Site icon Vistara News

Murder Case: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

Murder Case

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ (Murder Case) ಸಂಪಿಗೆಹಳ್ಳಿ‌ ಪೊಲೀಸ್ ಠಾಣಾ ವ್ಯಾಪ್ತಿಯ 80 ಫೀಟ್ ರಸ್ತೆಯಲ್ಲಿ ನಡೆದಿದೆ. ಪುಷ್ಪರಾಜ್ (27) ಹತ್ಯೆಯಾದ ಯುವಕ. ಕುಡಿದ ಮತ್ತಿನಲ್ಲಿ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮೃತ ಪುಷ್ಪರಾಜ್‌ ಟೈಲ್ಸ್ ಹಾಕುವ ಕೆಲಸ ಮಾಡಿಕೊಂಡಿದ್ದ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶುಕ್ರವಾರ ರಾತ್ರಿ ಖಾಲಿ‌ ಜಾಗದ ಶೆಡ್‌ನಲ್ಲಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಈ ವೇಳೆ ಜಗಳ ನಡೆದಿದ್ದು, ಪುಷ್ಪ ರಾಜ್ ಕೊಲೆಯಾಗಿದೆ. ಘಟನೆ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇಂದು ಸಂಜೆ 4.30ಕ್ಕೆ ಮೃತದೇಹ ಇರುವುದು ಪತ್ತೆಯಾಗಿದೆ. ಸದ್ಯ ಸ್ಥಳಕ್ಕೆ ಸಂಪಿಗೆಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Murder case : ಬಾಳೆತೋಟದಲ್ಲಿತ್ತು ದಲಿತ ಮಹಿಳೆ ಶವ; ಕಾಲ್ಕಿತ್ತ ಮಾಲೀಕ, ಅತ್ಯಾಚಾರ ಶಂಕೆ

ಮಡಿಕೇರಿಯಲ್ಲಿ ಕಾರು-ಬಸ್‌ ಡಿಕ್ಕಿ; ಅಶ್ವಮೇಧದ ಎದುರು ಛಿದ್ರಗೊಂಡ ಕಾರು

Road Accident

ಕೊಡಗು: ಮಡಿಕೇರಿ ಸಮೀಪ ರಾಷ್ಟ್ರೀಯ ಹೆದ್ದಾರಿ 275ರ ಬೋಯಿಕೇರಿಯಲ್ಲಿ ಅಪಘಾತ (Road Accident) ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು‌ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ತಾಯಿ ಮಗುವಿಗೆ ಗಾಯವಾಗಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ವೊಂದು ಪ್ರಯಾಣಿಕರನ್ನು ಹೊತ್ತು ಮೈಸೂರಿನಿಂದ ಮಡಿಕೇರಿಗೆ ಬರುತ್ತಿತ್ತು. ಇತ್ತ ಕಾರಿನಲ್ಲಿ ಒಟ್ಟು ಆರು ಮಂದಿ ಕೇರಳದಿಂದ ಊಟಿಗೆ ತೆರಳುತ್ತಿದ್ದರು. ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿದ್ದು, ಕಾರು ಹಾಗೂ ಬಸ್‌ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬಸ್‌ಗೆ ಕಾರು ಗುದ್ದಿದ ರಭಸಕ್ಕೆ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು. ಇನ್ನೂ ಈ ಅಪಘಾತದಿಂದ ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಸ್ಥಳಕ್ಕಾಗಮಿಸಿದ ಸಂಚಾರಿ ಪೊಲೀಸರು ಕಾರನ್ನು ತೆರವುಗೊಳಿಸಿದರು. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಿಕ್ಕೋಡಿಯಲ್ಲಿ ವ್ಯಕ್ತಿ ಕಾಲಿನ ಮೇಲೆ ಹರಿದ ಬಸ್‌

ವೇಗವಾಗಿ ಬಂದ ಬಸ್‌ವೊಂದು ವ್ಯಕ್ತಿಗೆ ಹೊಡೆದು ಕಾಲಿನ ಮೇಲೆ ಹರಿದಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೆಳಗಾವಿ ತಾಲ್ಲೂಕಿನ ಕಗಬರಗಿ ಗ್ರಾಮದ 40 ವರ್ಷದ ಸದಾಶಿವ ಯಡವಳ್ಳಿ ಎಂಬುವವರ ಮೇಲೆ ಬಸ್‌ ಹರಿದಿದೆ. ಬಸ್‌ಗಾಗಿ ಕಾಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: Accident Case:ಕೇತೇನಹಳ್ಳಿ ಫಾಲ್ಸ್‌ನಿಂದ ಬರುವಾಗ ಕಾಲು ಜಾರಿ ಬಿದ್ದ ಮಹಿಳಾ ಟೆಕ್ಕಿ; 2 ಕಿಮೀ ಹೊತ್ತು ತಂದ ಯುವಕರು

ಗಾಯಾಳು ಸದಾಶಿವ ಅವರನ್ನು ಕೂಡಲೇ ಚಿಕ್ಕೋಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version