Site icon Vistara News

Murder Case: ಕೊಡಗಿನಲ್ಲಿ ಮಗನನ್ನು ಗುಂಡಿಕ್ಕಿ ಕೊಂದ ತಂದೆ

Father shoots dead son in Kodagu

Father shoots dead son in Kodagu

ಕೊಡಗು/ಹುಬ್ಬಳ್ಳಿ: ಇಲ್ಲಿನ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ತಂದೆಯೇ ಮಗನನ್ನು ಗುಂಡಿಟ್ಟು ಹತ್ಯೆ (Murder Case) ಮಾಡಿರುವ ಘಟನೆ ನಡೆದಿದೆ. ನಂದೇಟಿರ ನಿರನ್ (28) ಮೃತ ದುರ್ದೈವಿ.

ನಿರನ್‌ ತಂದೆ ನಂದೇಟಿರ ಚಿಟ್ಟಿಯಪ್ಪ (58) ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್‌ ರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹವನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ್ದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಹಳೇ ವೈಷಮ್ಯಕ್ಕೆ ರೌಡಿಶೀಟರ್‌ ಕಗ್ಗೊಲೆ

ಹಳೇ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಇರಿದು ರೌಡಿಶೀಟರ್ ಒಬ್ಬನನ್ನು ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಸಂತೋಷ ನಗರದಲ್ಲಿ ನಾಗರಾಜ ಚಲವಾದಿ (26) ಎಂಬಾತನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಇದನ್ನೂ ಓದಿ: Sindhuri Vs Roopa : ಸಿಂಧೂರಿ- ರೂಪಾ ಜಗಳದಲ್ಲಿ ಡಿ.ಕೆ. ರವಿ ಪತ್ನಿ ಕುಸುಮಾ ಎಂಟ್ರಿ: ಕರ್ಮ ಫಲ ಸಿಕ್ಕೇ ಸಿಗುತ್ತದೆ ಅಂತ ಹೇಳಿದ್ಯಾರಿಗೆ?

ಹಲ್ಲೆಗೊಳಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ನಾಗರಾಜನನ್ನು ಕಿಮ್ಸ್ ಆಸ್ಪತ್ರೆಯಲ್ಲಿ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಈ ಸಂಬಂಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Exit mobile version