Murder Case: ಯಾದಗಿರಿ ಹಿಂದು ಯುವಕನ ಕೊಲೆ ಪ್ರಕರಣ; ಇಬ್ಬರ ವಿರುದ್ಧ ಎಫ್‌ಐಆರ್‌ - Vistara News

ಕರ್ನಾಟಕ

Murder Case: ಯಾದಗಿರಿ ಹಿಂದು ಯುವಕನ ಕೊಲೆ ಪ್ರಕರಣ; ಇಬ್ಬರ ವಿರುದ್ಧ ಎಫ್‌ಐಆರ್‌

Murder Case: ಯಾದಗಿರಿಯಲ್ಲಿ ರೊಟ್ಟಿ ವಿಚಾರವಾಗಿ ದಲಿ‌ತ ಯುವಕನನ್ನು ಭಾನುವಾರ ರಾತ್ರಿ ಅನ್ಯ ಕೋಮಿನ ಯುವಕರ ಗ್ಯಾಂಗ್ ಕೊಲೆ ಮಾಡಿತ್ತು. ಈ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

VISTARANEWS.COM


on

Murder Case in yadagiri rakesh and fayas
ಕೊಲೆಯಾದ ರಾಕೇಶ್‌ ಮತ್ತು ಆರೋಪಿ ಫೈಯಾಜ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಯಾದಗಿರಿ ನಗರದಲ್ಲಿ ಹಿಂದು ಯುವಕನ ಕೊಲೆ ಪ್ರಕರಣ ಸಂಬಂಧ (Murder Case) ನಗರಠಾಣೆ ಪೊಲೀಸರು ತಡವಾಗಿ ಕೊಲೆ ಕೇಸ್ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಾದ ಫೈಯಾಜ್ ಹಾಗೂ ಆಸೀಫ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ರೊಟ್ಟಿ ವಿಚಾರವಾಗಿ ದಲಿತ ಯುವಕ ರಾಕೇಶ್‌ನನ್ನು ಅನ್ಯ ಕೋಮಿನ ಯುವಕರ ಗ್ಯಾಂಗ್ ಕೊಲೆ ಮಾಡಿತ್ತು. ನೆನ್ನೆ ರಾತ್ರಿ ಕೊಲೆ ಘಟನೆ ನಡೆದರೂ ಕೇಸ್ ದಾಖಲಿಸಿಕೊಳ್ಳದೆ ಪೊಲೀಸರು ಸಂಧಾನ ಮಾಡಿದ್ದರು. ಇಂದು ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು ಕೊಲೆ ಕೇಸ್ ದಾಖಲಿಸದಿದ್ದರೆ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದರಿಂದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೊಟ್ಟಿ ಕೇಳಿದ್ದಕ್ಕೆ ರಾಕೇಶ್ ಮನೆಗೆ ನುಗ್ಗಿ ಫೈಯಾಜ್ ಹಾಗೂ ಆತನ ಗ್ಯಾಂಗ್‌ ಕೊಲೆ ಮಾಡಿತ್ತು. ಯುವಕನ ತಾಯಿ ಮಂಜಮ್ಮ ನೀಡಿರುವ ದೂರಿನ ಮೇರೆಗೆ ಟೌನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು

ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ದಲಿತ ಹಿಂದು ಯುವಕನ‌ (Murder Case ) ಹತ್ಯೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ರಾಕೇಶ್ (22) ಮೃತ ದುರ್ದೈವಿ.

ಭಾನುವಾರ ರಾತ್ರಿ ರಾಕೇಶ್‌ ಊಟ ಮಾಡಲು ಹೊರಗೆ ಬಂದಿದ್ದ. ಅನ್ಯಕೋಮಿನವರ ಮನೆಯಲ್ಲಿ ರೊಟ್ಟಿ ಮಾರಾಟ ಮಾಡುತ್ತಿದ್ದರು. ಹೀಗಾಗಿ ಮನೆ ಸಮೀಪದಲ್ಲೇ ಇರುವ ರೊಟ್ಟಿ ಕೇಂದ್ರಕ್ಕೆ ರಾಕೇಶ್‌ ತೆರಳಿದ್ದ. ಈ ವೇಳೆ ಮನೆ ಬಾಗಿಲು ಬಡಿದು ರೊಟ್ಟಿ ಕೇಳಿದ್ದ, ಆದರೆ ರೊಟ್ಟಿ ಇಲ್ಲವೆಂದು ಕಳುಹಿಸಿದ್ದರು. ಮನೆಗೆ ವಾಪಸ್ ಬಂದ ರಾಕೇಶ್‌ ಖಾಲಿ ಹೊಟ್ಟೆಯಲ್ಲಿ ನಿದ್ರೆಗೆ ಜಾರಿದ್ದ.

ಸ್ವಲ್ಪ ಸಮಯದ ನಂತರ ರಾಕೇಶ್‌ ಮನೆಗೆ ಬಂದಿದ್ದ ಅನ್ಯಕೋಮಿನ ಯುವಕರು, ರೊಟ್ಟಿ ಕೇಳಲು ಮನೆಗೆ ಯಾಕೆ ಬಂದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಪ್ರಮುಖ ಆರೋಪಿ ಫೈಯಾಜ್ ಸೇರಿ ನಾಲ್ವರು ರಾಕೇಶ್‌ನ ಗುಪ್ತಾಂಗಕ್ಕೆ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆಗೊಳಗಾದ ರಾಕೇಶ್‌ ಉಸಿರುಚೆಲ್ಲಿದ್ದಾನೆ ಎಂದು ರಾಕೇಶ್ ತಾಯಿ ಆರೋಪಿಸಿದ್ದಾರೆ.

ಇನ್ನು ಹಿಂದು ಯುವಕನ‌ ಹತ್ಯೆ ಮರೆಮಾಚಲು ಪೊಲೀಸ್ ಇಲಾಖೆ ಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಭಾನುವಾರ ತಡರಾತ್ರಿ ಕೊಲೆ ನಡೆದಿದ್ದು, ಕೇಸ್ ದಾಖಲಿಸಿಕೊಂಡಿಲ್ಲ. ದಲಿತ ಕುಟುಂಬಕ್ಕೆ ಬಿಜೆಪಿ, ಹಿಂದು ಕಾರ್ಯಕರ್ತರು ಬೆಂಗಾವಲಾಗಿ ನಿಂತ ಕೂಡಲೇ ಎಚ್ಚೆತ್ತ ಪೊಲೀಸರು, ಕೊಲೆ ನಡೆದ 18 ಗಂಟೆಗಳ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಖುದ್ದು ಎಸ್‌ಪಿ ಜಿ.ಸಂಗೀತಾ ಅವರು ಸ್ಥಳದಲ್ಲಿ ನಿಂತು ಆಸ್ಪತ್ರೆಗೆ ರವಾನಿಸಿದ್ದರು.

ಇದನ್ನೂ ಓದಿ | Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪ್ರಕರಣ ಸಂಬಂಧ ಯಾದಗಿರಿ ಎಸ್‌ಪಿ ಜಿ.ಸಂಗೀತಾ ಪ್ರತಿಕ್ರಿಯಿಸಿ, ನಮಗೆ ಕೊಲೆ ನಡೆದಿರುವ ಬಗ್ಗೆ ಗೊತ್ತೇ ಇಲ್ಲ. ಕೊಲೆಯಾದ ಯುವಕನ ಕುಟುಂಬಸ್ಥರು ಇನ್ನೂ ಏನು ಹೇಳಿಲ್ಲ. ದೂರು ಕೊಡಿ ಎಂದರೆ ಅವರು ಬಂದಿಲ್ಲ. ಪ್ರಕರಣ ಸಂಬಂಧ ಮಾಹಿತಿ ಕೇಳಿದರೆ, ರೊಟ್ಟಿ ಕೇಂದ್ರಕ್ಕೆ ಹೋಗಿದ್ದ ಎನ್ನುತ್ತಿದ್ದಾರೆ. ಅವರ ಹಿರಿಯರ ಜತೆ ಚರ್ಚಿಸಿ ನಂತರ ಬಂದು ದೂರು ಕೊಡುತ್ತಾರೆ. ದೂರು ಕೊಟ್ಟ ನಂತರ ವಿಚಾರಣೆ ಮಾಡಿ ಆರೋಪಿಯನ್ನು ಬಂಧಿಸುತ್ತೇವೆ ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Jai Shri Ram Slogan: ಜೈ ಶ್ರೀರಾಮ್ ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಎಂದು ರಾಯಚೂರು ಕೈ ಮುಖಂಡ ವಿವಾದಿತ ಹೇಳಿಕೆ ನೀಡಿದ್ದಾರೆ.

VISTARANEWS.COM


on

Jai Shri Ram Slogan
Koo

ರಾಯಚೂರು: ಜೈ ಶ್ರೀರಾಮ್ (Jai Shri Ram Slogan) ಎಂದು ಹೇಳುವವರಿಗೆ ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಎಂದು ರಾಯಚೂರು ಕಾಂಗ್ರೆಸ್ ಮುಖಂಡರೊಬ್ಬರು ವಿವಾದಿತ ಹೇಳಿಕೆ ನೀಡಿದ್ದಾರೆ. ಸದ್ಯ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕೈ ಮುಖಂಡನ ಹೇಳಿಕೆಗೆ ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದಾರೆ. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗುತ್ತಿದ್ದು, ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಗರಂ ಆಗಿದ್ದಾರೆ. ನಡುರಸ್ತೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವ ಮೂಲಕ ಕೈ ಮುಖಂಡನ ಹೇಳಿಕೆಗೆ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Prajwal Revanna Case Wherever Prajwal escapes we will pick him up says CM Siddaramaiah

ಬಾಗಲಕೋಟೆ: ಹಾಸನದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಪ್ರಮುಖ ಆರೋಪಿ ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ದುಬೈ ಅಲ್ಲ, ಎಲ್ಲಿಯಾದರೂ ಎಸ್ಕೇಪ್‌ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಎಸ್ಕೇಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್‌ ಎಲ್ಲಿಯಾದರೂ ಎಸ್ಕೇಪ್ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ. ಯಾವ ದೇಶದಲ್ಲಿ ಇದ್ದರೂ ಬಿಡುವುದಿಲ್ಲ. ಅಲ್ಲಿಂದಲೇ ಕರೆದುಕೊಂಡು ಬರುತ್ತೇವೆ ಎಂದು ಹೇಳಿದರು.

ಈ ಕಾರಣಕ್ಕಾಗಿಯೇ ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಸಂತ್ರಸ್ತರ ರಕ್ಷಣೆ ಮಾಡಲು ಸೂಚಿಸಿದ್ದೇನೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಹೆಣ್ಣುಮಕ್ಕಳ ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ

ಪ್ರಜ್ವಲ್‌ ಅವರ ತಂದೆ ಎಚ್.ಡಿ. ರೇವಣ್ಣ ಅವರು ಲಾಯರ್ ಹತ್ತಿರ ಯಾಕೆ ಹೋಗಿದ್ದಾರೆ? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮನೆಗೆ ಲಾಯರ್ ಅನ್ನು ಕರೆಸಿಕೊಂಡು ಏಕೆ ಚರ್ಚೆ ಮಾಡಿದ್ದಾರೆ? ಎಚ್‌ಡಿಕೆ ಒಮ್ಮೆ ಹೇಳುತ್ತಾರೆ, ರೇವಣ್ಣ, ನಾನು ಬೇರೆ ಬೇರೆ ಆಗಿದ್ದೇವೆ ಅಂತ. ದೇವೇಗೌಡರಿಗೂ, ನಮಗೂ ಈ ಪ್ರಕರಣಕ್ಕೂ ಏನೂ ಸಂಬಂಧ ಇಲ್ಲ ಅಂತ ಹೇಳುತ್ತಾರೆ. ಇನ್ನೊಂದು ಕಡೆ ಇದೆಲ್ಲವನ್ನೂ ಮಾಡುತ್ತಾರೆ. ಚುನಾವಣೆ ಪ್ರಚಾರದಲ್ಲಿ ಪ್ರಜ್ವಲ್ ಬೇರೆ ಅಲ್ಲ, ನನ್ನ ಮಗ ಬೇರೆ ಅಲ್ಲ ಎಂದು ಹೇಳಿದ್ದು ಕುಮಾರಸ್ವಾಂಇ ಅಲ್ಲವೇ? ಇದರ ಅರ್ಥ ಏನು? (What is it mean?) ಅವರು ಮಾಡೋದೆಲ್ಲವನ್ನೂ ಒಟ್ಟಿಗೆ ಮಾಡೋದು. ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

Continue Reading

ಬಳ್ಳಾರಿ

Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಜಿಲ್ಲೆಯ ಕುಡುತಿನಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಮತಯಾಚನೆ ನಡೆಸಿದರು. ಮನೆ ಮಗನಾಗಿ, ಸಹೋದರನಾಗಿ ಈವರೆಗೆ ಕೆಲಸ ಮಾಡುತ್ತಾ ಬಂದಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಗೆ ಆಶೀರ್ವದಿಸಿ ಗೆಲ್ಲಿಸುವಂತೆ ಮತದಾರರದಲ್ಲಿ ಮನವಿ ಮಾಡಿದರು.

VISTARANEWS.COM


on

Ballari Lok Sabha constituency Congress candidate E Tukaram election campaign in Kuduthini
Koo

ಕುಡುತಿನಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಜಿಲ್ಲೆಯ ಕುಡುತಿನಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಮತಯಾಚನೆ (Lok Sabha Election 2024) ನಡೆಸಿದರು. ಮನೆ ಮಗನಾಗಿ, ಸಹೋದರನಾಗಿ ಈವರೆಗೆ ಕೆಲಸ ಮಾಡುತ್ತಾ ಬಂದಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಗೆ ಆಶೀರ್ವದಿಸಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಪಟ್ಟಣದ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂದು ಮತಯಾಚನೆ ನಡೆಸಿ, ಮಾತನಾಡಿದ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಕುಡುತಿನಿ ಭಾಗದಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಸ್ತದ ಗುರುತಿಗೆ ಮತ ನೀಡಿ, ತಮ್ಮನ್ನು ಗೆಲ್ಲಿಸುವಂತೆ ಮತದಾರರಲ್ಲಿ ಅಭ್ಯರ್ಥಿ ಈ. ತುಕಾರಾಂ ಮನವಿ ಮಾಡಿದರು.

ಇದನ್ನೂ ಓದಿ: T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಆಂಜನೇಯಲು , ಕುಡುತಿನಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಮತ್ತು ಇತರರು ಉಪಸ್ಥಿತರಿದ್ದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ ಮಾಡಲಾಯಿತು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ, ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಕಾಂಗ್ರೆಸ್‌ ಮುಖಂಡ ನಿಕೇತ್‌ ರಾಜ್‌ ಮೌರ್ಯ ಮಾತನಾಡಿ, ಕರ್ನಾಟಕ ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಇಡೀ ದೇಶದ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದ್ದು, 5 ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸಿದೆ. ಆದರೆ ಗ್ಯಾರಂಟಿ ನೋಡಿ ಸಹಿಸಲು ಸಾಧ್ಯವಾಗದೇ ಬಿಜೆಪಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಗೆದ್ದೇ ಗೆಲ್ಲುತ್ತಾರೆ. ಸಂಸದರಾಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮಾತನಾಡಿದರು.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

ಸಮಾವೇಶದಲ್ಲಿ ಸಚಿವರಾದ ಕೆ.ಎನ್‌. ರಾಜಣ್ಣ, ಶಿವಾನಂದ ಪಾಟೀಲ್‌, ಶಾಸಕರಾದ ವಿಜಯಾನಂದ ಕಾಶಪ್ಪನವರ್‌, ಭೀಮಸೇನ್‌ ಚಿಮ್ಮನಕಟ್ಟಿ, ಎಚ್‌.ವೈ. ಮೇಟಿ, ಪ್ರದೀಪ್‌ ಈಶ್ವರ್‌, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಆನಂದ ನ್ಯಾಮಗೌಡ, ಅಜಯ್‌ ಕುಮಾರ್‌ ಸರ್‌ ನಾಯಕ್‌, ಪಕ್ಷದ ಮುಖಂಡರಾದ ಬಿ.ಆರ್‌. ಯಾವಗಲ್‌, ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

Prajwal Revanna Case: ಪೆನ್‌ಡ್ರೈವ್ ಮಾಡಿದ್ದು ಎಲ್ಲಿ? ಇದರಲ್ಲಿ ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಪಾತ್ರವೇನು? ಕಾರ್ತಿಕ್ ಯಾರು ಯಾರನ್ನು ಸಂಪರ್ಕ‌ ಮಾಡಿದ್ದ? ಇದರಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪಾತ್ರವೇನು? ಮೂಲ ಪೆನ್‌ಡ್ರೈವ್ ಸೃಷ್ಟಿ ಆಗಿದ್ದು ಎಲ್ಲಿ? ಅದನ್ನು ಮೊದಲು ಯಾರ ಕೈಗೆ ಕೊಡಲಾಯಿತು? ಈ ಎಲ್ಲ ಸಂಚಿನ ಹಿಂದೆ ಇರುವ ರಾಜಕಾರಣಿ ಯಾರು? ವ್ಯೂಹ ಎಲ್ಲಿ ಸಿದ್ಧವಾಯಿತು? ಚುನಾವಣೆ ಸಮಯದಲ್ಲಿ ಏಕೆ ಹೊರಬಂತು? ಎಂಬಿತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಎಚ್‌ಡಿಕೆ ಟೀಮ್ ಮುಂದಾಗಿದೆ.

VISTARANEWS.COM


on

Prajwal Revanna Case Who is the kingpin of Prajwal video pen drive HDK team is on its way
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ರಾಜ್ಯಾದ್ಯಂತ ಹಂಚಿಕೆ ಮಾಡಿದವರು ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿ ಉಳಿದುಕೊಂಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮೇಲೆ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ನೇರ ಆರೋಪವನ್ನು ಈಗಾಗಲೇ ಮಾಡಿದ್ದಾರೆ. ಇದರ ಜತೆಗೆ ಎಚ್‌ಡಿಕೆ ಮತ್ತು ತಂಡ “ಪೆನ್‌ಡ್ರೈವ್ ಡಿಸ್ಟ್ರಿಬ್ಯೂಟರ್” ಬೆನ್ನು ಬಿದ್ದಿದೆ.

ಪೆನ್‌ಡ್ರೈವ್ ಮಾಡಿದ್ದು ಎಲ್ಲಿ? ಇದರಲ್ಲಿ ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಪಾತ್ರವೇನು? ಕಾರ್ತಿಕ್ ಯಾರು ಯಾರನ್ನು ಸಂಪರ್ಕ‌ ಮಾಡಿದ್ದ? ಇದರಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪಾತ್ರವೇನು? ಮೂಲ ಪೆನ್‌ಡ್ರೈವ್ ಸೃಷ್ಟಿ ಆಗಿದ್ದು ಎಲ್ಲಿ? ಅದನ್ನು ಮೊದಲು ಯಾರ ಕೈಗೆ ಕೊಡಲಾಯಿತು? ಈ ಎಲ್ಲ ಸಂಚಿನ ಹಿಂದೆ ಇರುವ ರಾಜಕಾರಣಿ ಯಾರು? ವ್ಯೂಹ ಎಲ್ಲಿ ಸಿದ್ಧವಾಯಿತು? ಚುನಾವಣೆ ಸಮಯದಲ್ಲಿ ಏಕೆ ಹೊರಬಂತು? ಎಂಬಿತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಎಚ್‌ಡಿಕೆ ಟೀಮ್ ಮುಂದಾಗಿದೆ.

ಇನ್ನೊಂದೇ ವಾರಕ್ಕೆ ಎಲ್ಲ ಮಾಹಿತಿ ಬಹಿರಂಗ?

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಒಂದು ವಾರದ ಒಳಗೆ ಪೆನ್‌ಡ್ರೈವ್ ಕಿಂಗ್‌ಪಿನ್ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಬಹಿರಂಗ ಮಾಡಲಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಅವರು ತಮ್ಮೆಲ್ಲ ಶಕ್ತಿ ಹಾಗೂ ಯುಕ್ತಿಯನ್ನು ಬಳಕೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಎಚ್‌ಡಿಕೆ ಸಿಟ್ಟಿಗೆದ್ದಿರುವುದು ಏಕೆ?

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೊವನ್ನು ಬಿಡುಗಡೆ ಮಾಡಿದಾಗಲಿಂದಲೂ ಎಚ್‌.ಡಿ. ದೇವೇಗೌಡರ ಕುಟುಂಬ ಟಾರ್ಗೆಟ್‌ ಆಗಿದೆ. ಅಲ್ಲದೆ, ಇದನ್ನು ಎಚ್.ಡಿ. ಕುಮಾರಸ್ವಾಮಿ ಅವರೇ ಮಾಡಿಸಿದ್ದಾರೆ ಎಂದು ಡಿ.ಕೆ. ಸಹೋದರರು ಮೇಲಿಂದ ಮೇಲೆ ಆರೋಪ ಮಾಡುತ್ತಾ ಬರುತ್ತಿದ್ದಾರೆ. ಹೀಗಾಗಿ ಎಚ್‌ಡಿಕೆ ಸಿಟ್ಟಾಗಿದ್ದು, ಇದರ ಎಲ್ಲ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು ಎಂದು ಹಠ ತೊಟ್ಟಿದ್ದಾರೆ.

ಈ ಪ್ರಕರಣದಲ್ಲಿ ಅಸಲಿ, ನಕಲಿ ಏನು? ಎಂಬ ಬಗ್ಗೆ ಪೂರ್ತಿ ವಿಷಯವನ್ನು ತಿಳಿಯಲು ಮುಂದಾಗಿದ್ದಾರೆ. ಪೆನ್‌ಡ್ರೈವ್ ಸೃಷ್ಟಿ ಮಾಡಿದವರಲ್ಲಿ ಮೊದಲ ಅನುಮಾನ ಕಾರ್ತಿಕ್‌ ಮೇಲಿದ್ದರೆ, ಎರಡನೇ ಅನುಮಾನ ದೇವರಾಜೇಗೌಡ ಅವರ ಮೇಲಿದೆ. ಇವರಿಬ್ಬರ ಜಾಡು ಬೆನ್ನತ್ತಿ ಎಚ್ಡಿಕೆ ಟೀಮ್ ಹೊರಟಿದೆ.

ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಈಗ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟಿಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟೀಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟಿಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲಾ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಇದನ್ನೂ ಓದಿ: Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

Continue Reading

ಕರ್ನಾಟಕ

Physical Abuse: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಅರೆಸ್ಟ್‌

Physical Abuse: ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ.

VISTARANEWS.COM


on

Physical Abuse
ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಅನ್ಯಕೋಮಿನ ಯುವಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ಎದುರು ಹಿಂದು ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
Koo

ಹುಬ್ಬಳ್ಳಿ: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಅನ್ಯಕೋಮಿ‌ನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಆಘಾತಕಾರಿ ವಿಷಯ ತಿಳಿಸಿದ್ದರು. ಮಗಳು ಗರ್ಭಿಣಿಯಾದ ಸುದ್ದಿ ತಿಳಿದು ಪೋಷಕರು ಕಂಗಾಲಾಗಿದ್ದರು. ಹೀಗಾಗಿ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ದಾಂಹುಸೇನ್ ಬಂಧಿತ ಆರೋಪಿ. ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ್ದ ಯುವಕ, ಇದರ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ವಿರುದ್ಧ ಹಿಂದುಪರ ಸಂಘಟನೆಗಳು ಆಕ್ರೋಶ ಹೊರಹಾಕಿ, ಆರೋಪಿಯನ್ನು ಕೂಡಲೇ ಬಂಧಿಸುವಂತೆ ಶುಕ್ರವಾರ ಸಂಜೆ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪ್ರಾಪ್ತೆ ಆಸ್ಪತ್ರೆಗೆ ಹೋಗಿದ್ದನ್ನು ಅರಿತ ಯುವಕ, ಆಕೆ ಕುಟುಂಬಸ್ಥರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಹೀಗಾಗಿ ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹಿಂದು ಪರ ಸಂಘಟನೆಗಳ ಆಕ್ರೋಶ ಹೊರಹಾಕಿವೆ.

ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Kidnap case in Bengaluru

ಬೆಂಗಳೂರು: ಹಣಕ್ಕಾಗಿ ಯುವಕನೊಬ್ಬ ತನ್ನ ಸಹಚರರೊಂದಿಗೆ ಸೇರಿ ಗೆಳೆಯನನ್ನೇ ಕಿಡ್ನ್ಯಾಪ್‌ ಮಾಡಿ (Kidnap Case) ಜೈಲುಪಾಲಾಗಿದ್ದಾನೆ. ಕೇರಳ ಮೂಲದ ಸಾಹೀಲ್ ಸಲೀಂ ಕಿಡ್ನ್ಯಾಪ್‌ ಆದವನು. ಪ್ರಮುಖ ಆರೋಪಿ ಮುಬಾರಕ್‌ ಎಂಬಾತ ತನ್ನ ಸ್ನೇಹಿತ ಸುಂದರ್‌ ಜತೆಗೆ ಮತ್ತೊಂದಿಷ್ಟು ಜನರೊಟ್ಟಿಗೆ ಪ್ಲ್ಯಾನ್‌ ಮಾಡಿ ಸಾಹೀಲ್‌ನನ್ನು ಕಿಡ್ನ್ಯಾಪ್‌ ಮಾಡಿದ್ದರು.

ಪದವಿ ವ್ಯಾಸಂಗ ಮಾಡುತ್ತಿದ್ದ ಸಾಹೀಲ್‌ ಬೆಂಗಳೂರಿನ ಸಂಪಿಗೆಹಳ್ಳಿಯ ಪಿಜಿವೊಂದರಲ್ಲಿ ವಾಸವಿದ್ದ. ಮುಬಾರಕ್ ಹಾಗೂ ಸಾಹೀಲ್ ಇಬ್ಬರು ಪಿಯುಸಿಯಲ್ಲಿ ಕ್ಲಾಸ್ ಮೇಟ್ಸ್ ಆಗಿದ್ದರು.

ಸಾಹೀಲ್ ಆರ್ಮಿ ಆಫೀಸರ್‌ ಮಗ.. ಆತನ ಬಳಿ ಸಿಕ್ಕಾಪಟ್ಟೆ ಹಣ ಇರುತ್ತೆ ಎಂದು ಕಿಡ್ನ್ಯಾಪ್‌ ಪ್ಲಾನ್ ಮಾಡಿದ್ದ. ಪಿಜಿಯಲ್ಲಿದ್ದ ಸಾಹೀಲ್‌ನನ್ನು ಕರೆಸಿ ಶೆಡ್‌ವೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಈ ವೇಳೆ ಸಾಹೀಲ್‌ನಿಂದ 25 ಸಾವಿರ ರೂ. ಹಣ ಪಡೆದು ಬಿಟ್ಟು ಕಳಿಸಿದ್ದರು. ಇದರಿಂದ ಹೆದರಿದ ಸಾಹೀಲ್‌ ಕೇರಳ ಸೇರಿದ್ದ.

ಮಗ ಪಿಜಿ ತೊರೆದು ಮನೆ ಸೇರಿದ್ದು ಪೋಷಕರಿಗೆ ಅನುಮಾನ ಮೂಡಿಸಿತ್ತು. ಹೀಗಾಗಿ ವಿಚಾರಿಸಿದಾಗ ಸಾಹಿಲ್‌ ತನ್ನ ತಂದೆ ಬಳಿ ನಡೆದಿದ್ದನ್ನು ತಿಳಿಸಿದ್ದ. ಸದ್ಯ ಸಾಹೀಲ್ ತಂದೆ ನೀಡಿದ ದೂರಿನನ್ವಯ ಸಂಪಿಗೆಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಿಗಾಗಿ ಬಲೆಬೀಸಿದ್ದಾರೆ.

6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ

ಯಾದಗಿರಿ: ಹಾಡಹಗಲೆ ದುಷ್ಕರ್ಮಿಯೊಬ್ಬ ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು (kidnap case) ಯತ್ನಿಸಿದ್ದಾರೆ. ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಘಟನೆ (Crime News) ನಡೆದಿದೆ. 6 ವರ್ಷದ ಸಂಜನಾ ಎಂಬಾಕೆ ಎಂದಿನಂತೆ ಸ್ನೇಹಿತೆ ಮನೆಯಿಂದ ಟ್ಯೂಶನ್‌ಗೆ ತೆರಳುತ್ತಿದ್ದಳು.

ಇದನ್ನೂ ಓದಿ: Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಈ ವೇಳೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಯೊರ್ವ ಬಾಲಕಿಯ ಕಣ್ಣಿಗೆ ಸ್ಪ್ರೇ ಮಾಡಿದ್ದಾನೆ. ಬಳಿಕ ಅಪಹರಿಸಲು ಯತ್ನಿಸಿದಾಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಗೆ ಓಡಿ ಬಂದಿದ್ದಾಳೆ. ಸದ್ಯ ಪೋಷಕರ ದೂರಿನ ಮೇರೆಗೆ ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Jai Shri Ram Slogan
ಕರ್ನಾಟಕ22 mins ago

Jai Shri Ram Slogan: ಜೈ ಶ್ರೀರಾಮ್ ಎಂದು ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದ ಕಾಂಗ್ರೆಸ್‌ ಮುಖಂಡ

Ballari Lok Sabha constituency Congress candidate E Tukaram election campaign in Kuduthini
ಬಳ್ಳಾರಿ25 mins ago

Lok Sabha Election 2024: ಕುಡುತಿನಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಭರ್ಜರಿ ರೋಡ್‌ ಶೋ

IPL 2024
ಕ್ರೀಡೆ25 mins ago

IPL 2024 : ರೋಹಿತ್​ ಶರ್ಮಾ ಬೆಂಚು ಕಾಯುವಂತೆ ಮಾಡಿದ ಹಾರ್ದಿಕ್ ಪಾಂಡ್ಯ

Darshanam Mogulaiah
ದೇಶ31 mins ago

Darshanam Mogulaiah: 2 ವರ್ಷದ ಹಿಂದೆ ಪದ್ಮಶ್ರೀ ಪಡೆದ ಸಾಧಕ ಈಗ ಹೊಟ್ಟೆಪಾಡಿಗಾಗಿ ಕೂಲಿ ಕಾರ್ಮಿಕ!

Prajwal Revanna Case Who is the kingpin of Prajwal video pen drive HDK team is on its way
ಕ್ರೈಂ36 mins ago

Prajwal Revanna Case: ಪ್ರಜ್ವಲ್‌ ವಿಡಿಯೊ ಪೆನ್‌ಡ್ರೈವ್ ಕಿಂಗ್‌ಪಿನ್ ಯಾರು? ಬೆನ್ನತ್ತಿ ಹೊರಟಿದೆ ಎಚ್‌ಡಿಕೆ ಟೀಂ!

KL Rahul
ಕ್ರೀಡೆ47 mins ago

KL Rahul : ವಿಶ್ವ ಕಪ್​ ತಂಡಕ್ಕೆ ಕೆ. ಎಲ್​ ರಾಹುಲ್​ ಬೇಡ ಅಂದಿದ್ದು ರೋಹಿತ್ ಶರ್ಮಾ; ಆಂತರಿಕ ಮಾಹಿತಿ ಬಹಿರಂಗ

Physical Abuse
ಕರ್ನಾಟಕ1 hour ago

Physical Abuse: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಅರೆಸ್ಟ್‌

Rachita Taneja
ದೇಶ1 hour ago

Rachita Taneja: ಭಾರತದ ಕಾರ್ಟೂನಿಸ್ಸ್ ರಚಿತಾ ತನೇಜಾಗೆ ಕೋಫಿ ಅನ್ನಾನ್‌ ಪ್ರಶಸ್ತಿ ಗರಿ

Rahul Gandhi
ಪ್ರಮುಖ ಸುದ್ದಿ1 hour ago

Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Prajwal Revanna Case Kidnapping case filed against Revanna Anticipatory bail plea postponed
ಕ್ರೈಂ1 hour ago

Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ6 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ17 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌