Site icon Vistara News

Murder Case: ಮಾರಕಾಸ್ತ್ರಗಳಿಂದ ಕೊಚ್ಚಿ, ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ; ಪ್ರೀತಿಸಿ ಮದುವೆಯಾಗಿದ್ದೇ ಕಾರಣವಾಯ್ತಾ?

Sexual Assault Case: mother of Dalit Victim stripped and brother killed

ರಾಮನಗರ: ಇಲ್ಲಿನ ಕೆ.ಜಿ.ಹೊಸಹಳ್ಳಿ ಗ್ರಾಮದಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ (Murder Case) ಆಗಿದೆ. ಅಶ್ವಥ್ (26) ಕೊಲೆಯಾದವರು. ದುಷ್ಕರ್ಮಿಗಳು ಅಶ್ವಥ್‌ಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ.

ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಅಶ್ವಥ್ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಈ ಮದುವೆಗೆ ಹುಡುಗಿ ಮನೆಯವರ ಕಡೆಯಿಂದ ತೀವ್ರ ವಿರೋಧವಾಗಿತ್ತು. ಕುಟುಂಬಸ್ಥರನ್ನು ವಿರೋಧಿಸಿ ಇಬ್ಬರು ಮದುವೆ ಆಗಿದ್ದರು. ಆದರೆ ಈಗ ಅಶ್ವಥ್‌ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾರೆ.

ಇದನ್ನೂ ಓದಿ: Anand Mahindra: ಹಣ್ಣು ಮಾರುವ ಹಾಲಕ್ಕಿ ಮಹಿಳೆಯ ಪರಿಸರ ಪ್ರೇಮ; ಸ್ವಚ್ಛ ಭಾರತ್‌ನ ಹೀರೊಗಳು ಇವರೇ ಎಂದು ಕೊಂಡಾಡಿದ ಆನಂದ್‌ ಮಹೀಂದ್ರ

ಸದ್ಯ ಅಶ್ವಥ್‌ ಕುಟುಂಬಸ್ಥರು ಹುಡುಗಿ ಸಂಬಂಧಿಕರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

Exit mobile version