Site icon Vistara News

Murder Case: ಹಾಸನದಲ್ಲಿ ಉಸಿರುಗಟ್ಟಿಸಿ ಮಹಿಳೆ ಕೊಲೆ; ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿದ್ದವನಿಂದ ಕೃತ್ಯ

ಹಾಸನ: ಇಲ್ಲಿನ ಗುಡ್ಡೇನಹಳ್ಳಿ ಗ್ರಾಮದಲ್ಲಿ ತಂತಿಯಿಂದ ಬಿಗಿದು ಉಸಿರುಗಟ್ಟಿಸಿ ಮಹಿಳೆಯೊಬ್ಬರನ್ನು ಹತ್ಯೆ (Murder Case) ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಸಿರಿಸ್ (23) ಕೊಲೆಯಾದವರು.

ಆರೋಪಿ ಆದಿ (26) ಎಂಬಾತ ಹತ್ಯೆ ಮಾಡಿ ಪರಾರಿ ಆಗಿದ್ದಾನೆ. ಸಿರಿಸ್‌ ಹಾಗೂ ಆದಿ ಇಬ್ಬರೂ ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದರು ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಕೊಲೆ ಮಾಡಿ ಆದಿ ಪರಾರಿ ಆಗಿದ್ದಾನೆ.

ಸಿರಿಸ್ ಬೆಂಗಳೂರಿನ ವಿಜಯನಗರ ಮೂಲದವಳಾದರೆ, ಆರೋಪಿ ಆದಿ ಮಾರನಾಯಕನಹಳ್ಳಿ ಗ್ರಾಮದವನು. ಸಿರಿಸ್‌-ಆದಿ ಎಂಟು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿ, ಒಂದು ತಿಂಗಳ ಹಿಂದಷ್ಟೇ ಗುಡ್ಡೇನಹಳ್ಳಿ ಗ್ರಾಮಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಬ್ಬರು ಒಂದೇ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ:Karnataka Election: ಭವಾನಿಗೆ ಹಾಸನ ಟಿಕೆಟ್‌ ಇಲ್ಲವೆಂದು ಎಚ್‌ಡಿಕೆ ಹೇಳಿದರೂ ಡೋಂಟ್‌ ಕೇರ್‌; ಕ್ಷೇತ್ರ ಸಂಚಾರ ಶುರು

ಸದ್ಯ ಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಶ್ವಾನ ದಳ, ಎ‌ಎಸ್‌ಪಿ ತಮ್ಮಯ್ಯ, ಡಿವೈಎಸ್‌ಪಿ ಉದಯ್‌ಭಾಸ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version