Site icon Vistara News

Murder Case: ಕ್ಷುಲ್ಲಕ ಕಾರಣಕ್ಕೆ ನಡೆದ ಅಣ್ಣ ತಮ್ಮನ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ruckus over financial issues, Son-in-law's gruesome murder by father-in-law in yadgiri

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವುದು ಜಿಲ್ಲೆಯ ಕುಷ್ಟಗಿ ತಾಲೂಕಿನ ಪಟ್ಟಲಚಿಂತಿ ಗ್ರಾಮದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಅಣ್ಣನನ್ನೇ ಸಹೋದರ ಭೀಕರವಾಗಿ ಕೊಲೆ (Murder Case) ಮಾಡಿದ್ದಾನೆ.

ಯಮನೂರಪ್ಪ ಬಸಪ್ಪ ಕಡಿವಾಲರ (32) ಕೊಲೆಯಾದ ವ್ಯಕ್ತಿ. ಮಲ್ಲಪ್ಪ ಕಡಿವಾಲರ (22) ಕೊಲೆ ಮಾಡಿದ ಆರೋಪಿ. ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು, ಸ್ನಾನದ ಕೋಣೆಯಲ್ಲಿ ಯಮನೂರಪ್ಪ ಬಸಪ್ಪ ಕಡಿವಾಲರನನ್ನು ಆರೋಪಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಹನುಮಸಾಗರ ಠಾಣೆ ಪೊಲೀಸರು ಬಂಧಿಸಿದ್ದು, ಕುಷ್ಟಗಿ ಸಿಪಿಐ ನಿಂಗಪ್ಪ ರುದ್ರಪ್ಪಗೋಳ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಟ್ರ್ಯಾಕ್ಟರ್ ತೊಳೆಯಲು ಹೋಗಿ ಯುವಕ ನೀರು ಪಾಲು.

ಹುಬ್ಬಳ್ಳಿ: ಟ್ರ್ಯಾಕ್ಟರ್ ತೊಳೆಯಲು ಹೋಗಿದ್ದಾಗ ಯುವಕ ನೀರು ಪಾಲಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಕ್ವಾರಿಯಲ್ಲಿ ಟ್ರ್ಯಾಕ್ಟರ್ ತೊಳೆಯಲು ಹೋಗಿದ್ದ ಸುನಿಲ್ (17) ಎಂಬ ಬಾಲಕ ಮೃತಪಟ್ಟಿದ್ದಾನೆ. ನೀರಿನಲ್ಲಿ ಮುಳುಗಿದ್ದ ಸುನೀಲ್ ಮೃತದೇಹವನ್ನು ಅಗ್ನಿ ಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದಾರೆ.

ಇದನ್ನೂ ಓದಿ | ಸ್ನೇಹಿತನ ಹೆಂಡ್ತಿಯನ್ನೇ ಅಪಹರಿಸಿ ಅತ್ಯಾಚಾರವೆಸಗಿದ ಕಾಮುಕರು; ಒಬ್ಬ ಸೆರೆ, ಮತ್ತೊಬ್ಬ ಪರಾರಿ

ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ನೇಣಿಗೆ ಶರಣು

ಬಾಗಲಕೋಟೆ: ಅನಾರೋಗ್ಯದಿಂದ ಮನನೊಂದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಾಲೂಕಿನ ಗದ್ದನಕೇರಿ ಕ್ರಾಸ್‌ನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ರಮೇಶ ಗೋಡಿಹಾಳ (34) ಮೃತ.

ಹುಬ್ಬಳ್ಳಿಯ ಖಾಸಗಿ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಮೇಶ ಗೋಡಿಹಾಳ, ಕೆಲಸದ ನಿಮಿತ್ತ ಗದ್ದನಕೇರಿ ಕ್ರಾಸ್‌ನ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ. ಆದರೆ, ಗುರುವಾರ ಲಾಡ್ಜ್‌ ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಾನು ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದು, ಈ ಬಗ್ಗೆ ಮನೆಯವರಿಗೆ ಗೊತ್ತಿಲ್ಲ ಎಂದು ಡೆತ್ ನೋಟ್‌ನಲ್ಲಿ ಬರೆದು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version