Molestation Case: ಅತ್ಯಾಚಾರಕ್ಕೆ ಯತ್ನ; ಚಿತ್ರದುರ್ಗದಲ್ಲಿ ಕಾಮುಕನ ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು - Vistara News

ಕರ್ನಾಟಕ

Molestation Case: ಅತ್ಯಾಚಾರಕ್ಕೆ ಯತ್ನ; ಚಿತ್ರದುರ್ಗದಲ್ಲಿ ಕಾಮುಕನ ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

Molestation Case: ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಹಿಡಿದು ಗ್ರಾಮಸ್ಥರು ಥಳಿಸಿರುವ ಘಟನೆ ಹಿರಿಯೂರಿನ ಬೀರೆನಹಳ್ಳಿ ಬಳಿ ನಡೆದಿದೆ.

VISTARANEWS.COM


on

attempted rape, Man tied up, beaten up by villagers in Chitradurga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಇಲ್ಲಿನ ಹಿರಿಯೂರಿನ ಬೀರೆನಹಳ್ಳಿ ಬಳಿ ಮಹಿಳೆ ಮೇಲೆ (Molestation Case) ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ. ಅತ್ಯಾಚಾರ ಎಸೆಗಲೂ ಮುಂದಾಗಿದ್ದ ಕಾಮುಕನನ್ನು ಹಿಡಿದು ಗ್ರಾಮಸ್ಥರು ಲೈಟು ಕಂಬಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆ.

ಬೈಕ್‌ನಲ್ಲಿ ಬಂದ ವ್ಯಕ್ತಿ ಮಹಿಳೆಯನ್ನು ಹಿಂಬಾಲಿಸಿದ್ದಾನೆ. ಬಳಿಕ ಅಕ್ಕ ಪಕ್ಕ ಯಾರೂ ಇಲ್ಲದ್ದನ್ನು ಗಮನಿಸಿ ಎಳೆದೊಯ್ಯಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ. ಕೂಡಲೇ ಮಹಿಳೆ ಕೂಗಿಕೊಂಡಿದ್ದು, ಆಕೆಯ ಕಿರುಚಾಟ ಕೇಳಿ ಜನರು ಓಡಿಬಂದಿದ್ದಾರೆ.

attempted rape, Man tied up, beaten up by villagers in Chitradurga
ಕಾಮುಕನನ್ನು ಲೈಟ್‌ ಕಂಬಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು

ಸದ್ಯ ವ್ಯಕ್ತಿಯ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದ್ದು, ಅತ್ಯಾಚಾರಕ್ಕೆ ಯತ್ನಿಸಿದವನನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಿರಿಯೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಿಎಂಟಿಸಿ ಬಸ್‌ನಲ್ಲಿ ಕಂಡಕ್ಟರ್‌ ದಹನ ಪ್ರಕರಣ: ಆಕಸ್ಮಿಕವಲ್ಲ! ಯುಪಿಐ ಪಾವತಿ ನೀಡಿತು ತನಿಖೆಗೆ ಟ್ವಿಸ್ಟ್‌

ಬೆಂಗಳೂರು: ಬೇಡರಹಳ್ಳಿಯಲ್ಲಿ ನಿಲ್ಲಿಸಿದ್ದ ಬಿಎಂಟಿಸಿ ಬಸ್‌ ಅಗ್ನಿಗಾಹುತಿಯಾಗಿ (Fire tragedy) ಅದರೊಳಗಿದ್ದ ಕಂಡಕ್ಟರ್‌ ದಹನವಾದ ದುರ್ಘಟನೆಯ ತನಿಖೆಯಲ್ಲಿ ಇದೀಗ ಮಹತ್ವದ ಟ್ವಿಸ್ಟ್‌ ದೊರೆತಿದೆ. ಯುಪಿಐ ಪಾವತಿಯೊಂದರಿಂದ ಈ ಸುಳಿವು ತನಿಖಾಧಿಕಾರಿಗಳಿಗೆ ಲಭ್ಯವಾಗಿದ್ದು, ಇದು ಕಂಡಕ್ಟರ್‌ ಮಾಡಿಕೊಂಡಿರುವ ಆತ್ಮಹತ್ಯೆ ಎಂದು ಕಂಡುಬಂದಿದೆ.

ಯುಪಿಐಯಲ್ಲಿ ಕಂಡಕ್ಟರ್‌ ಮುತ್ತಯ್ಯ ಅವರ ಖಾತೆಯಿಂದ ಸೆಂಡ್ ಆಗಿರುವ 700 ರೂಪಾಯಿ ಈ ಸುಳಿವು ನೀಡಿದೆ. ಇದರಿಂದಾಗಿ ಬಿಎಂಟಿಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿಲ್ಲ, ನಿರ್ವಾಹಕ ಮುತ್ತಯ್ಯ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ.

ಮುತ್ತಯ್ಯ ಬಸ್ ನಿಲುಗಡೆಯಾದ ನಂತರ ಹೊರ ಹೋಗಿ ಮಧ್ಯರಾತ್ರಿ ಒಂದು ಗಂಟೆವರೆಗೂ ಫೋನಿನಲ್ಲಿ ಮಾತನಾಡಿದ್ದಾರೆ. ಡ್ರೈವರ್ ಪ್ರಕಾಶ್ ಅವರನ್ನು ರೂಮಿನಲ್ಲಿ ಮಲಗುವಂತೆ ಹೇಳಿ ಆ ದಿನದ ಕಲೆಕ್ಷನ್ ಹಣವನ್ನು ಪ್ರಕಾಶ್ ಕೈಗೆ ಕೊಟ್ಟಿದ್ದಾರೆ. ಡ್ರೈವರ್ ಮಲಗಿದ ನಂತರ ಮುತ್ತಯ್ಯ ಬಸ್‌ನಿಂದ ಹೊರ ಹೋಗಿ, ಸ್ವಲ್ಪ ದೂರದಲ್ಲಿದ್ದ ಪೆಟ್ರೋಲ್ ಬಂಕ್‌ಗೆ ಹೋಗಿದ್ದಾರೆ. ಅಲ್ಲಿ 700 ರೂಪಾಯಿಗಳ ಪೆಟ್ರೋಲ್‌ ಖರೀದಿಸಿದ್ದಾರೆ. ಅವರ ಯುಪಿಐ ಪಾವತಿಯ ಪರಿಶೀಲನೆ ವೇಳೆ ಇದು ಪತ್ತೆಯಾಗಿದೆ.

ರಾತ್ರಿಯಲ್ಲಿ ಮುತ್ತಯ್ಯ ಯುಪಿಐ ಐಡಿಯಿಂದ ಕೊನೆಯದಾಗಿ ಹಣ ವರ್ಗಾವಣೆಯಾಗಿದೆ‌. ಪೆಟ್ರೋಲ್ ಬಂಕ್‌ಗೆ ಹಣ ಪಾವತಿಸಿ ಪೆಟ್ರೋಲ್, ಡಿಸೇಲ್ ಖರೀದಿ ಮಾಡಿದ್ದು, ಐದು ಲೀಟರ್ ಪೆಟ್ರೋಲ್, ಎರಡು ಲೀಟರ್ ಡಿಸೇಲ್ ಅನ್ನು ನೀರಿನ ಕ್ಯಾನ್‌ನಲ್ಲಿ ಮುತ್ತಯ್ಯ ತಂದಿದ್ದರು. ಈ ಬಗ್ಗೆ ಪೆಟ್ರೋಲ್ ಬಂಕ್ ಸಿಬ್ಬಂದಿಯೂ ಮಾಹಿತಿ ನೀಡಿದ್ದು ಸಿಸಿಟಿವಿಯಲ್ಲೂ ಈ ದೃಶ್ಯ ಸೆರೆಯಾಗಿದೆ. ಮುಂಜಾನೆ ವೇಳೆಗೆ ಬಸ್ಸಿನ ಎಲ್ಲ ಕಿಟಕಿಗಳು ಹಾಗೂ ಡೋರ್ ಒಳಗಿನಿಂದ ಕ್ಲೋಸ್ ಮಾಡಿ ಪೆಟ್ರೋಲ್, ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡಿರಬಹುದು ಎಂದು ಊಹಿಸಲಾಗಿದೆ.

ಇದನ್ನೂ ಓದಿ: Sri Charukeerthi Bhattaraka Swamiji: ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆರೋಗ್ಯ ಏರುಪೇರು, ಬಿಜಿಎಸ್‌ಗೆ ರವಾನೆ

ಈ ಕುರಿತು ಎಫ್‌ಎಸ್‌ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ವರದಿ ಬಂದ ನಂತರ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಹಣಕಾಸಿನ‌ ತೊಂದರೆಗೆ ಸಿಲುಕಿದ್ದರಿಂದ ಮುತ್ತಯ್ಯ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಕಷ್ಟಕ್ಕೆ ಸ್ಪಂದಿಸುವ ಡಿಕೆಸು ಬೇಕೋ? ವೈಟ್‌ ಕಾಲರ್‌ ಡಾ. ಮಂಜುನಾಥ್‌ ಬೇಕೋ? ಸಿಎಂ ಪ್ರಶ್ನೆ

Lok Sabha Election 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ನೂರಕ್ಕೆ ನೂರು ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಗೆಲ್ಲುತ್ತಾರೆ ಎಂಬುದು ನನಗೆ ಖಚಿತವಾಗಿ ಗೊತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

CM Siddaramaiah hugs DK Suresh in Bangalore Rural Lok Sabha constituency election campaign
Koo

ರಾಮನಗರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ (DK Suresh) ಅವರು ನೂರಕ್ಕೆ ನೂರು ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು ಶತಃಸಿದ್ಧ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ನಿಮಗೆ ಕಷ್ಟಕ್ಕೆ ಸ್ಪಂದಿಸುವ ಸುರೇಶ್‌ ಬೇಕೋ? ಬಿಜೆಪಿಯ ವೈಟ್‌ ಕಾಲರ್‌ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್‌ (Dr CN Manjunath) ಬೇಕೋ ಎಂದು ಪ್ರಶ್ನೆ ಮಾಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯಲ್ಲಿ ಮಾತನಾಡಿ, ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.

CM Siddaramaiah in Bangalore Rural Lok Sabha constituency election campaign

ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ?

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.

ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ‌ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ವೋಟಿಗೂ ಘನತೆ ತಂದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು, ಕುಟುಂಬಗಳಿಗೂ ನಮ್ಮ ಸರ್ಕಾರ ಹಣ ಜಮೆ ಮಾಡುತ್ತಿದೆ. ಪಕ್ಷ, ಜಾತಿ, ಧರ್ಮ ಯಾವುದನ್ನೂ ನೋಡದೆ ಇಡೀ ನಾಡಿನ ಜನತೆಗೆ ಅವರ ಕುಟುಂಬಗಳಿಗೆ ಉಚಿತ ಅಕ್ಕಿ, ಉಚಿತ ವಿದ್ಯುತ್ ಜತೆಗೆ ಮಹಿಳೆಯರ ಖಾತೆಗೆ 2 ಸಾವಿರ ರೂಪಾಯಿ, ನಿರುದ್ಯೋಗಿಗಳ ಖಾತೆಗೆ ಭತ್ಯೆಯನ್ನು ಜಮೆ ಮಾಡುತ್ತಿದೆ. ಹೀಗೆ ಕಾಂಗ್ರೆಸ್ ಪಕ್ಷ ಪ್ರತಿಯೊಬ್ಬ ಮತದಾರರ ನಂಬಿಕೆ ಉಳಿಸಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

CM Siddaramaiah in Bangalore Rural Lok Sabha constituency election campaign

ಬಿಜೆಪಿ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿ ನಿಮ್ಮ ತೆರಿಗೆ ಹಣವನ್ನೂ ನಿಮಗಾಗಿ ಖರ್ಚು ಮಾಡಲಿಲ್ಲ. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

ಯಾರು ಬೇಕು ನಿಮಗೆ?

ಹೀಗಾಗಿ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾಗ, ಮುಖ್ಯಮಂತ್ರಿ ಆಗಿದ್ದಾಗ ರಾಮನಗರ ಜಿಲ್ಲೆಯನ್ನು ಏಕೆ ಕಡೆಗಣಿಸಿದ್ದರು ಎನ್ನುವುದಕ್ಕೆ ಜನರಿಗೆ ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಮಂಕಾಳ ವೈದ್ಯ , ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ.ವಿ. ಶ್ರೀನಿವಾಸ್, ವಿಧಾನ‌ ಪರಿಷತ್ ಸದಸ್ಯ ಸುದಾಮ ದಾಸ್ ಸೇರಿ ರಾಮನಗರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಜಿಲ್ಲಾ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Continue Reading

ರಾಜಕೀಯ

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ವಿಚಾರಣೆಗೆ ಹಾಜರಾಗಲು ಜನಪ್ರತಿನಿಧಿಗಳ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ. ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಕೋರ್ಟ್‌ ಸೂಚಿಸಿದೆ.

VISTARANEWS.COM


on

40 per cent commission advertisement against BJP and Summons to CM Siddaramaiah and DCM DK Shivakumar
Koo

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ 40 ಪರ್ಸೆಂಟ್‌ ಕಮಿಷನ್ (40 percent commission) ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಸಮನ್ಸ್​ ಜಾರಿ ಮಾಡಿದೆ.

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಸಮನ್ಸ್ ನೀಡಿದೆ. ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚನೆ ನೀಡಿದರೆ, ಸಿಎಂಗೆ ಸಮನ್ಸ್ ಜಾರಿ ಮಾಡಲು ಹೈಗ್ರೌಂಡ್ಸ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜೂ. 1ಕ್ಕೆ ಹಾಜರಾಗಲು ರಾಹುಲ್‌ಗೆ ಸೂಚನೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ಪರ ವಕೀಲರು ಅರ್ಜಿ ಸಲ್ಲಿಸಿದರು. ಹೀಗಾಗಿ ರಾಹುಲ್ ಗಾಂಧಿ ಅವರು ಜೂನ್ 1ರಂದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾ.ಜೆ. ಪ್ರೀತ್ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಭ್ರಷ್ಟಾಚಾರ ಮಾಡಿದೆ ಎಂದು ಕಾಂಗ್ರೆಸ್‌ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಹುಲ್‌ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಈಗ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

ಬಿಜೆಪಿಗೆ ಡ್ಯಾಮೇಜ್‌ ಮಾಡಿದ್ದ 40 ಪರ್ಸೆಂಟ್‌ ಅಭಿಯಾನ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ 40 ಪರ್ಸೆಂಟ್‌ ಅಭಿಯಾನ ಮಾಡಿದ್ದರಿಂದ ಬಿಜೆಪಿಗೆ ಭಾರಿ ಡ್ಯಾಮೇಜ್‌ ಆಗಿತ್ತು. ಈ ಸಂಬಂಧ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟರ್‌ಗಳನ್ನು ಹರಿಬಿಡಲಾಗಿತ್ತು. ಅಲ್ಲದೆ, ಬೀದಿಗಳಲ್ಲಿ ಪೋಸ್ಟರ್‌ ಅಂಟಿಸಲಾಗಿತ್ತು. ಈ ಸಂಬಂಧ ಮೊಬೈಲ್‌ಗಳಲ್ಲಿ ಆಡಿಯೊ ಜಾಹೀರಾತು ಸೇರಿದಂತೆ ಟಿವಿ, ಪೇಪರ್‌ಗಳಲ್ಲಿ ಜಾಹೀರಾತುಗಳನ್ನು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕೋರ್ಟ್‌ ಮೆಟ್ಟಿಲೇರಿದ್ದರಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈಗ ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​​​ಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗ ಪ್ರತಿಕ್ರಿಯೆ ನೀಡಿದ್ದು, ವಕೀಲರು ಸೂಕ್ತ ಉತ್ತರ ನೀಡಲಿದ್ದಾರೆ. ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು ಎಂದು ಹೇಳಿದ್ದಾರೆ.

Continue Reading

ಬೆಂಗಳೂರು ಗ್ರಾಮಾಂತರ

Murder Case : ಮಚ್ಚಿನಿಂದ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

Murder Case : ತವರು ಮನೆ ಸೇರಿದ್ದ ಪತ್ನಿ ವಾಪಸ್‌ ಬರಲಿಲ್ಲವೆಂಬ ಸಿಟ್ಟಿಗೆ ಪಾಪಿ ಪತಿಯೊಬ್ಬ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

By

Murder case Family Dispute
ಪತ್ನಿಯನ್ನು ಕೊಂದ ಮುಬಾರಕ್‌
Koo

ಆನೇಕಲ್: ಪತ್ನಿಯನ್ನು ಬರ್ಬರವಾಗಿ ಕೊಂದು (Murder case) ಪತಿಯೊಬ್ಬ ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಟೌನ್‌ನಲ್ಲಿ ಈ ಘಟನೆ ನಡೆದಿದೆ. ಅರ್ಬಿಯಾ ತಾಜ್( 24) ಮೃತ ದುರ್ದೈವಿ. ಮುಬಾರಕ್(28) ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದವನು.

ಮುಬಾರಕ್‌ ಮಚ್ಚಿನಿಂದ ಕೊಚ್ಚಿ ಅರ್ಬಿಯಾಳನ್ನು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅರ್ಬಿಯಾ ತಾಜ್ ಮುಬಾರಕ್‌ನ ಕಿರುಕುಳದಿಂದ ಬೇಸತ್ತಿದ್ದಳು. ಹೀಗಾಗಿ ತಿಂಗಳ ಹಿಂದೆ ತವರು ಮನೆಗೆ ಸೇರಿಕೊಂಡಿದ್ದಳು. ವಾರದ ಹಿಂದೆ ಅರ್ಬಿಯಾಳನ್ನು ಮನೆಗೆ ವಾಪಸ್‌ ಬರುವಂತೆ ಒತ್ತಾಯಿಸಿದ್ದ.

ಆದರೆ ಅರ್ಬಿಯಾ ತಾಜ್ ಗಂಡನ ಮನೆಗೆ ತೆರಳಲು ನಿರಾಕರಿಸಿದ್ದಳು. ಪತ್ನಿಯ ತವರು ಮನೆಗೆ ಬಂದಿದ್ದ ಮುಬಾರಕ್‌, ಬಾಗಿಲು ಬಡಿದಿದ್ದ. ತೆರೆಯದೇ ಇದ್ದಾಗ ಕೊಡಲಿ ಹಾಗೂ ಮಚ್ಚಿನಿಂದ ಬಾಗಿಲು ಮುರಿದು ಒಳ ನುಗ್ಗಿದ್ದಾನೆ. ನಂತರ ಮುಬಾರಕ್‌ ಮಚ್ಚಿನಿಂದ ಪತ್ನಿಗೆ ಹಲ್ಲೆ ನಡೆಸಿ ಬರ್ಬರವಾಗಿ ಕೊಂದಿದ್ದಾನೆ. ಇತ್ತ ಮಗಳ ಕೂಗಾಟ ಕೇಳಿ ತಾಯಿ ನೆರವಿಗೆ ಧಾವಿಸಿದಾಗ, ರೂಮಿನ ಬಾಗಿಲು ಲಾಕ್ ಮಾಡಿಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ.

Murder Case

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಗಣಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗೆ ಜಿಗಣಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅರ್ಬಿಯಾ ತಾಜ್‌ಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

ಎದುರಾಳಿಯ ಮುಗಿಸಲು ತಾನೇ ರೆಡಿ ಮಾಡಿದ್ದ ಹುಡುಗರಿಂದಲೇ ಕೊಲೆಯಾದ ರೌಡಿಶೀಟರ್‌

ಬೆಂಗಳೂರು: ಎದುರಾಳಿಯ ಕೊಲೆಗೆ ಸ್ಕೆಚ್ ಹಾಕಿ ಹುಡುಗರನ್ನು ರೆಡಿ ಮಾಡಿದ್ದ ರೌಡಿಶೀಟರ್‌ ದಿನೇಶ್‌ ಕುಮಾರ್‌, ಅವರಿಂದಲೇ ಬರ್ಬರವಾಗಿ ಕೊಲೆಯಾಗಿ (Murder case) ಹೋಗಿದ್ದ. ಒಂದೇ ತಟ್ಟೆಯಲ್ಲಿ ಅನ್ನ ತಿಂದು ಮುಹೂರ್ತ ಇಟ್ಟು ಕೊಂದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರೌಡಿಶೀಟರ್ ದಿನೇಶ್ ಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸರು 12 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ‌ ಆರೋಪಿಗಳ ಪೈಕಿ ಇಬ್ಬರು ಕೊತ್ತನೂರು ಹಾಗೂ ರಾಮಮೂರ್ತಿನಗರ ಪೊಲೀಸ್ ಠಾಣೆಯ ರೌಡಿಶೀಟರ್‌ಗಳಾಗಿದ್ದಾರೆ.

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದಿನೇಶ್ ಕುಮಾರ್‌ನನ್ನು ಹತ್ಯೆಗೈದಿದ್ದರು ಎಂದು ತಿಳಿದು ಬಂದಿದೆ. ಇನ್ನೂ ಆರೋಪಿಗಳ ಪತ್ತೆಗೆ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದರು. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: Child Abduction: ಮಲೆನಾಡಿನ ಗ್ರಾಮದಲ್ಲಿ ಹೆಣ್ಣು ಮಗು ಅಪಹರಣ, ಆತಂಕ

ತಿರುಗು ಬಾಣ ಬಿಟ್ಟ ರೌಡಿ ದಿಲೀಪ್‌

ಇನ್ನೂ ಈ ದಿನೇಶ್‌ ತನ್ನ ಎದುರಾಳಿ ಆಗಿರುವ ರಾಮಮೂರ್ತಿನಗರದ ರೌಡಿಶೀಟರ್‌ ದಿಲೀಪ್‌ನ ಕೊಲೆಗೆ ಸ್ಕೆಚ್ ಹಾಕಿದ್ದ. ಇದಕ್ಕಾಗಿ ಸತೀಶ್ ಅರವಿಂದ , ಗೌತಮ್ ಸೇರಿ ಹತ್ತು ಜನ ಹುಡುಗರನ್ನು ರೆಡಿ ಮಾಡಿದ್ದ. ಆದರೆ ಈ ಹತ್ತು ಜನರು ದಿನೇಶ್‌ನ ವಿರೋಧಿ ಆಗಿರುವ ರೌಡಿ ದಿಲೀಪ್ ಜತೆಗೆ ಸಂಪರ್ಕದಲ್ಲಿ ಇದ್ದರು.

ಯಾವ ಹುಡುಗರ ಜತೆಗೆ ದಿನೇಶ್ ಪ್ಲಾನ್ ಮಾಡಿದ್ದನೋ ಅವರನ್ನೇ ಸೆಟ್ ಮಾಡಿಕೊಂಡ ರೌಡಿ ದಿಲೀಪ್‌ ತಿರುಗು ಬಾಣ ಬಿಟ್ಟಿದ್ದ. ದಿನೇಶ್‌ ಜತೆಗಿದ್ದುಕೊಂಡೇ ಆತನನ್ನೇ ಕೊಂದು ಮುಗಿಸಿದ್ದಾರೆ. ದಿಲೀಪ್, ಕ್ರಿಸ್ಟೋಫರ್, ಅರವಿಂದ, ಗೌತಮ್ ಸೇರಿ ಒಟ್ಟು ಹನ್ನೆರಡು ಜನರನ್ನು ಜೈಲಿಗೆ ಕಳುಹಿಸಲಾಗಿದೆ.

ಮೂರೇ ನಿಮಿಷದಲ್ಲಿ ಕೊಂದು ಹಾಕಿದ್ರು

ಮಾ.27ರಂದು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಕಂ ಸುಪಾರಿ ಕಿಲ್ಲರ್‌ ದಿನೇಶ್‌ನನ್ನು ಕಮ್ಮನಹಳ್ಳಿ ಓಯೋ ರೂಂ ಬಳಿ ಬರ್ಬರ ಹತ್ಯೆ ನಡೆದಿತ್ತು. ಹಣ ಇಲ್ಲ ಎಂದು ಕಾರ್ಡ್ ಕೊಡುವ ಬಗ್ಗೆ ರಿಸೆಪ್ಷನಿಸ್ಟ್ ಜತೆ ಆತನ ಹುಡುಗರು ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಸೋಫಾದಲ್ಲಿ ಕೂತಿದ್ದ ದಿನೇಶ್ ಮೇಲೆ ಏಕಾಏಕಿ ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ, ಕೇವಲ ಮೂರು ನಿಮಿಷದಲ್ಲಿ ಕೊಂದು ಹಂತಕರು ಪರಾರಿಯಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

Bike Service : ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿದ್ದ ಏರ್‌ ಪ್ರೆಶರ್‌ ಪೈಪ್‌ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟ ಪರಿಣಾಮ ಯುವಕನೊಬ್ಬ (Bengaluru News) ಮೃತಪಟ್ಟಿದ್ದಾನೆ.

VISTARANEWS.COM


on

By

Bengaluru News air pressure pipe
ಮೃತ ಯೋಗೇಶ್‌ ಹಾಗೂ ಅರೆಸ್ಟ್‌ ಆದ ಮುರಳಿ
Koo

ಬೆಂಗಳೂರು: ಸ್ನೇಹಿತರ ಹುಚ್ಚಾಟಕ್ಕೆ ಯುವಕನೊಬ್ಬ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಏರ್‌ ಪ್ರೆಶರ್‌ ಪೈಪ್‌ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗೆ ಕರುಳು ಬ್ಲಾಸ್ಟ್‌ ಆಗಿ ಯುವಕ ಮೃತಪಟ್ಟಿದ್ದಾನೆ. ಸ್ನೇಹಿತರ ಹುಡುಗಾಟದಲ್ಲಿ ಘನಘೋರ ಘಟನೆ ಬೆಂಗಳೂರಲ್ಲಿ ನಡೆದಿದೆ.

ಯೋಗಿಶ್ (28) ಮೃತ ದುರ್ದೈವಿ. ಕಳೆದ ಮಾರ್ಚ್ 25ರಂದು ಬೈಕ್‌ ರಿಪೇರಿಗಾಗಿ ಸಂಪಿಗೆಹಳ್ಳಿಯ ಸಿಎನ್‌ಸಿ (CNS) ಬೈಕ್ ಸರ್ವೀಸ್ ಸೆಂಟರ್‌ಗೆ ಯೋಗಿಶ್‌ ತೆರಳಿದ್ದ. ಅದೇ ಸರ್ವೀಸ್‌ ಸೆಂಟರ್‌ನಲ್ಲಿ ಯೋಗಿಶ್‌ ಸ್ನೇಹಿತ ಮುರುಳಿ ಎಂಬಾತ ಕೆಲಸ ಮಾಡುತ್ತಿದ್ದ.

ಇವರಿಬ್ಬರು ಒಬ್ಬರಿಗೊಬ್ಬರು ತರ್ಲೆ, ತಂಟೆ ಮಾಡಿಕೊಂಡು ಆಟವಾಡುತ್ತಿದ್ದರು. ಸರ್ವೀಸ್‌ ಸೆಂಟರ್‌ನಲ್ಲಿದ್ದ ಏರ್ ಪ್ಲೇಶರ್ ಪೈಪ್‌ನಿಂದ ಇಬ್ಬರು ಆಟ ಆಡಲು ಮುಂದಾಗಿದ್ದರು. ಮೊದಲಿಗೆ ಮುರುಳಿ, ಯೋಗೀಶ್‌ನ ಮುಖ ಹಾಗೂ ಹೊಟ್ಟೆಗೆ ಗಾಳಿ ಬಿಟ್ಟಿದ್ದ. ಇದಾದ ಬಳಿಕ ಯೋಗಿಶ್ ಗುದದ್ವಾರಕ್ಕೆ ಏರ್‌ ಪ್ಲೇಶರ್‌ನಿಂದ ಗಾಳಿ ಬಿಟ್ಟಿದ್ದಾನೆ.

ಇದನ್ನೂ ಓದಿ: Kalaburagi News : ರಾತ್ರಿ ಹೊತ್ತಲ್ಲಿ ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಶಂಕಾಸ್ಪದ ಡ್ರೋನ್‌ ಹಾರಾಟ!

ಈ ವೇಳೆ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಯೋಗೇಶ್‌ ಹೊಟ್ಟೆ ಊದಿಕೊಂಡು ಕರುಳು ಬ್ಲಾಸ್ಟ್ ಆಗಿದೆ. ತಕ್ಷಣ ಯೋಗೀಶ್ ನರಳಾಟ ಕಂಡು ಮುರುಳಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಗೇಶ್‌ ಮೃತಪಟ್ಟಿದ್ದಾನೆ.

ಸದ್ಯ ಮೃತ ಯೋಗೇಶ್‌ ಪೋಷಕರು ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 304 ಅಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಮುರಳಿಯನ್ನು ಬಂಧಿಸಿದ್ದಾರೆ.

ಘಟನೆ ಸಂಬಂಧ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ. ಮೃತ ಯೋಗೇಶ್ ಮೂಲತಃ ವಿಜಯಪುರದವನು. ಡೆಲವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡು ಥಣಿಸಂದ್ರದಲ್ಲಿ ವಾಸವಿದ್ದ. ಮೊನ್ನೆ ಸಂಜೆ ಬೈಕ್ ಸರ್ವೀಸ್ ಮಾಡಿಸಲು ಹೋಗಿದ್ದ. ಮುರುಳಿ ಕೂಡ ಅದೇ ಬೈಕ್‌ ಸರ್ವೀಸ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ.

ಇಬ್ಬರು ಸ್ನೇಹಿತರಾಗಿದ್ದ ಕಾರಣ ಆಟ ಆಡಲು ಹೋಗಿ ಘಟನೆ ಸಂಭವಿಸಿದೆ. ಮೊದಲಿಗೆ ಮುರುಳಿ ಮುಖ ಹಾಗೂ ಎದೆಗೆ ಗಾಳಿ ಬಿಟ್ಟಿದ್ದಾನೆ. ಬಳಿಕ ಹಿಂಬದಿಯಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದಾನೆ. ಈ ವೇಳೆ ಹೊಟ್ಟೆ ಒಮ್ಮೆಲೆ ಊದಿಕೊಂಡು ಯೋಗೇಶ್‌ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವಿವರಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Arvind Kejriwal
ದೇಶ10 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ತಪ್ಪದ ಸಂಕಷ್ಟ; ಇನ್ನೂ 4 ದಿನ ಜೈಲೇ ಗತಿ!

CM Siddaramaiah hugs DK Suresh in Bangalore Rural Lok Sabha constituency election campaign
Lok Sabha Election 202417 mins ago

Lok Sabha Election 2024: ಕಷ್ಟಕ್ಕೆ ಸ್ಪಂದಿಸುವ ಡಿಕೆಸು ಬೇಕೋ? ವೈಟ್‌ ಕಾಲರ್‌ ಡಾ. ಮಂಜುನಾಥ್‌ ಬೇಕೋ? ಸಿಎಂ ಪ್ರಶ್ನೆ

Mudhol Movie Sanjana
ಸ್ಯಾಂಡಲ್ ವುಡ್20 mins ago

Mudhol Movie: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಜತೆ ಸಂಜನಾ ರೊಮ್ಯಾನ್ಸ್!

narendra modi
ದೇಶ34 mins ago

ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

Varun Gandhi
ಪ್ರಮುಖ ಸುದ್ದಿ56 mins ago

Varun Gandhi: ಸಂಸದ ಅಲ್ಲದಿದ್ದರೂ ನಿಮ್ಮ ಮಗ; ಜನಕ್ಕೆ ಟಿಕೆಟ್‌ ವಂಚಿತ ವರುಣ್‌ ಗಾಂಧಿ ಭಾವುಕ ಪತ್ರ!

supreme court CJI DY chandrachud
ಪ್ರಮುಖ ಸುದ್ದಿ1 hour ago

CJI DY Chandrachud: 600 ವಕೀಲರಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ; ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗೆಗೆ ಕಳವಳ

40 per cent commission advertisement against BJP and Summons to CM Siddaramaiah and DCM DK Shivakumar
ರಾಜಕೀಯ1 hour ago

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

Murder case Family Dispute
ಬೆಂಗಳೂರು ಗ್ರಾಮಾಂತರ1 hour ago

Murder Case : ಮಚ್ಚಿನಿಂದ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

Bengaluru News air pressure pipe
ಬೆಂಗಳೂರು2 hours ago

Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20244 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ11 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌