Moral education : ಮುಂದಿನ ವರ್ಷದಿಂದಲೇ ಮೌಲ್ಯ ಶಿಕ್ಷಣ ಜಾರಿ; ಅಧ್ಯಯನಕ್ಕೆ ಉನ್ನತ ಸಮಿತಿ ರಚನೆ - Vistara News

ಕರ್ನಾಟಕ

Moral education : ಮುಂದಿನ ವರ್ಷದಿಂದಲೇ ಮೌಲ್ಯ ಶಿಕ್ಷಣ ಜಾರಿ; ಅಧ್ಯಯನಕ್ಕೆ ಉನ್ನತ ಸಮಿತಿ ರಚನೆ

Moral education : ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸುವ ಉದ್ದೇಶದೊಂದಿಗೆ ದುಂಡು ಮೇಜಿನ ಸಮಾಲೋಚನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಹಲವು ಅಭಿಪ್ರಾಯಗಳು, ಸಲಹೆಗಳು ಬಂದಿದ್ದು, ಮೌಲ್ಯ ಶಿಕ್ಷಣ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಾಲೆಯಲ್ಲಿ ಮೌಲ್ಯಯುತ ಶಿಕ್ಷಣವನ್ನು (Moral education) ಜಾರಿಗೆ ತರುವ ನಿಟ್ಟಿನಲ್ಲಿ ಮೌಲ್ಯ ಶಿಕ್ಷಣ ಸಮಿತಿಯನ್ನು ರಚಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಅಭಿಪ್ರಾಯ/ಸಲಹೆಗಳನ್ನು ಸಂಗ್ರಹಿಸಲು ವಿಧಾನಸೌಧದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ನೇತೃತ್ವದಲ್ಲಿ ಕರೆಯಲಾಗಿದ್ದ ವಿವಿಧ ಮಠಾಧೀಶರು, ಧಾರ್ಮಿಕ ಮುಖಂಡರು ಹಾಗೂ ಶಿಕ್ಷಣ ತಜ್ಞರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೌಲ್ಯಯುತ ಶಿಕ್ಷಣದ ಬಗ್ಗೆ ಸಾಕಷ್ಟು ಚರ್ಚೆಯಾಗಿದ್ದು, ಈ ಎಲ್ಲ ಸಲಹೆಗಳನ್ನು ಆಧರಿಸಿ, ವರದಿ ನೀಡುವಂತೆ ಸಮಿತಿಯನ್ನು ರಚಿಸಲು ಮುಂದಾಗಲಾಗಿದೆ. ಮುಂದಿನ ವರ್ಷದಿಂದಲೇ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಸೋಮವಾರ (ಜ.9) ನಡೆದ ದುಂಡು ಮೇಜಿನ ಸಮಾಲೋಚನಾ ಸಭೆಯು ಸುಮಾರು ಮೂರು ಗಂಟೆಗಳ ಕಾಲ ನಡೆದಿದ್ದು, ಮೌಲ್ಯಯುತ ಶಿಕ್ಷಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಚರ್ಚೆಯಲ್ಲಿ ಶಿಕ್ಷಣ ತಜ್ಞರು, ವಿವಿಧ ಮಠಾಧೀಶರು, ಧರ್ಮ ಗುರುಗಳು ತಮ್ಮ ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಪ್ರಮುಖವಾಗಿ ಶಾಲೆಯಲ್ಲಿ ಮಕ್ಕಳಿಗೆ ಯಾವ ರೀತಿಯ ಶಿಕ್ಷಣದ ಅಗತ್ಯತೆ ಇದೆ, ಶಾಲಾಡಳಿತದೊಂದಿಗೆ ಶಿಕ್ಷಕರು ಹಾಗೂ ಪೋಷಕರ ಜವಾಬ್ದಾರಿ ಏನು? ರ‍್ಯಾಂಕ್‌ ಗಳಿಕೆ ಮಾನದಂಡವೇ? ಆಧ್ಯಾತ್ಮಿಕ ಮೌಲ್ಯ ಏಕೆ ಪ್ರಮುಖ ಪಾತ್ರ ವಹಿಸುತ್ತದೆ? ಎಂಬಿತ್ಯಾದಿ ಅಂಶಗಳನ್ನು ಚರ್ಚಿಸಲಾಯಿತು. ಶಿಕ್ಷಣದಲ್ಲಿ ಇವುಗಳ ಅನುಷ್ಠಾನದಿಂದ ಆಗುವ ಸಾಧಕ-ಬಾಧಕಗಳ ಬಗ್ಗೆಯೂ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಎಲ್ಲ ಧಾರ್ಮಿಕ ಮುಖಂಡರು, ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಇದೀಗ ಮೌಲ್ಯ ಶಿಕ್ಷಣಕ್ಕೆ ಸಮಿತಿ ರಚಿಸಲಾಗುತ್ತಿದ್ದು, ಅಧ್ಯಯನ ವರದಿ ಬಳಿಕ ಮುಂದಿನ ವರ್ಷದಿಂದಲೇ ಮೌಲ್ಯ ಶಿಕ್ಷಣವನ್ನು ಜಾರಿ ಮಾಡಲು ಸಭೆಯಲ್ಲಿ ತೀರ್ಮಾನಿಸಿರುವುದಾಗಿ ಸಚಿವ ನಾಗೇಶ್‌ ತಿಳಿಸಿದ್ದಾರೆ.

ಉತ್ತಮ ಶಿಕ್ಷಣ ನೀಡುವಲ್ಲಿ ಶಾಲಾಡಳಿತ ಸೋತಿದೆ- ಕಸ್ತೂರಿ ರಂಗನ್‌
ಇಂದಿನ ದಿನಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಾಲಾ ಆಡಳಿತ ಸೋತಿದ್ದು, ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಸಿಗಬೇಕಿದೆ ಎಂದು ಎನ್‌ಇಪಿ ಅಧ್ಯಕ್ಷ ಕಸ್ತೂರಿ ರಂಗನ್‌ ತಿಳಿಸಿದರು. “I Can” (ನನ್ನಿಂದ ಆಗುತ್ತದೆ) ಎಂಬ ಮನೋಭಾವ ಮಕ್ಕಳಲ್ಲಿ ಬೆಳೆಯಬೇಕಿದೆ ಎಂದು ತಿಳಿಸಿದರು.

ದಾರಿ ತಪ್ಪಿದ ಮಕ್ಕಳು- ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
ಈಗಿನ ಮಕ್ಕಳಿಗೆ ಬೆಳಗ್ಗೆ ಎದ್ದರೆ ಮೊಬೈಲ್‌ ಅವರ ಬದುಕಾಗಿದ್ದು, ಇತ್ತೀಚಿನ ದಿನಗಳಲ್ಲಿ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಹೀಗಾಗಿ ನೈತಿಕ ಶಿಕ್ಷಣದ ಅಗತ್ಯತೆ ಇದ್ದು, ರಾಮಾಯಣ, ಭಗವದ್ಗೀತೆ ವಿಚಾರಗಳ ಕುರಿತು ಹೇಳಬೇಕು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ನಮ್ಮ ದೇಶದಲ್ಲಿ ಶಿಕ್ಷಣದ ಗುಣಮಟ್ಟವು ವಿಸ್ತಾರ ಆಗಲಿದೆ ಎಂದರು.

ಮಕ್ಕಳಿಗಲ್ಲ, ರಾಜಕಾರಣಿಗಳಿಗೆ ನೈತಿಕ ಶಿಕ್ಷಣದ ಅಗತ್ಯವಿದೆ- ಸಿರಿಗೆರೆ ಮಠ ಸ್ವಾಮೀಜಿ ತರಾಟೆ
ನೈತಿಕ ಶಿಕ್ಷಣದ ಅಗತ್ಯತೆಯು ಮಕ್ಕಳಿಗಲ್ಲ ಬದಲಿಗೆ ರಾಜಕಾರಣಿಗಳಿಗೆ ಇದೆ ಎಂದು ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಶಿಕ್ಷಣದಲ್ಲಿ ಪರಿವರ್ತನೆ ಆಗಬೇಕಿದೆ. ವಿದ್ಯಾರ್ಥಿಗಳಿಗೆ ಔದ್ಯೋಗಿಕ, ಆಧ್ಯಾತ್ಮಿಕ, ವ್ಯಾವಹಾರಿಕ ಶಿಕ್ಷಣ ದೊರೆಯಬೇಕಿದೆ. ಆದರೆ, ಇಂದಿನ ಶಿಕ್ಷಣದಲ್ಲಿ ಔದ್ಯೋಗಿಕ ಹಾಗೂ ವ್ಯಾವಹಾರಿಕ ಶಿಕ್ಷಣ ಮಾತ್ರವೇ ಸಿಗುತ್ತಿದೆ. ಆಧ್ಯಾತ್ಮಿಕ ಶಿಕ್ಷಣ ಸಿಗುತ್ತಿಲ್ಲ. ಹೀಗಾಗಿ ಈ ಸಭೆ ಬಹಳ ಮುಖ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಕ್ಕಳಿಗೆ ನೈತಿಕ ಶಿಕ್ಷಣ ಕೊಡುವ ಬಗ್ಗೆ ಯಾವುದೇ ವಿವಾದ ಇಲ್ಲ. ಆದರೆ ನೈತಿಕ ಶಿಕ್ಷಣ ನೀಡುವವರಿಗೆ ಮೊದಲು ಶಿಕ್ಷಣ ನೀಡಬೇಕು. ಆಗಲೇ ಮಕ್ಕಳು ಸರಿಯಾದ ಮಾರ್ಗದಲ್ಲಿ ನಡೆಯುತ್ತಾರೆ ಎಂದು ಸಲಹೆ ನೀಡಿದ್ದರು. ಸಭೆಯಲ್ಲಿದ್ದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ, ನೀವು ರಾಜಕಾರಣಿಗಳನ್ನು ಕರೆದು ನೈತಿಕ ಶಿಕ್ಷಣ ನೀಡಿ, ಆ ಮೂಲಕ ಬದಲಾವಣೆ ತನ್ನಿ ಎಂದು ಸಲಹೆ ನೀಡಿದರು.

ವಿಧಾನಸೌಧದಲ್ಲಿ ಹೇಗೆ ಕಾರ್ಯಕಲಾಪ ನಡೆಯುತ್ತಿದೆ ಎಂಬುದನ್ನು ನೋಡ್ತಿದ್ದೇವೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಮಾಡುತ್ತೀರಿ. ಆದರೆ ಯಾವ ರೀತಿ ವೈಯಕ್ತಿಕ ನಿಂದನೆಗಳು ಸದನದಲ್ಲಿ ಆಗುತ್ತಿದೆ ಎಂಬುದನ್ನು ಕಾಣಬಹುದು. ಇದಕ್ಕೆಲ್ಲ ಮೊದಲು ಕಡಿವಾಣ ಹಾಕಬೇಕಿದ್ದು, ಇದಕ್ಕಾಗಿ ಪ್ರತ್ಯೇಕ ಕಾಯಿದೆ ಜಾರಿಗೆ ತರುವ ಅವಶ್ಯಕತೆ ಇದೆ‌. ಮುಂದಿನ ದಿನಗಳಲ್ಲಿ ಈ ರೀತಿಯ ದುಂಡು ಮೇಜಿನ ಸಭೆ ಕರೆದು ಕಾಯಿದೆ ಪಾಸ್ ಮಾಡಿಕೊಳ್ಳಿ ಎಂದು ರಾಜಕಾರಣಿಗಳ ಕಿವಿ ಹಿಂಡಿದರು.

ಇದನ್ನೂ ಓದಿ | Karnataka Election | ಲಕ್ಷ್ಮಿ ಹೆಬ್ಬಾಳ್ಕರ್‌ ಕ್ಷೇತ್ರದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ಬಳಿಕ ಈಗ ಆಣೆ ಪ್ರಮಾಣ ರಾಜಕೀಯ!

ಅಸ್ವತ್ವತೆ ಪ್ರಶ್ನಿಸುವ ಕಾಲವಿದು-ನಿರ್ಮಲಾನಂದನಾಥ ಸ್ವಾಮೀಜಿ
ಬಾಲ್ಯದಿಂದ ಯೂನಿವರ್ಸಿಟಿವರೆಗೂ ಕಲಿಯುವ ವಿದ್ಯೆ ಬೇರೆ ಇದೆ. ಹೀಗಾಗಿ ಶಾಲೆಯಿಂದ ಹಿಡಿದು ಯೂನಿವರ್ಸಿಟಿಗಳವರೆಗೂ ಇರುವ ಸಮಸ್ಯೆಗಳನ್ನು ಪ್ರಶ್ನಿಸುವ ಕಾಲ ಇದಾಗಿದೆ ಎಂದು ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಸಭೆಯಲ್ಲಿ ಹೇಳಿದರು. ಮನುಷ್ಯನ ಕೈಗೆ ವಿದ್ಯೆಯಿಂದ ಹತ್ತಿರವಾಗಬೇಕಿದ್ದ ವಿಚಾರ ದೂರವಾಗುತ್ತಿದೆ. ಮನುಷ್ಯನಿಗೆ ತನ್ನ ಒಳಗೆ ಇರುವ ವಿದ್ಯೆಯನ್ನು ಅರಿಯಲು ಅವಕಾಶ ಮಾಡಿಕೊಡಬೇಕಿದೆ ಎಂದು ಅಭಿಪ್ರಾಯಪಟ್ಟರು.

ಶಾಲೆ ಹಾಗೂ ಮನೆಗಳಲ್ಲಿ‌ ಮಕ್ಕಳಿಗೆ ಬೇಕಾದ ವಿಷಯವನ್ನು ರೂಪಿಸಬೇಕಿದೆ. ಶಿಕ್ಷಕರಿಗೆ ಅಂಥದ್ದೊಂದು ವಿದ್ಯೆ ಕೊಡಬೇಕಿದೆ, ಇಲ್ಲವಾದರೆ ಬುದ್ಧನ ಕುದುರೆಯ ಕಥೆ ಇಲ್ಲಿ ಬಂದು ನಿಲ್ಲುತ್ತದೆ. ಬಹಳ ದಶಕಗಳಿಂದ ಸಂಸ್ಥಾನಗಳು, ಮಠಗಳು ಈ ಕೆಲಸ ಮಾಡಿಕೊಂಡು ಬಂದಿದೆ. ನಮ್ಮ ನಾಡಿಗೆ, ನಮ್ಮ‌ ನೆಲಕ್ಕೆ ಶಕ್ತಿಯಿದ್ದು, ಆಧುನಿಕ ವಿದ್ಯೆ ಬೇಕಾಗುತ್ತದೆ. ಏಕಾಏಕಿ ಅಡ್ವಾನ್ಸ್ಡ್‌ ಸೈಕಾಲಜಿ, ಸ್ಪಿರುಚ್ಯುಯಾಲಿಟಿ ತಂದಿಟ್ಟರೆ ಕಷ್ಟವಾಗುತ್ತದೆ. ಹಂತ ಹಂತವಾಗಿ ಇದನ್ನು ಕಲಿಸುತ್ತಾ ಹೋದರೆ ಒಳ್ಳೆಯದು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.

ಇದನ್ನೂ ಓದಿ | Gold price | ಬಂಗಾರದ ದರದಲ್ಲಿ 330 ರೂ. ಏರಿಕೆ, ಬೆಳ್ಳಿ 500 ರೂ. ಹೆಚ್ಚಳ

ಯೂನಿವರ್ಸಲ್ ಚಿಂತನೆಗಳನ್ನು ತರಬೇಕು- ಮುಸ್ಲಿಂ ಮುಖಂಡ ಅಬ್ದುಲ್ ರಹಿಮ್
ನಮ್ಮ ದೇಶ ವಿವಿಧ ಸಂಸ್ಕೃತಿಗಳ ನಾಡಾಗಿದ್ದು, ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣ ಬೇಕಿದೆ. ಯೂನಿವರ್ಸಲ್ ಚಿಂತನೆಗಳನ್ನು ನಾವು ತರಬೇಕು. ಮೌಲ್ಯ ಶಿಕ್ಷಣ ಪ್ರಾಯೋಗಿಕವಾಗಿರಬೇಕು. ಮೌಲ್ಯಯುತ ಶಿಕ್ಷಣವು ಮನೆಯಿಂದ ಶುರುವಾಗಬೇಕೆಂದು ರಾಮಯಣದ ಕಥೆಯ ಮೂಲಕ ಮೌಲ್ಯಯುತ ಶಿಕ್ಷಣದ ಮಹತ್ವವನ್ನು ಅಬ್ದುಲ್ ರಹಿಮ್ ತಿಳಿಸಿದರು. ಮೌಲ್ಯಯುತ ಶಿಕ್ಷಣವನ್ನು ಮಕ್ಕಳಿಗೆ ನೀಡಿದರೆ ಯುದ್ಧ ಗೆದ್ದಂತೆ. ಭಾರತ ಜಾತಿ-ಧರ್ಮಗಳ ನಾಡು, ಮೌಲ್ಯ ಶಿಕ್ಷಣಕ್ಕೆ ಮಹತ್ವ ನೀಡಿರುವ ಸರ್ಕಾರಕ್ಕೆ ಧನ್ಯವಾದವನ್ನು ಅರ್ಪಿಸುತ್ತೇನೆ. ಮೌಲ್ಯ ಶಿಕ್ಷಣ ಕೇವಲ ತಿಳಿವಳಿಕೆಗಷ್ಟೇ ಇರದೆ ಅಂಕಗಳನ್ನು ನೀಡುವ ಮಾದರಿಯಲ್ಲಿರಬೇಕು ಎಂದರು.

ರ‍್ಯಾಂಕ್‌ ಗಳಿಸುವ ಮಷಿನ್ ಆಗಿರುವ ಮಕ್ಕಳು- ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಇತ್ತೀಚೆಗೆ ಮಕ್ಕಳನ್ನು ರ‍್ಯಾಂಕ್‌ ಗಳಿಸುವ ಮಷಿನ್ ಆಗಿ ಮಾಡಿಕೊಳ್ಳಲಾಗಿದೆ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಮಕ್ಕಳ ನಡೆ-ನುಡಿಯಲ್ಲಿ ಸಂಸ್ಕಾರವನ್ನು ಬೆಳೆಸಬೇಕು. ನಾಟಕಗಳ ಮೂಲಕ ಮಕ್ಕಳಿಗೆ ವ್ಯವಹಾರ ಜ್ಞಾನ ಆಗಬೇಕು. ಮಕ್ಕಳೇ ಪಾತ್ರಧಾರಿಗಳು ಆದಾಗ ಮೌಲ್ಯಗಳ ಅಗತ್ಯತೆಯ ಬಗ್ಗೆ ಅವರ ಮನಸ್ಸಿನಲ್ಲಿ ಗಾಢವಾದ ಪರಿಣಾಮ ಬೀರಲಿದೆ. ಶಿಕ್ಷಕರ ಮತ್ತು ತಂದೆ-ತಾಯಿ ಹಾಗೂ ಸಮಾಜದ ನಡವಳಿಕೆಯು ಮಕ್ಕಳಲ್ಲಿ ಬದಲಾವಣೆಯನ್ನು ತರಲು ಸಾಧ್ಯವಿದೆ. ಹಿಂದೆಲ್ಲ ಪಂಚತಂತ್ರದ ಕಥೆಗಳ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ಇದು ಮತ್ತೆ ಆರಂಭವಾಗಬೇಕು. ದೃಶ್ಯ ಮಾಧ್ಯಮದಲ್ಲಿ ಹಿಂಸೆಯ ವೈಭವ ಕಡಿಮೆ ಆಗಬೇಕು, ಮಕ್ಕಳ ಮುಂದೆ ಪ್ರಾಣಿವಧೆ ಮಾಡಬಾರದು. ಇದು ಮಕ್ಕಳ ಮೇಲೆ ಬೇರೆ ಪರಿಣಾಮ ಬೀರುತ್ತದೆ. ಮತ್ತೊಬ್ಬರಿಗೆ ಗೌರವ ಕೊಡುವ ಶಿಕ್ಷಣ ನೀಡಬೇಕು. ದೈವ ಭಕ್ತಿಯ ಜತೆಗೆ ದೇಶಭಕ್ತಿ, ಸಂವಿಧಾನದ ಬಗ್ಗೆ ಗೌರವ ಬೆಳೆಸುವ ಬಗ್ಗೆ ಶಿಕ್ಷಣ ಅತ್ಯಗತ್ಯ ಎಂದರು.

ಶಾಲಾ ಶಿಕ್ಷಕರೇ ನೊಂದಿರುವಾಗ ಮಕ್ಕಳಿಗೇನು ಹೇಳಿಕೊಡಬಲ್ಲರು?: ರವಿಶಂಕರ್‌ ಗುರೂಜಿ
ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ ವರ್ಚುವಲ್‌ ಮೂಲಕ ಸಭೆಯಲ್ಲಿ ಭಾಗಿಯಾಗಿ ಮಾತನಾಡಿ, ನೈತಿಕ ಶಿಕ್ಷಣ ಬಹಳ ಅವಶ್ಯಕವಾಗಿದ್ದು, ಸರ್ಕಾರ ಈ ಹೆಜ್ಜೆ ಇರಿಸಿರುವುದು ಉತ್ತಮವಾದ ಕಾರ್ಯವಾಗಿದೆ. ನಮ್ಮ ಶಿಕ್ಷಕರಿಗೆ ವ್ಯಕ್ತಿತ್ವ ನಿರ್ಮಾಣದ ಪಾಠ ಕಲಿಸಿಕೊಡಬೇಕು. ಅವರಿಗೇ ಈ ಬಗ್ಗೆ ಅರಿವಿಲ್ಲದಿದ್ದರೆ ಅವರು ಮಕ್ಕಳಿಗೇನು ಹೇಳಿಕೊಡಲು ಸಾಧ್ಯವಿದೆ ಎಂದು ಪ್ರಶ್ನಿಸಿದರು. ಶೈಕ್ಷಣಿಕ ಕ್ಷೇತ್ರದಲ್ಲಿ ನೈತಿಕ ಪಾಠ ಈ ಹೊತ್ತಿನಲ್ಲಿ ಅಗತ್ಯ ಇದ್ದು, ಶಿಕ್ಷಕರಿಗೆ ಸರ್ವತೋಮುಖವಾದ ಪ್ರತಿಭೆ, ಶಿಕ್ಷಣ, ಮಕ್ಕಳಲ್ಲಿ ಆತ್ಮೀಯತೆ ಭಾವವನ್ನು ಕಲಿಸಿಕೊಡಬೇಕು ಎಂದು ತಿಳಿಸಿದರು.

ನಶೆಗೆ ಒಳಗಾಗುತ್ತಿರುವ ಮಕ್ಕಳು
ಉತ್ತರ ಭಾರತದಲ್ಲಿ ನಶಾ ಪದಾರ್ಥಗಳು ಹೆಚ್ಚಾಗಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ನೆರೆಯ ರಾಜ್ಯಗಳಲ್ಲಿ ಡ್ರಗ್ ಪ್ರಕರಣ ಹೆಚ್ಚಳಗೊಳ್ಳುತ್ತಿರುವುದು ನಮಗೆ ಎಚ್ಚರಿಕೆಯ ಗಂಟೆಯಾಗಿದೆ. ಹಾಲಿ ನಮ್ಮ ರಾಜ್ಯದಲ್ಲಿ ಡ್ರಗ್ ಸಮಸ್ಯೆ ಇಲ್ಲ, ಆದರೆ ನಗರದಲ್ಲಿ ಈ ಬೆಳವಣಿಗೆ ಅಂಬೆಗಾಲಿಡಲು ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಒತ್ತಡದ ಬದಲು ನೆಮ್ಮದಿ-ಸಂತೋಷದ ವಾತಾವರಣವನ್ನು ನಿರ್ಮಾಣ ಮಾಡಬೇಕು. ಮಗು ನರ್ಸರಿಯಲ್ಲಿ ದಿನಕ್ಕೆ 400 ಬಾರಿ ಮುಗುಳು ನಗುತ್ತದೆ. ಬೆಳೆಯುತ್ತಾ ಕೇವಲ 17 ಬಾರಿ ಮಾತ್ರವೇ ಈ ಮುಗುಳು ನಗು ಇರುತ್ತದೆ. ಇದು ನಿಜಕ್ಕೂ ನಾವು ಪ್ರಶ್ನೆ ಮಾಡಿಕೊಳ್ಳಬೇಕಾದ ಸಂಗತಿಯಾಗಿದೆ. ಅವರಿಗೆ ನಗು ಕೊಡುವ ಕೆಲಸವನ್ನು ನಾವು ಮಾಡಬೇಕಿದೆ. ಹಿಂಸೆಯಲ್ಲಿ ತೊಡಗಿದವರಿಗೆ ಇಂದು ಹೀರೋ ಪಟ್ಟವನ್ನು ಕೊಡಲಾಗಿದೆ. ನಮ್ಮ ಕಾಲದಲ್ಲಿ ಶಾಂತ ಸ್ವರೂಪಿಗೆ ಹೀರೋ ಎಂದು ಹೇಳಿಕೊಡಲಾಗಿತ್ತು. ಇನ್ನು ಶಿಕ್ಷಕರು ಮಾತ್ರವಲ್ಲದೆ ಪೋಷಕರಿಗೂ ಸೆಮಿನಾರ್‌ಗಳನ್ನು ಆಯೋಜಿಸಬೇಕು. ಮಕ್ಕಳ ಮೇಲೆ ಶೇಕಡಾ 25ರಷ್ಟು ಪ್ರಭಾವ ಪೋಷಕರಿಂದಲೇ ಇರುತ್ತದೆ ಎಂದು ತಿಳಿಸಿದರು.

ನೈತಿಕ ಶಿಕ್ಷಣದ ಮೂಲಕ ಭಾರತ ವಿಶ್ವ ಗುರುವನ್ನಾಗಿ ಮಾಡಬೇಕು- ಹೊಂಬುಜ ಮಠ ಸ್ವಾಮೀಜಿ
ಶಿಕ್ಷಣ ಮೂಲಕ ಮಕ್ಕಳಿಗೆ ನೈತಿಕ ಶಿಕ್ಷಣ ನೀಡಬೇಕೆಂದು ಈಗೀನ ಮಕ್ಕಳಿಗೆ ಅವಶ್ಯಕತೆ ಇದೆ. ಈಗಾಗಲೇ ವಿದೇಶಿ ಶಿಕ್ಷಣ ಹಾಗೂ ನಮ್ಮ ದೇಶದ ಶಿಕ್ಷಣದ ಬಗ್ಗೆ ಹಿರಿಯರು ತಿಳಿಸಿದ್ದಾರೆ. ನೈತಿಕ ಶಿಕ್ಷಣದ ಮೂಲಕ ಭಾರತವನ್ನು ವಿಶ್ವ ಗುರುವನ್ನಾಗಿ ಮಾಡಬೇಕೆಂದು ಹೊಂಬುಜ ಮಠದ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

ಶಿಕ್ಷಣ ಪದ್ಧತಿಯಲ್ಲಿ ಮೇಜರ್‌ ಬದಲಾವಣೆ ಅಗತ್ಯ- ತೇಜಸ್ವಿನಿ ಅನಂತಕುಮಾರ್‌
ನಮ್ಮ ಶಿಕ್ಷಣ ಪದ್ಧತಿಯಲ್ಲಿ ಬೃಹತ್‌ ಬದಲಾವಣೆ ಆಗಬೇಕಿದೆ. ಇಲ್ಲವಾದಲ್ಲಿ ಚರ್ಚೆಯನ್ನು ಹೀಗೇ ಮಾಡುತ್ತಿರುತ್ತೇವೆಯೇ ಹೊರತು ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅದಮ್ಯ ಚೇತನ ಸಂಸ್ಥೆಯ ತೇಜಸ್ವಿನಿ ಅನಂತಕುಮಾರ್ ತಿಳಿಸಿದರು.

ಪಾಲಕರಲ್ಲಿ ಕೆಲ ಬದಲಾವಣೆ ತರಬೇಕು, ಪರಿಸರವನ್ನು ಬಳಸಿಕೊಂಡು ಬಾಳುವ ಬಗ್ಗೆ ಮಕ್ಕಳಿಗೆ ತಿಳಿ ಹೇಳಬೇಕು. ಸಾಮಾಜಿಕ ಜವಾಬ್ದಾರಿಯು ಮಕ್ಕಳಲ್ಲಿ ಬೆಳೆಯುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕವಾಗಿ ಸೂಕ್ಷ್ಮತೆಯನ್ನು ಬಳಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರಿಂದಲೂ ಅನೇಕರು ಆದರ್ಶಗಳನ್ನು ಹೊಂದಿದ್ದಾರೆ. ತಂತ್ರಜ್ಞಾನವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಬೇಕಿದೆ. ಇನ್ನು ಸಾತ್ವಿಕ ಆಹಾರದ ಜತೆ ಅನ್ನದಾತನ ಬಗ್ಗೆ ಹೇಳಿಕೊಡಬೇಕು. ಆದರೆ, ಇದನ್ನು ನಾವು ಹೇಳಿಕೊಡುತ್ತಿಲ್ಲ ಎಂದು ಬೇಸರ ಹೊರಹಾಕಿದರು.

ಮೂರು ಗಂಟೆಗಳ ಸುದೀರ್ಘ ಚರ್ಚೆ
ಸಭೆ ಬಳಿಕ ಮಾತಾನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕೆಂದು ಬಯಸಿದ್ದಾರೆ. ವಿವೇಕಾನಂದರು, ಮಹಾತ್ಮ ಗಾಂಧಿ, ವಿನೋಭಬಾವೆ ಕೂಡ ಹಿಂದೆಯೇ ಹೇಳಿದ್ದರು. ಶಿಕ್ಷಣ ವ್ಯವಸ್ಥೆಯಲ್ಲೇ, ಪಠ್ಯದಲ್ಲಿ ಇಲ್ಲದಿರುವ ಮೌಲ್ಯ ಶಿಕ್ಷಣ ಬಗ್ಗೆ ಮಾತನಾಡಿದ್ದಾರೆ. ಮೂರು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆದಿದೆ. ಪ್ರಾಕ್ಟಿಕಲ್ ಆಗಿ ಶಿಕ್ಷಣ ನೀಡುವ ಬಗ್ಗೆ ನಿರ್ಧಾರ ಮಾಡಿರುವುದಾಗಿ ಹೇಳಿದರು.

ಶಿಕ್ಷಣ ತಜ್ಞ ಪ್ರೊಫೆಸರ್ ಎಂ.ಕೆ ಶ್ರೀಧರ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ, ಪ್ರಮುಖ ಕ್ರಿಚ್ಚಿಯನ್ ಮುಖಂಡರು, ಮೌಲ್ವಿಗಳು, ಪ್ರಮುಖ ಶಿಕ್ಷಣ ತಜ್ಞರಾದ ಪ್ರೊಫೆಸರ್ ಎಂ.ಕೆ ಶ್ರೀಧರ್, ರಾಮಯ್ಯ ಸಂಸ್ಥೆಯ ಜಯರಾಂ, ತೇಜಸ್ವಿನಿ ಅನಂತ್ ಕುಮಾರ್, ಕಸ್ತೂರಿ ರಂಗನ್ ಸೇರಿದಂತೆ 67 ಮಂದಿ ಭಾಗಿಯಾಗಿದ್ದರು.

ಇದನ್ನೂ ಓದಿ | Metro Dance | ಮೆಟ್ರೋದಲ್ಲಿ ಜೋಕಾಲಿ ಆಡಿದ ಯೂಟ್ಯೂಬರ್‌; ಶಿಕ್ಷೆಯಾಗಲಿ ಅಂತಿದ್ದಾರೆ ನೆಟ್ಟಿಗರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Drought Relief: ಬರಗಾಲದ ಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಾ ಕಟುಕನಂತೆ ವರ್ತಿಸುತ್ತಿದೆಯೇ ಹೊರತು ಕಾಳಜಿ ತೋರುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

VISTARANEWS.COM


on

Drought Relief
Koo

ಬೆಂಗಳೂರು: ಚುನಾವಣೆಗೆ ಖರ್ಚು ಮಾಡಲು ಹಾಗೂ ಗ್ಯಾರಂಟಿಗಾಗಿ ಕಾಂಗ್ರೆಸ್‌ ಸರ್ಕಾರ ಬರ ಪರಿಹಾರವನ್ನು (Drought Relief) ತಡೆ ಹಿಡಿದುಕೊಂಡಿದೆ. ಇದನ್ನು ಕೂಡಲೇ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲದ ಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಾ ಕಟುಕನಂತೆ ವರ್ತಿಸುತ್ತಿದೆಯೇ ಹೊರತು ಕಾಳಜಿ ತೋರುತ್ತಿಲ್ಲ. ಜಾಹೀರಾತು ನೋಡಿ ರಾಜಕೀಯ ಮಾಡುವುದನ್ನು ಬಿಟ್ಟರೆ ರೈತರ ಸಂಕಷ್ಟಕ್ಕೆ ಮಿಡಿಯುವ ಕೆಲಸ ಮಾಡಿಲ್ಲ. ಕಾಂಗ್ರೆಸ್‌ ನಾಯಕರ ಯೋಗ್ಯತೆಗೆ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಪರಿಹಾರ ನೀಡಿದ್ದರೂ ಅದನ್ನು ರೈತರಿಗೆ ಕೊಡದೆ ಗ್ಯಾರಂಟಿಗೆ ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ಪರಿಹಾರ ವಿತರಣೆಗೆ ವಿಳಂಬ ಮಾಡಲಾಗಿದೆ ಎಂದರು.

ರೈತರು ಪರಿಹಾರ ಕೇಳಿದರೆ ನಿಮ್ಮ ಮನೆಯ ಹೆಂಗಸರಿಗೆ 2 ಸಾವಿರ ರೂಪಾಯಿ ಕೊಡಲಿಲ್ಲವೇ ಎಂದು ಶಾಸಕರು ಅಹಂಕಾರದಿಂದ ಮಾತನಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಕೂಡಲೇ ಟಾಸ್ಕ್‌ಫೋರ್ಸ್‌ ರಚನೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ರಾಜ್ಯಾದ್ಯಂತ ಜಾನುವಾರುಗಳಿಗೆ ಮೇವಿನ ಕೊರತೆ ಕಂಡುಬಂದಿದ್ದು, ಇದಕ್ಕಾಗಿ ಗೋಶಾಲೆಗಳನ್ನು ಆರಂಭಿಸಬೇಕು. ಇಲ್ಲವಾದರೆ ಎಷ್ಟು ಗೋಶಾಲೆ ಆರಂಭಿಸಿದ್ದಾರೆ ಎಂದು ಲೆಕ್ಕ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಬರದ ವಿಚಾರದಲ್ಲಿ ಗಂಭೀರತೆ ತೋರಿಸದ ಸಿದ್ದರಾಮಯ್ಯ ಮಜವಾದಿ ಸಿಎಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಬಂದ ಬಳಿಕ ರಾಜ್ಯದಲ್ಲಿ ಬರಗಾಲ ಬಂದಿದೆ. ಈ ಜೂನ್‌ನಲ್ಲಾದರೂ ಮಳೆ ಬರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಬರಗಾಲದಲ್ಲಿ ಗೊಬ್ಬರ ಸಂಗ್ರಹ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ಆದರೆ ಮುಂಗಾರು ಮಳೆ ಬರುತ್ತೆಯೋ ಇಲ್ಲವೋ ಎಂಬ ಜ್ಞಾನವೂ ಮುಖ್ಯಮಂತ್ರಿಗಿಲ್ಲ. ಕೃಷಿ ಸಚಿವರು ಈ ಕುರಿತು ಸಭೆಗಳನ್ನೇ ನಡೆಸಿಲ್ಲ. 5,000 ಕೋಟಿ ರೂ. ಬರ ನಿರ್ವಹಣೆಗೆ ಇಡುತ್ತೇವೆ ಎಂದು ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಲಾಗಿದೆ. ಆದರೆ ನಯಾಪೈಸೆಯೂ ಕಾಣುತ್ತಿಲ್ಲ ಎಂದು ದೂರಿದರು.

ಬಡ್ಡಿ ವ್ಯಾಪಾರಿ ಅಧಿಕಾರಿಗಳು

ಕಾಂಗ್ರೆಸ್‌ ಸರ್ಕಾರ ರೈತರಿಗೆ ನೀಡಿದ 2,000 ರೂಪಾಯಿಯನ್ನು ಕೇಂದ್ರ ಸರ್ಕಾರ ನೀಡಿದ ಪರಿಹಾರದ ಮೊತ್ತದಲ್ಲಿ ಕಡಿತಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಮಾನವೀಯತೆ ಇಲ್ಲದೆ ಮೀಟರ್‌ ಬಡ್ಡಿ ವ್ಯಾಪಾರಿಗಳಂತೆ ವರ್ತಿಸುತ್ತಿದ್ದಾರೆ. ಆ ಹಣವನ್ನು ವಾಪಸ್‌ ಕೇಳಲು ಸರ್ಕಾರಕ್ಕೆ ನಾಚಿಕೆಯಾಗಬೇಕು. ಬಿಜೆಪಿ ಸರ್ಕಾರ ದುಪ್ಪಟ್ಟು ಪರಿಹಾರ ನೀಡಿತ್ತು. ಆ ಹಣವನ್ನು ಯಾವುದೇ ಕಾರಣಕ್ಕೂ ಕಡಿತ ಮಾಡಬಾರದು ಎಂದು ಒತ್ತಾಯಿಸಿದರು.

ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ ಕೂಡಲೇ ಹಣ ವರ್ಗಾವಣೆ ಮಾಡಬಹುದು. ಆದರೆ ಇನ್ನೂ ಸರ್ಕಾರ ವಿಳಂಬ ಮಾಡುತ್ತಿದೆ. ಹಣವನ್ನು ತನ್ನಲ್ಲೇ ಇಟ್ಟುಕೊಳ್ಳಲು ಸರ್ಕಾರ ಈ ರೀತಿ ತಡ ಮಾಡುತ್ತಿದೆ. ಈ ಕುರಿತು ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸುತ್ತೇನೆ ಎಂದರು.

ಹಿಂದುಳಿದ ವರ್ಗಕ್ಕೆ ಅನ್ಯಾಯ

ಹಿಂದುಳಿದ ವರ್ಗಗಳ ಪರ ಮೊಸಳೆ ಕಣ್ಣೀರು ಹಾಕುವ ಕಾಂಗ್ರೆಸ್‌, ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಿದೆ. ದೇವರಾಜ ಅರಸು ನಿಗಮಕ್ಕೆ ಬಿಜೆಪಿ 190 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್‌ ಸರ್ಕಾರ 100 ಕೋಟಿ ರೂ. ಗೆ ಇಳಿಸಿದೆ. ಮರಾಠ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಅಂಬಿಗರ ಚೌಡಯ್ಯ ನಿಗಮಕ್ಕೆ ಬಿಜೆಪಿ 25 ಕೋಟಿ ರೂ. ನೀಡಿದ್ದು, ಕಾಂಗ್ರೆಸ್‌ ಸರ್ಕಾರ ಅದನ್ನೂ ಅರ್ಧಕ್ಕಿಳಿಸಿದೆ. ವೀರಶೈವ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದ್ದರೆ, ಅದನ್ನು ಕಾಂಗ್ರೆಸ್‌ 60 ಕೋಟಿ ರೂ. ಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ | Prajwal Revanna Case: ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಕೇಸ್‌; ರೇವಣ್ಣ ಬಂಧನ ಕ್ರಮ ಸರಿ ಇದೆ ಎಂದ ಆರ್.‌ ಅಶೋಕ್‌!

ರಾಹುಲ್‌ ಗಾಂಧಿಯನ್ನು ಕೇರಳದ ಸಿಎಂ ಅಮುಲ್‌ ಬೇಬಿ ಎಂದಿದ್ದಾರೆ. ಆದ್ದರಿಂದ ಅಲ್ಲಿಂದ ಮಿಂಚಿನ ಓಟದ ಮೂಲಕ ರಾಹುಲ್‌, ರಾಯ್‌ಬರೇಲಿಗೆ ಹೋಗಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಮೋದಿ ಎಂದರೆ ಭಯವಿದೆ ಎಂದರು.

Continue Reading

ಕರ್ನಾಟಕ

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Prajwal Revanna Case: ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಎಚ್‌.ಡಿ. ರೇವಣ್ಣ ಗುಡುಗಿದ್ದಾರೆ. ಈಗ ಅವರನ್ನು ಹೆಚ್ಚಿನ ತಪಾಸಣೆಗಾಗಿ ಬೋರಿಂಗ್‌ ಆಸ್ಪತ್ರೆಗೆ ಎಸ್‌ಐಟಿ ಅಧಿಕಾರಿಗಳು ಕರೆದುಕೊಂಡು ಬಂದಿದ್ದು, 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಿದ್ದಾರೆ.

VISTARANEWS.COM


on

Prajwal Revanna Case No evidence against me its a conspiracy says HD Revanna
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ನನ್ನ ವಿರುದ್ಧವಾಗಿ ನಡೆಯುತ್ತಿರುವ ರಾಜಕೀಯ ಷಡ್ಯಂತ್ರ ಇದು ಎಂದು ಹೇಳಿದ್ದಾರೆ.

ಎಚ್‌.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೋರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಹೇಳಿದ್ದಾರೆ.

ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಎಚ್‌.ಡಿ. ರೇವಣ್ಣ ಗುಡುಗಿದರು.

ಪರಪ್ಪನ ಅಗ್ರಹಾರಕ್ಕೆ ಎಚ್‌.ಡಿ. ರೇವಣ್ಣ ಶಿಫ್ಟ್‌? SIT ಕಸ್ಟಡಿಗೆ ಕೊಡುವುದು ಡೌಟ್!

ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರಿಗೆ ಇಂದು (ಭಾನುವಾರ – ಮೇ 05) ಬಹುತೇಕ ಜೈಲು ಫಿಕ್ಸ್‌ ಆಗುವ ಸಾಧ್ಯತೆ ಇದೆ. ನ್ಯಾಯಾಧೀಶರ ಮುಂದೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದು, ಕಸ್ಟಡಿಗೆ ಕೇಳಲಿದ್ದಾರೆ. ಆದರೆ, ಇಂದು ಭಾನುವಾರ ಆಗಿರುವ ಹಿನ್ನೆಲೆಯಲ್ಲಿ ಕಸ್ಟಡಿಗೆ ಕೊಡುವುದು ಬಹುತೇಕ ಅನುಮಾನ ಎನ್ನಲಾಗಿದೆ.

ಇಂದು ಭಾನುವಾರ ಆಗಿರುವ ಹಿನ್ನೆಲೆಯಲ್ಲಿ ಕೋರ್ಟ್‌ಗೆ ರಜೆ ಇದೆ. ಈ ಕಾರಣಕ್ಕಾಗಿ ಮಾಜಿ ಸಚಿವ, ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗುತ್ತಿದೆ. ಅಲ್ಲಿ ನ್ಯಾಯಾಧೀಶರ ಮುಂದೆ ಪ್ರಕರಣದ ತೀವ್ರತೆಯನ್ನು ವಿವರಿಸುವ ಎಸ್‌ಐಟಿ ಪರ ವಕೀಲರು ಕಸ್ಟಡಿಗೆ ಕೇಳಲಿದ್ದಾರೆ. ಕಸ್ಟಡಿಗೆ ಕೇಳುವುದಾದರೆ ಸೋಮವಾರ (ಮೇ 6) ರೆಗ್ಯುಲರ್ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿ ಎಂದು ನ್ಯಾಯಾಧೀಶರು ಹೇಳುವ ಸಾಧ್ಯತೆ ಇರಲಿದೆ. ಹೀಗಾಗಿ ರೇವಣ್ಣ ಅವರಿಗೆ ಬಹುತೇಕ ಜೇಲು ಫಿಕ್ಸ್‌ ಆಗಲಿದೆ. ಹೀಗಾಗಿ ಅವರನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ ಮಾಡುವ ಸಾಧ್ಯತೆ ಹೆಚ್ಚಿದೆ.

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್?

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಲು ಎಸ್‌ಐಟಿ ಟೀಮ್ ಮುಂದಾಗಿದೆ. ರೇವಣ್ಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರನ್ನು ಸಂಪರ್ಕ ಮಾಡುವಂತೆ ಬೌರಿಂಗ್ ಆಸ್ಪತ್ರೆಯ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಸಿಜಿ ಬಳಿಕ ಅಲ್ಲಿನ ತಜ್ಞ ವೈದ್ಯರ ಸಲಹೆಯನ್ನು ಪಡೆಯಲು ಸೂಚನೆ ನೀಡಲಾಗಿದೆ.

ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಈ ಕೇಸ್‌ಗೆ ಸಂಬಂಧಿಸಿ ಆ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮೂವರು ಮಹಿಳಾ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಒಬ್ಬೊಬ್ಬರೂ, “ನಾನವಳಲ್ಲ” ಎಂಬ ಉತ್ತರವನ್ನು ನೀಡಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ನಡುವೆ ವಿಡಿಯೊದಲ್ಲಿ ಸಾಕಷ್ಟು ಮಹಿಳಾ ಅಧಿಕಾರಿಗಳೂ ಇದ್ದಾರೆ ಎಂಬ ಬಗ್ಗೆ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊಗಳಲ್ಲಿ ಕಂಡ ಮುಖವನ್ನಾಧರಿಸಿ ಅವರ ಗುರುತನ್ನು ಪತ್ತೆ ಹಚ್ಚಿರುವ ಎಸ್‌ಐಟಿ ಅಧಿಕಾರಿಗಳು ಆ ಸಂತ್ರಸ್ತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಆದರೆ, ಈಗಾಗಲೇ ಈ ಪ್ರಕರಣದಲ್ಲಿ ಸಂಪೂರ್ಣ ಮುಜುಗರವನ್ನು ಅನುಭವಿಸಿರುವ ಮಹಿಳಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ವಿಡಿಯೊ ಹಾಗೂ ಫೋಟೊಗಳು ಸಹ ವೈರಲ್ ಆಗಿದ್ದವು. ಇದರಿಂದ ಅವರು ತೀವ್ರ ಆಘಾತವನ್ನು ಎದುರಿಸಿದ್ದಾರೆ.

ಈಗ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್‌ ನೀಡಿದ್ದರಿಂದ ಮತ್ತಷ್ಟು ಕಂಗೆಟ್ಟಿರುವ ಮಹಿಳಾ ಅಧಿಕಾರಿಗಳು, ಆ ವಿಡಿಯೊ ಹಾಗೂ ಫೋಟೊಗಳು ನಮ್ಮದಲ್ಲ. ಅದನ್ನು ಮಾರ್ಫ್‌ ಮಾಡಲಾಗಿದೆ ಎಂದು ನೋಟಿಸ್‌ಗೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ.

ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ

ಒಂದು ವೇಳೆ ಈ ಮಹಿಳಾ ಅಧಿಕಾರಿಗಳು ಎಸ್‌ಐಟಿ ಮುಂದೆ ಬಂದು ತಮ್ಮ ಮೇಲೆ ಪ್ರಜ್ವಲ್‌ ದೌರ್ಜನ್ಯ ಮಾಡಿದ್ದಾರೆ. ಆಮಿಷವೊಡ್ಡುವ ಮೂಲಕ ಇಲ್ಲವೇ ಕಿರುಕುಳ ನೀಡುವ ಮೂಲಕ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದರೆ, ಈ ಕೇಸ್‌ ಮತ್ತಷ್ಟು ಬಲಿಷ್ಠವಾಗುತ್ತಿತ್ತು. ಆದರೆ, ಈಗ ಈ ಮಹಿಳಾ ಅಧಿಕಾರಿಗಳು ಆ ವಿಡಿಯೊ ಹಾಗೂ ಫೋಟೊದಲ್ಲಿರುವುದು ನಾವೇ ಅಲ್ಲ ಎಂದು ಹೇಳಿಬಿಟ್ಟಿದ್ದಾರೆ. ಹಾಗಾಗಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಕಡಿಮೆ ಇದೆ. ಒಂದು ವೇಳೆ ಎಸ್‌ಐಟಿ ಅಧಿಕಾರಿಗಳು ಅವರ ಮನವೊಲಿಕೆ ಮಾಡಿದಲ್ಲಿ ಗೌಪ್ಯ ಸ್ಥಳದಲ್ಲಿ ಹೇಳಿಕೆ ಪಡೆಯಲಿದ್ದಾರೆ ಎನ್ನಲಾಗಿದೆ.

ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಸಂಸದ ಪ್ರಜ್ವಲ್‌ ರೇವಣ್ಣ ಅವರು ಹಾಸನದ ತಮ್ಮ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆಸಿರುವ ಬಗ್ಗೆ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಸಂಸದರ ನಿವಾಸವನ್ನು ಲಾಕ್‌ ಮಾಡಲಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರಿಗೆ ಸರ್ಕಾರ ನೀಡಿದ್ದ ಈ ನಿವಾಸವನ್ನು ಪ್ರಜ್ವಲ್‌ ಬಳಸಿಕೊಳ್ಳುತ್ತಿದ್ದರು.

ಎಸ್‌ಐಟಿ ಅಧಿಕಾರಿಗಳು ಇದೀಗ ಈ ನಿವಾಸವನ್ನು ವಶಕ್ಕೆ ಪಡೆದಿದ್ದಾರೆ. ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಆರೋಪ ಹೊರಿಸಿದ್ದ ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಜಿ ಪ್ರಧಾನಿ ಎಂಬ ಕಾರಣಕ್ಕೆ ದೇವೇಗೌಡ ಅವರಿಗೆ ಸರ್ಕಾರ ಈ ಬಂಗಲೆಯನ್ನು ನೀಡಿತ್ತು. ಇಂದಿಗೂ ದೇವೇಗೌಡರಿಗೆ ಮೀಸಲಾಗಿರುವ ಸಂಸದರ ನಿವಾಸವನ್ನು ಸದ್ಯ ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದಾರೆ.

2019ರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರಿಗಾಗಿಯೇ ಈ ನಿವಾಸ‌ವನ್ನು ನಿರ್ಮಾಣ ಮಾಡಲಾಗಿತ್ತು. ಹಾಸನಕ್ಕೆ ಬಂದಾಗ ತಂಗಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ನಿವಾಸವನ್ನು ನಿರ್ಮಿಸಲಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ದೇವೇಗೌಡರಿಗೆ ನೀಡಿದ್ದ ನಿವಾಸವನ್ನು ಪ್ರಜ್ವಲ್ ರೇವಣ್ಣ ಬಳಸಿಕೊಳ್ಳುತ್ತಿದ್ದರು.

ದೇವೇಗೌಡರು ಹಾಸನ ನಗರಕ್ಕೆ ಬಂದಾಗ ತಂಗುತ್ತಿದ್ದ ಇದೇ ನಿವಾಸದಲ್ಲಿ ವಾರದಲ್ಲಿ ನಾಲ್ಕು ದಿನ ಪ್ರಜ್ವಲ್‌ ವಾಸ್ತವ್ಯ ಹೂಡುತ್ತಿದ್ದರು. ಸದ್ಯ ಈ ನಿವಾಸದಲ್ಲೇ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೊ ರೆಕಾರ್ಡ್ ಕೂಡ ಇದೇ ನಿವಾಸದ ರೂಮ್‌ನಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ನಿವಾಸ ಹಾಸನದ ಆರ್‌.ಸಿ. ರಸ್ತೆಯಲ್ಲಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

ಈ ಮಧ್ಯೆ ರೇವಣ್ಣ ಅವರನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ತಂಡ ಮತ್ತೆ ಇಂದು ವಿಚಾರಣೆಗೆ ಒಳಪಡಿಸಲಿದೆ. ಶನಿವಾರ ರಾತ್ರಿ ತಡರಾತ್ರಿವರೆಗೆ ವಿಚಾರಣೆ ನಡೆಸಿದ್ದ ಅಧಿಕಾರಿಗಳು ಮತ್ತೆ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಮಹಿಳೆಯ ಅಪಹರಣ ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ನಡೆಸಲಿದ್ದಾರೆ. ಇಂದು ಸಂಜೆ ಕೋರಮಂಗಲದ ಎನ್‌ಜಿವಿಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ರೇವಣ್ಣ ಅವರನ್ನು ಹಾಜರುಪಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ನಿವಾಸದ ಎದುರು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Continue Reading

ಯಾದಗಿರಿ

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Beef Smuggling : ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ಹಿಂದುಪರ ಕಾರ್ಯಕರ್ತರು ವಾಹನಕ್ಕೆ ಕಲ್ಲು ತೂರಾಟ ಮಾಡಿದ್ದಾರೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದು, ಮತ್ತಿಬ್ಬರು ಕಾಲ್ಕಿತ್ತಿದ್ದಾರೆ. ಮತ್ತೊಂದು ಕಡೆ ದೇವನಹಳ್ಳಿ ಏರ್‌ಪೋರ್ಟ್‌ನಲ್ಲಿ 2 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

VISTARANEWS.COM


on

By

Beef smuggling suspected Hindu activists pelt stones at vehicle
Koo

ಯಾದಗಿರಿ: ಅಕ್ರಮವಾಗಿ ಗೋಮಾಂಸ ಸಾಗಾಟ (Beef Smuggling) ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ಘಟನೆ ನಡೆದಿದೆ.

ಮಾಂಸ ಸಾಗಾಣಿಕೆ ಮಾಡುವ ವಾಹನ ಮಹಾರಾಷ್ಟ್ರ ಮೂಲದ್ದು ಎನ್ನಲಾಗಿದೆ. ಮಹಾರಾಷ್ಟ್ರದಿಂದ ತಾಳಿಕೋಟಿ ಮಾರ್ಗವಾಗಿ ಹೈದ್ರಾಬಾದ್‌ಗೆ ಹೋಗುತ್ತಿದ್ದಾಗ, ಹುಣಸಗಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಕೂಡಲೇ ಸ್ಥಳೀ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿ ಇರುವುದು ಯಾವ ಪ್ರಾಣಿಯ ಮಾಂಸ ಎಂಬುದು ಪರಿಶೀಲನೆಗಾಗಿ ಪಶು ಇಲಾಖೆ ವೈದ್ಯರು ಕಲಬುರಗಿಗೆ ಕಳುಹಿಸಿದ್ದಾರೆ.

ಶಿವಾನಂದ ದೊಂಡಿರಾಮ, ಅಕ್ಷಯ್ ಜಾವೀರ್, ಲಖನ್ ಎಂಬುವವರ ಮೇಲೆ ಕೇಸ್ ದಾಖಲಾಗಿದ್ದು, ವಾಹನದ ಚಾಲಕ ಶಿವಾನಂದ ದೊಂಡಿರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಖನ್ ಜಾವೀರ್, ಅಕ್ಷಯ್ ಜಾವೀರ್ ಇಬ್ಬರು ಪರಾರಿಯಾಗಿದ್ದಾರೆ. ರಾಮಸೇನಾ ಜಿಲ್ಲಾಧ್ಯಕ್ಷ ಶರಣಕುಮಾರ ನಾಯಕ ಅವರಿಂದ ದೂರಿನ ಮೇರೆಗೆ ಹುಣಸಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

ಏರ್‌ಪೋರ್ಟ್‌ನಲ್ಲಿ 2 ಕೆ.ಜಿ ಗಾಂಜಾ ವಶ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ದ್ರವ್ಯಗಳನ್ನು ವಶ ಪಡೆಯಲಾಗಿದೆ. 93 ಲಕ್ಷದ 68 ಸಾವಿರ ರೂ. ಮೌಲ್ಯದ 2 ಕೆ.ಜಿ ಗಾಂಜಾ ವಶ ಪಡೆಯಲಾಗಿದೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ ಆಹಾರ ಪದಾರ್ಥದ ಬಾಕ್ಸ್‌‌ನಲ್ಲಿ ಹಾಕಿಕೊಂಡು ಬಂದಿದ್ದ. ಸ್ಕ್ಯಾನಿಂಗ್ ವೇಳೆ ಅನುಮಾನಗೊಂಡು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬಿಯರ್‌ ಕುಡಿಯುತ್ತಾ ಚಿಲ್‌ ಆಗುವ ಚಾನ್ಸ್ ಸಿಗುವುದು ಕಷ್ಟವಾಗಲಿದೆ. ಯಾಕೆಂದರೆ, ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ಇನ್ನೆರಡು ತಿಂಗಳು ರಾಜ್ಯದಲ್ಲಿ ಬಿಯರ್‌ ಅಭಾವ ಉಂಟಾಗುವ ಸಾಧ್ಯತೆ ಇದೆ.

VISTARANEWS.COM


on

Beer Shortage
Koo

ಬೆಂಗಳೂರು: ಬೇಸಿಗೆಯಲ್ಲಿ ಐಸ್‌ ಕ್ರೀಂ, ಕೂಲ್‌ ಡ್ರಿಂಕ್ಸ್‌ಗೆ ಹೆಚ್ಚು ಬೇಡಿಕೆ ಇರುತ್ತದೆ. ಮತ್ತೊಂದೆಡೆ ಅದಕ್ಕಿಂತ ದುಪ್ಪಟ್ಟು ಬೇಡಿಕೆ ಬಿಯರ್‌ಗಳಿಗೆ ಇರೋದನ್ನು ಕಾಣಬಹುದು. ಆದರೆ, ಇದೀಗ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್ ಸಿಕ್ಕಿದ್ದು, ಇನ್ನೆರಡು ತಿಂಗಳ ಕಾಲ ಬಿಯರ್‌ ಸಿಗುವುದು ಕಷ್ಟವಾಗಲಿದೆ. ಯಾಕೆಂದರೆ, ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ರಾಜ್ಯದಲ್ಲಿ ಬಿಯರ್ ಅಭಾವ (Beer Shortage) ಉಂಟಾಗಿರುವುದು ಕಂಡುಬಂದಿದೆ.

ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಮಾರಾಟ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಇನ್ನೂ ಎರಡು ತಿಂಗಳ ಕಾಲ ಬಿಯರ್‌ ಅಭಾವ ಮುಂದುವರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ | Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

ರಾಜ್ಯದಲ್ಲಿ ಪ್ರಸ್ತುತ ನಿತ್ಯ 11.50 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿದೆ. ಬೇಸಿಗೆ‌ ಮುನ್ನ ನಿತ್ಯ 8 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿತ್ತು. ಈಗ ಬೇಸಿಗೆ ಹಿನ್ನೆಲೆ ನಿತ್ಯ 2 ಲಕ್ಷ ಲೀಟರ್ ಬಿಯರ್ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಸಿಗುತ್ತಿಲ್ಲ. ಇದಕ್ಕೆ ಕಾರಣ ಬಿಯರ್ ತಯಾರಿಕೆಯಲ್ಲಿ ಭಾರಿ ಕುಂಠಿತವಾಗಿರುವುದು. ಬಿಯರ್ ಅಭಾವ ಇರುವ ಬಗ್ಗೆ ಅಬಕಾರಿ‌ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮುಂದಿನ ಎರಡು ತಿಂಗಳ ಕಾಲ ಬಿಯರ್‌ ಅಭಾವ ಉಂಟಾಗಲಿದೆ ಎನ್ನಲಾಗಿದೆ.

ಈ ವರ್ಷದ ಆರಂಭದ ತಿಂಗಳಲ್ಲಿ ಬಿಯರ್ ಮಾರಾಟ ಕುಸಿತ ಕಂಡಿತ್ತು. ಕಳೆದ ವರ್ಷದ ಬೇಸಿಗೆಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.30 ಮಾರಾಟ ಹೆಚ್ಚಳವಾಗಿದೆ. ಅಗತ್ಯ ಇರುವಷ್ಟು ಬಿಯರ್ ಸಂಗ್ರಹ ಇದೆ ಎಂದು ಅಬಕಾರಿ ಇಲಾಖೆ ಮೂಲಗಳಿಂದ ಕಳೆದ ತಿಂಗಳು ತಿಳಿದುಬಂದಿತ್ತು. ಆದರೆ, ಇದೀಗ ಬಿಯರ್‌ಗೆ ಭಾರಿ ಬೇಡಿಕೆ ಉಂಟಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡ ಬಿಯರ್‌ ಉತ್ಪಾದನೆ ಕುಸಿಯಲು ಕಾರಣವಾಗಿದೆ. ಇನ್ನು ಸಾರಿಗೆ ಸಮಸ್ಯೆ, ಚುನಾವಣೆ ಸಮಯದಲ್ಲಿ ಮಳಿಗೆಗಳಲ್ಲಿ ಹೆಚ್ಚುವರಿ ಮದ್ಯ, ಬಿಯರ್‌ ಸಂಗ್ರಹಣೆ ಮೇಲೆ ನಿರ್ಬಂಧ ಹೇರಿರುವುದು ಕೂಡ ಬಿಯರ್‌ ಪೂರೈಕೆ ಕುಸಿಯಲು ಕಾರಣವಾಗಿದೆ.

ಇದನ್ನೂ ಓದಿ | Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

ಬಿಸಿಲಿನ ಝಳದಿಂದ ಹೊರಬರಲು ಜನರು ಹಾಟ್ ಡ್ರಿಂಕ್ಸ್‌ಗಳಿಗಿಂತ ಬೇಸಿಗೆಯಲ್ಲಿ ಬಿಯರ್ ಹೆಚ್ಚು ಕುಡಿಯುತ್ತಾರೆ. ಜತೆಗೆ ಈ ವರ್ಷ ಮಾರಾಟ ಹೆಚ್ಚಳವಾಗಲು ಲೋಕಸಭಾ ಚುನಾವಣೆಯ ಕೊಡುಗೆಯೂ ಇದೆ. ಬಿಯರ್ ಕುಡಿದರೆ ಬಿಸಿಲ ಧಗೆಯಿಂದ ಹೊರಬರಬಹುದು ಎಂದು ನಂಬಲಾಗಿದ್ದು, ಇದು ಬಿಯರ್ ಬಳಕೆ ಹೆಚ್ಚಳವಾಗಲು ಕಾರಣವಾಗಿದೆ. ಇನ್ನು ಮದ್ಯ ಮಾರಾಟದಿಂದ ಈ ವರ್ಷ ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ. ಆರಂಭದಲ್ಲಿಯೇ ಉತ್ತಮ ಮಾರಾಟ ಕಂಡು ಬಂದಿರುವುದರಿಂದ ಆದಾಯ ಹೆಚ್ಚುವ ನಿರೀಕ್ಷೆ ಇದೆ.

Continue Reading
Advertisement
Drought Relief
ಕರ್ನಾಟಕ9 mins ago

Drought Relief: ಚುನಾವಣೆ ಖರ್ಚಿಗಾಗಿ ಬರ ಪರಿಹಾರ ತಡೆಹಿಡಿದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್‌

Prajwal Revanna Case No evidence against me its a conspiracy says HD Revanna
ಕರ್ನಾಟಕ16 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Beef smuggling suspected Hindu activists pelt stones at vehicle
ಯಾದಗಿರಿ35 mins ago

Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Narendra Modi
ದೇಶ35 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Vijay Namdevrao Wadettiwar
ದೇಶ1 hour ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ1 hour ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್1 hour ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 20241 hour ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest2 hours ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ2 hours ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case No evidence against me its a conspiracy says HD Revanna
ಕರ್ನಾಟಕ16 mins ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ35 mins ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌