Site icon Vistara News

Murder Case: ದೊಣ್ಣೆಯಿಂದ ಅಟ್ಟಾಡಿಸಿ ಹೊಡೆದು ಯುವಕನ ಹತ್ಯೆ ಮಾಡಿದ ದುಷ್ಕರ್ಮಿಗಳು

Uttar Pradesh Man dead after being trapped in lift In Bengaluru

ಬೆಂಗಳೂರು: ಇಲ್ಲಿನ ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿಳ್ಳಣ್ಣ ಗಾರ್ಡನ್‌ನಲ್ಲಿ ಯುವಕನನ್ನು ದೊಣ್ಣೆಯಿಂದ ಹೊಡೆದು ಹತ್ಯೆ (Murder case) ಮಾಡಲಾಗಿದೆ. ಸತೀಶ್ (22) ಮೃತಪಟ್ಟ ವ್ಯಕ್ತಿ. ದೊಣ್ಣೆಯಿಂದ ತಲೆಗೆ ಹೊಡೆದ ಕಾರಣದಿಂದ ತೀವ್ರ ರಕ್ತಸ್ರಾವವಾಗಿ ಸತೀಶ್‌ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಹತ್ಯೆ ಮಾಡಿ ಬಳಿಕ ಹಂತಕರು ರೈಲ್ವೆ ಟ್ರಾಕ್‌ ಸಮೀಪದ ಖಾಲಿ ಜಾಗದಲ್ಲಿ ಶವ ಎಸೆದು ಪರಾರಿಯಾಗಿದ್ದಾರೆ. ಏಪ್ರಿಲ್ 2ರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೆ.ಜಿ.ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎಫ್ಎಸ್ಎಲ್ ತಂಡ ಕೂಡ ಭೇಟಿ ನೀಡಿದ್ದು, ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಸಿ.ಕೆ.ಪಾಳ್ಯ ಕೆರೆಯಲ್ಲಿ ಸುಮಾರು 32 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆ ಆಗಿದೆ. ಶವ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Road accident : ಬೈಕ್‌ಗೆ ಕಾರು ಡಿಕ್ಕಿಯಾಗಿ ತಂದೆ- ಮಗಳು ಸ್ಥಳದಲ್ಲೇ ಸಾವು, ಶಾಲೆಗೆ ಬಿಟ್ಟು ಬರಲು ಹೋಗುತ್ತಿದ್ದಾಗ ದುರಂತ

ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version