Site icon Vistara News

Murder Case: ಕೌಟುಂಬಿಕ ಕಲಹ; ಪತ್ನಿಯನ್ನು ಹಾರೆಯಿಂದ ಬರ್ಬರವಾಗಿ ಹತ್ಯೆ ಮಾಡಿದ ಪತಿ ಬಂಧನ

family feud; Man arrested for brutally killing his wife with a jump

family feud; Man arrested for brutally killing his wife with a jump

ವಿಜಯನಗರ: ಇಲ್ಲಿನ ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ ಗ್ರಾಮದಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಹತ್ಯೆ (Murder Case) ಮಾಡಿರುವ ಘಟನೆ ನಡೆದಿದೆ. ಲಕ್ಷ್ಮಿ (33) ಮೃತ ದುರ್ದೈವಿ.

ಭಂಗಿ ಮಲ್ಲಪ್ಪ (40) ಎಂಬಾತ ಪತ್ನಿ ಲಕ್ಷ್ಮಿಯನ್ನು ಹಾರೆಯಿಂದ ಇರಿದು ಕೊಂದಿದ್ದಾನೆ. ಕೌಟುಂಬಿಕ ಕಲಹವು ಕೊಲೆಯಲ್ಲಿ ಅಂತ್ಯವಾಗಿದೆ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರೆಲ್ಲರೂ ಜಮಾಯಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಹತ್ಯೆ ವಿಷಯ ಕೇಳಿ ಜಮಾಯಿಸಿದ ಜನರು

ಭಂಗಿ ಮಲ್ಲಪ್ಪ ಮತ್ತು ಲಕ್ಷ್ಮಿ ದಂಪತಿಗೆ ಮೂರು ಮಕ್ಕಳಿದ್ದು, ಇದೀಗ ತಂದೆಯ ಕೃತ್ಯದಿಂದ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದಾರೆ. ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಆದರೆ, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: Sindhuri Vs Roopa : ಶಾಸಕರ ಜತೆ ಸಂಧಾನ ಅಂದ್ರೆ ಏನರ್ಥ?‌ ಸಿಂಧೂರಿ ವಿರುದ್ಧ IPS ರೂಪಾ ಗರಂ, 19 ಆರೋಪಗಳ ಚಾರ್ಜ್‌ಶೀಟ್

ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತಷ್ಟು ತಾಜಾ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version