Murder Case : ಬೆಂಗಳೂರಲ್ಲಿ ದಿನಕ್ಕೊಂದು ಅಪರಿಚಿತ ಶವ ಪತ್ತೆ! - Vistara News

ಕರ್ನಾಟಕ

Murder Case : ಬೆಂಗಳೂರಲ್ಲಿ ದಿನಕ್ಕೊಂದು ಅಪರಿಚಿತ ಶವ ಪತ್ತೆ!

Murder Case : ನಿನ್ನೆ ಭಾನುವಾರ ಲಗ್ಗರೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮಹಾಲಕ್ಷ್ಮಿ ಲೇಔಟ್‌ ಸಮೀಪದ ಆರ್‌ಎಂಸಿ ಯಾರ್ಡ್‌ನಲ್ಲಿ ಮತ್ತೊಂದು ಶವ ಪತ್ತೆಯಾಗಿದೆ.

VISTARANEWS.COM


on

dead body Found
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಕ್ರೈಂ ರೇಟ್‌ ಹೆಚ್ಚಾಗುತ್ತಿದ್ಯಾ ಎಂಬ ಅನುಮಾನಗಳು ಮೂಡುತ್ತಿವೆ. ಪುಂಡರು ಹಾಡಹಗಲೇ ಯಾರ ಭಯವಿಲ್ಲದೆ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿದ್ದಾರೆ. ಈ ನಡುವೆ ದಿನಕ್ಕೊಂದು ಅಪರಿಚಿತ ಶವ (Dead body Found) ಪತ್ತೆಯಾಗುತ್ತಿದೆ. ಇಲ್ಲಿನ ಆರ್‌ಎಂಸಿ ಯಾರ್ಡ್ ಎಂ.ಕೆ ಎಂಟರ್ ಪ್ರೈಸಸ್ ಕಟ್ಟಡದ ಹಿಂಭಾಗದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಹೊಟ್ಟೆ, ಎದೆಭಾಗ, ಕೈ-ಕಾಲುಗಳ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ಮಾಡಿ ಹತ್ಯೆ (Murder Case) ಮಾಡಿದ್ದಾರೆ.

ಉತ್ತರ ಪ್ರದೇಶ ಮೂಲದ ಸಜ್ಜನ್ ಸಿಂಗ್ (33) ಎಂಬಾತ ಪರಿಚಯಸ್ಥರಿಂದಲೇ ಹತ್ಯೆ ಆಗಿರಬಹುದೆಂದು ಶಂಕಿಸಲಾಗಿದೆ. ಹತ್ಯೆಕೋರರು ಹಾಗೂ ಕೊಲೆಯಾದವನು ಎಲ್ಲರೂ ಉತ್ತರ ಪ್ರದೇಶ ಮೂಲದವರಾಗಿದ್ದು, ಆರ್‌ಎಂಸಿ ಯಾರ್ಡ್‌ನಲ್ಲಿ ಕೂಲಿ ಕೆಲಸವನ್ನು ಮಾಡಿಕೊಂಡಿದ್ದರು ಎನ್ನಲಾಗಿದೆ.

sajan sing
ಕೊಲೆಯಾದ ಸಜ್ಜನ್ ಸಿಂಗ್ (33) ಉತ್ತರ ಪ್ರದೇಶ ಮೂಲದವ

ಇವರುಗಳ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಭಾನುವಾರ ರಾತ್ರಿ ಕೂಡ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ, ಕತ್ತು ಕೂಯ್ದು ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Viral Video : ಅಬ್ಬಾ ಏನು ಧೈರ್ಯ; ವೇಗವಾಗಿ ಚಲಿಸುತ್ತಿದ್ದ ಟ್ರಕ್​ನ ಚಕ್ರದ​ ಪಕ್ಕದಲ್ಲಿಯೇ ಗಡದ್ದಾಗಿ ನಿದ್ದೆ ಹೊಡೆದ !

ಮರಳಿನ ರಾಶಿಯೊಳಗೆ ಶವ ಪತ್ತೆ!

ಬೆಂಗಳೂರಿನ ಲಗ್ಗೆರೆಯ ಮುಖ್ಯ ರಸ್ತೆಯ ಜೆ ಸಿ ನಗರದಲ್ಲಿ ಅಪರಿಚಿತ ವ್ಯಕ್ತಿಯ ಶವ (Dead Body Found) ಪತ್ತೆಯಾಗಿದೆ. ಎಂ ಸ್ಯಾಂಡ್ ರಾಶಿಯೊಳಗೆ ಶವವನ್ನು ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಸುಮಾರು 35-40 ಆಸುಪಾಸಿನ ವ್ಯಕ್ತಿಯ ಮೃತದೇಹವು ಎಂ ಸ್ಯಾಂಡ್‌ ನೊಳಗೆ ಇತ್ತು. ಇದನ್ನು ಬೀದಿ ನಾಯಿಯೊಂದು ಪತ್ತೆ ಮಾಡಿದೆ.

ರಸ್ತೆ ಬದಿಯಲ್ಲಿ ಎಂ ಸ್ಯಾಂಡ್‌ ರಾಶಿಯನ್ನು ಹಾಕಲಾಗಿತ್ತು. ಬೀದಿ ನಾಯಿಯೊಂದು ಕಲ್ಲು ಪುಡಿ ರಾಶಿಯನ್ನು ಕೆದರಲು ಮುಂದಾಗಿದೆ. ಈ ವೇಳೆ ವ್ಯಕ್ತಿಯೊಬ್ಬನ ಮೃತದೇಹವು ಪತ್ತೆಯಾಗಿದೆ. ಕೂಡಲೇ ಸ್ಥಳೀಯರನ್ನು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆ ಕಟ್ಟಿಸಲು ಎಂ ಸ್ಯಾಂಡ್ ತರಿಸಲಾಗಿತ್ತು. ಕಳೆದ ಮೂರು ದಿನಗಳ ಹಿಂದಷ್ಟೇ ಎಂ ಸ್ಯಾಂಡ್ ಲೋಡ್ ಬಂದಿತ್ತು. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಯಾರೋ ಕೊಲೆ ಮಾಡಿ ಶವವನ್ನು ಎಂ ಸ್ಯಾಂಡ್ ಲೋಡ್‌ನ ಮಧ್ಯ ಭಾಗದಲ್ಲಿಟ್ಟು ಹೋಗಿದ್ದಾರೆ. ಮನೆ ಕಟ್ಟಿಸುತ್ತಿರುವ ಮಾಲೀಕನನ್ನು ಪೊಲೀಸರು ಸಂಪರ್ಕಿಸಿದ್ದು, ಆತ ತಮಿಳುನಾಡಿಗೆ ಹೋಗಿರುವುದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರು ಹಾಗೂ ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೊತ್ತರ ಪರೀಕ್ಷೆಗೆ ರವಾಸಿದ್ದಾರೆ. ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ (bail plea) ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

VISTARANEWS.COM


on

hd revanna jailed prajwal revanna case
Koo

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರಿಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಜೈಲಾಧಿಕಾರಿಗಳು ನೀಡಿದ್ದು, ಅವರ ನಂಬರ್‌ 4567 ಆಗಿದೆ. ನಿನ್ನೆ ರಾತ್ರಿ ಎಲ್ಲ ಕೈದಿಗಳಂತೆ ಜೈಲಿನ ಊಟ ಸೇವಿಸಿದ್ದ ರೇವಣ್ಣ ನಿದ್ರಿಸದೆ ಮೌನಿಯಾಗಿ ಯೋಚಿಸುತ್ತಾ ಕುಳಿತಿದ್ದರು ಎಂದು ತಿಳಿದುಬಂದಿದೆ. ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ (bail plea) ವಿಚಾರಣೆ ಬುಧವಾರ (ಮೇ 8) ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆಯೇ ರೇವಣ್ಣಗೆ ವಿಚಾರಣಾಧೀನ ಬಂಧಿ 4567 ನಂಬರ್ ನೀಡಲಾಗಿದೆ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಊಟ ಸವಿಯಬೇಕಾದ ಪರಿಸ್ಥಿತಿ ಅವರದ್ದಾಗಿದೆ. ಜೈಲಿನ ಮೆನುವಿನಂತೆಯೇ ಅಧಿಕಾರಿಗಳು ಚಪಾತಿ, ಪಲ್ಯ, ಮುದ್ದೆ, ಅನ್ನ, ಸಾಂಬಾರ್ ಊಟ ನೀಡಿದ್ದಾರೆ. ಕೋರ್ಟ್ ಅನುಮತಿ ಇದ್ದರೆ ಮಾತ್ರ ಹೊರಗಿನ ಊಟ ತರಿಸಲು ಅವಕಾಶವಿದೆ. ಆದರೆ ರೇವಣ್ಣಗೆ ಹೊರಗಿನ ಊಟಕ್ಕೆ ಯಾವುದೇ ಅನುಮತಿ ಇಲ್ಲ. ಆದರೆ ರಾತ್ರಿ ಊಟ ನೀಡಿ ಒಂದು ಗಂಟೆ ಕಳೆದರೂ ಊಟ ಮಾಡದೆ ರೇವಣ್ಣ ಮೌನಕ್ಕೆ ಜಾರಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸಚಿವರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ ಒಂದು ರಾತ್ರಿಯನ್ನು ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ಕಳೆದಿದ್ದು, ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್ ಸಾಂಬಾರ್ ತಡವಾಗಿ ತಿಂದಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆ ಪಡೆದಿದ್ದಾರೆ. ರಾತ್ರಿ ಒಂದು ಗಂಟೆಯವರೆಗೂ ನಿದ್ರೆ ಮಾಡದೆ ಯೋಚಿಸುತ್ತಿದ್ದರು ಎನ್ನಲಾಗಿದೆ. ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ಜೈಲಾಧಿಕಾರಿಗಳು ಹೆಚ್ಚು ನಿಗಾ ಇಟ್ಟಿದ್ದಾರೆ. ರೇವಣ್ಣ ಇರುವ ಕೊಠಡಿ ಬಳಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇಂದು ಬೆಳಿಗ್ಗೆ 5.30ಕ್ಕೆ ನಿದ್ರೆಯಿಂದ ಎದ್ದ ರೇವಣ್ಣ ಅವರಿಗೆ ಕಾಫಿ-ಟೀ ನೀಡಲಾಗಿದೆ. ಕೈದಿಗಳಿಗೆ ಟಿವಿ ವ್ಯವಸ್ಥೆ ಇಲ್ಲ. ಹೊರಗಿನ ಸುದ್ದಿ ತಿಳಿಯಲು ನ್ಯೂಸ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ರೇವಣ್ಣಗೆ ಓದಲು ಕನ್ನಡ-ಇಂಗ್ಲೀಷ್ ಪೇಪರ್ ನೀಡಲಾಗಿದೆ. ಪೇಪರ್ ಕಡೆ ಕಣ್ಣಾಡಿಸಿ ನಿನ್ನೆಯ ವಿದ್ಯಮಾನಗಳನ್ನು ರೇವಣ್ಣ ಓದಿದ್ದಾರೆ. ಜೈಲಿನ ಮೆನುವಿನಂತೆ ರೇವಣ್ಣಗೆ ಇಂದು ಬೆಳಗ್ಗಿನ ತಿಂಡಿಗೆ ಪುಳಿಯೋಗರೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ನಾನೇನೂ ಮಾಡಿಲ್ಲ: ರೇವಣ್ಣ

ವಾದ – ಪ್ರತಿವಾದ ಆಲಿಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನುದ್ದೇಶಿಸಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ? ಎಂದು ಪ್ರಶ್ನೆ ಮಾಡಿದರು. ಅದಕ್ಕೆ ರೇವಣ್ಣ, ಕಸ್ಟಡಿಗೆ ಬಂದು 3 ದಿನ ಆಗಿದೆ. ಮಾತ್ರೆ ತೆಗೆದುಕೊಳ್ಳಲು ತಡ ಆಗುತ್ತಿದೆ. ನನ್ನನ್ನು ಸುಮ್ಮನೆ ಸತಾಯಿಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು ನನಗೆ ಗೊತ್ತಿಲ್ಲ. ನನಗೆ ಕೇಳಿದ್ದನ್ನು ಹೇಳಿದ್ದೇನೆ. ಎಲ್ಲವೂ ದಾಖಲಿಸಿಕೊಂಡಿದ್ದಾರೆ. ಮೂರು ದಿನದಿಂದ ಹೊಟ್ಟೆ ನೋವು ಇದೆ. ಮಲಗಲು ಕೂಡ ಆಗಿಲ್ಲ. ಎಲ್ಲ ವಿಚಾರಣೆಯೂ ಮುಗಿದಿದೆ ಎಂದು ತನಿಖಾಧಿಕಾರಿ ನಿನ್ನೆಯೇ ಹೇಳಿದ್ದರು. ಆದರೆ, ಇಂದು ಮತ್ತೆ ವಿಚಾರಣೆ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ. ನನಗೆ ಹೊಟ್ಟೆ ನೋವಿದೆ. ಮೂರು ದಿನಗಳಿಂದ ಸತತವಾಗಿ ನಿದ್ದೆ ಮಾಡಿಲ್ಲ ಸರ್. ನಾನು ತಪ್ಪೇ ಮಾಡಿಲ್ಲ ಅಂದಾಗ ಯಾಕೆ ಒಪ್ಪಿಕೊಳ್ಳಬೇಕು? ದುರುದ್ದೇಶದಿಂದ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮಾತು ಮುಂದುವರಿಸಿದ ಎಚ್.ಡಿ. ರೇವಣ್ಣ, ಪ್ರಜ್ವಲ್ ತಪ್ಪು ಮಾಡಿರಬಹುದು. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ. ನನಗೆ ಹುಷಾರಿಲ್ಲ, ಬೆಳಗ್ಗೆ ಡ್ರಿಪ್ಸ್ ಹಾಕಿದ್ದಾರೆ. ಹುಷಾರಿಲ್ಲ ಹೊಟ್ಟೆ ಉರಿ ಬಂದಿದೆ. ಗ್ಲುಕೋಸ್ ಹಾಕಿದ್ದಾರೆ. ನಾನು ಶಾಸಕನಾಗಿ 25 ವರ್ಷ ಕಳೆದಿದೆ. ಬೇಕಂತಲೇ ಈ ರೀತಿ ಮಾಡಲಾಗಿದೆ. ವಾರಂಟ್ ಇಲ್ಲದೆಯೆ ಮನೆಗೆ ಬಂದು ಅರೆಸ್ಟ್ ಮಾಡಿದರು ಎಂದೆಲ್ಲ ಮಾಹಿತಿ ನೀಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾದೀಶರು, ಮೇ 14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಅಮಾವಾಸ್ಯೆ ದಿನವೇ ಜೈಲಿಗೆ ಶಿಫ್ಟ್‌!

Continue Reading

ಶಿಕ್ಷಣ

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

SSLC Exam Result 2024: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ. ಗುರುವಾರ ಫಲಿತಾಂಶ ಪ್ರಕಟವಾಗಲಿದೆ.

VISTARANEWS.COM


on

SSLC Exam Result 2024 to be declared tomorrow Here are the details
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam Result 2024) ಫಲಿತಾಂಶ ಇಂದು ಪ್ರಕಟವಾಗಲಿದೆ. ಮೇ 9ರ ಬೆಳಗ್ಗೆ 10.30ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30ಕ್ಕೆ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದೆ.

SSLC Exam Result 2024 to be declared tomorrow Here are the details

ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್‌ನಲ್ಲಿ ಮೇ 9ರ ಬೆಳಗ್ಗೆ 10.30ರ ನಂತರ ವೀಕ್ಷಿಸಬಹುದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿದೆ.

ಮಾ.25ರಿಂದ ಏ.6ರ ವರೆಗೆ ನಡೆದಿದ್ದ ಪರೀಕ್ಷೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ.

ಫಲಿತಾಂಶ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ ಕಾತರ ಹೆಚ್ಚಿದೆ.

ಇದನ್ನೂ ಓದಿ | Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಇನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿಶಾಂಶವನ್ನು ಮೇ 08 ರಂದು ಬಿಡುಗಡೆ ಮಾಡಲಾಗಿತ್ತು. ಘೋಷಿಸಿತ್ತು. ಒಟ್ಟಾರ ಉತ್ತೀರ್ಣ ಪ್ರಮಾಣ ಶೇ 83.89 ದಾಖಲಾಗಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Karnataka Weather: ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧೆಡೆ ಬುಧವಾರ ಭಾರಿ ಮಳೆ ಸುರಿದಿತ್ತು. ಅದೇ ರೀತಿ ಇಂದು(ಮೇ 9) ಕೂಡ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸುರಿಯುವ ಮುನ್ಸೂಚನೆ ಇದೆ.

VISTARANEWS.COM


on

Karnataka Weather
Koo

ಬೆಂಗಳೂರು: ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ (30-40 kmph) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅದೇ ರೀತಿ ಬಳ್ಳಾರಿ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ (Rain News) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರವಾದ ಮಳೆ/ ಗುಡುಗು ಸಹಿತ ಗಾಳಿ (30-40 kmph) ಉಂಟಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೇ 10ರಂದು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಕೊಡಗು, ಹಾಸನ, ಚಿಕ್ಕಮಗಳೂರು, ವಿಜಯನಗರ, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳು. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೇ ರೀತಿ ಮೇ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿರಿ ನೀಡಿದೆ.

ಇದನ್ನೂ ಓದಿ | Rain News: ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ; ಬೆಂಗಳೂರಿನಲ್ಲಿ ಹೊಳೆಯಂತಾದ ರಸ್ತೆಗಳು!

ತಾಪಮಾನದ ಮುನ್ಸೂಚನೆ

ಮುಂದಿನ 2 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ ನಂತರ ರಾಜ್ಯದ ಮೇಲೆ 2-3 ಡಿಗ್ರಿ ಇಳಿಕೆಯಾಗಲಿದೆ.

ಮುಂದಿನ 24 ಗಂಟೆಗಳ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಮಿಂಚು/ಗಾಳಿ (30- 40kmph) ಸಹಿತ ಲಘುವಾಗಿ ಮಧ್ಯಮ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಇರುವ ಸಾಧ್ಯತೆ ಇದೆ.

Continue Reading

ಉತ್ತರ ಕನ್ನಡ

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Bheemanna Naik: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದಾಗ ಶಾಸಕ ಭೀಮಣ್ಣ ನಾಯ್ಕ್‌ ಸೇರಿ ಹಲವರ ಮೇಲೆ ಜೇನು ನೊಣಗಳು ದಾಳಿ ಮಾಡಿವೆ.

VISTARANEWS.COM


on

Koo

ಕಾರವಾರ: ಗೂಡಿನ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್‌ ಅವರು (Bheemanna Naik) ಸೇರಿ ಹಲವರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ನಗರದ ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದ ವೇಳೆ ಜೇನು ನೋಣಗಳು ದಾಳಿ ನಡೆಸಿವೆ.

ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ನಗರಸಭೆ ಪೌರಾಯುಕ್ತ ಕಾಂತರಾಜ ಜತೆ ಶಾಸಕ ಬುಧವಾರ ತೆರಳಿದ್ದರು. ಈ ವೇಳೆ ಸಮೀಪದಲ್ಲಿದ್ದ ಗೂಡಿನ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಾಸಕ ಭೀಮಣ್ಣ ನಾಯ್ಕ್‌, ಪೌರಾಯುಕ್ತ ಕಾಂತರಾಜ, ಸದಸ್ಯ ಖಾದರ್ ಆನವಟ್ಟಿ ಮತ್ತಿತರರು ಗಾಯಗೊಂಡಿದ್ದಾರೆ. ಟಿಎಸ್‌ಎಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಜೇನುದಾಳಿಯಿಂದ ಶಾಸಕ ಭೀಮಣ್ಣ ನಾಯ್ಕ್‌ ಅವರು ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ ಮಾಹಿತಿ ನೀಡಿದ್ದಾರೆ.

Continue Reading
Advertisement
hd revanna jailed prajwal revanna case
ಕ್ರೈಂ11 mins ago

Prajwal Revanna Case: ಎಚ್‌.ಡಿ ರೇವಣ್ಣ ಈಗ ಕೈದಿ ನಂಬರ್‌ 4567, ನಿದ್ದೆ ಮಾಡದೆ ಮೌನಿಯಾಗಿ ಕುಳಿತ ಮಾಜಿ ಸಚಿವ

Nijjar Killling
ವಿದೇಶ11 mins ago

Nijjar Killing: ಒಂದೇ ದಿನದಲ್ಲಿ ಸ್ಟೂಡೆಂಟ್‌ ವೀಸಾ ಪಡೆದು ಕೆನಡಾಕ್ಕೆ ಬಂದಿದ್ನಂತೆ ನಿಜ್ಜರ್‌ ಹಂತಕ

Maldives
ದೇಶ16 mins ago

Maldives: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ ಆಗಮಿಸಿದ ಮಾಲ್ಡೀವ್ಸ್ ಸಚಿವ ಮೂಸಾ ಜಮೀರ್

SSLC Exam Result 2024 to be declared tomorrow Here are the details
ಶಿಕ್ಷಣ52 mins ago

SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

Cooking Oils
ಆಹಾರ/ಅಡುಗೆ53 mins ago

Cooking Oils: ಭಾರತೀಯ ಅಡುಗೆ ಶೈಲಿಗೆ ಯೋಗ್ಯವಾದ 7 ಅಡುಗೆ ಎಣ್ಣೆಗಳಿವು

Karnataka Weather
ಕರ್ನಾಟಕ2 hours ago

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Sam Pitroda
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

dina bhavishya read your daily horoscope predictions for May 09 2024
ಪ್ರಮುಖ ಸುದ್ದಿ3 hours ago

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Pune
ದೇಶ8 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ8 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌