MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ Vistara News

ಕರ್ನಾಟಕ

MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ

MP Muniswamy : ಎರಡು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ತಮ್ಮ ಮೇಲೆ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಲ್ಲದೆ, ಹಲ್ಲೆಗೆ ಮುಂದಾಗಲಾಗಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಅವರು ಕೋಲಾರ ಶಾಸಕ ನಾರಾಯಣಸ್ವಾಮಿ, ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

VISTARANEWS.COM


on

Kolara MP Muniswamy complaint to governor of Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೋಲಾರ ಶಾಸಕ ನಾರಾಯಣಸ್ವಾಮಿ (Kolar MLA Narayanaswamy) ಈಚೆಗೆ ಕಾರ್ಯಕ್ರಮವೊಂದರಲ್ಲಿ ತಮ್ಮ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಜತೆಗೆ ಕೋಲಾರ ಉಸ್ತುವಾರಿ ಸಚಿವ ಬೈರತಿ ಸುರೇಶ್ (Kolar Incharge Minister Byrathi Suresh), ಕೋಲಾರ ಎಸ್‌ಪಿ ಅಸಾಂವಿಧಾನಿಕವಾಗಿ ನಡೆದುಕೊಂಡಿದ್ದಾರೆ ಎಂದು ಕೋಲಾರ ಸಂಸದ ಮುನಿಸ್ವಾಮಿ (Kolar MP Muniswamy) ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಹಲ್ಲೆ ಆರೋಪ ಪ್ರಕರಣ ಈಗ ರಾಜ್ಯಪಾಲರ ಅಂಗಳ ತಲುಪಿದೆ. ಉಸ್ತುವಾರಿ ಸಚಿವ ಬೈರತಿ ಸುರೇಶ್, ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧವೂ ಸಂಸದ ಮುನಿಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ (MLC Chalavadi Narayanaswamy), ಕೇಶವ್ ಪ್ರಸಾದ್ ಸೇರಿದಂತೆ 30 ಮಂದಿ ನಿಯೋಗ ತೆರಳಿ ದೂರು ನೀಡಿದೆ.

ಜನಪ್ರತಿನಿಧಿ ಮೇಲೆ ಅಸಂವಿಧಾನಿಕವಾಗಿ ನಡೆದುಕೊಂಡಿದ್ದಾರೆ. ಹಾಗಾಗಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.

ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ: ಕೋಲಾರ ಸಂಸದ ಮುನಿಸ್ವಾಮಿ

ಸಂವಿಧಾನದಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಅಧಿಕಾರ ಇದೆಯೋ, ವಿಪಕ್ಷಗಳಿಗೂ ಅಷ್ಟೇ ಹಕ್ಕು ಇದೆ. ಇಡೀ ಕೋಲಾರ ಜಿಲ್ಲೆಯಲ್ಲಿ ಇರುವ ಸಮಸ್ಯೆಯನ್ನು ಬಗೆಹರಿಸಿದ್ದೇವೆ ಅಂತ ಹೇಳಿದ್ದರು. ರೈತರ ಜಮೀನನ್ನು ಕಬಳಿಸುವ ಕೆಲಸ ಮಾಡಿದ್ದಾರೆ. ರೈತರ ವಿರುದ್ಧ ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಿದ್ದೀರಿ. ರಾಜಕೀಯ ವೇದಿಕೆ ಮೇಲೂ ಭೂ ಕಳ್ಳರಿದ್ದಾರೆ ಎಂದು ನಾನು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ಕೋಲಾರ ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದ್ದಾರೆ

ಎಸ್‌ಎನ್‌ ಸಿಟಿ ಅಂತ ಲೇಔಟ್ ಮಾಡಿದ್ದಾರೆ. ನನ್ನನ್ನೂ ಸೇರಿದಂತೆ, ಎಲ್ಲರ ವಿರುದ್ಧ ತನಿಖೆ ಆಗಲಿ ಅಂತ ಹೇಳಿದೆ. ಆಗ ಕೋಲಾರ ಶಾಸಕ ನಾರಾಯಣಸ್ವಾಮಿ ಹಾಗೂ ಉಸ್ತುವಾರಿ ಸಚಿವರು ನನ್ನನ್ನು ಹೊರಗೆ ದಬ್ಬಿಸುವ ಕೆಲಸ ಮಾಡಿದರು. ಹಾಗಾಗಿ ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ನಾರಾಯಣಸ್ವಾಮಿ ಹಾಗೂ ಕೋಲಾರ ಎಸ್‌ಪಿ ವಿರುದ್ಧ ದೂರು ನೀಡಿದ್ದೇನೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.

ಇದನ್ನೂ ಓದಿ: BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ರೈತರ ಪರವಾಗಿ ಹೋರಾಟ ಮುಂದುವರಿಯಲಿದೆ

ಕೋಲಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡುವಂತೆ ಮನವಿ ಮಾಡಲಿದ್ದೇವೆ. ದೆಹಲಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರಿಗೂ ದೂರು ನೀಡುತ್ತೇನೆ. ಎಷ್ಟೇ ಗದಾ ಪ್ರಹಾರ ಮಾಡಿದರೂ ನಮ್ಮ ರೈತರ ಪರವಾಗಿ ನನ್ನ ಹೋರಾಟ ನಡೆಯಲಿದೆ ಎಂದು ಸಂಸದ ಮುನಿಸ್ವಾಮಿ ಇದೇ ವೇಳೆ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

ವಿಸ್ತಾರ ಸಂಪಾದಕೀಯ: ಭ್ರೂಣ ಹತ್ಯೆ ಜಾಲ ಆಘಾತಕಾರಿ

ಇತ್ತೀಚಿನ ವರ್ಷಗಳಲ್ಲಿ ವಾರ್ಷಿಕ 5 ಲಕ್ಷ ಅಕ್ರಮ ಹೆಣ್ಣು ಭ್ರೂಣ ಹತ್ಯೆಗಳು ನಡೆಯುತ್ತಿವೆ. ಭ್ರೂಣ ಹೆಣ್ಣು ಎಂಬ ಏಕೈಕ ಕಾರಣಕ್ಕಾಗಿ ಪ್ರತಿ ವರ್ಷ ಭಾರತದಲ್ಲಿ ಒಂದು ಲಕ್ಷ ಗರ್ಭಪಾತಗಳನ್ನು ಮಾಡಲಾಗುತ್ತದೆ ಎಂಬ ಅಂದಾಜಿದೆ. ಇದು ನಾಚಿಕೆಗೇಡಿನ ಸಂಗತಿ.

VISTARANEWS.COM


on

Girl Child
Koo

ಹೆಣ್ಣು ಭ್ರೂಣ ಹತ್ಯೆ ದಂಧೆಯ ಕರಾಳ ವಿವರಗಳು ಒಂದೊಂದಾಗಿ ಬಯಲಾಗುತ್ತಿವೆ. ಇದರಲ್ಲಿ ಪಾಲ್ಗೊಂಡ ಮತ್ತೊಬ್ಬ ಮಹಿಳೆ ಆರೆಸ್ಟ್‌ ಆಗಿದ್ದಾಳೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಈಕೆ ತಿಂಗಳಿಗೆ 70ಕ್ಕೂ ಹೆಚ್ಚು ಅಬಾರ್ಷನ್‌ ಮಾಡಿಸುತ್ತಿದ್ದಳು. ಅಬಾರ್ಷನ್‌ ಮಾಡಿಸಿದ ಭ್ರೂಣಗಳನ್ನು ನಾನಾ ರೀತಿಯಲ್ಲಿ ಎಸೆಯುತ್ತಿದ್ದಳು. ಭ್ರೂಣಗಳನ್ನು ಪೇಪರ್‌ನಲ್ಲಿ ಸುತ್ತಿ ಲ್ಯಾಬ್‌ ಟೆಕ್ನಿಶಿಯನ್‌ಗೆ ಕೊಡುತ್ತಿದ್ದಳು. ಆತ ಮಗುವನ್ನು ಕಾವೇರಿ ನದಿಯಲ್ಲಿ ಎಸೆದು ಬರುತ್ತಿದ್ದ. ಮೆಡಿಕಲ್‌ ವೇಸ್ಟ್‌ಗೆ ಹಾಕುತ್ತಿದ್ದರು. ಒಮ್ಮೊಮ್ಮೆ ಭ್ರೂಣಗಳನ್ನು ಟಾಯ್ಲೆಟ್‌ನಲ್ಲಿ ಎಸೆದು ಫ್ಲಶ್‌ ಮಾಡುತ್ತಿದ್ದುದಾಗಿ ವಿಚಾರಣೆಯಲ್ಲಿ ಹೇಳಿದ್ದಾಳೆ. ಒಂದೆರಡು ಪ್ರಕರಣಗಳಲ್ಲಿ 6 ತಿಂಗಳ ಮಕ್ಕಳನ್ನೂ ಗರ್ಭದಿಂದ ಹೊರತೆಗೆದಿದ್ದೇನೆ. ಆರು ತಿಂಗಳ ಮಗುವಿಗೂ ಜೀವ ಇರುತ್ತಿತ್ತು, ಹೊರ ತೆಗೆದ ಕೆಲ ಸಮಯದ ನಂತರ ಸಾಯುತ್ತಿದ್ದವು ಎಂದು ಮಂಜುಳಾ ಹೇಳಿದ್ದಾಳೆ. ಎಂದರೆ ನಿರಂತರವಾಗಿ ಈ ಕೆಲಸ ಮಾಡುತ್ತಿದ್ದ ಇವರಿಗೆ ಯಾವ ಬಗೆಯ ಮಾನವೀಯತೆಯೂ ಇರಲಿಲ್ಲ ಎಂಬುದು ಇದರಿಂದ ಅರ್ಥವಾಗುತ್ತದೆ.

ಭ್ರೂಣ ಲಿಂಗ ಪತ್ತೆ (Gender Detection) ಮತ್ತು ಭ್ರೂಣ ಹತ್ಯೆಯ (Foeticide) ಬೃಹತ್ ಜಾಲದಲ್ಲಿ ಇದುವರೆಗೂ ಆರು ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ವೇಳೆ, ಆರೋಪಿಗಳು ಎರಡು ವರ್ಷದಲ್ಲಿ ಬರೋಬ್ಬರಿ 900 ಭ್ರೂಣ ಹತ್ಯೆಗಳನ್ನು ಮಾಡಿದ್ದಾರೆಂಬುದು ಗೊತ್ತಾಗಿದೆ. ಭ್ರೂಣ ಹತ್ಯೆಯ ಈ ಭಾರೀ ಜಾಲ ಇದುವರೆಗೆ ನಡೆಸಿರುವ ಕೃತ್ಯ ಯಾವ ರೀತಿಯಿಂದಲೂ ಕ್ಷಮಾರ್ಹವಲ್ಲ; ನಾಗರಿಕ ಸಮಾಜಕ್ಕೆ ತಕ್ಕುದಾದುದಲ್ಲ. ಈ ಜಾಲದ ಬಗ್ಗೆ ಸಮಗ್ರ ತನಿಕೆಯಾಗಬೇಕು. ಇದರಲ್ಲಿ ಯಾರೆಲ್ಲ ಇದ್ದಾರೋ ಅವರಿಗೆಲ್ಲಾ ವಿಚಾರಣೆ ನಡೆಸಿ ಕಠಿಣ ಶಿಕ್ಷೆಯನ್ನು ನೀಡಬೇಕು.

ಹೆಣ್ಣು ಭ್ರೂಣ ಹತ್ಯೆಯು ಒಂದು ಸಾಮಾಜಿಕ ಪಿಡುಗು. ಇದು ಲಿಂಗ ಅಸಮಾನತೆಯ ಜೊತೆಗೆ ತಳುಕು ಹಾಕಿಕೊಂಡಿದೆ. ಒಂದು ಅಂದಾಜಿನ ಪ್ರಕಾರ ಭಾರತದಲ್ಲಿ 90ರ ದಶಕದಲ್ಲಿ 10 ದಶಲಕ್ಷ ಹೆಣ್ಣು ಭ್ರೂಣ ಹತ್ಯೆಗಳು ನಡೆದಿದ್ದವು. ಇತ್ತೀಚಿನ ವರ್ಷಗಳಲ್ಲಿ ವಾರ್ಷಿಕ 5 ಲಕ್ಷ ಅಕ್ರಮ ಹೆಣ್ಣು ಭ್ರೂಣ ಹತ್ಯೆಗಳು ನಡೆಯುತ್ತಿವೆ. ಭ್ರೂಣ ಹೆಣ್ಣು ಎಂಬ ಏಕೈಕ ಕಾರಣಕ್ಕಾಗಿ ಪ್ರತಿ ವರ್ಷ ಭಾರತದಲ್ಲಿ ಒಂದು ಲಕ್ಷ ಗರ್ಭಪಾತಗಳನ್ನು ಮಾಡಲಾಗುತ್ತದೆ ಎಂಬ ಅಂದಾಜಿದೆ. ಮಧ್ಯ ಪ್ರದೇಶ, ಗುಜರಾತ್ ಮತ್ತು ಛತ್ತೀಸ್‌ಗಢಗಳಲ್ಲಿ ಈ ಪ್ರಕರಣಗಳು ಹೆಚ್ಚು ಆದರೂ, ಈಗ ಹೊರ ಬಿದ್ದಿರುವ ಮಾಹಿತಿಯನ್ನು ನೋಡುತ್ತಿದ್ದರೆ ಕರ್ನಾಟಕವೂ ಏನೂ ಕಡಿಮೆಯಿಲ್ಲ ಎನ್ನುವಂತಾಗುತ್ತಿದೆ. ಭಾರತ ಎಷ್ಟೇ ಅಭಿವೃದ್ಧಿಯನ್ನು ಸಾಧಿಸಿದ್ದರೂ, ಅಂತಾರಾಷ್ಟ್ರೀಯವಾಗಿ ಮನ್ನಣೆ ಗಳಿಸುತ್ತಿದ್ದರೂ ಕೆಲವು ಸಾಮಾಜಿಕ ಸಂಗತಿಗಳಲ್ಲಿ ಇನ್ನೂ ಹಿಂದುಳಿದಿದೆ ಎಂಬುದಕ್ಕೆ ಈ ಹೆಚ್ಚುತ್ತಿರುವ ಹೆಣ್ಣು ಭ್ರೂಣ ಹತ್ಯೆಗಳೇ ಸಾಕ್ಷಿ. ಭಾರತದ ಬಡ, ಮಧ್ಯಮ ಕುಟುಂಬಗಳ ಸಾಮಾಜಿಕ ಮತ್ತು ಆರ್ಥಿಕ ದೃಷ್ಟಿಯಿಂದ ಹೆಣ್ಣು ಎಂಬುದು ವೆಚ್ಚದ ಬಾಬತ್ತು. ಜೊತೆಗೆ ವರದಕ್ಷಿಣೆಯೂ ಇನ್ನೊಂದು ಬಹುದೊಡ್ಡ ಕಾರಣ. ಹೀಗೆ ಲಿಂಗ ಅಸಮಾನತೆಯ ನಾನಾ ಕೇಡುಗಳು ಇದರ ಜೊತೆಗಿವೆ.

ಭ್ರೂಣ ಲಿಂಗ ಪತ್ತೆ ಮಾಡುವ ವೈದ್ಯರು, ಕ್ಲಿನಿಕ್‌ಗಳನ್ನು ಮೊದಲು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸುವ ಕೆಲಸ ಆಗಬೇಕು. ಹಣದ ದುರಾಶೆಯಿಂದ ಈ ಕೃತ್ಯ ಮಾಡುವ ವೈದ್ಯರು ಕ್ಷಮೆಗೆ ಅರ್ಹರಲ್ಲ. ಗರ್ಭದ ಸ್ಕ್ಯಾನಿಂಗ್‌ ಮಾಡುವ ವೇಳೆ ಲಿಂಗ ಪತ್ತೆ ಮಾಡಿ ಅದನ್ನು ನಿಗೂಢ ಪಾಸ್‌ವರ್ಡ್‌ಗಳ ಮೂಲಕ ಹೆತ್ತವರಿಗೆ ತಿಳಿಸುವ ಕ್ರಮ ಜಾರಿಯಲ್ಲಿದೆ. ಇದು ನಿಲ್ಲಬೇಕು. ಕಾನೂನು ರಕ್ಷಕರು, ಆರೋಗ್ಯ ಸೇವಾ ನಿರೀಕ್ಷಕರು ಈ ಬಗ್ಗೆ ಅಲರ್ಟ್‌ ಆಗಬೇಕು. ಅಕ್ರಮವಾಗಿ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆಯಲ್ಲಿ ಭಾಗಿಯಾಗಿರುವವರೆಗ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಶಿಕ್ಷೆಯ ಜೊತೆಗೆ ಶಿಕ್ಷಣವೂ ತುಂಬ ಅಗತ್ಯವಾಗಿದೆ. ಹೆತ್ತವರಿಗೆ ವೃದ್ಧಾಪ್ಯದಲ್ಲಿ ಗಂಡು ಮಾತ್ರ ದಿಕ್ಕು, ಹೆಣ್ಣು ಮಗು ಏನಿದ್ದರೂ ಅನ್ಯರ ಮನೆ ಸೇರುವವಳು ಎಂಬ ಭಾವನೆ, ಆಕೆಯ ವಿದ್ಯಾಭ್ಯಾಸ ಇತ್ಯಾದಿಗಳಿಗೆ ಮಾಡುವ ಖರ್ಚೆಲ್ಲ ವ್ಯರ್ಥ ಎಂದು ತಿಳಿಯುವ ಜನರು ದೇಶದ ತುಂಬಾ ಇದ್ದಾರೆ. ಇಂದು ಹೆಣ್ಣು- ಗಂಡು ನಡುವೆ ಯಾವುದೇ ಭೇದವಿಲ್ಲ ಎಂಬುದನ್ನು ಇವರಿಗೆ ಮನದಟ್ಟು ಮಾಡಿಸಬೇಕಿದೆ. ದೇಶದಲ್ಲಿರುವ ಎಲ್ಲ ಧರ್ಮ, ಸಮುದಾಯ, ಪಂಥಗಳು, ಅಕ್ಷರಸ್ಥರು, ಅನಕ್ಷರಸ್ಥರು, ಶ್ರೀಮಂತರು-ಬಡವರ ವರ್ಗಗಳಲ್ಲಿ ಈ ಪಿಡುಗನ್ನು ಕಾಣಬಹುದು. ಇದಕ್ಕೆ ಗ್ರಾಮೀಣ ಪ್ರದೇಶ, ನಗರ ಪ್ರದೇಶ ಎಂಬ ಭೇದ ಭಾವವೂ ಇಲ್ಲ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಡಿಜಿಟಲ್ ಜೀವನ ಪ್ರಮಾಣಪತ್ರ; ಕೇಂದ್ರದ ಜನಸ್ನೇಹಿ ಅಭಿಯಾನ ಶ್ಲಾಘನಾರ್ಹ

ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ, ದಕ್ಷಿಣ ಭಾರತದ ರಾಜ್ಯಗಳು ಈ ಹೆಣ್ಣು ಭ್ರೂಣ ಹತ್ಯೆ ತಡೆಯಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸಿವೆ. ಹೆಣ್ಣು ಮತ್ತು ಗಂಡು ನಡುವಿನ ಅಂತರವು ಗಣನೀಯವಾಗಿ ತಗ್ಗುತ್ತಿದೆ. ವರದಕ್ಷಿಣೆ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಾನೂನು ಜಾರಿಯ ಜತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಪ್ರಯತ್ನ ಮಾಡುತ್ತಿವೆ. ಬೇಟಿ ಬಚಾವ್ ಬೇಟಿ ಪಢಾವ್‌ನಂಥ ಕಾರ್ಯಕ್ರಮಗಳು ಜಾರಿಯಲ್ಲಿವೆ. ಹೆಣ್ಣು ಮಕ್ಕಳ ಶಿಕ್ಷಣ ಪೋಷಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಸಾಕಷ್ಟು ಆರ್ಥಿಕ ಪ್ರೋತ್ಸಾಹ ನೀಡಲಾಗುತ್ತಿದೆ. ಉನ್ನತ ಶಿಕ್ಷಣವರೆಗೂ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಾನೂನು ಜಾರಿ, ಜಾಗೃತಿ ಜತೆಗೆ ತಂದೆ-ತಾಯಿಗಳ ಮನೋಸ್ಥಿತಿಯನ್ನು ಬದಲಾಯಿಸುವ ಪ್ರಯತ್ನಗಳು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕು.

Continue Reading

ಕರ್ನಾಟಕ

Kalaburagi News: ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ಮೂವರು ಮಹಿಳೆಯರಿಗೆ ಗಂಭೀರ ಗಾಯ

Kalaburagi News: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರೆಯಲ್ಲಿ ಕೆಂಡ ಹಾಯುತ್ತಿದ್ದಾಗ ಅವಘಡ ನಡೆದಿದೆ.

VISTARANEWS.COM


on

women seriously injured
Koo

ಕಲಬುರಗಿ: ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ (Kalaburagi News) ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರೆಯಲ್ಲಿ ಕೆಂಡ ಹಾಯುತ್ತಿದ್ದಾಗ ಅವಘಡ ನಡೆದಿದೆ.

ಒಬ್ಬೊಬ್ಬರೆ ಅಗ್ನಿ ಕೊಂಡ ಹಾಯುವಾಗ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಸೋಲಾಪುರ ಮೂಲದ ಮಹಿಳೆ ಸೇರಿದಂತೆ ಮೂವರು ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಕೈಕಾಲು, ಕತ್ತಿನ ಭಾಗದಲ್ಲಿ ಸುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ಪ್ರೇಯಸಿಯನ್ನು ಕೊಂದು, ಆಕೆಯ ಶವದ ಫೋಟೊ ವಾಟ್ಸ್‌ಆ್ಯಪ್ ಸ್ಟೇಟಸ್‌ ಇಟ್ಟ ಯುವಕ

ಯಸಳೂರು ಆರ್‌ಎಫ್ಒ ಅಮಾನತು

ಹಾಸನ: ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕು ಯಸಳೂರು ಆರ್‌ಎಫ್‌ಒ ಅಮಾನತುಗೊಂಡಿದ್ದಾರೆ. ಆರ್‌ಎಫ್‌ಒ ಅವರನ್ನು ಅಮಾನತುಗೊಳಿಸಿ ಶಿಸ್ತು ಪ್ರಾಧಿಕಾರಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್‌ ಆದೇಶ ಹೊರಡಿಸಿದ್ದಾರೆ.

ಯಸಳೂರು ಆರ್‌ಎಫ್‌ಒ ಜಗದೀಶ್ ಅಮಾನತುಗೊಂಡವರು. ಕಾಮಗಾರಿಯೊಂದರ ವೇಳೆ ವಶಕ್ಕೆ ಪಡೆದಿದ್ದ ಜೆಸಿಬಿ ಬಿಡುಗಡೆಗಾಗಿ 1.20 ಲಕ್ಷಕ್ಕೆ ಜಗದೀಶ್ ಬೇಡಿಕೆ ಇಟ್ಟಿದ್ದರು. ಬಾಚೀಹಳ್ಳಿ ವ್ಯಾಪ್ತಿಯಲ್ಲಿ ರಸ್ತೆ-ಚರಂಡಿ ನಿರ್ಮಾಣ ಮಾಡುವ ವೇಳೆ ಜೆಸಿಬಿ ಸೀಜ್‌ ಮಾಡಿ, ಎಫ್‌ಐಆರ್ ದಾಖಲಿಸಲಾಗಿತ್ತು. ಆರ್‌ಎಫ್‌ಒ ವಿರುದ್ಧ ಅಧಿಕಾರ ದುರ್ಬಳಕೆ ಬಗ್ಗೆ ಮಾದ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿ: ಲಂಚ ಪಡೆಯುತ್ತಿದ್ದ ವೇಳೆ ಕುಂದಗೋಳ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕರ ಪಿಂಚಣಿಗೆ ಸಂಬಂಧಿಸಿ ಲಂಚ ಪಡೆಯುವ ವೇಳೆ ಬಿಇಒ ಸಿಕ್ಕಿಬಿದ್ದಿದ್ದಾರೆ.

ಬಿಇಒ ವಿದ್ಯಾ ಕುಂದರಗಿ ಆರೋಪಿ. 8 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಿಇಒ ಸಿಕ್ಕಿಬಿದ್ದಿದ್ದಾರೆ. ಮೊದಲು ಹಣ ಕೊಡಲು ನಿವೃತ್ತ ಶಿಕ್ಷಕ ನಿರಾಕರಿಸಿದ್ದಾರೆ. ಆದರೆ, ಕಡತಕ್ಕೆ ಸಹಿ ಮಾಡದೆ ಸತಾಯಿಸಿದ ಹಿನ್ನೆಲೆಯಲ್ಲಿ ಕೊನೆಗೆ ನಿವೃತ್ತ ಶಿಕ್ಷಕ ಲೋಕಾಯುಕ್ತ ಮೊರೆ ಹೋಗಿದ್ದರು.

ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಪ್ಪಿ ಮಾರ್ಗದರ್ಶನದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಧಾರವಾಡ ಜಿಲ್ಲೆಯ ಕುಂದಗೋಳ ಬಿಇಒ ವಿದ್ಯಾ ಕುಂದರಗಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

ರಾಜ್ಯದ ಆರ್ಥಿಕತೆ ವೃದ್ಧಿಸಲು ವಾರ್ಷಿಕ 1.4 ಲಕ್ಷ ಕೋಟಿ ಹೂಡಿಕೆಯ ಗುರಿ ನಿಗದಿ

ನಿರ್ದಿಷ್ಟ ವಲಯದ 9 ‘ವಿಷನ್‌ ಗ್ರೂಪ್‌” ಸ್ಥಾಪನೆ, ಬಂಡವಾಳ ಹೂಡಿಕೆಗೆ ಉತ್ತೇಜನ ನೀಡಲು ಸಮಿತಿ ರಚನೆ, ಉದ್ಯಮದ ಪ್ರಮುಖರು, ಉದ್ಯಮಿಗಳನ್ನು ಒಳಗೊಂಡ ‘ಇನ್ವೆಸ್ಟ್‌ ಕರ್ನಾಟಕ ಫೋರಂ’ ಪುನರ್‌ ರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

VISTARANEWS.COM


on

States economy
Koo

ಬೆಂಗಳೂರು: ಭವಿಷ್ಯದ ತಂತ್ರಜ್ಞಾನ ಮತ್ತು ಸುಧಾರಿತ ತಯಾರಿಕೆ ಕ್ಷೇತ್ರದಲ್ಲಿ ಕರ್ನಾಟಕವನ್ನು ಏಷ್ಯಾದಲ್ಲಿಯೇ ಅತ್ಯುತ್ತಮ ಬಂಡವಾಳ ಹೂಡಿಕೆಯ ತಾಣವನ್ನಾಗಿ ಮಾಡುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯದ ಕೈಗಾರಿಕಾ ಇಲಾಖೆಯು ಮುಂದಿನ ಐದು ವರ್ಷಗಳಲ್ಲಿ 7 ಲಕ್ಷ ಕೋಟಿ ರೂಪಾಯಿ ಹೂಡಿಕೆ ಆಕರ್ಷಿಸುವ ಹಲವಾರು ಕಾರ್ಯತಂತ್ರದ ಉಪಕ್ರಮಗಳಿಗೆ ಚಾಲನೆ ನೀಡಿದೆ.

ಸದ್ಯದ ಹೂಡಿಕೆ ಮಟ್ಟಕ್ಕಿಂತ ಶೇ. 75 ರಷ್ಟು ಗಮನಾರ್ಹ ಹೆಚ್ಚಳದೊಂದಿಗೆ ಪ್ರತಿ ವರ್ಷ ₹ 1.4 ಲಕ್ಷ ಕೋಟಿ ಮೊತ್ತದ ಬಂಡವಾಳ ಆಕರ್ಷಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ರಾಜ್ಯದ ಕೈಗಾರಿಕಾ ವಲಯದ ಬೆಳವಣಿಗೆ ದರವನ್ನು ಮುಂದಿನ ಐದು ವರ್ಷಗಳಲ್ಲಿ, ಶೇ. 15 ರಿಂದ ಶೇ. 16ರಷ್ಟು ದರದಲ್ಲಿ ಹೆಚ್ಚಿಸಲು ಉದ್ದೇಶಿಸಿದೆ. ರಾಜ್ಯದ ಒಟ್ಟು ಮೌಲ್ಯವರ್ಧನೆಗೆ (ಜಿಎಸ್‌ವಿಎ) ಕೈಗಾರಿಕೆಗಳ ವಲಯದ ಕೊಡುಗೆ ಹೆಚ್ಚಿಸುವುದಕ್ಕೂ ಉದ್ದೇಶಿಸಿದೆ. ಸದ್ಯಕ್ಕೆ ರಾಜ್ಯದಲ್ಲಿ ಪ್ರತಿ ವರ್ಷ 80,000 ಕೋಟಿ ರೂ. ಮೊತ್ತದ ಹೂಡಿಕೆ ಹರಿದು ಬರುತ್ತಿದೆ.

ಆದ್ಯತಾ ವಲಯಗಳು

ವೈಮಾಂತರಿಕ್ಷ ಮತ್ತು ರಕ್ಷಣೆ, ಎಲೆಕ್ಟ್ರಾನಿಕ್‌ ಬಿಡಿಭಾಗಗಳು, ತಯಾರಿಕೆ, ಉಗ್ರಾಣ ಹಾಗೂ ಸರಕು ಸಾಗಣೆ, ವಿದ್ಯುತ್ ಚಾಲಿತ ವಾಹನಗಳು, ಜವಳಿ, ಸೆಮಿಕಂಡಕ್ಟರ್‌, ಬಾಹ್ಯಾಕಾಶ ತಂತ್ರಜ್ಞಾನ, ವೈದ್ಯಕೀಯ ತಂತ್ರಜ್ಞಾನ ಮತ್ತಿತರ ಕ್ಷೇತ್ರಗಳನ್ನು ಆದ್ಯತಾ ವಲಯಗಳೆಂದು ರಾಜ್ಯ ಸರ್ಕಾರವು ಗುರುತಿಸಿದೆ.

ಇದನ್ನೂ ಓದಿ | ವಿಸ್ತಾರ ಅಂಕಣ: ಕನ್ನಡ ಶಾಲೆ ಉಳಿವಿಗೆ ಎಸ್ಇಪಿ ಜಾರಿಯೇ ಅಡ್ಡಿ!

ಈ ಗುರಿ ಸಾಧಿಸಲು ರಾಜ್ಯ ಸರ್ಕಾರವು ಶೀಘ್ರದಲ್ಲಿಯೇ ಹೊಸ ಕೈಗಾರಿಕಾ ನೀತಿಯನ್ನು ಪ್ರಕಟಿಸಲಿದೆ. ಬಂಡವಾಳ ಆಕರ್ಷಿಸುವಲ್ಲಿ ಕರ್ನಾಟಕವನ್ನು ದೇಶದಲ್ಲಿಯೇ ಅಗ್ರಗಣ್ಯ ಹೂಡಿಕೆ ತಾಣವನ್ನಾಗಿಸಲು ಈ ನೀತಿಯು ನೆರವಾಗಲಿದೆ.

ಕಾರ್ಯತಂತ್ರ ಹೂಡಿಕೆ ಸಮಿತಿ ರಚನೆ

ರಾಜ್ಯಕ್ಕೆ ಬಂಡವಾಳ ಹೂಡಿಕೆಗಳನ್ನು ಆಕರ್ಷಿಸುವುದಕ್ಕೆ ಕೈಗಾರಿಕಾ ಇಲಾಖೆಗೆ ಮಾರ್ಗದರ್ಶನ ನೀಡಲು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯತಂತ್ರ ಹೂಡಿಕೆ ಸಮಿತಿ ರಚಿಸಲಾಗಿದೆ. ವೈಮಾಂತರಿಕ್ಷ ಮತ್ತು ರಕ್ಷಣೆ, ಇಎಸ್‌ಡಿಎಂ, ಆಟೊ / ವಿದ್ಯುತ್‌ ಚಾಲಿತ ವಾಹನ (ಇವಿ), ಮಷಿನ್ ಟೂಲ್ಸ್, ಔಷಧಿ, ತಯಾರಿಕೆ, ಕೈಗಾರಿಕೆ 5.0, ಜವಳಿ ಮತ್ತು ಪರಿಸರ ಸ್ನೇಹಿ ಇಂಧನ ವಲಯಗಳಲ್ಲಿ ಒಂಬತ್ತು ’ವಿಷನ್ ಗ್ರೂಪ್‌’ಗಳನ್ನು ಸ್ಥಾಪಿಸಲಾಗಿದೆ.

’ಕರ್ನಾಟಕವನ್ನು ಕೈಗಾರಿಕೆ ಸ್ನೇಹಿ ರಾಜ್ಯವನ್ನಾಗಿ ಮಾಡಲು ನಮ್ಮ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಕ್ಷೇತ್ರಗಳು ಪ್ರಗತಿ ಪಥದಲ್ಲಿ ಸಾಗಲು ನೆರವಾಗುವ ಅನುಕೂಲಕರ ವಾತಾವರಣ ಸೃಷ್ಟಿಸುವ ಗುರಿಯನ್ನು ನಾವು ಹೊಂದಿದ್ದೇವೆ. ’ಇನ್ವೆಸ್ಟ್‌ ಕರ್ನಾಟಕ ಫೋರಂ’ (ಐಕೆಎಫ್‌) ಪುನರ್‌ರಚನೆ, ಕಾರ್ಯತಂತ್ರದ ಹೂಡಿಕೆ ಸಮಿತಿ ರಚನೆ ಮತ್ತು ಒಂಬತ್ತು ನಿರ್ದಿಷ್ಟ ವಲಯಗಳ ’ವಿಷನ್‌ ಗ್ರೂಪ್‌’ ರಚನೆಗಳಂತಹ ಕ್ರಮಗಳು ಹೂಡಿಕೆದಾರರಿಗೆ ಕರ್ನಾಟಕವನ್ನು ಪ್ರಮುಖ ಆದ್ಯತೆಯ ರಾಜ್ಯವನ್ನಾಗಿ ಆಕರ್ಷಿಸಲು ನೆರವಾಗಲಿವೆ’ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

’ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಒಲವು ಹೊಂದಿರುವ ಫಾಕ್ಸ್‌ಕಾನ್‌, ಐಬಿಸಿ, ಎಎಂಡಿ, ಕ್ವಾಲ್‌ಕಾಂ, ಅಪ್ಲೈಡ್‌ ಮಟೇರಿಯಲ್ಸ್‌, ಮಾರುಬೇನಿ ಮತ್ತು ಟಾಟಾ ಟೆಕ್ನಾಲಜೀಸ್‌ ಮುಂತಾದ ಬಹುರಾಷ್ಟ್ರೀಯ ಕಂಪನಿಗಳು ತಮ್ಮ ದೊಡ್ಡ ಮೊತ್ತದ ಹೂಡಿಕೆ ಪ್ರಸ್ತಾವಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿವೆ. ಒಟ್ಟಾರೆ ₹ 50,000 ಕೋಟಿ ಮೌಲ್ಯದ ಹೂಡಿಕೆಯ ಪ್ರಸ್ತಾವನೆಗಳನ್ನು ನಾವು ಹೊಂದಿದ್ದೇವೆ’ ಎಂದು ಹೇಳಿದ್ದಾರೆ.

ಆದ್ಯತಾ ವಲಯಗಳ ಕಡೆಗೆ ಹೂಡಿಕೆದಾರರನ್ನು ಆಕರ್ಷಿಸಲು, ವಿಶ್ವ ದರ್ಜೆಯ ಕೈಗಾರಿಕಾ ಮೂಲಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ಹತ್ತಾರು ಕ್ರಮಗಳನ್ನು ಕೈಗೊಂಡಿದೆ. ಬಳಕೆಗೆ ಸಿದ್ಧವಿರುವ ಕಾರ್ಖಾನೆಗಳು, ಕೈಗಾರಿಕಾ ಪಾರ್ಕ್‌ಗಳು, ಕೈಗಾರಿಕಾ ಸಮೂಹಗಳು (ಕ್ಲಸ್ಟರ್‌) ಮತ್ತು ಸಾಮಾನ್ಯ ಬಳಕೆಯ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಇ2ಇ (ಆದಿಯಿಂದ ಅಂತ್ಯದವರೆಗೆ) ಅರ್ಜಿ ಸಲ್ಲಿಸುವ ಮತ್ತು ಅನುಮೋದನೆಗಳ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಿ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಭೂ – ಬ್ಯಾಂಕ್‌ನ ವಾಸ್ತವ ಚಿತ್ರಣವನ್ನು ಒದಗಿಸಲಾಗುವುದು. ಇತರ ಕ್ರಮಗಳ ಪೈಕಿ, ಸರ್ಕಾರವು ಉದ್ಯಮ-ಶೈಕ್ಷಣಿಕ ವಲಯದ ಸಹಯೋಗವನ್ನು ಕಾರ್ಯಗೊಳಿಸುತ್ತಿದೆ. ಪಾಲಿಟೆಕ್ನಿಕ್‌ಗಳನ್ನು ಸುಧಾರಿತ ಉಪಕರಣಗಳು ಮತ್ತು ಮೂಲಸೌಕರ್ಯಗಳೊಂದಿಗೆ ನವೀಕರಿಸುತ್ತಿದೆ.

ಹೊಸ ಕಾರ್ಯತಂತ್ರಗಳು

ರಾಜ್ಯದಲ್ಲಿನ ಕೈಗಾರಿಕಾ ಬೆಳವಣಿಗೆ ದರವನ್ನು ಸುಸ್ಥಿರವಾಗಿ ಉಳಿಸಿಕೊಳ್ಳಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇವುಗಳಲ್ಲಿ ಇತ್ತೀಚೆಗಷ್ಟೇ ಕೊನೆಗೊಂಡ ಕೈಗಾರಿಕೆಗಳ ಇಲಾಖೆ ನಿಯೋಗದ ಅಮೆರಿಕದ ಯಶಸ್ವಿ ಭೇಟಿಯೂ ಸೇರಿದೆ. ಈ ಭೇಟಿಯ ಸಂದರ್ಭದಲ್ಲಿ, ನಿಯೋಗವು ಅಮೆರಿಕದಲ್ಲಿ ತಂತ್ರಜ್ಞಾನ, ಸೆಮಿಕಂಡಕ್ಟರ್, ವಿದ್ಯುತ್‌ ಚಾಲಿತ ವಾಹನಗಳು (ಇವಿ), ವೈಮಾಂತರಿಕ್ಷ ಮತ್ತು ವೈದ್ಯಕೀಯ ಕ್ಷೇತ್ರದ ದೈತ್ಯ ಕಂಪನಿಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ, ಕರ್ನಾಟಕದಲ್ಲಿನ ಹೂಡಿಕೆಯ ಅವಕಾಶಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದೆ.

ಇನ್ವೆಸ್ಟ್ ಕರ್ನಾಟಕ ಫೋರಮ್ (ಐಕೆಎಫ್) ವ್ಯಾಪ್ತಿಯಲ್ಲಿ ಬರುವ ಕಾರ್ಯತಂತ್ರದ ಹೂಡಿಕೆ ಸಮಿತಿಯು ಸರ್ಕಾರದ ಹೊಸ ಚಿಂತನೆಗೆ ಮತ್ತೊಂದು ಉದಾಹರಣೆಯಾಗಿದೆ. ಬಂಡವಾಳ ಹೂಡಿಕೆಯ ಕೇಂದ್ರವಾಗಿ ರಾಜ್ಯದ ಖ್ಯಾತಿಯನ್ನು ಇದು ಹೆಚ್ಚಿಸಲಿದೆ. ಪುನರ್‌ರಚನೆಗೊಂಡಿರುವ ಹೊಸ ಅವತಾರದಲ್ಲಿ, ಪ್ರಮುಖ ತಯಾರಿಕಾ ಚಟುವಟಿಕೆಗಳು ಒಳಗೊಂಡಂತೆ ಕೈಗಾರಿಕಾ ವಲಯಗಳಲ್ಲಿ ಪ್ರಮುಖ ಕಂಪನಿಗಳ ಭಾಗವಹಿಸುವಿಕೆಯಿಂದ ಹೆಚ್ಚಿನ ಅನುಕೂಲ ಆಗಲಿದೆ.

ವಿಷನ್‌ ಗ್ರೂಪ್‌ಗಳ ರಚನೆ

ತನ್ನ ಕೈಗಾರಿಕಾ ವಲಯದ ಒಟ್ಟಾರೆ ವಾರ್ಷಿಕ ಬೆಳವಣಿಗೆ ದರ (ಸಿಎಜಿಆರ್) ಹೆಚ್ಚಿಸಲು, ಸರ್ಕಾರವು ಒಂಬತ್ತು ನಿರ್ದಿಷ್ಟ ವಲಯಗಳಾದ ಜವಳಿ, ಔಷಧ , ರಕ್ಷಣೆ, ಯಂತ್ರೋಪಕರಣಗಳು, ಇಎಸ್‌ಡಿಎಂ, ವಾಹನ ತಯಾರಿಕೆ / ವಿದ್ಯುತ್‌ಚಾಲಿತ ವಾಹನಗಳು, ಪ್ರಮುಖ ತಯಾರಿಕೆ, ಹೊಸ ತಂತ್ರಜ್ಞಾನಗಳು, ಉದ್ಯಮ 5.0, ಮತ್ತು ಪರಿಸರ ಸ್ನೇಹಿ ಇಂಧನ ಉತ್ಪಾದನೆಗೆ ಸಂಬಂಧಿಸಿದಂತೆ ’ವಿಷನ್‌ ಗ್ರೂಪ್‌’ ಗಳನ್ನು ರಚಿಸಿದೆ. ರಾಜ್ಯದಲ್ಲಿನ ಇತರ ಜಿಲ್ಲೆಗಳಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಲು ‘ಬೆಂಗಳೂರಿನ ಆಚೆಗೆ’ ಕೈಗಾರಿಕೆಗಳನ್ನು ಸ್ಥಾಪಿಸಲು ಹೊಣೆಗಾರಿಕೆಯನ್ನು ಈ ’ವಿಷನ್ ಗ್ರೂಪ್‌”ಗಳಿಗೆ ಒಪ್ಪಿಸಲಾಗಿದೆ.

ಕರ್ನಾಟಕದಲ್ಲಿನ ಅನುಕೂಲತೆಗಳು

ಪ್ರಮುಖ ಕೊಡುಗೆಗಳನ್ನು ನೀಡಬಲ್ಲ ರಾಜ್ಯವಾಗಿದ್ದು, ದೇಶದಲ್ಲೇ ಅತ್ಯಂತ ಆಕರ್ಷಕ ಹೂಡಿಕೆಯ ತಾಣವಾಗಿದೆ. ಹೂಡಿಕೆದಾರ ಸ್ನೇಹಿ ನೀತಿಗಳು, ಸಹಾಯ ಸವಲತ್ತುಗಳು, ಭೂಮಿಯೂ ಸೇರಿದಂತೆ ಬಳಕೆಗೆ ಸಿದ್ಧ ಇರುವ ಕೈಗಾರಿಕಾ ಸೌಲಭ್ಯಗಳು ಹೂಡಿಕೆದಾರರನ್ನು ಆಕರ್ಷಿಸಲಿವೆ.

ಇದನ್ನೂ ಓದಿ | Bheemanna Khandre: ರಾಜ್ಯದಲ್ಲೇ ಬೀದರ್ ಉಳಿಯಲು ಭೀಮಣ್ಣ ಖಂಡ್ರೆ ಹೋರಾಟವೂ ಕಾರಣ: ಸಿಎಂ

ರಾಜ್ಯವು ಕೈಗಾರಿಕಾ ಮೂಲಸೌಕರ್ಯಗಳು ಹಾಗೂ ಸಹಾಯ ಸವಲತ್ತುಗಳನ್ನು ಒದಗಿಸುವುದರ ಜತೆಗೆ ಗರಿಷ್ಠ ಕೌಶಲದ ಮತ್ತು ತರಬೇತಿ ಪಡೆದ ಕಾರ್ಮಿಕ ಪಡೆಯನ್ನೂ ಹೊಂದಿದೆ. ಸಮರ್ಥ ಹಾಗೂ ದಕ್ಷ ಸರಕು ಸಾಗಣೆ ಜಾಲದ ನೆರವಿನಿಂದ ಬೇಡಿಕೆ ಕೇಂದ್ರಗಳಿಗೆ ಉತ್ತಮ ಸಂಪರ್ಕ ಸೌಲಭ್ಯ ಹೊಂದಿದೆ. ಉದ್ಯಮಗಳ ಸ್ಥಾಪನೆಯನ್ನು ಸುಲಲಿತಗೊಳಿಸಲು ರಾಜ್ಯ ಸರ್ಕಾರವು ನಿಯಮಾವಳಿಗಳನ್ನು ಪರಿಷ್ಕರಿಸಿದೆ. ಕೈಗಾರಿಕಾ ಪರಿಸರ ವ್ಯವಸ್ಥೆಗೆ ವಿಶ್ವದರ್ಜೆಯ ಸಾಮಾಜಿಕ ಮೂಲಸೌಕರ್ಯದ ಉತ್ತಮ ಬೆಂಬಲವೂ ಇದೆ.

Continue Reading

ಕರ್ನಾಟಕ

BY Vijayendra: ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ನಡ್ಡಾ ಭೇಟಿಯಾದ ವಿಜಯೇಂದ್ರ; ಏನೇನು ಚರ್ಚೆ?

BY Vijayendra: ಜೆ.ಪಿ. ನಡ್ಡಾ ಅವರ ಜನ್ಮದಿನದಂದೇ ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ. ಇದೇ ವೇಳೆ ಅವರು ಜೆ.ಪಿ. ನಡ್ಡಾ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದರು.

VISTARANEWS.COM


on

JP Nadda And BY Vijayendra
Koo

ನವದೆಹಲಿ/ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ (BY Vijayendra) ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರನ್ನು ಭೇಟಿಯಾಗಿದ್ದಾರೆ. ಅದರಲ್ಲೂ, ಜೆ.ಪಿ. ನಡ್ಡಾ ಅವರ ಜನ್ಮದಿನದಂದೇ ಬಿ.ವೈ. ವಿಜಯೇಂದ್ರ ಅವರು ಭೇಟಿಯಾಗಿದ್ದು, ಇದೇ ವೇಳೆ ರಾಜ್ಯದ ಹಲವು ವಿಚಾರಗಳ ಕುರಿತು ಚರ್ಚಿಸಲಾಗಿದೆ. ಹಾಗೆಯೇ, ನಡ್ಡಾ ಅವರಿಗೆ ವಿಜಯೇಂದ್ರ ಅವರು ಜನ್ಮದಿನದ ಶುಭಾಶಯಗಳನ್ನೂ ತಿಳಿಸಿದ್ದಾರೆ.

ಜೆ.ಪಿ. ನಡ್ಡಾ ಅವರನ್ನು ಭೇಟಿಯಾದ ಬಳಿಕ ಬಿ.ವೈ.ವಿಜಯೇಂದ್ರ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಗೂ ಫೋಟೊಗಳನ್ನು ಹಂಚಿಕೊಂಡಿದ್ದಾರೆ. “ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರ ಜನ್ಮದಿನವಾದ ಇಂದೇ (ಡಿಸೆಂಬರ್‌ 2) ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿದೆ. ಆಶೀರ್ವಾದ ಪಡೆದು, ಶುಭಾಶಯ ಕೋರುವ ಅಪೂರ್ವ ಸಂದರ್ಭ ಒದಗಿ ಬಂದದ್ದು ಧನ್ಯತೆಯ ಭಾವ ಮೂಡಿಸಿತು” ಎಂದು ವಿಜಯೇಂದ್ರ ಬರೆದುಕೊಂಡಿದ್ದಾರೆ.

“ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ನಡ್ಡಾ ಅವರು ನನ್ನ ಬಗ್ಗೆ ಇರಿಸಿರುವ ಅಚಲ ನಂಬಿಕೆಯ ನುಡಿಗಳು ಇಂದು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸದ ಉತ್ಸಾಹ ಮೂಡಿಸುವುದರೊಂದಿಗೆ, ಬಹು ದೊಡ್ಡ ಹೊಣೆಗಾರಿಕೆಯನ್ನೂ ನೆನಪಿಸಿತು. ವರಿಷ್ಠರು ಇರಿಸಿರುವ ನಿರೀಕ್ಷೆಯ ಗುರಿ ತಲುಪುವುದೇ ನನ್ನ ಮಹಾ ಸಂಕಲ್ಪವಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‌ ಜಿ.ವಿ. ಅವರು ಉಪಸ್ಥಿತರಿದ್ದರು” ಎಂದು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Shivamogga News: ಶಿಕಾರಿಪುರದ ಕಾಂಗ್ರೆಸ್ ಪುಡಾರಿಗಳ ಆರ್ಭಟ ಶೀಘ್ರವೇ ನಿಲ್ಲಲಿದೆ: ಬಿ.ವೈ. ವಿಜಯೇಂದ್ರ‌

ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್‌ ನವೆಂಬರ್‌ 10ರಂದು ಆಯ್ಕೆ ಮಾಡಿದ್ದು, ನವೆಂಬರ್‌ 15ರಂದು ಬಿ.ವೈ.ವಿಜಯೇಂದ್ರ ಅವರು ಪದಗ್ರಹಣ ಮಾಡಿದ್ದಾರೆ. ರಾಜ್ಯಾಧ್ಯಕ್ಷರಾದ ಬಳಿಕ ವಿಜಯೇಂದ್ರ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಹಿರಿಯ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇದರ ಬೆನ್ನಲ್ಲೇ, ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಸಜ್ಜಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Girl Child
ಕರ್ನಾಟಕ8 mins ago

ವಿಸ್ತಾರ ಸಂಪಾದಕೀಯ: ಭ್ರೂಣ ಹತ್ಯೆ ಜಾಲ ಆಘಾತಕಾರಿ

Dina Bhavihsya
ಪ್ರಮುಖ ಸುದ್ದಿ38 mins ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Assembly Election Results 2023
Live News6 hours ago

Election Results 2023 Live: ಕೆಲವೇ ಕ್ಷಣಗಳಲ್ಲಿ 4 ರಾಜ್ಯಗಳ ಚುನಾವಣೆ ಫಲಿತಾಂಶ; ಇಲ್ಲಿದೆ ಕ್ಷಣಕ್ಷಣದ ಅಪ್‌ಡೇಟ್ಸ್

Kapil Sharma And Sunil Grover
ಕಿರುತೆರೆ/ಒಟಿಟಿ6 hours ago

Kapil Sharma: 6 ವರ್ಷದ ಮುನಿಸು ಮರೆತು ಒಂದಾದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್;‌ ಬರ್ತಿದೆ ಶೋ!

women seriously injured
ಕರ್ನಾಟಕ6 hours ago

Kalaburagi News: ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ಮೂವರು ಮಹಿಳೆಯರಿಗೆ ಗಂಭೀರ ಗಾಯ

Bangalore Bulls
ಕ್ರೀಡೆ6 hours ago

Pro Kabaddi : ಗುಜರಾತ್​ ತಂಡಕ್ಕೆ ಸೆಡ್ಡು ಹೊಡೆಯುವುದೇ ಬುಲ್ಸ್​

Heart Attack
ಆರೋಗ್ಯ6 hours ago

Heart Attack: ಹೃದಯಾಘಾತಕ್ಕೆ 6 ತಿಂಗಳಲ್ಲಿ 1,052 ಜನ ಬಲಿ; 80% ಮಂದಿ 11-25 ವರ್ಷದವರೇ!

Pro Kabaddi Day 1
ಕ್ರೀಡೆ7 hours ago

Pro Kabaddi: ಮೊದಲ ದಿನ ಗುಜರಾತ್​, ಮುಂಬಾ ತಂಡಕ್ಕೆ ಗೆಲುವು

States economy
ಕರ್ನಾಟಕ7 hours ago

ರಾಜ್ಯದ ಆರ್ಥಿಕತೆ ವೃದ್ಧಿಸಲು ವಾರ್ಷಿಕ 1.4 ಲಕ್ಷ ಕೋಟಿ ಹೂಡಿಕೆಯ ಗುರಿ ನಿಗದಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Dina Bhavihsya
ಪ್ರಮುಖ ಸುದ್ದಿ38 mins ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ13 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ5 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

ಟ್ರೆಂಡಿಂಗ್‌