಭಿಸಿದೆ. ಈ ಸಫಲ ಯಾತ್ರೆಗಳಿಗೆ ಕರ್ನಾಟಕದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದರು.

ನಿರಂತರವಾಗಿ ಈ ಯಾತ್ರೆಗಳ ಕುರಿತು ಮಾಹಿತಿ ಪಡೆಯುತ್ತಿದ್ದೆ. ಈ ಯಾತ್ರೆಗಳಲ್ಲಿ ಲಭಿಸಿರುವ ವಿಶ್ವಾಸ, ಸಮರ್ಥನೆಯು ಅದ್ಭುತವಾಗಿದೆ. ಆದರೆ ನಮ್ಮ ಹೊಣೆ ಈಗ ಆರಂಭವಾಗಿದೆ. ಈ ಯಾತ್ರೆಯಲ್ಲಿ ಸಿಕ್ಕಿರುವ ಉತ್ಸಾಹ ಹಾಗೂ ಜನಸಮರ್ಥನೆಯನ್ನು ಪ್ರತಿ ಬೂತ್‌ಗೆ ತಲುಪಿಸಬೇಕು. ಪ್ರತಿ ಬೂತ್‌ ಗೆಲ್ಲುವ ಸಂಕಲ್ಪ ಮಾಡುತ್ತೀರ? ಎಂದು ನೆರೆದವರನ್ನು ಪ್ರಶ್ನಿಸಿದರು.

ತುಮಕೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕಾರ್ಯಕರ್ತನೊಬ್ಬನ ಕಪಾಳಕ್ಕೆ ಹೊಡೆಯುವ ವಿಡಿಯೋವನ್ನು ಮೋದಿ ಉಲ್ಲೇಖಿಸಿದರು. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕದ ಒಂದು ವಿಡಿಯೋ ನೋಡುತ್ತಿದ್ದೆ. ಒಂದು ಪಕ್ಷದ ದೊಡ್ಡ ನಾಯಕ, ಮಾಜಿ ಮುಖ್ಯಮಂತ್ರಿ, ತಮ್ಮದೇ ಪಕ್ಷದ ಕಾರ್ಯಕರ್ತರ ಕಪಾಳಕ್ಕೆ ಹೊಡೆದದ್ದು ಆ ವಿಡಿಯೊ. ತಮ್ಮ ಕಾರ್ಯಕರ್ತನನ್ನೇ ಗೌರವಿಸಲು ಆಗದವರು ಜನತಾ ಜನಾರ್ದನನ ಗೌರವ ಹೇಗೆ ಮಾಡುತ್ತಾರೆ? ಬಿಜೆಪಿಯಲ್ಲಿ ಯಾರೂ ದೊಡ್ಡವರಲ್ಲ, ಚಿಕ್ಕವರಿಲ್ಲ. ನಾವೆಲ್ಲರೂ ಸಮಾನರು. ಹಾಗಾಗಿ ನಿಮ್ಮೆಲ್ಲರ ದರ್ಶನ ಪಡೆಯುವುದು ನನ್ನ ಸೌಭಾಗ್ಯ ಎಂಬ ಭಾವನೆ ಮೂಡುತ್ತದೆ. ಕರ್ನಾಟಕದ ಪ್ರತಿ ಕಾರ್ಯಕರ್ತ ನನ್ನ ಜತೆಗಾರ, ನನ್ನ ಪರಮ ಮಿತ್ರ ಹಾಘೂ ನನ್ನ ಸಹೋದರ ಇದ್ದಂತೆ ಎಂದರು.

ಭಾರತೀಯ ರಾಜನೀತಿಯಲ್ಲಿ ಆರೋಪಗಳ, ಆಕ್ಷೇಪಗಳ ರಾಜನೀತಿ ನಡೆಯುತ್ತಿದೆ. ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಈ ಕೊಳಕು ರಾಜನೀತಿಯನ್ನು ಬದಲಿಸಿದೆ. ಕಲ್ಪನೆಗಳ ರಾಜಕೀಯವನ್ನು ಸಾಧನೆಗಳ ರಾಜಕೀಯವಾಗಿ ಬದಲಾಯಿಸಿದೆ ಎಂದರು.

ಇದಕ್ಕೂ ಮುನ್ನ ಮಾತನಾಡಿದ ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ದಾವಣಗೆರೆ ಇತಿಹಾಸದಲ್ಲಿ ಎಂದೂ ಮರೆಯಲಾಗದ ಅದ್ಭುತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾವು ಬಹುಮತ ಪಡೆದು ಸ್ವಂತ ಶಕ್ತಿ ಮೇಲೆ ಸರ್ಕಾರ ರಚನೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಭರವಸೆ ನೀಡಬಹುದೇ? ಎಂದು ನೆರೆದವರನ್ನು ಪ್ರಶ್ನಿಸಿ, ಹೌದು ಎಂಬ ಉತ್ತರ ಪಡೆದರು.

ಮೋದಿಯವರು ದೇಶವಿದೇಶ ಸುತ್ತಿ ಬಂದರೂ ಒಂದು ದಿನವೂ ವಿಶ್ರಾಂತಿ ತೆಗೆದುಕೊಂಡಿಲ್ಲ. ಹಾಗಾಗಿ ನಾವು ಇನ್ನೆರಡು ತಿಂಗಳು ವಿಶ್ರಾಂತಿ ತೆಗೆದುಕೊಳ್ಳದೆ ಮೋದಿಯವರು ಹಾಗೂ ಬೊಮ್ಮಾಯಿ ಅವರ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸೋಣ. ಹಣಬಲ ಹಾಗೂ ತೋಳ್ಬಲದ ಆಧಾರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಚಾರ ಈ ಹಿಂದೆ ಇತ್ತು ಎನ್ನುವುದನ್ನು ಕಾಂಗ್ರೆಸ್‌ನವರು ತಿಳಿಯಬೇಕು. ಆದರೆ ಈಗ ಜನರು ಜಾಗೃತರಾಗಿದ್ದಾರೆ. ಜನರ ಬಳಿಗೆ ತೆರಳಿ ವಿಚಾರ ತಿಳಿಸಬೇಕು. ಇದು ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಅಲ್ಲ, ಇದು ವಿಜಯ ಯಾತ್ರೆಯ ಆರಂಭ.

ಕಾಂಗ್ರೆಸ್‌ ಪಕ್ಷ ಈಗ ಗ್ಯಾರಂಟಿ ಕಾರ್ಡ್‌ ನೀಡುತ್ತಿದ್ದಾರೆ. ಎಪ್ಪತ್ತು ವರ್ಷ ಏನು ಕಡುಬು ತಿನ್ನುತ್ತಾ ಇದ್ದಿರ? ನಾವು ಈಗಾಗಲೆ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಕಾಂಗ್ರೆಸ್‌ನವರು ಎಪ್ಪತ್ತು ವರ್ಷದಲ್ಲಿ ಏನೂ ಮಾಡದೆ ಭರವಸೆ ನೀಡುತ್ತಿದ್ದಾರೆ ಎಂದರು.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ನಾಲ್ಕೂ ದಿಕ್ಕಿನಿಂದ ಹೊರಟ ಯಾತ್ರೆ ಜನಮನ್ನಣೆಯನ್ನು ಗೆದ್ದಿದೆ. ಹಳ್ಳಿಹಳ್ಳಿಗಳ ಮೂಲಕ ಸಾಗಿ ಜನಪ್ರಿಯತೆ ಗಳಿಸಿದೆ. ಇತರೆ ಪಕ್ಷಗಳ ಹತ್ತಾರು ಕಾರ್ಯಕರ್ತರು ಬಿಜೆಪಿ ಸೇರಿದ್ದಾರೆ. ರಾಜ್ಯ ಸರ್ಕಾರ ಅತಿ ದೊಡ್ಡ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿರುವುದಕ್ಕೆ ಅಭಿನಂದಿಸುತ್ತೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇದು ಜನಜಾತ್ರೆಯಲ್ಲ, ಸಾಗರದ ಅಲೆಗಳು. ಈ ಮೂಲಕ ರಾಜ್ಯದಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುತ್ತದೆ ಎಂದರು.

ಇದನ್ನೂ ಓದಿ: Modi in Karnataka: ಮೆಟ್ರೊ ರೈಲು ಮಾರ್ಗ ಉದ್ಘಾಟಿಸಿ ಸಾಮಾನ್ಯರಂತೆ ಪ್ರಯಾಣಿಸಿದ ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Mysore News: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Mysore News: ಮಧ್ವರ ಮಹೋನ್ನತ ಕೃತಿಗಳ ಸಾರಸಂಗ್ರಹವಾದ ಶ್ರೀಮನ್ ನ್ಯಾಯ ಸುಧಾ ಮತ್ತು ಶ್ರೀ ವ್ಯಾಸತೀರ್ಥರ ತತ್ವ ಚಂದ್ರಿಕಾ ಗ್ರಂಥಗಳ ಅಧ್ಯಯನವು ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲಿದೆ ಎಂದು ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Shri Bhandara Keri Mutt Shri Vidyesh Theertha Swamiji ashirvachan
Koo

ಮೈಸೂರು: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ ಎಂದು ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ (Mysore News) ತಿಳಿಸಿದರು.

ಸೋಸಲೆ ಶ್ರೀ ವ್ಯಾಸರಾಜ ಮಹಾ ಸಂಸ್ಥಾನ ಮತ್ತು ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದಲ್ಲಿ ಗುರುವಾರ ಆಯೋಜಿಸಿದ್ದ ವಿದ್ವತ್ ಸಭೆಯ ಸಾನ್ನಿಧ್ಯ ವಹಿಸಿ, ಶ್ರೀಗಳು ಆಶೀರ್ವಚನ ನೀಡಿದರು.

ಕಲಿಕೆ ವಿಷಯದಲ್ಲಿ ವಿದ್ಯಾರ್ಥಿಗಳು ಎಂದೂ ತೃಪ್ತರಾಗಬಾರದು. ವಿವಿಧ ಗ್ರಂಥಗಳ ಅಧ್ಯಯನ, ಅವಲೋಕನ, ಪರಾಮರ್ಶನ ಮತ್ತು ಚಿಂತನೆಗಳಿಂದ ಜ್ಞಾನವನ್ನು ವಿಸ್ತಾರ ಮಾಡಿಕೊಳ್ಳುತ್ತಿರಬೇಕು. ಕೇವಲ ಪರೀಕ್ಷೆಗಾಗಿ ಓದುವುದು ಒಂದು ಹಂತದ ಸಾಧನೆ. ಆದರೆ ಸುಧಾ ಸೇರಿ ಆಚಾರ್ಯ ಮಧ್ವರ ಗ್ರಂಥಗಳ ಅಧ್ಯಯನ ಎಂಬುದು ಬದುಕಿನ ಅವಿಭಾಜ್ಯ ಅಂಗವಾಗಬೇಕು. ಆಚಾರ್ಯ ಮಧ್ವರು ನೀಡಿದ ಪ್ರತಿಯೊಂದು ಸಂದೇಶವೂ ಎಲ್ಲ ದೇಶ ಕಾಲಕ್ಕೆ ದಿಕ್ಸೂಚಿಯಾಗಿವೆ ಎಂದರು.

ಇದನ್ನೂ ಓದಿ: Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಮಧ್ವರ ಮಹೋನ್ನತ ಕೃತಿಗಳ ಸಾರಸಂಗ್ರಹವಾದ ಶ್ರೀಮನ್ ನ್ಯಾಯ ಸುಧಾ ಮತ್ತು ಶ್ರೀ ವ್ಯಾಸತೀರ್ಥರ ತತ್ವ ಚಂದ್ರಿಕಾ ಗ್ರಂಥಗಳ ಅಧ್ಯಯನವು ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲಿದೆ ಎಂದು ತಿಳಿಸಿದರು.

ಸೋಸಲೆ ಶ್ರೀ ವಿದ್ಯಾ ಶ್ರೀಶ ತೀರ್ಥ ಸ್ವಾಮೀಜಿಯವರು ಜ್ಞಾನ ಪ್ರಸರಣ ಮತ್ತು ಶಾಸ್ತ್ರ ವಿದ್ಯೆ ಕಲಿಕೆ ನಿಟ್ಟಿನಲ್ಲಿ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ನೂರಾರು ಜನರಿಗೆ ಪಾಠ ಹೇಳಿರುವ ಅವರು ಈ ಬಾರಿ ನಾಲ್ಕು ವಿದ್ಯಾರ್ಥಿಗಳನ್ನು ಸುಧಾ ಪಂಡಿತರನ್ನಾಗಿಸಿ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುವಲ್ಲಿ ಅಹರ್ನಿಶಿ ಶ್ರಮಿಸಿರುವುದು ಶ್ಲಾಘನೀಯ ಎಂದು ಶ್ರೀಗಳು ತಿಳಿಸಿದರು.

ಎತ್ತರಕ್ಕೆ ಬೆಳೆಯಿರಿ

ಬೆಂಗಳೂರಿನ ಭುವನಗಿರಿ ಆಶ್ರಮದ ಶ್ರೀ ಸುವಿದ್ಯೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಸಮುದ್ರದಷ್ಟು ಆಳಕ್ಕೆ ಪರ್ವತದಷ್ಟು ಎತ್ತರಕ್ಕೆ ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳ ಕೀರ್ತಿ ಬೆಳಗಲಿ ಎಂದು ಹೇಳಿದರು.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

ಅದಮಾರು ಮಠದ ಶ್ರೀ ವಿಶ್ವ ಪ್ರಿಯ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿ, ಜ್ಞಾನಕ್ಕೆ ಸಮನಾದದು ಜಗತ್ತಿನಲ್ಲಿ ಯಾವುದೂ ಇಲ್ಲ . ಹಾಗಾಗಿ ವಿದ್ವತ್ತನ್ನು ಪಡೆಯಲು ಶ್ರಮ ಹಾಕಿದರೆ ಭವಿಷ್ಯದಲ್ಲಿ ಸುಖ ಸಂಪತ್ತು ಅರಸಿ ಬರುತ್ತವೆ ಎಂದರು.

ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ, ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರು ವಿದ್ಯಾರ್ಥಿಗಳ ಶಾಸ್ತ್ರ ಜ್ಞಾನ ಪರೀಕ್ಷೆ ಮಾಡಿದರು.

ಪ್ರಣವ ಆಚಾರ್ಯರಿಂದ ಸಮರ್ಥ ಉತ್ತರ

ವಿದ್ಯಾರ್ಥಿ ಪ್ರಣವ ಆಚಾರ್ಯ ಅವರು ಶ್ರೀಮನ್ ನ್ಯಾಯ ಸುಧಾ ತಾತ್ಪರ್ಯ ಚಂದ್ರಿಕಾ ಮತ್ತು ನ್ಯಾಯಾಮೃತ ಗ್ರಂಥಗಳ ಮೇಲಿನ ಪ್ರಶ್ನೆಗಳಿಗೆ ಸಮರ್ಥ ಉತ್ತರವನ್ನು ನೀಡಿ ಗಮನ ಸೆಳೆದರು.

ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಹಿರಿಯ ವಿದ್ವಾಂಸ ಹರಿದಾಸ ಭಟ್, ಮುಂಬೈ ವಿದ್ಯಾಪೀಠದ ಕುಲಪತಿ ಮಾಹುಲಿ ವಿದ್ಯಾಸಿಂಹಾಚಾರ್ಯ, ಬೆಂಗಳೂರಿನ ಜಯತೀರ್ಥ ವಿದ್ಯಾಪೀಠದ ಕುಲಪತಿ ರಂಗಾಚಾರ್ಯ, ಪ್ರಾಚಾರ್ಯ ವಿದ್ಯಾಧೀಶ ಆಚಾರ್ಯ ಗುತ್ತಲ, ಪಂಡಿತ ಪ್ರಹ್ಲಾದಾಚಾರ್ಯ, ಮಾತರಿಶ್ವಾಚಾರ್ಯ, ಡಿ.ಪಿ. ಅನಂತಾಚಾರ್ಯ, ಡಿ.ಪಿ. ಮಧುಸೂದ‌ನಾಚಾರ್ಯ. ಡಾ. ಶ್ರೀನಿಧಿ ಪ್ಯಾಟಿ ಇದ್ದರು.

Continue Reading

ಕರ್ನಾಟಕ

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Gadag News : ಜಮೀನು ಬದುವಿನ ವಿಷಯಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಮನೆಗಳಿಗೆ ನುಗ್ಗಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಗಲಾಟೆಯು ಎರಡು ದಿನದ ಹಿಂದೆ ಆರಂಭಗೊಂಡಿತ್ತು. ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು. ಅಲ್ಲಿ ಸಮಾಧಾನ ಮಾಡಿ ಕಳುಹಿಸಿದ್ದರು.

VISTARANEWS.COM


on

Gadag News
Koo

ಗದಗ : ಕ್ಷುಲ್ಲಕ ಕಾರಣವೊಂದಕ್ಕೆ ಮನೆಗಳಿಗೆ ನುಗ್ಗಿ ಮಹಿಳೆಯರು ಸೇರಿದಂತೆ ಮನೆ ಮಂದಿಗೆಲ್ಲ ಡೊಣ್ಣೆ, ಬಡಿಗೆಗಳಿಂದ ಹಲ್ಲೆ ನಡೆಸಿದ ಪ್ರಕರಣವೊಂದು ದಾಖಲಾಗಿದೆ. ಗದಗ (Gadag News) ತಾಲೂಕಿನ ಅಡವಿಸೋಮಾಪೂರ ಸಣ್ಣ ತಾಂಡಾದಲ್ಲಿ ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಸೇರಿ ಐವರ ಮೇಲೆ ಹಲ್ಲೆ ನಡೆದಿದೆ

ಜಮೀನು ಬದುವಿನ ವಿಷಯಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಮನೆಗಳಿಗೆ ನುಗ್ಗಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಗಲಾಟೆಯು ಎರಡು ದಿನದ ಹಿಂದೆ ಆರಂಭಗೊಂಡಿತ್ತು. ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು. ಅಲ್ಲಿ ಸಮಾಧಾನ ಮಾಡಿ ಕಳುಹಿಸಿದ್ದರು. ಹಿರಿಯರ ಮಧ್ಯಸ್ಥಿಕೆಯಲ್ಲಿ ಗಲಾಟೆ ಬಗೆಹರಿಸಿಕೊಳ್ಳಲಾಗಿತ್ತು. ಇದೀಗ ಮತ್ತೆ ಏಕಾ ಏಕಿ ಗಲಾಟೆ ಮಾಡಿ ಐವರು ಜನರ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

Continue Reading

ಕರ್ನಾಟಕ

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

Rain News: ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Rain News
Koo

ಗದಗ/ಕೊಪ್ಪಳ: ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ!

ಗದಗ: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ ಮಾಡಿದ್ದರಿಂದ ಇಬ್ಬರು ಮಹಿಳೆಯರು ಸೇರಿ ಐವರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಸಣ್ಣ ತಾಂಡಾದಲ್ಲಿ ನಡೆದಿದೆ.

ಜಮೀನು ಬದು ವಿಷಯಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದಿದ್ದು, ಏಕಾಏಕಿ ಮನೆಗಳಿಗೆ ನುಗ್ಗಿ ಒಂದು ಗುಂಪು ದಾಳಿ ಮಾಡಿದೆ. ಕಳೆದ ಕೆಲ ದಿನದ ಹಿಂದೆಯೇ ಜಮೀನು ವಿವಾದ ಠಾಣೆ ಮೆಟ್ಟಿಲೇರಿತ್ತು. ಆಗ ಹಿರಿಯರ ಮಧ್ಯಸ್ಥಿಕೆಯಲ್ಲಿ ಗಲಾಟೆ ಬಗೆಹರಿದತ್ತು. ಈಗ ಮತ್ತೆ ಏಕಾ ಏಕಿ ಗಲಾಟೆ ಮಾಡಿ, ಐವರ ಮೇಲೆ ಹಲ್ಲೆ ಮಾಡಲಾಗಿದೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Continue Reading

ಆರೋಗ್ಯ

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

Vijayanagara News: ಆರೋಗ್ಯ ಇಲಾಖೆಯ ಆಡಳಿತ ವ್ಯೆದ್ಯರ ನಿರ್ಲಕ್ಷ್ಯ ಅಥವಾ ಆಸ್ಪತ್ರೆಯ ಯಾವುದಾದರು ಸಿಬ್ಬಂದಿಯ ನಿರ್ಲಕ್ಷ್ಯತೆಯಿಂದ ತಾಯಿ ಅಥವಾ ಮಗು ಸಾವಿಗೀಡಾದ ಬಗ್ಗೆ ದೂರು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಎಫ್‌ಐಆರ್ ದಾಖಲಿಸಿ ಸೇವೆಯಿಂದ ಅಮಾನತು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Disciplinary action if cases of mother and child deaths recur DC Diwakar warns
Koo

ಹೊಸಪೇಟೆ: ಆರೋಗ್ಯ ಇಲಾಖೆಯ ಆಡಳಿತ ವ್ಯೆದ್ಯರ ನಿರ್ಲಕ್ಷ್ಯ ಅಥವಾ ಆಸ್ಪತ್ರೆಯ ಯಾವುದಾದರು ಸಿಬ್ಬಂದಿಯ ನಿರ್ಲಕ್ಷ್ಯತೆಯಿಂದ ತಾಯಿ ಅಥವಾ ಮಗು ಸಾವಿಗೀಡಾದ ಬಗ್ಗೆ ದೂರು ಬಂದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿಯ ಮೇಲೆ ಎಫ್‌ಐಆರ್ ದಾಖಲಿಸಿ ಸೇವೆಯಿಂದ ಅಮಾನತು ಮಾಡುವುದಾಗಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಎಚ್ಚರಿಕೆ (Vijayanagara News) ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ತಾಯಿ ಮತ್ತು ಶಿಶು ಮರಣ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

ತಾಯಿ ಮತ್ತು ಶಿಶು ಮರಣ ತಡೆಗೆ ವಿಶೇಷ ಗಮನ ಹರಿಸಬೇಕು. ತಾಯಿ ಮತ್ತು ಶಿಶು ಮರಣಕ್ಕೆ ವೈದ್ಯರು ಅಥವಾ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎನ್ನುವ ದೂರು ಬಾರದ ಹಾಗೆ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು. ಪ್ರತಿ ದಿನ ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಆರೈಕೆಯ ಬಗ್ಗೆ ಗಮನ ಹರಿಸಬೇಕು. ಶುಶ್ರೂಷಣಾ ಸಿಬ್ಬಂದಿ ರೋಗಿಗಳೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳಬೇಕು. ಚಿಕಿತ್ಸೆ ಕೊಡುವಾಗ ಜವಾಬ್ದಾರಿಯಿಂದ ವರ್ತಿಸಬೇಕು. ಬೇರೊಬ್ಬರನ್ನು ಹೊಣೆಯಾಗಿಸಬಾರದು. ಸಕಾಲದಲ್ಲಿ ಸಿಗಬೇಕಾಗಿದ್ದ ಆರೋಗ್ಯ ಸೇವೆ ಸಿಗದ ಕಾರಣಕ್ಕೆ ತಾಯಿ ಮರಣ, ಶಿಶುಮರಣ ಪ್ರಕರಣಗಳು ದಾಖಲಾಗುತ್ತಿವೆ ಎನ್ನುವ ದೂರುಗಳು ಬಂದಲ್ಲಿ ಮತ್ತು ತಾಯಿ ಮತ್ತು ಶಿಶು ಮರಣ ಪ್ರಕರಣಗಳು ಮತ್ತೆ ಮರುಕಳಿಸಿದಲ್ಲಿ ಯಾವುದೇ ಮುಲಾಜಿಲ್ಲದೇ ತನಿಖೆಗೊಳಪಡಿಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅಂತವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Uric Acid: ಆರೋಗ್ಯ ಹದಗೆಡಿಸುವ ಯೂರಿಕ್ ಆಮ್ಲವನ್ನು ನಿಯಂತ್ರಿಸುವ ನೈಸರ್ಗಿಕ ವಿಧಾನಗಳಿವು

ಸರ್ಕಾರಿ ಆಸ್ಪತ್ರೆಗಳಿಗೆ ಬಹುತೇಕ ಕೃಷಿ ಕಾರ್ಮಿಕರು, ಕಡು ಬಡವರೇ ಹೆಚ್ಚಾಗಿ ಬರುತ್ತಾರೆ. ವೈದ್ಯರೇ ದೇವರೆಂದು ಭಾವಿಸಿ ಅವರು ಆಸ್ಪತ್ರೆಯಲ್ಲಿನ ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಪ್ರೀತಿ ವಿಶ್ವಾಸ ಇಟ್ಟುಕೊಂಡಿರುತ್ತಾರೆ. ವೈದ್ಯರು ಏನೇ ಹೇಳಿದರು ಅವರು ಅದಕ್ಕೆ ಸಮ್ಮತಿ ಸೂಚಿಸುತ್ತಾರೆ. ನನ್ನ ಮಗಳು ಆರಾಮಿರಬೇಕು. ಹೆರಿಗೆ ಸುಸೂತ್ರವಾಗಿ ನಡೆದು ಕೂಸು ಬದುಕಬೇಕು ಎಂಬುದು ಪ್ರತಿಯೊಬ್ಬ ತಂದೆ ತಾಯಿ ಪಾಲಕರ ಆಸೆ ಆಗಿರುತ್ತದೆ. ಆಸ್ಪತ್ರೆಗೆ ಯಾರೆ ಬರಲಿ ಅವರೊಂದಿಗೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ನಡೆದುಕೊಳ್ಳಬೇಕು. ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು.

ಹೆರಿಗೆಯಂತಹ ಸಂದರ್ಭದಲ್ಲಿ ವಿಳಂಬಕ್ಕೆ ಆವಕಾಶ ಮಾಡಿಕೊಡದೇ ಸಕಾಲಕ್ಕೆ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದೆ ಎಂಬುದು ಗೊತ್ತಾದಾಗ ವಿಳಂಬ ಮಾಡದೇ ಮೇಲಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಕೂಡಲೇ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರು ವೈದ್ಯರು ಮತ್ತು ಸಿಬ್ಬಂದಿಯ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಹಾಗೆ ಅವರಿಗೆ ಚಿಕಿತ್ಸೆ ನೀಡಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು, ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳು, ಆಡಳಿತ ವ್ಯೆದ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಹಾಜರಿದ್ದರು.

Continue Reading
Advertisement
Stock Market Crash
ಪ್ರಮುಖ ಸುದ್ದಿ2 hours ago

Stock Market Crash : ವಿದೇಶಿ ಹೂಡಿಕೆಗಳು ಬರದಂತೆ ರಾಹುಲ್ ಗಾಂಧಿ ಪಿತೂರಿ ಮಾಡುತ್ತಿದ್ದಾರೆ; ಬಿಜೆಪಿಯಿಂದ ತಿರುಗೇಟು

sunil chhetri
ಪ್ರಮುಖ ಸುದ್ದಿ2 hours ago

Sunil Chhetri : ಕಣ್ಣೀರು ಹಾಕುತ್ತಲೇ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಡಿ ವಿದಾಯ ಹೇಳಿದ ಸುನಿಲ್​ ಛೆಟ್ರಿ

Shri Bhandara Keri Mutt Shri Vidyesh Theertha Swamiji ashirvachan
ಕರ್ನಾಟಕ3 hours ago

Mysore News: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Gadag News
ಕರ್ನಾಟಕ3 hours ago

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Rain News
ಕರ್ನಾಟಕ4 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

Disciplinary action if cases of mother and child deaths recur DC Diwakar warns
ಆರೋಗ್ಯ4 hours ago

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

BJP State Spokesperson Hariprakash konemane pressmeet at yallapura
ಕರ್ನಾಟಕ4 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Trekking tragedy
ಬೆಂಗಳೂರು4 hours ago

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Unemployment Rate
ಪ್ರಮುಖ ಸುದ್ದಿ4 hours ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Lok Sabha Election
ಪ್ರಮುಖ ಸುದ್ದಿ5 hours ago

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌