Site icon Vistara News

Murder case: ತೀರ್ಥಹಳ್ಳಿ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್‌ ಶವ ಪತ್ತೆ; ಕೊಲೆ ಶಂಕೆ

Police constable body found at Thirthahalli fish market, Murder suspected

Police constable body found at Thirthahalli fish market, Murder suspected

ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ (Police Constable) ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದೆ. ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೇದೆ ಪೂರ್ಣೇಶ್ ಎಂಬವರ ಶವ ಪತ್ತೆ ಆಗಿದೆ.

ಪೂರ್ಣೇಶ್‌ ಅವರ ತಲೆಯ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಪೂರ್ಣೇಶ್ ಸೇವೆ ಸಲ್ಲಿಸಿದ್ದರು. ಆದರೆ ಇತ್ತೀಚಿಗೆ ಮದ್ಯ ವ್ಯಸನಿಯಾಗಿದ್ದ ಪೂರ್ಣೇಶ್​, ಕೆಲಸದಿಂದ ವಜಾಗೊಂಡಿದ್ದರು ಎಂದು ತಿಳಿದುಬಂದಿದೆ.

ಶುಕ್ರವಾರ ತಡರಾತ್ರಿ ಹತ್ಯೆ ನಡೆದಿರುಬಹುದೆಂದು ಅಂದಾಜಿಸಲಾಗಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವೈಯಕ್ತಿಕ ಕಲಹದಿಂದಾಗಿ ಹತ್ಯೆಯಾಗಿರಬಹುದೆಂದು ಶಂಕಿಸಲಾಗಿದೆ. ಸದ್ಯ ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಕುಡಿತ ಅಮಲಿನಲ್ಲಿ ಸ್ನೇಹಿತನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದವನು ಈಗ ಪೊಲೀಸರ ಅತಿಥಿ

ಬೆಂಗಳೂರು: ಕುಡಿತದ ಮತ್ತಿನಲ್ಲಿ ಕಲ್ಲಿನಿಂದ ವ್ಯಕ್ತಿಯ ತಲೆ ಜಜ್ಜಿ ಹತ್ಯೆ ಮಾಡಿ ಪರಾರಿ ಆಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರಿಮುತ್ತು ಎಂಬಾತ ತನ್ನ ಸ್ನೇಹಿತ ನರೇಶ್‌ನನ್ನು ಟೈಲ್ಸ್‌ ಕಲ್ಲಿನಿಂದ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ನರೇಶ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲೇ ಮೃತಪಟ್ಟಿದ್ದ.

ಇಲ್ಲಿನ ಗೋವಿಂದರಾಜ ನಗರದ ಕಾಮಧೇನು ಆಸ್ಪತ್ರೆ (Kamadhenu Hospital) ಮುಂಭಾಗ ನರೇಶ್‌ ತಲೆ ಮೇಲೆ ಮಾರಿಮುತ್ತು ಕಲ್ಲು ಎತ್ತಿ ಹಾಕಿ ಹತ್ಯೆ (Bengaluru Murder case) ಮಾಡಿ ಪರಾರಿ ಆಗಿದ್ದ. ಘಟನೆ ಬಳಿಕ ಪೊಲೀಸರು ಏರಿಯಾದ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ನಡೆಸಿದ್ದರು. ಟೆಕ್ನಿಕಲ್ ಅನಾಲಿಸಿಸ್ ಆಧರಿಸಿ ಆರೋಪಿ ಮಾರಿಮುತ್ತುನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಾರೆ ಕೆಲಸ ಮಾಡಿಕೊಂಡಿದ್ದ ನರೇಶ್‌ಗೆ ಶುಕ್ರವಾರ (ಮಾ.24) ರಜೆ ಇದ್ದ ಕಾರಣ ಕುಡಿಯಲು ಬಾರ್‌ಗೆ ಬಂದಿದ್ದ. ಈ ವೇಳೆ ಕುಡಿದ ಅಮಲಿನಲ್ಲಿ ಇವರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ಒಬ್ಬರಿಗೊಬ್ಬರು ಅವಾಚ್ಯ ಶಬ್ಧಗಳಿಂದ ನಿಂದಿಸಿಕೊಂಡು ಕಿತ್ತಾಡಿಕೊಂಡಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ಬೆನ್ನಲ್ಲೇ ವೈರಲ್ ಆಗ್ತಿದೆ ಬಿಜೆಪಿ ನಾಯಕಿ ಖುಷ್ಬು ಹಳೇ ಟ್ವೀಟ್​; ಶಿಕ್ಷೆ ಇಲ್ವಾ ಎನ್ನುತ್ತಿದ್ದಾರೆ ಕಾಂಗ್ರೆಸ್​ ನಾಯಕರು

ಬಳಿಕ ನರೇಶ್ ಬಾರ್‌ನಿಂದ ಹೊರ ಬರುತ್ತಿದ್ದಂತೆ ಆತನ ಸ್ನೇಹಿತನೇ ಆದ ಮಾರಿಮುತ್ತು, ಮತ್ತೆ ಕ್ಯಾತೆ ತೆಗೆದು ಜಗಳ ಶುರು ಮಾಡಿದ್ದ. ಜಗಳ ತಾರಕಕ್ಕೇರಿದ್ದು ಕೋಪಗೊಂಡ ಮಾರಿಮುತ್ತು, ನರೇಶ್‌ನನ್ನು ಕೆಳಕ್ಕೆ ಕೆಡವಿ ಬಳಿಕ ಅಲ್ಲೆ ಇದ್ದ ಟೈಲ್ಸ್‌ ಕಲ್ಲಿನಿಂದ ತಲೆಯನ್ನು ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ್ದ. ನರೇಶ್‌ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದನ್ನು ಕಂಡು ಮಾರಿಮುತ್ತು ಅಲ್ಲಿಂದ ಪರಾರಿ ಆಗಿದ್ದ. ಸದ್ಯ, ಪ್ರಕರಣ ದಾಖಲಿಸಿಕೊಂಡಿದ್ದ ಗೋವಿಂದರಾಜನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version