Site icon Vistara News

Murder Case : ನಡುರಸ್ತೆಯಲ್ಲೇ ಚಿಮ್ಮಿತು ಗ್ರಾ.ಪಂ ಅಧ್ಯಕ್ಷನ ರಕ್ತ; ಹಳೆ ವೈಷಮ್ಯಕ್ಕೆ ಭೀಕರ ಹತ್ಯೆ

Madara gram panchayat president Gowdappa Gowda Patil murdered

ಕಲಬುರಗಿ: ಜನರು ಓಡಾಡುವ ಹೊತ್ತಿನಲ್ಲೆ ಗ್ರಾಮ ಪಂಚಾಯತ್‌ ಅಧ್ಯಕ್ಷನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಬರ್ಬರವಾಗಿ ಹತ್ಯೆ (Murder Case) ಮಾಡಿದ್ದಾರೆ. ಮದರಾ(ಬಿ) ಗ್ರಾಮ ಪಂಚಾಯತ್ ಅಧ್ಯಕ್ಷ ಗೌಡಪ್ಪಗೌಡ ಪಾಟೀಲ್ ಕೊಲೆಯಾದವರು.

ಅಫಜಲಪುರ ತಾಲೂಕಿನ ಚೌಡಾಪುರ ಬಸ್ ನಿಲ್ದಾಣದ ಬಳಿ ಗೌಡಪ್ಪಗೌಡ ಪಾಟೀಲ್‌ ನಿಂತಿದ್ದರು. ಈ ವೇಳೆ ಬಂದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಇವರಿಂದ ತಪ್ಪಿಸಿಕೊಂಡು ಓಡಲು ಯತ್ನಿಸಿದ್ದಾರೆ. ಆದರೂ ಬಿಡದೇ ಬೆನ್ನಹತ್ತಿ ಕೊಚ್ಚಿ ಕೊಲೆಗೈದಿದ್ದಾರೆ.

ಹತ್ಯೆಯಾದ ವ್ಯಕ್ತಿ

ಇದನ್ನೂ ಓದಿ: Drunk and drive : ಕುಡಿದು ಸ್ಕೂಲ್‌ ಬಸ್‌ ಚಲಾಯಿಸಿದ ಡೈವರ್‌; ಹಾರಿಹೋಯ್ತು ವ್ಯಕ್ತಿಯ ಪ್ರಾಣಪಕ್ಷಿ

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಗಾಣಗಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದು, ಹತ್ಯೆ ಮಾಡಿದ ಹಂತಕರ ಹುಡುಕಾಟ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿರುವ ಸಿಸಿ ಟಿವಿಯನ್ನು ಪರಿಶೀಲನೆ ನಡೆಸಿದ್ದಾರೆ. ನಡುರಸ್ತೆಯಲ್ಲೇ ಮಚ್ಚು-ಲಾಂಗು ಝಳಪಿಸಿರುವುದನ್ನು ಕಂಡು ಚೌಡಾಪುರ ಜನರು ಆತಂಕಗೊಂಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version