Site icon Vistara News

Murder Case | ಕ್ಲಾಸ್‌ ರೂಮ್‌ನಲ್ಲಿಯೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಂದ ಪಾಗಲ್‌ ಪ್ರೇಮಿ; ತಾನೂ ಇರಿದುಕೊಂಡ!

ಬೆಂಗಳೂರು: ಇಲ್ಲಿನ ರಾಜಾನುಕುಂಟೆ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಯುವಕನೊಬ್ಬ ಯುವತಿಗೆ ಚಾಕು (Murder Case) ಇರಿದು ಕೊಂದಿದ್ದಾನೆ. ಕ್ಲಾಸ್‌ ರೂಮ್‌ನಲ್ಲಿಯೇ ವಿದ್ಯಾರ್ಥಿನಿಗೆ ಪವನ್ ಕಲ್ಯಾಣ ಎಂಬ ಯುವಕ ಚಾಕು ಹಾಕಿದ್ದಾನೆ. ಆಕೆ ತನ್ನ ಪ್ರೀತಿಯನ್ನು ಒಪ್ಪಿಲಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾನೆಂದು ಹೇಳಲಾಗುತ್ತಿದೆ.

ಪ್ರಸೆಡೆನ್ಸಿ ಕಾಲೇಜಿನ ಪ್ರಥಮ ವರ್ಷದ ಬಿ.ಟೆಕ್‌ ವಿದ್ಯಾರ್ಥಿನಿ ಲಯಸ್ಮಿತಾ (೧೯) ಮೃತ ದುರ್ದೈವಿ. ಈಕೆ ತನ್ನ ಪ್ರೀತಿಯನ್ನು ಒಪ್ಪಲಿಲ್ಲ ಎಂಬ ಕಾರಣಕ್ಕೆ ಪವನ್‌ ಜಗಳ ಮಾಡಿದ್ದಾನೆ ಎಂದು ಹೇಳಲಾಗಿದೆ. ಕೊನೆಗೆ ಆತ ಕ್ಲಾಸ್‌ ರೂಂಗೆ ನುಗ್ಗಿ ಲಯಸ್ಮಿತಾ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಆಕೆಗೆ ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಆಕೆಯನ್ನು ಕಾಲೇಜಿನ ಸಿಬ್ಬಂದಿ ಎತ್ತಿಕೊಂಡು ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.

ಆದರೆ, ಅಷ್ಟರಲ್ಲಾಗಲೇ ಲಯಸ್ಮಿತಾಗೆ ತೀವ್ರ ರಕ್ತಸ್ರಾವವಾಗಿತ್ತು. ಆಕೆ ಕುತ್ತಿಗೆಗೆ ಇರಿದಿದ್ದರಿಂದ ಬದುಕುಳಿಯಲಿಲ್ಲ ಎಂದು ವಿದ್ಯಾರ್ಥಿಗಳು ದುಃಖ ವ್ಯಕ್ತಪಡಿಸಿದ್ದಾರೆ. ಕೂಡಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಬದುಕಿಸಲು ಆಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ತಾನೂ ಚಾಕು ಇರಿದುಕೊಂಡ
ಯುವತಿಗೆ ಚಾಕು ಇರಿದ ಬಳಿಕ ಅದೇ ಚಾಕುವಿನಿಂದ ತನ್ನ ಎದೆಗೆ ಇರಿದುಕೊಂಡ ಪವನ್‌, ಕೈ ನರವನ್ನೂ ಕಟ್‌ ಮಾಡಿಕೊಂಡಿದ್ದಾನೆನ್ನಲಾಗಿದೆ. ಬಳಿಕ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಆತನನ್ನೂ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಮುಂದುವರಿದಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಆಗಮಿಸಿದ್ದು, ಆಸ್ಪತ್ರೆ ಬಳಿ ಕಾಲೇಜು ವಿದ್ಯಾರ್ಥಿಗಳು ಜಮಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಇನ್ನು ಪವನ್‌ ನೃಪತುಂಗ ವಿವಿ ವಿದ್ಯಾರ್ಥಿಯಾಗಿದ್ದು, ಪ್ರಥಮ ವರ್ಷದ ಬಿಸಿಎ ಓದುತ್ತಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Viral story | ಗರ್ಭಿಣಿಯಾಗಿದ್ದಕ್ಕೆ ಕೆಲಸದಿಂದ ವಜಾ! 15 ಲಕ್ಷ ರೂ ಪರಿಹಾರ ಪಡೆದಳಾಕೆ!

Exit mobile version