murder case Police constable body found at Thirthahalli fish market, Murder suspectedMurder case: ತೀರ್ಥಹಳ್ಳಿ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್‌ ಶವ ಪತ್ತೆ; ಕೊಲೆ ಶಂಕೆ - Vistara News

ಕರ್ನಾಟಕ

Murder case: ತೀರ್ಥಹಳ್ಳಿ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್‌ ಶವ ಪತ್ತೆ; ಕೊಲೆ ಶಂಕೆ

ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ (Thirthahalli Fish Market) ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪೊಲೀಸ್‌ ಪೇದೆಯ ಹತ್ಯೆ (Murder case) ಮಾಡಿರುವ ಘಟನೆ ನಡೆದಿದೆ. ಮದ್ಯ ವ್ಯಸನಿಯಾಗಿದ್ದ ಪೇದೆ (Police Constable) ಇತ್ತೀಚೆಗೆ ಕೆಲಸದಿಂದ ವಜಾಗೊಂಡಿದ್ದ ಎಂದು ತಿಳಿದು ಬಂದಿದೆ.

VISTARANEWS.COM


on

Police constable body found at Thirthahalli fish market, Murder suspected
ತೀರ್ಥಹಳ್ಳಿಯ ಮೀನು ಮಾರುಕಟ್ಟೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ (Police Constable) ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದೆ. ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೇದೆ ಪೂರ್ಣೇಶ್ ಎಂಬವರ ಶವ ಪತ್ತೆ ಆಗಿದೆ.

ಪೂರ್ಣೇಶ್‌ ಅವರ ತಲೆಯ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಪೂರ್ಣೇಶ್ ಸೇವೆ ಸಲ್ಲಿಸಿದ್ದರು. ಆದರೆ ಇತ್ತೀಚಿಗೆ ಮದ್ಯ ವ್ಯಸನಿಯಾಗಿದ್ದ ಪೂರ್ಣೇಶ್​, ಕೆಲಸದಿಂದ ವಜಾಗೊಂಡಿದ್ದರು ಎಂದು ತಿಳಿದುಬಂದಿದೆ.

ಶುಕ್ರವಾರ ತಡರಾತ್ರಿ ಹತ್ಯೆ ನಡೆದಿರುಬಹುದೆಂದು ಅಂದಾಜಿಸಲಾಗಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವೈಯಕ್ತಿಕ ಕಲಹದಿಂದಾಗಿ ಹತ್ಯೆಯಾಗಿರಬಹುದೆಂದು ಶಂಕಿಸಲಾಗಿದೆ. ಸದ್ಯ ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಕುಡಿತ ಅಮಲಿನಲ್ಲಿ ಸ್ನೇಹಿತನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದವನು ಈಗ ಪೊಲೀಸರ ಅತಿಥಿ

ಬೆಂಗಳೂರು: ಕುಡಿತದ ಮತ್ತಿನಲ್ಲಿ ಕಲ್ಲಿನಿಂದ ವ್ಯಕ್ತಿಯ ತಲೆ ಜಜ್ಜಿ ಹತ್ಯೆ ಮಾಡಿ ಪರಾರಿ ಆಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರಿಮುತ್ತು ಎಂಬಾತ ತನ್ನ ಸ್ನೇಹಿತ ನರೇಶ್‌ನನ್ನು ಟೈಲ್ಸ್‌ ಕಲ್ಲಿನಿಂದ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ನರೇಶ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲೇ ಮೃತಪಟ್ಟಿದ್ದ.

ಇಲ್ಲಿನ ಗೋವಿಂದರಾಜ ನಗರದ ಕಾಮಧೇನು ಆಸ್ಪತ್ರೆ (Kamadhenu Hospital) ಮುಂಭಾಗ ನರೇಶ್‌ ತಲೆ ಮೇಲೆ ಮಾರಿಮುತ್ತು ಕಲ್ಲು ಎತ್ತಿ ಹಾಕಿ ಹತ್ಯೆ (Bengaluru Murder case) ಮಾಡಿ ಪರಾರಿ ಆಗಿದ್ದ. ಘಟನೆ ಬಳಿಕ ಪೊಲೀಸರು ಏರಿಯಾದ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ನಡೆಸಿದ್ದರು. ಟೆಕ್ನಿಕಲ್ ಅನಾಲಿಸಿಸ್ ಆಧರಿಸಿ ಆರೋಪಿ ಮಾರಿಮುತ್ತುನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಾರೆ ಕೆಲಸ ಮಾಡಿಕೊಂಡಿದ್ದ ನರೇಶ್‌ಗೆ ಶುಕ್ರವಾರ (ಮಾ.24) ರಜೆ ಇದ್ದ ಕಾರಣ ಕುಡಿಯಲು ಬಾರ್‌ಗೆ ಬಂದಿದ್ದ. ಈ ವೇಳೆ ಕುಡಿದ ಅಮಲಿನಲ್ಲಿ ಇವರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ಒಬ್ಬರಿಗೊಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡು ಕಿತ್ತಾಡಿಕೊಂಡಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ಬೆನ್ನಲ್ಲೇ ವೈರಲ್ ಆಗ್ತಿದೆ ಬಿಜೆಪಿ ನಾಯಕಿ ಖುಷ್ಬು ಹಳೇ ಟ್ವೀಟ್​; ಶಿಕ್ಷೆ ಇಲ್ವಾ ಎನ್ನುತ್ತಿದ್ದಾರೆ ಕಾಂಗ್ರೆಸ್​ ನಾಯಕರು

ಬಳಿಕ ನರೇಶ್ ಬಾರ್‌ನಿಂದ ಹೊರ ಬರುತ್ತಿದ್ದಂತೆ ಆತನ ಸ್ನೇಹಿತನೇ ಆದ ಮಾರಿಮುತ್ತು, ಮತ್ತೆ ಕ್ಯಾತೆ ತೆಗೆದು ಜಗಳ ಶುರು ಮಾಡಿದ್ದ. ಜಗಳ ತಾರಕಕ್ಕೇರಿದ್ದು ಕೋಪಗೊಂಡ ಮಾರಿಮುತ್ತು, ನರೇಶ್‌ನನ್ನು ಕೆಳಕ್ಕೆ ಕೆಡವಿ ಬಳಿಕ ಅಲ್ಲೆ ಇದ್ದ ಟೈಲ್ಸ್‌ ಕಲ್ಲಿನಿಂದ ತಲೆಯನ್ನು ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ್ದ. ನರೇಶ್‌ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದನ್ನು ಕಂಡು ಮಾರಿಮುತ್ತು ಅಲ್ಲಿಂದ ಪರಾರಿ ಆಗಿದ್ದ. ಸದ್ಯ, ಪ್ರಕರಣ ದಾಖಲಿಸಿಕೊಂಡಿದ್ದ ಗೋವಿಂದರಾಜನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Rowdy Sheeters: ಬೆಂಗಳೂರಲ್ಲಿ ಮತ್ತೆ ಝಳಪಿಸಿದ ಮಚ್ಚು ಲಾಂಗ್, ಬೀದಿಯಲ್ಲೇ ಅಟ್ಟಾಡಿಸಿದರು!

Rowdy Sheeters: ಹಳೇ ದ್ವೇಷ ಹಿನ್ನೆಲೆಯಲ್ಲಿ ಬೈಯ್ಯಪ್ಪನಹಳ್ಳಿ ರೌಡಿಶೀಟರ್ ಶಿವ ಟೀಂನಿಂದ ಪ್ಲಾನ್‌ ಮಾಡಿ ಅಟ್ಯಾಕ್ ಮಾಡಲಾಗಿದೆ. ಅಟ್ಯಾಕ್ ಆಗುತ್ತಿದ್ದಂತೆ ಯಾರ ಕೈಗೂ ಸಿಗದೇ ತಿಪ್ಪಸಂದ್ರ ಮಾರ್ಕೆಟ್‌ಗೆ ನುಗ್ಗಿ ಜೋಶ್ವಾ ಎಸ್ಕೇಪ್ ಆಗಿದ್ದಾನೆ.

VISTARANEWS.COM


on

rowdy sheeters attack bangalore
Koo

ಬೆಂಗಳೂರು: ರಾಜಧಾನಿ ನಗರದಲ್ಲಿ ಬೀದಿ ರೌಡಿಗಳಿಗೆ (Rowdy sheeters) ಯಾವ ಕಾನೂನಿನ ಕಟ್ಟುಪಾಡೂ ಇಲ್ಲದಾಗಿದೆ ಎಂಬುದಕ್ಕೆ ಇನ್ನೊಂದು ನಿದರ್ಶನ ಲಭ್ಯವಾಗಿದೆ. ನಗರದಲ್ಲಿ ಮತ್ತೆ ಮಚ್ಚು ಲಾಂಗುಗಳು ಝಳಪಿಸಿವೆ. ನಡು ರಸ್ತೆಯಲ್ಲೇ ರೌಡಿಗಳ ಗುಂಪು ಇನ್ನೊಬ್ಬ ರೌಡಿಯನ್ನು ಕೊಲೆ ಮಾಡಲೆಂದು ಅಟ್ಯಾಕ್ (Assault Case) ಮಾಡಿದೆ.

ತಿಪ್ಪಸಂದ್ರದದ ಬಳಿ ಯುವಕರ ಗುಂಪಿನಿಂದ ಅಟ್ಯಾಕ್ ನಡೆದಿದ್ದು, ದಾಳಿ ಮಾಡುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಯ್ಯಪ್ಪನಹಳ್ಳಿ ರೌಡಿಶೀಟರ್ ಶಿವ & ಟೀಂನಿಂದ ಅಟ್ಯಾಕ್ ನಡೆದಿದ್ದು, ಜೀವನ್ ಭೀಮಾನಗರ ರೌಡಿಶೀಟರ್ ಜೋಶ್ವಾ ಮೇಲೆ ಡೆಡ್ಲಿ ಅಟ್ಯಾಕ್ ಎಸಗಲಾಗಿದೆ.

ಆದರೆ ಜೋಶ್ವಾ ಇವರ ಕೈಗೆ ಸಿಗದಂತೆ ಪರಾರಿಯಾಗಿದ್ದಾನೆ. ಹಳೇ ದ್ವೇಷ ಹಿನ್ನೆಲೆಯಲ್ಲಿ ಬೈಯ್ಯಪ್ಪನಹಳ್ಳಿ ರೌಡಿಶೀಟರ್ ಶಿವ ಟೀಂನಿಂದ ಪ್ಲಾನ್‌ ಮಾಡಿ ಅಟ್ಯಾಕ್ ಮಾಡಲಾಗಿದೆ. ಅಟ್ಯಾಕ್ ಆಗುತ್ತಿದ್ದಂತೆ ಯಾರ ಕೈಗೂ ಸಿಗದೇ ತಿಪ್ಪಸಂದ್ರ ಮಾರ್ಕೆಟ್‌ಗೆ ನುಗ್ಗಿ ಜೋಶ್ವಾ ಎಸ್ಕೇಪ್ ಆಗಿದ್ದಾನೆ. ಸದ್ಯ ಘಟನೆ ಸಂಬಂಧ ಜೀವನ್ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.

ಮೋದಿ ಹೊಗಳಿ ಹಾಡು ಬರೆದದ್ದಕ್ಕೆ ಹಲ್ಲೆ

ಮೈಸೂರು: ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಇದೇ ವೇಳೆ ಪಾಕ್‌ ಪರ ಮತ್ತು ಅಲ್ಲಾಹು ಅಕ್ಬರ್‌ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಘಟನೆ ನಡೆದಿದ್ದು, ಈ ಬಗ್ಗೆ ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಯುವಕ ದೂರು ನೀಡಿದ್ದಾನೆ.

‌Assault Case

ಮೈಸೂರಿನ ಲಕ್ಷ್ಮೀನಾರಾಯಣ್ ಹಲ್ಲೆಗೊಳಗಾದ ಯುವಕ. ಮೋದಿ ಹಾಡು ರಿಲೀಸ್‌ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿದೆ. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ವಿಡಿಯೊ ಮೂಲಕ ಲಕ್ಷ್ಮೀನಾರಾಯಣ್ ಮಾಹಿತಿ ನೀಡಿದ್ದಾನೆ.

ಘಟನೆ ಬಗ್ಗೆ ಗಾಯಾಳು ಲಕ್ಷ್ಮೀನಾರಾಯಣ್ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್‌ ರಿಲೀಸ್‌ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್‌ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್‌ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್‌ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Continue Reading

ಪ್ರಮುಖ ಸುದ್ದಿ

CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

CET Exam: ಪಿಯು ಮಂಡಳಿ ನಿಗದಿ ಮಾಡದ ಪಠ್ಯ ಪುಸ್ತಕದ ಪ್ರಶ್ನೆ ಕೇಳಿ ಕೆಇಎ ಗೊಂದಲ ಸೃಷ್ಟಿಸಿದೆ. ಕೆಇಎ ಎಡವಟ್ಟಿಗೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 27ರವರೆಗೆ ಕಾಲಾವಕಾಶವನ್ನು ಕೆಇಎ ನೀಡಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ (CET Exam) ಪ್ರಶ್ನೆಪತ್ರಿಕೆ (Question Paper) ಕಂಡು ವಿದ್ಯಾರ್ಥಿಗಳು ಕಕ್ಕಾಬಿಕ್ಕಿಯಾಗಿದ್ದು, ಔಟ್‌ ಆಫ್‌ ಸಿಲೆಬಸ್‌ ಪ್ರಶ್ನೆಗಳನ್ನು ಕಂಡು ದಂಗಾಗಿದ್ದರು. ಈ ಪ್ರಮಾದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹಾಗೂ ಪಿಯು ಮಂಡಳಿ (PU board) ನಡುವೆ ಆರೋಪ ಪ್ರತ್ಯಾರೋಪ ನಡೆದಿದ್ದು, ಗ್ರೇಸ್‌ ಮಾರ್ಕ್ಸ್‌ (Grace marks) ನೀಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಪಿಯು ಮಂಡಳಿ ನೀಡಿದ ಪಠ್ಯಪುಸ್ತಕವೇ ಒಂದಾಗಿದ್ದರೆ, ಕೆಇಎ ನೀಡಿದ ಪ್ರಶ್ನೆಪತ್ರಿಕೆಯೇ ಮತ್ತೊಂದಾಗಿದೆ. ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕಂಡು ವಿದ್ಯಾರ್ಥಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಗಣಿತ, ಜೀವಶಾಸ್ತ್ರ, ರಸಾಯನವಿಜ್ಞಾನ ಹಾಗೂ ಭೌತವಿಜ್ಞಾನ ಪರೀಕ್ಷೆಯಲ್ಲಿ 50ಕ್ಕೂ ಅಧಿಕ ಔಟ್ ಆಫ್ ಸಿಲೆಬಸ್ ಪ್ರಶ್ನೆಗಳು ಕಂಡುಬಂದಿವೆ.

ಜೀವಶಾಸ್ತ್ರದ 60 ಅಂಕಗಳಿಗೆ ನಡೆದ ಪರೀಕ್ಷೆಯಲ್ಲಿ ಪಠ್ಯಕ್ರಮದಲ್ಲಿ ಇಲ್ಲದ 10 ಪ್ರಶ್ನೆಗಳನ್ನು ಕೇಳಲಾಗಿದೆ. ಗಣಿತ ಪರೀಕ್ಷೆಯಲ್ಲಿ 9 ಪ್ರಶ್ನೆಗಳು, ರಾಸಾಯನಿಕ ಹಾಗೂ ಭೌತಶಾಸ್ತ್ರ ಪರೀಕ್ಷೆಯಲ್ಲಿ 30ಕ್ಕೂ ಅಧಿಕ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿದೆ. ನಿಗದಿತ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಂದಾಗಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾದರು. ಹೀಗಾಗಿ ಮರು ಪರೀಕ್ಷೆ ಮಾಡುವಂತೆ ಅಥವಾ ಗ್ರೇಸ್ ಮಾರ್ಕ್ಸ್ ನೀಡುವಂತೆ ವಿದ್ಯಾರ್ಥಿಗಳಿಂದ ಒತ್ತಾಯ ಬಂದಿದೆ.

ಈ ವರ್ಷ ಪಠ್ಯದಲ್ಲಿ ಇಲ್ಲದ ವಿಷಯಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಪ್ರಾಧಿಕಾರ ಪ್ರಶ್ನೆ ಕೇಳಿದೆ. ಪಿಯು ಮಂಡಳಿ ನಿಗದಿ ಪಡಿಸಿರುವ ಪಿಯು ಪಠ್ಯಪುಸ್ತಕದ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸಬೇಕು. ಆದರೆ ಪಿಯು ಮಂಡಳಿ ನಿಗದಿ ಮಾಡದ ಪಠ್ಯ ಪುಸ್ತಕದ ಪ್ರಶ್ನೆ ಕೇಳಿ ಕೆಇಎ ಗೊಂದಲ ಸೃಷ್ಟಿಸಿದೆ. ಕೆಇಎ ಎಡವಟ್ಟಿಗೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 27ರವರೆಗೆ ಕಾಲಾವಕಾಶವನ್ನು ಕೆಇಎ ನೀಡಿದೆ.

ಈ ಬಗ್ಗೆ ಪರೀಕ್ಷಾ ಪ್ರಾಧಿಕಾರ ಹಾಗೂ ಪಿಯು ಮಂಡಳಿ ನಡುವೆ ಆರೋಪ ಪ್ರತ್ಯಾರೋಪ ನಡೆದಿದೆ. ಪಿಯು ಮಂಡಳಿ ನೀಡಿದ ಪಠ್ಯ ಪುಸ್ತಕದ ಆಧಾರದ ಮೇಲೆಯೇ ಸಿಇಟಿ ಪ್ರಶ್ನೆ ಪತ್ರಿಕೆ ತಯಾರಿಸಲಾಗಿದೆ ಎಂದು ಕೆಇಎ‌ ಹೇಳಿದೆ. ತಾವು ನೀಡಿದ ಪರಿಷ್ಕೃತ ಪಠ್ಯಪುಸ್ತಕ ಕೆಇಎ ಅನುಸರಿಸಿಲ್ಲ ಎಂದು ಪಿಯು ಮಂಡಳಿ ಆರೋಪಿಸಿದೆ. ಎರಡು ಇಲಾಖೆ ನಡುವೆ ಪತ್ರವ್ಯವಹಾರ ನಡೆದಿದೆ. ಪಠ್ಯಪುಸ್ತಕ ಪರಿಷ್ಕರಣೆ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸುವಂತೆ ಪಿಯು ಬೋರ್ಡ್ ಮೊದಲೇ ಪತ್ರ ಬರೆದಿತ್ತು. ಪಿಯು ಬೋರ್ಡ್ ಪತ್ರಕ್ಕೆ ಉತ್ತರವನ್ನೂ ಕೆಇಎ ನೀಡಿತ್ತು. ಪರಿಷ್ಕೃತ ಪಠ್ಯಪುಸ್ತಕ ಅನುಸರಿಸಲಾಗಿದೆ ಎಂದಿದೆ. ಕೊನೆಗೆ ಪಿಯು ಬೋರ್ಡ್ ನೀಡಿದ ಪರಿಷ್ಕೃತ ಪಠ್ಯಪುಸ್ತಕವನ್ನು ಕೆಇಎ ನಿರ್ಲಕ್ಷ್ಯ ಮಾಡಿದೆ.

ಇಂದು ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕೆಇಎ ಸೂಚನೆ ನೀಡಿದೆ. ಆಕ್ಷೇಪಣೆಗಳ ಆಧಾರದ ಮೇಲೆ ಪರಿಶೀಲನೆಗೆ ಸಮಿತಿ ರಚಿಸುವ ಭರವಸೆಯನ್ನು ಕೆಇಎ ನೀಡಿದ್ದು, ಸಮಿತಿ ನೀಡುವ ವರದಿಯ ಆಧಾರದ ಮೇಲೆ‌ ಕ್ರಮ ಕೈಗೊಳ್ಳಲಾಗುವುದು ಎಂದು ಕೆಇಎ ನಿರ್ದೇಶಕಿ ರಮ್ಯಾ ಹೇಳಿದ್ದಾರೆ.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್;‌ ಕೊನೇ ಅವಕಾಶ ಕೊಟ್ಟ KEA!

Continue Reading

ಮಳೆ

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Rain News: ಬೆಂಗಳೂರಿನಲ್ಲಿ ಮಳೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಹವಾಮಾನ ಇಲಾಖೆಯಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಹಲವೆಡೆ ವಾರಾಂತ್ಯದಲ್ಲಿ ಗುಡುಗು ಸಹಿತ ಗಾಳಿ, ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವಾರಾಂತ್ಯದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ವರುಣನ ಸಿಂಚನವಾಗಲಿದೆ.

ಇದನ್ನೂ ಓದಿ: Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನೂ ಮಳೆಯಿಲ್ಲದೇ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗೂ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ಸೂಚನೆ

ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Modi in Karnataka: ನಾಳೆ (ಏಪ್ರಿಲ್‌ 20) ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka today Massive rally in Chikkaballapur and roadshow in Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ (Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading
Advertisement
Impact Player Rule
ಕ್ರೀಡೆ9 mins ago

Impact Player Rule : ಇಂಪ್ಯಾಕ್ಟ್​ ಪ್ಲೇಯರ್​​ ಸಿಕ್ಕಾಪಟ್ಟೆ ವಿರೋಧ; ಇದೀಗ ಋತುರಾಜ್​ ಸರದಿ

Tillu Square anupama parameswaran movie tillu square release date
ಒಟಿಟಿ26 mins ago

Tillu Square: ಅನುಪಮಾ ಪರಮೇಶ್ವರನ್‌‌ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಬಹಿರಂಗ

rowdy sheeters attack bangalore
ಕ್ರೈಂ35 mins ago

Rowdy Sheeters: ಬೆಂಗಳೂರಲ್ಲಿ ಮತ್ತೆ ಝಳಪಿಸಿದ ಮಚ್ಚು ಲಾಂಗ್, ಬೀದಿಯಲ್ಲೇ ಅಟ್ಟಾಡಿಸಿದರು!

KL Rahul
ಪ್ರಮುಖ ಸುದ್ದಿ36 mins ago

KL Rahul : ಐಪಿಎಲ್​ನಲ್ಲಿ ಧೋನಿಯ ದಾಖಲೆಯೊಂದನ್ನು ಮುರಿದ ಕೆ. ಎಲ್ ರಾಹುಲ್​

Neha Murder Case dhruva sarja priya savadi and kavya shastry condemn
ಸಿನಿಮಾ50 mins ago

Neha Murder Case: ನೇಹಾ ಹತ್ಯೆ: ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ

IPL 2024
ಕ್ರೀಡೆ1 hour ago

IPL 2024 : ಸೋಲಿನ ಬಳಿಕ ಚೆನ್ನೈ ತಂಡದ ಅಂಕಪಟ್ಟಿಯಲ್ಲಿನ ಸ್ಥಾನವೆಷ್ಟು? ಇಲ್ಲಿದೆ ಎಲ್ಲ ವಿವರ

cet exam karnataka exam authority
ಪ್ರಮುಖ ಸುದ್ದಿ1 hour ago

CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Ancient snake vasuki indicus
ವೈರಲ್ ನ್ಯೂಸ್2 hours ago

Ancient snake: ಭಾರತದಲ್ಲಿತ್ತು 1000 ಕಿಲೋ ತೂಕ, 50 ಅಡಿ ಉದ್ದದ ʼವಾಸುಕಿʼ ಹಾವು!

charlie chaplin rajamarga
ಪ್ರಮುಖ ಸುದ್ದಿ2 hours ago

ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

Karnataka Weather Forecast
ಮಳೆ3 hours ago

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ18 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌