Site icon Vistara News

Murder Case : ಕುಡಿದ ಮತ್ತಿನಲ್ಲಿ ಸಂಬಂಧಿಕರ ಗಲಾಟೆ; ಕೊಲೆಯಲ್ಲಿ ಅಂತ್ಯ!

murder case in shivamogga

ಶಿವಮೊಗ್ಗ: ಶಿವಮೊಗ್ಗದ (Shivamogga News) ವಿದ್ಯಾನಗರದಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯ (Murder case) ಹತ್ಯೆಯಾಗಿದೆ. ಜ್ಞಾನೇಶ್ವರ್ (45) ಕೊಲೆಯಾದವರು.

ಹತ್ಯೆಯಾದ ಜ್ಞಾನೇಶ್ವರ್ ಶಿವಮೊಗ್ಗದ ಸುಭಾಷ್ ನಗರ ನಿವಾಸಿ ಆಗಿದ್ದು, ಸಂಬಂಧಿಕರ ಮನೆಗೆ ಬಂದಿದ್ದರು. ಕುಡಿದ ಮತ್ತಿನಲ್ಲಿ ಜ್ಞಾನೇಶ್ವರ್‌ಗೂ ಆತನ ಸಂಬಂಧಿಕನ ನಡುವೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಇಬ್ಬರು ಜೋರಾಗಿ ಗಲಾಟೆ ಮಾಡಿಕೊಂಡಿದ್ದು, ಸಂಬಂಧಿಕನಿಂದಲೇ ಕೊಲೆಯಾಗಿ ಹೋಗಿದ್ದಾನೆ.

ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದ ಜ್ಞಾನೇಶ್ವರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿದು ನಡು ರಸ್ತೆಯಲ್ಲೇ‌ ಹೊಡೆದಾಟ

ತುಮಕೂರಿನ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿ ಕುಡಿದ ಮತ್ತಿನಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆಯಿಂದ ಹಿಡಿದ ಯುವಕರ ಗುಂಪು ಪರಸ್ಪರ ಬಡಿದಾಡಿಕೊಂಡಿದೆ. ನಿನ್ನೆ ರಾತ್ರಿ (ಜು.29) ಬೆಂಗಳೂರು- ಹಾಸನ ರಸ್ತೆಯಲ್ಲಿರುವ ಡಾಬಾವೊಂದರಲ್ಲಿ ಯುವಕರ ಗುಂಪು ಪಾರ್ಟಿ ಮಾಡಿತ್ತು.

ಬಳಿಕ ಕ್ಷುಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ನಡು ರಸ್ತೆಯಲ್ಲೇ‌ ಹೊಡೆದಾಡಿಕೊಂಡಿದ್ದಾರೆ. ಅಮೃತ್ತೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version