Site icon Vistara News

Murder Case | ತುಮಕೂರಲ್ಲಿ ಕಲ್ಲಿನಿಂದ ಹೊಡೆದು ವ್ಯಕ್ತಿಯ ಭೀಕರ ಕೊಲೆ, ವೆಲ್ಡಿಂಗ್‌ ವೃತ್ತಿ ಮಾಡುತ್ತಿದ್ದರು

ತುಮಕೂರು: ಇಲ್ಲಿನ ಕ್ಯಾತಸಂದ್ರ ಸರ್ಕಲ್ ಬಳಿ ವ್ಯಕ್ತಿಯನ್ನು ಕಲ್ಲಿನಿಂದ ಹೊಡೆದು ಭೀಕರವಾಗಿ ಹತ್ಯೆ (Murder Case) ಮಾಡಲಾಗಿದೆ. ಬೆಂಗಳೂರಿನ ಲಗ್ಗೆರೆ ನಿವಾಸಿಯಾಗಿರುವ ಕುಮಾರ್ (36) ಕೊಲೆಯಾದ ವ್ಯಕ್ತಿ.

ಕುಮಾರ್‌ ವೃತ್ತಿಯಲ್ಲಿ ವೆಡ್ಡಿಂಗ್ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಹತ್ಯೆ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ | Road Accident | ಸ್ಕೂಟಿಯಲ್ಲಿ ತೆರಳುತ್ತಿದ್ದ ದಂಪತಿಗೆ ಯಮಸ್ವರೂಪಿಯಾದ ಕಂಟೇನರ್‌; ಪತ್ನಿ ಸಾವು, ಪತಿ ಸ್ಥಿತಿ ಗಂಭೀರ

Exit mobile version