MUDA site scandal: ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ - Vistara News

ಕರ್ನಾಟಕ

MUDA site scandal: ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

MUDA site scandal: ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ವಿಪಕ್ಷಗಳ ಹಲವು ನಾಯಕರು, ಮುಖಂಡರು ಮುಡಾ ಸೈಟ್‌ ಪಡೆದಿದ್ದಾರೆ. ನಾನು ಕುಮಾರಸ್ವಾಮಿ ಅವರ ಕುಟುಂಬದ ಆಸ್ತಿಪಾಸ್ತಿಗಳ ಬಗ್ಗೆ ಮಾತನಾಡಲ್ಲ. ಯಾಕೆಂದರೆ ಅವುಗಳ ಸಂಖ್ಯೆ ಎಷ್ಟೋ , ಆಳವೆಷ್ಟೋ, ಉದ್ದವೆಷ್ಟೋ ತಿಳಿಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರು ಇತ್ತೀಚೆಗೆ ನನ್ನನ್ನು ಗುರಿಮಾಡಿಕೊಂಡಿದ್ದಾರೆ. ಯಾಕೆಂದರೆ ಸಿದ್ದರಾಮಯ್ಯನವರದು ಕಳಂಕರಹಿತವಾದ ವ್ಯಕ್ತಿತ್ವ ಎಂಬ ಮಾತು ಅವರ ನಿದ್ದೆಗೆಡಿಸುತ್ತಿದೆ. ಹಾಗಾಗಿ ಅವರು ಇಲ್ಲಸಲ್ಲದ ಕಿತಾಪತಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಆದರೆ, ಕುಮಾರಸ್ವಾಮಿ ಸೇರಿ ವಿಪಕ್ಷಗಳ ಹಲವು ನಾಯಕರು, ಮುಖಂಡರು ಮುಡಾ ಸೈಟ್‌ (MUDA site scandal) ಪಡೆದಿದ್ದಾರೆ. ಕುಮಾರಸ್ವಾಮಿ ಕೈಗಾರಿಕೆ ನಿರ್ಮಿಸಲು ಸೈಟ್‌ ಪಡೆದಿದ್ದರು. ಆದರೆ, ಕೈಗಾರಿಕೆ ಆರಂಭಿಸದೆ ಸಂಪೂರ್ಣವಾಗಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಇವರು ಪ್ರಶ್ನೆ ಮಾಡಿಲ್ಲ. ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು, ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿ, ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮುಡಾದಿಂದ ಪಡೆದಿರುವ ಸೈಟ್‌ಗಳ ವಿವರ ಮತ್ತು ಹೆಸರನ್ನು ಓದಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಎಚ್‌.ವಿಶ್ವನಾಥ್‌, ಸಾ.ರಾ.ಮಹೇಶ್‌, ಸಿ.ಎನ್‌.ಮಂಜೇಗೌಡ ಸೇರಿ ಹಲವು ವಿಪಕ್ಷ ನಾಯಕರು, ಮುಖಂಡರು ಸೈಟ್‌ ಪಡೆದಿರುವ ಪಟ್ಟಿಯನ್ನು ಸಿಎಂ ಬಿಡುಗಡೆ ಮಾಡಿದರು.

ಗೋಮಾಳ ಸೇರಿ 200 ಎಕರೆ ಗುಳುಂ

ನಾನು ಕುಮಾರಸ್ವಾಮಿ ಅವರ ಕುಟುಂಬದ ಆಸ್ತಿಪಾಸ್ತಿಗಳ ಬಗ್ಗೆ ಮಾತನಾಡಲ್ಲ. ನನಗೆ ಏನು ಇಲ್ಲಿರುವ ಯಾರಿಗೂ ಸಾಧ್ಯವಿಲ್ಲ. ಯಾಕೆಂದರೆ ಅವುಗಳ ಸಂಖ್ಯೆ ಎಷ್ಟೋ , ಆಳವೆಷ್ಟೋ, ಉದ್ದವೆಷ್ಟೋ ತಿಳಿಯದು ಎಂದ ಸಿಎಂ, ಹಿಟ್ಲರ್‌ವಾದಿಗಳ ಜತೆಗೆ ಫ್ಯೂಡಲ್‌ವಾದಿಗಳು ಸೇರಿಕೊಂಡಿದ್ದಾರೆ. ಇಬ್ಬರೂ ಸೇರಿ ಟಾರ್ಗೆಟ್ ಮಾಡಿಕೊಂಡು ಓಡಾಡುತ್ತಿದ್ದಾರೆ. ನನ್ನ ಜೀವಿತಾವಧಿಯಲ್ಲಿ ಇಂಥ ಹಲವಾರು ಪಿತೂರಿಗಳನ್ನು ಎದುರಿಸಿದ್ದೇನೆ ಎಂದು ತಿಳಿಸಿದರು.

ಬೆಂಗಳೂರಿಗೆ ಹೊಂದಿಕೊಂಡಂತೆ ಬಿಡದಿಯ ಬಳಿ ಇರುವ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16 ಮತ್ತು 17ರಲ್ಲಿ ಒಟ್ಟು 110.32 ಎಕರೆ ಸರ್ಕಾರಿ ಗೋಮಾಳ ಸೇರಿ 200 ಎಕರೆ ಜಮೀನನ್ನು ಎಚ್. ಡಿ ಕುಮಾರಸ್ವಾಮಿ ಮತ್ತವರ ಕುಟುಂಬದವರು ಹಾಗೂ ಮದ್ದೂರು ಶಾಸಕರಾದ ಡಿ.ಸಿ. ತಮ್ಮಣ್ಣ ಮತ್ತವರ ಕುಟುಂಬದವರು ನಿಯಮಗಳನ್ನು ಉಲ್ಲಂಘಿಸಿ ಭೂ ಕಬಳಿಸಿರುವುದಾಗಿ ಆರೋಪಿಸಿದ ಸಿಎಂ, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ 200 ಎಕರೆ ಸರ್ಕಾರಿ ಜಮೀನನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಪ್ರಸ್ತಾವನೆಯನ್ನು ಸಲ್ಲಿಸಲು ಕೋರಿ ದಿನಾಂಕ 20214ರ ಆ. 25ರಂದು ಜಿಲ್ಲಾಧಿಕಾರಿಗಳಿಗೆ ಅಂದಿನ ಎಸಿ ಸಿದ್ದಪ್ಪ ಪತ್ರ ಬರೆದಿದ್ದರು.

ಇದನ್ನೂ ಓದಿ | MUDA Scam: ಮುಡಾ ಜಮೀನಿನ ಸಂಪೂರ್ಣ ದಾಖಲೆಗಳನ್ನು ತೆರೆದಿಟ್ಟ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿವರ

ಇದಕ್ಕೂ ಮೊದಲು ಎಸಿ ಸಿದ್ದಪ್ಪ ಅವರು 2011ರಲ್ಲಿ ಜಿ. ಮಾದೇಗೌಡ ಅವರು ಲೋಕಾಯುಕ್ತದಲ್ಲಿ ದಾಖಲಿಸಿದ್ದ ದೂರು ಪ್ರಕರಣದಲ್ಲಿ ವಿಚಾರಣೆ ನಡೆಸಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದರು. ಅವರ ಪ್ರಕಾರ, ಈ 200 ಎಕರೆ ಭೂಮಿಯಲ್ಲಿ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, ಕರ್ನಾಟಕ ಭೂ ಸುಧಾರಣಾ ಕಾಯ್ದೆಯ 79 ಎ ಮತ್ತು ಬಿ ಹಾಗೂ 66, ಪಿಟಿಸಿಎಲ್ ಕಾಯ್ದೆ, ಮುದ್ರಾಂಕ ಪಾವತಿಸದೆ ಮೋಸ ಮಾಡಿರುವುದು, ಸರ್ಕಾರಿ ಜಮೀನುಗಳನ್ನು ಕಬಳಿಸಲಾಗಿದೆ ಹಾಗೂ ಕಂದಾಯ ಇಲಾಖೆಯ ಮಾಹಿತಿಗಳ ಪ್ರಕಾರ ಕೇತಗಾನಹಳ್ಳಿಯ ಸ. ನಂ 60 ಮತ್ತು 62 ರಲ್ಲಿ ವ್ಯಾಪಕವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ದ್ರೋಹ ಮಾಡಿರುವುದು ಕಂಡುಬರುತ್ತಿದೆ ಎಂದು ತಿಳಿಸಿದ್ದರು.

ಇನ್ನು 2011ರ ಮಾರ್ಚ್‌ 17ರಂದು ಮೈಸೂರು ಮುಡಾದಲ್ಲಿ 60000 ಅಡಿ ಭೂಮಿ ಹಂಚಿಕೆಯ ಕುರಿತು ವಿಧಾನಪರಿಷತ್‌ನಲ್ಲಿ ಯಡಿಯೂರಪ್ಪನವರು ದಾಖಲೆಗಳನ್ನು ಅಂದಿನ ಸಭಾಪತಿಗಳಿಗೆ ನೀಡಿರುವುದು ದಾಖಲಾಗಿದೆ. ಯಡಿಯೂರಪ್ಪನವರು ನೇರವಾಗಿ ಎಚ್‌.ಡಿ. ದೇವೇಗೌಡರು ನಿಯಮಗಳನ್ನು ಗಾಳಿಗೆ ತೂರಿ 48 ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ಹಂಚಿಕೆ ಮಾಡಿರುವ ದಾಖಲೆ ಒದಗಿಸಿದ್ದರು ಎಂದು ಸಿಎಂ ತಿಳಿಸಿದರು.

ಎಚ್. ಡಿ ಕುಮಾರಸ್ವಾಮಿಯವರಿಗೆ 1984 ನ.7ರಂದು 75*280 ಅಡಿ ಒಟ್ಟು 21,000 ಅಡಿಗಳ ಕೈಗಾರಿಕಾ ನಿವೇಶನ ಮೈಸೂರಿನ ಸಿಐಟಿಬಿಯಿಂದ ಮಂಜೂರಾಗಿದೆ. ಚದರ ಗಜಕ್ಕೆ 16 ರೂಪಾಯಿಯಂತೆ 37,334 ರೂಪಾಯಿಗಳಿಗೆ ಅಭಿವೃದ್ಧಿಪಡಿಸಿದ ಕೈಗಾರಿಕಾ ನಿವೇಶನವನ್ನು ಇಂಡಸ್ಟ್ರಿಯಲ್ ಸಬರ್ಬನ್ 3ನೇ ಹಂತದಲ್ಲಿ ಮಂಜೂರು ಮಾಡಿದ್ದರು. ಮಂಜೂರಾತಿ ಪತ್ರದಲ್ಲಿ ಎರಡು ವರ್ಷದೊಳಗೆ ಅಲ್ಲಿ ಕೈಗಾರಿಕೆ ಪ್ರಾರಂಭಿಸಬೇಕು ಎಂದು ಷರತ್ತು ವಿಧಿಸಿದ್ದರು. 1985 ರಲ್ಲಿ ಸ್ವಾಧೀನ ಪತ್ರ ಕೊಟ್ಟಿದ್ದಾರೆ. ಆದರೂ ಕುಮಾರಸ್ವಾಮಿ ಕೈಗಾರಿಕೆ ನಿರ್ಮಿಸಿಲ್ಲ. ಇಂಡಸ್ಟ್ರಿಯಲ್ ನಿವೇಶನ ಬೇರೆ ಯಾರಿಗಾದರೂ ಕೊಟ್ಟಿದ್ದರೆ ಅಲ್ಲಿ ಕೈಗಾರಿಕೆ ಸ್ಥಾಪನೆಯಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿದ್ದವು. ಸರ್ಕಾರಕ್ಕೆ ಆದಾಯವೂ ಬರುತ್ತಿತ್ತು. ಕುಮಾರಸ್ವಾಮಿ ಅದನ್ನು ಸಂಪೂರ್ಣ ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ | BJP Protest: ಸಂಸತ್ ಬಳಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ; ವಾಲ್ಮೀಕಿ ನಿಗಮ ಅಕ್ರಮ, ಮುಡಾ ಹಗರಣ ಸಿಬಿಐ ತನಿಖೆಗೆ ನೀಡಲು ಆಗ್ರಹ

ದಿನಾಂಕ 18-2-2017 ರಲ್ಲಿ ಮುಡಾ ಆಯುಕ್ತರಿಗೆ ಬದಲಿ ನಿವೇಶನ ಕೊಡುವಂತೆ ಕುಮಾರಸ್ವಾಮಿ ಮನವಿ ಕೊಟ್ಟಿದ್ದಾರೆ. ಅವರಿಗೆ ಬದಲಿ ನಿವೇಶನ ಕೊಡಲು 7-1-2023 ರಂದು ಮುಡಾ ನಿರ್ಣಯ ಮಾಡಿದೆ. ಅದೇ ಜಾಗದಲ್ಲಿ ಅಕ್ರಮವಾಗಿದ್ದ ಇನ್ನೊಬ್ಬರು ವ್ಯಕ್ತಿ ಕೋರ್ಟಿಗೆ ಹೋಗಿ ತಡೆಯಾಜ್ಞೆ ತಂದಿರುವುದರಿಂದ ಇದು ನಿಂತಿದೆ. ಇಷ್ಟೆಲ್ಲ ಅಕ್ರಮ ಮಾಡಿ ಕುಮಾರಸ್ವಾಮಿ ವೇದಾಂತ ಮಾತಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

PU Lecturer Recruitment: ಸದ್ಯ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ನೇರ ನೇಮಕಾತಿ ಹಾಗೂ ಶೇ.25 ಹುದ್ದೆಗಳಿಗೆ ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಪ್ರೌಢಶಾಲಾ ಶಿಕ್ಷಕರು ಪಿಯು ಉಪನ್ಯಾಸಕರಾಗಲು ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಕೆ ಮಾಡಲಾಗಿದೆ.

VISTARANEWS.COM


on

Koo

ಬೆಂಗಳೂರು: ಪ್ರೌಢಶಾಲಾ ಶಿಕ್ಷಕರು ಪದವಿಪೂರ್ವ ಕಾಲೇಜು ಉಪನ್ಯಾಸಕರಾಗಿ ಬಡ್ತಿ (PU Lecturer Recruitment) ಪಡೆಯಲು ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಸಲು, ʼಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024ʼಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ‌ಸಂಬಂಧಿಸಿದಂತೆ ನಿಯಮಗಳನ್ನು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉಪನ್ಯಾಸಕರಾಗಲು ಇಚ್ಛಿಸುವ ಶಿಕ್ಷಕರು ಅರ್ಹತಾ ಪರೀಕ್ಷೆ ಬರೆಯಬೇಕಿದ್ದು, ಇನ್ನು ಮುಂದೆ ಶೇ.50 ಅಂಕ ಪಡೆದರೆ ಪಿಯು ಕಾಲೇಜು ಉಪನ್ಯಾಸಕಗಲು ಅರ್ಹರಾಗುತ್ತಾರೆ.

ಸದ್ಯ ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ವೇಳೆ ಶೇ.75 ನೇರ ನೇಮಕಾತಿ ಹಾಗೂ ಶೇ.25 ಹುದ್ದೆಗಳಿಗೆ ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ನೀಡಿ ಭರ್ತಿ ಮಾಡಲಾಗುತ್ತಿದೆ. ಹೀಗಾಗಿ ಪ್ರೌಢಶಾಲಾ ಶಿಕ್ಷಕರು ಪಿಯು ಉಪನ್ಯಾಸಕರಾಗಲು ಅರ್ಹತಾ ಪರೀಕ್ಷೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ.55 ಅಂಕ, ಪರಿಶಿಷ್ಟ ಜಾತಿ, ಪಂಗಡದವರು ಶೇ.50 ಅಂಕ ಪಡೆಯಬೇಕಿದೆ. ಇದೀಗ ಅರ್ಹತಾ ಅಂಕಗಳನ್ನು ಶೇ.55 ನಿಂದ 50ಕ್ಕೆ ಇಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಹೆಸರು ಬದಲಾವಣೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Ramanagara as Bengaluru South District) ಎಂದು ಬದಲಾವಣೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ (cabinet meeting) ಒಪ್ಪಿಗೆ ನೀಡಿದೆ. ರಾಮನಗರ ಜಿಲ್ಲೆಯ ಹೆಸರು (Bengaluru South District) ಮಾತ್ರ ಬದಲಾವಣೆಯಾಗಲಿದೆ, ಜಿಲ್ಲಾ ಕೇಂದ್ರ (ರಾಮನಗರ) ಸೇರಿ ಉಳಿದ ಎಲ್ಲವೂ ಹಾಗೆ ಉಳಿಯಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ದೃಷ್ಟಿಯಿಂದ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಉಳಿದ ಎಲ್ಲವೂ ಹಾಗೇ ಉಳಿಯಲಿದೆ. ಚುನಾವಣಾ ದೃಷ್ಟಿಯಿಂದ ಹೀಗೆ ಮಾಡಿಲ್ಲ. ಜನರ ಹಿತಾಸಕ್ತಿ ಕಾಪಾಡಲು ಜೊತೆಗೆ ಬ್ರ್ಯಾಂಡ್ ಬೆಂಗಳೂರು ದೃಷ್ಟಿಯಿಂದ ಹೀಗೆ ಮಾಡಲಾಗಿದೆ ಎಂದು ತಿಳಿಸಿದರು.

ರಾಮನಗರದವರೂ ಬ್ರ್ಯಾಂಡ್ ಬೆಂಗಳೂರಿಗೆ ಬರಬೇಕು ಎನ್ನುತ್ತಾರೆ. ಜನರ ಅಭಿಪ್ರಾಯ, ಶಾಸಕರ ಅಭಿಪ್ರಾಯ , ಕೆಲ ನಾಯಕರ ಅಭಿಪ್ರಾಯ ತೆಗೆದುಕೊಂಡು ತೀರ್ಮಾನ ಮಾಡಿದ್ದೇವೆ. ನೋಟಿಫೈ ಮಾಡಬೇಕು, ಆಮೇಲೆ ಹೆಸರು ಬದಲಾವಣೆ ಪ್ರಕ್ರಿಯೆ ಶುರುವಾಗುತ್ತೆ. ಇದಕ್ಕೆ ಒಂದು ಸಮಿತಿಯನ್ನು ಮಾಡಲಾಗುತ್ತದೆ ಎಂದು ರಾಮನಗರ ಹೆಸರು ಬದಲಾವಣೆಗೆ ಸಚಿವ ಎಚ್.ಕೆ ಪಾಟೀಲ್ ಸಮರ್ಥನೆ ಮಾಡಿಕೊಂಡರು.

ಇದನ್ನೂ ಓದಿ | Shalini Rajneesh: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ಜಾಗಕ್ಕೆ ಪತ್ನಿಯ ಆಯ್ಕೆ

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ (ಕೆಎಎಸ್‌) ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿ ವಿಶೇಷ ಅವಕಾಶ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಹಾಕಲು ವಿಶೇಷ ಅವಕಾಶಕ್ಕೆ ಕ್ಯಾಬಿನೆಟ್ ಅನುಮೋದನೆ.
  • KIADBಯ ಧಾರವಾಡ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2.64 ಎಕರೆ ಸಿಎ ನಿವೇಶನವನ್ನು ಲೋಕ ಶಿಕ್ಷಣ ಟ್ರಸ್ಟ್ ಗೆ ಹಂಚಿಕೆ ಮಾಡಲು ಕ್ಯಾಬಿನೆಟ್ ತೀರ್ಮಾನ. ಈ ಹಂಚಿಕೆ ಜೊತೆಗೆ ಶೇ.75 ರಿಯಾಯಿತಿ ನೀಡಲು ತೀರ್ಮಾನ.
  • ಅನಿಮೇಶನ್ ವಿಶ್ಯುವಲ್ ಎಫೆಕ್ಟ್ ಗೇಮಿಂಗ್ ಮತ್ತು ಕಾಮಿಕ್ಸ್‌ (AVGC) 2.0.- “ಉತ್ಕೃಷ್ಟತಾ ಕೇಂದ್ರವನ್ನು ” 16 ಕೋಟಿಗಳ ಅಂದಾಜು ಮೊತ್ತದಲ್ಲಿ (CAPEX-ರೂ. 7.00 ಕೋಟಿಗಳು ಮತ್ತು” OPEX-ರೂ. 9.00 ಕೋಟಿಗಳು) ಸ್ಥಾಪನೆಗೆ ಅನುಮೋದನೆ.
  • ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ನೇಮಕಾತಿಗೆ ‌ ಸಂಬಂಧಿಸಿದಂತೆ “ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ.
  • ಪ್ರೌಢಶಾಲಾ ಶಿಕ್ಷಕರಿಂದ ಪದವಿಪೂರ್ವ ಕಾಲೇಜಿಗೆ ಬಡ್ತಿ ಪಡೆಯಲು 55% ನಿಂದ 50% ಅಂಕಕ್ಕೆ ಇಳಿಸಿ ಪರಿಷ್ಕರಣೆ.
  • ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ ಅಡಿ ಸ್ಥಾಪನೆಗೆ ಅನುಮೋದನೆ
  • ಕೆ ಆರ್ ಎಸ್ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೆ ಏರಿಸಲು ಕ್ಯಾಬಿನೆಟ್ ಅನುಮೋದನೆ. 2633 ಕೋಟಿ ರೂ. ದಲ್ಲಿ ಪಿಪಿಪಿ ಮಾಡೆಲ್‌ನಲ್ಲಿ ಮೇಲ್ದರ್ಜೆಗೆ ಏರಿಸಲು ಅನುಮೋದನೆ. ಟೆಂಡರ್ ಮೂಲಕ ಅನುಷ್ಠಾನ
Continue Reading

ಮಳೆ

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಮಳೆಯು ಅಬ್ಬರಿಸುತ್ತಿದೆ. ಉಕ್ಕಿ ಹರಿಯುತ್ತಿದ್ದ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ರಕ್ಷಣೆ ಮಾಡಲಾಗಿದೆ. ಕಾರವಾರದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆ ಕೊಚ್ಚಿಹೋಗಿತ್ತು.

VISTARANEWS.COM


on

By

karnataka rain
Koo

ಮಂಗಳೂರು: ಭಾರಿ ಮಳೆಗೆ ಜನರು ಮಾತ್ರವಲ್ಲ ಜಾನುವಾರುಗಳು ತತ್ತರಿಸಿ ಹೋಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ‌ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೊಚ್ಚಿಕೊಂಡು (Karnataka Rain) ಹೋಗುತ್ತಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಧಾವಿಸಿದ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ದೋಣಿಯಲ್ಲಿ ಸಾಗಿ ಹಗ್ಗ ಹಾಕಿ ಹಸುವನ್ನು ಜೀವಂತವಾಗಿ ರಕ್ಷಿಸಿ ಕರೆತಂದಿದ್ದಾರೆ.

ಇತ್ತ ಮಂಗಳೂರಿನಲ್ಲೂ ಬಿಟ್ಟು ಬಿಟ್ಟು ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದೆ. ಮಂಗಳೂರು ಹೊರವಲಯದ ಕಾಜಿಲ ನೂಯಿ ಎಂಬಲ್ಲಿ ಧನಲಕ್ಷ್ಮೀ ಅವರ ಮನೆ ಸಂಪೂರ್ಣ ಕುಸಿದಿದೆ. ಮನೆಯವರೆಲ್ಲ ಅಂಗಳದಲ್ಲಿದ್ದಾಗ ಮನೆ ಕುಸಿದಿದೆ, ಹೀಗಾಗಿ ಭಾರಿ ದುರಂತವೊಂದು ತಪ್ಪಿದೆ. ಮನೆ ಸಾಮಾಗ್ರಿ ಸೇರಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕಾಂಕ್ರೀಟ್ ರಸ್ತೆ

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳ್ ಗ್ರಾಮದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್‌ ರಸ್ತೆಯು ಕೊಚ್ಚಿ ಹೋಗಿದೆ. ಸುಮಾರು ನೂರು ಅಡಿ ರಸ್ತೆ ಕಡಲಕೊರತಕ್ಕೆ ಬಲಿಯಾಗಿದೆ. ದೇವಭಾಗ್ ನಿಂದ ಮಾಜಾಳಿ ಸಂಪರ್ಕ ಮಾಡುವ ರಸ್ತೆಯನ್ನು ನಾಲ್ಕು ವರ್ಷದ ಹಿಂದೆ ನಿರ್ಮಿಸಲಾಗಿತ್ತು. ಆದರೆ ಮಳೆ ಗಾಳಿಗೆ ಹೆಚ್ಚಾದ ಕಡಲ ಕೊರೆತಕ್ಕೆ ಕೊಚ್ಚಿಹೋಗಿದೆ. ಇದರಿಂದಾಗಿ ಬಾವಳ್, ಮಾಜಾಳಿ,‌ ದೇವಭಾಗ ಗ್ರಾಮಸ್ಥರು ರಸ್ತೆ ಸಂಪರ್ಕ ಕಳೆದುಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಜೋರು ಗಾಳಿ, ಮಳೆಗೆ ಕೋಳಿ ಫಾರಂ ಧರಶಾಹಿ

ಶಿವಮೊಗ್ಗದ ಮೋಜಪ್ಪ ಹೊಸೂರು ಗ್ರಾಮದಲ್ಲಿ ಏಜಾಜ್ ಎಂಬುವವರಿಗೆ ಸೇರಿದ್ದ ಕೋಳಿ ಫಾರಂ ಧರಶಾಹಿ ಆಗಿದೆ. ಫಾರಂ ಮಾಲೀಕ ಸುಮಾರು 6 ಸಾವಿರ ಕೋಳಿಗಳನ್ನು ಸಾಕಿದ್ದರು. ಭಾರಿ ಮಳೆ ಗಾಳಿಗೆ ಕೋಳಿ ಫಾರಂ ನೆಲಚ್ಚಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಜೀವನೋಪಾಯಕ್ಕಾಗಿ ಕೋಳಿ ಫಾರಂ ನಡೆಸುತ್ತಿದ್ದ ಏಜಾಜ್ ಕುಟುಂಬ ಕಂಗಲಾಗಿದ್ದಾರೆ. ಇತ್ತ ಮಳೆ ಅಬ್ಬರಕ್ಕೆ ಕುಣೆಗದ್ದೆಯಿಂದ ಹಲಸೆ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿದು ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಸ್ತೆ ಕುಸಿತದಿಂದ ವಾಹನ ಸಂಚಾರ ವ್ಯತ್ಯಯವಾಗಿತ್ತು.

ಇದನ್ನೂ ಓದಿ: Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಪ್ರವಾಹದ ನೀರಿನಲ್ಲಿ ಮುಳುಗಿದ ಎಪಿಎಂಸಿ ಮಾರುಕಟ್ಟೆ

ಹಾಸನದ ಹೊಳೆನರಸೀಪುರ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತ್ತು. ಮಾರುಕಟ್ಟೆ ಪ್ರಾಂಗಣ ಸ್ವಿಮ್ಮಿಂಗ್ ಪೂಲ್‌ನಂತೆ ಭಾಸವಾಗಿತ್ತು. ಹೊಳೆನರಸೀಪುರ – ಮಡಿಕೇರಿ ರಾಜ್ಯ ಹೆದ್ದಾರಿ ಸಮೀಪ ಇರುವ ಎಪಿಎಂಸಿ ಮಾರುಕಟ್ಟೆ ಉದ್ಘಾಟನೆಗೂ ಮೊದಲೇ ಹೇಮಾವತಿ ನದಿ ಪ್ರವಾಹದ ನೀರಿನಲ್ಲಿ ಮುಳುಗಿದೆ.

ರಾಯಚೂರಿನಲ್ಲಿ ನದಿ ತೀರದಲ್ಲಿ ಮೊಸಳೆಗಳ ಓಡಾಟ

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ‌ ಮಳೆಯಿಂದಾಗಿ ತುಂಗಭದ್ರಾ ನದಿಯಲ್ಲಿ ಇದ್ದ ಮೊಸಳೆಗಳು ನದಿ ತೀರಕ್ಕೆ ಬಂದಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕಲಪರ್ವಿ ಗ್ರಾಮದ ಬಳಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿತ್ತು. ತುಂಗಭದ್ರಾ ನದಿ ತೀರದ ಗ್ರಾಮಗಳಿಗೆ ಮೊಸಳೆ ನುಗ್ಗುವ ಆತಂಕ ಎದುರಾಗಿದ್ದು, ನದಿ ದಂಡೆಗೆ ತೆರಳದಂತೆ ,ಜಾನುವಾರುಗಳನ್ನು ಬಿಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಮೊಸಳೆಯೊಂದು ಹಸುವಿ‌ನ ಕರು ಮೇಲೆ ದಾಳಿ ಮಾಡಿತ್ತು.

ಗ್ರಾಮಗಳನ್ನು ತೊರೆಯುತ್ತಿರುವ ಜನರು

ಕೃಷ್ಣಾ ನದಿಗೆ ಕೊಯ್ನಾ ಜಲಾಶಯದ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರವಾ‌ಹ ಆತಂಕ ತೀವ್ರಗೊಂಡಿದೆ. ಪ್ರವಾಹದ ಭೀತಿಯಿಂದ ಜನರು ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಬೆಳಗಾವಿ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಐನಾಪೂರ ರಸ್ತೆ ಮೇಲೆ ನೀರು ಬರುತ್ತಿರುವುದರಿಂದ ಜಾನುವಾರುಗಳೊಂದಿಗೆ ಜನರು ಸ್ಥಳಾಂತರಗೊಂಡಿದ್ದಾರೆ.

ರಸ್ತೆಗೆ ಬಿದ್ದ ಮರ

ಕೊಡಗಿನ ಸೋಮವಾರಪೇಟೆ ವ್ಯಾಪ್ತಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹದಾಕಾರದ ಮರ ಬಿದ್ದಿತ್ತು. ಇದರಿಂದಾಗಿ ಸೋಮವಾರಪೇಟೆ ಸಮೀಪದ ಯಡವನಾಡು ಸಂಪರ್ಕ ರಸ್ತೆಯು ಬಂದ್‌ ಆಗಿತ್ತು. ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಸ್ಥಳೀಯರಿಂದಲೆ ರಸ್ತೆ ಅಡ್ಡಲಾಗಿ ಬಿದ್ದ ಮರ ತೆರವು ಮಾಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

Dengue Fever: ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ನಿಫಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ತಿಳಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ ಎಂದು ಅವರು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

VISTARANEWS.COM


on

No cases of Nipah virus have been detected in the state says Minister Dinesh Gundurao
Koo

ಬೆಂಗಳೂರು: ಡೆಂಗ್ಯೂಗೆ (Dengue Fever) ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಯಲಹಂಕದಲ್ಲಿ ಇಂದು ಡೆಂಗ್ಯೂ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನಿರೀಕ್ಷೆ ಹೊಂದಿದ್ದೇವೆ ಎಂದರು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ. 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು.

10 ಜಿಲ್ಲೆಗಳ ಡೆಂಗ್ಯೂ ಹಾಟ್‌ಸ್ಪಾಟ್‌ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ.

ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಗ್ಯೂ ಹಾಟ್‌ಸ್ಪಾಟ್ ಎಂದು ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಫೀವರ್ ಕ್ಲಿನಿಕ್‌ಗಳನ್ನು ತೆರೆದು, ಜ್ವರ ಕಾಣಿಸಿಕೊಳ್ಳುವ ಎಲ್ಲರನ್ನು ಡೆಂಗ್ಯೂ ಟೆಸ್ಟಿಂಗ್‌ಗೆ ಒಳಪಡಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ

ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ನಿಪಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ರಾಜ್ಯದಲ್ಲಿ ಇತ್ತೀಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಪಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನು ಅನುಸರಿಸಲಿದೆ ಎಂದರು.

Continue Reading

ಬಳ್ಳಾರಿ

Ballari News: ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಭೀತಿ; ಸಂಚಾರಕ್ಕೆ ನಿರ್ಬಂಧ

Ballari News: ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಮಟ್ಟದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಯ ಮುಳುಗಡೆ ಭೀತಿ ಹೆಚ್ಚಾಗಿದೆ. ಅಲ್ಲದೆ ಸೇತುವೆ ಮೇಲಿನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಿದ್ದರಿಂದ ನದಿಗೆ ಶುಕ್ರವಾರ 90 ಸಾವಿರಕ್ಕೂ ಅಧಿಕ ಕ್ಯೂಸೆಕ್‌ನಷ್ಟು ನೀರು ಹರಿದು ಬಂದಿದೆ. ಇನ್ನು ಸೇತುವೆ ಮಟ್ಟಕ್ಕೆ ಒಂದು ಅಡಿಯಷ್ಟು ಮಾತ್ರ ನೀರು ಕಡಿಮೆಯಿದ್ದು, ಯಾವ ಕ್ಷಣದಲ್ಲಾದರೂ ನದಿಗೆ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಹರಿದು ಬರುವ ಸಾಧ್ಯತೆ ಇದೆ.

VISTARANEWS.COM


on

Kampli Gangavathi link bridge inundation fear
Koo

ಕಂಪ್ಲಿ: ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಮಟ್ಟದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಯ (Ballari News) ಮುಳುಗಡೆ ಭೀತಿ ಹೆಚ್ಚಾಗಿದೆ. ಅಲ್ಲದೆ ಸೇತುವೆ ಮೇಲಿನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಿದ್ದರಿಂದ ನದಿಗೆ ಶುಕ್ರವಾರ 90 ಸಾವಿರಕ್ಕೂ ಅಧಿಕ ಕ್ಯೂಸೆಕ್‌ನಷ್ಟು ನೀರು ಹರಿದು ಬಂದಿದೆ. ಇನ್ನು ಸೇತುವೆ ಮಟ್ಟಕ್ಕೆ ಒಂದು ಅಡಿಯಷ್ಟು ಮಾತ್ರ ನೀರು ಕಡಿಮೆಯಿದ್ದು, ಯಾವ ಕ್ಷಣದಲ್ಲಾದರೂ ನದಿಗೆ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಹರಿದು ಬರುವ ಸಾಧ್ಯತೆ ಇದೆ. ಅಲ್ಲದೇ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಭೀತಿ ಹೆಚ್ಚಾಗಿದೆ.

ಇದನ್ನೂ ಓದಿ: Samsung AC: ಹೊಸ ಶ್ರೇಣಿಯ ಎಸಿಗಳನ್ನು ಬಿಡುಗಡೆ ಮಾಡಿದ ಸ್ಯಾಮ್‌ಸಂಗ್; ಇದರ ವಿಶೇಷತೆ ಏನೇನು?

ಸೇತುವೆಗೆ ಗಿಡಗಂಟಿಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸುವ ಕಾರ್ಯದಲ್ಲಿ ಪುರಸಭೆ ಅಧಿಕಾರಿಗಳು ನಿರತರಾಗಿದ್ದಾರೆ. ಇನ್ನು ನದಿ ಪಾತ್ರ ಜನತೆಗೆ ತಮ್ಮ ಮನೆಗಳು ಮುಳುಗುವ ಆತಂಕ ಒಂದೆಡೆ ಆದರೆ ಇನ್ನೊಂದೆಡೆ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗುವ ಭಯದಲ್ಲಿ ರೈತರಿದ್ದಾರೆ. ಯಾವುದೇ ರೀತಿಯ ಅಪಾಯಗಳು ಜರುಗದಂತೆ ಕ್ರಮ ವಹಿಸಲು ತಾಲೂಕು ಆಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಅಲ್ಲದೇ ಸೇತುವೆಯ ಬಳಿ ಪೊಲೀಸ್ ಇಲಾಖೆ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.

ಪ್ರಕೃತಿ ವಿಕೋಪ ಮುಂಜಾಗ್ರತಾ ಪೂರ್ವಭಾವಿ ಸಭೆ

ಕಂಪ್ಲಿ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ಪ್ರವಾಹ, ಪ್ರಕೃತಿ ವಿಕೋಪ ಮುಂಜಾಗ್ರತೆ ಪೂರ್ವಭಾವಿ ಸಭೆ ಜರುಗಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಶಿವರಾಜ ಶಿವಪುರ ಮಾತನಾಡಿ, ತುಂಗಭದ್ರಾ ಜಲಾಶಯಕ್ಕೆ ದಿನದಿಂದ ದಿನಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಗೆ ಯಾವುದೇ ಕ್ಷಣದಲ್ಲಾದರೂ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಹರಿದು ಬರುಬಹುದು. ಅಲ್ಲದೇ ಪ್ರವಾಹ ಪ್ರಕೃತಿ ವಿಕೋಪಗಳು ಜರುಗುವ ಸಂಭವಗಳಿವೆ. ಇದರಿಂದಾಗಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯ ಸಾಧಿಸಿ ಸಮರ್ಥವಾಗಿ ಎದುರಿಸೋಣ ಎಂದರು.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಇನ್ನು ನದಿಪಾತ್ರದ ಜನತೆ ನದಿಗೆ ಬಟ್ಟೆ ಒಗೆಯಲು ತೆರಳುವುದು, ಮೀನುಗಾರರು ಮೀನು ಹಿಡಿಯಲು ನದಿಗ ಇಳಿಯಬಾರದು. ಸ್ಥಳೀಯರು ಈ ಕೂಡಲೇ ಜನಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸ್ಥಳೀಯ ಆಡಳಿತ ಡಂಗುರ ಹೊಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು.

ಶಿಕ್ಷಣ ಇಲಾಖೆ ಮತ್ತು ಸಿಡಿಪಿಒ ಇಲಾಖೆ ಪ್ರವಾಹ ಸಂತ್ರಸ್ತರಿಗೆ ಕಾಳಜಿ ಕೇಂದ್ರ ತೆರೆಯಲು ಸೂಚಿಸಿದರು. ಪ್ರವಾಹ ಸಂದರ್ಭದಲ್ಲಿ ಸೇತುವೆ, ನದಿಪಾತ್ರದಲ್ಲಿ ಪೊಲೀಸರು ಬಿಗಿ ಬಂದೋಬಸ್ತು ಒದಗಿಸಲು ಬ್ಯಾರಿಕೇಡ್ ಅಳವಡಿಸಬೇಕು. ಅಲ್ಲದೇ ಸಿಬ್ಬಂದಿ ನಿಯೋಜನೆ ಮಾಡಿ ಯಾವುದೇ ರೀತಿಯ ಸಮಸ್ಯೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು.

ಪ್ರವಾಹ ಮತ್ತು ನಂತರದಲ್ಲಿ ಸಾಂಕ್ರಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ನಿಗಾವಹಿಸಬೇಕು. ಈ ಕುರಿತು ಗ್ರಾಮೀಣ ಪ್ರದೇಶಗಳಲ್ಲಿನ ವಿಪತ್ತು ನಿರ್ವಹಣಾ ಸಮಿತಿ ಕ್ರಿಯಾಶೀಲವಾಗಿರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಈ ಸಂದರ್ಭದಲ್ಲಿ ತಾಪಂ ಇಒ ಆರ್.ಕೆ. ಶ್ರೀಕುಮಾರ್, ಎಡಿ ಕೆ.ಎಸ್.ಮಲ್ಲನಗೌಡ, ಉಪ ತಹಸೀಲ್ದಾರ್ ಬಿ. ರವೀಂದ್ರ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ, ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಬಿ.ವಾಸುಕುಮಾರ್ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Continue Reading
Advertisement
Kargil Vijay Diwas 2024
ದೇಶ7 mins ago

Kargil Vijay Diwas 2024: ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕವಾಗಿದ್ದ ಟೈಗರ್ ಹಿಲ್; 19 ವರ್ಷದ ಯೋಧನ ರೋಚಕ ಸಾಹಸ!

Apple iPhones
ಗ್ಯಾಜೆಟ್ಸ್9 mins ago

Apple iPhones: ಆ್ಯಪಲ್‌ ಬ್ರ್ಯಾಂಡ್‌ ಪ್ರಿಯರಿಗೆ ಗುಡ್‌ನ್ಯೂಸ್;‌ ಐಫೋನ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆ

ಕರ್ನಾಟಕ11 mins ago

PU Lecturer Recruitment: ಪ್ರೌಢಶಾಲಾ ಶಿಕ್ಷಕರು ಪಿಯು ಕಾಲೇಜಿಗೆ ಬಡ್ತಿ ಪಡೆಯಲು ಅರ್ಹತಾ ಅಂಕ ಶೇ.50ಕ್ಕೆ ಇಳಿಕೆ

karnataka rain
ಮಳೆ18 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

PARIS OLYMPICS 2024
ಪ್ರಮುಖ ಸುದ್ದಿ29 mins ago

PARIS OLYMPICS 2024 : ಪ್ಯಾರಿಸ್ ಒಲಿಂಪಿಕ್ಸ್​​ ಗ್ರಾಮದಲ್ಲೇ ಮದುವೆ ನಿಶ್ಚಿತಾರ್ಥ ಮಾಡಿಕೊಂಡ ಅಥ್ಲೀಟ್​ಗಳು

Stock Market
ವಾಣಿಜ್ಯ30 mins ago

Stock Market: ಷೇರು ಮಾರುಕಟ್ಟೆಗೆ ಶುಭ ಶುಕ್ರವಾರ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಭರ್ಜರಿ ಲಾಭ!

Shubman Gill
ಕ್ರೀಡೆ44 mins ago

Shubman Gill: ಬಾಂಗ್ಲಾ ವಿರುದ್ಧದ ಟೆಸ್ಟ್​ ಸರಣಿಗೆ ಶುಭಮನ್​ ಗಿಲ್​ ಉಪನಾಯಕ!

Kannada New Movie Parapancha Gama Gama Powder song out
ಸ್ಯಾಂಡಲ್ ವುಡ್60 mins ago

Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

No cases of Nipah virus have been detected in the state says Minister Dinesh Gundurao
ಕರ್ನಾಟಕ1 hour ago

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

Kampli Gangavathi link bridge inundation fear
ಬಳ್ಳಾರಿ1 hour ago

Ballari News: ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ ಮುಳುಗಡೆ ಭೀತಿ; ಸಂಚಾರಕ್ಕೆ ನಿರ್ಬಂಧ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ18 mins ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 hour ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ1 day ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ಟ್ರೆಂಡಿಂಗ್‌