Modi in Karnataka updates 22 km in the forest of Bandipur Modi cant see tiger even after 2 hours Modi in Karnataka: ಬಂಡೀಪುರ ಕಾಡಲ್ಲಿ 22 ಕೀ.ಮೀ. ದೂರ 2 ಗಂಟೆ ಸುತ್ತಿದರೂ ಮೋದಿಗೆ ಕಾಣದ ಹುಲಿ! Vistara News

ಕರ್ನಾಟಕ

Modi in Karnataka: ಬಂಡೀಪುರ ಕಾಡಲ್ಲಿ 22 ಕೀ.ಮೀ. ದೂರ 2 ಗಂಟೆ ಸುತ್ತಿದರೂ ಮೋದಿಗೆ ಕಾಣದ ಹುಲಿ!

Bandipur Tiger Safari: ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ಏಳು ಗಂಟೆಯಿಂದ ಬಂಡೀಪುರದಲ್ಲಿ ಟೈಗರ್‌ ಸಫಾರಿ ನಡೆಸಿದರು. ಸುಮಾರು 22 ಕಿ.ಮೀ. ದೂರದವರೆಗೆ ಕ್ರಮಿಸಿದರೂ ಸಹ ಮೋದಿ ಅವರಿಗೆ ಹುಲಿ ಕಾಣಿಸಿಕೊಳ್ಳಲಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Modi in Karnataka updates 22 km in the forest of Bandipur Modi cant see tiger even after 2 hours
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ಚಾಮರಾಜನಗರ: ಪ್ರಾಜೆಕ್ಟ್‌ ಟೈಗರ್‌ನ (Project Tiger) 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿರುವ ಹುಲಿ ಸಂರಕ್ಷಣೆ ಸಂಬಂಧಿತ ಕಾರ್ಯಕ್ರಮ ಮತ್ತು ಹುಲಿಗಣತಿ ಬಿಡುಗಡೆ ಸೇರಿದಂತೆ ಹಲವು ಕಾರಣಗಳಿಗೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರು ಭಾನುವಾರ ಮುಂಜಾನೆಯಿಂದಲೇ ಸಖತ್‌ ಆ್ಯಕ್ಟಿವ್‌ ಆಗಿದ್ದಾರೆ. ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಸುಮಾರು 22 ಕಿ.ಮೀ. ಟೈಗರ್‌ ಸಫಾರಿಯನ್ನು ಮಾಡಿರುವ ಮೋದಿ ಅವರಿಗೆ ಹುಲಿಯೇ ಕಾಣಿಸಿಕೊಳ್ಳದೆ ನಿರಾಸೆ ಮೂಡಿಸಿದೆ.

Modi in Karnataka updates 22 km in the forest of Bandipur Modi cant see tiger even after 2 hours
ಸಫಾರಿಯಲ್ಲಿ ಮಿಂಚಿದ ಪ್ರಧಾನಿ ಮೋದಿ

ಬಂಡೀಪುರ ಅಭಯಾರಣ್ಯದ ಸೊಬಗಿನ ಜತೆಗೆ ಕಾಲ ಕಳೆದ ಮೋದಿ ಅವರು ವನ್ಯಜೀವಿ, ನೈಸರ್ಗಿಕ ಸೌಂದರ್ಯವನ್ನು ವೀಕ್ಷಿಸಿ ಖುಷಿಪಟ್ಟರು. ಸುದೀರ್ಘ 2 ಗಂಟೆ 15 ನಿಮಿಷ ಟೈಗರ್ ಸಫಾರಿ ನಡೆಸಲಾಗಿದ್ದು, ಕಾಡಿನ ಎಲ್ಲ ಕಡೆ ಮೋದಿ ಸುತ್ತಾಟ ನಡೆಸಿದರೂ ಅವರಿಗೆ ಹುಲಿ ಕಾಣಿಸಿಕೊಳ್ಳದೆ ನಿರಾಸೆ ಮೂಡಿಸಿದೆ. ಸಫಾರಿಯಲ್ಲಿ ಟೈಗರ್ ಸೈಟ್‌ಗಾಗಿ ಮಾಡಿದ ಪ್ರಯತ್ನಗಳೂ ವಿಫಲವಾದವು. ಹೀಗಾಗಿ ಉಳಿದ ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಿ ತೆರಳುವಂತಾಯಿತು. ಒಟ್ಟಾರೆ ಟೈಗರ್‌ ಸಫಾರಿ ಮೂಲಕ ಹುಲಿ ಸಂರಕ್ಷಣೆಯ ಸಂದೇಶವನ್ನು ಸಾರಿದರು.

ಇದನ್ನೂ ಓದಿ: Modi in Karnataka : ಬಂಡಿಪುರದಲ್ಲಿ 20 ಕಿ.ಮೀ ಟೈಗರ್ ಸಫಾರಿ, ತೆಪ್ಪಕಾಡಿನಲ್ಲಿ ಆನೆಗಳಿಗೆ ಕಬ್ಬು ತಿನ್ನಿಸಿದ ಪ್ರಧಾನಿ ಮೋದಿ

Modi in Karnataka updates 22 km in the forest of Bandipur Modi cant see tiger even after 2 hours
ಮೋದಿ ಸಫಾರಿ ವೇಳೆ ಕಾಣಿಸಿಕೊಂಡ ಕಾಡೆಮ್ಮೆಗಳು

ಈ ವೇಳೆ ಆನೆಗಳ ಹಿಂಡು, ಜಿಂಕೆ, ಕಾಡೆಮ್ಮೆ ಸೇರಿದಂತೆ ವಿವಿಧ ಪ್ರಾಣಿ ಪಕ್ಷಿಗಳ ಫೋಟೊವನ್ನು ಸಹ ಕ್ಲಿಕ್ಕಿಸಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Modi in Karnataka updates 22 km in the forest of Bandipur Modi cant see tiger even after 2 hours
ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಕಾಣಿಸಿಕೊಂಡ ಜಿಂಕೆಗಳು

ಸಫಾರಿ ಡ್ರೆಸ್‌ನಲ್ಲಿ ಮೋದಿ

ಅರಣ್ಯ ಇಲಾಖೆಯ ಜೀಪ್‌ನಲ್ಲಿ ಸಫಾರಿ ನಡೆಸಿದ ಮೋದಿ ಅವರು, ಅರಣ್ಯದಲ್ಲಿ ಹೊಂದಿಕೊಳ್ಳುವಂತಹ ಸಫಾರಿ ಡ್ರೆಸ್‌ನಲ್ಲಿ ಮಿಂಚಿದರು. ಸಫಾರಿ ಉಡುಪಿನಲ್ಲಿ ಬಂಡಿಪುರ ಲೋಗೊ ಇರುವುದು ವಿಶೇಷವಾಗಿತ್ತು. ಅಲ್ಲದೆ, ಕಪ್ಪು ಬಣ್ಣದ ಟೋಪಿ ಹಾಕಿಕೊಂಡು, ಕೈಯಲ್ಲಿ ಕ್ಯಾಮೆರಾ ಹಿಡಿದು ಮಿಂಚಿದರು.

Modi in Karnataka updates 22 km in the forest of Bandipur Modi cant see tiger even after 2 hours

ಆನೆ ಕ್ಯಾಂಪ್‌ನಲ್ಲಿ ಸಂಭ್ರಮ

ಬಂಡೀಪುರದಲ್ಲಿ ಟೈಗರ್‌ ಸಫಾರಿ ಮುಗಿಸಿದ ಬಳಿಕ ತಮಿಳುನಾಡಿನ ಮಧುಮಲೈ ಕಾಡಿಗೆ ಭೇಟಿ ನೀಡಿ, ತೆಪ್ಪಕಾಡು ಆನೆ ಕ್ಯಾಂಪ್‌ಗೆ ಭೇಟಿ ನೀಡಿ ಅಲ್ಲಿ ಆನೆಗಳನ್ನು ವೀಕ್ಷಣೆ ಮಾಡಿದರು. ತೆಪ್ಪಕಾಡು ಏಷ್ಯಾದ ಮೊದಲ ಆನೆ ಶಿಬಿರ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಬಂಡೀಪುರದ ಕೆಕ್ಕೆನಹಳ್ಳ ರಸ್ತೆ ಮೂಲಕ ಆನೆ ಕ್ಯಾಂಪ್‌ಗೆ ಭೇಟಿ ನೀಡಿದ ಮೋದಿ ಅವರು, ಕೆಕ್ಕನಹಳ್ಳದಿಂದ 8 ಕಿ.ಮೀ. ಸಫಾರಿ ವಾಹನದಲ್ಲಿಯೇ ರಸ್ತೆ ಮೂಲಕ ಪ್ರಯಾಣಿಸಿದ್ದಾರೆ.

ಪಶ್ಚಿಮ ಘಟ್ಟದ ಬಂಡಿಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಧುಮಲೈ ಟೈಗರ್ ರಿಸರ್ವ್ ವ್ಯಾಪ್ತಿಗೆ ಸೇರಿದ ತೆಪ್ಪಕಾಡು ಶಿಬಿರದಲ್ಲಿ ಆನೆಗಳಿಗೆ ಕಬ್ಬು ತಿನ್ನಿಸಿದರು. ಕರ್ನಾಟಕದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮೋದಿಯವರ ಜತೆಗೆ ರಾಜಕಾರಣಿಗಳ ದಂಡು ಇದ್ದಿರಲಿಲ್ಲ. ಅರಣ್ಯಾಧಿಕಾರಿಗಳ ಜತೆಗೆ ಪ್ರಧಾನಿ ಮೋದಿಯವರು ಬಂಡಿಪುರ ಅರಣ್ಯದಲ್ಲಿ ಭಾನುವಾರ ಬೆಳಗ್ಗೆ ಟೈಗರ್ ಸಫಾರಿ ನಡೆಸಿದರು.

https://twitter.com/narendramodi/status/1644946227598098432?s=20

ಆನೆಗೆ ಕಬ್ಬು ತಿನ್ನಿಸಿ ಮೈದಡವಿದರು

ತೆಪ್ಪಕಾಡು ಆನೆಗಳ ಶಿಬಿರದಲ್ಲಿ ಪ್ರಧಾನಿ ಮೋದಿಯವರು ಆನೆಗಳಿಗೆ ಕಬ್ಬು ತಿನ್ನಿಸಿ ಪ್ರೀತಿಯಿಂದ ಮೈದಡವಿದರು. ಆನೆಗಳೂ ಸೊಂಡಿಲನ್ನೆತ್ತಿ ಕಬ್ಬನ್ನು ಸ್ವೀಕರಿಸಿದವು. ಮಾವುತರು ಹಾಗೂ ಕಾವಡಿಗಳೊಂದಿಗೆ ಮಾತನಾಡಿದರು. ಈ ತೆಪ್ಪಕಾಡು ಶಿಬಿರದಲ್ಲಿ ಎಲಿಫೆಂಟ್‌ ವಿಸ್ಪರರ್ಸ್‌ (Elephant Whisperers) ಎಂಬ ಆಸ್ಕರ್ ಪ್ರಶಸ್ತಿ ವಿಜೇತ ಡಾಕ್ಯುಮೆಂಟರಿಯಲ್ಲಿ ತೋರಿಸಲಾಗಿರುವ ಆನೆಗಳ ರಕ್ಷಕರಾದ ಬೊಮ್ಮನ್ ಮತ್ತು ಬೆಳ್ಳಿ ಅವರ ಜತೆ ಮೋದಿ ಕುಶಲೋಪರಿ ನಡೆಸಿದರು.

ಏನಿದು ಹುಲಿ ಯೋಜನೆ?

ಇದನ್ನೂ ಓದಿ: Karnataka Election 2023: ಸೌಭಾಗ್ಯ ಬಸವರಾಜನ್‌ ಪಕ್ಷೇತರವಾಗಿ ಕಣಕ್ಕೆ; ಕಾಂಗ್ರೆಸ್‌ನಲ್ಲಿ ಮತ್ತೊಂದು ಬಂಡಾಯ

ಜನಪ್ರತಿನಿಧಿಗಳಿಗಿರಲಿಲ್ಲ ಪ್ರವೇಶ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಭಾಗವಹಿಸುವಿಕೆಗೆ ನಿರ್ಬಂಧ ವಿಧಿಸಲಾಗಿತ್ತು. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬಂಡೀಪುರ ಮಾರ್ಗವಾಗಿ ಕೇರಳಕ್ಕೆ ತೆರಳುವ ವಾಹನ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉಡುಪಿ

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

karnataka Weather Forecast : ಎರಡು ದಿನಗಳ ಕಾಲ ಬ್ರೇಕ್‌ ಕೊಟ್ಟಿದ್ದ ಮಳೆರಾಯ (Rain News) ಮತ್ತೆ ಸಕ್ರಿಯಗೊಂಡಿದ್ದಾನೆ. ದಕ್ಷಿಣ ಒಳನಾಡಲ್ಲಿ ಭಾರಿ ಮಳೆ ಸೂಚನೆ ಇದ್ದು, ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ.

VISTARANEWS.COM


on

By

Heavy Rain warning In karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಡಿ.8ರ ಶುಕ್ರವಾರ ಸಂಜೆಯಿಂದಲೇ ಹಲವೆಡೆ ಮಳೆಯಾಗುವ ಸೂಚನೆ (Karnataka Weather Forecast) ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ (Dry weather) ಮೇಲುಗೈ ಸಾಧಿಸಲಿದೆ.

ರಾಮನಗರ-ಮಂಡ್ಯದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಉಳಿದಂತೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಮೋಡ ಕವಿದ ವಾತಾವರಣವಿರಲಿದೆ.

ಇನ್ನು ಉತ್ತರ ಒಳನಾಡಿನ ಕೊಪ್ಪಳ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಜತೆಗೆ ಮಲೆನಾಡಿನ ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ ಇದ್ದು, ಗುಡುಗು ಸಾಥ್‌ ನೀಡಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Wedding Fashion: ಮದುಮಗನ ಆರತಕ್ಷತೆಯ ಗ್ರ್ಯಾಂಡ್‌ ಔಟ್‌ಫಿಟ್‌ ಆಯ್ಕೆಗೆ ಇಲ್ಲಿದೆ 5 ಸಿಂಪಲ್‌ ಸೂತ್ರ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -19 ಡಿ.ಸೆ
ಮಂಗಳೂರು: 34 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 17 ಡಿ.ಸೆ
ಗದಗ: 30 ಡಿ.ಸೆ – 18 ಡಿ.ಸೆ
ಹೊನ್ನಾವರ: 34 ಡಿ.ಸೆ- 23 ಡಿ.ಸೆ
ಕಲಬುರಗಿ: 26 ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 17 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

VISTARANEWS.COM


on

Vistara News impact, Governmet to scrap 7 d rule of SCSP and TSP act
Koo

ಬೆಳಗಾವಿ: ಚಳಿಗಾಲದ ಅಧಿವೇಶನಕ್ಕಾಗಿ ಬೆಳಗಾವಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಹಾಗೂ ಅವರು ಮಂತ್ರಿ ಮಂಡಲ ಸದಸ್ಯರು ಗುರುವಾರ ಸಚಿವ ಸಂಪುಟ ನಡೆಸಿ(Cabinet Meeting), ಪ್ರಮುಖ ನಿರ್ಧಾರಗಳನ್ನು ಕೈಗೊಂಡರು. ಈ ಪೈಕಿ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಧಿನಿಯಮಕ್ಕೆ ತಿದ್ದುಪಡಿ (SCSP and TSP act) ತರಲು ರಾಜ್ಯ ಸಚಿವ ಸಂಪುಟವು ತನ್ನ ಒಪ್ಪಿಗೆಯನ್ನು ನೀಡಿದೆ. ಈ ಸಮುದಾಯಗಳಿಗೆ ಮೀಸಲಾದ ಹಣವನ್ನು ಸರ್ಕಾರವು ಅನ್ಯ ಕಾರ್ಯಗಳಿಗೆ ಬಳಸುತ್ತಿದೆ ಎಂದು ವಿಸ್ತಾರ ನ್ಯೂಸ್ (Vistara News) ವರದಿ ಮಾಡಿತ್ತು. ಅದರ ಬೆನ್ನಲ್ಲೇ, ಸಂಪುಟ ಸಭೆಯಲ್ಲಿ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ನೀಡಲಾಗಿದೆ.

ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಧಿನಿಯಮಕ್ಕೆ ತಿದ್ದುಪಡಿ ತಂದು, ನಿಯಮ 7-ಡಿ ರದ್ದು ಮಾಡಲು ಒ್ಪಪಿಗೆ ನೀಡಿದೆ. ಈ ಸಮುದಾಯಗಳಿಗೆ ಮೀಸಲಿದ್ದ ಹಣವನ್ನು ರಾಜ್ಯ ಸರ್ಕಾರವು ರಸ್ತೆ, ಚರಂಡಿ, ಫ್ಲೈಓವರ್, ನೀರಾವರಿ ಯೋಜನೆಗಳಿಗೆ ಸರ್ಕಾರ ಬಳಿಕೊಳ್ಳುತ್ತಿತ್ತು. ಇದಕ್ಕೆ ನಿಯಮ 7-ಡಿನಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈಗ ಅದೇ ನಿಯಮನ್ನು ತಿದ್ದುಪಡಿ ಮಾಡಲಾಗುತ್ತಿದ್ದು, ಮೀಸಲಾದ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ.

ಸರ್ಕಾರವು ತನ್ನ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಎಸ್‌ಸಿ ಮತ್ತು ಎಸ್‌ಟಿ ಮೀಸಲಿಗೆ ಇದ್ದ ಸುಮಾರು 10 ಸಾವಿರ ಕೋಟಿ ರೂ. ಬಳಸಿತ್ತು. ಈ ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್, ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ ಮತ್ತು ಎಸ್‌ಟಿ ಮೀಸಲು ಹಣ ಬಳಕೆ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಸಾರ ಮಾಡಿತ್ತು.

ಎಸ್‌ಸಿಎಸ್‌ಪಿಟಿ ಟಿಎಸ್‌ಪಿ ಎಂದರೆ ಏನು?

ಷೆಡ್ಯೂಲ್‌ ಕ್ಯಾಸ್ಟ್‌ ಸಬ್‌‌ ಪ್ಲಾನ್‌‌ (ಎಸ್‌‌ಸಿಎಸ್‌ಪಿ). ಟ್ರೈಬಲ್‌ ಸಬ್‌ ಪ್ಲಾನ್‌‌( ಟಿಎಸ್‌‌‌ಪಿ). ಎಸ್‌‌ಸಿಎಸ್‌‌ಟಿ ಸಮುದಾಯಕ್ಕೆ ನೇರವಾಗಿ ತಲುಪುವ ಯೋಜನೆ ರೂಪಿಸಬೇಕು. ಉದಾಹರಣೆಗೆ ಎಸ್‌‌ಸಿಎಸ್‌ಟಿ ಮಕ್ಕಳಿಗೆ ವಿದ್ಯಾರ್ಥಿವೇತನ, ಎಸ್‌ಸಿಎಸ್‌ಟಿಗಳಿಗೆ ಮನೆ ನಿರ್ಮಾಣ, ಬೋರ್‌ವೆಲ್‌‌, ಕಾಲನಿಗಳಲ್ಲಿ ಮೂಲಸೌಕರ್ಯ, ಇತ್ಯಾದಿ… ಎಲ್ಲ ಸಾರ್ವಜನಿಕರಿಗೂ ಉಪಯೋಗವಾಗುವ ಸಾರ್ವತ್ರಿಕ ಯೋಜನೆಗಳಿಗೆ ಈ ಹಣವನ್ನು ಬಳಸುವಂತಿಲ್ಲ. ಉದಾಹರಣೆಗೆ, ಊರಿನ ರಸ್ತೆ ನಿರ್ಮಿಸಿ ಇದರಲ್ಲಿ ಇಎಸ್‌ಸಿಎಸ್‌ಟಿಗಳೂ ಓಡಾಡುತ್ತಾರೆ ಎನ್ನುವುದು, ಉಚಿತ ಬಸ್‌‌ನಲ್ಲಿ ಎಸ್‌ಸಿಎಸ್‌‌ಟಿ ಮಹಿಳೆಯರೂ ಓಡಾಡುತ್ತಾರೆ ಎನ್ನುವುದು, ಇತ್ಯಾದಿ. ಕಾಯ್ದೆಯಲ್ಲಿ 7(ಡಿ) ಎಂಬ ಕಲಂ ಅನ್ವಯ, ಸಾರ್ವತ್ರಿಕ ಯೋಜನೆಗಳನ್ನೂ ಎಸ್‌ಸಿಎಸ್‌ಟಿಗಳು ಬಳಸುತ್ತಾರೆ ಎಂದು ಭಾವಿಸಿ (ಡೀಮ್ಡ್‌) ಒಂದಷ್ಟು ಎಸ್‌ಸಿಎಸ್‌ಟಿ ಮೀಸಲು ನಿಧಿಯಿಂದ ಪಡೆಯಲು ಅವಕಾಶವಿದೆ.

-ಕರ್ನಾಟಕದಲ್ಲಿ ಎಸ್‌‌ಸಿಎಸ್‌‌ಪಿ ಟಿಎಸ್‌‌ಪಿ ಅನುದಾನ ಒಟ್ಟು ಬಜೆಟ್‌‌‌ನ ಶೇ.24 ಇರುತ್ತದೆ. ಈ ವರ್ಷ ಬಜೆಟ್‌‌ನಲ್ಲಿ 31 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಎಸ್‌ಸಿಎಸ್‌ಟಿ ಹಣವನ್ನು ಗ್ಯಾರಂಟಿಗೆ ಬಳಸಬಾರದು ಎಂದು ಬಿಜೆಪಿ ಈ ಹಿಂದೆ ಆಕ್ಷೇಪಿಸಿತ್ತು.

2013ರ ಕಾಂಗ್ರೆಸ್ ಸರ್ಕಾರದಿಂದ ಜಾರಿ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಅಧಿನಿಯಮ ಜಾರಿ ಮಾಡಿತ್ತು. ಇದರ ಅನುಸಾರ ಜನಸಂಖ್ಯೆಗೆ ತಕ್ಕಂತೆ ಆ ಸಮುದಾಯಗಳಿಗೆ ಬಜೆಟ್‌ನಲ್ಲಿ ಹಣ ಮೀಸಲು ಮಾಡಲಾಯಿತು. ಅದು ಸುಮಾರು ಬಜೆಟ್‍‌ನ ಶೇಕಡಾ 23 ರಷ್ಟು ಆಗುತ್ತಿತ್ತು. ಮೀಸಲಾರಿಸಿದ ಹಣ ಆ ವರ್ಷದಲ್ಲಿ ಖರ್ಚು ಆಗದಿದ್ರೆ ಅದು ಮುಂದಿನ ವರ್ಷಕ್ಕೆ ಕ್ಯಾರಿ ಓವರ್ ಆಗುತ್ತಿತ್ತು. ಇದರಿಂದ ಸಿದ್ದರಾಮಯ್ಯ ಸರ್ಕಾರದ ಮೊದಲ ಅವಧಿಯ ನಾಲ್ಕು ವರ್ಷಗಳ ಕಾಲ ಹಣ ಖರ್ಚು ಆಗದೇ ಉಳಿಯಿತು. ಹೀಗಾಗಿ ಇದನ್ನ ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳಲು ತೀರ್ಮಾನ ಮಾಡಿದ ಅಂದಿನ ಕ್ಯಾಬಿನೆಟ್ 7 ನಿಯಮಕ್ಕೆ ತಿದ್ದುಪಡಿ ತಂದು 7-ಡಿ ಸೇರಿಸಲಾಯಿತು. ಆ ಮೂಲಕ ವೆಚ್ಚವಾಗದೇ ಉಳಿದ ಹಣವನ್ನು ಸಾರ್ವಜನಿಕ ಹಿತಾಸಕ್ತಿ ಯೋಜನೆಗಳಿಗೆ ಈ ಹಣ ಬಳಸಬಹುದು ಅನ್ನೋ ತಿದ್ದುಪಡಿ ತರಲಾಯಿತು

ಬಳಿಕ ಬಂದ ಸಮ್ಮಿಶ್ರ ಸರ್ಕಾರ, ಯಡಿಯೂರಪ್ಪ, ಬೊಮ್ಮಯಿ ಸರ್ಕಾರದಲ್ಲಿ ಈ ಹಣವನ್ನ ನೀರಾವರಿ ಸೇರಿದಂತೆ ಫ್ಲವರ್ ಹಾಗೂ ಇಂದಿನ ಸರ್ಕಾರ ಗ್ಯಾರೆಂಟಿಗಳಿಗೆ ಬಳಸಲಾಯಿತು. ಹೀಗಾಗಿ ಇದು ದೊಡ್ಡ ಸುದ್ದಿಯಾದ ಬೆನ್ನಲ್ಲೇ ತಿದ್ದುಪಡಿ ತರಲು ಮುಂದಾಗಿದೆ. ಸರ್ಕಾರ ಇದು ಸಮುದಾಯಕ್ಕೆ ರೀಚ್ ಆಗಿ ಎಚ್ಚೇತ್ತುಕೊಂಡ್ರೆ ಲೋಕಸಭಾ ಚುನಾವಣೆಯಲ್ಲಿ ನಮ್ಮ ವಿರುದ್ಧ ನಿಲ್ಲಬಹುದು ಅನ್ನೋ ಲೆಕ್ಕಾಚಾರ ಹಾಕಿ ಈಗ ತಿದ್ದುಪಡಿ ಮಾಡುತ್ತಿದೆ.

ಡಿಕೆಶಿ ಮೇಲಿನ ಸಿಬಿಐ ಕೇಸ್ ವಾಪಸ್ ತೆಗೆದುಕೊಳ್ಳುವ ವಿಚಾರ.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮೇಲಿನ ಸಿಬಿಐ ಕೇಸ್ ವಾಪಸ್ ತೆಗೆದುಕೊಳ್ಳುವ ನಿರ್ಧಾರವನ್ನು ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಕ್ರಮ ಬದ್ಧ ಮಾಡಲು ಒಪ್ಪಿಗೆ ನೀಡಲಾಯಿತು. ಕಳೆದ ಬಾರಿ ಸಂಪುಟ ಸಭೆಯಲ್ಲಿ ಸಿಬಿಐಗೆ ವಹಿಸಿದ್ದ ಕೇಸ್ ವಾಪಸ್ ಪಡೆಯಲು ನಿರ್ಧರಿಸಲಾಗಿತ್ತು.

ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್

ರೈತರು ನೀರಾವರಿ ಪಂಪ್ ಸೆಟ್‌ಗಳಿಗೆ ಸ್ವಂತ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಬೇಕು ಎಂಬ ಆದೇಶ ವಿಚಾರ ಮುಂದಿನ ಸಂಪುಟ ಸಭೆಯಲ್ಲಿ ತಗೆದುಕೊಳ್ಳಲು ನಿರ್ಧಾರ ಮಾಡಲಾಯಿತು.ಸ್ವಂತ ವೆಚ್ಚದಲ್ಲಿ ವಿದ್ಯುತ್ ಸಂಪರ್ಕದ ನಿರ್ಣಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ನಿರ್ಣಯಕ್ಕೆ ಸ್ಚಪಕ್ಷ ಸೇರಿದಂತೆ ವಿಪಕ್ಷಗಳು ಮತ್ತು ರೈತ ಸಂಘಟನೆಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದವು. ಸದ್ಯಕ್ಕೆ ಈ ನಿರ್ಣಯವನ್ನ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧಾರ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಓದಿ: Karnataka Drought: ಬರ ಪರಿಹಾರ ಭಿಕ್ಷೆಯಲ್ಲ, ಅದು ರಾಜ್ಯದ ತೆರಿಗೆ ಹಣ ಎಂದ ಸಿದ್ದರಾಮಯ್ಯ

Continue Reading

Fact Check

Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

Fact Check: ಸ್ಟಾರ್ ಗುರುತಿರುವ 500 ರೂ. ನೋಟು ನಕಲಿ ಎಂಬ ಸುದ್ದಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಆರ್‌ಬಿಐ ಏನು ಹೇಳಿದೆ?

VISTARANEWS.COM


on

Is 500 note with star symbol is fake, What Fact Check says?
Koo

ಬೆಂಗಳೂರು: ಚುಕ್ಕೆ(ಸ್ಟಾರ್) ಗುರುತು ಇರುವ (Star Symbol) 500 ರೂ. ನೋಟುಗಳು ನಕಲಿ (Fake Rs 500 notes), ಆ ನೋಟುಗಳನ್ನು ಬ್ಯಾಂಕ್‌ಗೆ ವಾಪಸ್ ಮಾಡಿ (Return to Bank) ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ (Social Media) ಜೋರಾಗಿದೆ. ಹಲವರು ಈ ಸುದ್ದಿಯನ್ನು ನಂಬಿ ನೋಟುಗಳನ್ನು ವಾಪಸ್ ಮಾಡಲು ಮುಂದಾದ ಉದಾಹರಣೆಗಳಿವೆ. ಈ ಸುದ್ದಿ ಕಳೆದ ಐದಾರು ತಿಂಗಳಿಂದ ಚಾಲ್ತಿಯಲ್ಲಿದ್ದು, ಈ ಕುರಿತು ಆಗಲೇ ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಣೆ ನೀಡಿದೆ(Reserve bank of India). ಆದರೂ ಈ ವದಂತಿ ನಿಲ್ಲುತ್ತಿಲ್ಲ. ಪಿಐಬಿ ಫ್ಯಾಕ್ಟ್ ಚೆಕ್(PIB Fact Check), ಸ್ಟಾರ್‌ ಗುರುತಿರುವ ನೋಟುಗಳು ನಕಲಿ ಅಲ್ಲ; ಅಸಲಿ ಎಂದು ಈಗ ಮತ್ತೆ ಟ್ವೀಟ್ ಮಾಡಿದೆ.

500 ರೂ. ನೋಟು ಕುರಿತು ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲ ಕುರಿತು ಆರ್‌ಬಿಐ ಈ ಹಿಂದೆಯೇ ಮಾಹಿತಿ ನೀಡಿದೆ. ಸ್ಟಾರ್ ಗುರುತು ಈ ನೋಟುಗಳು ಚಲಾವಣೆಯ ಒಂದು ಭಾಗವಾಗಿದೆ. ನಕ್ಷತ್ರ ಚಿಹ್ನೆಯು ಸರಳವಾಗಿ ಗುರುತಿಸುವಿಕೆಯ ಭಾಗವಾಗಿದೆ. ಅಂದರೆ, ಈ ನೋಟು ಮರುಮುದ್ರಣಗೊಂಡ ಅಥವಾ ಬದಲಿಸಲಾದ ನೋಟಿಗೆ ಬದಲಿಯಾಗಿ ಚಲಾವಣೆಯಾಗುತ್ತಿರುವ ನೋಟು ಎಂದು ಆರ್‌ಬಿಐ ಹೇಳಿದೆ.

ಇದರರ್ಥ ನೋಟು ಮೂಲತಃ ದೋಷದಿಂದ ಮುದ್ರಿಸಲ್ಪಟ್ಟಿರುತ್ತದೆ. ಆ ನೋಟನ್ನು ಸ್ಟಾರ್ ಗುರುತಿನ ಚಿಹ್ನೆ ಹೊಸ ನೋಟಿನೊಂದಿಗೆ ಬದಲಾಯಿಸಲಾಗಿರುತ್ತದೆ. ಈ ನೋಟುಗಳು ಮೌಲ್ಯವು ಕಾನೂನುಬದ್ಧವಾಗಿರುತ್ತದೆ. ನಕ್ಷತ್ರ ಚಿಹ್ನೆಯೊಂದಿಗೆ ನೋಟುಗಳ ಮೊದಲ ಸರಣಿಯು 2006 ರಲ್ಲಿ ಚಲಾವಣೆ ಆಗಲಾರಂಭಿಸಿದವು ಎಂದು ಆರ್‌ಬಿಐ ಹೇಳಿದೆ.

ಸ್ಟಾರ್ ಗುರುತಿರುವ ಈ ನೋಟುಗಳು ನಕಲಿ ಎಂಬ ಕುರಿತು ಸಾಕಷ್ಟು ಪೋಸ್ಟ್‌ಗಳು ಐದಾರು ತಿಂಗಳ ಹಿಂದೆ ಟ್ವಿಟರ್ ಮತ್ತು ಫೇಸ್‍‌ಬುಕ್‌ನಲ್ಲಿ ಹರಿದಾಡಿದ್ದವು. ಜನರು ಈ ಕೂಡ ನಕಲಿ ಸುದ್ದಿಯನ್ನು ನಿಜವೆಂದೇ ನಂಬಿದ್ದರು. ಈಗ ಮತ್ತೆ ಅಂಥದ್ದೇ ಪುಕಾರುಗಳು ಎದ್ದಿವೆ. ಆದರೆ, ಸ್ಟಾರ್ ಗುರುತಿರುವ ನೋಟುಗಳು ಖಂಡಿತವಾಗಿಯೂ ನಕಲಿಯಲ್ಲ, ಅಸಲಿಯಾಗಿದ್ದು, ಕಾನೂನು ಬದ್ಧ ಮಾನ್ಯತೆ ಇದೆ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

ಈ ಸುದ್ದಿಯನ್ನೂ ಓದಿ: Fact Check Cell : ಸರ್ಕಾರದ ಫ್ಯಾಕ್ಟ್‌ ಚೆಕ್‌ ಪ್ರಯತ್ನಕ್ಕೆ ಹಿನ್ನಡೆ; ಮಾನ್ಯತೆ ಪಡೆದ ಚೆಕರ್ಸ್‌ ನಿರಾಸಕ್ತಿ, ಯಾಕೆ?

Continue Reading

ಶಿವಮೊಗ್ಗ

Shivamogga News: ಯಕ್ಷಿ ಗ್ರಾಮದಲ್ಲಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Shivamogga News: ಸೊರಬ ತಾಲೂಕಿನ ಮಾವಲಿ ವಲಯದ ಯಕ್ಷಿ ಗ್ರಾಮದಲ್ಲಿ ನೂತನವಾಗಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಜರುಗಿತು.

VISTARANEWS.COM


on

Inauguration of Hulleshwar Jnana vikas Center at Yakshi Village
ಸೊರಬ ತಾಲೂಕಿನ ಮಾವಲಿ ವಲಯದ ಯಕ್ಷಿ ಗ್ರಾಮದಲ್ಲಿ ನೂತನವಾಗಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಜರುಗಿತು.
Koo

ಸೊರಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಈವರೆಗಿನ ಸಾಧನೆ, ಮಹಿಳಾ ಸಬಲೀಕರಣಕ್ಕಾಗಿ (Women Empowerment) ಮಾತೃಶ್ರೀ ಹೇಮಾವತಿ ಅಮ್ಮನವರು ನೀಡಿರುವ ವಿಶೇಷ ಯೋಜನೆಗಳಗಿದ್ದು ಅವುಗಳಲ್ಲಿ ಜ್ಞಾನ ವಿಕಾಸ ಯೋಜನೆ ಅತ್ಯಂತ ಮುಖ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ ತಿಳಿಸಿದರು.

ತಾಲೂಕಿನ ಮಾವಲಿ ವಲಯದ ಯಕ್ಷಿ ಗ್ರಾಮದಲ್ಲಿ ಹೊಸದಾಗಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರವನ್ನು ಅವರು ಉದ್ಘಾಟಿಸಿ, ಕೇಂದ್ರವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗಬೇಕಾದರೆ ಕೇಂದ್ರದಲ್ಲಿನ ಪ್ರತಿಯೊಂದು ಸದಸ್ಯರ ಹೊಂದಾಣಿಕೆ ಅತೀ ಮುಖ್ಯವಾಗಿರುತ್ತದೆ ಎಂದರು.

ಕೇಂದ್ರದಲ್ಲಿ ಪ್ರತಿ ತಿಂಗಳು ವಿವಿಧ ರೀತಿಯ ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಗಳನ್ನು ನೀಡುವಂತಹ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ. ಇದರ ಸದುಪಯೋಗವನ್ನು ತಾವೆಲ್ಲರೂ ಪಡೆಯಬೇಕು.

ಇದನ್ನೂ ಓದಿ: Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ

ಜ್ಞಾನ ವಿಕಾಸ ಕಾರ್ಯಕ್ರಮ ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ವೇದಿಕೆಯಾಗಿದೆ. ಪ್ರತಿಯೊಬ್ಬರೂ ಯಾವುದೇ ಸಂಕೋಚವಿಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಒಂದು ಉತ್ತಮ ಮಾದರಿ ಕೇಂದ್ರವಾಗಿ ಗುರುತಿಸುವಂತಾಗಬೇಕು ಎಂದರು.

ಗ್ರಾಮದ ಮುಖಂಡ ಮಂಜಪ್ಪ ಮಾತನಾಡಿದರು.

ಇದನ್ನೂ ಓದಿ: Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾಕಿ ರಾಧಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೋಭಾ, ಸೇವಾ ಪ್ರತಿನಿಧಿ ಮಲ್ಲಮ್ಮ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Continue Reading
Advertisement
Raja Marga Father and Daughter
ಅಂಕಣ13 mins ago

Raja Marga Column : 13 ವರ್ಷದ ನನ್ನ ಮಗಳು ಒಮ್ಮಿಂದೊಮ್ಮೆಗೆ ಮಂಕಾಗಿದ್ದು ಯಾಕೆ?

Hair Care Tips
ಆರೋಗ್ಯ31 mins ago

Hair Care Tips: ಕೂದಲು ಚೆನ್ನಾಗಿರಬೇಕೆಂದರೆ ಯಾವ ಆಹಾರ ಸೇವಿಸಬೇಕು?

Heavy Rain warning In karnataka
ಉಡುಪಿ1 hour ago

Karnataka Weather : ಬಟ್ಟೆ ತೊಳೆಯೋಕೆ ವೀಕೆಂಡ್‌ವರೆಗೂ ಕಾಯ್ಬೇಡಿ; ಇನ್ನೊಂದು ವಾರ ಭಾರಿ ಮಳೆ!

Vistara editorial, Let's take precautions for pneumonia infection
ಆರೋಗ್ಯ2 hours ago

ವಿಸ್ತಾರ ಸಂಪಾದಕೀಯ: ನ್ಯುಮೋನಿಯಾ ಸೋಂಕಿನ ಬಗ್ಗೆ ಈಗಲೇ ಎಚ್ಚರ ವಹಿಸೋಣ

How To Remove Tea Stains From Clothes
ಲೈಫ್‌ಸ್ಟೈಲ್2 hours ago

How To Remove Tea Stains From Clothes: ಬಟ್ಟೆಯ ಮೇಲಿನ ಚಹಾ ಕಲೆಯನ್ನು ತೆಗೆಯುವ ಸುಲಭದ ಉಪಾಯ ಇದು!

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Vistara News impact, Governmet to scrap 7 d rule of SCSP and TSP act
ಕರ್ನಾಟಕ8 hours ago

ವಿಸ್ತಾರ ನ್ಯೂಸ್ ಇಂಪ್ಯಾಕ್ಟ್; ಎಸ್ಸಿ, ಎಸ್ಟಿ‌ ಹಣ ಅನ್ಯ ಕಾರ್ಯದ ಬಳಕೆಗೆ ತಡೆ, ಕಾಯ್ದೆ ತಿದ್ದುಪಡಿಗೆ ಸಂಪುಟ ನಿರ್ಧಾರ

WPL Auction 2024
ಕ್ರಿಕೆಟ್8 hours ago

WPL Auction 2024: ವುಮೆನ್ಸ್ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಗೆ ಕೇವಲ 2 ದಿನ ಬಾಕಿ

Supreme Court will deliver judgment on Dece 11 about J and K Special Status scrap
ಕೋರ್ಟ್8 hours ago

ಆರ್ಟಿಕಲ್ 370 ರದ್ದು ಸಿಂಧುವೇ?; ಡಿ.11ಕ್ಕೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು

Pro Kabaddi
ಕ್ರೀಡೆ9 hours ago

Pro Kabaddi: ಗುಜರಾತ್ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ ಪಾಟ್ನಾ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ13 hours ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

Veer Savarkar and Priyank Kharge
ಕರ್ನಾಟಕ14 hours ago

Veer Savarkar: ನನಗೆ ಬಿಟ್ಟರೆ ಇವತ್ತೇ ಸಾವರ್ಕರ್‌ ಫೋಟೊ ತೆಗೆದು ಹಾಕ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ

CM-Siddaramaiah
ಕರ್ನಾಟಕ19 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ1 day ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ2 days ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ2 days ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ2 days ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 days ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

ಟ್ರೆಂಡಿಂಗ್‌