Site icon Vistara News

Murder Case: ಉಡುಪಿಯಲ್ಲಿ ವ್ಯಕ್ತಿಗೆ ಚಾಕು ಇರಿದು ಹತ್ಯೆ; ಕೃತ್ಯ ಎಸಗಿ ಇಬ್ಬರು ದುಷ್ಕರ್ಮಿಗಳು ಪರಾರಿ

#image_title

ಉಡುಪಿ: ಇಲ್ಲಿನ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಇರಿದು ವ್ಯಕ್ತಿಯೊಬ್ಬನನ್ನು ಹತ್ಯೆ (Murder Case) ಮಾಡಿದ್ದಾರೆ. ಶರತ್ ಶೆಟ್ಟಿ (39) ಮೃತ ದುರ್ದೈವಿ.

ಶರತ್‌ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಭೂ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶರತ್‌ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ: Karnataka Election: ಮಹಿಳೆಯರಿಗೆ ರಾಜಕೀಯ ಬಲು ಕಷ್ಟ; ಆ ಸೀತೆಗೂ ಅಗ್ನಿ ಪರೀಕ್ಷೆ ತಪ್ಪಲಿಲ್ಲ, ಇನ್ನು ಲಕ್ಷ್ಮಿ ಹೆಬ್ಬಾಳ್ಕರ್‌ ಯಾವ ಲೆಕ್ಕ!

ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶರತ್ ಮೃತಪಟ್ಟಿದ್ದಾರೆ. ಕಾಪು ಪೊಲೀಸರಿಂದ ಸ್ಥಳ ಪರಿಶೀಲನೆ‌ ನಡೆಸಲಾಗಿದ್ದು, ಹಂತಕರ ಪತ್ತೆಗೆ ಬಲೆ ಬೀಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

Exit mobile version