Site icon Vistara News

Murder Case: ಕೋಳಿ ಫಾರಂ ಇಟ್ಟುಕೊಂಡಿದ್ದ ಯುವಕನ ಕೊಂದು ಮೃತದೇಹವನ್ನು ಬಾವಿಗೆ ಎಸೆದ ಹಂತಕರು

Murderers kill young man, throw his body into well

#image_title

ಬೆಳಗಾವಿ: ಯುವಕನನ್ನು ಕೊಲೆ ಮಾಡಿ ಮೃತದೇಹವನ್ನು ಬಾವಿಗೆ ಎಸೆದಿರುವ ಘಟನೆ (Murder Case) ತಾಲೂಕಿನ ಬಸರಿಕಟ್ಟಿ ಹೊರವಲಯದಲ್ಲಿ ನಡೆದಿದೆ. ಮಾರುತಿ ಕನ್ನೀಕರ್ (32) ಕೊಲೆಯಾದ ಯುವಕ.

ಬಸರಿಕಟ್ಟಿಯಲ್ಲಿ ಯುವಕ ಫೋಟೊ ಸ್ಟುಡಿಯೋ ಇಟ್ಟುಕೊಂಡಿದ್ದ. ಜತೆಗೆ ಜಮೀನಿನಲ್ಲಿ ಕೋಳಿ ಫಾರಂ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಸೋಮವಾರ ರಾತ್ರಿ ಮನೆಯಿಂದ ಕೋಳಿ ಫಾರಂಗೆ ತೆರಳುತ್ತಿರುವುದಾಗಿ ಹೇಳಿ ಮಾರುತಿ ತೆರಳಿದ್ದ. ಈ ವೇಳೆ ಊರ ಹೊರವಲಯದಲ್ಲಿ ಮದ್ಯಪಾನ ಮಾಡುತ್ತಿದ್ದ ಕೆಲ ಪರಿಚಯಸ್ಥ ಯುವಕರು ಕರೆದ ಹಿನ್ನೆಲೆಯಲ್ಲಿ ಅವರ ಬಳಿ ತೆರಳಿದ್ದ ಎನ್ನಲಾಗಿದೆ.

ಈ ವೇಳೆ ಗಲಾಟೆಯಾಗಿದ್ದು, ಈತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ದುಷ್ಕರ್ಮಿಗಳು ಬಾವಿಯಲ್ಲಿ ಮೃತದೇಹವನ್ನು ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಆದರೆ, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ | Road Accident: ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; ಪ್ರಯಾಣಿಕರು ಪಾರು

ಮಾರಿಹಾಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Exit mobile version