Site icon Vistara News

Murder Case : ಆಸ್ತಿಗಾಗಿ ಅಣ್ಣನನ್ನೇ ಅಟ್ಟಾಡಿಸಿ ಚೂರಿ ಹಾಕಿದ ತಮ್ಮಂದಿರು

family dispute murder in kodagu

ಕೊಡಗು: ಇಲ್ಲಿನ ಮಡಿಕೇರಿ ತಾಲೂಕಿನ ಸಂಪಾಜೆ ಬಳಿಯ ಚೆಂಬು ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ (Property dispute) ಸಹೋದರರು ಸೇರಿ ಅಣ್ಣನನ್ನೇ ಕೊಂದು (Murder Case) ಮುಗಿಸಿದ್ದಾರೆ. ಕುದುರೆಪಾಯ ನಿವಾಸಿ ಉಸ್ಮಾನ್ ಹತ್ಯೆಯಾದ ದುರ್ದೈವಿ.

ಆಸ್ತಿ ವಿವಾದದ ಹಿನ್ನೆಲೆ ತಮ್ಮಂದಿರಿಂದಲೇ ಉಸ್ಮಾನ್‌ ಬರ್ಬರವಾಗಿ ಹತ್ಯೆ ಆಗಿದ್ದಾರೆ. ತಮ್ಮಂದಿರೇ ಸೇರಿ ಉಸ್ಮಾನ್‌ನನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದು, ಪರಾರಿ ಆಗಿರುವ ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ.

ಯುವಕನ ಬರ್ಬರ ಹತ್ಯೆ

ಬೆಳಗಾವಿ: ಇಲ್ಲಿನ ಪೀರನವಾಡಿಯಲ್ಲಿ ಯುವಕನೊಬ್ಬ (26) ಹತ್ಯೆಯಾಗಿ (Murder case) ಹೋಗಿದ್ದಾನೆ. ಬೆಳಗಾವಿಯ ಪೀರನವಾಡಿ ನಿವಾಸಿ ಅರ್ಬಾಜ್ ರಫೀಕ್ ಮುಲ್ಲಾ ಕೊಲೆಯಾದ ಯುವಕ.

ಜೈನ್‌ ಇಂಜಿನಿಯರಿಂಗ್ ಕಾಲೇಜಿನ (Jain Engineering College) ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಅರ್ಬಾಜ್‌ ರಫೀಕ್‌ ಮೃತದೇಹವು (Dead body) ಪತ್ತೆ ಆಗಿದೆ. ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಎಸ್.ಟಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರ್ಬಾಜ್ ರಫೀಕ್ ಮುಲ್ಲಾರ ಅಜ್ಜಿ ದೌಡಾಯಿಸಿದ್ದು ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಬೆಳಗಾವಿ ಬೀಮ್ಸ್‌ಗೆ ಮೃತದೇಹವನ್ನು ರವಾನೆ ಮಾಡಲಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version