Site icon Vistara News

Murder Case: ತೀರ್ಥಹಳ್ಳಿಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಜೋಡಿ ಕೊಲೆ; ಹಂತಕ ಅರೆಸ್ಟ್‌

ಜೋಡಿ ಕೊಲೆ

ಜೋಡಿ ಕೊಲೆ

ಶಿವಮೊಗ್ಗ: ತೀರ್ಥಹಳ್ಳಿಯ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಜೋಡಿ (double murders case) ಹತ್ಯೆಯಾಗಿದೆ. ಮಂಜಪ್ಪ (45), ಬೀರಪ್ಪ (46) ಹತ್ಯೆಯಾದವರು. ರಾಜಪ್ಪ ಎಂಬಾತನಿಂದ ಜೋಡಿ ಹತ್ಯೆಯಾಗಿದೆ. ಬುಧವಾರ (ಮೇ 17) ರಾತ್ರಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಮೃತರು ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.

ಕುರುವಳ್ಳಿ ಸಮೀಪ ನಿರ್ಮಾಣ ಹಂತದಲ್ಲಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಮೃತರು ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಬಂದಿದ್ದ, ದಾವಣಗೆರೆ ಮೂಲದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ. ಇದೇ ತಿಂಗಳ 25ರಂದು ಸಮುದಾಯ ಭವನವು ಉದ್ಘಾಟನೆಗೊಳ್ಳಬೇಕಿತ್ತು.

ಇದನ್ನೂ ಓದಿ: Weather Report: ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಬೆಂಗಳೂರು ಸೇರಿ ಇಲ್ಲೆಲ್ಲ ವರ್ಷಧಾರೆ

ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಮೃತರು, ಆರೋಪಿ ನಡುವೆ ಹಣದ ವ್ಯವಹಾರಕ್ಕೆ ಜಗಳ ನಡೆದಿತ್ತು ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಡಿದ ಅಮಲಿನಲ್ಲಿ ಹತ್ಯೆ ಮಾಡಿರಬಹುದೆಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version