Site icon Vistara News

Murder Case: 300 ರೂಪಾಯಿಗಾಗಿ ಹೆತ್ತಮ್ಮನನ್ನೇ ಕೊಂದ ಪಾಪಿ ಮಗ!

Murder Case

ಬೆಳಗಾವಿ: 300 ರೂಪಾಯಿಗಾಗಿ ಪಾಪಿ ಮಗನೊಬ್ಬ ಹೆತ್ತಮ್ಮನನ್ನೇ ಕೊಂದಿರುವ ಘಟನೆ ಜಿಲ್ಲೆಯ ಬೈಲಹೊಂಗಲ‌ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆಸದಿದೆ. ಮಹಾದೇವಿ ಗುರೇಪ್ಪ ತೊಲಗಿ (70) ಕೊಲೆಯಾದ ದುರ್ದೈವಿ. ಈರಪ್ಪ ಗುರೇಪ್ಪ ತೊಲಗಿ(34) ತಾಯಿಯನ್ನೇ ಕೊಲೆ ಮಾಡಿದ ಮಗ.

300 ರೂ. ಕೇಳಿದ್ದಕ್ಕೆ ಕೊಡಲ್ಲ ಎಂದು ತಾಯಿ ಹೇಳಿದ್ದಾರೆ. ಇದೇ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ಶುರುವಾಗಿದ್ದು, ನಂತರ ಜಗಳ ವಿಕೋಪಕ್ಕೆ ತಿರುಗಿ ಕಟ್ಟಿಗೆಯಿಂದ ಮಹಾದೇವಿ ತಲೆಗೆ ಮಗ ಹಲ್ಲೆ ಮಾಡಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವವಾಗಿ ತಾಯಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಆರೋಪಿ ಈರಪ್ಪನನ್ನು ದೊಡವಾಡ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆ ಸಿಂದಗಿ ತಾಲೂಕಿನ ಯರಗಲ್ ಕೆ.ಡಿ. ಗ್ರಾಮದ ಬಳಿ ನಡೆದಿದೆ. ಹನುಮಂತ ಹಿರೇಕುರುಬರ (43) ಮೃತ ಸವಾರ. ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ನಿವಾಸಿಯಾದ ಹನುಮಂತ, ಅಮಾವಾಸ್ಯೆ ಹಿನ್ನಲೆ ಯಾತನೂರು ಗ್ರಾಮದ ದೇವಸ್ಥಾನಕ್ಕೆ ತೆರಳುತ್ತಿದ್ದ. ಈ ವೇಳೆ ದುರಂತ ನಡೆದಿದೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರಿ ಮೇಯಿಸಲು ಹೋದ ಮಹಿಳೆ‌ ಮೇಲೆ ಕಾಡಾನೆ ದಾಳಿ

ಕೋಲಾರ: ಜಿಲ್ಲೆಯ ಗಡಿ ಗ್ರಾಮದಲ್ಲಿ ಕುರಿ ಮೇಯಿಸಲು ಹೋಗಿದ್ದ ಮಹಿಳೆ‌ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆಯ ಕೈ, ತಲೆಗೆ ಗಂಭೀರ ಗಾಯಗಳಾಗಿವೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಚಿತ್ತಗುಟ್ಟಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಗ್ರಾಮದ ರಾಧಮ್ಮ (70) ಗಾಯಾಳು. ಇವರನ್ನು ಚಿಕಿತ್ಸೆಗಾಗಿ ಬಂಗಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

Road Accident

ವಿಜಯಪುರ: ಕಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ (Road Accident) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯರಗಲ್ ಕೆ ಡಿ ಗ್ರಾಮದ ಎನ್ 50 ರಲ್ಲಿ ಘಟನೆ ನಡೆದಿದೆ. ಬೈಕ್ ಸವಾರ ಹನುಮಂತ ಹಿರೇಕುರುಬರ (43) ಸ್ಥಳದಲ್ಲೇ ಮೃತಪಟ್ಟವರು.

ಸಿಂದಗಿ ತಾಲೂಕಿನ ಬಂದಾಳ ಗ್ರಾಮದ ವಾಸಿ ಹನುಮಂತ ಅವರು ಭಾನುವಾರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆ ಜೀವರ್ಗಿ ತಾಲೂಕಿನ ಯಾತನೂರು ಗ್ರಾಮದ ದೇವಸ್ಥಾನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ ಕಾರಿಗೆ ಗುದ್ದಿದೆ. ಗುದ್ದ ರಭಸಕ್ಕೆ ಕೆಳಗೆ ಬಿದ್ದ ಹನುಮಂತ ಅವರಿಗೆ ಗಂಭೀರ ಗಾಯಗೊಂಡಿದ್ದರು. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Exit mobile version