Site icon Vistara News

Murder Case: ಮಂಗಳೂರು ಜ್ಯುವೆಲ್ಲರಿಗೆ ನುಗ್ಗಿ ನೌಕರನಿಗೆ ಚಾಕು ಇರಿದು ಕೊಂದ ಮುಸುಕುಧಾರಿ

mangluru murder case

ಮಂಗಳೂರು: ನಗರದ ಬಲ್ಮಠದಲ್ಲಿ ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಂಗಡಿ ನೌಕರನೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ (Murder Case) ಪರಾರಿಯಾಗಿದ್ದಾನೆ. ಇದು ಸ್ಥಳೀಯರನ್ನು ಆತಂಕಕ್ಕೆ ದೂಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕೊಲೆಯಾದ ರಾಘವೇಂದ್ರ

ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ. ಬಲ್ಮಠದ ‘ಮಂಗಳೂರು ಜುವೆಲ್ಲರಿ’ಯಲ್ಲಿ ಈ ಕೃತ್ಯ ನಡೆದಿದೆ. ಆದರೆ, ಬಂದವನು ಯಾರು? ಯಾವ ಕಾರಣಕ್ಕೆ ಚೂರಿ ಇರಿದಿದ್ದಾನೆ ಎಂಬ ಸಂಗತಿ ಗೊತ್ತಾಗಿಲ್ಲ. ರಾಘವೇಂದ್ರ ಅವರು ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಘವೇಂದ್ರ ಅವರು ಕೆಲವೇ ಹೊತ್ತಿನಲ್ಲಿ ಅಸುನೀಗಿದ್ದಾರೆ. ಅಂಗಡಿ ಮಾಲೀಕ ಊಟಕ್ಕೆ ಹೋಗಿದ್ದಾಗ ಈ ಕೃತ್ಯ ನಡೆದಿದೆ. ಈಗ ಸ್ಥಳಕ್ಕೆ ಭೇಟಿ ಕೊಟ್ಟಿರುವ ಪೊಲೀಸರು ಮುಸುಕು ಹಾಕಿಕೊಂಡು ಬಂದು ಕೃತ್ಯ ಎಸಗಿರುವ ವ್ಯಕ್ತಿಯ ಶೋಧಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: Love Torture:‌ ಪ್ರೇಮದ ಸುಳಿಯಲ್ಲಿ ಸಿಲುಕಿದ ಬಾಲಕಿ ಆತ್ಮಹತ್ಯೆ; ಪ್ರಿಯಕರ ಅನುಮಾನಿಸಿ, ಅವಮಾನಿಸಿದ್ದೇ ಕಾರಣವಾಯ್ತಾ?

ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿರುವ ಪೊಲೀಸರು, ಹಂತಕನ ಪತ್ತೆಗೆ ಮುಂದಾಗಿದ್ದಾರೆ. ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಸದ್ಯಕ್ಕೆ ಬಲ್ಮಠದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Exit mobile version