modi-in-karnataka: Your vote is not for government, but for No1 state Modi in Karnataka : ನೀವು ಮತ ಹಾಕುವುದು ಸರ್ಕಾರ ರಚನೆಗಲ್ಲ, ರಾಜ್ಯವನ್ನು ದೇಶದಲ್ಲೇ ನಂ. 1 ಮಾಡಲು; ಮೋದಿ ಹೊಸ ವ್ಯಾಖ್ಯಾನ - Vistara News

ಕರ್ನಾಟಕ

Modi in Karnataka : ನೀವು ಮತ ಹಾಕುವುದು ಸರ್ಕಾರ ರಚನೆಗಲ್ಲ, ರಾಜ್ಯವನ್ನು ದೇಶದಲ್ಲೇ ನಂ. 1 ಮಾಡಲು; ಮೋದಿ ಹೊಸ ವ್ಯಾಖ್ಯಾನ

Narendra Modi : ಮೇ 10ರಂದು ನೀವು ಮತ ಹಾಕುವುದು ಸರ್ಕಾರ ರಚನೆಗಲ್ಲ, ಬದಲಾಗಿ ರಾಜ್ಯವನ್ನು ದೇಶದಲ್ಲೇ ನಂಬರ್‌ ಒನ್‌ ಮಾಡಲು ಎಂದು ನರೇಂದ್ರ ಮೋದಿ ಹೇಳಿದರು.

VISTARANEWS.COM


on

modi-in-karnataka: Your vote is not for government, but for No1 state
ಕುಡಚಿಯಲ್ಲಿ ನಡೆದ ಸಮಾವೇಶದಲ್ಲಿ ಮೋದಿ ಅವರು ಇತರ ಬಿಜೆಪಿ ನಾಯಕರಿಗೆ ನಮಸ್ಕರಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕುಡಚಿ (ಬೆಳಗಾವಿ ಜಿಲ್ಲೆ): ಕರ್ನಾಟಕಕ್ಕೆ ತನ್ನದೇ ಆದ ಘನತೆ ಇದೆ, ಗೌರವವಿದೆ. ಶಿಷ್ಟಾಚಾರವಿದೆ. ಆದರೆ, ಕಾಂಗ್ರೆಸ್‌ನ ನಾಯಕರಿಗೆ ಇತರರನ್ನು ಅಪಮಾನಿಸುವುದೇ ಕಾಯಕವಾಗಿದೆ. ಕರ್ನಾಟಕದ ಮಾನ ಕಳೆಯುವ ಇಂಥವರನ್ನು ಕ್ಷಮಿಸುತ್ತೀರಾ?- ಹೀಗೆಂದು ಮಲ್ಲಿಕಾರ್ಜುನ ಖರ್ಗೆ ಅವರ ವಿಷದ ಹಾವು ಹೇಳಿಕೆಯನ್ನು ಉಲ್ಲೇಖಿಸದೆಯೇ ಪ್ರಶ್ನಿಸಿದರು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi). ಇದೇವೇಳೆ ʻನೀವು ಮತ ಹಾಕುವುದು ಕೇವಲ ಒಂದು ಸರ್ಕಾರದ ರಚನೆಗಾಗಿ ಅಲ್ಲ, ಬದಲಾಗಿ ಕರ್ನಾಟಕವನ್ನು ನಂಬರ್‌ ಒನ್‌ ಮಾಡುವುದಕ್ಕಾಗಿʼʼ ಎಂದು ಹೇಳಿದರು.

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ (Modi in Karnataka) ಬೆಳಗಾವಿಯ ಕುಡಚಿಗೆ ಬಂದು ಬೃಹತ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ʻʻನಾವೆಲ್ಲ ಗೌರವಿಸುವ ಬಸವೇಶ್ವರರು ಜಾತಿ ಪಂಥದ ಹೆಸರಲ್ಲಿ ಬೇಧ ಭಾವ ಮಾಡಬಾರದು ಎಂದಿದ್ದರು. ಮಹಾಕವಿ ಕುವೆಂಪು ಅವರು ನಾಡಗೀತೆ ಬರೆದರು. ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದರು. ಕನಕದಾಸರು ಎಲ್ಲರೂ ಜತೆಯಾಗಿರಬೇಕು ಎಂದು ಹೇಳಿದರು. ಎಲ್ಲ ಹಿರಿಯರು, ದಾರ್ಶನಿಕರು ಸಮಾನತೆಯಿಂದ ಇರಬೇಕು ಎಂದು ಹೇಳಿದ್ದರು. ಆದರೆ, ಕಾಂಗ್ರೆಸ್‌ನ ಕೆಲವು ನಾಯಕರು ಇತರರಿಗೆ ಬೈಯವುದನ್ನೇ ತಮ್ಮ ಕೆಲಸ ಮಾಡಿಕೊಂಡಿದ್ದಾರೆ. ಇದು ತುಂಬ ಬೇಸರದ ಸಂಗತಿ. ಕರ್ನಾಟಕದ ಮಾನ ಕಳೆಯುತ್ತಿರುವ ಇಂಥವರನ್ನು ಕ್ಷಮಿಸುತ್ತೀರಾ?ʼʼ ಎಂದು ಪ್ರಶ್ನಿಸಿದರು.

ʻʻರಾಜ್ಯದಲ್ಲಿ ಸಂಪ್ರದಾಯವೂ ಇದೆ ತಂತ್ರಜ್ಞಾನವೂ ಇದೆ. ಸ್ಟಾರ್ಟಪ್‌ ಮತ್ತು ಸಂಸ್ಕೃತಿ ಜತೆಯಾಗಿ ಸಾಗುತ್ತಿದೆ. ಭಾರತದ ಪುರಾತನ ಮತ್ತು ನೂತನ ಸಂಸ್ಕೃತಿ ಜತೆಗೂಡಿದೆ. ಹೀಗೆಯೇ ಡಬಲ್‌ ಎಂಜಿನ್‌ ಸರ್ಕಾರ ವಿಕಾಸದ ಅದ್ಭುತ ಮಾದರಿ. ಜನಸೇವೆಯನ್ನು ಇಲ್ಲಿ ರಾಷ್ಟ್ರ ಸೇವೆ ಎಂದು ಪರಿಗಣಿಸಲಾಗಿದೆ. ಜನತೆಯನ್ನು ಜನಾರ್ದನ ಎಂದು ಪರಿಗಣಿಸಲಾಗಿದೆʼʼ ಎಂದು ಹೇಳಿದರು ನರೇಂದ್ರ ಮೋದಿ.

ʻʻಮೇ 10ರಂದು ನೀವು ರಾಜ್ಯವನ್ನು ದೇಶದ ನಂಬರ್‌ ಒನ್‌ ರಾಜ್ಯವಾಗಿಸಲು ಮತ ಹಾಕುತ್ತಿದ್ದೀರಿ. ನಾನು ಕರ್ನಾಟಕದ ಒಬ್ಬ ಸೇವಕನ ರೂಪದಲ್ಲಿ ಸಹಾಯ ಮಾಡಲು ಬಯಸಿದ್ದೇನೆ. ನೀವು ನನಗೆ ಜತೆ ನೀಡುತ್ತೀರಲ್ಲಾ, ಆಶೀರ್ವಾದ ಕೊಡುತ್ತೀರಲ್ಲಾ.ʼʼ ಎಂದು ಹೇಳಿದರು.

ʻʻʻಕರ್ನಾಟಕದ ಅಭಿವೃದ್ಧಿಗಾಗಿ ನಾವು ಒಂದು ದೊಡ್ಡ ತಂಡ ಕಟ್ಟಿದ್ದೇವೆ. ಅದು ಅಮೃತ ಕಾಲದಲ್ಲಿ ರಾಜ್ಯವನ್ನು ಮುನ್ನಡೆಸಲಿದೆ. ಅವರಿಗೆ ನಿಮ್ಮ ಆಶೀರ್ವಾದ ಕೊಡುತ್ತೀರಲ್ಲ,, ಮೊದಲಿಗಿಂತಲೂ ಹೆಚ್ಚು ಆಶೀರ್ವಾದ ಕೊಡುತ್ತೀರಲ್ಲಾ” ಎಂದು ಹೇಳುತ್ತಾ ಬಹುಮತದಿಂದ ಆರಿಸುವಂತೆ ಮನವಿ ಮಾಡಿದರು. ʻʻಈ ಬಾರಿಯ ಸರ್ಕಾರ ಬಹುಮತದ ಬಿಜೆಪಿ ಸರ್ಕಾರʼ ಎಂಬ ಘೋಷಣೆ ಮೊಳಗಿಸಿದರು.

ಮೈತ್ರಿ ಸರ್ಕಾರಗಳಿಂದಲೇ ರಾಜ್ಯಕ್ಕೆ ಹಿನ್ನಡೆ

ʻʻಬಿಜೆಪಿಗಿಂತ ಮೊದಲು ಸೃಷ್ಟಿಯಾಗಿದ್ದ ಮೈತ್ರಿ ಸರ್ಕಾರದ ಎಲ್ಲ ಶ್ರಮ ಕೇವಲ ಸರ್ಕಾರಗಳನ್ನು ಉಳಿಸಿಕೊಳ್ಳುವ ಪ್ರಯತ್ನವಿತ್ತು. ಅಸ್ಥಿರ ಸರ್ಕಾರಗಳಿಂದ ಸಮಸ್ಯೆಯೇ ಹೆಚ್ಚು. ಕರ್ನಾಟಕದಂಥ ಒಂದು ದೊಡ್ಡ ಶಕ್ತಿಯುತ ರಾಜ್ಯ ಅಸ್ಥಿರ ಸರ್ಕಾರಗಳಿಂದ ತೊಂದರೆಗೆ ಒಳಗಾಗಿದೆ. ಇದರಿಂದ ಇಲ್ಲಿನ ಯುವಕರಿಗೆ ತೊಂದರೆಯಾಗಿದೆ. ಖರೀದಿ ರಾಜಕಾರಣಗಳಿಂದ ನಲುಗಿದೆ. ಹೀಗಾಗಿ ಸಂಪೂರ್ಣ ಬಹುಮತದ ಸರ್ಕಾರವನ್ನು ನೀಡಬೇಕಾಗಿದೆʼʼ ಎಂದು ಮನವಿ ಮಾಡಿದರು ನರೇಂದ್ರ ಮೋಡಿ

ʻʻ2014ರಲ್ಲಿ ನೀವು ನಮಗೆ ಅಧಿಕಾರ ನೀಡಿದಾಗ ಭ್ರಷ್ಟಾಚಾರ ಹಿಂಸೆಯ ಕತ್ತಲೆ ಇತ್ತು. ಕಳೆದ ಒಂಬತ್ತು ವರ್ಷಗಳಲ್ಲಿ ನಾವು ಬಸವಣ್ಣನವರ ಸಂದೇಶದಂತೆ ಎಲ್ಲ ವಿಕಾಸ ಮಾಡಿದ್ದೇವೆ. ಕಾಂಗ್ರೆಸ್‌ನ ಕಾಲದಲ್ಲಿ ದಲಿತರು, ಹಿಂದುಳಿದವರು ಎಷ್ಟು ಸಂಕಷ್ಟದಲ್ಲಿದ್ದರು ಅನ್ನೋದು ಗೊತ್ತಿದೆ. ಅವರ ಕಾಲದಲ್ಲಿ ರೇಷನ್‌ ಕೂಡಾ ಸರಿಯಾಗಿ ಸಿಗುತ್ತಿರಲ್ಲಿ. ಎಸ್‌ಸಿ ಎಸ್‌ಟಿ ಸಮಾಜದ ಜನರಿಗೆ ಮೋಸವಾಗುತ್ತಿದೆ. ಡಬಲ್‌ ಎಂಜಿನ್‌ ಸರ್ಕಾರ ಈ ಅನ್ಯಾಯವನ್ನು ದೂರ ಮಾಡಿದೆ. ಅವರಿಗೆಲ್ಲ ಮುಕ್ತ ರೇಷನ್‌ ಸಿಗುತ್ತಿದೆ. ಕಾಂಗ್ರೆಸ್‌ನ ಭ್ರಷ್ಟಾಚಾರದ ಕಾಲದಲ್ಲಿ ಹಗರಣಗಳ ಸರಮಾಲೆಯೇ ನಡೆದಿತ್ತು. ಅದರಿಂದ ತೊಂದರೆಗೆ ಒಳಗಾದವರು ದಲಿತರು ಮತ್ತು ಹಿಂದುಳಿದವರುʼʼ ಎಂದು ಮೋದಿ ಪ್ರತಿಪಾದಿಸಿದರು.

ಬಂಜಾರಾ, ಲಂಬಾಣಿಗಳ ಓಲೈಕೆಗೆ ಮುಂದಾದ ಮೋದಿ

ʻʻಬಂಜಾರಾ ಸಮುದಾಯ, ಗುಮಂತು, ಅರ್ಧ ಗುಮಂತು ಸಮುದಾಯದ ಜನರಿಗೆ ನಾವು ವಿಶೇಷ ಕಲ್ಯಾಣ ಯೋಜನೆ ಮಾಡಿದ್ದೇವೆ. ಇವರೆಲ್ಲ ಕಾಂಗ್ರೆಸ್‌ ಕಾಲದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದರು. ಕಾಂಗ್ರೆಸ್‌ ಇಷ್ಟು ವರ್ಷ ಸರಕಾರ ಮಾಡಿದ್ದರೂ ಅವರ ರಕ್ಷಣೆಗೆ, ಜೀವನ ಬದಲಾವಣೆಗೆ ಏನೂ ಮಾಡಿಲ್ಲ. ಅವರು ಇನ್ನೂ ತಾಂಡಾಗಳಲ್ಲಿ ಸಂಕಷ್ಟದಲ್ಲೇ ಬದುಕುವಂತೆ ಮಾಡಲಾಗಿತ್ತು. ಅವರಿಗೆ ಹಕ್ಕುಪತ್ರವನ್ನು ನೀಡಿದ್ದು ಬಿಜೆಪಿ. ತಾಂಡಾಗಳನ್ನು, ಕುರುಬರ ಹಟ್ಟಿಗಳನ್ನು ನಾವು ಅಭಿವೃದ್ಧಿಪಡಿಸಿದ್ದೇವೆ, ಹಕ್ಕುಪತ್ರ ಮಾತ್ರವಲ್ಲ, ಅವರಿಗೆ ಮನೆ, ನೀರು ನೀಡಿದ್ದೇವೆ. ಅವರ ಕಲ್ಯಾಣಕ್ಕಾಗಿ ಪೂರ್ಣ ಸಮರ್ಪಣೆಯ ಭಾವದಿಂದ ಕೆಲಸ ಮಾಡುತ್ತಿದ್ದೇವೆʼʼ ಎಂದು ಮೋದಿ ಹೇಳಿದರು. ಈ ಮೂಲಕ ಕಳೆದ ಮೀಸಲಾತಿ ಪರಿಷ್ಕರಣೆಯ ವೇಳೆ ಸಿಟ್ಟುಗೊಂಡಿದ್ದ ಸಮುದಾಯವನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದರು.

ʻʻನಾವು ಸಮಾಜದ ಎಲ್ಲ ವರ್ಗಗಳಿಗಾಗಿ ಇಷ್ಟೆಲ್ಲ ಕೆಲಸ ಮಾಡಿದ್ದೇವೆ. ಆದರೆ, ಕಾಂಗ್ರೆಸ್‌ ಏನು ಮಾಡಿತು. ಅವರಿಗೆ ನಿಮ್ಮ ವಿಕಾಸ ಬೇಕಾಗಿಲ್ಲ, ಉತ್ಥಾನ ಬೇಕಾಗಿಲ್ಲ. ಅವರಿಗೆ ಒಂದೇ ಕೆಲಸ. ಮೋದಿಗೆ ಬಾಯಿಗೆ ಬಂದಂತೆ ಬೈಯುವುದು. ಯಾರು ದಲಿತರು, ಹಿಂದುಳಿದವರಿಗಾಗಿ ಕೆಲಸ ಮಾಡುತ್ತಾರೋ ಅವರಿಗೆ ಇದೇ ರೀತಿ ಹಿಂಸೆ ಕೊಡುತ್ತದೆ. ತನಗೆ ಕಾಂಗ್ರೆಸ್‌ ಏನೆಲ್ಲ ಹೇಳಿತು, ಹೇಗೆ ನೋವು ಮಾಡಿತು ಎಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಇದೇ ಬೆಳಗಾವಿಯಲ್ಲಿ ಹೇಳಿದರು. ಕಾಂಗ್ರೆಸ್‌ ಆಗ ಹೇಗಿತ್ತೋ ಈಗಲೂ ಹಾಗೇ ಇದೆʼʼ ಎಂದು ಕೆದಕಿದರು.

ಕುಡಚಿ ಸಮಾವೇಶದಲ್ಲಿ ಮೋದಿ ಮಾತು

ʻʻಕಾಂಗ್ರೆಸ್‌ನ ಸುದೀರ್ಘ ಆಡಳಿತಾವಧಿಯಲ್ಲಿ ಮಾತೆಯರ ಬದುಕು ಕಷ್ಟಕರವಾಗಿಯೇ ಇತ್ತು. ನಮ್ಮ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾದರು. ಟಾಯ್ಲೆಟ್‌ಗಳ ಅಭಾವದಿಂದ ಅತಿ ಹೆಚ್ಚು ತೊಂದರೆಗೆ ಒಳಗಾದವರು ಹೆಣ್ಮಕ್ಕಳು. ಯಾರು ಕುಟುಂಬ ರಾಜಕಾರಣದಲ್ಲಿ ಮುಳುಗಿದ್ದಾರೋ, ಯಾರು ಭ್ರಷ್ಟಾಚಾರದಿಂದಲೇ ಬದುಕಿದರೋ ಅವರಿಗೆ ಈ ದೇಶದ ಬಡವರ ಕಷ್ಟ ಗೊತ್ತಾಗುವುದಿಲ್ಲʼʼ ಎಂದು ನರೇಂದ್ರ ಮೋದಿ ಹೇಳಿದರು.

ಹೆಣ್ಮಕ್ಕಳ ಆಶೀರ್ವಾದ ನಮ್ಮ ಪಾಲಿಗಿದೆ ಎಂದ ಮೋದಿ

ʻʻನಾವು ಮೂರು ಲಕ್ಷ ಮನೆ ಕಟ್ಟಿ ಕೊಟ್ಟಿದ್ದೇವೆ. ಅದರ ಮಾಲೀಕರು ಮಹಿಳೆಯರು. ಹೀಗಾಗಿ ಅವರು ಲಕ್ಷಾಧಿಪತಿಗಳಾಗಿರುವುದು ನಮಗೆ ಹೆಮ್ಮೆ ಎಂದರು ಪ್ರಧಾನಿ ಮೋದಿ. ಮನೆ ಮನೆಗೂ ನೀರು, ಮನೆ ಮನೆಗೂ ಟಾಯ್ಲೆಟ್‌ ಗಳ ಮೂಲಕ ನಾವು ಮಹಿಳೆಯರ ಬದುಕನ್ನು ಹಸನಗೊಳಿಸಿದ್ದೇವೆ. ಹೀಗಾಗಿ ಹೆಣ್ಮಕ್ಕಳ ಆಶೀರ್ವಾದ ನಮಗೆ ಸಿಗಲಿದೆ. ಹೀಗಾಗಿ ಅವರೆಲ್ಲ ಹೇಳುತ್ತಿದ್ದಾರೆ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರʼʼ ಎಂದರು ಮೋದಿ.

ಕಬ್ಬು ಬೆಳೆಗಾರರಿಗೆ ಸಿಹಿಯನ್ನು ನೀಡಿತು ಬಿಜೆಪಿ

ʻʻನೀವು ಸಹಕಾರಿ ಸಂಘಗಳ ಜತೆ ಹೇಗೆ ಕೆಲಸ ಮಾಡಿದ್ದೀರಿ ಎನ್ನುವುದನ್ನು ನೆನಪಿಸಿಕೊಳ್ಳಿ. ಇದು ರೈತರ ಶಕ್ತಿ. ಅದರಲ್ಲಿ ಕೂಡಾ ತಮಗೆ ಬೇಕಾದವರಿಗೆ ಸಾಲ ಸಿಗುತ್ತಿತ್ತು. ಈಗ ಹಾಗಿಲ್ಲ. ಎಲ್ಲರಿಗೂ ಅದರು ತೆರೆದಿದೆ. ಸಹಕಾರಿ ಕ್ಷೇತ್ರವೂ ಉತ್ಪಾದನಾ ಕ್ಷೇತ್ರಕ್ಕೆ ಇಳಿದಿದೆʼʼ ಎಂದು ನೆನಪಿಸಿದರು.

ʻʻಸಕ್ಕರೆ ಜಿಲ್ಲೆ ಎನ್ನುವುದು ನಮ್ಮ ಬದುಕಿಗೆ ಸಿಹಿ ನೀಡಬೇಕಾಗಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬಡ ರೈತರು ತೊಂದರೆಗೆ ಒಳಗಾದರು. ಅವರಿಗೆ ಸರಿಯಾಗಿ ಬೆಲೆ ಸಿಗಲಿಲ್ಲ. ಕಬ್ಬು ನೀಡಿದ್ದಕ್ಕೆ ಪ್ರತಿಯಾಗಿ ದುಡ್ಡೇ ಸಿಗಲಿಲ್ಲ. ನಾವು ಎಫ್‌ ಆರ್‌ಪಿ ನಿಗದಿ ಮಾಡಿದೆವು. ನಾವು ಕಬ್ಬಿನಿಂದ ಸಕ್ಕರೆ ಮಾತ್ರ ಮಾಡಲಿಲ್ಲ. ಅದರಿಂದ ಎಥೆನಾಲ್‌ ಉತ್ಪಾದಿಸಿದೆವು. ಇದರಿಂದ ವಾಹನಗಳಿಗೂ ಬಳಕೆಯಾಯಿತು. ಇದರಿಂದ ಕಬ್ಬು ಬೆಳೆಗಾರರಿಗೆ ಲಾಭವಾಯಿತು. ಈಗ ಪೆಟ್ರೋಲ್‌ನಲ್ಲಿ ಕೂಡಾ 20% ಎಥೆನಾಲ್‌ ಬಳಸುತ್ತಿದ್ದೇವೆ. ಇದರಿಂದ ವಿದೇಶಕ್ಕೆ ಹೋಗುತ್ತಿದ್ದ ಹಣ ಉಳಿಯಿತುʼʼ ಎಂದು ವಿವರಿಸಿದರು ನರೇಂದ್ರ ಮೋದಿ.

ಕಾಂಗ್ರೆಸ್‌ನದ್ದು ಕರಪ್ಶನ್‌ ಕಾಲ್‌, ನಮ್ಮದು ಅಮೃತ ಕಾಲ್‌ ಎಂದು ಹೇಳಿದ ಮೋದಿ ಅವರು, ʻʻಇದನ್ನೆಲ್ಲ ಸಹಿಸಲಾಗದ ಕಾಂಗ್ರೆಸ್‌ನವರು ಪ್ರತಿ ದಿನ ಕೇಳುತ್ತಾರೆ ನೀವು ಸಮಾಧಿಯಾಗುವುದು ಯಾವಾಗ ಎಂದು, ಆದರೆ, ನಾವು ಕಮಲ ಅರಳಿಸಲು ಮುಂದಾಗಿದ್ದೇವೆʼʼ ಎಂದು ನರೇಂದ್ರ ಮೋದಿ ನಗುತ್ತಾ ಹೇಳಿದರು.

ಇದನ್ನೂ ಓದಿ : Modi in Karnataka: ಅಂಬೇಡ್ಕರ್‌ಗೇ ರಾಕ್ಷಸ ಅಂದೋರು ನನ್ನನ್ನು ಬಿಡ್ತಾರಾ?: ಖರ್ಗೆ ವಿಷದ ಹಾವು ಹೇಳಿಕೆಗೆ ಮೋದಿ ಉತ್ತರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

Lok Sabha Election 2024 Live news: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಆರಂಭ

Lok Sabha Election 2024: ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

VISTARANEWS.COM


on

lok sabha election 2025 voting
Koo

ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ (Lok Sabha Election 2024) ಮತದಾನ ಇಂದು ಬೆಳಗ್ಗೆ 7ರಿಂದ ಆರಂಭವಾಯಿತು. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಎಲ್ಲ ಬಗೆಯ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

Lok Sabha Election : ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Lok Sabha Election
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಿಗದಿಯಾಗಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಈ ಹಂತದಲ್ಲಿ ಚುನಾವಣೆ ನಡೆಯಲಿದೆ. ಮತದಾನದ ದಿನ ಹತ್ತಿರ ಬಂದ ಬಳಿಕವೂ ಇನ್ನೂ ಮತದಾರರಲ್ಲಿ (voters) ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಇರುತ್ತವೆ . ಇದರಲ್ಲಿ ನಮ್ಮ ಮತವನ್ನು (vote) ಬೇರೆಯವರು ಚಲಾವಣೆ ಮಾಡಿದರೆ ಏನಾಗುತ್ತದೆ ಎಂಬ ಪ್ರಶ್ನೆ ಖಂಡಿತಾ ಇರುತ್ತದೆ. ಹಾಗಾದರೆ ಈ ಸಂದರ್ಭದಲ್ಲಿ ನೀವು ಏನು ಮಾಡಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ದೇಶದ ಬಹುದೊಡ್ಡ ಚುನಾವಣೆಗಾಗಿ ಚುನಾವಣಾ ಅಧಿಕಾರಿಗಳು (election officers), ವಿವಿಧ ಪಕ್ಷಗಳ ಅಭ್ಯರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಈಗಾಗಲೇ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದರಲ್ಲಿ ಬಹುದೊಡ್ಡ ಪಾಲುದಾರ ಪ್ರತಿಯೊಬ್ಬ ಮತದಾರ. ಅವರ ಅಧಿಕಾರ, ಹಕ್ಕನ್ನು ಬೇರೆಯವರು ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಬೇರೆಯವರು ನಮ್ಮ ಮತ ಚಲಾಯಿಸಬಹುದೇ?

ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ನಿಮ್ಮ ಮತವನ್ನು ಟೆಂಡರ್ಡ್ ಬ್ಯಾಲೆಟ್ ಪೇಪರ್ ಎಂದು ಗುರುತಿಸಲಾಗುತ್ತದೆ ಮತ್ತು ಪ್ರತ್ಯೇಕವಾಗಿ ಇರಿಸಲಾಗುತ್ತದೆ.

ತಕ್ಷಣ ದೂರು ನೀಡಿ

ಮತಗಟ್ಟೆ ಅಧಿಕಾರಿಯು ಮತಗಟ್ಟೆಯೊಳಗೆ ಬರುವಾಗ ನಿಮ್ಮ ಮತವು ಈಗಾಗಲೇ ಚಲಾವಣೆಯಾಗಿದೆ ಎಂದು ತಿಳಿಸಿದರೆ ಭಾರತೀಯ ಚುನಾವಣಾ ಕಾಯಿದೆ 1961ರ ಅಡಿಯಲ್ಲಿ ಯಾರಾದರೂ ನಿಮ್ಮ ಹೆಸರಿನಲ್ಲಿ ಮತ ಚಲಾಯಿಸಿದರೆ ತಕ್ಷಣ ಸ್ಥಳದಲ್ಲಿರುವ ಪ್ರಿಸೈಡಿಂಗ್ ಅಧಿಕಾರಿಗೆ ದೂರು ನೀಡಿ. ಆಗ ಟೆಂಡರ್ಡ್ ಮತವನ್ನು ಚಲಾಯಿಸಲು ಕಾನೂನು ನಿಮಗೆ ಅವಕಾಶ ನೀಡುತ್ತದೆ.

ಇದನ್ನೂ ಓದಿ: Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಚುನಾವಣಾ ನಿಯಮಗಳ ನಿಯಮ 49ಪಿ ಪ್ರಕಾರ ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ನಿಮಗೆ ನೀಡಲಾಗುತ್ತದೆ ಮತ್ತು ಟೆಂಡರ್ ಮಾಡಿದ ಮತಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸಹಿ ಮಾಡಬೇಕಾಗುತ್ತದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಇದನ್ನು ಮಾಡಲು ಸಾಧ್ಯವಿಲ್ಲ. ಟೆಂಡರ್ ಮಾಡಿದ ಮತಪತ್ರವು ಬ್ಯಾಲೆಟ್ ಯೂನಿಟ್‌ನಲ್ಲಿ ಪ್ರದರ್ಶಿಸಲಾದ ಬ್ಯಾಲೆಟ್ ಪೇಪರ್‌ನಂತೆಯೇ ಇರುತ್ತದೆ. ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ಪ್ರಿಸೈಡಿಂಗ್ ಅಧಿಕಾರಿಗೆ ಮರಳಿ ನೀಡಬೇಕು.

ಹೇಗೆ ಮತ ಹಾಕುವುದು?

ಬಾಣದ ಕ್ರಾಸ್ ಮಾರ್ಕ್ ರಬ್ಬರ್ ಸ್ಟಾಂಪ್ ಸಹಾಯದಿಂದ ನಿಮ್ಮ ಅಭ್ಯರ್ಥಿಯ ಆಯ್ಕೆಯನ್ನು ಗುರುತಿಸಿದ ಅನಂತರ ನೀವು ಟೆಂಡರ್ ಮಾಡಿದ ಮತಪತ್ರವನ್ನು ಪ್ರಿಸೈಡಿಂಗ್ ಅಧಿಕಾರಿಗೆ ಹಸ್ತಾಂತರಿಸಬೇಕು. ಅವರು ಅದನ್ನು ಪ್ರತ್ಯೇಕ ಕವರ್‌ನಲ್ಲಿ ಇಡುತ್ತಾರೆ.

ಚಾಲೆಂಜ್ಡ್ ವೋಟ್

ಟೆಂಡರ್ ಮಾಡಿದ ಬ್ಯಾಲೆಟ್ ಪೇಪರ್ ಅನ್ನು ಚಾಲೆಂಜ್ಡ್ ವೋಟ್ ಎಂದೂ ಕರೆಯುತ್ತಾರೆ. ಬಳಿಕ ನಿಮ್ಮ ಜಾಗದಲ್ಲಿ ಯಾರು ಮತ ಹಾಕಿದ್ದಾರೆ ಎಂಬುದನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ಅದನ್ನು ತೆಗೆದು ನಿಮ್ಮ ಮತವನ್ನು ಎಣಿಕೆಗೆ ಹಾಕಲಾಗುತ್ತದೆ.

ಗುರುತಿನ ಪುರಾವೆ ನೀಡಬೇಕು

ಮತದಾರರಾಗಿ ನಿಮ್ಮ ಗುರುತಿನ ಬಗ್ಗೆ ಯಾವುದೇ ಅಭ್ಯರ್ಥಿಯ ಪೋಲಿಂಗ್ ಏಜೆಂಟ್‌ ಪ್ರಶ್ನಿಸಿದರೆ ಚುನಾವಣಾ ಅಧಿಕಾರಿಗಳು ನಿಮ್ಮ ಗುರುತಿನ ಪುರಾವೆಯನ್ನು ಕೇಳುತ್ತಾರೆ. ಇದಕ್ಕಾಗಿ ನೀವು ಎಪಿಕ್ ಅಥವಾ ಪಾಸ್‌ಪೋರ್ಟ್, ರೇಷನ್ ಕಾರ್ಡ್‌ನಂತಹ ಯಾವುದೇ ದಾಖಲೆಯನ್ನು ಹೊಂದಿರಬೇಕು. ಆದರೂ ಅವರು ಸವಾಲು ಮಾಡಿ ಮತದಾನಕ್ಕೆ ಅನುಮತಿ ನೀಡದೇ ಇದ್ದರೆ ಪ್ರಿಸೈಡಿಂಗ್ ಅಧಿಕಾರಿಯಿಂದ ಲಿಖಿತ ದೂರನ್ನು ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ.

ಎಷ್ಟು ಮತದಾರರು?

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸುಮಾರು 97 ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಭಾರತದಲ್ಲಿ 96.88 ಕೋಟಿ ಜನರು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ, ಇದು ವಿಶ್ವದ ಅತಿದೊಡ್ಡ ಮತದಾರರ ಪೂಲ್ ಆಗಿದೆ. ಆಯೋಗದ ಪ್ರಕಾರ, 2019 ರ ಲೋಕಸಭಾ ಚುನಾವಣೆ ಬಳಿಕ ನೋಂದಾಯಿತ ಮತದಾರರ ಸಂಖ್ಯೆ ಶೇ. 6ರಷ್ಟು ಹೆಚ್ಚಾಗಿದೆ

Continue Reading

ಪ್ರಮುಖ ಸುದ್ದಿ

Lok Sabha Election 2024: ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ; ಅದೃಷ್ಟ ಪರೀಕ್ಷೆಗಿಳಿದ 227 ಅಭ್ಯರ್ಥಿಗಳು

Lok Sabha Election 2024: ರಾಜ್ಯದ 14 ಕ್ಷೇತ್ರಗಳಲ್ಲಿ ಮೇ 7ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಲಾಗಿದೆ.

VISTARANEWS.COM


on

Lok Sabha Election
ಹಾವೇರಿ ನಗರದ ಶ್ರೀ ಶಿವಲಿಂಗೇಶ್ವರ ಮಹಿಳಾ ಪದವಿ ಕಾಲೇಜ್ ಮಸ್ಟರಿಂಗ್ ಕೇಂದ್ರದಿಂದ ವಿದ್ಯುನ್ಮಾನ ಮತಯಂತ್ರಗಳೊಂದಿಗೆ ಮತಗಟ್ಟೆಗೆ ಸಿಬ್ಬಂದಿ ಸೋಮವಾರ ತೆರಳಿದರು.
Koo

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ (Lok Sabha Election 2024) ಮತದಾನ ಮಂಗಳವಾರ ನಡೆಯಲಿದೆ. ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.

14 ಕ್ಷೇತ್ರಗಳಲ್ಲಿ ಮತದಾನ

ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಿದ್ದು, ಶಾಂತಿಯುತ ಚುನಾವಣೆ ನಡೆಸಲು ಸುಮಾರು 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಘಟಾನುಘಟಿಗಳು ಸ್ಪರ್ಧಿಸಿರುವ‌ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಒಟ್ಟು 2.59 ಕೋಟಿ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.

227 ಅಭ್ಯರ್ಥಿಗಳು ಕಣದಲ್ಲಿ

ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ
ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206
ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತಿ ಹೆಚ್ಚು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ.

ಮತದಾರರಿಗೆ ಮೂಲಸೌಕರ್ಯ

ತಾಪಮಾನ ಹೆಚ್ಚಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಆಯೋಗ ಮತದಾನದ ದಿನದಂದು ಮತಗಟ್ಟೆಯಲ್ಲಿ ಮತದಾರರಿಗಾಗಿ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ಒಆರ್‌ಎಸ್ ಜ್ಯೂಸ್, ಕುಳಿತುಕೊಳ್ಳಲು ಕಾಯ್ದಿರಿಸಿದ ಕೊಠಡಿಗಳು, ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಆಂಬ್ಯುಲೆನ್ಸ್ ವಾಹನಗಳು ಮುಂತಾದ ಹಲವು ಮೂಲ ಸೌಲಭ್ಯಗಳನ್ನು ಒದಗಿಸಿದೆ. ಇನ್ನು ದೃಷ್ಟಿಹೀನ ಮತದಾರರ ಸಹಾಯಕ್ಕಾಗಿ ಬ್ರೈಲ್ ಸೌಲಭ್ಯವುಳ್ಳ ಇವಿಎಂ ಗಳನ್ನು ಮತಗಟ್ಟೆಗಳಲ್ಲಿ ಅಳವಡಿಸಲಾಗಿದೆ.

ಇದನ್ನೂ ಓದಿ | Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

ಮತದಾರರ ಗುರುತಿನ ಚೀಟಿ ಕಡ್ಡಾಯ

ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್‌ ಸ್ಲಿಪ್‌ ಜತೆಗೆ ಮತದಾರರ ಗುರುತಿನ ಚೀಟಿ,
ಆಧಾರ್‌ಕಾರ್ಡ್, ನರೇಗಾ ಜಾಬ್‌ ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್‌ಬುಕ್, ಕಾರ್ಮಿಕ ಸಚಿವರು ನೀಡುವ
ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೆಸೆನ್ಸ್, ಪ್ಯಾನ್ ಕಾರ್ಡ್, ಪಾಸ್‌ಪೋರ್ಟ್, ಪಿಂಚಣಿಯ ದಾಖಲೆ,
ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ
ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದು.

Continue Reading
Advertisement
Lok Sabha Election 2024
Lok Sabha Election 20244 mins ago

Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

rajamarga column voting 1
ಪ್ರಮುಖ ಸುದ್ದಿ17 mins ago

ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

Summer Food Tips
ಆಹಾರ/ಅಡುಗೆ45 mins ago

Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

lok sabha election 2025 voting
Lok Sabha Election 202457 mins ago

Lok Sabha Election 2024 Live news: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಆರಂಭ

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

karnataka weather Forecast
ಮಳೆ1 hour ago

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election 2024: ಇಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ; ಅದೃಷ್ಟ ಪರೀಕ್ಷೆಗಿಳಿದ 227 ಅಭ್ಯರ್ಥಿಗಳು

Lok Sabha Election-2024
ಕರ್ನಾಟಕ2 hours ago

ಇಂದು 2ನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

SSLC exam results to be announced soon
ಕರ್ನಾಟಕ2 hours ago

SSLC Exam Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶೀಘ್ರ; ಇಲ್ಲಿದೆ ಮಹತ್ವದ ಮಾಹಿತಿ

Lemon picking⁠
ಲೈಫ್‌ಸ್ಟೈಲ್2 hours ago

Tips To Find The Juiciest Lemon: ಜ್ಯೂಸಿಯಾದ ನಿಂಬೆಹಣ್ಣನ್ನು ಮಾರುಕಟ್ಟೆಯಿಂದ ಆರಿಸಿ ತರುವುದೂ ಒಂದು ಕಲೆ! ಇಲ್ಲಿವೆ ಟಿಪ್ಸ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ13 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ13 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ14 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌