modi in karnataka to inaugurate incomplete project accused congress Modi in Karnataka: ಬೈಯಪ್ಪನಹಳ್ಳಿ-ಕೆ.ಆರ್‌. ಪುರ ಕಾಮಗಾರಿ ಮುಗಿದಿಲ್ಲ: ಮೋದಿಯಿಂದ ಅಪೂರ್ಣ ಮೆಟ್ರೊ ಕಾಮಗಾರಿ ಉದ್ಘಾಟನೆ ಎಂದ ಕಾಂಗ್ರೆಸ್‌ - Vistara News

ಕರ್ನಾಟಕ

Modi in Karnataka: ಬೈಯಪ್ಪನಹಳ್ಳಿ-ಕೆ.ಆರ್‌. ಪುರ ಕಾಮಗಾರಿ ಮುಗಿದಿಲ್ಲ: ಮೋದಿಯಿಂದ ಅಪೂರ್ಣ ಮೆಟ್ರೊ ಕಾಮಗಾರಿ ಉದ್ಘಾಟನೆ ಎಂದ ಕಾಂಗ್ರೆಸ್‌

ಮಾರ್ಚ್ 12ರಂದು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಮಾಡಿದರು, ಆದರೆ ಸರ್ವಿಸ್‌ ರಸ್ತೆಗಳನ್ನು ನಿರ್ಮಾಣ ಮಾಡಿಲ್ಲ. ಅಂಡರ್ ಪಾಸ್ ಸರಿಯಾಗಿ ನಿರ್ಮಿಸಿಲ್ಲ ಎಂದು ಕೆಪಿಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಹೇಳಿದ್ದಾರೆ.

VISTARANEWS.COM


on

modi in karnataka to inaugurate incomplete project accused congress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಾರ್ಚ್‌ 25 ರಂದು ಬೆಂಗಳೂರಿನಲ್ಲಿ ಕೆ.ಆರ್.‌ ಪುರದಿಂದ ವೈಟ್‌ಫೀಲ್ಡ್‌ವರೆಗಿನ ಮೆಟ್ರೊ ರೈಲು ಮಾರ್ಗವನ್ನು ಉದ್ಘಾಟಿಸುವ ಕಾರ್ಯಕ್ರಮವಿದೆ. ಆದರೆ ಈ ಮಾರ್ಗ ಇನ್ನೂ ಅಪೂರ್ಣವಾಗಿದೆ ಹಾಗೂ ಹಿಂದಿನ ನಿಲ್ದಾಣದೊಂದಿಗೆ ಸಂಪರ್ಕವೇ ಸಾಧ್ಯವಾಗಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದ್ದಾರೆ. ನಮ್ಮ ಮೆಟ್ರೋದಲ್ಲಿ ಸೇಫ್ಟೀ ಇಲ್ಲ. ಪ್ರತಿಬಾರಿ ಮಿಸ್ಟೇಕ್ ಆಗ್ತಾನೇ ಇವೆ. ಹಲವು ಕಾಮಗಾರಿಗಳನ್ನ ಉದ್ಘಾಟಿಸ್ತಿದ್ದಾರೆ, ಅರ್ಧಂಬರ್ಧ ಕಾಮಗಾರಿ ಉದ್ಘಾಟಿಸುತ್ತಿದ್ದಾರೆ. ನವೆಂಬರ್ 22ರಂದು ಬೆಂಗಳೂರು ವಿಮಾನ ನಿಲ್ದಾಣ ಎರಡನೇ ರನ್‌ವೇ ಉದ್ಘಾಟನೆ ಮಾಡಿದರು. ಫೆಬ್ರವರಿಯಲ್ಲಿ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ಮಾಡಿದರು, ಇಲ್ಲಿಯವರೆಗೆ ವಿಮಾನ ಹಾರಾಟವಿಲ್ಲ.

ಮಾರ್ಚ್ 12ರಂದು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಮಾಡಿದರು, ಆದರೆ ಸರ್ವಿಸ್‌ ರಸ್ತೆಗಳನ್ನು ನಿರ್ಮಾಣ ಮಾಡಿಲ್ಲ. ಅಂಡರ್ ಪಾಸ್ ಸರಿಯಾಗಿ ನಿರ್ಮಿಸಿಲ್ಲ. ಅರ್ಧಂಬರ್ಧ ಕಾಮಗಾರಿಗಳನ್ನ ಉದ್ಘಾಟಿಸ್ತಿದ್ದಾರೆ. ಚುನಾವಣೆಗಾಗಿ ತರಾತುರಿಯಲ್ಲಿ ಮಾಡ್ತಿದ್ದಾರೆ.

ಈಗ ಮೆಟ್ರೋ ಲೈನ್ ಉದ್ಘಾಟನೆಗೆ ಬರ್ತಿದ್ದಾರೆ. ಬೈಯಪ್ಪನಹಳ್ಳಿಯಿಂದ ಕೆ.ಆರ್.ಪುರಂ ಲೈನ್ ಕೆಲಸ ಇನ್ನೂ ನಡೆದಿದೆ, ಸಂಪೂರ್ಣ ಆಗಿಲ್ಲ. ಸಂಪೂರ್ಣಗೊಳ್ಳಲು ಇನ್ನೂ 6 ತಿಂಗಳ ಸಮಯಾವಕಾಶ ಬೇಕಿದೆ. ಆದರೆ ಕೆ.ಆರ್. ಪುರದಿಂದ ವೈಟ್ ಫೀಲ್ಡ್ ಮೆಟ್ರೋಗೆ ಉದ್ಘಾಟನೆಗೆ ಮುಂದಾಗಿದ್ದಾರೆ.

ಸಾರ್ವಜನಿಕ ರಕ್ಷಣೆ ಮುಖ್ಯ ಅಲ್ಲವೇ? ಒಂದು ಟ್ರೈನ್ ಹೋದ ಮೇಲೆ ಇನ್ನೊಂದು ಟ್ರೈನ್ ಹೋಗಬೇಕು ಈಗಿನ ಸ್ಥಿತಿಯಲ್ಲಿ. ಯಾಕೆ ನೀವು ಕಾಮಗಾರಿ ಮುಗಿಯದ ಯೋಜನೆ ಉದ್ಘಾಟನೆ ಮಾಡ್ತಾ ಇದ್ದೀರಾ? ಟಾರ್ಗೆಟ್ ರೀಚ್ ಪರ್ಮಿಷನ್ ಸ್ವೀಡ್ ಗೆ ಹೊಂದಾಣಿಕೆ ಆಗಿಲ್ಲ. ನೀವು ಯಾಕೆ ಉದ್ಘಾಟನೆ ಮಾಡ್ತಾ ಇದ್ದೀರಾ ಪ್ರಧಾನಿ ಮೋದಿ? ಎಂದು ಪ್ರಶ್ನಿಸಿದರು.

ಪ್ರಚಾರದ ಗಿಮಿಕ್ ಗಾಗಿ ಮೋದಿ ಬಂದು ಉದ್ಘಾಟನೆ ಮಾಡಿ ಹೋಗ್ತಿದ್ದಾರೆ ಅಷ್ಟೆ. ಈಗ ಉದ್ಘಾಟನೆಯಾಗವುವ ಲೈನ್ ಇದು ಎಲ್ಲಿಂದ ಎಲ್ಲಿಗೆ ಎಂಬುದು ತಿಳಿದಿಲ್ಲ. ಬೈಯಪ್ಪನಹಳ್ಳಿವರೆಗೆ ಮೆಟ್ರೊದಲ್ಲಿ ಬಂದು, ಅಲ್ಲಿ ಇಳಿದು ಬಿಎಂಟಿಸಿ ಬಸ್‌ ಹತ್ತಿ ಕೆ.ಆರ್‌. ಪುರದವರೆಗೆ ತೆರಳಬೇಕು, ಅಲ್ಲಿ ಮತ್ತೆ ಮೆಟ್ರೊ ಹತ್ತಿ ವೈಟ್‌ಫೀಲ್ಡ್‌ಗೆ ಹೋಗಬೇಕ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Yuva Kranti: ರಾಜ್ಯಕ್ಕೆ ಬರುವ ಮೋದಿ ಕೇವಲ ಭಾವನಾತ್ಮಕ ಮಾತಾಡುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Jai Shree Ram slogan: ಬೆಂಗಳೂರಿನಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಸಿದ್ದರಾಮಯ್ಯ, ಡಿಕೆಶಿ: ಅಶೋಕ್‌ ಆರೋಪ

Jai Shree Ram slogan: ರಾತ್ರಿ ಘಟನೆಗೆ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಓಲೈಕೆ ರಾಜಕಾರಣವನ್ನು ಮಾಡುತ್ತಿದ್ದಾರೆ. ವಿಧಾನಸೌಧಕ್ಕೆ ಬಂದು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗುತ್ತಾರೆ. ಈಗ ರಾಮ ಜಪ ಮಾಡುವವರನ್ನು ತಡೆದು, ಹಲ್ಲೆ ನಡೆಸಿ, ಅಲ್ಲಾಹು ಅಕ್ಬರ್ ಅಂತ ಕೂಗುವಂತೆ ಒತ್ತಾಯ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ. ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿದ್ದಾರೆ ಎಂದು ಆರ್‌. ಅಶೋಕ್‌ ಕಿಡಿಕಾರಿದ್ದಾರೆ.

VISTARANEWS.COM


on

Jai Shree Ram slogan Siddaramaiah and DK Shivakumar are nurturing terrorists in Bengaluru accuses Ashok
Koo

ಬೆಂಗಳೂರು: ಇಲ್ಲಿನ ವಿದ್ಯಾರಣ್ಯಪುರದ ಚಿಕ್ಕ ಬೆಟ್ಟಳ್ಳಿ ಮಸೀದಿ ಬಳಿ ಬುಧವಾರ ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ (Jai Shree Ram slogan) ಕಾರಿನಲ್ಲಿ ಹೋಗುತ್ತಿದ್ದ ಹಿಂದು ಯುವಕರ ಮೇಲೆ ಮುಸ್ಲಿಂ ಯುವಕರು ನಡೆಸಿರುವ ಹಲ್ಲೆ ಪ್ರಕರಣಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ (R Ashok) ಪ್ರತಿಕ್ರಿಯೆ ನೀಡಿ, ಈ ಘಟನೆಗೆ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ಓಲೈಕೆ ರಾಜಕಾರಣವೇ ಕಾರಣ ಎಂದು ಕಿಡಿಕಾರಿದ್ದಾರೆ.

ಬುಧವಾರ ಶ್ರೀರಾಮನವಮಿ (Ram Navami) ಇದ್ದಿದ್ದರಿಂದ ಜೈ ಶ್ರೀರಾಮ್ ಎಂದು ಕೂಗುತ್ತಾ ಹಿಂದು ಯುವಕರು ಕಾರಿನಲ್ಲಿ ಹೋಗುತ್ತಿದ್ದಾಗ, ಅವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರ ತಂಡ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೆ, ಹಲ್ಲೆಯನ್ನೂ ನಡೆಸಿತ್ತು. ಇದಕ್ಕೀಗ ರಾಜಕೀಯ ತಿರುವು ಸಿಕ್ಕಿದ್ದು, ಇಂತಹ ಘಟನೆಗೆ ಕಾಂಗ್ರೆಸ್‌ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಅಶೋಕ್‌ ಗುಡುಗಿದ್ದಾರೆ.

ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿರುವ ಆರ್. ಅಶೋಕ್, ರಾತ್ರಿ ಘಟನೆಗೆ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಓಲೈಕೆ ರಾಜಕಾರಣವನ್ನು ಮಾಡುತ್ತಿದ್ದಾರೆ. ವಿಧಾನಸೌಧಕ್ಕೆ ಬಂದು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗುತ್ತಾರೆ. ಈಗ ರಾಮ ಜಪ ಮಾಡುವವರನ್ನು ತಡೆದು, ಹಲ್ಲೆ ನಡೆಸಿ, ಅಲ್ಲಾಹು ಅಕ್ಬರ್ ಅಂತ ಕೂಗುವಂತೆ ಒತ್ತಾಯ ಮಾಡುತ್ತಾರೆ. ಸಿಎಂ ಸಿದ್ದರಾಮಯ್ಯ. ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರಿನಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿದ್ದಾರೆ. ಇಂಥವರನ್ನು ಡಿಕೆಶಿ “ದೆ ಆರ್ ಮೈ ಬ್ರದರ್ಸ್” ಎಂದು ಹೇಳಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಕುಕ್ಕರ್‌ನಲ್ಲಿ ಬಾಂಬ್ ಇಟ್ಟವರು ಇವರಿಗೆ ಬ್ರದರ್ಸ್ ಆಗುತ್ತಾರೆ. ಈಗ ಯಾಕೆ ಮೌನವಾಗಿದ್ದೀರಿ? ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಏನೋ ಹೇಳಿಕೆ ಕೊಟ್ಟರು ಎಂದು ಅವರ ಮೇಲೆ ಬಿದ್ದಿರಿ. ರಾತ್ರಿಯಿಂದ ಯಾಕೆ ಮೌನವಾಗಿದ್ದೀರಿ? ಮಾತನಾಡಿ ಡಿಕೆಶಿಯವರೇ? ಪೊಲೀಸರಿಗೆ ಧಮ್ಕಿ ಹಾಕ್ತೀರಾ? ಇಂಥ ಘಟನೆ ನಡೆದರೂ ಕ್ರಮ ಕೈಗೊಳ್ಳಬೇಡಿ ಅಂತ ಹೇಳುತ್ತೀರಾ? ಇದೇ ಕಾರಣಕ್ಕಾಗಿಯೇ ಆ ಸಮುದಾಯದವರು ದಿನ ಬೆಳಗಾದರೆ ಇಂಥದ್ದೊಂದು ಕೃತ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿ ಬಹುಸಂಖ್ಯಾತರನ್ನು ಕಡೆಗಣಿಸುತ್ತಿದ್ದೀರಿ. ಬಹುಸಂಖ್ಯಾತರು ನಿಮಗೆ ಬುದ್ಧಿ ಕಲಿಸುತ್ತಾರೆ. ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಸೋಲಿಸಿ, ನಿಮಗೆ ಪಾಠ ಕಲಿಸುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಪೊಲೀಸರಿಗೆ ರಾಜ್ಯದಲ್ಲಿ ಸ್ವತಂತ್ರವಾಗಿ ನಿರ್ವಹಣೆ ಮಾಡಲು ಬಿಡುತ್ತಿಲ್ಲ. ಡಿ.ಕೆ. ಶಿವಕುಮಾರ್‌ ಅವರು ತಮ್ಮ ಬ್ರದರ್ಸ್‌ ರಕ್ಷಣೆಗಾಗಿ ನಿಂತಿದ್ದಾರೆ ಎಂದು ಅಶೋಕ್‌ ಕಿಡಿಕಾರಿದರು.

ಕಾರು ಅಡ್ಡಗಟ್ಟಿ ಮುಸ್ಲಿಂ ಯುವಕರ ಪುಂಡಾಟ!

ಶ್ರೀ ರಾಮನವಮಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಹಿಂದು ಯುವಕರು ತೆರಳುತ್ತಿದ್ದಾಗ, ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಎರಡು ಬೈಕ್‌ಗಳಲ್ಲಿ ಬಂದ ಮುಸ್ಲಿಂ ಯುವಕರು, “ಜೈ ಶ್ರೀರಾಮ್‌ ಹೇಳಬಾರದು, ಅಲ್ಲಾಹ್ ಅಂತ ಹೇಳಬೇಕು” ಎಂದು ಹಿಂದು ಯುವಕರ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬುಧವಾರವೇ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬೈಕ್‌ನಲ್ಲಿ ಬಂದ ಯುವಕರು, ಜೈ ಶ್ರೀ ರಾಮ್ ಇಲ್ಲಾ… ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿದ್ದಾರೆ. ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇದೇ ವೇಳೆ ನಾವು ನಿಮ್ಮ ಹಬ್ಬದಲ್ಲಿ ಹೀಗೆ ಮಾಡುತ್ತೇವಾ ಎಂದು ಹಿಂದು ಯುವಕರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ.

ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲು

ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ನೇಹಿತರಾದ ವಿನಾಯಕ ಮತ್ತು ರಾಹುಲ್ ಜತೆ ಚಿಕ್ಕಬೆಟ್ಟಹಳ್ಳಿ ರಸ್ತೆಯಲ್ಲಿ ಮಧ್ಯಾಹ್ನ ಕಾರಿನಲ್ಲಿ ಹೋಗುತ್ತಿದ್ದೆ. ಕಾರಿನ ಮುಂದೆ ಶ್ರೀರಾಮನ ಧ್ವಜ ಕಟ್ಟಿದ್ದನ್ನು ನೋಡಿದ ಇಬ್ಬರು ಮುಸ್ಲಿಂ ಯುವಕರು, ನಮ್ಮ ಬಳಿ ಬಂದು, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ಅಲ್ಲಾ ಹು ಅಕ್ಬರ್” ಎಂದು ಕೂಗಬೇಕು ಎಂದು ಒತ್ತಾಯಿಸಿದರು. ನಾವು ಹಾಗೆ ಕೂಗುವುದಿಲ್ಲವೆಂದು ಹೇಳಿದಾಗ, ನಮ್ಮ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದು, ರಾಹುಲ್ ತಲೆಗೆ ಪೆಟ್ಟು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಹೇಗೋ ನಾವು ಅಲ್ಲಿಂದ ತಪ್ಪಿಸಿಕೊಂಡು ಬಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ನಾಲ್ವರ ಬಂಧನ

ಹಲ್ಲೆ ಪ್ರಕರಣಕ್ಕೆ (Assault Case) ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು (Culprits) ಪೊಲೀಸರು ಬಂಧಿಸಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಿಂದು ಯುವಕರ (Hindu youth) ಮೇಲೆ ಬುಧವಾರ ಸಂಜೆ ಹಲ್ಲೆ ಮಾಡಿದ್ದವರ ಪೈಕಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಫರ್ಮಾನ್, ಎ2 ಸಮೀರ್ ಹಾಗೂ ಮತ್ತಿಬ್ಬರನ್ನು ಬಂಧಿಸಲಾಗಿದೆ. ಒಟ್ಟು ನಾಲ್ವರು ಆರೋಪಿಗಳ ಪೈಕಿ ಇಬ್ಬರು ಅಪ್ರಾಪ್ತರಾಗಿದ್ದಾರೆ. ಸದ್ಯ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

“ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರೋದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್. ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ” ಎಂದು ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್ ಹೇಳಿಕೆ ನೀಡಿದ್ದಾರೆ.

“ಆರೋಪಿಗಳು ಬೈಕ್‌ನಲ್ಲಿ ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ಸು ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಗಾಂಜಾ ನಶೆಯಲ್ಲಿ ಹಲ್ಲೆ ಮಾಡಿದ್ರಾ ಯುವಕರು?

ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಯುವಕರು ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಯುವಕರು ಗಾಂಜಾ ಸೇವನೆ ಮಾಡಿದ್ದರೇ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕಾಗಿ ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ಮಾಡಿಸಲು ಪೊಲೀಸರು ಮುಂದಾಗಿದ್ದಾರೆ.

Continue Reading

ಚಿತ್ರದುರ್ಗ

Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

Self Harming : ಮದುವೆಯಾಗಿ 5 ವರ್ಷವಾದರೂ ಮಕ್ಕಳಾಗಿಲ್ಲ ಎಂಬ ಕೊರಗಿನಲ್ಲಿಯೇ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಕುಟುಂಬಸ್ಥರು ಮಕ್ಕಳಾಗಿಲ್ಲ ಎಂದು ಮಹಿಳೆಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ನೊಂದು ಮಹಿಳೆ ಶೌಚಾಲಯದಲ್ಲಿ ವೈರ್‌ನಿಂದ ಕತ್ತು ಬಿಗಿದುಕೊಂಡು ಮೃತಪಟ್ಟಿದ್ದಾರೆ.

VISTARANEWS.COM


on

By

Self Harming In chitradurga
Koo

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಆಶಾ (26) ಮೃತ ದುರ್ದೈವಿ.

ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ ನೀಡುತ್ತಿದ್ದರು.

ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಶಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಕೇಸರಿ ಬಟ್ಟೆ ಧರಿಸಿದ್ದಕ್ಕೆ ಶಾಲೆಯಲ್ಲಿ ಆಕ್ಷೇಪ; ತೆರೆಸಾ ಶಾಲೆ ಮೇಲೆ ಹಿಂದು ಕಾರ್ಯಕರ್ತರ ದಾಳಿ!

ಬ್ರೇಕಪ್‌ ಬಳಿಕ ಹುಡುಗ ಆತ್ಮಹತ್ಯೆ ಮಾಡಿಕೊಂಡರೆ ಪ್ರಿಯತಮೆ ಹೊಣೆ ಅಲ್ಲ; ಕೋರ್ಟ್‌ ಆದೇಶ

ನವದೆಹಲಿ: ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದೋ, ಮನಸಾರೆ ಇಷ್ಟಪಟ್ಟವಳು ಇನ್ನೊಬ್ಬನ ಪಕ್ಕದಲ್ಲಿ ಹಸೆಮಣೆ ಮೇಲೆ ಕೂತುಕೊಳ್ಳುತ್ತಾಳೆ ಎಂಬುದನ್ನು ಕಲ್ಪನೆ ಮಾಡಿಕೊಳ್ಳಲು ಆಗದೆ ಯುವಕರು ಆತ್ಮಹತ್ಯೆಗೆ (Suicide) ಶರಣಾಗುತ್ತಾರೆ. ಬ್ರೇಕಪ್‌ (Love Break Up) ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವ ಹೆಣ್ಣುಮಕ್ಕಳೂ ಇದ್ದಾರೆ. ಆದರೆ, ಬ್ರೇಕಪ್‌ ಬಳಿಕ (Love Failure) ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಯುವತಿ ಅಥವಾ ಪ್ರಿಯತಮೆಯು ಹೊಣೆ ಅಲ್ಲ ಎಂದು ದೆಹಲಿ ಹೈಕೋರ್ಟ್‌ (Delhi High Court) ಆದೇಶ ಹೊರಡಿಸಿದೆ.

“ಲವ್‌ ಫೇಲ್ಯೂರ್‌ ಆಯಿತು ಎಂದು ಲವ್ವರ್‌ ಆತ್ಮಹತ್ಯೆ ಮಾಡಿಕೊಂಡರೆ ಮಹಿಳೆ, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂದು ವಿದ್ಯಾರ್ಥಿಯು ನೇಣಿಗೆ ಕೊರಳೊಡ್ಡಿದರೆ ಮೌಲ್ಯಮಾಪಕ, ಕೇಸ್‌ ವಜಾ ಆಯಿತು ಎಂದು ಕ್ಲೈಂಟ್‌ ಆತ್ಮಹತ್ಯೆಗೆ ಶರಣಾದರೆ ವಕೀಲ ಹೊಣೆಯಾಗುವುದಿಲ್ಲ. ದುರ್ಬಲ ಮನಸ್ಥಿತಿಯ ವ್ಯಕ್ತಿಯು ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳಿಗೆ ಕೈ ಹಾಕಿದರೆ, ಇನ್ನೊಬ್ಬ ವ್ಯಕ್ತಿಯು ಹೊಣೆಯಾಗಲು ಸಾಧ್ಯವಾಗುವುದಿಲ್ಲ ” ಎಂಬುದಾಗಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಇಬ್ಬರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ವೇಳೆ ನ್ಯಾಯಮೂರ್ತಿ ಅಮಿತ್‌ ಮಹಾಜನ್‌ ಅವರು ಸ್ಪಷ್ಟಪಡಿಸಿದರು.

Court Order

ಏನಿದು ಪ್ರಕರಣ?

ದೆಹಲಿಯಲ್ಲಿ 2023ರಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಆತನ ಪ್ರೇಯಸಿಯೇ ಕಾರಣವಾಗಿದೆ. ಯುವತಿಯ ಮತ್ತೊಬ್ಬ ಗೆಳೆಯನು ಕೂಡ ನನ್ನ ಮಗನ ಆತ್ಮಹತ್ಯೆಗೆ ಜವಾಬ್ದಾರರು ಎಂಬುದಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕನ ತಂದೆಯು ಪ್ರಕರಣ ದಾಖಲಿಸಿದ್ದಾರೆ. ಇದರಿಂದಾಗಿ ಯುವತಿ ಹಾಗೂ ಆಕೆಯ ಗೆಳೆಯನು ಬಂಧನದ ಭೀತಿಯಲ್ಲಿದ್ದರು. ಹಾಗಾಗಿ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈಗ ನ್ಯಾಯಾಲಯವು ಇಬ್ಬರಿಗೂ ನಿರೀಕ್ಷಣಾ ಮಂಜೂರು ಮಾಡಿದೆ.

“ನನ್ನ ಮಗ ಹಾಗೂ ಯುವತಿಯು ಪ್ರೀತಿಸುತ್ತಿದ್ದರು. ಇಬ್ಬರ ಮಧ್ಯೆ ದೈಹಿಕ ಸಂಬಂಧವೂ ಇತ್ತು. ಆದರೆ, ಬ್ರೇಕಪ್‌ ಬಳಿಕ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಮಗ ಬರೆದ ಡೆತ್‌ನೋಟ್‌ನಲ್ಲಿ ಯುವತಿ ಹಾಗೂ ಆಕೆಯ ಗೆಳೆಯನ ಹೆಸರಿದೆ. ಇವರಿಬ್ಬರಿಂದಾಗಿಯೇ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂಬುದಾಗಿ ಯುವಕನ ತಂದೆಯು ದೂರಿನಲ್ಲಿ ಪ್ರಸ್ತಾಪಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಾಲಯವು, “ಡೆತ್‌ನೋಟ್‌ನಲ್ಲಿ ಇಬ್ಬರ ಹೆಸರಿದೆ ನಿಜ. ಆದರೆ, ಅವರಿಬ್ಬರೂ ಪ್ರಚೋದನೆ ನೀಡಿದ, ಬೆದರಿಕೆ ಹಾಕಿದ ಕುರಿತು ಪ್ರಸ್ತಾಪವಿಲ್ಲ. ದುರ್ಬಲ ಮನಸ್ಥಿತಿಯವರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯ” ಎಂದು ಸ್ಪಷ್ಟಪಡಿಸಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಬಂಗಾರ ಕೊಳ್ಳುವವರಿಗೆ ತುಸು ರಿಲೀಫ್‌, ಬಹುದಿನಗಳ ನಂತರ ಬೆಲೆ ಇಳಿಕೆ; ಇಂದಿನ ದರ ಹೀಗಿದೆ

Gold Rate Today: ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,765ಕ್ಕೆ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,380 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,040 ಆಗಿದೆ.

VISTARANEWS.COM


on

gold rate today 18
Koo

ಬೆಂಗಳೂರು: ಗುರುವಾರ ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹30 ಮತ್ತು ₹33 ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ ಏರುತ್ತಲೇ ಇದೆ. ಮಂಗಳವಾರ 22 ಕ್ಯಾರಟ್‌ ಹಾಗೂ 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ (gold price today) ಕ್ರಮವಾಗಿ ₹90 ಮತ್ತು ₹98 ಹೆಚ್ಚಳವಾಗಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,765ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,120 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,650 ಮತ್ತು ₹6,76,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,380 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,040 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,800 ಮತ್ತು ₹7,38,000 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹85.75, ಎಂಟು ಗ್ರಾಂ ₹686 ಮತ್ತು 10 ಗ್ರಾಂ ₹857.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,575 ಮತ್ತು 1 ಕಿಲೋಗ್ರಾಂಗೆ ₹85,750 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,80073,950
ಮುಂಬಯಿ67,650 73,800
ಬೆಂಗಳೂರು67,650 73,800
ಚೆನ್ನೈ68,35074,560

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

gold purchase

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ₹74,130 ತಲುಪಿ ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನದ ಬೆಲೆ; ಇಂದಿನ ದರ ಹೀಗಿದೆ

Continue Reading

ಬೆಂಗಳೂರು

Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

Summer Special Trains: ಬೇಸಿಗೆ ರಜೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯು ಬೆಂಗಳೂರು ಮತ್ತು ಮೈಸೂರಿನಿಂದ ಬೇರೆ ರಾಜ್ಯಗಳಿಗೆ ವಿಶೇಷ ರೈಲುಗಳ ಓಡಾಟ ಇರಲಿದೆ. ಯಾವ ನಿಲ್ದಾಣಗಳಿಂದ ಎಷ್ಟು ಗಂಟೆಗೆ ಎಲ್ಲೆಲ್ಲಿಗೆ ರೈಲುಗಳ ಸಂಚಾರ ಇರಲಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

summer special trains
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಶಾಲಾ-ಕಾಲೇಜು ಮುಗಿದಿದ್ದು ಬೇಸಿಗೆ ರಜೆ ಶುರುವಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳುವವರಿಗೆ, ಪ್ರವಾಸಕ್ಕೆ ಹೋಗುವವರಿಗಾಗಿ ನೈರುತ್ಯ ಇಲಾಖೆಯು ವಿಶೇಷ ರೈಲುಗಳನ್ನು (Summer Special Trains) ನಿಯೋಜನೆ ಮಾಡಿದೆ. ಬೆಂಗಳೂರು-ಮೈಸೂರಿನಿಂದ ದಕ್ಷಿಣ ಹಾಗೂ ಉತ್ತರ ಭಾರತದ ರಾಜ್ಯಗಳಿಗೆ ರೈಲುಗಳ ಓಡಾಟ ಇರಲಿದೆ. ಜತೆಗೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನಕ್ಕಾಗಿ ತಮ್ಮ ಊರುಗಳಿಗೆ ತೆರಳವು ಕಾರಣಕ್ಕೂ ವಿಶೇಷ ರೈಲು ಇರಲಿದೆ.

ಯಶವಂತಪುರದಿಂದ ಚೆನ್ನೈ ನಡುವೆ ವಿಶೇಷ ರೈಲುಗಳ ಸಂಚಾರ

ನೈರುತ್ಯ ರೈಲ್ವೆಯು ಯಶವಂತಪುರ ಹಾಗೂ ಡಾ.ಎಂ.ಜಿ.ಆರ್.ಚೆನ್ನೈ ಸೆಂಟ್ರಲ್ ನಡುವೆ 1 ಟ್ರಿಪ್ ಮತ್ತು ಎಸ್ಎಂವಿಟಿ ಬೆಂಗಳೂರು-ಹೌರಾ ನಿಲ್ದಾಣಗಳ ನಡುವೆ 6 ಟ್ರಿಪ್‌ಗಳಿಗೆ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಆ ಪ್ರಕಾರ ರೈಲು ಸಂಖ್ಯೆ 06533/06534 ಯಶವಂತಪುರ-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್-ಯಶವಂತಪುರ ಎಕ್ಸ್‌ಪ್ರೆಸ್‌ ವಿಶೇಷ (1 ಟ್ರಿಪ್) ರೈಲು ಏಪ್ರಿಲ್ 18 ರಂದು ಯಶವಂತಪುರದಿಂದ ರಾತ್ರಿ 10:45ಕ್ಕೆ ಹೊರಟು, ಮರುದಿನ ಬೆಳಗ್ಗೆ 04:55 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ. ನಂತರ ರೈಲು ಸಂಖ್ಯೆ 06534 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ಏಪ್ರಿಲ್ 19ರಂದು ಬೆಳಗ್ಗೆ 06:45ಕ್ಕೆ ಹೊರಟು, ಅದೇ ದಿನ ಮಧ್ಯಾಹ್ನ 12.30ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ ಜಂಕ್ಷನ್, ಜೋಲಾರ್ಪೆಟ್ಟೈ ಜಂಕ್ಷನ್, ಅರಕ್ಕೋಣಂ ಜಂಕ್ಷನ್ ಮತ್ತು ಪೆರಂಬೂರ್ ನಿಲ್ದಾಣಗಳಲ್ಲಿ ಎರಡೂ ದಿಕ್ಕುಗಳಲ್ಲಿ ನಿಲ್ಲಲಿದೆ. ಈ ವಿಶೇಷ ರೈಲುಗಳು ಎಸಿ ಫಸ್ಟ್ ಕ್ಲಾಸ್ -1, ಎಸಿ -2 ಶ್ರೇಣಿ -2, ಎಸಿ -3 ಶ್ರೇಣಿ -6, ಸ್ಲೀಪರ್ ಕ್ಲಾಸ್ -8, ಜನರಲ್ ಸೆಕೆಂಡ್ ಕ್ಲಾಸ್ -2 ಮತ್ತು ಬ್ರೇಕ್, ಲಗೇಜ್ ಕಮ್ ಜನರೇಟರ್ ಕಾರ್ -2 ಸೇರಿದಂತೆ ಒಟ್ಟು 21 ಬೋಗಿಗಳನ್ನು ಒಳಗೊಂಡಿರುತ್ತದೆ.

ಎಸ್ಎಂವಿಟಿ ಬೆಂಗಳೂರು-ಹೌರಾ-ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು (6 ಟ್ರಪ್‌ಗಳು)

ರೈಲು ಸಂಖ್ಯೆ 06585 ಎಸ್ಎಂವಿಟಿ ಬೆಂಗಳೂರು-ಹೌರಾ ಸಾಪ್ತಾಹಿಕ ವಿಶೇಷ ರೈಲು ಏಪ್ರಿಲ್ 19, 26 ಮತ್ತು ಮೇ 3, 10, 17 ಮತ್ತು 24, ರಂದು 00:30 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಡಲಿದೆ. ಈ ರೈಲು ಮರುದಿನ 10:00 ಗಂಟೆಗೆ ಹೌರಾವನ್ನು ತಲುಪಲಿದೆ. ರೈಲು ಸಂಖ್ಯೆ 06586 ಹೌರಾದಿಂದ ಏಪ್ರಿಲ್ 20, 27, ಮೇ 4, 11, 18 ಮತ್ತು 25 ರಂದು ಮಧ್ಯಾಹ್ನ 1:05 ಗಂಟೆಗೆ ಹೊರಡಲಿದೆ. ಈ ರೈಲು ಮರುದಿನ ರಾತ್ರಿ 8:10 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ಪೆಟ್ಟೈ, ಕಟಪಾಡಿ, ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊಟ್ಟವಲಸ, ವಿಜಯನಗರಂ, ಶ್ರೀಕಾಕುಳಂ ರಸ್ತೆ, ಪಲಾಸ, ಬ್ರಹ್ಮಪುರ, ಖುರ್ದಾ ರಸ್ತೆ, ಭುವನೇಶ್ವರ, ಕಟಕ್ ಜಂಕ್ಷನ್, ಭದ್ರಾಕ್, ಬಾಲೇಶ್ವರ ಮತ್ತು ಖರಗ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಇದನ್ನೂ ಓದಿ: Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಪರ ಪ್ರಚಾರಕ್ಕೆ ಬಂದ ದರ್ಶನ್‌; ಯಾಕೆ ಸುಮಲತಾ ಸೈಲೆಂಟ್?

ಚೆನ್ನೈ-ವೈಟ್‌ಫೀಲ್ಡ್ ನಡುವೆ ವಿಶೇಷ ರೈಲುಗಳ ಓಡಾಟ

ತಮಿಳುನಾಡು ಚುನಾವಣೆಯ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಹಿನ್ನೆಲೆಯಲ್ಲೂ ಬೇಡಿಕೆಗೆ ಅನುಗುಣವಾಗಿ ರೈಲು ಸೇವೆಯನ್ನು ಒದಗಿಸಲಾಗುತ್ತಿದೆ. ರೈಲು ಸಂಖ್ಯೆ 06005 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ವೈಟ್‌ಫೀಲ್ಡ್‌ ವಿಶೇಷ ರೈಲು ಏಪ್ರಿಲ್ 18 ಮತ್ತು 20ರಂದು ಬೆಳಗ್ಗೆ 05:35ಕ್ಕೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಹೊರಡಲಿದೆ. ಈ ರೈಲು ಅದೇ ದಿನ ಮಧ್ಯಾಹ್ನ 12 ಗಂಟೆಗೆ ವೈಟ್ ಫೀಲ್ಡ್ ತಲುಪಲಿದೆ. ಈ ರೈಲು ಅರಕ್ಕೋಣಂ ಜಂಕ್ಷನ್, ವಾಲಾಜಾ ರಸ್ತೆ, ಕಟಪಾಡಿ ಜಂಕ್ಷನ್, ಜೋಲಾರ್ಪೆಟ್ಟೈ ಜಂಕ್ಷನ್, ಕುಪ್ಪಂ ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಹಿಂದಿರುಗುವಾಗ ರೈಲು ಸಂಖ್ಯೆ 06006 ವೈಟ್‌ಫೀಲ್ಡ್‌-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್‌ ಏಪ್ರಿಲ್ 18 ಮತ್ತು 20 ರಂದು ಮಧ್ಯಾಹ್ನ 1ಗಂಟೆಗೆ ವೈಟ್‌ಫೀಲ್ಡ್‌ನಿಂದ ಹೊರಡಲಿದೆ. ಈ ರೈಲು ಅದೇ ದಿನ 07:00 ಗಂಟೆಗೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ. ಈ ರೈಲು ಬಂಗಾರಪೇಟೆ, ಕುಪ್ಪಂ, ಜೋಲಾರ್ಪೆಟ್ಟೈ ಜಂಕ್ಷನ್, ಕಟಪಾಡಿ ಜಂಕ್ಷನ್, ವಾಲಾಜಾ ರಸ್ತೆ, ಅರಕ್ಕೋಣಂ ಮತ್ತು ಪೆರಂಬೂರ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ವಿಶೇಷ ರೈಲುಗಳು ಎಸಿ ಫಸ್ಟ್ ಕ್ಲಾಸ್-1, ಎಸಿ-2 ಟೈರ್-2, ಎಸಿ-3 ಟೈರ್-6, ಸ್ಲೀಪರ್ ಕ್ಲಾಸ್-7, ಪ್ಯಾಂಟ್ರಿ ಕಾರ್-1, ಜನರಲ್ ಸೆಕೆಂಡ್ ಕ್ಲಾಸ್-3, ಸೆಕೆಂಡ್ ಲಗೇಜ್ ಕಂ ಬ್ರೇಕ್ ವ್ಯಾನ್ಗಳು/ ಅಂಗವಿಕಲ ಬೋಗಿ-1 ಮತ್ತು ಬ್ರೇಕ್, ಲಗೇಜ್ ಮತ್ತು ಜನರೇಟರ್ ಕಾರ್-1 ಸೇರಿದಂತೆ ಒಟ್ಟು 22 ಬೋಗಿಗಳನ್ನು ಒಳಗೊಂಡಿರುತ್ತದೆ

ಎಸ್ಎಂವಿಟಿ ಬೆಂಗಳೂರು ಮತ್ತು ಕಲಬುರಗಿ ನಡುವೆ ಬೇಸಿಗೆ ವಿಶೇಷ ರೈಲು ಸೇವೆ

ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (ಎಸ್‌ಎಂವಿಟಿ) ಮತ್ತು ಕಲಬುರಗಿ ನಡುವೆ 9 ಟ್ರಿಪ್‌ಗಳಿಗೆ ಬೇಸಿಗೆ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಈಗ ಈ ವಿಶೇಷ ರೈಲುಗಳ ಏಳು ಟ್ರಿಪ್‌ಗಳಲ್ಲಿ ದಿನಾಂಕ ಬದಲಾಗಿದೆ.

ರೈಲು ಸಂಖ್ಯೆ 06589 ಏಪ್ರಿಲ್ 21 ರಿಂದ ಮೇ 19ರವರೆಗೆ ಪ್ರತಿ ಭಾನುವಾರ ಮತ್ತು ಮಂಗಳವಾರ ರಾತ್ರಿ 11: 00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 09:05 ಗಂಟೆಗೆ ಕಲಬುರಗಿಯನ್ನು ತಲುಪಲಿದೆ. ರೈಲು ಸಂಖ್ಯೆ 06590 ಏಪ್ರಿಲ್ 22 ರಿಂದ ಮೇ 20 ರವರೆಗೆ ಪ್ರತಿ ಸೋಮವಾರ ಮತ್ತು ಬುಧವಾರ ಸಂಜೆ 05:10 ಗಂಟೆಗೆ ಕಲಬುರಗಿಯಿಂದ ಹೊರಟು ಮರುದಿನ ಬೆಳಗ್ಗೆ 04:15 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಮೈಸೂರಿನಿಂದಲ್ಲೂ ವಿಶೇಷ ರೈಲುಗಳ ಓಡಾಟ

ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮೈಸೂರು-ಮುಜಾಫರ್ಪುರ ನಿಲ್ದಾಣಗಳ ನಡುವೆ ಬೇಸಿಗೆ ವಿಶೇಷ ರೈಲು ಸೇವೆ ನಾಲ್ಕು ಟ್ರಿಪ್‌ಗಳಿಗೆ ಕಾರ್ಯನಿರ್ವಹಿಸಲಿದೆ. ರೈಲು ಸಂಖ್ಯೆ 06221 ಮೈಸೂರು-ಮುಜಾಫರ್ಪುರ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲು ಏಪ್ರಿಲ್ 15, 22, 29 ಮತ್ತು ಮೇ 6 ರಂದು ಬೆಳಗ್ಗೆ 10:30 ಕ್ಕೆ ಮೈಸೂರಿನಿಂದ ಹೊರಟು ಮೂರನೇ ದಿನ ಮಧ್ಯಾಹ್ನ 1:30 ಗಂಟೆಗೆ ಮುಜಾಫರ್ಪುರವನ್ನು ತಲುಪಲಿದೆ.

ರೈಲು ಸಂಖ್ಯೆ 06222 ಏಪ್ರಿಲ್ 18, 25, ಮೇ 2 ಮತ್ತು 9 ರಂದು ಮಧ್ಯಾಹ್ನ 1:00 ಗಂಟೆಗೆ ಮುಜಾಫರ್ಪುರದಿಂದ ಹೊರಟು ಮೂರನೇ ದಿನ 4:40 ಗಂಟೆಗೆ ಮೈಸೂರಿಗೆ ತಲುಪಲಿದೆ. ಈ ವಿಶೇಷ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ಪೆಟ್ಟೈ, ಕಟಪಾಡಿ, ರೇಣಿಗುಂಟ, ಗುಡೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊಟ್ಟವಲಸ, ವಿಜಯನಗರಂ, ಶ್ರೀಕಾಕುಳಂ ರಸ್ತೆ, ಪಲಾಸ, ಬ್ರಹ್ಮಪುರ, ಖುರ್ದಾ ರಸ್ತೆ, ಭುವನೇಶ್ವರ, ಕಟಕ್ ಜಂಕ್ಷನ್, ಭದ್ರಾಕ್, ಬಾಲೇಶ್ವರ್, ಖರಗ್ಪುರ, ಡಂಕುನಿ, ಬೋಲ್ಪುರ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Jai Shree Ram slogan Siddaramaiah and DK Shivakumar are nurturing terrorists in Bengaluru accuses Ashok
ಕರ್ನಾಟಕ17 seconds ago

Jai Shree Ram slogan: ಬೆಂಗಳೂರಿನಲ್ಲಿ ಭಯೋತ್ಪಾದಕರನ್ನು ಬೆಳೆಸುತ್ತಿರುವ ಸಿದ್ದರಾಮಯ್ಯ, ಡಿಕೆಶಿ: ಅಶೋಕ್‌ ಆರೋಪ

IPL 2024
ಕ್ರಿಕೆಟ್4 mins ago

IPL 2024: ಭಾರತ ಕ್ರಿಕೆಟ್​ಗೆ ನಿಮ್ಮ ಕೊಡುಗೆ ಏನು? ಹರ್ಷ ಭೋಗ್ಲೆಗೆ ಪ್ರಶ್ನೆ ಮಾಡಿದ ಮಾಜಿ ಆಟಗಾರ

Self Harming In chitradurga
ಚಿತ್ರದುರ್ಗ26 mins ago

Self Harming : ಮಕ್ಕಳಾಗಿಲ್ಲವೆಂದು ಕಿರುಕುಳ; ಶೌಚಾಲಯದಲ್ಲಿ ನೇಣು ಬಿಗಿದುಕೊಂಡ ಗೃಹಿಣಿ

Saffron Row
ದೇಶ30 mins ago

ಕೇಸರಿ ಬಟ್ಟೆ ಧರಿಸಿದ್ದಕ್ಕೆ ಪ್ರಾಂಶುಪಾಲ ಆಕ್ಷೇಪ; ತೆರೆಸಾ ಶಾಲೆ ಮೇಲೆ ಹಿಂದು ಕಾರ್ಯಕರ್ತರ ದಾಳಿ!

gold rate today 18
ಚಿನ್ನದ ದರ47 mins ago

Gold Rate Today: ಬಂಗಾರ ಕೊಳ್ಳುವವರಿಗೆ ತುಸು ರಿಲೀಫ್‌, ಬಹುದಿನಗಳ ನಂತರ ಬೆಲೆ ಇಳಿಕೆ; ಇಂದಿನ ದರ ಹೀಗಿದೆ

Rohit sharma
ಕ್ರೀಡೆ50 mins ago

Rohit Sharma: ಸ್ಮರಣೀಯ ಪಂದ್ಯವನ್ನಾಡಲು ಸಜ್ಜಾದ ರೋಹಿತ್​ ಶರ್ಮ

summer special trains
ಬೆಂಗಳೂರು59 mins ago

Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

Senior citizen
ಲೈಫ್‌ಸ್ಟೈಲ್1 hour ago

Senior Citizen: 2050ರ ವೇಳೆಗೆ ಭಾರತ ‘ಮುದುಕರ ದೇಶ’ವಾಗಲಿದೆ!

Lok sabha election-2024
Latest1 hour ago

Lok Sabha Election 2024: ಬೇರೆಯವರು ನಮ್ಮ ಮತ ಚಲಾಯಿಸಿದರೆ ಏನು ಮಾಡಬಹುದು?

Darshan and Sumalatha Ambareesh
ಪ್ರಮುಖ ಸುದ್ದಿ1 hour ago

Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಪರ ಪ್ರಚಾರಕ್ಕೆ ಬಂದ ದರ್ಶನ್‌; ಯಾಕೆ ಸುಮಲತಾ ಸೈಲೆಂಟ್?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌