Mundagoda News: ಮುಂಡಗೋಡದ ಅಗಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ 3.39 ಲಕ್ಷ ರೂ. ವಶ - Vistara News

ಉತ್ತರ ಕನ್ನಡ

Mundagoda News: ಮುಂಡಗೋಡದ ಅಗಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ 3.39 ಲಕ್ಷ ರೂ. ವಶ

Mundagoda News: ಹಸನಸಾಬ ಎಂಬಾತ ತಮ್ಮ ಸ್ಕೂಟಿಯಲ್ಲಿ ದಾಖಲೆ ಇಲ್ಲದೆ 3.39 ಲಕ್ಷ ರೂ. ವನ್ನು ತೆಗೆದುಕೊಂಡು ಹುಬ್ಬಳ್ಳಿಯಿಂದ ಮುಂಡಗೋಡಕ್ಕೆ ಬರುತ್ತಿದ್ದ ವೇಳೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Agadi Check Post Mundagoda
ಅಧಿಕಾರಿಗಳು ವಶಪಡಿಸಿಕೊಂಡ ದಾಖಲೆ ಇಲ್ಲದ ಹಣ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಡಗೋಡ: ದಾಖಲೆ ಇಲ್ಲದೆ 3.39 ಲಕ್ಷ ರೂಪಾಯಿಯನ್ನು ಸಾಗಿಸುತ್ತಿದ್ದ‌ ವೇಳೆ ಅಧಿಕಾರಿಗಳ ತಂಡ ತಾಲೂಕಿನ‌ ಅಗಡಿ ಚೆಕ್‌ಪೋಸ್ಟ್‌ನಲ್ಲಿ (Agadi Check Post) ಶುಕ್ರವಾರ (ಮಾ.31) ವಶಕ್ಕೆ ಪಡೆದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಾಲೂಕಿನ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿತ್ತು. ಪಟ್ಟಣದ ನಿವಾಸಿ ಹಸನಸಾಬ ಎಂಬುವವರು ತಮ್ಮ ಸ್ಕೂಟಿಯಲ್ಲಿ ದಾಖಲೆ ಇಲ್ಲದೆ 3.39 ಲಕ್ಷ ರೂ. ವನ್ನು ತೆಗೆದುಕೊಂಡು ಹುಬ್ಬಳ್ಳಿಯಿಂದ ಮುಂಡಗೋಡಕ್ಕೆ ಬರುತ್ತಿದ್ದರು. ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ಅಗಡಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಹಣ ಪತ್ತೆಯಾಗಿದೆ. ಯಾವುದೇ ದಾಖಲೆ ಇಲ್ಲದ ಕಾರಣ 3.39 ಲಕ್ಷ ರೂ.ವನ್ನು ವಶಕ್ಕೆ ಪಡೆಯಲಾಗಿದೆ.

ಇಲ್ಲಿನ ಸಿಪಿಐ ಎಸ್.ಎಸ್. ಸಿಮಾನಿ ಹಾಗೂ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳ ತಂಡ ಕಟ್ಟುನಿಟ್ಟಾಗಿ ವಾಹನಗಳ ತಪಾಸಣೆ ನಡೆಸುತ್ತಿದೆ.

ಇದನ್ನೂ ಓದಿ: Viral Video: ಹುಡುಗನ ಕೈಯಲ್ಲಿದ್ದ ತಿಂಡಿ ತಿನ್ನಲು ಬಾಯಿ ಹಾಕಿದ ನಾಯಿ; ನಾಲಿಗೆಗೆ ಸಿಕ್ಕ ಟಿವಿ ಪರದೆ ನೆಕ್ಕಿ, ವಾಪಸ್ ಬಂತು!

ಪೊಲೀಸರ ಹುಂಡಿ ಸೇರಿದ ದೇವರ ಹುಂಡಿಗೆ ಹಾಕಲು ತಂದಿದ್ದ 2.5 ಲಕ್ಷ ರೂಪಾಯಿ!

ಚಿಕ್ಕಮಗಳೂರು: ಇದೇ ಮೇ 10ರಂದು ವಿಧಾನಸಭಾ ಚುನಾವಣೆ (Karnataka Election 2023) ನಡೆಯಲಿರುವುದರಿಂದ ರಾಜ್ಯಾದ್ಯಂತ ನೀತಿಸಂಹಿತೆ ಜಾರಿಯಾಗಿದ್ದು, ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ಬಳಿ ವಾಹನ ತಪಾಸಣೆ ಮಾಡುವಾಗ ದಾಖಲೆ ಇಲ್ಲದ ಹಣ ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಹೀಗೆ ದಾಖಲೆ ಇಲ್ಲದ ಕೋಟ್ಯಂತರ ರೂಪಾಯಿಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಇಷ್ಟಾದರೂ ಅಕ್ರಮಗಳು ನಡೆಯುತ್ತಲೇ ಇವೆ. ಈ ಮಧ್ಯೆ ದೇವಸ್ಥಾನದ ಹುಂಡಿಗೆ ಹಾಕಲು ಎಂದು ತೆಗೆದುಕೊಂಡು ಹೊರಟಿದ್ದ ವೈದ್ಯರೊಬ್ಬರ ಹಣವು ಪೊಲೀಸರ ಹುಂಡಿ ಸೇರುವಂತಾಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಹಣ ಪತ್ತೆಯಾಗಿದೆ. ಧರ್ಮಸ್ಥಳ-ಕಟೀಲ್ ದೇವಸ್ಥಾನದ ಹುಂಡಿಗೆ ಹಾಕಲು ತಂದಿದ್ದ 2.50 ಲಕ್ಷ ರೂಪಾಯಿಯು ಈಗ ಪೊಲೀಸರ ವಶದಲ್ಲಿದೆ. ಪಾವಗಡ ಮೂಲದ ವೈದ್ಯಾಧಿಕಾರಿಯೊಬ್ಬರು ದೇವರ ಹುಂಡಿಗಾಗಿ ಪ್ರತಿದಿನ ಸಂಗ್ರಹಿಸಿ ಇಡುತ್ತಿದ್ದ ಹಣವನ್ನು ತಮ್ಮ ಫಾರ್ಚುನರ್‌ ಕಾರಿನಲ್ಲಿ ಕೊಂಡೊಯ್ಯುತ್ತಿದ್ದರು.

ಈ ಹಣವನ್ನು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ತೆರಳಿ ದೇವರ ಹುಂಡಿಗೆ ಸಮರ್ಪಣೆ ಮಾಡುವವರಿದ್ದರು. ಆದರೆ, ಈ ವೇಳೆ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಕಾರನ್ನು ತಡೆದಿದ್ದಾರೆ. ತಪಾಸಣೆ ನಡೆಸಿದಾಗ 2.50 ಲಕ್ಷ ರೂಪಾಯಿ ಇರುವುದು ಪತ್ತೆಯಾಗಿದೆ. ಇದಕ್ಕೆ ದಾಖಲೆಯನ್ನು ಪೊಲೀಸರು ಕೇಳಿದಾಗ, ಇದು ದೇವರಿಗೆ ಹಾಕಲೆಂದು ಎತ್ತಿಟ್ಟಿರುವ ಹಣವಾಗಿದ್ದು, ಇದಕ್ಕೆ ದಾಖಲೆ ಇಲ್ಲ ಎಂದು ಅವರು ಹೇಳಿದ್ದಾರೆ. ಹೀಗಾಗಿ ಸಂಪೂರ್ಣ ಹಣವನ್ನು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ದಾಖಲೆ ಇಲ್ಲದೆ 50 ಸಾವಿರ ರೂಪಾಯಿವರೆಗೆ ಮಾತ್ರ ಹಣ ಸಾಗಾಟಕ್ಕೆ ಅವಕಾಶ ಇದೆ. ಆದರೆ, ಇವರ ಬಳಿ 2.50 ಲಕ್ಷ ರೂಪಾಯಿ ಇರುವುದರಿಂದ ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Karnataka Election: ಒಕ್ಕಲಿಗರು, ಹೆಣ್ಣು ಮಗಳು ಅಂತ ಹೇಳಿದ್ದರೆ ನೇಣು ಹಾಕಿಕೊಳ್ಳುತ್ತೇನೆ: ಡಿ.ಕೆ. ಸುರೇಶ್‌ ಆರೋಪಕ್ಕೆ ಮುನಿರತ್ನ ಉತ್ತರ

ಕಲಬುರಗಿಯಲ್ಲಿ 1 ಕೋಟಿ ರೂಪಾಯಿ ಜಪ್ತಿ

ಕಲಬುರಗಿ: ತಾಲೂಕಿನ ಅಫಜಲಪುರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪರತಾಬಾದ್ ಚೆಕ್‌ಪೋಸ್ಟ್‌‌ ಬಳಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ 1 ಕೋಟಿ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರದ ನಿವಾಸಿ ರವಿ ಮುಡಬೂಳ ಎಂಬುವವರು ಯಾವುದೇ ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಕೊಂಡ್ಯೊಯುತ್ತಿದ್ದರು. ಸದ್ಯ ಒಂದು ಕೋಟಿ ರೂಪಾಯಿ ಜತೆಗೆ ರವಿ ಅವರನ್ನೂ ಚುನಾವಣಾಧಿಕಾರಿಗಳು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಇಷ್ಟು ಮೊತ್ತದ ಹಣವನ್ನು ಎಲ್ಲಿಂದ, ಎಲ್ಲಿಗೆ ಸಾಗಾಟ ಮಾಡಲಾಗುತ್ತಿದೆ. ಯಾವ ಉದ್ದೇಶಕ್ಕಾಗಿ ಸಾಗಿಸಲಾಗುತ್ತಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಪರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Self Harming : ಕಾಲೇಜಿನಿಂದ ಬಂದವಳೇ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

Self Harming : ಕಾಲೇಜು ಮುಗಿಸಿ ಮನೆಗೆ ವಾಪಸ್‌ ಬಂದಿದ್ದ ಯುವತಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

VISTARANEWS.COM


on

By

Self Harming In Karwar
Koo

ಕಾರವಾರ: ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಈ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ನಡೆದಿದೆ. ದೀಕ್ಷಾ ನಾಯ್ಕ (22) ಮೃತ ದುರ್ದೈವಿ.

ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಎಂದಿನಂತೆ ಬೆಳಗ್ಗೆ ಕಾಲೇಜಿ ಹೋಗಿ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳು ಕಾಣದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಕಡೆಗೆ ಅನುಮಾನಗೊಂಡು ಬಾವಿಯಲ್ಲಿ ನೋಡಿದಾಗ ಮೃತದೇಹವು ಪತ್ತೆಯಾಗಿದೆ.

ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Assault Case: ಸಿಸಿಬಿ ಪೊಲೀಸರ ಮೇಲೆ ಕಲ್ಲು, ದೊಣ್ಣೆಯಿಂದ ನೈಜೀರಿಯಾ ಪ್ರಜೆಗಳು ಅಟ್ಯಾಕ್‌

ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

ಮಂಡ್ಯ: ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ (IPL‌ Betting) ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ (Self Harming) ಕೊಂದಿದ್ದಾನೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಡ್ಯದ ನಾಗಮಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ನರಸಿಂಹ ಎಂಬಾತ ಈ ಕೃತ್ಯವೆಸಗಿದ್ದಾನೆ. ಪತ್ನಿ ಕೀರ್ತನ (23) ಮಕ್ಕಳಾದ ಜಯಸಿಂಹ (4) ದೀಪಿಕಾ (1) ಮೃತ ದುರ್ದೈವಿ. ಅಸ್ವಸ್ಥನಾಗಿರುವ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಪಿಎಲ್ ಕ್ರಿಕೆಟ್‌ ನೋಡುತ್ತಿದ್ದ ನರಸಿಂಹ ಬೆಟ್ಟಂಗ್‌ನ ಹಿಂದೆ ಬಿದ್ದಿದ್ದ. ಇದರಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ಕಳೆದುಕೊಂಡಿದ್ದ ಎಂದು ತಿಳಿದು ಬಂದಿದೆ. ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಳ್ಳುತ್ತಿದ್ದರೂ ಇವತ್ತಲ್ಲ ನಾಳೆ ಮರಳಿ ಬರುತ್ತದೆ ಎನ್ನುವ ಭರವಸೆಯೊಂದಿಗೆ ಮೇಲಿಂದ ಮೇಲೆ ಸಾಲ ಮಾಡಿ ಲಕ್ಷಾಂತರ ರೂ. ಕಳೆದುಕೊಂಡಿದ್ದ.

ಇದರಿಂದ ಮನನೊಂದ ನರಸಿಂಹ ಪತ್ನಿ ಹಾಗೂ ಪುಟ್ಟ ಮಕ್ಕಳಿಬ್ಬರಿಗೆ ವಿಷ ನೀಡಿ ಹತ್ಯೆ ಮಾಡಿದ್ದಾನೆ. ಅವರೆಲ್ಲೂ ಮೃತಪಟ್ಟ ಬಳಿಕ ತಾನೂ ವಿಷ ಸೇವಿಸಿದ್ದಾನೆ. ಸದ್ಯ ನಾಗಮಂಗಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Road Accident : ಸೈಕಲ್‌ಗೆ ಗುದ್ದಿದ ಕಾರು, ನರಳಾಡಿ ವ್ಯಕ್ತಿ ಸಾವು; ಹಿಟ್‌ ಆ್ಯಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ರೈಲಿಗೆ ತಲೆ ಕೊಟ್ಟು ಮಣಿಪಾಲ್‌ ಆಸ್ಪತ್ರೆಯ ಸ್ಟಾಫ್ ನರ್ಸ್ ಸೂಸೈಡ್‌

ಬೆಂಗಳೂರು: ರೈಲಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ (Student death) ಶರಣಾಗಿದ್ದಾರೆ. ಬೆಂಗಳೂರಿನ ದೀಪಾಂಜಲಿನಗರ ರೈಲ್ವೆ ಟ್ರಾಕ್ ಬಳಿ ಘಟನೆ ನಡೆದಿದೆ. ವಿಜಯಪುರ ಮೂಲದ ಚನ್ನಬಸು ಅಶೋಕ್ (22) ಮೃತ ದುರ್ದೈವಿ.

ಚನ್ನಬಸು ಅಶೋಕ್‌ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ತನ್ನ ಚಿಕ್ಕಮ್ಮನೊಟ್ಟಿಗೆ ವಾಸವಾಗಿದ್ದ. ಇಂದು ಗುರುವಾರ ಮನೆಯಿಂದ ಹೊರಟವನು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಟಿ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Rain News: ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಶುಕ್ರವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಜತೆಗೆ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

ತಾಪಮಾನದ ಮುನ್ಸೂಚನೆ

ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಹೆಚ್ಚಿನ ಬಡಲಾವಣೆ ಇರುವುದಿಲ್ಲ. ನಂತರದ 3 ದಿನಗಳವರೆಗೆ ಕ್ರಮೇಣ 2-3 ಡಿ.ಸೆ ಏರಿಕೆಯಾಗುತ್ತದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಸಂಜೆ/ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Karnataka Weather : ಹಲವೆಡೆ ಗುಡುಗು ಸಿಡಿಲು ಸಹಿತ (Rain News) ಭಾರಿ ಮಳೆಯಾಗಿದ್ದು, ಸಾವು-ನೋವಿಗೆ ಕಾರಣವಾಗಿದೆ. ಸಿಡಿಲು ಬಡಿದು ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟರೆ, ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

VISTARANEWS.COM


on

By

Karnataka Weather
Koo

ಕೊಪ್ಪಳ: ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು (Rain News) ಬಲಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ಘಟನೆ (Karnataka Weather Forecast) ನಡೆದಿದೆ. ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ.

ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು. ಗುರುವಾರ ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗನಲ್ಲೂ ಬಿರುಗಾಳಿ ಸಹಿತ ಮಳೆ

ಮುಂಗಾರಿಗೂ ಮುನ್ನ ಗದಗ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ ಜೋರಾಗಿದೆ. ಬಿರುಗಾಳಿ ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿ‌‌ನ ಪರಸಾಪೂರ ಬಳಿ ಘಟನೆ ನಡೆದಿದೆ. ರಸ್ತೆ ಮೇಲೆ ಮರ ಹಾಗೂ ವಿದ್ಯುತ್‌ ಕಂಬ ಧರೆಗುರುಳಿದ ಕಾರಣದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಸ್ಥಳೀಯರ ಸಹಾಯದಿಂದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರಕ್ಕೆ‌ ಅನುಕೂಲ ಮಾಡಿಕೊಡಲಾಯಿತು.

ಇದನ್ನೂ ಓದಿ: Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಧಾರವಾಡದ ಕಲಘಟಗಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಕಲಘಟಗಿಯ ದೇವರಕೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರಗೌಡ ಶಿವನಗೌಡರ ಎಂಬುವರ ಮನೆಯ ಮುಂದಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಸಮಯದಲ್ಲಿ ಮನೆ ಮುಂದೆ ಅಕ್ಕ-ಪಕ್ಕ ಯಾರು ಇರಲಿಲ್ಲ. ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.

ಮತ್ತೊಂದೆಡೆ ಧಾರವಾಡದ ಅಣ್ಣಿಗೇರಿಯ ರಾಜರಾಜೇಶ್ವರಿ ನಗರದಲ್ಲೂ ಮನೆಯ ಪಕ್ಕದಲ್ಲಿಯೇ ಇದ್ದ ಮರಕ್ಕೆ ಸಿಡಿಲು ಬಡಿದ ಪರಿಣಾಮ ಹೊತ್ತಿ ಉರಿದಿತ್ತು. ಮರಕ್ಕೆ ಬೆಂಕಿ ಆವರಿಸುತ್ತಿದಂತೆಯೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದರು.

ಧಾರವಾಡದಲ್ಲಿ ಆಲಿಕಲ್ಲು ಮಳೆ

ಧಾರವಾಡ ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆಯಾಗಿದೆ. ನಗರದಲ್ಲಿ ಮಧ್ಯಾಹ್ನದವರೆಗೆ ಉರಿ ಬಿಸಿಲು ಇತ್ತು, ನಂತರ ಸಂಪೂರ್ಣ ಮೋಡ ಕವಿದ ವಾತಾವರಣದೊಂದಿಗೆ ಮಳೆಯು ಅಬ್ಬರಿಸಿತ್ತು. ವಿಜಯನಗರದ ನಾನಾ ಕಡೆ ಮಳೆರಾಯ ಕೃಪೆ ತೋರಿದ್ದಾನೆ. ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಹೊಸಪೇಟೆಯ ಮರಿಯಮ್ಮನಹಳ್ಳಿ, ದೇವಲಾಪುರ ಸೇರಿದಂತೆ ನಾನಾ ಕಡೆ ಉತ್ತಮ ಮಳೆಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಸಿಡಿಲು ಗುಡುಗು ಗಾಳಿ ಸಹಿತ ಭಾರೀ ಮಳೆಗೆ ಮರಗಳು ಉರುಳಿದವು. ಬಿರುಗಾಳಿಗೆ ಹಾಲಸ್ವಾಮಿ ಮಠದ ಬಳಿ, ಯಲ್ಲಾಪುರ ರಸ್ತೆ ಮೇಲೆ ಮರ ನೆಲಕ್ಕೆ ಉರುಳಿ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ತಾಲೂಕು ಪಂ. ಆವರಣದಲ್ಲಿ ಎರಡು ಮರಗಳು ಕಳಚಿ ಬಿದ್ದಿತ್ತು. ಮಂಡ್ಯದ ಮಳವಳ್ಳಿಯ ಕೆಆರ್ ಪೇಟೆಯಲ್ಲಿ ಮೊದಲ ಮಳೆಯಾಗಿದೆ. ಸಿಡಿಲು ಬಡಿದ ಪರಿಣಾಮ ಬೃಹತ್ ಕಲ್ಲೊಂದು ಕಾರಿನ ಮೇಲೆ ಬಿದ್ದು, ಜಖಂಗೊಂಡಿರುವ ಘಟನೆ ವಿಜಯಪುರ ನಗರದ ಜೆಎಂ ರಸ್ತೆಯಲ್ಲಿ ನಡೆದಿದೆ.‌ ಮಹತ್ತರ ಮಹಲ್‌ನ ಗೋಡೆಯ ಬೃಹತ್ ಕಲ್ಲು ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಭಾರಿ ಮಳೆ, ಗಾಳಿಯ ವೇಳೆ ಸಿಡಿಲು ಬಡಿದು ಈ ಅವಘಡ ಆಗಿದೆ. ಗೋಳಗುಮ್ಮಟ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಭಾರಿ ಮಳೆ ಮುನ್ಸೂಚನೆ

ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಗುಲ್ಬರ್ಗ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಿ: ಕಾಗೇರಿ ಮನವಿ

Lok Sabha Election 2024: ಹೊನ್ನಾವರ ತಾಲೂಕಿನ ವಿವಿಧ ಕಡೆಗಳಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಚುನಾವಣಾ ಪ್ರಚಾರ ನಡೆಸಿದರು.

VISTARANEWS.COM


on

Uttara Kannada Lok Sabha Constituency BJP candidate Vishweshwara Hegade Kageri election campaign in Honnavara
Koo

ಹೊನ್ನಾವರ: ರಾಮ ಮಂದಿರ (Ram Mandir) ನಿರ್ಮಾಣ ಮಾಡಿ ನೂರಾರು ವರ್ಷದ ಕನಸನ್ನು ನನಸು ಮಾಡಿದ ಮೋದಿಜಿಯವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಪ್ರಭು ಶ್ರೀರಾಮನನ್ನು ನೆನೆದು ಕಮಲದ ಹೂವಿಗೆ ಮತ ಹಾಕಬೇಕು ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ (Lok Sabha Election 2024) ಮಾಡಿದರು.

ಹೊನ್ನಾವರ ತಾಲೂಕಿನ ಮಂಕಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಯೋಧ್ಯೆಯ ರಾಮ ಮಂದಿರವನ್ನು ನಿರ್ಮಿಸಿ 500 ವರ್ಷಗಳ ಕನಸು ನನಸಾಗಿದೆ. ಮೋದಿಜಿ, ಯೋಗಿಜಿಯಿಂದ ಇದು ಸಾಧ್ಯವಾಗಿದೆ. ಅಂತಹ ಪ್ರಧಾನಿಯನ್ನು ಮತ್ತೊಮ್ಮೆ ಗೆಲ್ಲಿಸಬೇಕು. ಅದಕ್ಕೆ ಪೂರಕವೆಂಬಂತೆ ಇಲ್ಲಿಯೂ ಅತಿ ಹೆಚ್ಚಿನ ಮತಗಳಿಂದ ನನ್ನನ್ನು ಗೆಲ್ಲಿಸುತ್ತೀರಿ ಎಂಬ ನಂಬಿಕೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಬೂತ್ ಮಟ್ಟದ, ಶಕ್ತಿ ಕೇಂದ್ರ, ಮಹಾ ಶಕ್ತಿ ಎಲ್ಲಾ ಪ್ರಮುಖರು ರಾಮನಿಗಾಗಿ, ಮೋದಿಗಾಗಿ ಪೂರ್ಣ ಶ್ರಮ ವಹಿಸಿ, ಕಮಲದ ಹೂವಿನ ಗೆಲುವಿಗಾಗಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Gold Rate Today: ಬಂಗಾರ ಕೊಳ್ಳುವವರಿಗೆ ತುಸು ರಿಲೀಫ್‌, ಬಹುದಿನಗಳ ನಂತರ ಬೆಲೆ ಇಳಿಕೆ; ಇಂದಿನ ದರ ಹೀಗಿದೆ

ಈ ಹಿಂದೆ ಮನಮೋಹನ್ ಸಿಂಗ್ ಇದ್ದಾಗ ಕೇವಲ ಹಗರಣಗಳೇ ನಡೆದಿದ್ದವು. ಆದರೆ ಈಗ 10 ವರ್ಷದ ಆಡಳಿತ ಅವಧಿಯಲ್ಲಿ ಯಾವ ಹಗರಣವೂ ಇಲ್ಲ. ಪಾರದರ್ಶಕ ಆಡಳಿತ ನೀಡಿ ಭ್ರಷ್ಟಾಚಾರ ಮುಕ್ತ ಮಾಡಲಾಗಿದೆ. ಮೋದಿಯವರ ಆಡಳಿತದಲ್ಲಿ ಅಭಿವೃದ್ಧಿಗೆ ಮಾತ್ರ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದ ಕಾಗೇರಿ, ರಾಜ್ಯದ ಗ್ಯಾರಂಟಿ ಯೋಜನೆ ಸಮರ್ಪಕ ವಿತರಣೆ ಆಗುತ್ತಿಲ್ಲ. ಮೋದಿಯವರ ಗ್ಯಾರಂಟಿ ಎದುರು ರಾಜ್ಯದ ಗ್ಯಾರಂಟಿ ಠುಸ್ ಆಗಲಿದೆ ಎಂದರು.

ಜೆಡಿಎಸ್, ಬಿಜೆಪಿ ಮೈತ್ರಿ ಶಕ್ತಿಯಿಂದ ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಹೊನ್ನಾವರದ ಪ್ರಚಾರದ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪೇ ಗೌಡ ಅವರನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಹಕಾರ ಕೇಳಿದರು. ಮೈತ್ರಿ ಮಾತುಕತೆಯಂತೆ ಬಿಜೆಪಿಯ ಗೆಲುವಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪೇ ಗೌಡ ತಿಳಿಸಿದರು.

ಇದನ್ನೂ ಓದಿ: Summer Special Trains: ಹಾಲಿಡೇ ಟ್ರಿಪ್‌ಗೆ ರೆಡಿನಾ? ಬೆಂಗಳೂರು-ಮೈಸೂರಿನಿಂದ ಈ ರಾಜ್ಯಗಳಿಗೆ ಸ್ಪೆಷಲ್‌ ಟ್ರೈನ್‌

ಚುನಾವಣಾ ಪ್ರಚಾರದ ಭರಾಟೆಯ ನಡುವೆಯೇ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಡಗುಂಜಿ ಮಹಾಗಣಪತಿ ದೇವಸ್ಥಾನ, ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನ, ವೀರ ವೆಂಕಟರಮಣ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದುಕೊಂಡರು. ರಾಮ ನವಮಿಯ ನಿಮಿತ್ತ ರಾಮತೀರ್ಥಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು.

Continue Reading
Advertisement
Lok Sabha Election 2024
Lok Sabha Election 202410 seconds ago

Lok Sabha Election 2024: ಹಕ್ಕು ಚಲಾಯಿಸಿ ಮಾದರಿಯಾದ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ

Yuva Movie streaming ott yuva rajkumar
ಸ್ಯಾಂಡಲ್ ವುಡ್1 min ago

Yuva Movie: ಒಟಿಟಿಗೆ ಬಂದಾಯ್ತು ʻಯುವʼ: ಸಿನಿಮಾ ನೋಡಬಹುದು, ಆದರೆ….

IPL 2024
ಕ್ರೀಡೆ17 mins ago

MS Dhoni: ಧೋನಿ ಅಭಿಮಾನಿಗಳಿಗೆ ನಿರಾಸೆ; ಇಂದಿನ ಪಂದ್ಯಕ್ಕೆ ಅನುಮಾನ

evm vvpat verification lok sbha election 2024
Lok Sabha Election 202423 mins ago

ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

Neha Murder case JDS slams hands for defending love jihad to protect accused
ಕರ್ನಾಟಕ23 mins ago

Neha Murder Case: ಲವ್ ಜಿಹಾದ್ ಸಮರ್ಥಿಸಿಕೊಂಡಿದ್ದ ಕೈಗಳಿಂದಲೇ ಆರೋಪಿ ರಕ್ಷಣೆಗೆ ಹೊಂಚು: ಜೆಡಿಎಸ್‌ ಕಿಡಿ

Pro Pak Slogan
ಕರ್ನಾಟಕ25 mins ago

Pro Pak Slogan: ಮೋದಿ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ; ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

lok sabha Election
ದೇಶ27 mins ago

Lok Sabha Election : ಮಣಿಪುರದ ಮತಗಟ್ಟೆಯಲ್ಲಿ ಗುಂಡಿನ ಚಕಮಕಿ; ಇಲ್ಲಿದೆ ವಿಡಿಯೊ

Neha Murder Case
ಹುಬ್ಬಳ್ಳಿ55 mins ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Neha Murder case Niranjan urges Joshi to guarantee the lives of Hindu girls
ಕ್ರೈಂ1 hour ago

Neha Murder Case: ಹಿಂದೂ ಯುವತಿಯರ ಜೀವಕ್ಕೆ ಗ್ಯಾರಂಟಿ ಕೊಡಿಸಿ ಸರ್: ಜೋಶಿಗೆ ನೇಹಾ ತಂದೆ ನಿರಂಜನ್ ಮನವಿ

Kannada Serials TRP IPL Matches Effected On Kannada Serial
ಕಿರುತೆರೆ1 hour ago

Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ55 mins ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ11 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌