Murderer arrested : ಮಂಗಳೂರು ಜ್ಯುವೆಲ್ಲರಿಯ ಸಿಬ್ಬಂದಿಯನ್ನು ಕೊಂದ ದರೋಡೆಕೋರ ತಿಂಗಳ ಬಳಿಕ ಅರೆಸ್ಟ್ Vistara News

ಕರ್ನಾಟಕ

Murderer arrested : ಮಂಗಳೂರು ಜ್ಯುವೆಲ್ಲರಿಯ ಸಿಬ್ಬಂದಿಯನ್ನು ಕೊಂದ ದರೋಡೆಕೋರ ತಿಂಗಳ ಬಳಿಕ ಅರೆಸ್ಟ್

ಮಂಗಳೂರಿನಲ್ಲಿ ನಡೆದ ಜ್ಯುವೆಲ್ಲರಿ ಸಿಬ್ಬಂದಿ ಕೊಲೆಗೆ ಸಂಬಂಧಿಸಿ ಕೊಲೆಗಾರನನ್ನು (Murderer arrested) ಬಂಧಿಸಲಾಗಿದೆ. ಆರೋಪಿ ದರೋಡೆ ಮಾಡುವ ಉದ್ದೇಶದಿಂದ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.

VISTARANEWS.COM


on

Mangalore jewellers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಇಲ್ಲಿನ ಮಂಗಳೂರು ಜ್ಯುವೆಲ್ಲರ್ಸ್‌ಗೆ ನುಗ್ಗಿ ಸಿಬ್ಬಂದಿಯನ್ನು ಹತ್ಯೆ ಮಾಡಿದ ಆರೋಪಿಯನ್ನು ಕೇರಳದ ಕಾಸರಗೋಡಿನಲ್ಲಿ ಒಂದು ತಿಂಗಳ ಬಳಿಕ ಬಂಧಿಸಲಾಗಿದೆ (Murderer arrested). ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿಯಾಗಿರುವ ಶಿಫಾಸ್(33) ಎಂಬಾತನೇ ಬಂಧಿತ. ಈತನನ್ನು ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫೆ.3ರಂದು ಮಂಗಳೂರಿನ ಹಂಪನಕಟ್ಟೆಯ ಮಂಗಳೂರು ‌ಜ್ಯುವೆಲ್ಲರಿ ಹೆಸರಿನ ಶಾಪ್ ನಲ್ಲಿ ಕೊಲೆ
ನಡೆದಿತ್ತು. ಜ್ಯುವೆಲ್ಲರಿ ಸಿಬ್ಬಂದಿ, ಅತ್ತಾವರ ನಿವಾಸಿ ರಾಘವೇಂದ್ರ(50) ಅವರನ್ನು ಮಧ್ಯಾಹ್ನದ ವೇಳೆ ಕೊಲೆ ಮಾಡಲಾಗಿತ್ತು. ಜ್ಯುವೆಲರಿ ಮಾಲೀಕ ಕೇಶವ ಆಚಾರ್ಯ ‌ಮಧ್ಯಾಹ್ನ ಊಟಕ್ಕೆ ಹೋಗಿದ್ದ ವೇಳೆ ಕೊಲೆ ನಡೆದಿದ್ದು, ಬಂದರು ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿತ್ತು.

ಈ ವೇಳೆ ಜ್ಯುವೆಲ್ಲರಿಯಲ್ಲಿದ್ದ ಚಿನ್ನಾಭರಣ ಮಿಸ್ಸಿಂಗ್ ಆಗಿದ್ದು ಕಂಡು ಬಂದಿದ್ದು ಇದೊಂದು ದರೋಡೆ ಪ್ರಕರಣ ಅಂತ ಪೊಲೀಸರಿಗೆ ಅನುಮಾನ ಬಂದಿತ್ತು. ಸದ್ಯ ಕಾಸರಗೋಡು ಡಿವೈಎಸ್ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡದಿಂದ ಆರೋಪಿಯ ಬಂಧನವಾಗಿದೆ.

ಆರೋಪಿ ಶಿಫಾಸ್ ಮಂಗಳೂರು ಪೊಲೀಸರಿಗೆ ಒಪ್ಪಿಸುವ ಪ್ರಕ್ರಿಯೆ ನಡೆದಿದ್ದು ಆರೋಪಿಯನ್ನ ಮಂಗಳೂರು ಪೊಲೀಸರಿಗೆ ಒಪ್ಪಿಸಲಾಗಿದೆ. ದರೋಡೆ ನಡೆಸುವ ಉದ್ದೇಶದಿಂದಲೇ ಕೊಲೆ ನಡೆಸಿರುವ ಬಗ್ಗೆ ಆರೋಪಿಯಿಂದ ಮಾಹಿತಿ ಲಭ್ಯವಾಗಿದ್ದು, ಆರೋಪಿಯ ಈ ಹಿಂದಿನ ಕೃತ್ಯಗಳ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ : Murder of family : ಹೆಂಡತಿ, ಇಬ್ಬರು ಪುಟ್ಟ ಮಕ್ಕಳಿಗೆ ವಿಷವುಣಿಸಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

Murder case : ದಂಪತಿಯಿಂದ ಸುಪಾರಿ ಪಡೆದಿದ್ದ ಹಂತಕರು ವಕೀಲ ಈರಣ್ಣಗೌಡನನ್ನು (lawyer Murder) ಅಟ್ಟಾಡಿಸಿ ಬರ್ಬರವಾಗಿ ಹತ್ಯೆಗಿದು, ರಕ್ತದ ಕೈಯಲ್ಲೇ ಹಣವನ್ನು ಪಡೆದಿದ್ದರು. ಇದೀಗ ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Killers who killed lawyer for property in kalaburagi
Koo

ಕಲಬುರಗಿ: ಹಾಡುಹಗಲೇ ನಗರದಲ್ಲಿ ವಕೀಲರೊಬ್ಬರ ಬರ್ಬರ (lawyer Murder) ಹತ್ಯೆಗೈದು ಪರಾರಿಯಾಗಿದ್ದ ಖತರ್ನಾಕ್‌ ಹಂತಕರನ್ನು (murder case) ಹಡೆಮುರಿ‌ ಕಟ್ಟುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಆಸ್ತಿಗಾಗಿ ನಡೆದ ದಶಕಗಳ ದ್ವೇಷಕ್ಕೆ ವಕೀಲ ಈರಣ್ಣಗೌಡ ಬಲಿಯಾಗಿದ್ದಾರೆ.

ಕಳೆದ ಡಿ.7ರಂದು ಈರಣ್ಣಗೌಡ ಕೋಟ್೯ಗೆ ತೆರುಳುವಾಗ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿದ್ದರು. ಏಕಾಏಕಿ ಮಚ್ಚು, ಲಾಂಗ್‌ನಿಂದ ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ವಕೀಲ ಈರಣ್ಣಗೌಡ ಪ್ರಾಣ ಉಳಿಸಿಕೊಳ್ಳಲು ಓಡಿದ್ದರು. ಆದರೂ ಬಿಡದೆ ಹಂತಕರಿಬ್ಬರು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು‌ ಬರೋಬ್ಬರಿ ಅರ್ಧ ಕಿಲೋ ಮೀಟರ್‌ ಅಟ್ಟಾಡಿಸಿಕೊಂಡು ಬಂದಿದ್ದರು.

ಕಲಬುರಗಿ ನಗರದ ಸಾಯಿಮಂದಿರ ಬಳಿ ಇರುವ ಗಂಗಾವಿಹಾರ ಅಪಾರ್ಟ್‌ಮೆಂಟ್‌ನ‌ ಕಾರ್ ಪಾರ್ಕಿಂಗ್‌ಗೆ ನುಗ್ಗಿದ ಈರಣ್ಣಗೌಡನನ್ನು ಬರೋಬ್ಬರಿ 20ಕ್ಕೂ ಹೆಚ್ಚು ಬಾರಿ ಹೊಡೆದು ಕೊಂದಿದ್ದರು. ಇಷ್ಟಕ್ಕೂ ಸುಮ್ಮನಾಗಲಿಲ್ಲ, ತಲೆ ಮೇಲೆ ಕಲ್ಲು ಎತ್ತಿಹಾಕಿ ಹೋಗಿದ್ದರು.

ಆರೋಪಿಗಳಾದ ಅವ್ವಣ್ಣಾ ನಾಯ್ಕೊಡಿ‌, ಮಲ್ಲಿನಾಥ್ ನಾಯ್ಕೊಡಿ‌‌, ಭಾಗೇಶ್ ನಾಯ್ಕೊಡಿ‌ ಎಂಬುವವರನ್ನು ಮರುದಿನವೇ ಪೊಲೀಸರು ಬಂಧಿಸಿದ್ದರು. ಆದರೆ ಈ ಪ್ರಕರಣದ ಮಾಸ್ಟರ್ ಮೈಂಡ್ ನೀಲಕಂಠರಾವ್ ಪಾಟೀಲ್‌ ಹಾಗೂ ಕೊಲೆಗೆ ಸಹಕಾರ ನೀಡಿದ್ದ ಆತನ ಪತ್ನಿ ಸಿದ್ದಮ್ಮಳನ್ನು ವಿವಿ ಪೊಲೀಸರು ಬಂಧಿಸಿದ್ದಾರೆ.

Killers who killed lawyer for property
ಸುಪಾರಿ ನೀಡಿದ್ದ ದಂಪತಿ

ಇದನ್ನೂ ಓದಿ: Accident Case : ಕಿಟಕಿ ಒರೆಸುವಾಗ ಜಾರಿದ ಕಾಲು; 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ಸುಪಾರಿ ಕೊಟ್ಟು ದೇವಸ್ಥಾನಕ್ಕೆ ಹೋಗಿದ್ದ

ನೂರಾರು ಕೋಟಿ ಆಸ್ತಿಯ ಒಡಯನಾಗಿದ್ದ ವಕೀಲ ಈರಣ್ಣಗೌಡ ಕುಟುಂಬಕ್ಕೂ ಹಾಗೂ ನಾಯ್ಕೊಡಿ‌ ಕುಟುಂಬದ ನಡುವೆ ಆಸ್ತಿ ವಿಚಾರವಾಗಿ ಹಲವು ವರ್ಷಗಳಿಂದ ದ್ವೇಷ ಬೆಳೆದಿತ್ತು. ಇತ್ತ ಈರಣ್ಣಗೌಡ ಪಾಟೀಲ್‌ ಸಂಬಂಧಿಕರಲ್ಲೂ ಆಸ್ತಿ ವಿಚಾರವಾಗಿ ಜಗಳ ಶುರುವಾಗಿತ್ತು. ಹೇಗಾದರೂ ಮಾಡಿ ಈರಣ್ಣಗೌಡನನ್ನು‌ ಮುಗಿಸಿದರೆ ಆಸ್ತಿ ತಮ್ಮ ಪಾಲಿಗೆ ಬರುತ್ತೆ ಎಂದುಕೊಂಡಿದ್ದರು.

ಹೀಗಾಗಿ ಪ್ಲ್ಯಾನ್ ಹಾಕಿ ನೀಲಕಂಠ ನಾಯ್ಕೊಡಿ ಕುಟುಂಬದೊಂದಿಗೆ ಸ್ಕೆಚ್ ಹಾಕಿದ್ದ. ನಾಲ್ಕೈದು ದಿನಗಳ‌ ಕಾಲ ಲಾಡ್ಜ್‌ನಲ್ಲಿದ್ದು ಈರಣ್ಣಗೌಡನನ್ನು ಮುಗಿಸಲು ಯತ್ನಿಸಿದ್ದು, ಅದು ವಿಫಲವಾಗಿತ್ತು. ಬಳಿಕ ಡಿ.7ರಂದು ಈರಣ್ಣ ಗೌಡನನ್ನು ಸಾಯಿ ಮಂದಿರದ ಗಂಗಾವಿಹಾರ ಅಪಾರ್ಟ್ಮೆಂಟ್ ಬಳಿ ಅಟ್ಟಾಡಿಸಿಕೊಂಡು ಹಂತಕರು ರಕ್ತದೊಕುಳಿ ಹರಿಸಿದರು.

ವಕೀಲ ಉಸಿರು ನಿಲ್ಲಿಸಿದ್ದರೂ ಹಂತಕರು ಬಿಡದೆ ಕೊಚ್ಚಿ ಪರಾರಿಯಾದರು. ಬಳಿಕ ಅಲ್ಲಿಂದ ನೇರವಾಗಿ ಆರೋಪಿ ನೀಲಕಂಠ ಮನೆ ಬಳಿ ಹೋಗಿದ್ದರು. ನೀಲಕಂಠ ಪತ್ನಿ ‌ಸಿದ್ದಮ್ಮ ಬಳಿ ರಕ್ತದ ಕಲೆಯನ್ನು ತೋರಿಸಿ, ಕೊಲೆ ಮಾಡಿದ್ದಾಗಿ ಹೇಳಿ 50 ಸಾವಿರ ರೂ. ‌ಹಣ ಪಡೆದಿದ್ದರು. ಇತ್ತ ನೀಲಕಂಠ ತಾನು ತಂದಿದ್ದ ಹೊಸ ಕಾರನ್ನು ಪೂಜೆ ಮಾಡಿಸಿಕೊಂಡು ಬರಲು ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಹೋಗಿದ್ದ. ಪೂಜೆ ಜತೆಗೆ ತನ್ನ ಆಸೆ ತಿರಿತು ಎಂದು ದೇವರಲ್ಲಿ ಹರಕೆ ‌ಮುಟ್ಟಿಸಿದ್ದ. ಆದರೆ ಇದೀಗ ಪೊಲೀಸರು ಐದು ಮಂದಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Congress Guarantee: ಗ್ಯಾರಂಟಿ ಯೋಜನೆಗಳು ಜಾರಿಯಾಗಿ ಹಲವು ತಿಂಗಳುಗಳೇ ಕಳೆದರೂ ಮೈಸೂರಿನಲ್ಲಿ ಹಲವು ಕುಟುಂಬಗಳು ಸೌಲಭ್ಯ ವಂಚಿತವಾಗಿರುವುದು ಕಂಡುಬಂದಿದೆ.

VISTARANEWS.COM


on

Mysore people
Koo

ಮೈಸೂರು: ಜನರ ಜೀವನ ಮಟ್ಟ ಸುಧಾರಣೆ ಮಾಡಲು 5 ಗ್ಯಾರಂಟಿ ಯೋಜನೆಗಳನ್ನು (Congress Guarantee) ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ಕಾರಿ ಯೋಜನೆಗಳು ಕೆಲ ಪ್ರದೇಶಗಳಲ್ಲಿ ಬಡವರಿಗೆ ಮರೀಚಿಕೆಯಾಗಿವೆ. ಯೋಜನೆಗಳು ಜಾರಿಯಾಗಿ ಹಲವು ತಿಂಗಳುಗಳೇ ಕಳೆದರೂ ಇಂದಿಗೂ ನೂರಾರು ಕುಟುಂಬಗಳು ಸೌಲಭ್ಯ ವಂಚಿತವಾಗಿರುವುದು ನಗರದಲ್ಲಿ ಕಂಡುಬಂದಿದೆ.

ಹೌದು, ನಗರದ ಎಲ್ಲಮ್ಮ ಬಡಾವಣೆಯ ಹಲವು ಕುಟುಂಬಗಳು ಗ್ಯಾರಂಟಿ ಯೋಜನೆಗಳ ಸೌಲಭ್ಯದಿಂದ ವಂಚಿತವಾಗಿವೆ. ಸುಮಾರು 15-20 ವರ್ಷಗಳಿಂದ ನಗರದಲ್ಲಿ ವಾಸಿಸುತ್ತಿದ್ದರೂ ಕೆಲವರಿಗೆ ಆಧಾರ್‌, ರೇಷನ್ ಕಾರ್ಡ್ ಸಿಕ್ಕಿಲ್ಲ. ಇದರಿಂದ ಗ್ಯಾರಂಟಿ ಯೋಜನೆಗಳನ್ನು ಪಡೆಯಲು ತೊಂದರೆಯಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಿಎಂ ತವರಲ್ಲೇ ಬಡವರು ಸಮಸ್ಯೆ ಎದುರಿಸುವಂತಾಗಿದೆ.

ಉಳ್ಳವರಿಗೆ ಮಾತ್ರ ಸರ್ಕಾರದ ಯೋಜನೆಗಳು ಅನುಕೂಲವಾಗುತ್ತಿದ್ದು, ಗ್ಯಾರಂಟಿ ಯೋಜನೆಗಳು ಬಡವರ ಪಾಲಿಗೆ ನಿರೀಕ್ಷೆಯಾಗಿಯೇ ಉಳಿದಿವೆ. ಜನಪ್ರತಿನಿಧಿಗಳು ವೋಟಿಗಾಗಿ ಮತದಾರರ ಗುರುತಿನ ಚೀಟಿ ಮಾಡಿಸಿಕೊಟ್ಟಿದ್ದಾರೆ. ಆದರೆ ಅಕ್ಕಿ, ಗೋಧಿ ಪಡೆಯಲು ಶಾಸಕ ತನ್ವೀರ್ ಸೇಠ್ ಅವರು ರೇಷನ್ ಕಾರ್ಡ್ ಮಾಡಿಸಿಕೊಟ್ಟಿಲ್ಲ, ಇದರಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ ಎಂದು ಸ್ಲಮ್ ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | TN Seetharam: ನನ್ನ ರಾಜಕೀಯ ಪ್ರವೇಶಕ್ಕೆ ಪ್ರೊ. ನಂಜುಂಡಸ್ವಾಮಿ ಕಾರಣ: ಸಿಎಂ ಸಿದ್ದರಾಮಯ್ಯ

ಎಲ್ಲಮ್ಮ ಬಡಾವಣೆಯ ಕೆಲವರಿಗೆ ಆಧಾರ್, ರೇಷನ್ ಕಾರ್ಡ್ ಇಲ್ಲ. ರೇಷನ್ ಕಾರ್ಡ್ ಇಲ್ಲದ ಪರಿಣಾಮ ಇತ್ತ ಶಾಲೆಯಲ್ಲಿ ಸ್ಕಾಲರ್‌ಶಿಪ್ ಪಡೆಯಲೂ ವಿದ್ಯಾರ್ಥಿಗಳಿಗೆ ಕಷ್ಟವಾಗಿದೆ. ಅನ್ನಭಾಗ್ಯ, ಗೃಹ ಲಕ್ಷ್ಮಿ ಯೋಜನೆ ಸೇರಿ ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಕೊಡಿಸುವಲ್ಲಿ ಮೈಸೂರು ಜಿಲ್ಲಾಡಳಿತ ವಿಫಲವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ


Continue Reading

ಕರ್ನಾಟಕ

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೋದಲ್ಲಿ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಯ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.

VISTARANEWS.COM


on

Moral policing
Koo

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ (Moral Policing) ನಡೆದಿದೆ. ಆಟೋದಲ್ಲಿ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ. ವಾರದ ಹಿಂದೆ ನಡೆದಿರುವ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆಟೋದಲ್ಲಿ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದಿರುವ ಕೆಲವರು, ವಿದ್ಯಾರ್ಥಿಯನ್ನು ಕೆಳಗಿಳಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲ್ಲೆಗೆ ಯತ್ನಿಸಿದ ಆರೋಪಿಗಳು ಪರಾರಿಯಾಗಿದ್ದು, ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದಾವಣಗೆರೆಯಲ್ಲಿ ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟ ಹಿಂದು ಯುವಕನಿಗೆ ಥಳಿತ

ದಾವಣಗೆರೆ: ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟ ಎಂದು ಹಿಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಾವಣಗೆರೆಯ ಆರ್‌ಟಿಒ ಕಚೇರಿ ಬಳಿ ನಡೆದಿದೆ. ಜಾಲಿ ನಗರದ ನಿವಾಸಿ ಶ್ರೀನಿವಾಸ್ (29) ಹಲ್ಲೆಗೊಳಗಾದ ಯುವಕ. ಮನೆಯ ಪಕ್ಕದಲ್ಲಿರುವ ಮುಸ್ಲಿಂ ಯುವತಿಯನ್ನು ಬೈಕ್‌ನಲ್ಲಿ ಡ್ರಾಪ್ ಮಾಡಲು ಹೋಗಿದ್ದಾಗ ಶ್ರೀನಿವಾಸ್‌ನನ್ನು ಅಡ್ಡಗಟ್ಟಿ ಹಲ್ಲೆ ನಂತರ, ತಾಜ್ ಪ್ಯಾಲೇಸ್‌ಗೆ ಕರೆದೊಯ್ದು ಇಡೀ ರಾತ್ರಿ ಯುವಕರ ತಂಡ ಹಲ್ಲೆ ನಡೆಸಿದ್ದಾರೆ.

ಹಲ್ಲೆ ಬಳಿಕ ಶ್ರೀನಿವಾಸ್‌ನನ್ನು ನಿರ್ಜನ ಪ್ರದೇಶದಲ್ಲಿ ತಂದು ಯುವಕರು ಬಿಸಾಡಿದ್ದರು. ಶನಿವಾರ ಬೆಳಗ್ಗೆ ಶ್ರೀನಿವಾಸ್ ಪೋಷಕರಿಗೆ ಪೋನ್‌ ಮಾಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಗಾಯಾಳುವನ್ನು ದಾವಣಗೆರೆ ಜಿಲ್ಲಾಸ್ಪತ್ರೆಯಗೆ ದಾಖಲಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಮುಂಭಾಗ ಹಿಂದು ಸಂಘಟನೆಯ ಮುಖಂಡರು ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ.

ನಂತರ ಶ್ರೀನಿವಾಸ್ ಮೇಲೆ ಯುವತಿ ಕಡೆಯವರು ಪೋಕ್ಸೊ ಪ್ರಕರಣ ದಾಖಲಿಸಿ, ಅತ್ಯಾಚಾರ ಮಾಡಿದ್ದಾನೆ ದೂರು ನೀಡಿದ್ದಾರೆ. ಹೀಗಾಗಿ ಯುವಕನ‌ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಹಿಂದು ಸಂಘಟನೆಗಳು ಆಗ್ರಹಿಸಿವೆ. ಇದರ ಹಿಂದೆ ಷಡ್ಯಂತ್ರವಿದ್ದು ಹಿಂದು ಯುವಕನ ಮೇಲೆ ಹಲ್ಲೆ ಮಾಡಿದ್ದು ಏಕೆ? ಅವನು ತಪ್ಪು ಮಾಡಿದ್ದರೇ ಪೊಲೀಸರಿಗೆ ಒಪ್ಪಿಸಬೇಕಾಗಿತ್ತು. ಯುವಕನಿಗೆ ಈಗಾಗಲೆ ಎಂಗೇಜ್ಮೆಂಟ್ ಆಗಿದ್ದು, ಮದುವೆ ಪಿಕ್ಸ್ ಆಗಿದೆ. ಆತ ತಪ್ಪು ಮಾಡಿದ್ದರೇ ಶಿಕ್ಷೆ ಕೊಡುವುದಕ್ಕೆ ಕಾನೂನು ಇದೆ. ಆದ್ದರಿಂದ ನೈತಿಕ ಪೊಲೀಸ್ ಗಿರಿ ಮಾಡಿದವರನ್ನು ಬಂಧಿಸಬೇಕು ಎಂದು ಹಿಂದು ಸಂಘಟನೆ ಮುಖಂಡರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ | Physical Abuse : 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ನಿವೃತ್ತ ಕ್ಲರ್ಕ್!

ಸಾವಿನಲ್ಲೂ ಒಂದಾದ ಪ್ರೇಮಿಗಳು; ರಸ್ತೆ ಅಪಘಾತದಲ್ಲಿ ಮೃತ್ಯು

ramanagar road accident

ರಾಮನಗರ: ನೂರಾರು ಕನಸುಗಳನ್ನು ಹೊತ್ತಿದ್ದ ಆ ಜೋಡಿ ಸಾವಿನಲ್ಲೂ ಒಂದಾಗಿದೆ. ಶಾಲಾ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ (Road Accident) ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಪ್ರೇಮಿಗಳು (Lovers Death) ಮೃತಪಟ್ಟಿದ್ದಾರೆ. ಕೆಬ್ಬೆಹಳ್ಳಿ ಗ್ರಾಮದ ದೀಪು (25), ತಿಪ್ಪೂರು ಗ್ರಾಮದ ಶೈಲ (20) ಮೃತ ದುರ್ದೈವಿಗಳು.

ಶನಿವಾರ ರಾತ್ರಿ ಕನಕಪುರ ತಾಲೂಕಿನ ಕೋಡಿಹಳ್ಳಿ ಮುಖ್ಯ ರಸ್ತೆಯ ನಾರಾಯಣಪುರದ ನಂಜಪ್ಪನ ಕಟ್ಟೆ ಬಳಿ ಈ ದುರ್ಘಟನೆ ನಡೆದಿದೆ. ಶೈಲಾಳನ್ನು ಮನೆಗೆ ಡ್ರಾಪ್‌ ಮಾಡುವ ಸಲುವಾಗಿ ಕನಕಪುರದಿಂದ ದೀಪು ತನ್ನ ಕಾರಲ್ಲಿ ಹೊರಟ್ಟಿದ್ದರು. ಈ ವೇಳೆ ಎದುರಿಗೆ ಬಂದ ಶಾಲಾ ಬಸ್‌ವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಛಿದ್ರ ಛಿದ್ರಗೊಂಡಿದ್ದು, ಒಳಗಿದ್ದ ದೀಪು, ಶೈಲು ಗಂಭೀರ ಗಾಯಗೊಂಡಿದ್ದರು.

ಇದನ್ನೂ ಓದಿ | Accident Case : ಕಿಟಕಿ ಒರೆಸುವಾಗ ಜಾರಿದ ಕಾಲು; 5ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

ಅಪಘಾತದಲ್ಲಿ ಶೈಲ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರ ಗಾಯಗೊಂಡಿದ್ದ ದೀಪುನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಾಗ ಜೀವ ಬಿಟ್ಟಿದ್ದಾನೆ. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Karnataka weather: ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ

Rain News: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Cloudy weather in Bengaluru for the entire day Rain Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ. ಜತೆಗೆ ಗುಡುಗು ಮಿಂಚಿನ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನೆರಡು ದಿನಗಳು ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರಲ್ಲಿ ಮಳೆ ನಿರೀಕ್ಷೆ ಇದೆ.

ಇದನ್ನೂ ಓದಿ: Model Fashion Life: ಕಲಾತ್ಮಕ ರೆಟ್ರೊ ಫ್ಯಾಷನ್ ಪ್ರಿಯೆ ಮಾಡೆಲ್ ಲುಸಿ ಸರೆರಿಯಾ

ಭಾಗಶಃ ಮೋಡ ಕವಿದ ವಾತಾವರಣ!

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇಲ್ಲೆಲ್ಲ ಶುಷ್ಕ ವಾತಾವರಣ

ದಕ್ಷಿಣ ಒಳನಾಡಿ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಹಾಗೂ ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಇನ್ನು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯೇ ಇರಲಿದೆ.

ಶನಿವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಮೂಲ್ಕಿ, ಪುತ್ತೂರು, ಮಂಗಳೂರು ವಿಮಾಣ ನಿಲ್ದಾಣದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಪಣಂಬೂರಲ್ಲಿ 2, ಮಣಿ, ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕನಿಷ್ಠ ಉಷ್ಣಾಂಶ 13.9 ಡಿ.ಸೆ ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Killers who killed lawyer for property in kalaburagi
ಕರ್ನಾಟಕ5 mins ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ6 mins ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ9 mins ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್10 mins ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Mysore people
ಕರ್ನಾಟಕ18 mins ago

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Winter Food Tips
ಆಹಾರ/ಅಡುಗೆ33 mins ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

ipl fans
ಕ್ರಿಕೆಟ್1 hour ago

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

Moral policing
ಕರ್ನಾಟಕ1 hour ago

Moral Policing: ಉಪ್ಪಿನಂಗಡಿಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿಗೆ ತಡೆದು ಧಮಕಿ!

Akash anand is BSP Leader mayawati's political heir
ದೇಶ1 hour ago

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Cloudy weather in Bengaluru for the entire day Rain Forecast
ಉಡುಪಿ1 hour ago

Karnataka weather: ಬೆಂಗಳೂರಲ್ಲಿ ನಾಳೆ ಇಡೀ ದಿನ ಮೋಡ ಕವಿದ ವಾತಾವರಣ; ಇಲ್ಲಷ್ಟೇ ಮಳೆ ಸೂಚನೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ3 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ6 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌