Site icon Vistara News

Murder Case : ಬೆತ್ತಲೆಗೊಳಿಸಿ ಇಟ್ಟಿಗೆ ಕಲ್ಲಿನಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ!

Crime Sense

ಹಾಸನ: ಹಾಸನ (Hassan News) ನಗರದ ಕಾಟೀಹಳ್ಳಿ‌ ಬಡಾವಣೆಯಲ್ಲಿ ವ್ಯಕ್ತಿಗೆ ಇಟ್ಟಿಗೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ (Murder Case) ಮಾಡಲಾಗಿದೆ. ಕಾಂತರಾಜು (45) ಕೊಲೆಯಾದ ದುರ್ದೈವಿ.

ಹಾಸನ – ಅರಸೀಕೆರೆಯ ಮುಖ್ಯರಸ್ತೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಕಾಂತರಾಜು ಮೃತದೇಹವು ಪತ್ತೆಯಾಗಿದೆ. ಕಾಂತರಾಜು ಕಾಟೀಹಳ್ಳಿ‌ ಬಡಾವಣೆಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಕಳೆದ ರಾತ್ರಿ ಸ್ನೇಹಿತರೊಂದಿಗೆ ಕುಡಿದು ಗಲಾಟೆ ಮಾಡಿಕೊಂಡಿದ್ದ ಎನ್ನಲಾಗಿದೆ.

ಗಲಾಟೆ ವಿಕೋಪಕ್ಕೆ ಹೋಗಿ ಸ್ನೇಹಿತರೇ ಹತ್ಯೆ ಮಾಡಿರುವ ಶಂಕೆ ಇದೆ. ಇಟ್ಟಿಗೆ ಹಾಗೂ ಕಲ್ಲಿನಿಂದ ತಲೆಗೆ ಹೊಡೆದು ಹಲ್ಲೆ ಮಾಡಲಾಗಿದೆ. ತೀವ್ರ ರಕ್ತಸ್ರಾವವಾಗಿ ಕಾಂತರಾಜು ಮೃತಪಟ್ಟಿದ್ದಾನೆ. ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದ ಕೋಟೆ ಬಡಾವಣೆಯ ನಿವಾಸಿಯಾಗಿದ್ದ.

ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ತನಿಖೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ‌ ಪತ್ತೆಗೆ ಬಲೆ ಬೀಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version