Site icon Vistara News

Murder Case | ಮಾನ್ವಿಯಲ್ಲಿ ಒಡಹುಟ್ಟಿದ ತಮ್ಮನಿಂದಲೇ ಅಣ್ಣನ ಕೊಲೆ

Crime Image

ರಾಯಚೂರು: ಒಡಹುಟ್ಟಿದ ತಮ್ಮನಿಂದಲೇ ಅಣ್ಣನ ಕೊಲೆ ಮಾಡಿರುವ ಘಟನೆ (Murder Case) ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ವಾರ್ಡ್ ನಂ.9 ರಲ್ಲಿ ನಡೆದಿದೆ. ಪರಿಷತ್ ರಾಜ್ (28) ಕೊಲೆಯಾದವ.

ಮೃತ ಯುವಕ ನಿತ್ಯ ಕುಡಿದು ಬಂದು ಕಿರಿಕ್ ಮಾಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ಸಹೋದರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿದ್ದ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ತಾಲೂಕು ಆಸ್ಪತ್ರೆಗೆ ಶವವನ್ನು ರವಾನೆ ಮಾಡಲಾಗಿದೆ.

ಇದನ್ನೂ ಓದಿ | Santro Ravi Case | ಸ್ಯಾಂಟ್ರೋ ರವಿ ಸಿಕ್ಕಿಬಿದ್ದಿದ್ದು ಗುಜರಾತ್‌ನಲ್ಲಿ: 1500 ಕಿ.ಮೀ ಚೇಸ್‌ ಮಾಡಿ ಹಿಡಿದ ಪೊಲೀಸರು

Exit mobile version