Site icon Vistara News

Murder case : ಅನೈತಿಕ ಸಂಬಂಧ ಪ್ರಶ್ನಿಸಿದ ಹೆಂಡತಿಯನ್ನು ಕೊಂದು ಪರಾರಿಯಾದ ಗಂಡ

Man kills wife

#image_title

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಮದುವೆಯಾಗಿ ಮಗುವಿದ್ದರೂ ಬೇರೊಬ್ಬಳ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ ಹೆಂಡತಿಯನ್ನು ವ್ಯಕ್ತಿಯೊಬ್ಬ ಕೊಲೆ (Murder case) ಮಾಡಿದ್ದಾನೆ

ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಜಯಮಹಲ್ ಲೇಔಟ್ ನಿವಾಸಿಯಾಗಿರುವ ಜಯಂತಿ ಅವರನ್ನು ಗಂಡ ಲಕ್ಷ್ಮೀಪತಿ ಕೊಲೆ ಮಾಡಿದ್ದಾನೆ. ಪತ್ನಿಯನ್ನು ಸಾಯುವಂತೆ ಹೊಡೆದಿರುವ ಈತ ಅರೆಜೀವ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ತಂದು ಹಾಕಿ ಪರಾರಿಯಾಗಿದ್ದಾನೆ.

ಲಕ್ಷ್ಮೀಪತಿಗೆ ಬ್ಯೂಟಿ ಪಾರ್ಲರ್ ನಡೆಸುತ್ತಿರುವ ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಆತ ಹೆಂಡತಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಪುಟ್ಟ ಮಗು ಅನಾಥವಾಗಿದೆ. ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Accident News: ಕೊಪ್ಪಳದಲ್ಲಿ ಬೈಕ್‌ಗೆ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಕೊಪ್ಪಳ: ಹಿಂಬದಿಯಿಂದ ಬೈಕ್‌ಗೆ ಕಾರ್ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ಅಪಘಾತ ಸಂಭವಿಸಿದ್ದು, ಬೈಕ ಸವಾರ ಹಲಗೇರಿಯ ಶಿವಪ್ಪ ಬಿನ್ನಾಳ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎರಡು ಗಂಟೆ ಲಿಫ್ಟ್‌ನಲ್ಲಿ ಸಿಕ್ಕಿಹಾಕಿಕೊಂಡವನ ರಕ್ಷಣೆ

ಬೆಂಗಳೂರು: ಎರಡು ಗಂಟೆಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿ ನಡೆದಿದೆ. ವಿಕ್ರಮ್ ಎಂಬವರು ಬೊಮ್ಮಸಂದ್ರದ ಆರ್‌ಆರ್ ಲಕ್ಸುರಿ ಪಿಜಿಯಲ್ಲಿ ವಾಸವಾಗಿದ್ದು, ಕಳೆದ ರಾತ್ರಿ 10.30ರ ಸುಮಾರಿಗೆ ಏಕಾಏಕಿ ಲಿಫ್ಟ್ ಆಫ್ ಆಗಿತ್ತು. ಈ ವೇಳೆ ಎಷ್ಟೇ ಕೂಗಾಡಿದರೂ ಪಿಜಿ ಸಿಬ್ಬಂದಿ ರಕ್ಷಣೆಗೆ ಬಂದಿಲ್ಲ. ರಾತ್ರಿ 12.30 ಆದರೂ ಯಾರೂ ಲಿಫ್ಟ್ ಕಡೆ ಸುಳಿದಿರಲಿಲ್ಲ. ಈ ವೇಳೆ ವಿಕ್ರಮ್‌ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಸಹಾಯ ಬೇಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ, ನಾಲ್ಕು ಮತ್ತು ಐದನೇ ಮಹಡಿಯ ಮಧ್ಯದಲ್ಲಿ ಲಿಫ್ಟ್‌ನಲ್ಲಿ ಸಿಲುಕಿದ್ದ ವಿಕ್ರಮ್‌ನನ್ನು ರಕ್ಷಿಸಿದ್ದಾರೆ.

Exit mobile version