Money secrets : ಉಳಿತಾಯದ ಅಭ್ಯಾಸ ಭಾರತೀಯರನ್ನು ಆರ್ಥಿಕ ಹಿಂಜರಿತದಿಂದ ಪಾರು ಮಾಡಿದೆ: ಹರಿಪ್ರಕಾಶ್‌ ಕೋಣೆಮನೆ - Vistara News

ಕರ್ನಾಟಕ

Money secrets : ಉಳಿತಾಯದ ಅಭ್ಯಾಸ ಭಾರತೀಯರನ್ನು ಆರ್ಥಿಕ ಹಿಂಜರಿತದಿಂದ ಪಾರು ಮಾಡಿದೆ: ಹರಿಪ್ರಕಾಶ್‌ ಕೋಣೆಮನೆ

ವಿಸ್ತಾರ ನ್ಯೂಸ್‌ನ ಕಾರ್ಯನಿರ್ವಾಹಕ ಸಂಪಾದಕ ಶರತ್‌ ಎಂ.ಎಸ್‌ ಅವರ ಜನಪ್ರಿಯ ಕೃತಿ ಮನಿ ಸೀಕ್ರೆಟ್ಸ್ &‌ ಸ್ಟಾಕ್‌ ಮಾರ್ಕೆಟ್‌ ಸೀಕ್ರೆಟ್ಸ್‌ನ ಲೋಕಾರ್ಪಣೆ ಕಾರ್ಯಕ್ರಮ ( Money secrets and Stock Market Secrets) ಬೆಂಗಳೂರಿನಲ್ಲಿ ಸೋಮವಾರ ನಡೆಯಿತು. ವಿವರ ಇಲ್ಲಿದೆ.

VISTARANEWS.COM


on

Money secrets
ಬೆಂಗಳೂರಿನಲ್ಲಿ ಶರತ್‌ ಎಂ.ಎಸ್‌ ಅವರ ಮನಿ ಸೀಕ್ರೆಟ್ಸ್ &‌ ಸ್ಟಾಕ್‌ ಮಾರ್ಕೆಟ್‌ ಸೀಕ್ರೆಟ್ಸ್‌ ಕೃತಿಯನ್ನು ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ಸೋಮವಾರ ಬಿಡುಗಡೆಗೊಳಿಸಿದರು. ವಿಜಯವಾಣಿ ಸಂಪಾದಕ ಕೆ.ಎನ್‌ ಚನ್ನೇಗೌಡ, ಬಹುರೂಪಿಯ ಜಿ.ಎನ್‌ ಮೋಹನ್‌, ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್‌ ಭಾಗವಹಿಸಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯರಲ್ಲಿ ಹಿಂದಿನಿಂದಲೂ ಉಳಿತಾಯದ ಪ್ರವೃತ್ತಿ ಸಹಜವಾಗಿದೆ. ಇದು ಪಾಶ್ಚಿಮಾತ್ಯ ಆರ್ಥಿಕ ಚಿಂತನೆಗೆ ಹೋಲಿಸಿದರೆ ಭಿನ್ನವಾಗಿದೆ. ( Money secrets and Stock Market Secrets ) ಆದರೆ ಭಾರತಕ್ಕೆ ಜಾಗತಿಕ ಆರ್ಥಿಕ ಹಿಂಜರಿತಗಳನ್ನು ಯಶಸ್ವಿಯಾಗಿ ಎದುರಿಸಲು ಇದರಿಂದ ಸಾಧ್ಯವಾಗಿದೆ ಎಂದು ವಿಸ್ತಾರನ್ಯೂಸ್‌ನ ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ ಹೇಳಿದರು.

ವಿಸ್ತಾರ ನ್ಯೂಸ್‌ನ ಕಾರ್ಯನಿರ್ವಾಹಕ ಸಂಪಾದಕ ಶರತ್‌ ಎಂ.ಎಸ್‌ (Sharath M.S) ಅವರ ಮನಿ ಸೀಕ್ರೆಟ್ಸ್‌ & ಸ್ಟಾಕ್‌ ಮಾರ್ಕೆಟ್‌ ಸೀಕ್ರೆಟ್ಸ್‌ ಕೃತಿಯನ್ನು ಲೋಕಾರ್ಪಣೆಗೊಳಿಸಿ (Book Releases) ಅವರು ಮಾತನಾಡಿದರು.

2008ರಲ್ಲಿ ಜಾಗತಿಕ ಆರ್ಥಿಕ ಹಿಂಜರಿತ ಸಂಭವಿಸಿದಾಗ ಅಮೆರಿಕದಲ್ಲಿ ಬ್ಯಾಂಕಿಂಗ್‌ ದಿಗ್ಗಜ ಲೀಮನ್‌ ಬ್ರದರ್ಸ್‌ ದಿವಾಳಿಯಾಯಿತು. ಬಳಿಕ ಅಮೆರಿಕದ ಅನೇಕ ಬ್ಯಾಂಕ್‌ಗಳು ನೆಲಕಚ್ಚಿತು. ಈಗ ಮತ್ತೊಮ್ಮೆ ಅಮೆರಿಕದಲ್ಲಿ ಬ್ಯಾಂಕಿಂಗ್‌ ವಲಯದಲ್ಲಿ ಅಸ್ಥಿರತೆ ಉಂಟಾಗಿದೆ. ಮೂರು ಬ್ಯಾಂಕ್‌ಗಳು ದಿವಾಳಿಯಾಗಿವೆ. ಆದರೆ 2008ರಲ್ಲಿ ಭಾರತದ ಒಂದು ಕೋಪರೇಟಿವ್‌ ಬ್ಯಾಂಕ್‌ ಕೂಡ ರಿಸೆಶನ್‌ಗೆ ಸಿಲುಕಿರಲಿಲ್ಲ. ಹೆಚ್ಚಿನವರಿಗೆ ಜಾಗತಿಕ ಆರ್ಥಿಕ ಹಿಂಜರಿತ ಎಂಬ ಬಿಕ್ಕಟ್ಟು ಉಂಟಾಗಿದೆ ಎಂಬುದು ಅರಿವಿಗೇ ಬಂದಿರಲಿಲ್ಲ ಎಂದು ಹೇಳಿದರು.

ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲೂ ಭಾರತೀಯರಿಗೆ ಉಳಿತಾಯ ಮಾಡುವ ಪ್ರವೃತ್ತಿಯೇ ವಿಪತ್ತನ್ನು ಎದುರಿಸುವ ಸಾಮರ್ಥ್ಯವನ್ನು ತಂದುಕೊಟ್ಟಿತ್ತು. ಎರಡು ವರ್ಷಗಳ ಕಾಲ ಆರ್ಥಿಕ ಚಟುವಟಿಕೆಗಳು ಎಂದಿನಂತೆ ನಡೆಯದಿದ್ದರೂ, ಜನತೆ ದೃತಿಗೆಡದೆ ಸಂಪಾದಿಸಿದ್ದರಲ್ಲಿ ಸಾಧ್ಯವಾದಷ್ಟು ಉಳಿತಾಯ ಮಾಡಿ ಪರಿಸ್ಥಿತಿಯನ್ನು ಜಾಣ್ಮೆಯಿಂದ ನಿರ್ವಹಿಸಿದ್ದರು. ಆದ್ದರಿಂದ ಭಾರತೀಯರು ಹಣಕಾಸು ಸಾಕ್ಷರತೆಯಲ್ಲಿ ಹಿಂದೆ ಇದ್ದಾರೆ ಎಂದು ಸಾರಾಸಗಟಾಗಿ ಹೇಳುವುದಕ್ಕಿಂತ, ಆಧುನಿಕ ಹಣಕಾಸು ವ್ಯವಸ್ಥೆಯ ಅರಿವಿನ ಕೊರತೆ ಇದೆ ಎನ್ನಬಹುದು ಎಂದರು.

ವ್ಯಕ್ತಿ ಕೇಂದ್ರಿತ ಸಮಾಜ ಮಾತ್ರವೇ ಔದ್ಯಮೀಕರಣವನ್ನು ಹೊಂದಬಹುದು. ಸಮಾಜಕೇಂದ್ರಿತ ಆರ್ಥಿಕತೆ ಅಲ್ಲ ಎಂದು 80ರ ದಶಕದಲ್ಲಿ ಪಾಠ ಮಾಡಲಾಗುತ್ತಿತ್ತು. ಪ್ರತಿ ವ್ಯಕ್ತಿಯನ್ನು ಒಬ್ಬ ಬಳಕೆದಾರನನ್ನಾಗಿ ಮಾಡಬೇಕು. ಮನೆಯವರೆಲ್ಲರೂ ಸೇರಿ ಬಳಸುವ ವಸ್ತುಗಳನ್ನು ಉತ್ತೇಜಿಸಕೂಡದು ಎಂಬ ತಂತ್ರಗಾರಿಕೆ ಅದರಲ್ಲಿತ್ತು. ಮನೆಯವರೆಲ್ಲ ಒಂದೇ ಸೋಪ್‌ ಬಳಸುತ್ತಿದ್ದರು. ಅದು ತಪ್ಪೆಂದು ಹೇಳಲಾಯಿತು. ಎಲ್ಲರಿಗಿಂತಲೂ ಎಲ್ಲದರಲ್ಲೂ ನಾನು ಮುಂದೆ ಇರಬೇಕು ಎಂದು ವ್ಯಕ್ತಿ ಬಯಸಬೇಕು. ಆವಾಗಲೇ ಮಾರುಕಟ್ಟೆಯಲ್ಲಿ ಎಲ್ಲ ವಸ್ತುಗಳನ್ನೂ ಖರೀದಿಸುತ್ತಾನೆ. ಇದರಿಂದ ಆರ್ಥಿಕ ಚಟುವಟಿಕೆಗಳು ವೃದ್ಧಿಸುತ್ತವೆ ಎಂದು ತಿಳಿಸಲಾಯಿತು. ಆಗೆಲ್ಲ ಇದು ಅಸಾಧ್ಯ ಎನ್ನುವ ಮಾತುಗಳಿದ್ದವು. ಹೀಗಾಗಿ ಕ್ರಮೇಣ ನಮ್ಮೆಲ್ಲರ ತಲೆಗೆ ಬಿತ್ತಲಾಯಿತು. ಅನೇಕ ವಿಚಾರಗಳಲ್ಲಿ ಇಂದು ಭಾರತೀಯರು ಪಾಶ್ಚಿಮಾತ್ಯ ಆರ್ಥಿಕ ಮಾದರಿಯನ್ನು ಅನುಸರಿಸುತ್ತಿದ್ದಾರೆ ಎಂದು ವಿವರಿಸಿದರು.

ಬ್ಯಾಂಕಿಂಗ್‌ನಲ್ಲಿ ಭಾರತೀಯ ಆರ್ಥಿಕ ಚಿಂತನೆ:

ಹಲವಾರು ವ್ಯವಹಾರಗಳಲ್ಲಿ ಭಾರತೀಯರು ಸಾಂಪ್ರದಾಯಿಕ ಹಣಕಾಸು ಚಿಂತನೆಗಳಿಂದ ಹೊರ ಬಂದಿಲ್ಲ. ಸಾಲ ನೀಡುವಾಗ ಭಾರತೀಯ ಬ್ಯಾಂಕ್‌ಗಳು ಸುಲಭವಾಗಿ ನೀಡುವುದಿಲ್ಲ. ಸಾಂಪ್ರದಾಯಿಕ ಮಾನದಂಡಗಳನ್ನು ಬಿಟ್ಟುಕೊಡುವುದಿಲ್ಲ. ಹೀಗಾಗಿ ಆರ್ಥಿಕ ಹಿಂಜರಿತದ ವೇಳೆ ಭಾರತೀಯ ಬ್ಯಾಂಕ್‌ಗಳು ನೆಲ ಕಚ್ಚಿಲ್ಲ ಎಂದು ಹರಿಪ್ರಕಾಶ್‌ ಕೋಣೆಮನೆ ಅವರು ವಿವರಿಸಿದರು.

ಖ್ಯಾತ ಹಣಕಾಸು ತಜ್ಞ ಡಾ. ಎಸ್.ಗುರುಮೂರ್ತಿ ಅವರು, 2008ರ ಆರ್ಥಿಕ ಮುಗ್ಗಟ್ಟಿನಿಂದ ಭಾರತವನ್ನು ರಕ್ಷಿಸಿದ್ದು ನಮ್ಮ ಅಡುಗೆ ಮನೆಯ ಡಬ್ಬಿಗಳು ಎನ್ನುತ್ತಾರೆ. ಅಂದರೆ ಗೃಹಿಣಿಯರು ಯಾವುದೇ ಖರ್ಚಿಗೆ ಹಣವನ್ನು ಪಡೆದುಕೊಂಡರೂ, ಅದರಲ್ಲಿ ಒಂದಷ್ಟು ಉಳಿಸಿ ಅಡುಗೆ ಮನೆಯ ಡಬ್ಬಿಗಳಲ್ಲಿ ಜೋಪಾನವಾಗಿ ಇಡುತ್ತಾರೆ. ತಿಂಗಳ ಕೊನೆಗೆ ಗಂಡನ ಸಂಬಳ ಖಾಲಿಯಾದಾಗ ಹೆಂಡತಿಯೇ ನೀಡುತ್ತಾಳೆ. ತನ್ನ ಹತ್ತಿರ ಇದೆ ಎನ್ನುವುದಿಲ್ಲ. ಪಕ್ಕದ ಮನೆಯಿಂದ ಸಾಲ ಪಡೆದೆ ಎಂದು ಹೇಳಿ ಗಂಡನ ಸಂಬಳ ಬಂದಾಗ ಮತ್ತೆ ಆ ಹಣವನ್ನು ಪಡೆದು ಇಡುತ್ತಾಳೆ. ಈ ರೀತಿಯ ಉಳಿತಾಯದ ಮಾನಸಿಕತೆ ಇಡೀ ಭಾರತದಲ್ಲಿದೆ. ಮಕ್ಕಳ ಭವಿಷ್ಯದ ಶಿಕ್ಷಣ, ಮಗಳ ಮದುವೆ, ಪ್ರವಾಸ, ಮನೆ ನಿರ್ಮಾಣ ಇತ್ಯಾದಿಗೆ ಹಣ ಉಳಿತಾಯ ಮಾಡುತ್ತಾರೆ. ಹಾಗಾದರೆ ಇವರನ್ನು ಹಣಕಾಸು ಸಾಕ್ಷರರು ಎಂದು ಕರೆಯಬೇಕೇ, ಬೇಡವೇ? ಆದ್ದರಿಂದ 80ರ ದಶಕದಲ್ಲಿ ವ್ಯಕ್ತಿ ಕೇಂದ್ರಿತ ಸಮಾಜ ಮಾತ್ರ ಆರ್ಥಿಕ ಚಟುವಟಿಕೆಗಳನ್ನು ಸೃಷ್ಟಿಸಬಲ್ಲುದು ಎಂದು ನಮ್ಮ ತಲೆಗೆ ಬಿತ್ತಿದಂತೆ, ಈಗ ಹಣಕಾಸು ಸಾಕ್ಷರತೆಯ ಕುರಿತು ನರೇಟಿವ್‌ ಸೆಟ್‌ ಮಾಡಲಾಗುತ್ತಿದೆ. ಹಣಕಾಸು ಸಾಕ್ಷರತೆಯನ್ನು ಆಧುನಿಕ ಹಣಕಾಸು ಹೂಡಿಕೆ, ಹಣಕಾಸು ತಂತ್ರಜ್ಞಾನದ ತಿಳುವಳಿಕೆಯ ಆಧಾರದಲ್ಲಿ ಅಳೆಯುವುದಿದ್ದರೆ, ಅದು ಭಾರತಕ್ಕೆ ಹೊಂದುವುದಿಲ್ಲ ಎಂದು ವಿವರಿಸಿದರು.

ಉಳಿತಾಯ ಮಾಡಿದ ಹಣದ ವೃದ್ಧಿಗೆ ಮನಿ ಸೀಕ್ರೇಟ್ಸ್ ಪುಸ್ತಕದ ಓದು ಅಗತ್ಯ:

ಭಾರತವು ಉಳಿತಾಯ ಆಧಾರಿತ ಆರ್ಥಿಕತೆಯಲ್ಲಿ ಅನುಭವವನ್ನು ತನ್ನದಾಗಿಸಿದೆ. ಆದರೆ ಹೀಗೆ ಉಳಿತಾಯ ಮಾಡಿರುವ ಹಣವನ್ನು ಬೆಳೆಸುವುದು ಹೇಗೆ ಎಂಬುದನ್ನು ಅರಿತುಕೊಳ್ಳಲು ಶರತ್‌ ಅವರ ಮನಿ ಸೀಕ್ರೆಟ್ಸ್‌ & ಸ್ಟಾಕ್‌ ಸೀಕ್ರೆಟ್ಸ್‌ ಪುಸ್ತಕದ ಓದು ಸಹಕಾರಿಯಾಗಿದೆ. ಎಲ್ಲ ಕಡೆಯಿಂದಲೂ ಹಣಕಾಸು ಕುರಿತ ಮಾಹಿತಿಗಳನ್ನು ಪಡೆಯಬೇಕು. ಆದರೆ ನಿರ್ಧಾರ ನಮ್ಮದೇ ಆಗಿರಬೇಕು. ಅಂಥ ನಿರ್ಧಾರ ಕೈಗೊಳ್ಳಲು ಪ್ರಾಥಮಿಕ ಜ್ಞಾನ ಅಗತ್ಯ. ಇಲ್ಲಿಯವರೆಗೆ ಕಾಮರ್ಸ್‌ ಹಿನ್ನೆಲೆ ಇರುವವರಿಗೆ ಮಾತ್ರ ಇದು ಲಭಿಸುತ್ತಿತ್ತು. ಆದರೆ ಇದೀಗ ಶರತ್‌ ಅವರು ಅಂಥ ಹಿನ್ನೆಲೆ ಇಲ್ಲದವರಿಗೂ ಅರ್ಥವಾಗುವಂತೆ ಪುಸ್ತಕ ಬರೆದಿದ್ದಾರೆ. ಈ ಕೃತಿಯ ದೊಡ್ಡ ಶಕ್ತಿ ಎಂದರೆ ಸರಳತೆ. ಅನ್ನವನ್ನು ಕಲಸಿ, ತುತ್ತು ಮಾಡಿ ಬಾಯಿಗಿಟ್ಟಾಗಿದೆ. ಇನ್ನು ಅಗಿದು ನುಂಗುವುದೊಂದೇ ಬಾಕಿ ಎನ್ನುವಷ್ಟು ಸರಳವಾಗಿದೆ ಎಂದು ಪ್ರಶಂಸಿಸಿದರು.

ಹಣಕಾಸು ಕುರಿತು ಚಾಣಕ್ಯನಿಂದ ಇತ್ತೀಚಿನ ಹಣಕಾಸು ತಜ್ಞರ ತನಕ ಎಲ್ಲರೂ ಅನೇಕ ಆಯಾಮಗಳನ್ನು ತಿಳಿಸಿಕೊಟ್ಟಿದ್ದಾರೆ. ಆದರೆ ಇಂದಿನ ಅವಶ್ಯಕತೆ ಯಾವುದೆಂದರೆ, ಉಳಿತಾಯ ಮಾಡಿರುವ ಹಣವನ್ನು ವೈಜ್ಞಾನಿಕ, ಕಾನೂನುಬದ್ಧ ರೀತಿಯಲ್ಲಿ ಬೆಳೆಸುವುದು ಹೇಗೆ ಎಂಬುದಾಗಿದೆ. ಇದಕ್ಕಾಗಿ ಹಣಕಾಸು ಶಿಸ್ತು, ಅಧ್ಯಯನ, ಸ್ವಂತ ನಿರ್ಧಾರ ಒಂದೆಡೆಯಾಗಿದ್ದರೆ, ಮತ್ತೊಂದು ಕಡೆ ಷೇರು, ಮ್ಯೂಚುವಲ್‌ ಫಂಡ್‌, ಟರ್ಮ್‌ ಇನ್ಷೂರೆನ್ಸ್‌ನಂಥ ಹೂಡಿಕೆ ಅಗತ್ಯ. ಇವೆಲ್ಲದರ ಕುರಿತು ಸಮಗ್ರವಾಗಿ ಅರಿಯಲು ಶರತ್‌ ಅವರ ಪುಸ್ತಕವನ್ನು ಓದಬೇಕು ಎಂದು ಹೇಳಿದರು.‌

ಹೂಡಿಕೆ ಕುರಿತ ತಿಳುವಳಿಕೆ ಹೆಚ್ಚಿಸಲು ಮನಿ ಸೀಕ್ರೆಟ್ಸ್‌ : ಕೆ.ಎನ್‌ ಚೆನ್ನೇಗೌಡ

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಜಯವಾಣಿ ಸಂಪಾದಕ ಕೆ.ಎನ್‌ ಚೆನ್ನೇಗೌಡ ಅವರು ಮಾತನಾಡಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಾಕಷ್ಟು ಅರಿವು ಅಗತ್ಯ, ಇಲ್ಲದಿದ್ದರೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು. 2008ರ ಆರ್ಥಿಕ ಹಿಂಜರಿತದಿಂದ ಇತ್ತೀಚಿನ ನಿಶ್ಚಿತತೆಯ ಸಂದರ್ಭದ ತನಕ ಇದಕ್ಕೆ ಹಲವಾರು ನಿದರ್ಶನಗಳನ್ನು ನಾವು ನಮ್ಮ ಸುತ್ತಮುತ್ತವೇ ನೋಡಬಹುದು. ಆದ್ದರಿಂದ ಹೂಡಿಕೆ ಕುರಿತ ತಿಳುವಳಿಕೆಯನ್ನು ಹೆಚ್ಚಿಸಲು ಶರತ್‌ ಅವರ ಪುಸ್ತಕ ಸಹಕಾರಿ ಎಂದು ತಿಳಿಸಿದರು.

ಷೇರು ಮಾರುಕಟ್ಟೆಯಲ್ಲಿ ಕಳೆದುಕೊಂಡದ್ದನ್ನು ಅಲ್ಲೇ ತೆಗೆಯಬೇಕು ಎಂದು ಹೇಳುತ್ತಿದ್ದರು. ಅದೇ ರೀತಿ ದುಡ್ಡನ್ನು ಮಾಡುವುದು ಹೇಗೆ ಎಂದು ಶರತ್‌ ಹೇಳಿ ಕೊಟ್ಟಿದ್ದಾರೆ. ಆರ್ಥಿಕ ಸಾಕ್ಷರತೆ ಇಲ್ಲದಿದ್ದರೆ ಜೀವನ ಸಲೀಸಾಗಿರುವುದಿಲ್ಲ ಎಂದರು.

ಕಲಿಕೆ ಇಲ್ಲದೆ ಗಳಿಕೆ ಇಲ್ಲ: ಶರತ್‌ ಎಂ.ಎಸ್

ಪುಸ್ತಕದ ಲೇಖಕ ಹಾಗೂ ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ಸಂಪಾದಕ ಶರತ್‌ ಎಂ.ಎಸ್‌ ಅವರು ಮಾತನಾಡಿ, ನಮ್ಮ ಶೈಕ್ಷಣಿಕ ವ್ಯವಸ್ಥೆಯಲ್ಲಿ ಹಣಕಾಸು ವಿಚಾರಗಳ ಬಗ್ಗೆ ತಿಳುವಳಿಕೆ ಮೂಡಿಸಲು ಆದ್ಯತೆ ನೀಡದಿರುವುದರಿಂದ ಉಂಟಾಗಿರುವ ಕೊರತೆಯನ್ನು ನೀಗಿಸಬೇಕಾದ ಅವಶ್ಯಕತೆ ಇದೆ. ಇದೇ ಕಾರಣದಿಂದಾಗಿ 18-20 ವರ್ಷ ಶಿಕ್ಷಣ ಪಡೆದವರಿಗೂ ಆರ್ಥಿಕ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ನಾವು ಸಾಂಪ್ರದಾಯಿಕ ಹೂಡಿಕೆಯನ್ನು ಮಾಡುತ್ತೇವೆ. ಆದರೆ ಅಧಿಕ ಹಣದುಬ್ಬರದ ಕಾಲದಲ್ಲಿ ಉಳಿತಾಯದ ಮೌಲ್ಯವನ್ನು ಹೆಚ್ಚಿಸಬೇಕಿದ್ದರೆ, ಅದು ಬೆಲೆ ಏರಿಕೆಯನ್ನೂ ಮೀರಿ ನಮ್ಮ ಕೈ ಹಿಡಿಯಬೇಕು. ಆದ್ದರಿಂದ ಕಲಿಕೆಯಿಲ್ಲದೆ ಗಳಿಕೆ ಇಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಮನುಷ್ಯ ಮಲಗಿದದಾಗಲೂ ಆತನ ದುಡ್ಡು ಬೆಳೆಯುವಂತಾಗಬೇಕು. ಈ ರೀತಿ ಹಣ ನಮಗೋಸ್ಕರ ದುಡಿಯುವಂತಾಗಲು ಏನು ಮಾಡಬೇಕು ಎಂಬುದನ್ನು ಈ ಕೃತಿಯಲ್ಲಿ ವಿವರಿಸಿದ್ದೇನೆ. ವೈಯಕ್ತಿಕ ಹಣಕಾಸು ವಿಚಾರಗಳು ಮತ್ತು ಸ್ಟಾಕ್‌ ಮಾರ್ಕೆಟ್‌ ಕುರಿತ ಬಹುತೇಕ ಅಂಶಗಳನ್ನು ಬರೆದಿದ್ದೇನೆ. ಗೊತ್ತಿರದ ವಿಚಾರಗಳನ್ನು ಕಲಿತು ಪ್ರಸ್ತಾಪಿಸಿದ್ದೇನೆ ಎಂದು ವಿವರಿಸಿದರು.

ಬಿಡುಗಡೆಗೂ ಮುನ್ನ 3ನೇ ಮುದ್ರಣ ಸಂತಸ ತಂದಿದೆ: ಜಿ.ಎನ್‌ ಮೋಹನ್

ಮನಿ ಸೀಕ್ರೆಟ್ಸ್‌ & ಸ್ಟಾಕ್‌ ಮಾರ್ಕೆಟ್‌ ಸೀಕ್ರೆಟ್ಸ್‌ ಕೃತಿ ಬಿಡುಗಡೆಗೆ ಮುನ್ನವೇ ಮೂರನೇ ಮುದ್ರಣವನ್ನು ಕಂಡಿರುವುದು ಅದರ ಜನಪ್ರಿಯತೆ ಮತ್ತು ಉಪಯುಕ್ತತೆಯನ್ನು ಬಿಂಬಿಸಿದೆ. ಹಣಕಾಸು ವಿಚಾರಗಳ ಬಗ್ಗೆ ಸರಳ ಹಾಗೂ ಪರಿಣಾಮಕಾರಿಯಾಗಿ ಕನ್ನಡದಲ್ಲಿ ಪ್ರಕಟವಾಗಿರುವ ಕೃತಿಗಳು ಅಪರೂಪ. ಅದರಲ್ಲೂ ಶರತ್‌ ಅವರ ಕೃತಿ ಮನೋಜ್ಞವಾಗಿ ಓದುಗರ ಮನಗೆದ್ದಿದೆ ಎಂದು ಬಹುರೂಪಿ ಪ್ರಕಾಶನದ ಜಿ.ಎನ್‌ ಮೋಹನ್‌ ಅವರು ಹೇಳಿದರು.

ಇಂಡಿಯನ್‌ ಮನಿ ಡಾಟ್‌ ಕಾಮ್‌ ಬೆಳವಣಿಗೆಯ ದಿನಗಳನ್ನು ಸ್ಮರಿಸಿದ ಸಿ.ಎಸ್‌ ಸುಧೀರ್

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಫ್ರೀಡಂ ಮನಿ ಆ್ಯಪ್‌ ಸಂಸ್ಥಾಪಕ ಸಿ.ಎಸ್‌ ಸುಧೀರ್‌ ಅವರು ಮಾತನಾಡಿ, ಶರತ್‌ ಹಾಗೂ ನಾನು ಕಳೆದ 6 ವರ್ಷಗಳಿಂದ ಚಿರಪರಿಚಿತರು. ಇಂಡಿಯನ್‌ ಮನಿ ಡಾಟ್‌ ಕಾಮ್‌ ಅನ್ನು ಕಟ್ಟಿ ಯಶಸ್ವಿಯಾಗಿ ಬೆಳೆಸುವುದರಲ್ಲಿ ಅವರ ಪಾತ್ರ ನಿರ್ಣಾಯಕವಾಗಿತ್ತು. ಹಣಕಾಸು ವಿಚಾರಗಳಲ್ಲಿ ಅವರು ಗಳಿಸಿರುವ ಜ್ಞಾನ ಅತ್ಯಮೂಲ್ಯ ಮತ್ತು ಅಗಾಧ. ಅದು ಈ ಪುಸ್ತಕದ ಮೂಲಕ ಓದುಗರಿಗೆ ಪ್ರಯೋಜನವಾಗುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಮನಿ ಸೀಕ್ರೆಟ್ಸ್‌ & ಸ್ಟಾಕ್‌ ಮಾರ್ಕೆಟ್‌ ಸೀಕ್ರೆಟ್ಸ್‌ ಕೃತಿಯನ್ನು ಲೋಕಾರ್ಪಣೆ ಸಮಾರಂಭದಲ್ಲಿ ಸ್ನೇಹ ಬುಕ್‌ ಹೌಸ್‌ನ ಸ್ಥಾಪಕ ಪರಶಿವಪ್ಪ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಮಾತನಾಡಿ, ಹೂಡಿಕೆ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವಂತೆ ಶರತ್‌ ಅವರು ಸಮಗ್ರ ಮತ್ತು ಸರಳವಾಗಿ ಮನಿ ಸೀಕ್ರೆಟ್ಸ್‌ ಕೃತಿಯನ್ನು ರಚಿಸಿದ್ದು, ಆರ್ಥಿಕ ಪ್ರಗತಿಗೆ ಇಂಥ ಕೃತಿಗಳ ಓದು ಸಹಕಾರಿ ಎಂದರು.

ಸಮಾರಂಭದಲ್ಲಿ ಖ್ಯಾತ ಹೋಮಿಯೊಪತಿ ವೈದ್ಯ ಡಾ. ಬಿ.ಟಿ. ರುದ್ರೇಶ್‌, ಕೆಯುಡಬ್ಲ್ಯುಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್‌, ಖಜಾಂಚಿ ವಾಸುದೇವ ಹೊಳ್ಳ, ಸ್ನೇಹ ಪ್ರಕಾಶನದ ಪರಶಿವಪ್ಪ ಕೆ.ಬಿ ಮೊದಲಾದ ಗಣ್ಯರು ಭಾಗವಹಿಸಿದ್ದರು.


ಕೃತಿ: ಮನಿ ಸೀಕ್ರೆಟ್ಸ್&‌ ಸ್ಟಾಕ್‌ ಮಾರ್ಕೆಟ್‌

ಲೇಖಕರು: ಶರತ್‌ ಎಂ.ಎಸ್‌

ಪ್ರಕಾಶನ: ಬಹುರೂಪಿ

ಬೆಲೆ :300 ರೂ.

ಸಂಪರ್ಕ: 7019182729

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Road Accident: ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Road Accident: ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಬ್ಬ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

VISTARANEWS.COM


on

Road accident in Ankola The biker was burnt to death
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಗ್ರಾಮದ ಬಳಿ ತಡರಾತ್ರಿ ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ (Road Accident) ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕ್‌ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಬೈಕ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಮಂತ ಹರಿಕಂತ್ರ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಸುಮಿತ್ ಹರಿಕಂತ್ರ, ಚಾಣಕ್ಯ ಹರಿಕಂತ್ರ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಸವಾರರು ಮಂಗಳವಾರ (ಏಪ್ರಿಲ್‌ 24) ತಡರಾತ್ರಿ ಅಂಕೋಲಾದಿಂದ ಕಾರವಾರದತ್ತ ತೆರಳುತ್ತಿದ್ದರು. ಈ ವೇಳೆ ಕಾರವಾರ ಕಡೆಯಿಂದ ಬಂದ ಟ್ರ್ಯಾಕ್ಸ್‌ವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದ ವೇಳೆ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ಗೆ ಬೆಂಕಿ ತಗುಲಿದ್ದು, ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಆದರೆ, ಬೈಕ್‌ ಸವಾರನ ಮೇಲೆ ಬೈಕ್‌ ಬಿದ್ದಿದ್ದರಿಂದ ಮೇಲೆ ಏಳಲು ಆಗಿಲ್ಲ. ಹೀಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲೇ ಸಿಲುಕಿದ್ದ ಬೈಕ್‌ ಸವಾರ ಸುಮಂತ ಹರಿಕಂತ್ರ ಅವರ ಮೈಗೂ ಬೆಂಕಿ ತಗುಲಿದೆ. ಹೀಗಾಗಿ ಅವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು

ಗಾಯಾಳುಗಳಾದ ಸುಮಿತ್‌ ಹಾಗೂ ಚಾಣಕ್ಯ ಹರಿಕಂತ್ರ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗುಜರಿ ಅಂಗಡಿ ಮಾಲೀಕನಿಗೆ ಬೆದರಿಸಿ ಹಣ ಪೀಕಿದ ಪೊಲೀಸ್‌ 

ಬೆಂಗಳೂರು: ಮಾರತ್ತಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಸುಳ್ಳು ಆರೋಪಗಳನ್ನು ಮಾಡಿ ಗುಜರಿ ಅಂಗಡಿ ಮಾಲೀಕನಿಂದ ಹಣ ವಸೂಲಿ (Fraud Case) ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಗುಜರಿ ಅಂಗಡಿ ಮಾಲೀಕ ಅಖ್ತಿರ್ ಅಲಿ ಮಂಡಲ್‌ ಎಂಬುವವರು ಈ ಸಂಬಂಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಅಖ್ತರ್ ಅವರು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಳ್ಳಿಯಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದರು. ಕಳೆದ ಏಪ್ರಿಲ್ 17ರ ಮಧ್ಯಾಹ್ನ 12ಗಂಟೆಗೆ ಗುಜುರಿ ಬಳಿ ಪೊಲೀಸ್ ಸಿಬ್ಬಂದಿ, ಇನ್ಫಾರ್ಮರ್ ಎಸ್.ನಿವಾಸ್ ಎಂಬಾತನ ಜತೆಗೆ ಆಗಮಿಸಿದ್ದರು. ಹೀಗೆ ಬಂದವರೇ ನಾವು ಪೊಲೀಸರು ನೀವು ದಂಧೆ ನಡೆಸುತ್ತಿದ್ದೀರಾ? ಗಾಂಜಾ ಮಾರಾಟ ಮಾಡುತ್ತೀದ್ದೀರಾ ಎಂದು ಬೆದರಿಕೆ ಹಾಕಿದ್ದಾರೆ.

ಕೆಲಸಗಾರರ ಮೇಲೆ ಹಲ್ಲೆ ಮಾಡಿ ಅಖ್ತರ್ ಬಳಿ ಸುಮಾರು 2 ಲಕ್ಷ ರೂ. ಹಣವನ್ನು ಇನ್ಫಾರ್ಮರ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೊದಲು 20 ಸಾವಿರ ನಗದು ಪಡೆದುಕೊಂಡು ಬಳಿಕ ಬ್ಯಾಂಕ್ ಖಾತೆಯಿಂದ 80 ಸಾವಿರ ರೂ. ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ಹೋಗುವಾಗ ಬೆದರಿಕೆ ಹಾಕಿ ಎಟಿಎಂ ಕಾರ್ಡ್ ಹಾಗೂ ಪಿನ್ ನಂಬರ್‌ ಪಡೆದುಕೊಂಡಿದ್ದಾರೆ. ಬಳಿಕ ಎಟಿಎಂನಿಂದ 50 ಸಾವಿರ ಹಣ ಡ್ರಾ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ಫಯಾಜ್‌ ಜೈಲಲ್ಲಿ ಇರೋವಾಗ ಮೊಬೈಲ್ ಫೋಟೊ ಲೀಕ್ ಆಗಲು ಹೇಗೆ ಸಾಧ್ಯ?

ಮರುದಿನ ವಾಪಸ್‌ ಗುಜುರಿ ಅಂಗಡಿಗೆ ಬಂದಿದ್ದ ಆರೋಪಿಗಳು, ಎಟಿಎಂ ಕಾರ್ಡ್ ಕೊಟ್ಟು ಮತ್ತೆ 50 ಸಾವಿರ ಹಣ ಪಡೆದುಕೊಂಡು ಹೋಗಿದ್ದಾರೆ. ಮತ್ತೊಮ್ಮೆ 50 ಸಾವಿರ ರೂ. ಕೊಡಬೇಕು ಇಲ್ಲದಿದ್ದರೆ ಬೈಕ್ ತೆಗೆದುಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ. ಇವರ ಕಾಟ ತಾಳಲಾರದೆ ಅಖ್ತಿರ್‌ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ನಿವಾಸ್ ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾಗಿ ವೈಟ್ ಫೀಲ್ಡ್ ಡಿಸಿಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

Gold Rate Today: ಕಳೆದ ತಿಂಗಳು ಚಿನ್ನದ ದರಗಳು ಬೆಂಗಳೂರು ಸೇರಿದಂತೆ ಎಲ್ಲೆಡೆ ದಾಖಲೆ ಪ್ರಮಾಣದ ಏರಿಕೆ ಕಂಡಿದ್ದವು. ಕಳೆದ ವಾರ ದರ ತುಸು ಇಳಿದು, ಮತ್ತೆ ಏರಲು ಆರಂಭಿಸಿದೆ. ಇಂದಿನ ದರಗಳು ಹೀಗಿವೆ.

VISTARANEWS.COM


on

gold model
Koo

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಬುಧವಾರ ತುಸು ಏರಿಕೆ ಕಂಡುಬಂದಿದೆ. ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹45 ಹಾಗೂ ₹49 ಏರಿಕೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ದರ (Gold Price Today) ಏರುತ್ತಲೇ ಇದ್ದುದು ಕಳೆದ ವಾರ ತುಸು ಇಳಿಕೆ ಕಂಡಿತ್ತು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,660ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,280 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,600 ಮತ್ತು ₹6,66,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,265 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,120 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,650 ಮತ್ತು ₹7,26,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,75072,800
ಮುಂಬಯಿ66,600 72,650
ಬೆಂಗಳೂರು66,600 72,650
ಚೆನ್ನೈ67,30073,420

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋಕೆ ಇಂದು ಸುಸಮಯ! 24 ಕ್ಯಾರಟ್‌ ಬಂಗಾರಕ್ಕೆ ₹1530 ಇಳಿಕೆ!

Continue Reading

ಕರ್ನಾಟಕ

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

Lok Sabha Election 2024: ಉದ್ಯಮಿಗಳು, ಚಿನ್ನಾಭರಣ ಮಳಿಗೆ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹದಿನಾರು ಕಡೆ ಸೇರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಗಳು ಇಲ್ಲದ ಚಿನ್ನಾಭರಣಗಳು ಪತ್ತೆಯಾಗಿವೆ.

VISTARANEWS.COM


on

Lok Sabha Election 2024 ID raid in Bengaluru South Lok Sabha constituency 21.15 crore Gold ornaments seized in 2 days
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಹಣದ ಹರಿವು ಹೆಚ್ಚಳವಾಗಿರುತ್ತದೆ. ಕೆಲವು ಕಡೆ ಅಕ್ರಮಗಳು ನಡೆಯುವ ಸಾಧ್ಯತೆಗಳು ಇರುತ್ತವೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನದಲ್ಲಿ ಬೆಂಗಳೂರಿನ ಹದಿನಾರು ಕಡೆ ಐಟಿ ಅಧಿಕಾರಿಗಳು ದಾಳಿ (IT Raid) ನಡೆಸಿದ್ದರು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿವೆ. ಒಟ್ಟಾರೆ 21.15 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳಲಾಗಿದೆ.

ಉದ್ಯಮಿಗಳು, ಚಿನ್ನಾಭರಣ ಮಳಿಗೆ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹದಿನಾರು ಕಡೆ ಸೇರಿ ರಾಜ್ಯದ ಇಪ್ಪತ್ತಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದೆ. ಆದರೆ, ಬೆಂಗಳೂರು ದಕ್ಷಿಣ ಕ್ಷೇತ್ರವೊಂದರಲ್ಲೇ ಕೋಟ್ಯಂತರ ರೂಪಾಯಿ ಮೌಲ್ಯದ ದಾಖಲೆಗಳು ಇಲ್ಲದ ಚಿನ್ನಾಭರಣಗಳು ಪತ್ತೆಯಾಗಿವೆ.

2 ದಿನಗಳಲ್ಲಿ 16 ಕಡೆ ದಾಳಿ; ಸಿಕ್ಕ ಚಿನ್ನ, ನಗದು ಎಷ್ಟು?

1) 3 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆ
– ಶಂಕರಪುರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

2) 3 ಕೋಟಿ 39 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ 800 ಗ್ರಾಂ ಚಿನ್ನ ಪತ್ತೆ
ಶಾರದಾದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

3) 2 ಕೋಟಿ 13 ಲಕ್ಷ ರೂಪಾಯಿ ಮೌಲ್ಯದ 3 ಕೆಜಿ 400 ಗ್ರಾಂ ಪತ್ತೆ
ಮರ್ಕೈಂಟಲ್ ಬ್ಯಾಂಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

4) 5 ಕೋಟಿ 33 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ 598 ಗ್ರಾಂ ಚಿನ್ನ ಪತ್ತೆ
ಜಯನಗರ 3ನೇ ಬ್ಲಾಕ್ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

5) 84 ಲಕ್ಷ ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆ
ಸಾರಸ್ವತ ಬ್ಯಾಂಕ್, ಚಾಮರಾಜಪೇಟೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

6) 3 ಲಕ್ಷ 34 ಸಾವಿರ ರೂಪಾಯಿ ಮೌಲ್ಯದ 6.38 ಕ್ಯಾರೆಟ್ ವಜ್ರ ಪತ್ತೆ
ಅಂಚೆ ಕಚೇರಿ ಬಳಿ, ಬಸವನಗುಡಿ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

7) 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ ಪತ್ತೆ
ಮಾತಾ ಶಾರದಾ ದೇವಿ ರಸ್ತೆ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

8) 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆ
ಜಯನಗರ (ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ)

ಇದನ್ನೂ ಓದಿ: VVPAT Verification: ಇವಿಯಂ-ವಿವಿಪ್ಯಾಟ್‌ ತಾಳೆ ಪ್ರಕರಣ; ಇಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸೇರಿದಂತೆ ಹಲವು ಕಡೆ ದಾಳಿ ನಡೆದಿದ್ದು, ಈ ಕ್ಷೇತ್ರವೊಂದರಲ್ಲೇ ಸರಿ ಸುಮಾರು 21.15 ಕೋಟಿ ರೂಪಾಯಿಯಷ್ಟು ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಆದರೆ, ಎಷ್ಟು ನಗದು ಪತ್ತೆಯಾಗಿದೆ ಎಂಬ ಬಗ್ಗೆ ಇನ್ನೂ ಐಟಿ ಅಧಿಕಾರಿಗಳು ಮಾಹಿತಿಯನ್ನು ಹಂಚಿಕೊಂಡಿಲ್ಲ.

Continue Reading

ವಿಜ್ಞಾನ

Zero Shadow Day: ಇಂದು ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Zero Shadow Day: ಎಲ್ಲರೂ ನಮ್ಮನ್ನು ತೊರೆದರೂ ನೆರಳು ಯಾವತ್ತೂ ನಮ್ಮನ್ನು ಬಿಟ್ಟು ಹೋಗುವುದಿಲ್ಲ ಎನ್ನುವ ಮಾತಿದೆ. ಆದರೆ ಈ ಮಾತು ಇಂದು ಕೆಲವು ನಿಮಿಷಗಳ ಮಟ್ಟಿಗೆ ಬೆಂಗಳೂರಿಗರ ಪಾಲಿಗೆ ಸುಳ್ಳಾಗಲಿದೆ. ಅಂದರೆ ಮಧ್ಯಾಹ್ನ ನೆರಳೇ ಮೂಡುವುದಿಲ್ಲ. ಇದನ್ನು ʼಶೂನ್ಯ ನೆರಳಿನ ದಿನʼ ಎನ್ನುತ್ತಾರೆ. ಇದು ಯಾಕೆ ಸಂಭವಿಸುತ್ತದೆ? ಏನಿದರ ವೈಶಿಷ್ಟ್ಯ? ಮುಂತಾದ ವಿವರ ಇಲ್ಲಿದೆ.

VISTARANEWS.COM


on

Zero Shadow Day
Koo

ಬೆಂಗಳೂರು: ಇಂದು (ಏಪ್ರಿಲ್‌ 24) ಬೆಂಗಳೂರಿಗರು ವಿಶಿಷ್ಟ ವಿದ್ಯಾಮಾನವೊಂದಕ್ಕೆ ಸಾಕ್ಷಿಯಾಗಲಿದ್ದಾರೆ. ಪ್ರತಿ ಕ್ಷಣವೂ ನಿಮ್ಮೊಂದಿಗೆ ಇರುವ ನೆರಳು ಕೆಲ ಹೊತ್ತು ನಿಮ್ಮನ್ನು ಬಿಟ್ಟು ದೂರ ಹೋಗಲಿದೆ. ಅಂದರೆ ಯಾವುದೇ ಲಂಬ ವಸ್ತುವೂ ನೆರಳನ್ನು ಹೊಂದಿರುವುದಿಲ್ಲ! ಇದನ್ನೇ ʼಶೂನ್ಯ ನೆರಳಿನ ದಿನʼ (Zero Shadow Day) ಎಂದು ಕರೆಯುತ್ತಾರೆ. ಇದು ಹೇಗೆ ರೂಪುಗೊಳ್ಳುತ್ತದೆ? ಏನಿದರ ವೈಶಿಷ್ಟ್ಯ ? ಮುಂತಾದ ನಿಮ್ಮ ಕುತೂಹಲಗಳಿಗೆ ಇಲ್ಲಿದೆ ಉತ್ತರ.

ಮಧ್ಯಾಹ್ನ 12.17ರಿಂದ 12.23ರ ನಡುವೆ ಈ ವಿದ್ಯಾಮಾನ ಸಂಭವಿಸಲಿದ್ದು, ಈ ವೇಳೆ ಸೂರ್ಯನ ಸ್ಥಾನವು ನಿಖರವಾಗಿ ಉತ್ತುಂಗದಲ್ಲಿರುತ್ತದೆ. ಹೀಗಾಗಿ ಎಲ್ಲ ವಸ್ತುಗಳ ನೆರಳು ಕಣ್ಮರೆಯಾಗುತ್ತದೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA) ಈ ಸಂದರ್ಭಕ್ಕಾಗಿ ತನ್ನ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಏನಿದು ʼಶೂನ್ಯ ನೆರಳಿನ ದಿನʼ ?

ಸೂರ್ಯನು ಮಧ್ಯಾಹ್ನ ನಡು ನೆತ್ತಿಯ ಮೇಲಿರುವಾಗ ಲಂಬವಾಗಿರುವ ವಸ್ತುವಿಗೆ ಸ್ವಲ್ಪ ಮಾತ್ರವಾದರೂ ನೆರಳು ಇದ್ದೇ ಇರುತ್ತದೆ. ಆದರೆ ನಾಳೆ ಅಂಥ ಯಾವುದೇ ನೆರಳು ಇರುವುದಿಲ್ಲ. ಉಷ್ಣವಲಯದ ಸ್ಥಳಗಳಲ್ಲಿ (ಕರ್ಕಾಟಕ ಸಂಕ್ರಾಂತಿ ಮತ್ತು ಮಕರ ಸಂಕ್ರಾಂತಿಯ ನಡುವೆ) ವರ್ಷಕ್ಕೆ ಎರಡು ಬಾರಿ ಶೂನ್ಯ ನೆರಳು ದಿನ ಸಂಭವಿಸುತ್ತದೆ.

ಸೂರ್ಯನ ಸುತ್ತ ಭೂಮಿಯ ಪರಿಭ್ರಮಣೆಯ ಅಕ್ಷವು ತನ್ನ ಸಮತಲದಿಂದ 23.5 ಡಿಗ್ರಿಗಳಷ್ಟು ಬಾಗಿದೆ. ಇದರಿಂದ ವಿವಿಧ ಋತುಗಳು ಸಂಭವಿಸುತ್ತವೆ. ಇದರಿಂದಾಗಿ ಸೂರ್ಯನು ದಿನದ ಅತ್ಯುನ್ನತ ಬಿಂದುವಿನಲ್ಲಿರುವಾಗ, ಉತ್ತರಾಯಣದಲ್ಲಿ ಆಕಾಶ ಸಮಭಾಜಕದ ದಕ್ಷಿಣದ 23.5 ಡಿಗ್ರಿಗಳಿಂದ ಸಮಭಾಜಕದ ಉತ್ತರಕ್ಕೆ 23.5 ಡಿಗ್ರಿಗಳಿಗೆ ಚಲಿಸುತ್ತಾನೆ ಮತ್ತು ದಕ್ಷಿಣಾಯನದಲ್ಲಿ ಇದರ ವಿರುದ್ಧಕ್ಕೆ ಚಲಿಸುತ್ತಾನೆ. ಈ ಪರಿಭ್ರಮಣ ಚಲನೆಯಿಂದಾಗಿ, ಒಂದು ಶೂನ್ಯ ನೆರಳು ದಿನವು ಉತ್ತರಾಯಣದಲ್ಲಿ (ಸೂರ್ಯ ಉತ್ತರದ ಕಡೆಗೆ ಚಲಿಸುವಾಗ) ಬರುತ್ತದೆ ಮತ್ತು ಇನ್ನೊಂದು ದಕ್ಷಿಣಾಯನದಲ್ಲಿ (ಸೂರ್ಯನು ದಕ್ಷಿಣಕ್ಕೆ ಚಲಿಸುವಾಗ) ಬರುತ್ತದೆ. 23.5 ಡಿಗ್ರಿ ಉತ್ತರ ಮತ್ತು 23.5 ಡಿಗ್ರಿ ದಕ್ಷಿಣ ಅಕ್ಷಾಂಶಗಳ ನಡುವೆ ವಾಸಿಸುವ ಜನರಿಗೆ, ಸೂರ್ಯನ ಅವನತಿಯು ಅವರ ಅಕ್ಷಾಂಶಕ್ಕೆ ಎರಡು ಬಾರಿ ಸಮನಾಗಿರುತ್ತದೆ.

ಮಹತ್ವ

ಇದು ಸೂರ್ಯನ ನಿಖರವಾದ ಸ್ಥಾನವನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಜತೆಗೆ ವಿಜ್ಞಾನಿ ಮತ್ತು ಖಗೋಳಶಾಸ್ತ್ರಜ್ಞರಿಗೆ ಸೂರ್ಯನ ಬೆಳಕಿನ ನಡವಳಿಕೆ ಮತ್ತು ಭೂಮಿಯ ವಾತಾವರಣದ ಮೇಲೆ ಅದು ಬೀರುವ ಪರಿಣಾಮಗಳ ಬಗ್ಗೆ ಸಂಶೋಧನೆ ನಡೆಸಲು ಅವಕಾಶವನ್ನು ಕಲ್ಪಿಸುತ್ತದೆ. ಸಾಮಾನ್ಯವಾಗಿ ಶೂನ್ಯ ನೆರಳು ಸುಮಾರು ಒಂದೂವರೆ ನಿಮಿಷ ಕಾಲ ಅನುಭವಕ್ಕೆ ಬರುತ್ತದೆ.

ಎಲ್ಲೆಲ್ಲಿ , ಯಾವಾಗ?

ಶೂನ್ಯ ನೆರಳಿನ ದಿನ ದೇಶದ ವಿವಿಧ ನಗರಗಳಲ್ಲಿ ವರ್ಷದಲ್ಲಿ ಎರಡು ಬಾರಿ ಅನುಭವಕ್ಕೆ ಬರುತ್ತದೆ. ಅದು ಯಾವಾಗ ಎನ್ನುವ ವಿವರ ಇಲ್ಲಿದೆ.

  • ಕನ್ಯಾಕುಮಾರಿ: ಏಪ್ರಿಲ್ 10 ಮತ್ತು ಸೆಪ್ಟೆಂಬರ್ 1 (ಮಧ್ಯಾಹ್ನ: 12.21, 12.22)
  • ಬೆಂಗಳೂರು: ಏಪ್ರಿಲ್ 24 ಮತ್ತು ಆಗಸ್ಟ್ 18 (ಮಧ್ಯಾಹ್ನ: 12.17, 12.25)
  • ಹೈದರಾಬಾದ್: ಮೇ 9 ಮತ್ತು ಆಗಸ್ಟ್ 5 (ಮಧ್ಯಾಹ್ನ: 12.12, 12.19)
  • ಮುಂಬೈ: ಮೇ 15 ಮತ್ತು ಜೂನ್ 27 (ಮಧ್ಯಾಹ್ನ: 12.34, 12.45)
  • ಭೋಪಾಲ್: ಜೂನ್ 13 ಮತ್ತು ಜೂನ್ 28 (ಮಧ್ಯಾಹ್ನ: 12.20, 12.23)

ಇದನ್ನೂ ಓದಿ: Water From Air: ಗಾಳಿಯಿಂದಲೇ ನೀರು ಉತ್ಪಾದನೆ! ಬೆಂಗಳೂರು ಸ್ಟಾರ್ಟಪ್‌ನ ಕ್ರಾಂತಿಕಾರಿ ಹೆಜ್ಜೆ!

Continue Reading
Advertisement
Patanjali Case
ದೇಶ14 mins ago

Patanjali Case: ಪತಂಜಲಿ ಕೇಸ್‌; ಜಾಹೀರಾತು ಮೂಲಕ ಕ್ಷಮೆ ಕೋರಿದ ಬಾಬಾ ರಾಮ್‌ದೇವ್‌

Road accident in Ankola The biker was burnt to death
ಕ್ರೈಂ15 mins ago

Road Accident: ಅಂಕೋಲಾದಲ್ಲಿ ಭೀಕರ ಅಪಘಾತ; ಬೈಕ್‌ ಸವಾರ ಸುಟ್ಟು ಕರಕಲು!

Sachin Tendulkar Net Worth Assets Owned
ಕ್ರಿಕೆಟ್35 mins ago

Sachin Birthday: ಸಚಿನ್ ತೆಂಡೂಲ್ಕರ್ ಬಳಿ ಇರುವ ಅತ್ಯಂತ ದುಬಾರಿ ಆಸ್ತಿಗಳಿವು!

gold model
ಚಿನ್ನದ ದರ36 mins ago

Gold Rate Today: ಚಿನ್ನದ ಬೆಲೆ ಇಂದು ತುಸು ಏರಿಕೆ; 22K, 24K ಬಂಗಾರದ ಬೆಲೆಗಳನ್ನು ಇಲ್ಲಿ ಖಚಿತಪಡಿಸಿಕೊಳ್ಳಿ

Lok Sabha Election 2024 ID raid in Bengaluru South Lok Sabha constituency 21.15 crore Gold ornaments seized in 2 days
ಕರ್ನಾಟಕ50 mins ago

Lok Sabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಐಡಿ ರೇಡ್;‌ 2 ದಿನದಲ್ಲಿ 21.15 ಕೋಟಿ ರೂ. ಚಿನ್ನಾಭರಣ ವಶ!

Train Ticket Cancellation
ದೇಶ60 mins ago

Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

sam pitroda narendra modi
ಪ್ರಮುಖ ಸುದ್ದಿ1 hour ago

Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

Rajkumar Birth Anniversary Dodmane family visited Rajkumar Samadhi
ಸಿನಿಮಾ2 hours ago

Rajkumar Birth Anniversary: ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ

Zero Shadow Day
ವಿಜ್ಞಾನ2 hours ago

Zero Shadow Day: ಇಂದು ಬೆಂಗಳೂರಿನಲ್ಲಿ ನೆರಳೇ ಮೂಡುವುದಿಲ್ಲ; ಅದ್ಯಾಕೆ? ಏನಿದು ʼಶೂನ್ಯ ನೆರಳಿನ ದಿನʼ ?

Karan Johar receives Director of the Year award from Vice President of India
ಬಾಲಿವುಡ್2 hours ago

Karan Johar: ಉಪ ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸಿದ ಕರಣ್ ಜೋಹರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌