Murder Case : ಕಗ್ಗತ್ತಲಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೈಂಟರ್‌ನ ಕೊಲೆ! - Vistara News

ಕರ್ನಾಟಕ

Murder Case : ಕಗ್ಗತ್ತಲಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೈಂಟರ್‌ನ ಕೊಲೆ!

Murder Case : ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ಹಳೇ ವೈಷ್ಯಮವೇ ಕಾರಣ ಎನ್ನಲಾಗಿದೆ.

VISTARANEWS.COM


on

murder case in mandya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ರಾತ್ರಿ ಕೆಲಸ ಮುಗಿಸಿ ಮನೆಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪೈಂಟರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder case) ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದ ಬಳಿ ಘಟನೆ ನಡೆದಿದೆ. ಯೋಗೇಶ್ (34) ಹತ್ಯೆಯಾದವರು.

ಪೈಂಟ್ ಕೆಲಸ ಮಾಡಿಕೊಂಡಿದ್ದ ಯೋಗೇಶ್ ನಿನ್ನೆ ರಾತ್ರಿ ನಡೆದುಕೊಂಡು ಬರುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಮನಬಂದಂತೆ ಮಚ್ಚು ಬೀಸಿ ಹಲ್ಲೆ ಮಾಡಿ ರಸ್ತೆ ಬದಿಗೆ ಬೀಸಾಕಿದ್ದಾರೆ. ಗಂಭೀರ ಗಾಯಗೊಂಡಿದ್ದ ಯೋಗೇಶ್‌ ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟಿದ್ದಾರೆ.

ಹತ್ಯೆಗೆ ಹಳೆ ವೈಷಮ್ಯವೇ ಕಾರಣ ಎಂದು ಶಂಕಿಸಲಾಗಿದೆ. ದಾರಿಹೋಕರು ಹತ್ಯೆಯಾಗಿ ಬಿದ್ದಿದ್ದ ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಕೆಆರ್‌ಎಸ್‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಹತ್ಯೆ ವಿಷಯ ತಿಳಿಯುತ್ತಿದ್ದಂತೆ ನೂರಾರು ಮಂದಿ ಜಮಾಯಿಸಿದ್ದರು.

ಇದನ್ನೂ ಓದಿ: Road Accident: ಮೂವರ ಪ್ರಾಣ ತೆಗೆದ ಅಪಘಾತಗಳು!

ಮಹಿಳೆಯರನ್ನು ನಗ್ನವಾಗಿ ಎಡಿಟ್‌ ಮಾಡುವ ಎಐ ಆ್ಯಪ್‌ಗಳ ಜನಪ್ರಿಯತೆ ಹೆಚ್ಚಳ!

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (Artificial Intelligence-AI) ಸದ್ದು ಮಾಡುತ್ತಿದೆ. ಈ ತಂತ್ರಜ್ಞಾನವನ್ನು ಸಮಾಜ ಘಾತುಕ ವ್ಯಕ್ತಿಗಳು ವ್ಯಾಪಕವಾಗಿ ಬಳಸುತ್ತಿರುವುದು ಕಳವಳಕಾರಿ ಎಂದು ಸಂಶೋಧಕರು ತಿಳಿಸಿದ್ದಾರೆ. ಎಐ ಅಪ್ಲಿಕೇಷನ್‌ ಬಳಸಿ ವ್ಯಕ್ತಿಗಳ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡುವ ಪ್ರವೃತ್ತಿ ಹೆಚ್ಚುತ್ತಿದೆ. ಅದರಲ್ಲೂ ಮಹಿಳೆಯರ ಫೋಟೊಗಳನ್ನು ವಿವಸ್ತ್ರಗೊಳಿಸುವಂತೆ ಎಡಿಟ್‌ ಮಾಡುವ ಎಐ ಅಪ್ಲಿಕೇಶನ್‌ ಮತ್ತು ವೆಬ್‌ಸೈಟ್‌ಗಳ ಜನಪ್ರಿಯತೆ ಅಧಿಕವಾಗುತ್ತಿದೆ ಎನ್ನುವುದು ಅಧ್ಯಯನದ ಮೂಲಕ ಸಾಬೀತಾಗಿದೆ.

ಸೆಪ್ಟೆಂಬರ್‌ನಲ್ಲಿ 2 ಕೋಟಿಗಿಂತ ಅಧಿಕ ಮಂದಿ ಇಂತಹ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿದ್ದಾರೆ ಎಂದು ಸಾಮಾಜಿಕ ನೆಟ್‌ವರ್ಕ್‌ ವಿಶ್ಲೇಷಣಾ ಕಂಪೆನಿ ಗ್ರಾಫಿಕಾ ಕಂಡುಕೊಂಡಿದೆ. ಗ್ರಾಫಿಕಾ ಪ್ರಕಾರ, ಈ ವಿವಸ್ತ್ರಗೊಳಿಸುವ ಅಥವಾ ನಗ್ನಗೊಳಿಸುವಂತೆ ಎಡಿಟ್‌ ಮಾಡುವ ವೆಬ್‌ಸೈಟ್‌ಗಳು ಜನಪ್ರಿಯ ಸಾಮಾಜಿಕ ನೆಟ್‌ವರ್ಕ್‌ಗಳನ್ನು ಬಳಸುತ್ತವೆ. ಉದಾಹರಣೆಗೆ ಈ ವರ್ಷ ಎಕ್ಸ್ ಮತ್ತು ರೆಡ್ಡಿಟ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಅಪ್ಲಿಕೇಶನ್‌ಗಳ ಜಾಹೀರಾತು ಲಿಂಕ್‌ಗಳ ಸಂಖ್ಯೆ 2,400%ಕ್ಕಿಂತ ಹೆಚ್ಚಾಗಿದೆ. ಫೋಟೊದಲ್ಲಿ ವ್ಯಕ್ತಿಯು ನಗ್ನವಾಗಿರುವಂತೆ ಮರುಸೃಷ್ಟಿಸಲು ಈ ಆ್ಯಪ್‌ಗಳು ಎಐ ಅನ್ನು ಬಳಸುತ್ತವೆ. ಅದರಲ್ಲೂ ಅನೇಕ ಆ್ಯಪ್‌ಗಳು ಮಹಿಳೆಯರ ಮೇಲೆ ಮಾತ್ರ ಕಾರ್ಯನಿರ್ವಹಿಸುತ್ತವೆ.

‘ಡೀಪ್‌ಫೇಕ್’ ಕೂಡ ಅಂತಹದ್ದೇ ಒಂದು ತಂತ್ರಜ್ಞಾನ. ‘ಡೀಪ್‌ಫೇಕ್’ ವಿಡಿಯೊಗಳನ್ನು ಕೃತಕ ಬುದ್ಧಿಮತ್ತೆಯ ಸಹಾಯದಿಂದ ಮಾಡಲಾಗುತ್ತದೆ. ಇವು ನೈಜವಾಗಿಯೇ ಕಾಣಿಸುತ್ತವೆ. ಡೀಪ್‌ಫೇಕ್ ವೀಡಿಯೊದಲ್ಲಿ ಸಾಮಾನ್ಯವಾಗಿ ಬೇರೆ ಬೇರೆ ವ್ಯಕ್ತಿಗಳ ದೇಹ ಮತ್ತು ಮುಖವನ್ನು ಡಿಜಿಟಲ್ ಮ್ಯಾನಿಪುಲೇಟ್ ಮಾಡಿ ಜೋಡಿಸಿ ಒರಿಜಿನಲ್‌ ಆಗಿ ಕಾಣುವಂತೆ ಮಾಡಲಾಗುತ್ತದೆ.

ಗೂಗಲ್‌ ಹೇಳುವುದೇನು?

ಅಶ್ಲೀಲ ವಿಷಯವನ್ನು ಹೊಂದಿರುವ ಜಾಹೀರಾತುಗಳಿಗೆ ಕಂಪೆನಿಯು ಅನುಮತಿ ನೀಡುವುದಿಲ್ಲ ಎಂದು ಗೂಗಲ್ ವಕ್ತಾರರು ಹೇಳಿದ್ದಾರೆ. “ನಾವು ಪ್ರಶ್ನಾರ್ಹ ಜಾಹೀರಾತುಗಳನ್ನು ಪರಿಶೀಲಿಸಿದ್ದೇವೆ ಮತ್ತು ನಮ್ಮ ನೀತಿಗಳನ್ನು ಉಲ್ಲಂಘಿಸುವ ಜಾಹೀರಾತುಗಳನ್ನು ತೆಗೆದುಹಾಕುತ್ತಿದ್ದೇವೆ” ಎಂದು ಕಂಪೆನಿ ತಿಳಿಸಿದೆ.

ಅಶ್ಲೀಲ ವಿಷಯಗಳ ಯಾವುದೇ ಒಮ್ಮತವಿಲ್ಲದ ಮಾಹಿತಿಯನ್ನು ಸೈಟ್ ನಿಷೇಧಿಸುತ್ತದೆ ಮತ್ತು ಸಂಶೋಧನೆಯ ಪರಿಣಾಮವಾಗಿ ಹಲವಾರು ಡೊಮೇನ್‌ಗಳನ್ನು ನಿಷೇಧಿಸಿದೆ ಎಂದು ರೆಡ್ಡಿಟ್ ವಕ್ತಾರರು ಹೇಳಿದ್ದಾರೆ. ಈ ಕುರಿತು ಎಕ್ಸ್‌ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ಇಂತಹ ಕೆಲವು ಆ್ಯಪ್‌ಗಳು ತಿಂಗಳಿಗೆ 9.99 ಡಾಲರ್‌ ಶುಲ್ಕ ವಿಧಿಸುತ್ತವೆ. ಆದರೂ ಇವು ಸಾಕಷ್ಟು ಗ್ರಾಹಕರನ್ನು ಆಕರ್ಷಿಸುತ್ತಿವೆ ಎಂದು ಸಂಶೋಧಕರು ತಿಳಿಸಿದ್ದಾರೆ. ವಿವಸ್ತ್ರಗೊಳಿಸುವ ಅಪ್ಲಿಕೇಶನ್‌ ಒಂದನ್ನು ಉದಾಹರಣೆಯನ್ನಾಗಿ ತೆಗೆದುಕೊಂಡ ತಜ್ಞರೊಬ್ಬರು, ʼʼಇಂತಹ ವೆಬ್‌ಸೈಟ್‌ ದಿನಕ್ಕೆ ಸಾವಿರಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿದೆ. ಇವು ಜಾಹೀರಾತು ನೀಡಿ ಜನರನ್ನು ಆಕರ್ಷಿಸುತ್ತದೆ” ಎಂದು ವಿವರಿಸಿದ್ದಾರೆ. ಎಐ ತಂತ್ರಜ್ಞಾನದ ಪ್ರಗತಿಯು ಡೀಪ್‌ಫೇಕ್‌ ಸಾಫ್ಟ್‌ವೇರ್‌ ಅನ್ನು ಸುಲಭ ಮತ್ತು ಹೆಚ್ಚು ಪರಿಣಾಮಕಾರಿಯಾಗಿರಿಸುವುದು ಕಳವಳಕಾರಿ ಎಂದು ತಜ್ಞರು ಹೇಳುತ್ತಾರೆ. ಕೆಲವೊಮ್ಮೆ ಸಂತ್ರಸ್ತರಿಗೆ ಕಾನೂನು ಹೋರಾಟದ ಬಗ್ಗೆಯೂ ಅರಿವಿರುವುದಿಲ್ಲ ಎನ್ನುವುದು ಕೂಡ ಗಮನಿಸಬೇಕಾದ ವಿಚಾರ ಎಂದು ತಜ್ಞರು ಹೇಳುತ್ತಾರೆ.

ಯುಎಸ್ ಸರ್ಕಾರವು ಅಪ್ರಾಪ್ತರ ಈ ರೀತಿಯ ಚಿತ್ರಗಳನ್ನು ಉತ್ಪಾದಿಸುವುದನ್ನು ನಿಷೇಧಿಸಿದೆ. ನವೆಂಬರ್‌ನಲ್ಲಿ ಉತ್ತರ ಕೆರೊಲಿನಾದ ಮಕ್ಕಳ ಮನೋವೈದ್ಯರು ತಮ್ಮ ರೋಗಿಗಳ ಫೋಟೊಗಳನ್ನು ಇಂತಹ ಅಪ್ಲಿಕೇಶನ್‌ ಬಳಸಿ ಎಡಿಟ್‌ ಮಾಡಿದ್ದಾಕ್ಕಾಗಿ ಅವರಿಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಜನಪ್ರಿಯ ಹುಡುಕಾಟ ಪದವಾದ “ವಿವಸ್ತ್ರಗೊಳಿಸುವಿಕೆ (Undress)” ಎಂಬ ಕೀವರ್ಡ್ ಅನ್ನು ಟಿಕ್‌ಟಾಕ್‌ ನಿರ್ಬಂಧಿಸಿದೆ. ಈ ಪದವನ್ನು ಸರ್ಚ್‌ ಮಾಡಿದರೆ ಇದು “ನಮ್ಮ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ನಡವಳಿಕೆ ಅಥವಾ ವಿಷಯದೊಂದಿಗೆ ಸಂಬಂಧ ಹೊಂದಿರಬಹುದು” ಎಂದು ಎಚ್ಚರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಮೆಟಾ ಫ್ಲಾಟ್‌ಫಾರ್ಮ್‌ ಇಂಕ್ ವಿವಸ್ತ್ರಗೊಳಿಸುವ ಅಪ್ಲಿಕೇಶನ್‌ಗಳನ್ನು ಹುಡುಕಲು ಸಂಬಂಧಿಸಿದ ಪ್ರಮುಖ ಪದಗಳನ್ನು ನಿರ್ಬಂಧಿಸಲು ಪ್ರಾರಂಭಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Prajwal Revanna Case: ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಸಾಹಿತಿಗಳು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ ಎಂದೂ ಹೇಳಿದ್ದಾರೆ.

VISTARANEWS.COM


on

Prajwal Revanna Case Can women trust your government Writers open letter to Siddaramaiah
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿಗಳು, ಮಹಿಳಾ ಸಂಘಟನೆಗಳವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕೇಸ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆಯೂ ಅಸಮಾಧಾನವನ್ನು ಹೊರಹಾಕಿದ್ದಾರೆ. ಇನ್ನು ಈ ಸಂಬಂಧ 16 ಬೇಡಿಕೆಗಳನ್ನು ಮುಂದಿಡಲಾಗಿದೆ.

ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿಗಳಾದ ಡಾ. ಜಿ. ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ, ಕೆ, ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ,‌ ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಜನರಿಂದ ಈ ಪತ್ರವನ್ನು ಬರೆಯಲಾಗಿದೆ. ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ ಎಂದು ಬರೆದುಕೊಳ್ಳಲಾಗಿದೆ.

ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ಕುಟುಂಬದ ಬಗ್ಗೆ ಬೇಸರ

ಪ್ರಜಲ್ ರೇವಣ್ಣ ಅವರ ತಾತ, ತಂದೆ, ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಅಣ್ಣ, ತಮ್ಮ ಎಲ್ಲರೂ ಪ್ರಜಾಪ್ರಭುತ್ವದ ಎಲ್ಲ ಹುದ್ದೆಗಳನ್ನು, ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬವು ಪ್ರಜಾಪ್ರಭುತ್ವದ ಮುಸುಕಿನೊಳಗೆ ಪ್ರಜಾಪ್ರತಿನಿಧಿಗಳೆಂಬ ಧಿರಿಸು ಧರಿಸಿಕೊಂಡಿದ್ದಾರೆ. ಪ್ರಕರಣ ಹೊರ ಬಂದ ತಕ್ಷಣ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಬಾರದಾಗಿತ್ತು. ಹಗರಣ ಬಯಲಾಗಿ ಐದು ದಿನಗಳು ಆರೋಪಿಯನ್ನು ಸ್ವತಂತ್ರವಾಗಿ ಬಿಡಲಾಗಿದೆ. ಆತನ ಮೇಲೆ ಕಣ್ಗಾವಲನ್ನು ಹಾಕಿಲ್ಲ. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಸಂತ್ರಸ್ತರ ಕುಟುಂಬಗಳು ಮಾನಸಿಕ ಯಾತನೆಗಳಿಗೆ ಗುರಿಯಾಗಿವೆ. ಅಲ್ಲದೆ, ವಿಡಿಯೊಗಳು ಲಕ್ಷಾಂತರ ಜನರಿಗೆ ತಲುಪಿವೆ. ಇದರಿಂದ ಯುವಜನರು, ಕಾಮುಕರು, ಮಕ್ಕಳ ಮೇಲೆ ಪರಿಣಾಮ ಬೀರಬಹುದಾಗಿದೆ ಎಂದು ಸಾಹಿತಿಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

ಸರ್ಕಾರಕ್ಕೆ ಸಲ್ಲಿಸಿದ ಪ್ರಮುಖ ಬೇಡಿಕೆಗಳು ಏನು?

  • ಆರೋಪಿಯನ್ನು ಕೂಡಲೇ ಬಂಧಿಸಬೇಕು,ಐಟಿ, ಐಪಿಸಿ ಕಾಯ್ದೆಗಳ ಅಡ್ಡಿಯಲ್ಲಿ ಮೊಕದ್ದಮೆ ಹೂಡಬೇಕು
  • ಸಂತ್ರಸ್ತ‌ ಮಹಿಳೆಯರು ಭೀತಿಯಿಲ್ಲದೆ ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು
  • ತನಿಖೆ ಪೂರ್ಣಗೊಳ್ಳುವವರೆಗೆ ಎಚ್.ಡಿ. ರೇವಣ್ಣ ವಿಧಾನಸಭೆ ಸದಸ್ಯತ್ವ ತಾತ್ಕಾಲಿಕವಾಗಿ ರದ್ದು ಮಾಡಬೇಕು
  • ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕ ನಡವಳಿಕೆಗೆ ಕಡಿವಾಣ ಹಾಕಬೇಕು
  • ಎಸ್‌ಐಟಿ ತನಿಖೆಯು ಕಾಯ್ದೆ ಅನುಸಾರ ಕಾಲಮಿತಿಯೊಳಗೆ ನಡೆಯಬೇಕು
  • ಪ್ರಜ್ವಲ್ ಚಾಲಕ ಕಾರ್ತಿಕ್ ನನ್ನ ಕೂಡಲೇ ಬಂಧಿಸಬೇಕು
  • ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧವೂ ಗಂಭೀರ ಪ್ರಕರಣಗಳು ದಾಖಲು ಮಾಡಬೇಕು
  • ವಿಡಿಯೊಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ಹೂಡಬೇಕು
  • ಹಳೇ ವಿಡಿಯೊ ಎಂದು ರೇವಣ್ಣ ಹೇಳಿದ್ದಾರೆ, ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬದ ಎಲ್ಲ ಸದಸ್ಯರನ್ನು Accomplice ಗಳೆಂದು ಪರಿಗಣಿಸಿ
  • ಅವರ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ದಮೆ ಹೂಡಬೇಕು
  • ಪ್ರಜ್ವಲ್ ದೇಶ ಬಿಟ್ಟು ಪರಾರಿಯಾಗಿರುವುದು ಗೃಹ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯ
  • ಗೃಹ ಇಲಾಖೆ, ಗುಪ್ತಚರ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಬೇಕು
Continue Reading

ಹಾವೇರಿ

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ ತಿಳಿಸಿದರು. ರಾಣೆಬೆನ್ನೂರು ನಗರದಲ್ಲಿ ಆಚಾರ್ಯ ಶಂಕರರ ಜಯಂತ್ಯುತ್ಸವದ 2ನೇ ದಿನದ ಅದ್ವೈತ ವೇದಾಂತದಲ್ಲಿ ಶಂಕರಾಚಾರ್ಯರು ತಿಳಿಸಿರುವ ಆಧುನಿಕ ವಿಜ್ಞಾನದ ಅಂಶಗಳು ಎಂಬ ವಿಷಯ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

VISTARANEWS.COM


on

Acharya Shankara Jayanthyutsava programme at Ranebennur
Koo

ರಾಣೆಬೆನ್ನೂರು: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ (Ranebennur News) ತಿಳಿಸಿದರು.

ನಗರದಲ್ಲಿ ಆಚಾರ್ಯ ಶಂಕರರ ಜಯಂತ್ಯುತ್ಸವದ 2ನೇ ದಿನದ ಅದ್ವೈತ ವೇದಾಂತದಲ್ಲಿ ಶಂಕರಾಚಾರ್ಯರು ತಿಳಿಸಿರುವ ಆಧುನಿಕ ವಿಜ್ಞಾನದ ಅಂಶಗಳು ಎಂಬ ವಿಷಯ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ವಿಶ್ವ ಸೃಷ್ಟಿಯ ಕಾರಣದ ಹುಡುಕಾಟದಲ್ಲಿ ವೇದಾಂತವು ಬುದ್ಧಿ ಮತ್ತು ಪ್ರಜ್ಞೆಗಳನ್ನು ತೊಡಗಿಸುವುದಲ್ಲದೆ, ಸಮಸ್ತ ವಸ್ತು ಪ್ರಪಂಚವನ್ನೂ ಸೇರಿಸಿಕೊಳ್ಳುತ್ತದೆ. ವಸ್ತುವಿನ ಗುಣಧರ್ಮಗಳನ್ನು ಕಂಡುಹಿಡಿಯುವುದೇ ಭೌತವಿಜ್ಞಾನಿಯ ಪರಮಗುರಿ. ಆದ್ದರಿಂದ ವೇದಾಂತ ವಿಜ್ಞಾನ ಮತ್ತು ಭೌತ ವಿಜ್ಞಾನಗಳು ಒಂದನ್ನೊಂದು ಸಹಜವಾಗಿಯೇ ಅವಲಂಬಿಸಿವೆ. ಇದು ಕೇವಲ ತೋರಿಕೆಯದಾಗಿರದೆ ಯಾವುದೋ ಮೂಲಭೂತ ತತ್ವವನ್ನು ಆಧರಿಸಿದೆ ಎಂದರು.

ಇದನ್ನೂ ಓದಿ: Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

ಶಂಕರಾಚಾರ್ಯರಿಂದ ಪ್ರತಿಪಾದಿಸಲ್ಪಟ್ಟ ಪ್ರಬಲವಾಗಿ ಕಾಣುವ “ವಸ್ತು-ತಂತ್ರ” ಜ್ಞಾನ ತತ್ವವು ಅದ್ವೈತ ವೇದಾಂತದಲ್ಲಿ ಎಂತಹ ಪರಿಣಾಮ ಉಂಟುಮಾಡಿದೆ ಎಂಬ ವಿಚಾರಕ್ಕೆ ತೊಡಗಿದಾಕ್ಷಣ ಅದು ನಮ್ಮನ್ನು ಅಧ್ಯಾತ್ಮ ವಿದ್ಯೆ ಎಂಬ ಸಮುದ್ರದ ಆಳಕ್ಕೆ ಕೊಂಡೊಯ್ಯುತ್ತದೆ. ಭೌತಶಾಸ್ತ್ರದ “ವಸ್ತು ನಿಷ್ಠತೆಯ ತತ್ವ” ಮತ್ತು ವೇದಾಂತ ಶಾಸ್ತ್ರದ “ವಸ್ತು-ತಂತ್ರ” ಇವೆರಡೂ ವಸ್ತುವನ್ನು ಕುರಿತಾಗಿ ಇರುವ ನಮ್ಮ ಜ್ಞಾನದಿಂದ ವ್ಯಕ್ತಿ ನಿಷ್ಠ ಗುಣಧರ್ಮಗಳನ್ನು ಹೋಗಲಾಡಿಸಲು ರಚಿಸಲ್ಪಟ್ಟಿವೆ. ಅವೆರಡೂ ಒಂದೇ ವರ್ಗಕ್ಕೆ ಸೇರುತ್ತವೆ.

ಹೊರಜಗತ್ತಿನಲ್ಲಿ ಕಾಣುವ ಕೆಲವೊಂದು ಚಮತ್ಕಾರಗಳನ್ನು ವಿಜ್ಞಾನವು ಅಭ್ಯಾಸ ಮಾಡಿ ಹೇಗೆ ವರ್ಗಿಕರಿಸಿದೆಯೋ ಹಾಗೆಯೇ ತಮ್ಮ ಮೊದಲನೇ ಹಂತದ ಬೆಳವಣಿಗೆಯಲ್ಲಿ ನ್ಯಾಯ, ವೈಶೇಷಿಕ, ಸಾಂಖ್ಯ ಮುಂತಾದ ವೇದಾಂತ ಶಾಸ್ತ್ರಗಳೂ ಕೂಡ ತಮ್ಮ ಅಧ್ಯಯನದಲ್ಲಿ ವಸ್ತುವಿನ ಹೊರ ಆವರಣದ ಗುಣಧರ್ಮಗಳನ್ನೇ ಸೂಚಿಸುತ್ತವೆ. ಉದಾಹರಣೆಗೆ ವೈಶೇಷಿಕದ ಅಣುವಿಜ್ಞಾನ ಮತ್ತು ಸಾಂಖ್ಯದ ಪ್ರಕೃತಿಯ ಕಲ್ಪನೆ ಅಥವಾ ಮೂಲಪ್ರಕೃತಿಯ ಸ್ವಭಾವ ಇವೆರಡೂ ಮೂಲತಃ ವಸ್ತುವಿನ ಸ್ವಭಾವದ ಮೇಲೆ ಆಧಾರಿತವಾಗಿವೆ. ನ್ಯಾಯ, ವೈಶೇಷಿಕ ಮತ್ತು ಸಾಂಖ್ಯ ಮುಂತಾದ ದರ್ಶನ ಶಾಸ್ತ್ರಗಳು ತಮ್ಮ ಮುಂದಿನ ಬೆಳವಣಿಗೆಯ ಮಾರ್ಗದಲ್ಲಿ ಒಂದೇ ಆದ ಸಮಗ್ರ ವೇದಾಂತ ಶಾಸ್ತ್ರವಾಗಿ ತನ್ನ ಬೆಳವಣಿಗೆಯ ವಿವಿಧ ಹಂತವನ್ನು ದಾಟಿಹೋಗುವುದನ್ನು ನಾವು ನೋಡುತ್ತಿದ್ದೇವೆ. ಆದಿಶಂಕರರಿಂದ ವಸ್ತುನಿಷ್ಠತೆಯ ತತ್ವವು ತರ್ಕಬದ್ಧವಾದ ಅಂತಿಮ ಗುರಿಯ ಕಡೆಗೆ ಕೊಂಡೊಯಲ್ಪಟ್ಟಿತು ಎಂದು ಬ್ರಹ್ಮ ಸೂತ್ರದ ಅನೇಕ ಸೂತ್ರಗಳನ್ನು ಉದಾಹರಿಸಿ, ಶಂಕರರ ಶ್ರೀಚಕ್ರ ವಿವರಣೆಯನ್ನು ಅವರು ತಮ್ಮ ಉಪನ್ಯಾಸದಲ್ಲಿ ನೀಡಿದರು.

ಇದನ್ನೂ ಓದಿ: Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

ಈ ಸಂದರ್ಭದಲ್ಲಿ ಅರುಣಕುಮಾರ ಮುದ್ರಿ, ಆನಂದ ನಾಯಕ, ಶ್ರೀನಿವಾಸ ಜೋಶಿ, ಗುರುರಾಜ ಕುಲಕರ್ಣಿ, ರವಿ ಕಾಶಿಕರ, ವೀಣಾ ಮುದ್ರಿ, ವೇದಾ ವರಗೇರಿ ಸೇರಿದಂತೆ ಶ್ರೀ ಶಂಕರ ಜಯಂತಿ ಉತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಶ್ರೀ ಶಾರದಾ ಶಂಕರ ಭಜನಾ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಧಾರವಾಡ ಮಾವಿನ ಮೇಳದಲ್ಲಿ 2.7 ಲಕ್ಷ ರೂ. ಮೌಲ್ಯದ ಮಾವು ಎಲ್ಲರ ಗಮನ ಸೆಳೆಯಿತು. ವಿಶ್ವದ ಮಾವಿನ ತಳಿಗಳಲ್ಲಿಯೇ ಅತೀ ದುಬಾರಿಯಾದ ಮೀಯಾಝಾಕಿ ತಳಿಯ ಮಾವು (Miyazaki Mango) ಅನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಧಾರವಾಡದ ಪ್ರಮೋದ ಗಾಂವ್ಕರ್ ಎಂಬವರು ತಮ್ಮ ತೋಟದಲ್ಲಿ ಈ ಮಾವನ್ನು ಬೆಳೆದಿದ್ದಾರೆ.

VISTARANEWS.COM


on

Miyazaki Mango
Koo

ಧಾರವಾಡ: ಮಾವಿಗೆ ʼಹಣ್ಣುಗಳ ರಾಜʼ ಎನ್ನುವುದು ಸುಮ್ಮನೇ ಅಲ್ಲ. ಇದು ಯಾವತ್ತೂ ದುಬಾರಿಯೇ. ಆದರೆ ಧಾರವಾಡದಲ್ಲಿ (Dharwad news) ನಡೆಯುತ್ತಿರುವ ಮಾವು ಮೇಳದಲ್ಲಿ, ವಿಶ್ವದಲ್ಲಿಯೇ ಅತಿ ದುಬಾರಿಯಾದ ಮಾವಿನ ಹಣ್ಣು ಕಂಡುಬಂತು. ಜನ ಇದನ್ನು ನೋಡಿ (Miyazaki Mango) ನಿಬ್ಬೆರಗಾದರು.

ಧಾರವಾಡ ಮಾವಿನ ಮೇಳದಲ್ಲಿ 2.7 ಲಕ್ಷ ರೂ. ಮೌಲ್ಯದ ಮಾವು ಎಲ್ಲರ ಗಮನ ಸೆಳೆಯಿತು. ವಿಶ್ವದ ಮಾವಿನ ತಳಿಗಳಲ್ಲಿಯೇ ಅತೀ ದುಬಾರಿಯಾದ ಮೀಯಾಝಾಕಿ ತಳಿಯ ಮಾವು (Miyazaki Mango) ಅನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಧಾರವಾಡದ ಪ್ರಮೋದ ಗಾಂವ್ಕರ್ ಎಂಬವರು ತಮ್ಮ ತೋಟದಲ್ಲಿ ಈ ಮಾವನ್ನು ಬೆಳೆದಿದ್ದಾರೆ.

ಧಾರವಾಡದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಾವಿನ ಮೇಳದಲ್ಲಿ ಜಪಾನ್ ಮೂಲದ ಈ ವಿಶೇಷ ಮಾವಿನ ತಳಿ ನೋಡಿ ಜನ ಚಕಿತರಾದರು. ಮೀಯಾಝಾಕಿ ಹಣ್ಣಿನ ಪ್ರತಿ ಕೆಜಿಗೆ ಸುಮಾರು 2.7 ಲಕ್ಷ ರೂಪಾಯಿ ಬೆಲೆ ಇದೆ. ಕೇವಲ ಒಂದೇ ಒಂದು ಹಣ್ಣಿಗೆ ಸುಮಾರು 10 ಸಾವಿರ ರೂಪಾಯಿ ಬೆಲೆಬಾಳುತ್ತದೆ. ಈ ಮಾವನ್ನು ನೋಡಲೆಂದೇ ಮೇಳಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು ಆಗಮಿಸುತ್ತಿದ್ದಾರೆ.

Miyazaki Mango

ಮೀಯಾಝಾಕಿ ಪ್ರಭೇದವು ಮೂಲತಃ ಜಪಾನಿನ ತಳಿಯಾಗಿದೆ. ಅದರ ವಿಶಿಷ್ಟ ಸುವಾಸನೆ ಮತ್ತು ಔಷಧೀಯ ಮೌಲ್ಯಕ್ಕಾಗಿ ಇದು ವಿದೇಶಗಳಲ್ಲಿ ಭಾರಿ ಬೇಡಿಕೆಯನ್ನು ಹೊಂದಿದೆ. ಇವು ಚೆನ್ನಾಗಿ ಹಣ್ಣಾದಾಗ ಗಾಢ ಕೆಂಪು ಬಣ್ಣಕ್ಕೆ ತಿರುಗುತ್ತವೆ. ಜಪಾನಿಯರ ಪ್ರಕಾರ, ವಿಶ್ವದ ಅತ್ಯಂತ ದುಬಾರಿ ಮಾವಿನ ಮೂಲ ಹೆಸರು “ತೈಯೊ ನೋ ತಮಾಗೊ” (Taiyo no Tamago) ಅಥವಾ ಸೂರ್ಯನ ಮೊಟ್ಟೆ (Egg of the Sun).

ಇದಕ್ಕೆ ಹೆಸರಾಂತ ಜಪಾನಿನ ವಿಜ್ಞಾನಿ ಯಮಶಿತಾ ಮೀಯಾಝಾಕಿ ಅವರ ಹೆಸರನ್ನು ಇಡಲಾಗಿದೆ. ಇದರ ಅಭಿವೃದ್ಧಿ ಮತ್ತು ಕೃಷಿಗೆ ಅವರು ಗಮನಾರ್ಹವಾಗಿ ಕೊಡುಗೆ ನೀಡಿದ್ದರು. ಮೀಯಾಝಾಕಿ ಪ್ರಿಫೆಕ್ಚರ್‌ನಲ್ಲಿ ಇದರ ಕೃಷಿ ಮಾಡಲಾಗುತ್ತಿದೆ. ಹೀಗಾಗಿ ಜಗತ್ತು ಈ ರುಚಿಕರವಾದ ಮಾವಿನಹಣ್ಣುಗಳನ್ನು “ಮೀಯಾಝಾಕಿ” ಎಂದು ಕರೆಯಲು ಪ್ರಾರಂಭಿಸಿತು.

70 ರ ದಶಕದ ಕೊನೆಯಲ್ಲಿ ಮತ್ತು 80 ರ ದಶಕದ ಆರಂಭದಲ್ಲಿ ಈ ಮಿಯಾಜಾಕಿ ಮಾವಿನ ಉತ್ಪಾದನೆಯು ಮಿಯಾಜಾಕಿಯಲ್ಲಿ ಆರಂಭಿಸಲಾಯಿತು. ಈ ನಗರದ ಬೆಚ್ಚನೆಯ ವಾತಾವರಣ, ಅದರ ದೀರ್ಘಾವಧಿಯ ಸೂರ್ಯನ ಬೆಳಕು ಮತ್ತು ಹೇರಳವಾದ ಮಳೆಯಿಂದಾಗಿ ರೈತರು ಮಾವು ಕೃಷಿಗೆ ಆಕರ್ಷಣೆಗೊಳ್ಳಲು ಕಾರಣವಾಯಿತು. ಏಪ್ರಿಲ್ ಮತ್ತು ಆಗಸ್ಟ್ ನಡುವೆ ಈ ಮಾವಿನ ಸುಗ್ಗಿ ನಡೆಯುತ್ತದೆ.

ಇತ್ತೀಚೆಗೆ ಭಾರತದಲ್ಲೂ ಕೆಲವರು ಕೃಷಿಕರು ಇದನ್ನು ಬೆಳೆಯಲು ಯತ್ನಿಸುತ್ತಿದ್ದಾರೆ. ಆದರೆ ಇದು ಅತ್ಯಂತ ದುಬಾರಿಯಾದ ಆರೈಕೆ, ಒಳಸುರಿಗಳ ಪೂರೈಕೆಯನ್ನು ಬೇಡುತ್ತದೆ. ಈ ಮಾವಿನಹಣ್ಣುಗಳು ವ್ಯಾಪಕ ರೋಗ ನಿರೋಧಕ ಶಕ್ತಿಯನ್ನು ಹೊಂದಿವೆ. ಬೀಟಾ-ಕ್ಯಾರೋಟಿನ್ ಮತ್ತು ಫೋಲಿಕ್ ಆಮ್ಲವನ್ನು ಒಳಗೊಂಡಿವೆ. ಇದು ಕಣ್ಣಿನ ಆರೋಗ್ಯಕ್ಕೆ ಹೆಚ್ಚು ಉಪಯೋಗಕಾರಿಯಾಗಿದೆ. ದೃಷ್ಟಿ ಹೀನತೆಯನ್ನು ತಪ್ಪಿಸುವಲ್ಲಿ ಈ ಮಾವು ಪರಿಣಾಮಕಾರಿಯಾಗಿದೆ ಎಂದು ಹೇಳಲಾಗುತ್ತಿದೆ. ಮಿಯಾಜಾಕಿ ಮಾವನ್ನು ಭಾರತ, ಬಾಂಗ್ಲಾದೇಶ, ಥಾಯ್ಲೆಂಡ್ ಮತ್ತು ಫಿಲಿಪ್ಪಿನ್ಸ್‌ ರಾಷ್ಟ್ರಗಳಲ್ಲಿ ಕೆಲವೆಡೆ ಬೆಳೆಯಲಾಗುತ್ತದೆ. ಭಾರತದಲ್ಲಿ ಪಶ್ಚಿಮ ಬಂಗಾಳ ಮಾತ್ರವಲ್ಲದೇ, ಮಧ್ಯಪ್ರದೇಶದ ಜಬಲ್ಪುರ ನಗರದಲ್ಲಿ ಬೆಳೆಯಲಾಗಿದೆ ಎಂದು ಮಾಧ್ಯಮಗಳ ವರದಿಗಳು ಹೇಳುತ್ತವೆ.

ಇದನ್ನೂ ಓದಿ: Mango Season: ಮಾರುಕಟ್ಟೆಗೆ ಬಂತು ಉತ್ತರ ಕನ್ನಡದ ಪ್ರಸಿದ್ಧ ಕರಿಈಶಾಡು ಮಾವು; ಡಜನ್‌ಗೆ 700 ರೂ.!

Continue Reading

ಕ್ರೈಂ

Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

Student Self Harming: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

VISTARANEWS.COM


on

pes university student self harming
Koo

ಬೆಂಗಳೂರು: ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ (Electronic city) ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ (PES university) ಎಂಜಿಯರಿಂಗ್‌ ವಿದ್ಯಾರ್ಥಿಯೊಬ್ಬ (Engineering Student) ಆತ್ಮಹತ್ಯೆ (Student Self harming) ಮಾಡಿಕೊಂಡಿದ್ದಾನೆ. ಪರೀಕ್ಷೆಗೆ (Exam) ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದ ಈತ, ಕಾಲೇಜಿನ 6ನೇ ಅಂತಸ್ತಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದು ಪಿಇಎಸ್‌ ಕಾಲೇಜಿನಲ್ಲಿ ಸಂಭವಿಸುತ್ತಿರುವ ಎರಡನೇ ವಿದ್ಯಾರ್ಥಿ ಆತ್ಮಹತ್ಯೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್‌ನಿಂದ 4 ಕಿಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಪರೀಕ್ಷೆ 8.30ಕ್ಕೆ ಆರಂಭವಾಗಲಿದ್ದ ಕಾರಣ 7.30ರ ಸುಮಾರಿಗೆ ಮನೆಯಿಂದ ಹೊರಟಿದ್ದ. ಆತನ ತಾಯಿ ಕಾಲೇಜು ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ.

ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.

ಕೆಲ ತಿಂಗಳ ಹಿಂದೆ ಹೊಸಕೆರೆಹಳ್ಳಿ ಬಳಿಯ ಪಿಇಎಸ್ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ‌ಮಾಡಿಕೊಂಡಿದ್ದ. 2023ರಲ್ಲಿ 19 ವರ್ಷದ ಆದಿತ್ಯ ಪ್ರಭು ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದುದು ವರದಿಯಾಗಿತ್ತು. ಇದೀಗ ಪಿಇಎಸ್‌ ಕಾಲೇಜಿನಲ್ಲಿ ಎರಡನೇ ಆತ್ಮಹತ್ಯೆ ಸಂಭವಿಸಿದೆ. ಇದು ಸ್ಪರ್ಧಾತ್ಮಕ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಮೇಲಿರುವ ಮಾನಸಿಕ ಒತ್ತಡದತ್ತ ಬೆಟ್ಟು ಮಾಡಿದೆ.

ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

woman murder case kengeri

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ (Strangle) ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Continue Reading
Advertisement
Prajwal Revanna Case Can women trust your government Writers open letter to Siddaramaiah
ರಾಜಕೀಯ56 seconds ago

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Acharya Shankara Jayanthyutsava programme at Ranebennur
ಹಾವೇರಿ6 mins ago

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Miyazaki Mango
ಪ್ರಮುಖ ಸುದ್ದಿ48 mins ago

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

Bomb Threat
ದೇಶ53 mins ago

Bomb Threat: ದೆಹಲಿ, ಅಹಮದಾಬಾದ್‌ ಬಳಿಕ ಕಾನ್ಪುರ ಶಾಲೆಗಳಿಗೂ ಬಾಂಬ್‌ ಬೆದರಿಕೆ; ಇಮೇಲ್‌ ಮೂಲಕ ಸಂದೇಶ

M‌ine Lift Collapse
ದೇಶ55 mins ago

M‌ine Lift Collapse: ರಾಜಸ್ಥಾನ ಲಿಫ್ಟ್‌ ದುರಂತ: ಟ್ರ್ಯಾಪ್‌ ಆಗಿದ್ದ 14 ಮಂದಿ ರಕ್ಷಣೆ; ಒಬ್ಬ ಅಧಿಕಾರಿ ದಾರುಣ ಸಾವು

Cannes 2024 seven Indian Films To Be Screened
ಸಿನಿಮಾ1 hour ago

Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

pes university student self harming
ಕ್ರೈಂ1 hour ago

Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

Prajwal Revanna Case Prajwal case controlled by Congress government says R Ashok
ರಾಜಕೀಯ1 hour ago

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Himanta Biswa Sarma
ರಾಜಕೀಯ1 hour ago

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Facebook, Instagram Down
ತಂತ್ರಜ್ಞಾನ2 hours ago

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ9 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ19 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202421 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌