Site icon Vistara News

Murder Case: ದಾವಣಗೆರೆಯಲ್ಲಿ ಯುವಕನೊಬ್ಬನ ಕುತ್ತಿಗೆ ಕೊಯ್ದು, ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

Uttar Pradesh Man dead after being trapped in lift In Bengaluru

ದಾವಣಗೆರೆ: ಇಲ್ಲಿನ ಶಾಮನೂರು ರಸ್ತೆಯ ಬಿಂದಾಸ್ ಬಾರ್ ಬಳಿ ಕುತ್ತಿಗೆ ಕೊಯ್ದು, ಕಲ್ಲು ಎತ್ತಿ ಹಾಕಿ ಯುವಕನೊಬ್ಬನ ಬರ್ಬರ ಹತ್ಯೆ (Murder Case) ಮಾಡಲಾಗಿದೆ. ಹತ್ಯೆಯಾಗಿರುವ ಯುವಕನ ವಯಸ್ಸು ಸುಮಾರು 25 ರಿಂದ 30 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ.

ಯುವಕನ ಮುಖದ ಮೇಲೆ ಕಲ್ಲು ಎತ್ತಿ ಹಾಕಿದ್ದರಿಂದ ಗುರುತು ಪತ್ತೆಯಾಗಿಲ್ಲ. ಸದ್ಯ ಮೃತನ ಪ್ಯಾಂಟ್‌ ಜೇಬಿನಲ್ಲಿ ಬೆಂಗಳೂರಿನಿಂದ ದಾವಣಗೆರೆಗೆ ಬಂದಿರುವ ರೈಲ್ವೆ ಟಿಕೆಟ್ ಪತ್ತೆ ಆಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Molestation Case: ಅತ್ಯಾಚಾರಕ್ಕೆ ಯತ್ನ; ಚಿತ್ರದುರ್ಗದಲ್ಲಿ ಕಾಮುಕನ ಕಟ್ಟಿ ಹಾಕಿ ಥಳಿಸಿದ ಗ್ರಾಮಸ್ಥರು

ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಯುವಕನ ಮೃತದೇಹವನ್ನು ರವಾನೆ ಮಾಡಲಾಗಿದೆ. ಆರೋಪಿಗಳ ಪತ್ತೆಗಾಗಿ ಶಾಮನೂರು ರಸ್ತೆಯ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version