Site icon Vistara News

Murder Case : ಕುಡುಕ ಗಂಡನಿಗೆ ಚಟ್ಟ ಕಟ್ಟಿದ್ದಳು; ಸಹಜ ಸಾವಿನ ಕತೆ ಕಟ್ಟಿ ಬಂಧಿಯಾದಳು!

Babu And mahadevi

ಬೆಳಗಾವಿ: ಪತ್ನಿಯೇ ಪತಿಯನ್ನು ಕತ್ತು ಹಿಸುಕಿ ಕೊಂದು (Murder Case) ಬಳಿಕ ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿ ಜೈಲುಪಾಲಾಗಿರುವ ಘಟನೆ ನಡೆದಿದೆ. ಬಾಬು ಕಲ್ಲಪ್ಪ ಕರ್ಕಿ (48) ಮೃತ ದುರ್ದೈವಿ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಮಹಾದೇವಿ ಎಂಬಾಕೆ ಪತಿ ಬಾಬು ಕಲ್ಲಪ್ಪ ಕರ್ಕಿಗೆ ಊಟದಲ್ಲಿ ನಿದ್ರೆ ಮಾತ್ರೆ ಹಾಕಿದ್ದಾಳೆ. ಆತ ನಿದ್ರೆಗೆ ಜಾರುತ್ತಿದ್ದಂತೆ ಪತಿಯ ಕತ್ತು ಹಿಸುಕಿ ಕೊಂದಿದ್ದಾಳೆ. ಬಳಿಕ ಸಹಜ ಸಾವು ಎಂದು ಕಥೆ ಕಟ್ಟಿದ್ದಾಳೆ.

ಆದರೆ ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮೃತ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರಿಗೆ ಮೃತನ ಕತ್ತಿನ ಮೇಲೆ ಗಾಯವಿರುವುದು ಕಂಡಿದೆ. ಈ ಬಗ್ಗೆ ಮಹಾದೇವಿಯನ್ನು ವಿಚಾರಣೆ ನಡೆಸಿದಾಗ ಪೊಲೀಸರ ಮುಂದೆ ಎರಡೆರಡು ರೀತಿ ಕಥೆ ಕಟ್ಟಿದ್ದಾಳೆ.

ಇದರಿಂದ ಇನ್ನಷ್ಟು ಅನುಮಾನಗೊಂಡು ವಿಚಾರಣೆಯನ್ನು ತೀವ್ರಗೊಳಿಸಿದಾಗ ಕೊಲೆ ವಿಷಯ ಹೊರಬಂದಿದೆ. ಪತಿ ಬಾಬು ಕಲ್ಲಪ್ಪ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇತ್ತೀಚೆಗೆ ಮನೆಗೆ ಆಧಾರವಾಗಿದ್ದ ಜಮೀನು ಮಾರಾಟಕ್ಕೂ ಮುಂದಾಗಿದ್ದ. ಈತನ ನಿರಂತರ ಕಾಟಕ್ಕೆ ಬೇಸತ್ತು ಊಟದಲ್ಲಿ ನಿದ್ರೆ ಮಾತ್ರೆ ಹಾಕಿ, ಕತ್ತು ಹಿಸುಕಿ ಹತ್ಯೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಸದ್ಯ ನಂದಘಡ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: ಮೈ ಮೇಲೆ ಬಿಸಿ ಸಾಂಬಾರ್‌ ಬಿದ್ದು ಬಾಲಕ ಸಾವು; ಕುಳಿತಲ್ಲೇ ಸ್ತಬ್ಧವಾಯ್ತು ಪ್ರಯಾಣಿಕನ ಹೃದಯ!

ಮನೆಗೆಲಸಕ್ಕೆ ಬಂದ ದಲಿತ ಮಹಿಳೆ ಮೇಲೆ ಅತ್ಯಾಚಾರ; ದೇಹ ತುಂಡರಿಸಿದ ಕಟುಕರು

ಲಖನೌ: ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ದಲಿತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗುತ್ತಿರುವ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ (Uttar Pradesh) ಬಾಂಡಾ ಜಿಲ್ಲೆಯಲ್ಲಿ ಮನೆಗೆಲಸಕ್ಕೆ ಬಂದ ದಲಿತ ಮಹಿಳೆಯೊಬ್ಬರ (Dalit Woman) ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಅಷ್ಟೇ ಅಲ್ಲ, ದಲಿತ ಮಹಿಳೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ದುರುಳರು, ತಲೆಮರೆಸಿಕೊಂಡಿದ್ದಾರೆ.

ಬಾಂಡಾ ಜಿಲ್ಲೆಯ ಗ್ರಾಮವೊಂದರಲ್ಲಿ ಮಹಿಳೆಯೊಬ್ಬರು ಮಂಗಳವಾರ (ನವೆಂಬರ್‌ 2) ರಾಜ್‌ಕುಮಾರ್‌ ಶುಕ್ಲಾ ಎಂಬಾತನ ಮನೆಗೆ ಕೆಲಸಕ್ಕೆಂದು ಹೋಗಿದ್ದಾರೆ. ಇದೇ ವೇಳೆ ಮಹಿಳೆಯ ಪುತ್ರಿಯು ಅಲ್ಲಿಗೇ ಬಂದಿದ್ದಾರೆ. ಆಗ ಕೋಣೆಯೊಂದರಲ್ಲಿ ತಾಯಿ ಕಿರುಚುತ್ತಿದ್ದನ್ನು ನೋಡಿ ಗಾಬರಿಗೊಂಡಿದ್ದಾರೆ. ಬಾಗಿಲು ಚಿಲಕ ಹಾಕಿದ ಕಾರಣ ದಲಿತ ಮಹಿಳೆಯ ಪುತ್ರಿಯು ಬಾಗಿಲು ತೆರೆಯಲು ಆಗಿಲ್ಲ. ಕೆಲ ಹೊತ್ತಿನ ಬಳಿಕ ಬಾಗಿಲು ತೆರೆದ ದುರುಳರು ಓಡಿಹೋಗಿದ್ದಾರೆ. ಮಗಳು ಹೋಗಿ ನೋಡಿದಾಗ ತಾಯಿಯ ದೇಹ ತುಂಡಾಗಿ ಬಿದ್ದಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Ujjain Horror: ಉಜ್ಜಯಿನಿಯಲ್ಲಿ ಇನ್ನೊಂದು ಬರ್ಬರ ಕೃತ್ಯ;‌ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಘಟನೆ ಖಂಡಿಸಿದ ಅಖಿಲೇಶ್‌ ಯಾದವ್‌

ಮಹಿಳೆ ಮೇಲೆ ರಾಜ್‌ಕುಮಾರ್‌ ಶುಕ್ಲಾ, ಆತನ ಸಹೋದರರಾದ ಬೌವಾ ಶುಕ್ಲಾ ಹಾಗೂ ರಾಮಕೃಷ್ಣ ಶುಕ್ಲಾ ಅವರು ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳ ವಿರುದ್ಧವೂ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಖಂಡಿಸಿದ್ದು, “ಉತ್ತರ ಪ್ರದೇಶದಲ್ಲಿ ದಲಿತ ಮಹಿಳೆಯರು, ಯುವತಿಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲಿತ ಮಹಿಳೆಯರಿಗಿಲ್ಲ ರಕ್ಷಣೆ

ಕೆಲ ತಿಂಗಳಷ್ಟೇ ಉತ್ತರ ಪ್ರದೇಶದಲ್ಲಿ ದಲಿತ ಮಹಿಳೆ ಮೇಲೆ ಪೊಲೀಸ್‌ ಅಧಿಕಾರಿಯೇ ಅತ್ಯಾಚಾರ ಎಸಗಿದ್ದ. ಪ್ರಯಾಗರಾಜ್‌ ಜಿಲ್ಲೆಯ ಝಂಘಾಯಿ ಪೊಲೀಸ್‌ ಠಾಣೆ ಎಸ್‌ಐ ಆಗಿರುವ ಸುಧೀರ್‌ ಕುಮಾರ್‌ ಎಂಬಾತನು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ. ಸೆಪ್ಟೆಂಬರ್‌ 21ರಂದು ಮಹಿಳೆಯೊ ಪೊಲೀಸ್‌ ಠಾಣೆಗೆ ಬಂದಿದ್ದಾರೆ. ಆಕೆಯ ದೂರು ದಾಖಲಿಸಿಕೊಂಡು, ನ್ಯಾಯ ಒದಗಿಸಬೇಕಾದ ಎಸ್‌ಐ, ಮಹಿಳೆಗೆ ಮತ್ತು ಬರುವ ಔಷಧ ಇರುವ ಪಾನೀಯ ನೀಡಿ, ಬಳಿಕ ಕಾರಿನಲ್ಲಿ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎಂದು ತಿಳಿದುಬಂದಿತ್ತು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version