Site icon Vistara News

Murdeshwar Beach | ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಿಸಿದ ಬೀಚ್ ಲೈಫ್‌ಗಾರ್ಡ್

Protection of the tourist Murdeshwar Beach Lifeguard

ಕಾರವಾರ: ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಅಲೆಗಳ ಎದುರು ಈಜಲಾಗದೇ ಮುಳುಗುತ್ತಿದ್ದ ಪ್ರವಾಸಿಗನನ್ನು ರಕ್ಷಣೆ (Murdeshwar Beach) ಮಾಡಿದ ಘಟನೆ ನಡೆದಿದೆ.

ಗದಗ ತಾಲೂಕಿನ ಬಾಳೆಹೊಸೂರು ನಿವಾಸಿ ಬಸವರಾಜ (35) ರಕ್ಷಣೆಗೊಳಗಾದ ಪ್ರವಾಸಿಗ. ಕೆಎಸ್‌ಆರ್‌ಟಿಸಿ ಬಸ್ ಚಾಲಕನಾಗಿರುವ ಬಸವರಾಜ ಅವರು ಧರ್ಮಸ್ಥಳದಿಂದ ಮುರ್ಡೇಶ್ವರಕ್ಕೆ ಪ್ರವಾಸಿಗರನ್ನು ಕರೆತಂದಿದ್ದರು. ಕಡಲ ತೀರದಲ್ಲಿ ಬಸ್ ನಿಲ್ಲಿಸಿ ಸಮುದ್ರದಲ್ಲಿ ಈಜಾಡಲು ತೆರಳಿದ್ದು, ಈ ವೇಳೆ ಅಪ್ಪಳಿಸಿದ ಭಾರಿ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗುವ ಹಂತ ತಲುಪಿದ್ದರು. ಸಮುದ್ರದಲ್ಲಿ ಮುಳುಗುತ್ತಿದ್ದುದನ್ನು ಗಮನಿಸಿದ ಬೀಚ್ ಲೈಫ್‌ಗಾರ್ಡ್ ಶೇಖರ ದೇವಾಡಿಗ, ವಿಘ್ನೇಶ್ ಹರಿಕಂತ್ರ ಹಾಗೂ ಪ್ರವೀಣ್ ಓಶಿಯನ್ ಅಡ್ವೆಂಚರ್‌ ಬೋಟಿನ ಸಿಬ್ಬಂದಿ ಸಹಾಯದಿಂದ ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಮುರ್ಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Rishabh Pant | ಕಾರು ಅವಘಡದಲ್ಲಿ ಗಾಯಗೊಂಡಿರುವ ರಿಷಭ್​ ಪಂತ್​ ಐಪಿಎಲ್​, ವಿಶ್ವ ಕಪ್​ಗೆ ಅಲಭ್ಯ?

Exit mobile version